Author: News Desk Benkiyabale

ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಹಾಗೂ ತುಂಬಾಡಿ ರಾಮಯ್ಯ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ `ಮಣೆಗಾರ 25’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡತನ ಶ್ರೇಣಿಕರಣದ ಅತ್ಯಂತ ಕೆಳಮಟ್ಟದಲ್ಲಿ ಇರುವಂತಹ ದಲಿತರ ಮೇಲೆ ಮೇಲ್ವರ್ಗದವರಿಂದ ಆಗುವ ದೌರ್ಜನ್ಯಗಳು, ಅವಮಾನ, ಕ್ರೌರ್ಯಗಳನ್ನು ಈ ಪುಸ್ತಕದಲ್ಲಿ ಕಾಣಬಹುದು ಎಂದರು. ಪತ್ರಕರ್ತ ರಘುನಾಥ್ ಚ. ಹ. ಮಾತನಾಡಿ, ಈ ಕೃತಿಯಲ್ಲಿ ಸಾಂಸ್ಕೃತಿಕ ಸಾಮಾಜಿಕ ಮಹತ್ವ ಎದ್ದು ಕಾಣಿಸುತ್ತದೆ. ಈ ಕೃತಿಯ ಮುಖಾಂತರ ಮಣೆಗಾರ ಎಂಬ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ಲೇಖಕರು ಚಿತ್ರಿಸಿದ್ದಾರೆ. ಸೃಜನಶೀಲ ಭಾಷೆಯ ಉಪಯೋಗ ಮತ್ತು ಕಹಿಯನ್ನು ಮೀರಿದ ಕಾರುಣ್ಯ, ಶೋಷಣೆಯ ವಿರುದ್ಧದ ತಣ್ಣನೆಯ ಧ್ವನಿಯ ಮೂಲಕ ಸಾಂಸ್ಕೃತಿಕ ಅನನ್ಯತೆಯನ್ನು ಕಟ್ಟುವಲ್ಲಿ ಈ ಕೃತಿ…

Read More

ತುಮಕೂರು: ನಗರದ ಕಲ್ಪತರು ಸಾಂಸ್ಕೃತಿಕ ವೇದಿಕೆ ಬರುವ ಫೆಬ್ರವರಿ 19ರಿಂದ 23ರ ವರೆಗೆ ನಗರದಲ್ಲಿ ವಿವಿಧ ಸಾಂಸ್ಕೃತಿಕ ಕಲೆ ಹಾಗೂ ಮನರಂಜನಾ ಸ್ಪರ್ಧೆಗಳು ಒಳಗೊಂಡ ವೈಭವದ ಕಲ್ಪತರು ಕಲಾ ಉತ್ಸವ ಏರ್ಪಡಿಸಿದೆ. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ಐದು ದಿನಗಳ ಈ ಉತ್ಸವದಲ್ಲಿ ನಾಡಿನ ಹೆಸರಾಂತ ಕಲಾವಿದರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ವೇದಿಕೆಯ ಸೋಮಶೇಖರ್, ತನುಜ್‌ಕುಮಾರ್ ಹೇಳಿದ್ದಾರೆ. ನಗರದ ಆರ್‌ಟಿಓ ಕಚೇರಿ ಆವರಣದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಪೂಜೆ ಸಲ್ಲಿಸಿ ಕಾರ್ಯಕ್ರಮದ ಕರಪತ್ರಗಳನ್ನು ಅನಾವರಣಗೊಳಿಸಿದರು. ಉತ್ಸವದಲ್ಲಿ ಲಿಟಲ್ ರಾಜ, ರಾಣಿ ಫ್ಯಾಷನ್ ಷೋ, 18ರಿಂದ 24 ವಯಸ್ಸಿನ ಯುವತಿಯರಿಗೆ ಮಿಸ್ ತುಮಕೂರು ಸ್ಪರ್ಧೆ, 18ರಿಂದ 24 ವರ್ಷದ ಯುವಕರಿಗೆ ಮಿಸ್ಟರ್ ತುಮಕೂರು ಸ್ಪರ್ಧೆ, 13 ವರ್ಷ ಮೇಲ್ಪಟ್ಟ ಮಕ್ಕಳ ವಾಯ್ಸ್ ಆಫ್ ತುಮಕೂರು ಗೀತಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಆಕರ್ಷಕ ವಸ್ತುಪ್ರದರ್ಶನ, ಆಹಾರ ಮೇಳ, ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ…

Read More

ತುಮಕೂರು: ವಿದ್ಯಾರ್ಥಿ, ಯುವಜನರಲ್ಲಿ ಸಂಚಾರಿ ನಿಯಮಗಳು ಹಾಗೂ ಸುರಕ್ಷಿತ ಸಂಚಾರ ಕುರಿತಂತೆ ಅನುಸರಿಸಬೇಕಾದ ಎಚ್ಚರಿಕೆ ಬಗ್ಗೆ ವಿವಿಧ ಸಂಘಸAಸ್ಥೆಗಳ ನೇತೃತ್ವದಲ್ಲಿ ಬುಧವಾರ ನಗರದ ಸಿದ್ಧಗಂಗಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ನೆಹರೂ ಯುವ ಕೇಂದ್ರ, ತುಮಕೂರು ಸಂಚಾರಿ ಪೊಲೀಸ್ ವಿಭಾಗ, ರೂಟರಿ ಕ್ಲಬ್, ಡಾ.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಮೇಶ್ ಅವರು ಮಾತನಾಡಿ, ಸಂಚಾರಿ ನಿಯಮಗಳ ಪಾಲನೆಯಿಂದ ಸುರಕ್ಷಿತ ಸಂಚಾರ ಸಾಧ್ಯ. ನಿಯಮ ಉಲ್ಲಂಘಿಸಿದರೆ ಅಪಘಾತವಾಗುವ ಅಪಾಯವೂ ಇದೆ, ದಂಡ ವಿಧಿಸಲು ಅವಕಾಶವಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಯುವ ಜನರು ರಸ್ತೆ ನಿಯಮಗಳನ್ನು ಪಾಲನೆ ಮಾಡಿ, ಉಲ್ಲಂಘನೆ ಮಾಡದಂತೆ ಎಚ್ಚರಿಕೆಯಿಂದ ಸಂಚರಿಸಬೇಕು ಎಂದರು. ಸಿದ್ಧಗAಗಾ ಡ್ರೆöÊವಿಂಗ್ ಸ್ಕೂಲ್ ಪ್ರಾಂಶುಪಾಲರಾದ ಟಿ.ಆರ್.ಸದಾಶಿವಯ್ಯ ಮಾತನಾಡಿ, ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ವಾಹನ ಚಲಾವಣೆ ಮಾಡಲು ಚಾಲನಾ ಪರವಾನಗಿ ಹೊಂದಿರಬೇಕು, ವಾಹನದ ದಾಖಲಾತಿಗಳು, ಇನ್ಷೂರೆನ್ಸ್ ಮತ್ತಿತರ…

Read More

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆ ಮುಂದುವರೆಸಿದರು. ನಂತರ ಗೌಪ್ಯ ಮತದಾನ ನಡೆಯಿತು. ಶಾಸಕ ಹೆಚ್.ವಿ.ವೆಂಕಟೇಶ್ ಅವರ ಪರವಾಗಿ 9 ಮತಗಳು, ಎಸ್.ಆರ್.ಗೌಡ ಪರವಾಗಿ 5 ಮತಗಳು ಚಲಾವಣೆಗೊಂಡ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿಯೇ ನಡೆದಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ…

Read More

ತುಮಕೂರು : ತುಮ ಕೂರು ವಿಶ್ವವಿದ್ಯಾನಿಲಯವು ಎಂಎಸ್ಸಿ ಪದವೀಧರೆ ಸ್ವಾತಿ ಬಿ.ಎನ್.ರವರಿಗೆ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ತುಮಕೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಎಚ್ ನಾಗಭೂಷಣ್ ರವರ ಮಾರ್ಗದರ್ಶನದಲ್ಲಿ Enhancement of Lumine scence properties of Rare earth Doped phosphors for multi functional Applications ಎಂಬ ವಿಷಯದ ಬಗ್ಗೆ ಸ್ವಾತಿ ಅವರು ಮಂಡಿಸಿದ ಮಹಾ ಪ್ರಬಂಧಕ್ಕೆ ತುಮಕೂರು ವಿವಿಯು ಪಿಎಚ್‌ಡಿ ಪದವಿ ನೀಡಿದೆ.

Read More

ತುಮಕೂರು; ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರವೇ 2018 ರಿಂದ ಕನಿಷ್ಟ ವೇತನ ಮತ್ತು ಪ್ರತಿ ವರ್ಷದ ಏಪ್ರೀಲ್ ತಿಂಗಳಿAದ ಹೆಚ್ಚಾಗುವ ವಿ.ಡಿ.ಎ.ತುಟ್ಟಿ ಭತ್ಯೆಯನ್ನು ಸೇರಿಸಿ ವರ್ಷದ 3ತಿಂಗಳಿಗೆ ಒಮ್ಮೆ ಒಟ್ಟಿಗೆ 3 ತಿಂಗಳ ವೇತನವನ್ನು ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಖಾತೆಗೆ ಬಿಡುಗಡೆ ಮಾಡುತ್ತದೆ.ಬಿಡುಗಡೆಯಾದ ವೇತನದ ಮೂತ್ತದಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂಖ್ಯೆಗೆ ಅನುಗುಣವಾಗಿ ಹಣ ನೀಡದೆ ಇರುವದರಿಂದ ಸಿಬ್ಬಂದಿಗಳಿಗೆ ವರ್ಷದಲ್ಲಿ ಕೆಲವು ತಿಂಗಳುಗಳ ವೇತನ ಬಾಕಿ ಉಳಿದಿವೆ. 2018 ಕ್ಕೆ ಮೊದಲು ಗ್ರಾಮ ಪಂಚಾಯತಿಗಳೇ ಸರಿಯಾಗಿ ವೇತನ ಬಾಕಿ ಇದೆ. ಈ ಸಂಬAದ ಆರ್.ಡಿ.ಪಿ.ಆರ್ ಮತ್ತು ಆಯುಕ್ತಾಲಯದ ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದರು ಮೂಲ ಇಲಾಖೆಯ ಸಿಬ್ಬಂದಿಗಳ ಈ ಬಾಕಿ ವೇತನದ ಬಗ್ಗೆ ಮಲತಾಯಿ ದೋರಣೆ ತಾಳಿವೆ. ಅದರೆ ಅನ್ಯ ಇಲಾಖೆಯ (ಗ್ರಂಥಾಲಯ ಮೇಲ್ವಿಚಾರಕರಿಗೆ) ಸಬ್ಬಿಂದಿಗಳಿಗೆ ವೇತನ ಪಾವತಿಸಲು ಗ್ರಾಮಪಂಚಾಯಿತಿಗಳಲ್ಲಿ ವಸೂಲಿಯಾದ ತೆರಿಗೆಯ ಹಣದಿಂದ ಗ್ರಾಂಥಾಲಯ ಸಿಬ್ಬಂದಿಗಳ ಖಾತೆಗೆ ನೇರವಾಗಿ ಹಣ ಹಾಕುವಂತೆ…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಗಂಗಾಮತಸ್ಥರ ಸಂಘದವತಿಯಿAದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ ರಾಷ್ಟಿçÃಯ ದಾಸೋಹ ದಿನವನ್ನು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಹಾಗೂ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಭಾವಚಿತ್ರಗಳಿಗೆ ಪುಪ್ಪ ನಮನ ಸಲ್ಲಿಸುವ ಮೂಲಕ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಕಾಯಕವನ್ನೇ ಪೂಜೆ ಎಂದು ನಂಬಿದ್ದ ಅಂಬಿಗರ ಚೌಡಯ್ಯ,ಅದರಲ್ಲಿಯೇ ದೇವರನ್ನು ಕಂಡವರು.ಪೂಜೆ, ಜಪ,ತಪದ ಹೆಸರಿನಲ್ಲಿ ನಡೆಯವ ಆಡಂಬರಗಳನ್ನು ಕಟುವಾಗಿ ತಮ್ಮ ವಚನಗಳಲ್ಲಿ ಟೀಕಿಸಿದ್ದ ಅಂಭಿಗರ ಚೌಡಯ್ಯ, ತಾವು ಮಾಡುವ ಕಾಯಕವೇ ದೇವನಿಗೆ ಅರ್ಪಣೆ ಎಂಬAತೆ ಜೀವನದುದ್ದಕ್ಕೂ ಬದುಕಿದ ಮಹಾಪುರುಷರು.ಇವರ ಈ ಕಾಂiÀiಕ ನಿಷ್ಠೆಯನ್ನು ಮೆಚ್ಚಿ ಅವರನ್ನು ನಿಜ ಶರಣ ಎಂಬ ಬಿರುದಿನಿಂದ ಕರೆಯಲಾಗುತಿತ್ತು ಎಂದರು. ಅAಬಿಗರ ಚೌಡಯ್ಯನವರು ತಮ್ಮ ವಚನಗಳಲ್ಲಿ ಜನರ ನಡುವೆ ಯಾವ ರೀತಿಯ ಸಾಮರಸ್ಯ ಇರಬೇಕೆಂದರೆ ಕುರುಡಿನಿಗೆ ಕಿವಿಯಿದ್ದವ ಜೊತೆಯಾದಂತೆ ಪರಸ್ವರ ಅವಲಂಬಿತರಾಗಿ ಬದುಕುಬೇಕು…

Read More

ತುಮಕೂರು: ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು ಸಿದ್ದಗಂಗೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಶ್ರೀಕ್ಷೇತ್ರದಲ್ಲಿ ನಡೆದ ಶ್ರೀಗಳ 6ನೇ ಪುಣ್ಯ ಸಂಸ್ಮರಣೋತ್ಸವಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮೇಘಾಲಯ ರಾಜ್ಯಪಾಲರಾದ ಸಿ.ಹೆಚ್. ವಿಜಯಶಂಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಜ್ಯೋತಿಗಣೇಶ್, ಬಿ. ಸುರೇಶ್‌ಗೌಡ ಸೇರಿದಂತೆ ವಿವಿಧ ಮಠಾಧೀಶರುಗಳು, ಹರಗುರುಚರಮೂರ್ತಿಗಳು ಹಾಗೂ ಸಹಸ್ರಾರು ಭಕ್ತ ಸಮೂಹ ಶ್ರೀಗಳ ಗದ್ದುಗೆ ದರ್ಶನ ಪಡೆದು ಸಾಕ್ಷಿಯಾದರು. ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ನಸುಕಿನಿಂದಲೇ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ವೇದ ಘೋಷಗಳು ಮೊಳಗಿದವು. ಶ್ರೀಗಳ 6ನೇ ಪುಣ್ಯಾರಾಧನೆ ಪ್ರಯುಕ್ತ ಶ್ರೀಗಳು ಐಕ್ಯ ರಾಗಿರುವ…

Read More

ತುಮಕೂರು : ಅಭಿವೃದ್ಧಿಯ ಹೆಸರಿನಲ್ಲಿ ಜಿಲ್ಲೆಯ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಗೋಮಾಳ ಮತ್ತು ಅರಣ್ಯ ಭೂಮಿಯನ್ನು ಗ್ರಾಮ ಪಂಚಾಯಿತಿಗಳ ಪಿಡಿಒಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಹಾಗೂ ತಾಲ್ಲೂಕಿನ ಆಡಳಿತ ಸರ್ವನಾಶಕ್ಕೆ ಮುಂದಾಗಿದ್ದು, ವಿದ್ಯುತ್ ಸರಬರಾಜು ಕಂಪನಿಯ ವಿವಿಧ ಯೋಜನೆಗೆ ಜಿಲ್ಲೆಯ ಗೋಮಾಳಗಳಲ್ಲಿರುವ ಸಾವಿರಾರು ಮರಗಳನ್ನು ಮಾರಣ ಹೋಮ ನಡೆಸಲು ಮುಂದಾಗಿದ್ದು, ಇದನ್ನು ಕೂಡಲೇ ಕೈ ಬಿಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನಸಿಂಧುಸ್ವಾಮಿ ಒತ್ತಾಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿದ್ಯುತ್ ಸರಬರಾಜು ಕಂಪನಿಯು ಜಿಲ್ಲೆಯ ವಿವಿಧ ತಾಲಕು ವ್ಯಾಪ್ತಿಯಲ್ಲಿ ಸೌರ ಶಕ್ತಿ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಿದ್ದು, ಅದಕ್ಕಾಗಿ ಅಗತ್ಯವಾಗಿ ಬೇಕಿರುವ ಸಾವಿರಾರು ಎಕರೆ ಭೂಮಿಯನ್ನು ಸ್ಥಳೀಯ ಆಡಳಿತಗಳಿಂದ ಪಡೆಯಲು ಮುಂದಾಗಿದೆ. ಅಲ್ಲದೇ ಗೋಮಾಳಗಳನ್ನೇ ಗುರಿ ಮಾಡಿಕೊಂಡಿರುವ ವಿದ್ಯುತ್ ಕಂಪನಿ ಗೋಮಾಳ ಜಾಗದಲ್ಲಿರುವ ನೂರಾರು ವರ್ಷಗಳ ಸಾವಿರಾರು ಮರಳನ್ನು ತೆರವು ಮಾಡಿ ಆ ಜಾಗದಲ್ಲಿ ಸೌರಪ್ಲೇಟ್ ಗಳನ್ನು ಅಳವಡಿಸಲು ಈಗಾಗಲೇ…

Read More

ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ನೀರಗುಂದ ಗ್ರಾಮದ ಸಂಪರ್ಕ ರಸ್ತೆಗೆ ಸೇತುವೆ ಮತ್ತು ರಸ್ತೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನೀರಗುಂದ, ಅಜ್ಜೇನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್. ಅಲ್ಲಪ್ಪ ಮಾತನಾಡಿ ಗ್ರಾಮದಲ್ಲಿರುವ ಕೆರೆಯ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಹತ್ತಾರು ವರ್ಷಗಳಿಂದ ಈ ರಸ್ತೆಯನ್ನು ದುರಸ್ಥಿ ಪಡಿಸಿ, ಸೇತುವೆ ನಿರ್ಮಾಣ ಮಾಡಿ ಎಂದು ಸಾಕಷ್ಟು ಬಾರಿ ಶಾಸಕರಿಗೂ, ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜವಿಲ್ಲದಾಗಿದೆ. ಜನರು ಓಡಾಡಲೂ ಕಷ್ಟವಾಗುತ್ತಿದೆ. ರಸ್ತೆ ತುಂಬಾ ನೀರು ನಿಂತಿರುತ್ತದೆ. ಗುಂಡಿಗಳು ತುಂಬಿವೆ. ಮಳೆಗಾಲದಲ್ಲಂತೂ ಇಲ್ಲಿ ಓಡಾಡುವುದು ಕಷ್ಟಕರ. ಮುನ್ನೂರು ಮೀಟರ್ ದೂರ ಕ್ರಮಿಸುವ ರಸ್ತೆ ಸರಿಯಿಲ್ಲದ ಕಾರಣ ಬಳಸಿಕೊಂಡು ಸುಮಾರು ಐದು ಕಿಮೀ ದೂರ ಹೋಗಬೇಕಿದೆ. ಎಂದು ತಿಳಿಸಿದರು. ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡದಿದ್ದಲ್ಲಿ ತುರುವೇಕೆರೆಯಿಂದ ಕೆಬಿ ಕ್ರಾಸ್ ಕಡೆ ತೆರಳುವ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಲೋಕಮ್ಮನಹಳ್ಳಿ…

Read More