ತುಮಕೂರು: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್ ಹಾಗೂ ಕಾನೂನು ಸೇವೆ ಸೇರಿದಂತೆ ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಇಂದು ಭೇಟಿ ನೀಡಿ ಕೇಂದ್ರದಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತುಮಕೂರು ಸಾರ್ವಜನಿಕ ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಇಂದಿನಿಂದ ಪ್ರಾರಂಭಿಸಲಾಗಿರುವ ಸಖಿ ಕೇಂದ್ರವನ್ನು ಪರಿಶೀಲಿಸಿದ ನಂತರ ಕೇಂದ್ರದ ಕಟ್ಟಡವು ತುಂಬಾ ಕಿರಿದಾಗಿದ್ದು, ಸಮಾಲೋಚನೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು. ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರವನ್ನು ರಾಜ್ಯ ಸರ್ಕಾರದ ವತಿಯಿಂದ 2015-16ನೇ ಸಾಲಿನಿಂದ ವಿಶೇಷ ಚಿಕಿತ್ಸಾ ಘಟಕ ಯೋಜನೆಯಡಿ ಗೆಳತಿ ಎಂಬ ಹೆಸರಿನಲ್ಲಿ ನಡೆಸಲಾಗುತ್ತಿತ್ತು.ದೀ ಕೇಂದ್ರದಲ್ಲಿ ಈವರೆಗೆ 302 ಪ್ರಕರಣಗಳು ದಾಖಲಾಗಿದ್ದು,…
Author: News Desk Benkiyabale
ತುಮಕೂರು: ಸ್ಪೇನ್ ದೇಶದ ಬಾರ್ಸಿಲೋನಾದಲ್ಲಿ ಇತ್ತೀಚೆಗೆ ಜರುಗಿದದ “9ನೇ ಆವೃತ್ತಿ ಸ್ಮಾರ್ಟ್ ಸಿಟಿ ಎಕ್ಸ್ಪೋ ವಲ್ರ್ಡ್ ಕಾಂಗ್ರೆಸ್ 2019 ಮೇಳ”ದಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಅಧಿಕಾರಿಗಳು ಪಾಲ್ಗೊಂಡಿದ್ದರು. ನಗರಗಳನ್ನು ಸಬಲೀಕರಣಗೊಳಿಸಲು ಹಾಗೂ ಪ್ರಪಂಚದ ವಿವಿಧ ನಗರಗಳ ಆವಿಷ್ಕಾರಗಳನ್ನು ಸಂಗ್ರಹಿಸಲು ನವೆಂಬರ್ 19 ರಿಂದ ಮೂರು ದಿನಗಳ ಕಾಲ ಈ ಮೇಳವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ನಾವೀನ್ಯತೆಯನ್ನು ಉತ್ತೇಜಿಸುವ ಮೂಲಕ ಪಾಲುದಾರಿಕೆಗಳನ್ನು ಸ್ಥಾಪಿಸಲು ಹಾಗೂ ವ್ಯಾಪಾರದ ಅವಕಾಶಗಳನ್ನು ಗುರುತಿಸುವ ಮೂಲಕ ಈವೆಂಟ್ ನಗರ ಮತ್ತು ಆ ನಗರಗಳ ನಾಗರಿಕರಿಗೆ ವಿಶ್ವಾದ್ಯಂತ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ಈ ಮೇಳ ಪ್ರಯೋಜನವಾಯಿತು. ಮೇಳದಲ್ಲಿ ಹಲವಾರು ಮುಂಚೂಣಿಯ ದೇಶ/ವಿದೇಶಿ ಬ್ರಾಂಡ್, ಸ್ಮಾರ್ಟ್ ಸಿಟಿ, ಸ್ಮಾರ್ಟ್ ಸಾರಿಗೆ, ಸ್ಮಾರ್ಟ್ ಎನರ್ಜಿ, ಇಂಟರ್ನೆಟ್ ಆಫ್ ಥಿಂಗ್ಸ್(ಐಒಟಿ), ಅತ್ಯಾಧುನಿಕ ಲ್ಯಾಪ್ ಟಾಪ್, ಸ್ಕ್ಯಾನರ್, ಹಾರ್ಡ್ ಡಿಸ್ಕ್, ಸ್ಮಾರ್ಟ್ ಹೆಲ್ತ್ ಕೇರ್ ಉತ್ಪನ್ನಗಳು, ಸ್ಮಾರ್ಟ್-ಲೈಫ್ ಸಾಧನ, ಗೋಡೆ ಅಲಂಕಾರಿಕ ವಸ್ತು,…
ತುಮಕೂರು: ಗರ್ಭಿಣಿ ಸ್ತ್ರೀಯರು ಹಾಗೂ 0-2 ವರ್ಷದೊಳಗಿನ ಮಕ್ಕಳು ತಪ್ಪದೇ ಇಂದ್ರಧನುಷ್ ಲಸಿಕೆಯನ್ನು ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ನಗರದ ಮರಳೂರು ದಿಣ್ಣೆ ಅಂಗನವಾಡಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಮಕ್ಕಳಿಗೆ ಸಾಂಕೇತಿಕವಾಗಿ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಆರ್. ಚಂದ್ರಿಕಾ ಮಾತನಾಡಿ, ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಲಸಿಕೆ ವಂಚಿತರಾಗಿರುವ, ಬಿಟ್ಟು ಹೋಗಿರುವ, ಅಪಾಯಕಾರಿ ಪ್ರದೇಶದಲ್ಲಿರುವ ಫಲಾನುಭವಿಗಳನ್ನು ಗುರುತಿಸಿದ್ದು, ಲಸಿಕೆಗಳನ್ನು ನೀಡಲು ಕ್ರಮವಹಿಸಲಾಗಿದೆ. ಫಲಾನುಭವಿಗಳು ತಪ್ಪದೆ ಈ ಅಭಿಯಾನದಲ್ಲಿ ಲಸಿಕೆಯನ್ನು ಪಡೆದು ರೋಗಮುಕ್ತರಾಗಬೇಕು ಎಂದು ಮನವಿ ಮಾಡಿದರು. ಆರ್.ಸಿ.ಹೆಚ್ ಅಧಿಕಾರಿ ಡಾ|| ಕೇಶವರಾಜು ಮಾತನಾಡಿ, ಜಿಲ್ಲೆಯಲ್ಲಿ ಲಸಿಕೆಯಿಂದ ವಂಚಿತರಾದ 0-2ದೊಳಗಿನ 992 ಮಕ್ಕಳು, 218 ಗರ್ಭಿಣಿ ಮಹಿಳೆಯರನ್ನು ಗುರುತಿಸಿದ್ದು 336…
ತುಮಕೂರು: ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ವೈಷಮ್ಯದ ಭಾವನೆಗಳನ್ನು ಬೆಳೆಸುವ ಕಾರ್ಯಕ್ರಮಗಳ ಪ್ರಸಾರ ಮಾಡುವ ಕೇಬಲ್ ಟಿವಿಗಳ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ರಾಕೇಶ್ಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಯಾವುದೇ ಕಾರ್ಯಕ್ರಮ, ಸಾರ್ವಜನಿಕ ಶಾಂತಿಗೆ ಭಂಗವುಂಟು ಮಾಡುವ ಸಂಭವವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ಕಾರ್ಯಕ್ರಮಗಳ ಪ್ರಸರಣವನ್ನು ನಿಷೇಧಿಸಬಹುದಾಗಿದೆ ಎಂದರು. ಸ್ಥಳೀಯ ಮಟ್ಟದಲ್ಲಿ ಕೇಬಲ್ ಟೆಲಿವಿಷನ್ ಚಾನೆಲ್ಗಳು ಪ್ರಸಾರ ಮಾಡಿದ ವಿಷಯಗಳ ಬಗ್ಗೆ ಅಧಿಕೃತ ಅಧಿಕಾರಿಗಳು ನಿಗಾವಹಿಸಬೇಕು. ಅಲ್ಲದೇ ಅನಧಿಕೃತ ಅಥವಾ ನಕಲಿ ಚಾನೆಲ್ಗಳು ಕಾರ್ಯನಿರ್ವಹಿಸದಂತೆ ಮತ್ತು ಕೇಬಲ್ ಟೆಲಿವಿಷನ್ ಆಪರೇಟರ್ಗಳು ನಿಷ್ಪಕ್ಷಪಾತವಾಗಿ ಮತ್ತು ಯಾವುದೇ ಸಮುದಾಯಕ್ಕೆ ಭಂಗ ಉಂಟು ಮಾಡದಂತೆ ನೋಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು. ಕೇಬಲ್ ಟೆಲಿವಿಷನ್ ಮೂಲಕ ಪ್ರಸಾರವಾಗುವ ಕಾರ್ಯಕ್ರಮಗಳ…
ತುಮಕೂರು: ಸ್ಮಾರ್ಟ್ ಸಿಟಿ ಕಾಮಗಾರಿಗಳು ಚಾಲನೆಗೆ ಬಂದು ವರ್ಷಗಳೇ ಕಳೆದಿದ್ದರೂ ಸಹ ನಗರದಲ್ಲಿ ಕೈಗೊಂಡಿರುವ ಅವೈಜ್ಞಾನಿಕ ಕಾಮಗಾರಿಗಳು ತುಂಬಾ ವಿಳಂಬವಾಗಿ ಸಾಗುತ್ತಿರುವುದು ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು, ಗುತ್ತಿಗೆ ಪಡೆದಿರುವವರು ಇಡೀ ನಗರವನ್ನೇ ಧೂಳುಮಯವಾಗಿಸಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ತುಮಕೂರು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರದಲ್ಲಿ ಸಂಚರಿಸುವವರಿಗೆ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ವ್ಯವಹಾರ ಮಾಡುತ್ತಿರುವವರು ತೀವ್ರ ಸ್ವರೂಪದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇಂದಿನ ಆಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಉಪಯೋಗಿಸಿ ಅತಿ ಶೀಘ್ರವಾಗಿ ಮುಗಿಸಬಹುದಾದ ಕಾಮಗಾರಿಗಳನ್ನು ಸಹ ಗುತ್ತಿಗೆ ಪಡೆದಿರುವವರು ವರ್ಷಾನುಗಟ್ಟಲೆ ವಿಳಂಬ ಮಾಡುತ್ತಾ ಮುಂದುವರೆಸಿಕೊಂಡು ಬಂದಿರುವುದು ಈ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವ ಸಂಶಯವನ್ನು ಮೂಡಿಸುತ್ತದೆ. ಆದ್ದರಿಂದ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅತಿ ಶೀಘ್ರವಾಗಿ ಕಾಮಗಾರಿ ಮುಗಿಸುವ ಗುತ್ತಿಗೆದಾರರಿಗೆ ಟೆಂಡರ್ ನೀಡುವುದರ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸಬೇಕೆಂದು ಜಯ ಕರ್ನಾಟಕ ಘಟಕದ ಜಿಲ್ಲಾಧ್ಯಕ್ಷ ಸಿ.ಪಿ.ಸುಧೀರ್,…
ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ವತಿಯಿಂದ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ತಿಪಟೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿಂದು ಗಾಂಧೀಜಿಯವರ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತಿಪಟೂರು ತಾಲ್ಲೂಕು ಪಂಚಾಯತಿ ಸದಸ್ಯ ಜಿ.ಎಸ್. ಶಿವಸ್ವಾಮಿ ಅವರು ಚಾಲನೆ ನೀಡಿದರು. ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳನ್ನು ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿವೆ. ಗಾಂಧೀಜಿಯವರ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸುವ ಮೂಲಕ ಗಾಂಧೀಜಿಯವರ ಸ್ಮರಣೆ ಮಾಡಿಕೊಳ್ಳಬಹುದು ಎಂದರು. ಗಾಂಧೀಜಿ ಅವರ ಜೀವನ ಸಾಧನೆಗಳ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಎಲ್ಲರಿಗೂ ಇದೊಂದು ಸದಾವಕಾಶವಾಗಿದೆ. ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀಜಿ ಅವರ ಸ್ಮರಣೆ ಸದಾಕಾಲವೂ ನಮಗೆಲ್ಲ ಪ್ರೇರಣೆದಾಯಕವಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ…
ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಶ್ರೀ ಮಹಾಗಣಪತಿ ವಿಸರ್ಜನಾ ಮಹೋತ್ಸವ ನ. 30 ಮತ್ತು ಡಿ. 1 ರಂದು ಅತ್ಯಂತ ವೈಭವಯುತವಾಗಿ ನಡೆಯಲಿದೆ. ನ. 30 ರಂದು ರಾತ್ರಿ 10 ಗಂಟೆಗೆ ಗೂಳೂರಿನಲ್ಲಿ ಮಾಮೂಲಿನಂತೆ ವಿದ್ಯುದ್ದೀಪಗಳಿಂದ ಅಲಂಕೃತವಾದ ಭವ್ಯ ಹೂವಿನ ಮಂಟಪದಲ್ಲಿ ಶ್ರೀ ಮಹಾಗಣವತಿ ಉತ್ಸವ ಜರುಗಲಿದೆ. ನ. 30 ರಂದು ಸಂಜೆ 7 ಗಂಟೆಗೆ ಜಾತ್ರೆಗೆ ಬರುವ ಭಕ್ತಾದಿಗಳಿಗಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ರಾತ್ರಿ 8 ಗಂಟೆಗೆ ಶ್ರೀ ಚೌಡೇಶ್ವರಿ, ಗಣೇಶ, ಆಂಜನೇಯ, ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಹಮ್ಮಿಕೊಳ್ಳಲಾಗಿದೆ. ಗೂಳೂರು ಗಣಪತಿ ಜಾತ್ರೆಯ ಅಂಗವಾಗಿ ಅನೇಕ ವೈಭವ ಮನರಂಜನೆಗಳ ಜತೆಗೆ ಹಿಂದಿನ ಕರ್ನಾಟಕದ ಗತವೈಭವವನ್ನು ಬಿಂಬಿಸುವ ಐತಿಹಾಸಿಕ ಹಿನ್ನೆಲೆಯನ್ನು ಸಾರುವ ಚಿತ್ರದುರ್ಗದ ಮದಕರಿ ಪಾಳೆಯಗಾರನ ವೇಷಭೂಷಣದ ಕುಣಿತ ಸಹ ಏರ್ಪಡಿಸಲಾಗಿದೆ. ಅಂದು ರಾತ್ರಿ ವಿದ್ಯುತ್ ದೀಪಾಲಂಕೃತ ಹೂವಿನ ವಾಹನದೊಂದಿಗೆ…
ಕೊರಟಗೆರೆ: ತಾಲ್ಲೂಕಿನ ಬೊಮ್ಮಲ ದೇವಿಪುರ ಪಂಚಾಯ್ತಿ ಕಂಪ್ಯೂಟರ್ ಆಪರೇಟರ್ ಹರೀಶ್ 4000 ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಬೊಮ್ಮಲ ದೇವಿಪುರದ ವಾಸಿ ದತ್ತಾತ್ರೇಯ ಎನ್ನುವರು ಬಸವ ವಸತಿ ಯೋಜನೆಯಲ್ಲಿ ಗ್ರಾಮ ಪಂಚಾಯತಿ ವತಿಯಿಂದ ನೀಡಿದ ಗ್ಹಣದಿಂದ ಮನೆ ಕಟ್ಟುತ್ತಿದ್ದು ಮನೆಯ ಕಾಮಗಾರಿ ಪೂರ್ಣಗೊಂಡಿದ್ದು ಅಂತಿಮ ಬಿಲ್ಲು ಪಾವತಿಯಾಗ ಬೇಕಿರುವ ಹಿನ್ನೆಲೆಯಲ್ಲಿ ಮನೆಯ ಕಟ್ಟಡ ಪೂರ್ಣಗೊಂಡ ಪೋಟೋ ಮತ್ತು ಮಾಹಿತಿಯನ್ನು ಆನ್ಲೈನ್ ಅಪ್ಲೋಡ್ ಮಾಡಲು 10000 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು ಮೊದಲ ಕಂತು 5000 ನಗದು ಹಣವನ್ನು ನೀಡಿದ್ದು ಉಳಿಕೆ ಹಣಕ್ಕೆ ಒತ್ತಾಯಿಸಿದ್ದು ನೊಂದ ಅರ್ಜಿದಾರ ದತ್ತಾತ್ರೇಯ ರವರು ತುಮಕೂರು ಭ್ರಷ್ಟಾಚಾರ ನಿಗ್ರ ದಳದ ಉಪಾಧೀಕ್ಷಕರಾದ ಬಿ.ಉಮಾಶಂಕರ್ ರವರನ್ನು ಬೇಟಿಯಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ದೂರು ನೀಡಿದ್ದು ದೂರನ್ನಾಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಹರೀಶ್ ರವರಿಗೆ ಎರಡನೆಯ ಬಾಪ್ತು 4000 ಲಂಚದ ಹಣ ಕೊಡುವಾಗ ಭ್ರಷ್ಟಾಚಾರ…
ತುಮಕೂರು : ಶಾಲೆ ಬಿಟ್ಟು ಜಿಲ್ಲೆಯಿಂದ ವಲಸೆ ಹೋಗುವ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು ಪ್ರಥಮಾದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಛೇರಿಯಲ್ಲಿಂದು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಪರಸ್ಪರ ಸಹಕಾರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ ಪೋಷಕರು ತಮ್ಮ ಮಕ್ಕಳೊಂದಿಗೆ ವಲಸೆ ಹೋಗದಂತೆ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಿಂದ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶಗಳಿಗೆ ವಲಸೆ ಹೋಗಿರುವ ಮಕ್ಕಳನ್ನು ಶಾಲೆಗೆ ದಾಖಲಿಸಲು ಆಯಾ…
ತುಮಕೂರು : ನಗರದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠದಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಳ್ಳಾರಿ ಮೂಲದ ಲಿಂಗೇಶ್ ಎನ್ನುವ ವಿದ್ಯಾರ್ಥಿ ಮಠದ ಸಮೀಪ ಮರದ ಕೊಂಬೆ ಮುರಿದು ಬಿದ್ದು, ಸಾವನ್ನಪ್ಪಿದ್ದಾರೆ. ಪ್ರತಿದಿನದಂತೆ ಮ್ಯೂಸಿಕ್ ಬ್ಯಾಂಡ್ ಅಭ್ಯಾಸ ಮಾಡಲು ಸಿದ್ದಗಂಗಾ ಮಠದ ಸಮೀಪವಿರುವ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಆಲದಮರದ ಕೆಳಗೆ ಎಲ್ಲಾ ವಿದ್ಯಾರ್ಥಿಗಳು ಮ್ಯೂಸಿಕ್ ಬ್ಯಾಂಡ್ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಬಲವಾದ ಆಲದ ಮರದ ಕೊಂಬೆ ಮುರಿದು ಕೆಳಗೆ ಬಿದ್ದಿದ್ದು, ಮರದ ಕೆಳಗೆ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಬಳ್ಳಾರಿ ಮೂಲದ ಲಿಂಗೇಶ್ ಎನ್ನುವ ವ್ಯಕ್ತಿಯ ತಲೆಯ ಮೇಲೆ ಕೊಂಬೆ ಬಿದ್ದ ಪರಿಣಾಮ ಆತನನ್ನ ಸಿದ್ದಗಂಗಾ ಆಸ್ಪತ್ರೆಗೆ ತಕ್ಷಣ ರವಾನಿಸಲಾಯಿತು. ಆಸ್ಪತ್ರೆಯಲ್ಲಿ 8 ನೇ ತರಗತಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ವಿದ್ಯಾಭ್ಯಾಸಕ್ಕೆಂದು ಬಂದ ಬಡ ವಿದ್ಯಾರ್ಥಿ ಮರದ ಕೊಂಬೆಯ ಮುರಿತಕ್ಕೆ ದಾರುಣವಾಗಿ ಸಾವಿಗೀಡಾಗಿದ್ದು, ಮಗುವನ್ನು ಕಳೆದುಕೊಂಡ ತಂದೆ-ತಾಯಿ ತಬ್ಬಲಿಯಾಗಿದ್ದಾರೆ.…











