ತುಮಕೂರು : ಬರುವ 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಎಚ್ಚರಿಗೆ ನೀಡಿದರು. ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ತಾಲ್ಲೂಕಿನ ಸರ್ಕಾರಿ/ಅನುದಾನಿತ ಶಾಲೆಗಳ ಅರ್ಧವಾರ್ಷಿಕ ಪರೀಕ್ಷೆ ಫಲಿತಾಂಶದ ವಿವರಗಳನ್ನು ಪಡೆದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಗಣಿತ, ಇಂಗ್ಲೀಷ್ ವಿಷಯದಲ್ಲಿ ಹಿಂದುಳಿದಿರುವುದು ಅರ್ಧ ವಾರ್ಷಿಕ ಪರೀಕ್ಷಾ ಫಲಿತಾಂಶದಿಂದ ತಿಳಿದುಬಂದಿದೆ. ಈ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನಾಧರಿಸಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಮಕ್ಕಳು ಹೆಚ್ಚಿನ ಅಂಕಗಳನ್ನು ಪಡೆಯಲು ಪ್ರತಿಯೊಬ್ಬ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚಿಸಿದರು. …
Author: News Desk Benkiyabale
ತುಮಕೂರು : ಸಚಿವರಾಗಿ ಪ್ರಮಾಣ ಸ್ವೀಕರಿಸುವಾಗ ಮಾಡಿದ್ದ ವಚನವನ್ನು ಮರೆತು ಒಂದು ಸಮಾಜದ ಹಿತ ಕಾಯುವಲ್ಲಿ ನಿರತವಾಗಿರುವ ಕಾನೂನು ಮತ್ತು ಸಂಸದೀಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕಾಗಿನೆಲೆ ಕನಕ ಗುರುಪೀಠದ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಗಳಿಗೆ ಅವಮಾನವಾಗುವ ರೀತಿ ಮಾತನಾಡಿ ಇಡೀ ಕುರುಬ ಜನಾಂಗದ ಅಪಮಾನ ಮಾಡಿರುತ್ತಾರೆ, ಇಂಥವರು ಮಂತ್ರಿಯಾಗಿ ಮುಂದುವರಿಯುವುದು ರಾಜ್ಯಕ್ಕೆ ಹಿತವಲ್ಲ, ಜೆ.ಸಿ. ಮಾಧುಸ್ವಾಮಿಯವರು ಈ ಕೂಡಲೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ರಾಮಚಂದ್ರಪ್ಪ ಆಗ್ರಹಿಸಿದರು. ಅವರು ನಗರದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಾ, ಕನಕ ಗುರುಪೀಠದ ಶ್ರೀಗಳೋರ್ವರನ್ನು ಅಪಮಾನ ಮಾಡುವ ರೀತಿ ಮಾತನಾಡಿ ಇಡೀ ರಾಜ್ಯದ ಕುರುಬ ಸಮಾಜದವರನ್ನು ಕೆರಳಿಸಿರುವ ಸಚಿವ ಮಾಧುಸ್ವಾಮಿ ಈ ಕೂಡಲೆ ಬಹಿರಂಗವಾಗಿ ಶ್ರೀಗಳ ಕ್ಷಮೆಯಾಚಿಸಬೇಕು, ಇಲ್ಲವಾದಲ್ಲಿ ನ.25ರಂದು ತುಮಕೂರು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ನಂತರ ಬೆಂಗಳೂರು ಸೇರಿದಂತೆ…
ತುಮಕೂರು: ತುಮಕೂರು ನಗರ ಸೇರಿದಂತೆ ಜಿಲ್ಲೆಯಾಧ್ಯಂತ ಶಾಂತಿಯುತವಾಗಿ ಈದ್ ಮಿಲಾದ್ ಆಚರಿಸಲಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸೂಕ್ತ ಭದ್ರತೆ, ಮುಂಜಾಗ್ರತಾ ಕ್ರಮಗಳು ಹಾಗೂ ಹಗಲಿರುಳೆನ್ನದೆ ನಾಗರೀಕ ಸಮಾಜದ ರಕ್ಷಣೆಗಾಗಿ ಶ್ರಮವಹಿಸಿದ ಜಿಲ್ಲಾಧಿಕಾರಿ ಡಾ. ಕೆ.ರಾಜೇಶ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಕೋನ ವಂಶಿಕೃಷ್ಣ ಅವರಿಗೆ ಇಡೀ ಜಿಲ್ಲೆಯ ಪರವಾಗಿ ಧನ್ಯವಾದಗಳನ್ನು ಹೇಳುತ್ತೇವೆ ಎಂದು ಉಮ್ಮತ್ ಸಂಘಟನೆಯ ಮುಖ್ಯಸ್ಥ ಹಾಗೂ ಅಲ್ಪಸಂಖ್ಯಾತರ ಮುಖಂಡ ನಿಸಾರ್ ಅಹಮದ್ ಹೇಳಿದರು. ಶಾಂತಿಯುತ ಈದ್ ಮೀಲಾದ್ ಆಚರಣೆಗೆ ಶ್ರಮವಹಿಸಿದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಎಸ್ಪಿಯವರಿಗೆ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಧನ್ಯವಾದಗಳನ್ನು ಸಲ್ಲಿಸಿದರು. ಕಲ್ಪತರು ನಾಡು ತುಮಕೂರು ಜಿಲ್ಲೆ ಶಾಂತಿಯ ನೆಲೆಬೀಡು, ಭಾತೃತ್ವಕ್ಕೆ ಹೆಸರುವಾಸಿ. ಎಂದಿಗೂ ಎಂಥಾ ಸಂದರ್ಭದಲ್ಲೂ ತುಮಕೂರು ಜಿಲ್ಲೆ ಐಕ್ಯತೆಯನ್ನು ಕಡಿದುಕೊಂಡಿಲ್ಲ. ಅಯೋಧ್ಯೆ ತೀರ್ಪು ಹೊರಬಿದ್ದ ನಂತರದ ದಿನ ನಡೆದ ಈದ್ ಮೀಲಾದ್ ಆಚರಣೆಯಲ್ಲಿ ಎಲ್ಲೂ ಸಹ…
ತುಮಕೂರು : ನಗರದ ಶೆಟ್ಟಿಹಳ್ಳಿ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ವೃತ್ತದಲ್ಲಿ ಮಹಾನಗರ ಪಾಲಿಕೆ ವತಿಯಿಂದ ವೀರಮದಕರಿ ನಾಯಕ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ವೀರಮದಕರಿ ನಾಯಕ ನಾಮಫಲಕದ ಉದ್ಘಾಟನೆಯನ್ನು ಶಾಸಕ ಜಿ.ಬಿ. ಜ್ಯೋತಿಗಣೇಶ್ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸದರಿ ವೃತ್ತಕ್ಕೆ ವೃತ್ತಕ್ಕೆ ವೀರಮದಕರಿ ನಾಯಕ ಹೆಸರಿಡಬೇಕು ಎಂಬ ಕೂಗು ಬಹಳ ದಿನಗಳಿಂದ ಇತ್ತು. ಪಾಲಿಕೆ ಸದಸ್ಯರು ಮಹಾನಗರ ಪಾಲಿಕೆಯಲ್ಲಿ ಈ ವಿಷಯ ಮಂಡಿಸಿ ನಾಮಫಲಕ ಅನಾವರಣಗೊಳಿಸಲು ಅನುವು ಮಾಡಿಕೊಟ್ಟಿದ್ದಾರೆ ಎಂದರು. ವೀರಮದಕರಿ ನಾಯಕ ನಾಮಫಲಕ ಅನಾವರಣಗೊಳಿಸಿರುವುದು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಮದಕರಿನಾಯಕರು ಇಡೀ ದೇಶಕ್ಕೆ ಸಲ್ಲಬೇಕಾದವರು ಎಂದರು. ನಾಯಕ ಜನಾಂಗಕ್ಕೆ ಸಂಬಂಧಿಸಿದ ವೀರರ ಯಾವುದೇ ಡಾಕ್ಯುಮೆಂಟ್ ಆಗಿಲ್ಲ. ಹಾಗಾಗಿ ತುಮಕೂರು ವಿವಿಯಲ್ಲಿ ಮದಕರಿ ನಾಯಕ ಹಾಗೂ ನಾಯಕ ಸಮಾಜಕ್ಕೆ ಸೇರಿದ ರಾಜ-ಮಹಾರಾಜರುಗಳಿಗೆ…
ತುಮಕೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನಗರದಲ್ಲಿರುವ ಎಲ್ಲಾ ಬಡಾವಣೆಗಳ ಗಡಿ ಗುರುತಿಸಿ ಬಡಾವಣೆವಾರು ನಾಗರಿಕ ಹಿತರಕ್ಷಣಾ ಸಮಿತಿಗಳನ್ನು ಬಳಸಿಕೊಳ್ಳಲು ನಿರ್ಣಯವನ್ನು ಕೈಗೊಳ್ಳಲಾಯಿತು. ಸ್ಮಾರ್ಟ್ಸಿಟಿ ಲಿಮಿಟೆಡ್ನ ಕಚೇರಿಯಲ್ಲಿಂದು ಸಂಸದ ಜಿ.ಎಸ್. ಬಸವರಾಜು ಅವರ ಅಧ್ಯಕ್ಷತೆಯಲ್ಲಿ ಜರುಗಿದ ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್ನ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ನಂತರ ಮಾತನಾಡಿದ ಸಂಸದರು ನಗರದ ಬಡಾವಣೆವಾರು ನಾಗರಿಕ ಸಮಿತಿಗಳನ್ನು ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಬಳಸಿಕೊಳ್ಳುವುದರಿಂದ ನಗರದ ಪ್ರತಿಯೊಂದು ಮುಖ್ಯರಸ್ತೆ, ಅಡ್ಡರಸ್ತೆ, ಲಿಂಕ್ ರಸ್ತೆಯ ಪ್ರತಿಯೊಂದು ಯೋಜನೆಗಳನ್ನು ಸಂಗ್ರಹಿಸಲು ಮತ್ತು ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಪಾಲಿಕೆಯಡಿ ಕೈಗೊಳ್ಳುವ ಪ್ರತಿ ಕಾಮಗಾರಿಯ ಸಂಪೂರ್ಣ ಮಾಹಿತಿಯನ್ನು ಜಿ.ಐ.ಎಸ್ ಮ್ಯಾಪಿಂಗ್ಗೆ ಅಳವಡಿಸಬೇಕು. ಸ್ಮಾರ್ಟ್ಸಿಟಿ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳು ಕೈಗೊಳ್ಳುವ ಕಾಮಗಾರಿಗಳ…
ತುಮಕೂರು: ದೇವರಾಯನದುರ್ಗ ಗ್ರಾಮದಲ್ಲಿ ಫೆಬ್ರವರಿ ಮಾಹೆಯ 13, 14 ಮತ್ತು 15ರಂದು ನಡೆಯುವ ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ಕುಂಭಾಭಿಷೇಕ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ಮುಂಜಾಗ್ರತಾ ಕ್ರಮವಾಗಿ ಟ್ರಾಫಿಕ್ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ದೇವರಾಯನದುರ್ಗ ಗ್ರಾಮದ ಯಾತ್ರಿ ನಿವಾಸದಲ್ಲಿಂದು 12 ವರ್ಷಗಳಿಗೊಮ್ಮೆ ನಡೆಯುವ ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ “ಕುಂಭಾಭಿಷೇಕ” ಮಹೋತ್ಸವದ ಹಿನ್ನೆಲೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಂಭಾಭಿಷೇಕಕ್ಕೂ ಮುನ್ನ ರಥ ಬೀದಿ ಹಾಗೂ ಇತರೆ ರಸ್ತೆಗಳನ್ನು ದುರಸ್ತಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಹಿಂದೆ ಕುಂಭಾಭಿಷೇಕ ಕಾರ್ಯಗಳನ್ನು ನಿರ್ವಹಿಸುತ್ತಿದ್ದ ರೀತಿಯಲ್ಲಿಯೇ ಈ ಬಾರಿಯೂ ನೆರವೇರಿಸಬೇಕು. ಅದರಲ್ಲಿ ಯಾವುದೇ ಬದಲಾವಣೆಗಳು ಬೇಡ. ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ ಕಾರ್ಯಕ್ರಮವನ್ನು ನೆರವೇರಿಸಲು ದಾನಿಗಳಿಂದ ನಿರ್ವಹಿಸುವ ಕಾಮಗಾರಿಗಳಿಗೆ ಹೊಸ ಮುಚ್ಚಳಿಕೆ ಪತ್ರ ತೆಗೆದುಕೊಳ್ಳುವುದು ಬೇಡ. ಈ ಹಿಂದೆ ದಾನಿಗಳು ಹೇಗೆ ಮಾಡುತ್ತಿದ್ದರೋ…
ಮಧುಗಿರಿ: ಜಮೀನಿನ ಪೊದೆಯೊಂದರಲ್ಲಿ ಜನರನ್ನು ಕಂಡು ಗಾಬರಿಗೊಂಡು ನಿತ್ರಾಣವಾಗಿದ್ದು ಹೆಣ್ಣು ಚಿರತೆಯೊಂದನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಐಡಿಹಳ್ಳಿ ಹೋಬಳಿಯ ಗರಣಿ ಗ್ರಾಮದ ಗೇಟ್ ಸಮೀಪವಿರುವ ನರಸಿಂಹಯ್ಯ ಎನ್ನುವವರಿಗೆ ಸೇರಿದ ಇಟ್ಟಿಗೆ ಕಾರ್ಖಾನೆಯ ಬಳಿ ಶುಕ್ರವಾರ ಬೆಳಗ್ಗೆ ಸುಮಾರು 2 ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಪ್ರತ್ಯಕ್ಷವಾಗಿತ್ತು. ಚಿರತೆಯನ್ನು ಕಂಡ ಕೆಲ ಗ್ರಾಮಸ್ಥರ ತಂಡ ಚಿರತೆಯನ್ನು ಹಿಂಬಾಲಿಸಿಕೊಂಡು ಹೋದಾಗ ಮಿಡಿಗೇಶಿ ಗರಣಿ ಮುಖ್ಯ ರಸ್ತೆಯ ಸಮೀಪವಿದ್ದ ಇಟ್ಟಿಗೆ ಕಾರ್ಖಾನೆಯ ಸಮೀಪದಲ್ಲಿನ ಪೂದೆಯಲ್ಲಿ ಸೇರಿಕೊಂಡಿತ್ತು. ಚಿರತೆ ಬಂದಿರುವ ವಿಷಯ ತಿಳಿಯುತ್ತಲೆ ಗರಣಿ ಸುತ್ತಮುತ್ತಾಲಿನ ನೂರಾರು ಗ್ರಾಮಸ್ಥರ ಚೀರಾಟ ಹಾಗೂ ಕೂಗಾಟಕ್ಕೆ ಪೊದೆ ಸೇರಿದ್ದ ಹೆಣ್ಣು ಚಿರತೆ ಮಧ್ಯಾಹ್ನದ ವರೆವಿಗೂ ಪೊದೆ ಬಿಟ್ಟು ಕದಲಿರಲಿಲ್ಲ. ಕೆಲ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಚಿರತೆಯನ್ನು ಹಿಡಿಯುವಂತೆ ಮನವಿ ಮಾಡಿದ್ದರು…
ತುಮಕೂರು: ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳೊಳಗಾಗಿ ಪುನಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ 66ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಯಶಸ್ವಿನಿ ಯೋಜನೆ ಜಾರಿಗೆ ಬಂದರೆ ಸುಮಾರು 25 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಅವರು ಪ್ರಸ್ತಾವನೆ ನೀಡಿದ್ದಾರೆ. ಈಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಇನ್ನೊಂದು ತಿಂಗಳಲ್ಲಿ ಅನುಷ್ಟಾನಕ್ಕೆ ತರಲಾಗುವುದು ಎಂದರು. ಹಾಲು ಒಕ್ಕೂಟದಡಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೆಗಾಡೈರಿ ನಿರ್ಮಿಸಲು ಚಿಂತನೆ ನಡೆಸಲಾಗುವುದು. ಅಲ್ಲದೇ ತಿಪಟೂರಿನಲ್ಲಿ 100 ಎಕರೆ ಭೂಮಿಯಲ್ಲಿ ತೋಟಗಾರಿಕಾ ಕಾಲೇಜನ್ನು ಆರಂಭ ಮಾಡತ್ತೇನೆಂದು ಅವರು ಭರವಸೆ ನೀಡಿದರಲ್ಲದೇ ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ ಎಂದರು. ಜಿಲ್ಲೆಯ 3 ತಾಲೂಕುಗಳು ಬರದ…
ತುಮಕೂರು: ಮಕ್ಕಳ ಮನಸ್ಸಿಗೆ ನಿನ್ನಿಂದ ಮಾಡಲು ಸಾಧ್ಯ ಎಂಬ ಹುರುಪಿನ ಶಕ್ತಿ ತುಂಬಿ ಬೆನ್ನು ತಟ್ಟಬೇಕು. ಇದರಿಂದ ಮಕ್ಕಳ ಮನಸ್ಸು ಬಲವಾಗಿ ಗುರಿಯ ದಾರಿಯ ಕಡೆಗೆ ನಡೆದು ಸಫಲತೆ ಕಾಣಲು ಸಾಧ್ಯವಾಗುತ್ತದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಂಘ ಮತ್ತು ಮಕ್ಕಳ ಸಹಾಯವಾಣಿ (1098) ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಮುಗ್ದತೆ ದೈವತ್ವಕ್ಕೆ ಸಮಾನ. ಮಕ್ಕಳು ಬೆಳೆದಂತೆ ಮನಸ್ಸು ಪರಿವರ್ತನೆಯಾಗುತ್ತಿರುತ್ತದೆ. ಇದಕ್ಕೆ ಪೂರಕವಾಗಿ ಶಿಕ್ಷಣ ಮತ್ತು ಸಾಮಾಜಿಕ ವ್ಯವಸ್ಥೆಯು ಮಕ್ಕಳನ್ನು…
ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಆದ ವ್ಯತ್ಯಾಸದಿಂದಾಗಿ ತುಮಕೂರು ಡಿ.ಸಿ.ಸಿ.ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದರು. ಆದರೆ ಯಡಿಯೂರಪ್ಪ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಅವರಿಂದ ನನ್ನ ಈ ಸ್ಥಾನ ಉಳಿದಿದೆ ಎಂದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು. ಇಲ್ಲಿ ನಡೆಯುತ್ತಿರುವ 66ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಬೇರೆ ಮನೆ ಮುರುಕರು ನನ್ನನ್ನು ಸಹಕಾರಿ ಆಂದೋಲನದಿಂದ ತೆಗೆಯಲು ಪ್ರಯತ್ನಿಸಿದರು. ಆದರೆ ಯಶಸ್ವಿ ಆಗಲಿಲ್ಲ. ಈ ಜಿಲ್ಲೆಯಲ್ಲಿ ಯಾರನ್ನು ಬೇಕಾದರೂ ಗೆಲ್ಲಿಸುವ, ಸೋಲಿಸುವ ಶಕ್ತಿ ನನಗಿದೆ ಎಂದು ಮನವರಿಕೆ ಆಗಿದೆ ಎಂದು ವಿಶ್ವಾಸದಿಂದ ನುಡಿದರು. ಅಕಾಲಿಕವಾಗಿ ಮೃತಪಟ್ಟ ರೈತರ ಒಂದು ಲಕ್ಷದ ವರೆಗಿನ ಸಾಲವನ್ನು ನಮ್ಮ ಬ್ಯಾಂಕ್ ಮನ್ನಾ ಮಾಡುತ್ತಿದೆ. ಅದಕ್ಕಾಗಿ ಬ್ಯಾಂಕ್ನ ಲಾಭದ ಹಣ ಬಳಸಿಕೊಳ್ಳುತ್ತಿದೆ. ಈ ಪದ್ಧತಿಯನ್ನು ಎಲ್ಲ ಬ್ಯಾಂಕ್ ಗಳಿಗೆ ಅನ್ವಯಿಸಬೇಕು ಎಂದು ಅವರು ಒತ್ತಾಯಿಸಿದರು. ತುಮಕೂರಿನಲ್ಲಿ ನಿತ್ಯ 10 ಲಕ್ಷ…











