ತುಮಕೂರು : ತಾಲ್ಲೂಕಿನ ಅಮಾನಿಕೆರೆ ಗ್ರಾಮದ ಸರ್ವೇ ನಂ 8, ಕಸಬಾ ಹೋಬಳಿಯ 91,92 (ರೈಲ್ವೆ ನಿಲ್ದಾಣದ ಪಕ್ಕ)ರ ಸರ್ವೇ ನಂಬರ್ನಲ್ಲಿರುವ ಎನ್.ಆರ್.ಕಾಲೋನಿಯ ಕುಳವಾಡಿ ವಂಶಸ್ಥರ ಜಮೀನುಗಳನ್ನು ಕೆಲವರು ಕಬಳಿಸುವ ಹುನ್ನಾರ ಮಾಡಿದ್ದು, ಸದರಿ ಜಮೀನುಗಳಿಗೆ ಖಾತೆ, ಪಿಐಡಿಯನ್ನು ಪಾಲಿಕೆ ವತಿಯಿಂದ ಮಾಡಿಕೊಡದಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ನೇತೃತ್ವದಲ್ಲಿ ಪಾಲಿಕೆ ಆಯುಕ್ತ ಯೋಗಾನಂದ್ ಅವರಿಗೆ ಮನವಿ ಸಲ್ಲಿಸಲಾಯಿತು. ಸದರಿ ಜಮೀನಿಗೆ ಸಂಬಂಧಿಸಿದಂತೆ ತುಮಕೂರು ತಹಶೀಲ್ದಾರ್ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದು, ಪ್ರಕರಣಗಳು ಬಾಕಿ ಇರುವಾಗಲೇ ಸಂಬಂಧಿತ ಇಲಾಖೆಗಳು ಬೇರೆಯವರ ಹೆಸರಿಗೆ ಖಾತೆ ಮಾಡಲು ಮುಂದಾಗಿದ್ದು, ಸದರಿ ಜಮೀನಿಗೆ ಸಂಬಂಧಿ ಸಿದಂತೆ ಖಾತೆ ಸೇರಿದಂತೆ ಇತರೆ ಬದಲಾವಣೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು. ಈ ವಿವಾದಿತ ಜಮೀನುಗಳಿಗೆ ಸಂಬಂಧಿಸಿದಂತೆ ಒತ್ತಡಕ್ಕೆ ಮಣಿದು ಖಾತೆ ಬದಲಾವಣೆ ಮಾಡಿದರೆ ಅಧಿಕಾರಿಗಳು ಕಾನೂನು ರೀತ್ಯ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಅವರು,…
Author: News Desk Benkiyabale
ತುಮಕೂರು : ನಮ್ಮ ಸುತ್ತಮುತ್ತ ಸ್ವಚ್ಛತೆ ಇದ್ದಲ್ಲಿ ಸಾಂಕ್ರಾಮಿಕ ರೋಗಗಳು ಹರಡದೇ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯಾಗಿರಬಹುದು ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲಾ ಬಾಲಭವನದಲ್ಲಿಂದು ಹಮ್ಮಿಕೊಂಡಿದ್ದ “ಸ್ವಚ್ಛತೆಯೇ ಸಮೃದ್ಧಿ ಘನತ್ಯಾಜ್ಯ ನಿರ್ವಹಣೆ” ಬಗ್ಗೆ ಸಮಾಲೋಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿಯವರ ಕನಸು ಸ್ವಚ್ಛಭಾರತ. ಇದಕ್ಕಾಗಿ ಅವರು ನಿರಂತರ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಸ್ಮರಿಸುತ್ತಾ, ನಾವು ಭಾರತೀಯರು ಖಾಸಗಿಯಾಗಿ ಶುದ್ಧವಾಗಿರುತ್ತೇವೆ ಆದರೆ ಸಾರ್ವಜನಿಕವಾಗಿ ಅಶುದ್ಧವಾಗಿರುತ್ತೇವೆ. ಆದ್ದರಿಂದ ಮನೆಯ ಹಂತದಲ್ಲಿ ತಮ್ಮ ಸ್ವಂತ ಕೆಲಸವಾಗಿ ಕಸವನ್ನು ಒಣ ಹಾಗೂ ಹಸಿ ಕಸವಾಗಿ ವಿಂಗಡಿಸಿ ಸೂಕ್ತ ನಿರ್ವಹಣೆ ಮಾಡುವುದು ದೈನಂದಿನ ಪ್ರಕ್ರಿಯೆಯಾಗಬೇಕು. ಪುಡಿ ಕಸದ ಮೌಲ್ಯವರ್ಧನೆ ಮಾಡಿ…
ತುಮಕೂರು : ಅಂಗನವಾಡಿ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಾಪಸ್ ಪಡೆಯಬೇಕು. ಅಂಗನವಾಡಿಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂದು ಒತ್ತಾಯಿಸಿ ಸಹಸ್ರ ಸಹಸ್ರ ಅಂಗನವಾಡಿ ಕಾರ್ಯಕರ್ತೆಯರು ತುಮಕೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ತುಮಕೂರು ನಗರದ ಟೌನ್ಹಾಲ್ನಲ್ಲಿ ಸಮಾವೇಶಗೊಂಡ ಸುಮಾರು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಬಿಎಚ್.ರಸ್ತೆ ಎಂ.ಜಿ.ರಸ್ತೆ ಮೂಲಕ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ದ ಗೋµಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ ಮೂರು ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಾತೃಪೂರ್ಣ ಯೋಜನೆ ಯಶಸ್ವಿಗೆ ಹೆಚ್ಚುವರಿ ಸಹಾಯಕಿಯನ್ನು ಕೊಡಬೇಕು. ಅಂಗನವಾಡಿಗಳಿಗೆ ಗುಣಾತ್ಮಕ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು. …
ಚಿಕ್ಕನಾಯಕನಹಳ್ಳಿ : ಬೇವಿನಮರದಿಂದ ಹಾಲಿನಧಾರೆ ಹರಿದು ಬರುತ್ತಿದ್ದು, ಈ ಪ್ರಕೃತಿ ವಿಸ್ಮಯ ವೀಕ್ಷಣೆಗೆ ಜನರು ಮುಗಿಬಿದ್ದಿದ್ದಾರೆ. ತಾಲ್ಲೂಕಿನ ಕಂದಿಕೆರೆ ಹೋಬಳಿ ರಾಮನಹಳ್ಳಿ ಪಂಚಾಯಿತಿಯ ಹನುಮಂತನಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೊಲದಲ್ಲಿರುವ ಬೇವಿನಮರವೊಂದರಲ್ಲಿ ಕಳೆದ ಹದಿನೈದು ದಿನದಿಂದ ಹಾಲಿನ ಧಾರೆಹರಿದು ಬರುತ್ತಿದೆ. ಮರದ ಕಾಂಡದಿಂದ ಬಿಳಿ ಬಣ್ಣದ ದ್ರವ ಹರಿಯುತ್ತಿರುವುದನ್ನು ಕಂಡ ಸ್ಥಳೀಯರು ಇದೊಂದು ದೈವ ಪವಾಡವೆಂದು ನಂಬಿ ಮರಕ್ಕೆ ಅರಿಶಿನ, ಕುಂಕುಮದಿಂದ ಪೂಜೆ ಸಲ್ಲಿಸಿ ದೈವತ್ವಹೊಂದಿದ ಮರವೆಂದು ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಈ ವಿಸ್ಮಯವನ್ನು ನೂಡಲು ಪ್ರತಿದಿನ ನೂರಾರು ಮಂದಿ ಧಾವಿಸುತ್ತಿದ್ದಾರೆ. ಈ ಮರವು ದೇವಾಲಯದ ಜಮೀನಿಗೆ ಸೇರಿದ್ದರಿಂದ ಈ ಘಟನೆ ಹೆಚ್ಚಿನ ಮಹತ್ವ ಪಡೆದಿದೆ. ಇದೇ ಜಾಗದಲ್ಲಿ ಶ್ರೀಅಯ್ಯಪ್ಪ ದೇಗುಲ ನಿರ್ಮಾಣಕ್ಕೆ ಊರಿನ ಭಕ್ತರು ಮುಂದಾಗಿದ್ದು ಈಗ ನಿರ್ಮಾಣ ಹಂತದಲ್ಲಿರುವಾಗಲೇ ಈ ವಿಸ್ಮಯ ಗೋಚರಿಸಿರುವುದು ಕಾಕತಾಳೀಯವೆನಿಸಿದೆ. ಮರದ ಕಾಂಡದಿಂದ ಬಿಳಿದ್ರವ ಹರಿಯುವುದು ಕೆಲವು ಮರಗಳಲ್ಲಿ ನಡೆಯುವ ರಾಸಾಯನಿಕ ಕ್ರಿಯೆಯ ಪರಿಣಾಮವೆಂದು…
ತುಮಕೂರು : ತುಮಕೂರು ತಾಲೂಕು ಅಮಲಾಪುರ(ವಿಜ್ಞಾನ ಗುಡ್ಡ)ದಲ್ಲಿ ಎಂಎಸ್ಎಂಇ ಟೆಕ್ನಾಲಜಿ ಸೆಂಟರ್ ಅನ್ನು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ 100 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ತಿಳಿಸಿದರು. ಕೌಶಲ್ಯ ತರಬೇತಿಗಳ ರೂಪುರೇಷೆ ಸಿದ್ಧಪಡಿಸುವ ಕುರಿತು ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ಎಂಎಸ್ಎಂಇ ಟೆಕ್ನಾಲಜಿ ಸೆಂಟರ್ ಸ್ಥಾಪಿಸಲು 100 ಕೋಟಿ ರೂ.ಗಳು ಮಂಜೂರಾಗಿದ್ದು, ರಾಜ್ಯ ಸರ್ಕಾರವು ಅಮಲಾಪುರ(ವಿಜ್ಞಾನ ಗುಡ್ಡ)ದಲ್ಲಿ ಈಗಾಗಲೇ 15 ಎಕರೆ ಪ್ರದೇಶವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದು, ಈ ಸೆಂಟರ್ನಲ್ಲಿ ಪ್ರತಿ ವರ್ಷ ಸುಮಾರು 5000 ಅಭ್ಯರ್ಥಿಗಳಿಗೆ ಕೈಗಾರಿಕಾಧಾರಿತ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗ ನೀಡಲು ಕೃಷಿ, ರೇಷ್ಮೆ, ತೋಟಗಾರಿಕೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ…
ತುಮಕೂರು: ನಗರದಲ್ಲಿ ಪರಿಸರ ಸಂರಕ್ಷಣೆಯ ಜೊತೆಗೆ ಆಟೋ ಚಾಲಕರ ಜೀವನಮಟ್ಟ ಸುಧಾರಿಸಲು ಆಟೋ ಚಾಲಕರ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕಾರಿಗಳಿಗೆ ಹಾಗೂ ಆಟೋ ಚಾಲಕರಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಆಟೋರೀಕ್ಷಾ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಅವರ ಆಧುನೀಕರಣ ಹಾಗೂ ಸಬಲೀಕರಣ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸಹಕಾರ ಸಂಘ ಸ್ಥಾಪಿಸಿ ನಗರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಆಟೋ ಚಾಲಕರನ್ನು ಈ ಸಂಘದಲ್ಲಿ ಮೊದಲ ಆದ್ಯತೆ ನೀಡಿ ಸದಸ್ಯತ್ವ ನೀಡಿದಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂದರು. ನಗರದಲ್ಲಿ ಚಾಲ್ತಿಯಲ್ಲಿರುವ ಆಟೋ ಚಾಲಕರ ಪರವಾನಗಿಯ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸಹಕಾರ ಸಂಘಗಳ ಉಪ ನಿಭಂಧಕರ ಸಹಕಾರದೊಂದಿಗೆ ಸಹಕಾರ ಸಂಘವನ್ನು…
ಮಧುಗಿರಿ : ದಲಿತರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ ಪೊಲೀಸ್ ಠಾಣೆಗಳಲ್ಲಿ ದಲಿತರ ಮೇಲೆ ಕೌಂಟರ್ ಕೇಸ್ ಹಾಕುವುದು ನಿಲ್ಲಿಸಬೇಕು ಎಂದು ದಲಿತ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು. ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮಥ್ರ್ಯ ಸೌಧದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ಉಪವಿಭಾಗ ಮಟ್ಟದ ದಲಿತರ ಕುಂದುಕೊರತೆ ಸಭೆಯಲ್ಲಿ ಕೆಲವು ಪ್ರಕರಣಗಳಲ್ಲಿ ದಲಿತರು ದೂರು ತೆಗೆದುಕೊಂಡು ಹೋದ ಸಂದರ್ಭದಲ್ಲಿ ಕೌಂಟರ್ ಕೇಸ್ ಹಾಕುತ್ತಿರುವುದು ಸರಿಯಲ್ಲ ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಸಭೆಯಲ್ಲಿ ಎಲ್ಲಾ ಮುಖಂಡರು ಖಂಡಿಸಿದರು. ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ ಮಾತನಾಡಿ ಇತ್ತೀಚೆಗೆ ರಾತ್ರಿ ವೇಳೆ ಪೊಲೀಸ್ ಬೀಟ್ ಸರಿಯಾಗಿ ಮಾಡುತ್ತಿಲ್ಲ ನಿಮ್ಮ ಸಿಬ್ಬಂದಿಗಳು ಬೀಟ್ ವಿಚಾರವಾಗಿ ಅಧಿಕಾರಿಗಳ ದಿಕ್ಕುತಪ್ಪಿಸುತ್ತಿದ್ದಾರೆ ಇನ್ನುಮುಂದಾದರೂ ಪೊಲೀಸ್ ಬೀಟ್ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಕ್ರಮ ಜರುಗಿಸಿ ಇಲ್ಲವಾದರೆ ರಾತ್ರಿವೇಳೆ ಕೊಲೆ ದರೋಡೆ ಸುಲಿಗೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿ ಜನರ ನೆಮ್ಮದಿಗೆ ದಕ್ಕೆ ಬರದಂತೆ ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ…
ತುಮಕೂರು : ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಮಾಹಿತಿಯನ್ನು ಒಂದೇ ಬೆಸ್ಲೈನ್ ಲೇಯರ್ಗಳಲ್ಲಿ ಅಪ್ಲೋಡ್ ಮಾಡಲು ಇಲಾಖಾವಾರು ಸಂಪೂರ್ಣ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಇಲಾಖಾ ಕಾರ್ಯಕ್ರಮಗಳ ಲೇಯರ್ಸ್ಗಳನ್ನು ಸಿದ್ಧಪಡಿಸುವ ಸಂಬಂಧ ತಾಂತ್ರಿಕ ತಜ್ಞರೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿರುವ ಬೋರ್ವೆಲ್, ನದಿ, ಕೆರೆ, ಕಟ್ಟೆ ಕೊಳವೆಬಾವಿ, ತೆರೆದ ಬಾವಿ, ಹಳ್ಳ, ಕಾಲುವೆ ಸೇರಿದಂತೆ ಎಲ್ಲಾ ಜಲಮೂಲಗಳ ಮಾಹಿತಿಯನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು, ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಮತ್ತು ಮಾತೃಪೂರ್ಣ ಯೋಜನೆ ಸೌಲಭ್ಯ ಪಡೆಯುತ್ತಿರುವ ಗರ್ಭಿಣಿಯರ ವಿವರಗಳ ಮಾಹಿತಿಯನ್ನು ನೀಡಬೇಕು ಎಂದರಲ್ಲದೇ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬಾಡಿಗೆ/ಸ್ವಂತ ಕಟ್ಟಡದಲ್ಲಿರುವ ಹಾಸ್ಟೆಲ್ಗಳು ಹಾಗೂ…
ತುಮಕೂರು: ತೆಲಂಗಾಣದಲ್ಲಿ ಪಶುವೈದ್ಯೆ ಡಾ.ಪ್ರಿಯಾಂಕರೆಡ್ಡಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಕರ್ನಾಟಕ ಪಶುವೈದ್ಯಕೀಯ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತೆಲಂಗಾಣ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಡಾ.ರುದ್ರಪ್ರಸಾದ್ ಅವರು, ಪ್ರಿಯಾಂಕ ರೆಡ್ಡಿ ಮೇಲೆ ನಡೆಸಿರುವ ಅತ್ಯಾಚಾರ ಘಟನೆಯಿಂದಾಗಿ, ಪಶುವೈದ್ಯರು ಮಾನಸಿಕವಾಗಿ ಕುಗ್ಗಿದ್ದಾರೆ. ಹಳ್ಳಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ವಿಶ್ವಾಸದ ಮೇಲೆ ಚಿಕಿತ್ಸೆಗೆಂದು ತೆರಳುತ್ತಾರೆ, ಇಂತಹ ಘಟನೆಯಿಂದಾಗಿ ಹಳ್ಳಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಭಯಭೀತರಾಗಿದ್ದಾರೆ ಎಂದರು. ಸಿಸಿ ಕ್ಯಾಮರಾ ಇರುವ ಪ್ರದೇಶದಲ್ಲಿಯೇ ವೈದ್ಯೆಯ ಮೇಲೆ ಇಂತಹ ಕೃತ್ಯ ನೆಡೆದಿರುವುದು ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಇಂತಹ ಘಟನೆಗಳಿಂದ ಪಶುವೈದ್ಯರು ಕಾರ್ಯನಿರ್ವಹಿಸುವುದಕ್ಕೆ ಹಿಂಜರಿಯುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಪಶುವೈದ್ಯರಲ್ಲಿ ಧೈರ್ಯ ಮೂಡಿಸುವಂತಹ ಹಾಗೂ ಸಮಾಜಕ್ಕೆ ನೈತಿಕ ಸ್ಥೈರ್ಯ…
ಗುಬ್ಬಿ: ಜಿಲ್ಲೆಯಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳ ಬಗ್ಗೆ ಜನತೆಯಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನಹರಿಸಬೇಕಿದೆ. ಸೂಕ್ಷ್ಮವಾದ ಈ ವಿಚಾರವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಮಾಜಿ ಸಚಿವ ಮತ್ತು ಶಾಸಕ ಎಸ್.ಆರ್.ಶ್ರೀನಿವಾಸ್ ಆಗ್ರಹಿಸಿದರು. ತಾಲ್ಲೂಕಿನ ಕೆ.ಜಿ.ಟೆಂಪಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ರೈತ ಸಂಘ, ಸ್ಥಳೀಯ ಮುಖಂಡರು, ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಹಾಗೂ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಆರೋಗ್ಯ ಶಿಬಿರದಲ್ಲಿ ಮಾತನಾಡಿದ ಅವರು ತುಮಕೂರು ನಗರದಲ್ಲಿ ನಾಲ್ಕು ಕೊಲೆ ಪ್ರಕರಣ ಭಯ ಹುಟ್ಟಿಸಿದೆ. ಈ ಜತೆಗೆ ಕಳ್ಳತನ, ಸರಗಳ್ಳತನದಂತಹ ಕೃತ್ಯಗಳು ಈಚೆಗೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಗುಬ್ಬಿ ತಾಲ್ಲೂಕಿನಲ್ಲೂ ಅಪರಾಧ ಕೃತ್ಯಗಳು ಹೆಚ್ಚಾದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು. ಗುಬ್ಬಿ ತಾಲ್ಲೂಕಿನಲ್ಲಿ ಸರಗಳ್ಳತನ, ದೇವಾಲಯ ಹುಂಡಿ, ಘಂಟೆ ಕಳವು ಸರಣಿಯಲ್ಲಿ ನಡೆದಿದೆ. ಈ ಜತೆಗೆ…











