Author: News Desk Benkiyabale

ತುಮಕೂರು:       ರಫೇಲ್ ಯುದ್ಧ ವಿಮಾನ ಖರೀದಿಯ ಒಪ್ಪಂದದ ಬಗ್ಗೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.       ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು.        ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಜಿ.ಎಸ್. ಬಸವರಾಜು, ಬಹುಕೋಟಿ ರಫೇಲ್ ಯುದ್ಧ ವಿಮಾನ ಖರೀದಿಯ ಒಪ್ಪಂದದಲ್ಲಿ ಅವ್ಯವಹಾರಗಳು ನಡೆದಿದೆ ಎಂದು ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆದಿಲ್ಲ ಎಂದರು.       ರಫೇಲ್ ಯುದ್ಧ ವಿಮಾನವು ಗುಣಮಟ್ಟದಲ್ಲಿ ಉನ್ನತಿ ಹೊಂದಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕಾಂಗ್ರೆಸ್ ಪಕ್ಷವು ರಕ್ಷಣಾ ವಿಷಯದಲ್ಲಿ ಹಲವು ಅವ್ಯವಹಾರ ಮಾಡಿದ್ದನ್ನು ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ…

Read More

ತುಮಕೂರು:       ಸಿದ್ಧಗಂಗೆಯ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿಗಳು ಇಂದು ಚೆನ್ನೈನ ರೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ವಿಶೇಷ ಆಂಬುಲೆನ್ಸ್​ನಲ್ಲಿ ಇಂದು ಮಠಕ್ಕೆ ಮರಳಿದ್ದಾರೆ.       ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಠಕ್ಕೆ ಆಗಮಿಸಿದ ಶ್ರೀಗಳು ನೇರವಾಗಿ ಹಳೇ ಮಠದ‌ ಕೊಠಡಿಗೆ ತೆರಳಿದರು. ಶ್ರೀಗಳನ್ನು ನೋಡುವುದಕ್ಕೆ ಮಠದ ವಿದ್ಯಾರ್ಥಿಗಳು, ಲಕ್ಷಾಂತರ ಭಕ್ತಾದಿಗಳು ಉರಿಬಿಸಿಲನ್ನು ಲೆಕ್ಕಿಸದೇ ಶ್ರೀ ಮಠದ ಆವರಣದಲ್ಲಿ ಶ್ರೀಗಳ ಬರುವಿಕೆಗಾಗಿ ಕಾಯ್ದು ಶ್ರೀಗಳನ್ನು ನೋಡಿ ಸಂತೋಷಪಟ್ಟರು.       ಇನ್ನು ಮುಂದಿನ 15 ದಿನ ಸ್ವಾಮೀಜಿ ದರ್ಶನಕ್ಕೆ ಮಠದಲ್ಲಿ ಅವಕಾಶವಿಲ್ಲ ಎನ್ನಲಾಗಿದ್ದು, ಸ್ವಾಮೀಜಿ ಆರೋಗ್ಯವಾಗಿದ್ದು ಇಷ್ಟಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸ್ವೀಕರಿಸುತ್ತಾರೆ, ಮುಂದಿನ 15 ದಿನ ಸ್ವಾಮೀಜಿ ದರ್ಶನಕ್ಕೆ ಮಠದಲ್ಲಿ ಅವಕಾಶವಿಲ್ಲ, ಸ್ವಾಮೀಜಿ ಆರೋಗ್ಯವಾಗಿದ್ದು ಇಷ್ಟಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸ್ವೀಕರಿಸುತ್ತಾರೆ. ಗಣ್ಯರು, ಭಕ್ತರು ದರ್ಶನಕ್ಕೆ ಕೆಲವು ದಿನ ಬರಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ. …

Read More

ತುರುವೇಕೆರೆ:        ಓದಿನಷ್ಟೇ ಕ್ರೀಡೆಯೂ ಮಕ್ಕಳಿಗೆ ಅತಿಮುಖ್ಯವಾಗಿದ್ದು ಶಿಕ್ಷಕರು ಹಾಗು ಪೋಷಕರು ಮಕ್ಕಳಲ್ಲಿ ಕ್ರೀಢೆ ಬಗ್ಗೆ ವಿಶೇಷ ಆಶಕ್ತಿ ಮೂಡುವಂತೆ ಮಾಡಬೇಕಾಗಿದೆ ಎಂದು ಧೈಹಿಕ ಶಿಕ್ಷಣಧಿಕಾರಿ ಚಿದಾನಂದ್ ತಿಳಿಸಿದ್ದಾರೆ.       ಪಟ್ಟಣದ ವಿಶ್ವವಿಜಯ ವಿಧ್ಯಾಶಾಲೆ ಹಾಗು ರಿಯಾ ಪ್ಲೇಹೋಂ ವತಿಯಿಂದ ಶಾಲಾ ವಾರ್ಷಿಕ ಕ್ರೀಡಾಕೂಟ ಉಧ್ಘಾಟನೆಯನ್ನು ನೆರವೇರಿಸಿ  ಮಾತನಾಡಿದ ಅವರು, ಇತ್ತೀಚೆಗೆ ಮೊಬೈಲ್ ಹಾಗು ಟಿ.ವಿ ಮಾದ್ಯಮಗಳ ಹಾವಳಿಯಿಂದ ಮಕ್ಕಳಲ್ಲಿ ಕ್ರೀಡೆಗಳಲ್ಲಿ ಆಶಕ್ತಿ ಕಡಿಮೆಯಾಗುತ್ತಿದೆ.  ಓದಿನಷ್ಟೇ ಕ್ರೀಡೆಯೂ ಮಕ್ಕಳಿಗೆ ಅತಿಮುಖ್ಯವಾಗಿದ್ದು ಶಿಕ್ಷಕರು ಹಾಗು ಪೋಷಕರು ಮಕ್ಕಳಲ್ಲಿ ಕ್ರೀಢೆ ಬಗ್ಗೆ ವಿಶೇಷ ಆಶಕ್ತಿ ಮೂಡುವಂತೆ ಮಾಡಬೇಕಾಗಿದೆ. ಸರ್ಕಾರ ಕ್ರೀಡೆಗೂ ಹೆಚ್ಚು ಸಹಕಾರ ನೀಡುತ್ತಿದ್ದು ಪೋಷಕರು ಇದರ ಸೌಲಭ್ಯ ಮಕ್ಕಳಿಗೆ ದೊರಕುವಂತೆ ಉತ್ತೇಜಿಸಬೇಕು ಎಂದರು.       ಕಸಾಪ ತಾಲ್ಲೂಕು ಅಧ್ಯಕ್ಷ ನಂ.ರಾಜು ಮಾತನಾಡಿ ಕ್ರೀಡೆಯಲ್ಲಿ ಸೋಲೆ ಗೆಲುವಿನ ಮೆಟ್ಟಿಲಾಗಿದ್ದು ಮರಳಿ ಯತ್ನವ ಮಾಡು ಎಂಬಂತೆ ಮಕ್ಕಳು ದೃತಿಗೆಡದೆ ಆಶಕ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಉತ್ತೇಜಿಸಿದರು.       ಶಾಲಾ ಕಾರ್ಯದರ್ಶಿ ಎಂ.ವಿಶ್ವೇಶ್ವರಯ್ಯ…

Read More

 ತುಮಕೂರು :         ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ ರಾಜಧನ ವಂಚಿಸುತ್ತಿರುವ ಗುತ್ತಿಗೆದಾರರನ್ನು ಹೆಡೆಮುರಿ ಕಟ್ಟಲು ಶಾಸಕ ಡಿ ಸಿ ಗೌರೀಶಂಕರ್ ಮುಂದಾಗಿದ್ದು ಗಣಿ ಪ್ರದೇಶದಲ್ಲಿ ವಾಸ ಮಾಡುವ ಬಡವರ ಸಂಕಷ್ಟ ವನ್ನು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿರುವ ದಂಧೆಕೋರರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಗಣಿ ಮತ್ತು ಭೂ ವಿಜ್ಙಾನ ಸಚಿವರನ್ನು ಆಗ್ರಹಿಸಿದ್ದಾರೆ.       ಬೆಳಗಾವಿ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ತುಮಕೂರು ಗ್ರಾಮಾಂತರ ಶಾಸಕ ಡಿಸಿ ಗೌರಿಶಂಕರ್ ಗ್ರಾಮಾಂತರ ಕ್ಷೇತ್ರದಲ್ಲಿ ಇದುವರೆಗೂ ಮಂಜೂರಾದ ಗ್ರಾನೈಟ್ ಕ್ವಾರಿಗಳು ಹಾಗೂ ಜಲ್ಲಿಕ್ರಶರ್ ಗಳ ಸಂಖ್ಯೆ ಎಷ್ಟು? ಅವು ಯಾವುವು? ಗ್ರಾನೈಟ್ ಕ್ವಾರಿಗಳಿಂದ ಸರಕಾರಕ್ಕೆ ಕೋಟ್ಯಂತರ ರೂಪಾಯಿಗಳ ರಾಜಧನ ನಷ್ಟ ಹಾಗೂ ಪರಿಸರಕ್ಕೆ ಉಂಟಾಗುತ್ತಿರುವ ಹಾನಿ ಸರ್ಕಾರದ ಗಮನಕ್ಕೆ ಬಂದಿದೆಯೇ? ಸರ್ಕಾರದ ಗಮನಕ್ಕೆ ಬಂದಿದ್ದರೆ ರಾಜಧನ…

Read More

ತುಮಕೂರು :      ತಾಂತ್ರಿಕ ದೋಷದ ಕಾರಣ ಟೆಂಪೋ ಟ್ರಾವೆಲರ್ ನಡುರಸ್ತೆಯಲ್ಲೇ ಹೊತ್ತಿಉರಿದಿರುವ ಘಟನೆ ಕುಣಿಗಲ್ ತಾಲೂಕು ಹುಲಿಯೂರುದುರ್ಗದ ಐಬಿ ವೃತ್ತದಲ್ಲಿ ನಡೆದಿದೆ.       ತುಮಕೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ತಕ್ಷಣ ಚಾಲಕ ವಾಹನ ಚಾಲನೆ ಸ್ಥಗಿತಗೊಳಿಸಿದರು.  ಏನಾಗಿದೆ ಎಂದು ಚಾಲಕ ಪರೀಕ್ಷಿಸಲು ಮುಂದಾಗುತ್ತಿದ್ದಂತೆ ಟೆಂಪೋ ಟ್ರಾವೆಲರ್ ಒಳಗೆ ಶಾರ್ಟ್​ ಸರ್ಕ್ಯೂಟ್ ಆಗಿದೆ. ಇದರಿಂದ ಎಚ್ಚೆತ್ತುಕೊಂಡ ಚಾಲಕ ತಕ್ಷಣ ವಾಹನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ನೋಡ ನೋಡುತ್ತಿದ್ದಂತೆ ವಾಹನ ಧಗ ಧಗ ಹೊತ್ತಿ ಉರಿದಿದೆ.       ಭಾರಿ ಪ್ರಮಾಣದಲ್ಲಿ ಬೆಂಕಿ ಜ್ವಾಲೆ ವ್ಯಾಪಿಸಿದ್ದರಿಂದ ಇನ್ನಿತರ ವಾಹನ ಚಾಲಕರು, ಜನರು  ಕೆಲಕಾಲ ಗಾಬರಿಗೊಂಡರು. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ದೌಡಾಯಿಸಿದ್ದಾರೆ.  ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ  ಪ್ರಾಣಾಪಾಯ ಸಂಭವಿಸಿಲ್ಲ

Read More

ತುರುವೇಕೆರೆ:       ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಸಂಜೆ ನೆಡೆದಿದೆ. ಮೃತ ದುರ್ದೈವಿ ತಿಪಟೂರಿನ ಗೊರಗೊಂಡನಹಳ್ಳಿ ನಿವಾಸಿ ಶ್ರೀನಿವಾಸ್(20) ಎಂದು ತಿಳಿದು ಬಂದಿದೆ.       ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ನವೀಕರಣ ಕಾಮಗಾರಿ ಕೆಲಸ ನಿರ್ವಹಿಸಲು ಆಗಮಿಸಿದ್ದ ಈತ ಆಸ್ಪತ್ರೆ ನಾಮಫಲಕದ ಗೋಪುರದ ಸೆಂಟ್ರಿಂಗ್ ಕಾಮಗಾರಿ ಮಾಡಲು ಮಂಗಳವಾರ ಮುಂದಾಗಿದ್ದು. ಮಂಗಳವಾರ ಬೆಸ್ಕಾಂ ಇಲಾಖೆ ಸಂಜೆವರೆವಿಗೂ ವಿದ್ಯುತ್ ಖಡಿತಗೊಳಿಸಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಣೆ ನೀಡಿದ್ದನ್ನು ಗಮನಿಸಿ ಖಚಿತ ಗೊಳಿಸಿಕೊಂಡೆ ಕಾರ್ಯನಿರ್ವಹಣೆಗೆ ಮುಂದಾಗಿದ್ದಾನೆ, ಆದರೆ ಸಂಜೆ 5ಗಂಟೆ ಸುಮಾರಿಗೆ ಹೆಬ್ಬಾಗಿಲಿನ ಸೆಂಟ್ರಿಂಗ್‍ಗೆ ಅಳವಡಿಸಿದ್ದ ಮರದ ಹಲಗೆಗಳನ್ನು ಕಬ್ಬಿಣದ ರಾಡಿನಿಂದ ತೆರವುಗೊಳಿಸುವ ಸಂದರ್ಬದಲ್ಲಿ ಸೆಂಟ್ರಿಂಗ್ ಮೇಲ್ಭಾಗದಲ್ಲಿಯೇ ಇದ್ದ ವಿದ್ಯುತ್ ತಂತಿಗೆ ಕಬ್ಬಿಣದ ರಾಡು ತಗಲಿ ವಿದ್ಯುತ್ ಶಾಕ್‍ನಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸಾರ್ವಜನಿಕರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.      ವೈದ್ಯರು ಚಿಕಿತ್ಸೆ ನೀಡಿದ್ದಾರೆ ಚಿಕಿತ್ಸೆ ಪಲಕಾರಿಯಾಗದೆ…

Read More

ತುರುವೇಕೆರೆ:       ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 74 ಎಮ್ಮೆ ಹಾಗೂ ಹಸುಗಳನ್ನು ಪಟ್ಟಣದ ಪೊಲೀಸರು ರಕ್ಷಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.       ತಾಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿಯಲ್ಲಿ 3 ಕಂಟೈನರ್‍ನಲ್ಲಿ ತುಂಬಿದ್ದ ಎಮ್ಮೆ, ಹಸುಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿಯನ್ನದಾರಿಸಿ ಪಟ್ಟಣದ ಪೊಲೀಸರು ಮೂರು ಲಾರಿಗಳನ್ನು ತಡದು ತಪಾಸಣೆ ಮಾಡಿದ್ದಾಗ ಅಕ್ರಮವಾಗಿ ಸುಮಾರು 74 ಎಮ್ಮೆ, ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೂಡಲೇ ಮೂರು ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿ ಎಮ್ಮೆ , ಹಸುಗಳನ್ನು ಮೈಸೂರಿನ ಗೋ ಶಾಲೆಗೆ ಸುರಕ್ಷಿತವಾಗಿ ಸಾಗಿಸಲಾಗಿದೆ.  

Read More

ಬೆಂಗಳೂರು:        ವೇಗವಾಗಿ ಹೋಗುತ್ತಿದ್ದ ಬಿಎಂಟಿಸಿ ಬಸ್ ಹರಿದು ಬಿಬಿಎಂಪಿ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.       ಬಿಬಿಎಂಪಿಯ ಕಸ್ತೂರ ಬಾ ಕಾಲೇಜಿನ ಪಿಯು ವಿದ್ಯಾಥಿಗಳಾದ ಚಂದ್ರಕಾಂತ್(17) ಮತ್ತು ಯದುಕುಮಾರ್(18) ಮೃತ ವಿದ್ಯಾರ್ಥಿಗಳೆಂದು ಪೊಲೀಸರು ತಿಳಿಸಿದ್ದಾರೆ.       ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ರಾಜಶೇಖರ್ ಎಂಬವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ವಿವರ:        ಮೈಸೂರು ರಸ್ತೆಯ ಕೆಬಿ ನಗರದ ಬಿಬಿಎಂಪಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಚಂದ್ರಕಾಂತ್, ದ್ವಿತೀಯ ಪಿಯುಸಿ ಓದುತ್ತಿದ್ದ ಯದುಕುಮಾರ್ ಅವರು ಸ್ನೇಹಿತ ರಾಜಶೇಖರ್ ಜತೆ ಕಾಲೇಜಿಗೆ ಹೋಗಲು ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಮೈಸೂರು ರಸ್ತೆಯ ಕಸ್ತೂರ ಬಾ ಕಾಲೇಜಿನ ಕ್ರಿಶ್ಚಿಯನ್ ಸ್ಮಶಾನದ ಬಳಿ ರಸ್ತೆ ದಾಟುತ್ತಿದ್ದರು ಎನ್ನಲಾಗಿದೆ. ಈ ವೇಳೆ ದೊಡ್ಡ…

Read More

ತುಮಕೂರು:       ತುರುವೇಕೆರೆ ತಾಲೂಕು ದಬ್ಬೆಘಟ್ಟ ಹೋಬಳಿ ಕೋಡಿಪುರ ಮಜರೆ ಮುದಿಗೆರೆ ಗ್ರಾಮದ ಶ್ರೀ ಕೋಡಿರಂಗನಾಥಸ್ವಾಮಿ ದೇವಾಲಯದಲ್ಲಿಂದು ವೈಕುಂಠ ಏಕಾದಶಿಯ 10ನೇ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.       ಪೂಜಾ ಕಾರ್ಯಕ್ರಮದ ಪ್ರಯುಕ್ತ ಸ್ವಾಮಿಗೆ ಅಂದು ಬೆಳಿಗ್ಗೆ 5 ಗಂಟೆಯಿಂದ ವಿಶೇಷ ಅಭಿಷೇಕ, ಅಲಂಕಾರ, ಹೋಮ, ಮಹಾ ಮಂಗಳಾರತಿ ಸೇವೆಗಳು ಜರುಗಿದವು.       ನಂತರ 11 ಗಂಟೆಯಿಂದ ಭಕ್ತಾದಿಗಳು ಪ್ರಮುಖ ಬೀದಿಯಲ್ಲಿ ಸ್ವಾಮಿಯ ತೇರನ್ನು ಎಳೆದು ಪೂಜೆ ಸಲ್ಲಿಸುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ತೇರಿನೊಂದಿಗೆ ವಿವಿಧ ಜಾನಪದ ಕಲಾತಂಡಗಳು ಕೋಲಾಟ, ಗೊಂಬೆ ಕುಣಿತ, ಪ್ರದರ್ಶನ ನೀಡಿದವಲ್ಲದೆ ಮಕ್ಕಳು ವಿವಿಧ ವೇಷಭೂಷಣಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ಸಂಜೆ ಸುಗಮ ಸಂಗೀತ ಕಾರ್ಯಕ್ರಮ, ದೀಪೋತ್ಸವ, ಕಾಮಧೇನು ಉತ್ಸವ, ಮಹಾ ಪ್ರಸಾದ ಸೇವೆಗಳು ಜರುಗಿದವು.

Read More

ಬೆಳಗಾವಿ:       ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಔತಣ ಕೂಟಕ್ಕೆ ನಾನು ಹೋಗಲ್ಲ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.       ಒಂದೆಡೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಹಲವು ಪ್ರಮುಖ ನಾಯಕರು ಗೈರಾಗಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಕರೆದಿರುವ ಔತಣಕೂಟದಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.       ಈ ಮೂಲಕ ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಮುನಿಸು ಹೊರಹಾಕಿದ್ದಾರೆ.  

Read More