ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ(98) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಾಪುರದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ ಹಾಗೂ ವೈದ್ಯರಿಲ್ಲದ ಕಾಲದಲ್ಲಿ ಹೆರಿಗೆ ತಜ್ಞೆಯಾಗಿದ್ದರು. ಸುಮಾರು 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಕೀರ್ತಿ ಅವರದ್ದು, ವೈದ್ಯರು ಇಲ್ಲದ ಕಾಲದಲ್ಲಿ ವೈದ್ಯರಂತೆ ಹೆರಿಗೆ ಮಾಡಿಸಿದ್ದರು. 2018ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆ, ವೈದ್ಯರು ಇಲ್ಲದ ಕಾಲದಲ್ಲಿ ಪ್ರಸೂತಿ ತಜ್ಞೆಯಾಗಿದ್ದ ನರಸಮ್ಮನವರ ಅಪರಿಮಿತವಾದ ಸಾಧನೆಯನ್ನು ಗುರುತಿಸಿ ಕೇಂದ್ರ ಸರಕಾರವು 2018ನೇ ಸಾಲಿನಲ್ಲಿ ದೇಶದ ಪ್ರತಿಷ್ಠಿತ ನಾಗರಿಕ ಸನ್ಮಾನ ‘ಪದಶ್ಮೀ’ ನೀಡಿ ಗೌರವಿಸಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ…
Author: News Desk Benkiyabale
ತುಮಕೂರು : ರೈತರು ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಒಳ್ಳೆಯ ಬೆಳೆ ಬೆಳೆದು ಆರ್ಥಿಕ ಮಟ್ಟ ಸುಧಾರಣೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಉಪಾಧ್ಯಕ್ಷ ರಂಗಸ್ವಾಮಯ್ಯ ತಿಳಿಸಿದರು. ತಾಲ್ಲೂಕಿನ ಕಂಬಳಾಪುರದಲ್ಲಿ ಐಡಿಎಫ್ ಸಂಸ್ಥೆ, ಕೊಲ್ಲಾಪುರದಮ್ಮ ರೈತ ಉತ್ಪಾದಕರ ಕಂಪನಿಯ ಹೆಬ್ಬೂರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಬರದ ಹಿನ್ನೇಲೆಯಲ್ಲಿ ಸರ್ಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೂನ್ಯ ಬಂಡವಾಳ ಕೃಷಿ, ಕೃಷಿ ಯಂತ್ರಧಾರೆ, ಸಾವಯವ ಕೃಷಿ, ಕೃಷಿ ಭಾಗ್ಯ, ಇಸ್ರೇಲ್ ಮಾದರಿ ಕೃಷಿ ಹೀಗೆ ರೈತರಿಗೆ ಹತ್ತು ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಇವುಗಳ ಸದ್ಬಳಕೆಯನ್ನು ಪ್ರತಿಯೊಬ್ಬ ರೈತರು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆಯುವಲ್ಲಿ ಪ್ರಯತ್ನ ಮಾಡುವಲ್ಲಿ ಮುಂದಾಗಬೇಕು ಎಂದರು. …
ತುಮಕೂರು: ಭಾರತರತ್ನ ಮಾಜಿ ಪ್ರಧಾನಿಗಳಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿರವರಿಗೆ ಸಿದ್ದಗಂಗೆಯ ಹಿರಿಯ ಶ್ರೀಗಳಾದ ಡಾ|| ಶ್ರೀ.ಶ್ರೀ.ಶ್ರೀ.ಶಿವಕುಮಾರ ಸ್ವಾಮಿಜೀಗಳನ್ನು ಕಂಡರೆ ಅತ್ಯಂತ ಗೌರವ ಹಾಗೂ ಪ್ರೀತಿಯನ್ನು ಹೊಂದಿದ್ದರು. ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ 95ನೇ ಜನ್ಮ ದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸುಶಾಸನ ದಿನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಜಪೇಯಿರವರುರವರಿಗೆ ಶ್ರೀ.ಶ್ರೀ.ಶ್ರೀ.ಶಿವಕುಮಾರಸ್ವಾಮಿಜೀಗಳನ್ನು ಕಂಡರೆ ಅತ್ಯಂತ ಪ್ರೀತಿ ಮತ್ತು ಭಕ್ತಿ. ವಾಜಪೇಯಿರವರು ಪ್ರಧಾನಮಂತ್ರಿಗಳಾದ ಸಂದರ್ಭದಲ್ಲಿ ನಾನು ತುಮಕೂರಿನಲ್ಲಿ ಸಂಸದನಾಗಿದ್ದೆ. ತುಮಕೂರಿನ ಸಂಸದ ಎಂದ ಕೂಡಲೇ ಕೈಸೆಹೋ ಭೇಟಾ ನಮ್ಮ ಸಿದ್ದಗಂಗ ಸ್ವಾಮಿಜಿಗಳು ಹೇಗೆ ಇದ್ದಾರೆ ಅವರ ಯೋಗಕ್ಷೇಮವನ್ನು ವಿಚಾರಿಸಿದೆ ಎಂದು ಹೇಳಿ ಎಂದು ಹೇಳುತ್ತಿದ್ದರು. ವಾಜಪೇಯಿರವರು ವಿದೇಶಾಂಗ ಮತ್ತು ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ಈ ಸಮಿತಿಯ ಸದಸ್ಯನಾಗಿದ್ದ ನಾನು ವಾಜಪೇಯಿರವರ ಒಡನಾಟ ಹತ್ತಿರದಿಂದ ಬಲ್ಲವನಾಗಿದ್ದೇನೆ. ಅವರ ಸರಳತೆ ಮತ್ತು ವ್ಯಕ್ತಿತ್ವದಿಂದ ವಿರೋಧ ಪಕ್ಷದವರಿಗೂ ಅತ್ಮೀಯರಾಗಿದ್ದರು ಎಂದು ತಮ್ಮ ಅನುಭವ ಹಂಚಿಕೊಂಡರು. …
ತುಮಕೂರು: ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ತಳ ಸಮುದಾಯದವರಿಗೆ ಇರುವ ಕೀಳರಿಮೆ, ಮುಜುಗರ, ಊಹಾಪೋಹಗಳಿಂದ ಅರ್ಜಿ ಹಾಕುವುದೇ ಬೇಡ ಎನ್ನುವ ಮನಸ್ಥಿತಿಯಿಂದ ಹೊರಬಂದು, ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವರಾಜು ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಕೋಚಿಂಗ್ ಸೆಂಟರ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೌಲಭ್ಯವಿಲ್ಲದ ದಿನಗಳಲ್ಲಿ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಓದಿದ ತಳಸಮುದಾಯದ ವಿದ್ಯಾರ್ಥಿಗಳು, ಉನ್ನತ ವಿದ್ಯಾಭ್ಯಾಸವನ್ನು ಮಾಡುವ ಮೂಲಕ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತಿಚೆಗೆ ಸೌಲಭ್ಯ ಹೆಚ್ಚಾಗುತ್ತಿದ್ದರೆ, ವಿದ್ಯಾರ್ಥಿಗಳಲ್ಲಿ, ತಳಸಮುದಾಯದಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ, ಸರ್ಕಾರ ಸಾವಿರಾರು ಕೋಟಿ ರೂಗಳನ್ನು ವೆಚ್ಚ ಮಾಡಿ, ಸ್ಪರ್ಧಾತ್ಮಕ ತರಬೇತಿಗಳನ್ನು ನೀಡಿದರೂ ವಿದ್ಯಾರ್ಥಿಗಳು ಉತೀರ್ಣರಾಗುತ್ತಿಲ್ಲ ಎಂದರು. ಲಕ್ಷಾಂತರ ರೂಪಾಯಿ ನೀಡಿ ಖಾಸಗಿ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಪಡೆದವರು ಯಶಸ್ವಿಯಾಗುತ್ತಿಲ್ಲ, ವ್ಯಾಪಾರಿ ದೃಷ್ಠಿಕೋನವನ್ನು ಹೊಂದಿರುವ ಖಾಸಗಿ ಸಂಸ್ಥೆಗಳಲ್ಲಿ ಕಲಿಯುವವರು ಹಿಂದೇ ಬೀಳುತ್ತಿದ್ದಾರೆ,…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ಧೂರಿನಲ್ಲಿ ಜೆಡಿಎಸ್ ಮುಖಂಡನನ್ನು ಹತ್ಯೆ ಮಾಡಲಾಗಿದೆ. ಮದ್ದೂರು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಧಾವಿಸಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪತಿ, ಜೆಡಿಎಸ್ ಮುಖಂಡ ಹೊನ್ನಲಗೆರೆ ಪ್ರಕಾಶ್ (50) ಅವರ ಕತ್ತುಸೀಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸೋಮವಾರ ಸಂಜೆ ಮದ್ದೂರಿನ ಟಿ.ಬಿ.ಸರ್ಕಲ್ನಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಹೊನ್ನಲಗೆರೆ ಪ್ರಕಾಶ್ ಅವರನ್ನು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ನೂರಾರು ಜನರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ. ಹೊನ್ನಲಗೆರೆ ಪ್ರಕಾಶ್ ಅವರು ಕಾರಿನಲ್ಲಿ ಕುಳಿತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರ ಕತ್ತು ಸೀಳಿ ಪರಾರಿಯಾಗಿದ್ದಾರೆ. ಚಾಕುವಿನಿಂದ ಅವರ ಕತ್ತು ಕೊಯ್ದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಮೃತಪಟ್ಟಿದ್ದಾರೆ. ಹೊನ್ನಲಗೆರೆ ಪ್ರಕಾಶ್ ಅವರ ಅಭಿಮಾನಿಗಳು ಮದ್ದೂರಿನ ಸರ್ಕಾರಿ ಆಸ್ಪತ್ರೆ ಕಿಟಕಿ ಗಾಜುಗಳನ್ನು…
ತುಮಕೂರು: ಇಂದು ಹಸಿವಿಗಾಗಿ ರಾಜಕಾರಣ ಮಾಡುತ್ತಿಲ್ಲ. ಹಸುವಿಗಾಗಿ ರಾಜಕಾರಣ ನಡೆಯುತ್ತಿದೆ. ಇದು ಅಪಾಯಕಾರಿ ಎಂದು ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು. ತುಮಕೂರು ನಗರದ ಕನ್ನಡ ಭವನದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಮತ್ತು ಶಶಾಂಕ ಪ್ರಕಾಶನ ಆಯೋಜಿಸಿದ್ದ ಡಾ. ಓ. ನಾಗರಾಜು ಅವರ ಹಟ್ಟಿ ಅರಳಿ ಹೂವಾಗಿ ಕಾಂದಬರಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಮಾಜದಲ್ಲಿ ಯಾವುದೇ ಸಂಘರ್ಷ ನಡೆಯದಿದ್ದರೆ ಅದು ಒಳ್ಳೆಯ ಕಾಲ. ಬ್ರಿಟೀಷರ ಮತ್ತು ರಾಜರ ಕಾಲವೇ ಎಷ್ಟೋ ಉತ್ತಮವಾಗಿತ್ತು ಎಂದು ಹೇಳುವವರೂ ಇದ್ದಾರೆ. ಅಂದು ಕೂಡ ಸಮಸ್ಯೆಗಳು ಇದ್ದವು. ಸಂಘರ್ಷ ನಡೆದರೆ ಅಲ್ಲಿ ಏನೋ ನಡೆಯುತ್ತಿದೆ ಎಂದರ್ಥ. ಹಸಿವಿಗಾಗಿ ರಾಜಕಾರಣ ಮಾಡಿದರೆ ಒಳ್ಳೆಯದು. ಅದು ಆಗದೆ ಹಸುವಿನ ರಾಜಕಾರಣ ನಡೆಯುತ್ತಿದೆ ಎಂದು ತಿಳಿಸಿದರು. ಚಳವಳಿಗಳು ಸೃಜನಶೀಲತೆಯನ್ನು ನಾಶ ಮಾಡುತ್ತದೆ ಎಂಬ ವಾದವಿದೆ. ಆದರೆ ಇದು ಸುಳ್ಳು. ಸಾಮಾಜಿಕ ಮತ್ತು ಸಾಹಿತ್ಯಕ ಚಳವಳಿಗಳು ನಡೆಯುವುದರಿಂದಲೇ…
ಕೊರಟಗೆರೆ : ರಾಜ್ಯದ ಕ್ರೀಡಾಪಟುಗಳಿಗೆ ಹಾಗೂ ಕ್ರೀಡೆಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಕೆಲೋ ಇಂಡಿಯಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರದ ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರಿಗೆ ಮನವಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು. ಕೊರಟಗೆರೆ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆ ಹಾಗೂ ರಾಜ್ಯದಲ್ಲಿರುವ ಯುವ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿ ಸ್ಪರ್ಧಿಸುವಂತೆ ಮಾಡಲು ರಾಜ್ಯದಲ್ಲಿರುವ ಕ್ರೀಡಾಂಗಣಗಳನ್ನು ಮೇಲ್ದರ್ಜೆಗೇರಿಸಿ, ಮೂಲಭೂತ ಸೌಕರ್ಯ ಕಲ್ಪಿಸಬೇಕಾಗಿದೆ. ಕೆಲೋ ಇಂಡಿಯಾ ಯೋಜನೆಯಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸಲು ಬಜೆಟ್ನಲ್ಲಿ ಘೋಷಿಸಲಾಗಿದೆ. ವಿ.ವಿ.ಸ್ಥಾಪಿಸಲು 100 ಎಕರೆ ಜಮೀನು…
ತುಮಕೂರು : ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಅಂತರಾಷ್ಟ್ರೀಯ ಮಟ್ಟದ ಸೌಲಭ್ಯಗಳುಳ್ಳ ಕ್ರೀಡಾಂಗಣವನ್ನಾಗಿ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು. ತುಮಕೂರು ನಗರದ ಎಂ.ಜಿ.ಕ್ರೀಡಾಂಗಣದಲ್ಲಿಂದು 8.25ಕೋಟಿ ಅಂದಾಜು ಮೊತ್ತದ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಮಟ್ಟದ 8 ಲೈನ್ವುಳ್ಳ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಗಲಿದೆ. ಅಲ್ಲದೆ ಚರಂಡಿ ವ್ಯವಸ್ಥೆ, ಕ್ರೀಡಾಂಗಣ, ಸಮತಟ್ಟು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಕ್ರೀಡಾಂಗಣಕ್ಕೆ ಪ್ರತ್ಯೇಕವಾದ ನೀರಿನ ಸರಬರಾಜು ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಅವರು ತಿಳಿಸಿದರು. ಆರ್.ಸಿ.ಸಿ.ಗ್ಯಾಲರಿ, ಮಹಿಳಾ ಹಾಸ್ಟೆಲ್, ಪುಟ್ಬಾಲ್ ಲಾನ್, ಜಿಮ್, 10 ಲೆನ್ ಈಜು ಕೊಳ, ವಾಕಿಂಗ್ ಟ್ರ್ಯಾಕ್ ಸೇರಿದಂತೆ ಇತರೆ ಕ್ರೀಡಾ ಮೂಲಭೂತ ಸೌಕರ್ಯ ಕಲ್ಪಿಸಲು ಸ್ಮಾರ್ಟ್ ಸಿಟಿ ವತಿಯಿಂದ 53 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳನ್ನು…
ಈ ಕಂಪ್ಯೂಟರ್ ಯುಗದಲ್ಲಿ ಮನುಷ್ಯನ ಮನಸ್ಸು ಅತಿವೇಗವಾಗಿ ಚಲಿಸುತ್ತದೆ. ಇದಕ್ಕೆ ವಿವೇಕಾನಂದರ ಬದುಕೇ ಒಂದು ದೊಡ್ಡ ನಿದರ್ಶನ. ಆದುದರಿಂದ ಮನುಷ್ಯರು ಮೊದಲು ಸಂಸ್ಕಾರವಂತರಾಗಬೇಕು ಎಂದು ನಿವೃತ್ತ ಪ್ರಾಂಶುಪಾಲ ಮತ್ತು ಸರ್ವೋದಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಹೆಚ್.ಸುಬ್ಬರಾಯ ಹೇಳಿದರು. ಅವರು ದೇವರಾಯನ ದುರ್ಗದಲ್ಲಿರುವ ಯೋಗ ನರಸಿಂಹನ ಸನ್ನಿಧಿಯಲ್ಲಿ ಸುಬ್ಬರಾಯರಿಗೆ 90 ವರ್ಷ, ಕಮಲಮ್ಮನವರಿಗೆ 80 ವರ್ಷದ ಸವಿನೆನಪಿಗಾಗಿ ಇವರ ಪುತ್ರ, ಹೆಣ್ಣುಮಕ್ಕಳು, ಸೊಸೆ ಅಳಿಯಂದಿರು ಮತ್ತು ಮೊಮ್ಮಕ್ಕಳು ಸೇರಿ ಹುಟ್ಟುಹಬ್ಬ ಸಮಾರಂಭದಲ್ಲಿ ವಿಶೇಷ ಉಡುಗೊರೆಯೊಂದಿಗೆ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮನುಷ್ಯರು ಸಂಸ್ಕಾರವಂತರಾಗಿರುತ್ತಾರೋ ಅವರಲ್ಲಿ ಸಂಸ್ಕøತಿ ಎಂಬುದು ಮನೆ ಮಾಡಿಕೊಂಡಿರುತ್ತದೆ. ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕøತಿಯ ವ್ಯಾಮೋಹದಿಂದ ನಮ್ಮ ದೇಶದ ಸಂಸ್ಕøತಿ ಸಂಸ್ಕಾರಗಳು ನಾಶವಾಗುತ್ತಿವೆ. ಆದುದರಿಂದ ಎಲ್ಲ ಯುವಕರು ನಮ್ಮ ದೇಶದ ಸಂಸ್ಕøತಿ ಮತ್ತು ಸಂಸ್ಕಾರಗಳನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ಇದೆ ಎಂದರು. ಮನುಷ್ಯರಲ್ಲಿ ಕನಿಷ್ಠ ಪಕ್ಷ ಇರಬೇಕಾದ…
ತುಮಕೂರು: ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯಲು ಯತ್ನಿಸಿದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಚಿಕಲಪರ್ವಿ ವೃತ್ತದ ಗ್ರಾಮ ಲೆಕ್ನಿಗರ ಮೇಲೆ ಮರಳಿನ ಲಾರಿ ಹತ್ತಿಸಿ ಕೊಲೆ ಮಾಡಿರುವುದನ್ನು ಖಂಡಿಸಿ,ಇಂದು, ಕಂದಾಯ ಇಲಾಖೆ ನೌಕರರ ಸಂಘ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರ್ವವ್ಯದಲ್ಲಿದ್ದ ಚಿಕಲಪರ್ವಿ ಗ್ರಾಮಲೆಕ್ಕಿಗ ಸಾಹೇಬ್ ಪಾಟೀಲ್ ಎಂಬುವವರು ಮರಳು ತುಂಬಿದ್ದ ಲಾರಿ, ರಾಯಲ್ಟಿ ನೀಡಿದೆಯೇ ಎಂದು ಚೆಕ್ ಮಾಡಲು ಮರಳಿನ ಲಾರಿಯನ್ನು ಅಡ್ಡಗಟ್ಟಿದಾಗ, ಲಾರಿಯ ಚಾಲಕ ಅವರ ಮೇಲೆ ವಾಹನ ಹತ್ತಿಸಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.ಮೃತರ ಕುಟುಂಬಕ್ಕೆ ಹೆಚ್ಚಿನ ಅರ್ಥಿಕ ನೆರವು ನೀಡುವುದರ ಜೊತೆಗೆ, ಇಂತಹ ಕೆಲಸಗಳಿಗೆ ನಿಯೋಜಿತರಾಗುವ ಕಂದಾಯ ಇಲಾಖೆಯ ನೌಕರರಿಗೆ ರಕ್ಷಣೆ ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪ್ರಕರಣವನ್ನು ಸಿಓಡಿ ತನಿಖೆಗೆ ಒಳಪಡಿಸಿ,ಇದರ ಹಿಂದಿರುವ ಪ್ರಭಾವಿ ವ್ಯಕ್ತಿಗಳಿಗೆ ಶಿಕ್ಷೆಯಾಗುವಂತೆ ಮಾಡಬೇಕು ಹಾಗೂ ಕುಟುಂಬ ಬೀದಿ ಪಾಲಾಗದಂತೆ ಸರಕಾರ ನೋಡಿಕೊಳ್ಳಬೇಕು…