Author: News Desk Benkiyabale

 ತುಮಕೂರು:       ಬೆಸ್ಕಾಂ ಕುಣಿಗಲ್ ವಿಭಾಗ ಕಚೇರಿಯಲ್ಲಿ ಇಂದು ವಿದ್ಯುತ್ ಅಪಘಾತ ತಡೆಯುವ ನಿಟ್ಟಿನಲ್ಲಿ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.       ಕಾರ್ಯಕ್ರಮವನ್ನು ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಬಸವರಾಜು ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಇಲಾಖೆಯ ಸಿಬ್ಬಂದಿ ವರ್ಗದವರು, ತಾವು ಕಾರ್ಯನಿರ್ವಹಿಸುವ ವೇಳೆ ಇಲಾಖೆ ನೀಡಿರುವ ಸುರಕ್ಷತಾ ಸಾಧನಗಳನ್ನು ಬಳಸಿಕೊಂಡು, ಅಪಘಾತರಹಿತ ಕಾರ್ಯನಿರ್ವಹಣೆಗೆ ಒತ್ತು ನೀಡುವಂತೆ ಸಲಹೆ ನೀಡಿದರು.       ಈಗಾಗಲೇ ನೌಕರರಿಗೆ ಹರ್ತರಾಡ್,ಹೆಲ್ಮೇಟ್‍ಗಳು,ಸೇಪ್ಟಿ ಶೂ, ಕಟ್ಟಿಂಗ್ ಪ್ಲೇಯರ್,ಸೇಪ್ಟಿ ಬೆಲ್ಟ್ ಅಳವಡಿಸಿಕೊಂಡು, ವಿದ್ಯುತ್ ಮಾರ್ಗಮುಕ್ತಗೊಳಿಸಿ ಕೆಲಸ ಮಾಡುವುದರಿಂದ ಶೇ100ಕ್ಕೆ ನೂರಷ್ಟು ವಿದ್ಯುತ್ ಅವಘಡಗಳನ್ನು ತಡೆ ಹಿಡಿಯ ಬಹುದಾಗಿದೆ.ಆದ್ದರಿಂದ ನೌಕರರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಇಲಾಖೆಯನ್ನು ಅಪಘಾತ ರಹಿತ ಸಂಸ್ಥೆಯನ್ನಾಗಿಸಲು ಮುಂದಾಗುವಂತೆ ಮನವಿ ಮಾಡಿದರು.       ಲೆಕ್ಕಾಧಿಕಾರಿ ಬಿ.ವಿ.ನಾಗರಾಜು ಮಾತನಾಡಿ,ಇಲಾಖೆಯಲ್ಲಿ ನೌಕರರ ಸುರಕ್ಷತೆ ಕುರಿತಂತೆ ಆಗಿಂದಾಗ್ಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಆದರೂ ಸಹ ಅಪಘಾತಗಳು ನಡೆಯುತ್ತಲೇ ಇವೆ.ನೌಕರರು ಹಿರಿಯ ಅಧಿಕಾರಿಗಳು…

Read More

 ತುಮಕೂರು:       ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನವನ್ನು ನಾವು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ “ವಿಶ್ವ ಮಾನವ ದಿನಾಚರಣೆ”ಯನ್ನಾಗಿ ಆಚರಿಸುತ್ತಿದ್ದು, ರೈತರು ಬೆಳೆದ ಬೆಳೆಗೆ ಮತ್ತು ರೈತರ ಆತ್ಮಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ ಕುವೆಂಪು ಅವರೇ ಮಹಾನ್ ಚೇತನ ಎಂದು ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಅಭಿಪ್ರಾಯಪಟ್ಟರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗುರುಶ್ರೀ ಕಾಲೇಜ್ ಆಫ್ ಕಾಮರ್ಸ್ ಅಂಡ್ ಸೋಷಿಯಲ್ ವರ್ಕ್‍ನ ಸಂಯುಕ್ತಾಶ್ರಯದಲ್ಲಿಂದು ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ “ವಿಶ್ವ ಮಾನವ ದಿನಾಚರಣೆ”ಯನ್ನು ಉದ್ಘಾಟಿಸಿ ಮಾತನಾಡಿದರು.       ಕುವೆಂಪು ಅವರು ತೀರ್ಥಹಳ್ಳಿಯಲ್ಲಿ ಹುಟ್ಟಿ, ಅತ್ಯಂತ ಸರಳ ವಿಚಾರ, ಸಾಹಿತ್ಯ, ಕಾವ್ಯಗಳನ್ನು ರಚಿಸಿ ಜನರ ಮನ ಮುಟ್ಟುವಂತೆ ಮಾಡಿದ್ದಾರೆ. ಅವರಿಂದ ಕನ್ನಡ ಸಾಹಿತ್ಯಕ್ಕೆ ಅನೇಕ ಪ್ರಶಸ್ತಿಗಳು ದೊರೆತಿವೆ. ವಿಶ್ವ ಮಾನವ ತತ್ವವನ್ನು ಜಗತ್ತಿಗೆ ಸಾರಿದ ಮಹಾನ್…

Read More

ಉಡುಪಿ:       ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತ್ಯಕ್ರಿಯೆ ಅವರ ಸ್ವಂತ ಊರು ಕುಂದಾಪುರ ತಾಲೂಕಿನ ಯೆಡಾಡಿಯಲ್ಲಿ ರವಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.      ಶನಿವಾರ ಬೆಳಗ್ಗೆ 11ರಿಂದ 2 ಗಂಟೆ ತನಕ ಯಲಹಂಕದಲ್ಲಿರುವ ಸಶಸ್ತ್ರ ಪೊಲೀಸ್ ಪಡೆಯ ತರಬೇತಿ ಶಾಲೆಯ ಆವರಣದಲ್ಲಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಗುವುದು. ಇಂದು ರಾತ್ರಿ 11 ಗಂಟೆಗೆ ಪಾರ್ಥಿವ ಶರೀರ ಮಧುಕರ ಶೆಟ್ಟಿಯವರ ಊರಿಗೆ ತಲುಪಲಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ಆಗ್ರಹ:        ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವು ಕುರಿತ ವರದಿಯನ್ನು ಆಧರಿಸಿ ಸಂಶಯವಿದ್ದರೆ ತನಿಖೆಗೆ ಆದೇಶ ಮಾಡುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.      …

Read More

ಚಿಕ್ಕನಾಯಕನಹಳ್ಳಿ :       ತಾಲ್ಲೂಕಿನ ಹಂದನಕೆರೆ ಹೋಬಳಿಯ ರಂಗಾಪುರ ಗ್ರಾಮದ 21 ವರ್ಷದ ಯಶೋಧ ತನ್ನ ವೇಲನ್ನೇ ಕುತ್ತಿಗೆಗೆ ಕುಣಿಕೆ ಮಾಡಿಕೊಂಡು ಮೃತ ಪಟ್ಟಿರುವ ಘಟನೆ ನಡೆದಿದೆ.       ಹುಳಿಯಾರು ಹೋಬಳಿಯ ಕುರಿಹಟ್ಟಿ ನಿವಾಸಿ ಲಿಂಗರಾಜುಗೆ ಮಗಳಾದ ಯಶೋದಳನ್ನು ಹಂದನಕೆರೆ ಹೋಬಳಿಯ ರಂಗಾಪುರ ಗ್ರಾಮದ ನಿವಾಸಿ ಪಾಂಡುರಂಗನಿಗೆ ವಿವಾಹ ಮಾಡಿಕೊಡಲಾಗಿತ್ತು, ಗಂಡ ಪಾಂಡುರಂಗ ತನ್ನ ಹೆಂಡ್ತಿಗೆ ಹಣ ತರುವಂತೆ ಪೀಡಿಸುತ್ತಿದ್ದ ಇವನ ಒತ್ತಡಕ್ಕೆ ಮಣಿದ ಮಾವನ ಮನೆಯವರು ಒಂದು ಚಿನ್ನದ ಸರವನ್ನು ಕೊಟ್ಟಿದ್ದರು. ತೃಪ್ತನಾಗದ ಅಳಿಮಯ್ಯ ಹೆಂಡತಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಇವನ ಕಾಟಕ್ಕೆ ಸೋತುಹೋಗಿದ್ದ ಹೆಂಡತಿ ಯಶೋಧ ಗಂಡನ ಮನೆಯಲ್ಲಿ ನೇಣು ಬಿಗಿದು ಸತ್ತಿರುತ್ತಾಳೆ.       ಮೃತ ಯಶೋದ ಗಾರ್ಮೆಂಟ್ ಉದ್ಯಮದಲ್ಲಿ ಕೆಲಸ ಮಾಡಿಕೊಂಡು ಗಂಡನ ಹೆಗಲಿಗೆ ಹೆಗಲಾಗಿ ದುಡಿದು ಜೀವನ ನಡೆಸುತ್ತಿದ್ದಳು. ಆರೋಪಿ ಪಾಂಡುರಂಗ ತಲೆ ಮರೆಸಿಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ಹಂದನಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿ.ಎಸ್.ಐ ಟಿ.ಎನ್.ನರಸಿಂಹಮೂರ್ತಿ…

Read More

 ತುರುವೇಕೆರೆ:       ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಹಂತಹಂತವಾಗಿ ಕೇಂದ್ರದಿಂದ ನೀಡುವ ಶೇಕಡ 75ರಷ್ಟು ಅನುದಾವನ್ನು ಕಡಿತ ಮಾಡಿರುವುದು ಬಡಜನ ವಿರೋಧಿ ಕ್ರಮವಾಗಿದೆ. ಹಾಗೆಯೇ ಅಪೌಷ್ಠಕತೆಯಿಂದ ಬಳಲುವ ಮಕ್ಕಳು ಮತ್ತು ಮಹಿಳೆಯರಿಗೆ ಖರ್ಚು ಮಾಡಲು ತಯಾರಿಲ್ಲದ ಸರ್ಕಾರ ಲಕ್ಷಗಟ್ಟಲೆ ಕೋಟಿಗಳ ತೆರಿಗೆ ವಿನಾಯಿತಿಯನ್ನು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ. ಇದು ಸರ್ಕಾರ ಯಾರ ಪರ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ ಸಿಐಟಿಯು ರಾಜ್ಯಧ್ಯಕ್ಷರು ಹಾಗೂ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಆಪಾದಿಸಿದರು.       ತುರುವೇರೆ ಪಟ್ಟಣದ ಸಿದ್ದರಾಮೇಶ್ವ ಸಮುದಾಯ ಭವನದಲ್ಲಿ ನಡೆಯುತ್ತಿರುವ ರಾಜ್ಯ ಅಂಗನವಾಡಿ ನೌಕರರ ಸಂಘದ ತುಮಕೂರು ಜಿಲ್ಲೆಯ ಆರನೇ ಸಮ್ಮೇನಳನ ಉದ್ಘಾಟಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಅಂಗನವಾಡಿ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ಕೂಲಿ ಪಿಂಚಣಿ ಹಾಗೂ ಸೇವಾಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ. ಅಂಗನವಾಡಿಗಳನ್ನು ಶಾಲಾಪೂರ್ವ ಶಿಕ್ಷಣದ ಭಾಗವಾಗಿ ಕಡ್ಡಾಯ ಗೊಳಿಸುವಂತೆ ಆಗ್ರಹಿಸಿದರು.…

Read More

ತುಮಕೂರು:        ಪ್ರತಿಯೊಬ್ಬ ಮನುಷ್ಯನ ಜೀವನ ಜೀವನದಿ ಇದ್ದಂತೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಆದುದರಿಂದ ಜೀವನ ಶಾಶ್ವತವಲ್ಲ ಎಂಬುದನ್ನು ಅರ್ಥ ಮಾಡಿಕೊಂಡು ನಿವೃತ್ತರು ಚಿಂತೆ ಮಾಡುವುದನ್ನು ಬಿಟ್ಟು ಸಹಜವಾದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ನಿವೃತ್ತ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ತಿಳಿಸಿದರು.       ಅವರು ತುಮಕೂರಿನ ಎಂ.ಜಿ.ರಸ್ತೆಯಲ್ಲಿರುವ ಬಾಲಭವನದಲ್ಲಿ ನಡೆದ ನಿವೃತ್ತರ ದಿನಾಚರಣೆ ಮತ್ತು ಹಿರಿಯ ಚೇತನಗಳಿಗೆ ಸನ್ಮಾನ ಹಾಗೂ ನಿವೃತ್ತರ ವಾಣಿ ಬಿಡುಗಡೆ ಮತ್ತು ಕುವೆಂಪು ನೆನಪಿನ ದಿನಾಚರಣೆಯ ಕಾರ್ಯಮವನ್ನು ಉದ್ಘಾಟಿಸಿ ಹಿರಿಯ ಚೇತನಗಳಿಗೆ ಹಾಗೂ ಎಂಬತ್ತೈದು ವರ್ಷ ಪೂರೈಸಿದ ಮಹಾಚೇತನಗಳಿಗೆ ಸನ್ಮಾನ ಮಾಡಿ ಮಾತನಾಡಿದರು.       ನಿವೃತ್ತರಾಗಿ ಹಿರಿಯರಾಗಿರುವ ಪ್ರತಿಯೊಬ್ಬರು ಹೇಳುವುದೇನೆಂದರೆ ಮೊದಲು ನೀವು ನಿಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ. ನಿವೃತ್ತಿ ಎಂಬುದು ನಿಮ್ಮಲ್ಲಿ ನ್ಯೂವೃತ್ತಿಯಾಗಬೇಕು. ಮಹಾತ್ಮರುಗಳಾದ ಅರವಿಂದ ಬಸವಣ್ಣ, ಅಲ್ಲಮ, ಅಕ್ಕಮಹಾದೇವಿ ಗಾಂಧೀಜಿಯಂತಹವರ ಜೀವನ ಚರಿತ್ರೆಯ ಒಳ್ಳೆಯ ಪುಸ್ತಕಗಳನ್ನು ಓದಿ ಒಳ್ಳೆಯ ಸಿನಿಮಾ ಒಳ್ಳೆಯ ಧಾರಾವಾಹಿಗಳನ್ನು ನೋಡಿ ನಗುನಗುತ್ತಾ…

Read More

ಹೊಸದಿಲ್ಲಿ :        ಕಳೆದ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಪಾವತಿಯಾಗದ ಸಾಲಗಳ ಪ್ರಮಾಣ ಹೆಚ್ಚಾಗುವಲ್ಲಿ ಕರ್ತವ್ಯ ಲೋಪ ತೋರಿದ ಆರು ಸಾವಿರಕ್ಕೂ ಅಧಿಕ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.       ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಲೋಕಸಭೆಯಲ್ಲಿಂದು, ತಪ್ಪುಗಾರ ಅಧಿಕಾರಿಗಳಿಗೆ ಲಘು ಪ್ರಮಾಣದಿಂದ ಕಠಿನ ಪ್ರಮಾಣದ ವರೆಗಿನ ದಂಡವನ್ನು ಹೇರಲಾಗಿದೆ ಎಂದು ಲಿಖೀತ ಉತ್ತರದಲ್ಲಿ ಈ ವಿಷಯ ತಿಳಿಸಿದರು.       ಕೆಲವೊಂದು ಪ್ರಕರಣಗಳಲ್ಲಿ ಕೆಲಸದಿಂದ ಕಿತ್ತು ಹಾಕುವ, ಕಡ್ಡಾಯ ನಿವೃತ್ತಿ ನೀಡುವ ಮತ್ತು ಹಿಂಭಡ್ತಿ ನೀಡುವ ಶಿಕ್ಷೆಯನ್ನು ಕರ್ತವ್ಯ ಲೋಪ ತೋರಿದ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.

Read More

ಮಂಗಳೂರು:       ನಗರದ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ  ಪ್ರವಾಚಕ (ರೀಡರ್) ಮಂಜುನಾಥಯ್ಯ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ಮಂಗಳೂರು ಮತ್ತು ಉಡುಪಿಯಲ್ಲಿ ದಾಳಿ ನಡೆಸಿದ್ದಾರೆ.       ಮಂಜುನಾಥಯ್ಯ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವಾಸದ ಮನೆ, ದಾವಣಗೆರೆ, ಚಿಕ್ಕಮಗಳೂರಿನಲ್ಲಿರುವ ಸಂಬಂಧಿಕರ ಮನೆ, ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಕಚೇರಿಗೆ ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಎಸಿಬಿ ಇನ್‌ಸ್ಪೆಕ್ಟರ್ ಯೋಗೀಶ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಕಚೇರಿಯಲ್ಲಿರುವ ಹಲವು ಕಡತಗಳನ್ನು ಪರಿಶೀಲಿಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.       ಮಂಜುನಾಥಯ್ಯ ಮೂರು ತಿಂಗಳ ಹಿಂದೆ ನಗರದಲ್ಲಿರುವ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರಾಗಿ ಬಂದಿದ್ದರು.ಆದರೆ ಒಂದೂವರೆ ತಿಂಗಳಿನಿಂದ ಕೆಲಸಕ್ಕೆ ಬಾರದೆ ತುರ್ತು ರಜೆ ಹಾಕಿದ್ದರು. ಬಿಎಡ್ ಕಾಲೇಜಿನಲ್ಲಿ ಕೆಲಸ ಮಾಡಲು ಇಷ್ಟವಿಲ್ಲದ ಈ ವ್ಯಕ್ತಿ ಬಂದ ಒಂದು ತಿಂಗಳಲ್ಲೇ ವರ್ಗಾವಣೆಗೆ ಪ್ರಯತ್ನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Read More

ತುಮಕೂರು:       ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದು, ಸುಸ್ತು ಇರುವುದರಿಂದ ಸ್ವಲ್ಪ ವಿಶ್ರಾಂತಿ ಬೇಕು ಎಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು. ಇಂದು ಸಿದ್ಧಗಂಗಾ ಮ ಠಕ್ಕೆ ಭೇಟಿ ನೀಡಿದ್ದ ವೇಳೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ಮಠದ ಕಿರಿಯ ಸ್ವಾಮೀಜಿ ಅವರೊಂದಿಗೆ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.       ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿಯವರ ಎಲ್ಲಾ ಪ್ಯಾರಾ ಮೀಟರ್ಸ್ ನಾರ್ಮಲ್ ಆಗಿದೆ. ಬಿಪಿ, ಪಲ್ಸ್​ ರೇಟ್, ಆಕ್ಸಿಜನ್ ಸ್ಯಾಚುರೇಷನ್ ಕೂಡ ಸಹಜ ಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದರು.       ಯಾವಾಗ ಬಂದ್ರಿ,  ಚೆನ್ನಾಗಿದ್ದೀರಾ ಪ್ರಸಾದ ಮಾಡಿಕೊಂಡು ಹೋಗಿ. ಇನ್ನೂ ಸ್ವಲ್ಪ ಹೊತ್ತು ಇದ್ದು ಹೋಗಿ  ಎಂದು ಶಿವಕುಮಾರ ಸ್ವಾಮೀಜಿ ತಮ್ಮೊಂದಿಗೆ ಮಾತನಾಡಿದ್ದಾರೆ. ತಾವು ಹೇಗಿದ್ದೀರಿ ಸ್ವಾಮೀಜಿ ಅಂತ ಕೇಳಿದ್ದಕ್ಕೆ ‘ನಾನು ಚೆನ್ನಾಗಿದ್ದೇನೆ’ ಎಂದು ಕೂಡ ಮಾತನಾಡಿದ್ದಾರೆ ಎಂದು…

Read More

ತುಮಕೂರು:      ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ 134ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.       ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಂಸ್ಥಾಪನಾ ದಿನವನ್ನು ಆರಂಭಿಸಿದರು.       ಕಾರ್ಯಕ್ರಮ ಕುರಿತು ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್,ಸ್ವಾತಂತ್ರ ಹೋರಾಟಗಾರರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ 1885ರಲ್ಲಿ ಸ್ಥಾಪಿತವಾದ ಕಾಂಗ್ರೆಸ್ ಆರಂಭದಲ್ಲಿ ರಾಜಕೀಯೇತರ ಸಂಘಟನೆಯಾಗಿ, ಸ್ವಾತಂತ್ರ ಚಳವಳಿಗೆ ಜನರನ್ನು ಒಗ್ಗೂಡಿಸುವ ಕೆಲಸವನ್ನು ಮಾಡಿ, ಹತ್ತಾರು ವರ್ಷಗಳ ನಿರಂತರ ಹೋರಾಟದ ಫಲವಾಗಿ 1947 ರಲ್ಲಿ ದೇಶ ಸ್ವಾತಂತ್ರ ಪಡೆಯುವಂತಾಯಿತು.ಮಹಾತ್ಮಗಾಂಧಿ ಮತ್ತು ಇನ್ನಿತರ ನಾಯಕರ ತ್ಯಾಗ ಮತ್ತು ಹೋರಾಟದ ಫಲವಾಗಿ ದೇಶ ಅಭಿವೃದ್ದಿಯತ್ತ ಸಾಗಿದೆ.ಸ್ವಾತಂತ್ರ ನಂತರದಲ್ಲಿ ರಾಜಕೀಯ ಪಕ್ಷವಾಗಿ ನೊಂದಾಯಿತವಾದ ಕಾಂಗ್ರೆಸ್, ಐವತ್ತು ವರ್ಷಗಳ ಕಾಲ ದೇಶವನ್ನು ಆಳಿ, ವಿಜ್ಞಾನ, ತಂತ್ರಜ್ಞಾನ, ಆಹಾರ, ಕೃಷಿ ಹೀಗೆ…

Read More