Author: News Desk Benkiyabale

ತುಮಕೂರು :       ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಸಹಾಯಧನ ಮತ್ತಿತರ ಸೌಲಭ್ಯಗಳನ್ನು ಅರ್ಹತೆಗನುಗುಣವಾಗಿ ನೀಡುವಂತೆ ಒತ್ತಾಯಿಸಿ ಹಾಗೂ ದಲಿತ ಮೇಲಿನ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.       ಪ್ರತಿಭಟನೆಯನ್ನು ಉದ್ದೇಶಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಳವಾಗಿದ್ದು ಸರ್ಕಾರ ಈ ದೌರ್ಜನ್ಯ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ನೀಡುವಲ್ಲಿ ವಿಫಲವಾಗಿದೆ. ತುಮಕೂರು ಜಿಲ್ಲೆಯ ಮಲ್ಲೇಕಾವು ಗ್ರಾಮದಲ್ಲಿ ದಲಿತರು ದೇವಾಲಯಕ್ಕೆ ಪ್ರವೇಶ ಮಾಡಿದರೆಂದು ಜಗದೀಶ್ ಎಂಬುವರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಆದರೂ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.       ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಲಿತರ ಮೇಲೆ ಹಲ್ಲೆ, ಅಸ್ಪೃಶ್ಯತಾ ಆಚರಣೆ ಜಾರಿಯಲ್ಲಿದ್ದು ಸರ್ಕಾರ…

Read More

ತುಮಕೂರು :       ನಗರದ ಪಶ್ಚಿಮ ವಿಭಾಗದ ಸಂಚಾರಿ ಪಿಎಸ್‍ಐ ಜ್ಞಾನಮೂರ್ತಿ ರವರು ತಮ್ಮ ಕೆಲವು ಸಿಬ್ಬಂದಿಗಳೊಟ್ಟಿಗೆ ಸೇರಿಕೊಂಡು ಭ್ರಷ್ಟಾಚಾರಕ್ಕಿಳಿದಿದ್ದಾರೆ.       ದಿನಾಂಕ 23-07-2019 ರ ಮಂಗಳವಾರ ಸಂಜೆ ಸರಿಸುಮಾರು 7.30 ರ ಸುಮಾರಿನಲ್ಲಿ ಕೆಎ-51 ಎಎ 9651 ಟಾಟಾ ಕಂಪನಿಯ ಲಗೇಜು ಸಾಗಿಸುವ ವಾಹನವನ್ನು ನಗರದ ಬಿಹೆಚ್ ರಸ್ತೆಯ ಟ್ರೆಂಡ್ಸ್ ಮುಂಭಾಗದಿಂದ ತೆಗೆದುಕೊಂಡು ಹೋಗಿರುತ್ತಾರೆ. ಸ್ವತಃ ಪಶ್ಚಿಮ ವಿಭಾಗದ ಪಿಎಸ್‍ಐ ಜ್ಞಾನಮೂರ್ತಿರವರೇ ವಾಹನವನ್ನು ತಮ್ಮ ಠಾಣಾ ವ್ಯಾಪ್ತಿಗೆ ತೆಗೆದುಕೊಂಡು ಹೋಗಿ ನಿಲ್ಲಿಸಿಕೊಂಡಿರುತ್ತಾರೆ. ವಾಹನದ ಮಾಲೀಕರು ಮತ್ತು ಚಾಲಕರು ವಾಹನ ಬಿಡುವಂತೆ ಬೇಡಿದರೂ ಬಿಡದೇ ಅದರಲ್ಲಿದ್ದ ಸಾಮಾನು ಮತ್ತು ಸರಂಜಾಮುಗಳ ಸಮೇತ ತಮ್ಮ ವಶಕ್ಕೆ ಪಡೆದು ಹಣಕ್ಕಾಗಿ ಬೇಡಿಕೆಯಿಟ್ಟು ಮಾಲೀಕರು ಮತ್ತು ಚಾಲಕರನ್ನು ಬೆದರಿಸಿರುತ್ತಾರೆಂದು ತಿಳಿದುಬಂದಿರುತ್ತದೆ. ದಿನಾಂಕ 23-07-2019 ರ ರಾತ್ರಿ 7.30 ರಿಂದ 24-07-2019 ರ ಸಂಜೆ 4.30 ರವರೆಗೆ ಅನಧಿಕೃತವಾಗಿ ತಮ್ಮ ವಶದಲ್ಲೇ ಇಟ್ಟುಕೊಂಡು ಹಣಕ್ಕಾಗಿ ಒತ್ತಾಯ ಮಾಡಿ 4000 ರೂ. ಲಂಚದ…

Read More

ಕೊಡಿಗೇನಹಳ್ಳಿ:       ಗ್ರಾಮದ ಬಾಲಕೀಯರ ಶಾಲೆ ಅಡುಗೆ ಕೋಣೆಯ ಬೀಗ ಮುರಿದ ಕದೀಮರು ಅಕ್ಷರ ದಾಸೋಹದ ಅಡುಗೆ ಪಾತ್ರೆಗಳನ್ನು ದೊಚಿರುವ ಘಟನೆ ತಡವಾಗಿ ಬೆಳಕಿಗ ಬಂದಿದೆ.       ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಸರಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯು ಬಾನುವಾರ ರಜೆ ಇದ್ದು ಅಡುಗೆ ಕೋಣೆಗೆ ಬೀಗ ಹಾಕಲಾಗಿತ್ತು, ಎಂದಿನಂತೆ ಮುಖ್ಯ ಶಿಕ್ಷಕಿ ತಿಮ್ಮರಾಜಮ್ಮ ಸೋಮವಾರ ಬೆಳಿಗ್ಗೆ ಬೀಗ ತೆರಯಲು ಹೋದಾಗ ಕಳುವಾಗಿರವ ಬಗ್ಗೆ ತಿಳಿದು ಬಂದಿದೆ.ತಕ್ಷಣ ಪರಿಶೀಲಿಸಿದಾಗ ಶಾಲೆಯಲ್ಲಿ ಅಡುಗೆಗೆ ಬಳಸುತಿದ್ದ 15ಕೆಜಿ, 10ಕೆಜಿ, 8 ಕೆಜಿ, ಹಾಗೂ 3 ಕೆಜಿ ತೂಕದ ಸುಮಾರು 4 ಅಡುಗೆ ಪಾತ್ರೆಗಳು ಕಳುವಾಗಿವೆ ಎಂದು ಮುಖ್ಯ ಶಿಕ್ಷಕಿ ದೂರಿನಲ್ಲಿ ಉಲ್ಲೇಖಸಿದ್ದಾರೆ,ಕಳೆದ 10 ದಿನಗಳ ಹಿಂದೆ ಸರಕಾರಿ ಉರ್ದು ಶಾಲೆಯಲ್ಲಿ ಭರ್ತಿ ಗ್ಯಾಸ್ ಸಿಲೆಂಡರ್ ಕಳವಾಗಿತ್ತು, ಇದಕ್ಕು ಮುನ್ನ ಬಾಲಕರ ಶಾಲೆಯಲ್ಲಿ ಕಂಪ್ಯೋಟರ್ ಕಳವಾಗಿದೆ, ಪದೇ ಪದೇ ಕದೀಮರು ರಜಾ ದಿನಗಳಲ್ಲಿ ಶಾಲೆಯ ಬೀಗಗಳನ್ನು ಮುರಿಯುತ್ತಿದ್ದು ಸರಕಾರಿ ಶಾಲೆಯ…

Read More

ತುಮಕೂರು:       ರೈತಸಿರಿ, ಕೃಷಿಭಾಗ್ಯ, ಪಿಎಂಕಿಸಾನ್, ಬೆಳೆ ವಿಮಾ, ಗಂಗಾ ಕಲ್ಯಾಣ ಸೇರಿದಂತೆ ಎಲ್ಲಾ ಕೃಷಿ ಯೋಜನೆಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಜರುಗಿದ ಕೆಡಿಪಿ ಸಭೆ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸುತ್ತಾ ಮಾತನಾಡಿದ ಅವರು, ರೈತರಿಗಾಗಿ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮಳೆ ಬಾರದೆ ಮೊದಲೇ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರಿ ಯೋಜನೆಗಳಿಂದಾದರೂ ರೈತರು ಕೊಂಚ ಸುಧಾರಿಸಿಕೊಳ್ಳಲಿ ಎಂದು ತಿಳಿಸಿದ ಅವರು, ಬಾಕಿ ಇರುವ ಬೆಳೆ ವಿಮಾ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಬೇಕೆಂದು ಸೂಚಿಸಿದರು.       ಕೃಷಿ ಜಂಟಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ.9ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಸುಮಾರು 40…

Read More

ತುಮಕೂರು:       ಸಣ್ಣ ಕೈಗಾರಿಕೋದ್ಯಮಿಗಳು ತಾವು ಹೊಸದಾಗಿ ಆವಿಷ್ಕರಿಸಿದ ಕೈಗಾರಿಕೆ/ಯಂತ್ರೋಪಕರಣಗಳ ಪೇಟೆಂಟ್(ಹಕ್ಕುಪತ್ರ)ಅನ್ನು ತಪ್ಪದೇ ಪಡೆದಿರಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ಸಲಹೆ ನೀಡಿದರು.       ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ), ಜಿಲ್ಲಾ ಕೈಗಾರಿಕಾ ಕೇಂದ್ರ, ಮತ್ತಿತರ ಸರ್ಕಾರಿ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ಗಾಜಿನಮನೆಯಲ್ಲಿಂದು ಏರ್ಪಡಿಸಿದ್ದ “ದಕ್ಷಿಣ ಭಾರತದ ಆಗ್ರೋ ಎಕ್ಸ್‍ಪೋ ಕೃಷಿ ಮತ್ತು ಪೂರಕ ವಸ್ತುಪ್ರದರ್ಶನ” ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.       ಈ ವಸ್ತುಪ್ರದರ್ಶನಕ್ಕೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಎಷ್ಟೋ ಮಳಿಗೆಗಳಲ್ಲಿರುವ ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನದ ಪೇಟೆಂಟ್ ಪಡೆಯದಿಲ್ಲದಿರುವುದು ಕಂಡುಬಂತು. ಒಂದು ದೇಶವನ್ನು ಅಭಿವೃದ್ಧಿ ದೇಶವೆಂದು ವಿಶ್ವ ಮಟ್ಟದಲ್ಲಿ ಪರಿಗಣಿಸಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಪೇಟೆಂಟ್ ಆಗಿರುವ ಅಂಶವನ್ನೂ ಸಹ ಗಣನೆಗೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಉದ್ಯಮಿಗಳು ತಮ್ಮ ಹೊಸ ಆವಿಷ್ಕಾರ ಮಾಡಿದ ಯಂತ್ರ/ಕೈಗಾರಿಕೆ/ಉತ್ಪನ್ನಗಳಿಗೆ ತಪ್ಪದೇ ಪೇಟೆಂಟ್ ಪಡೆಯಬೇಕು. ಹೊಸದಾಗಿ ಆವಿಷ್ಕರಿಸಿದ ಯಂತಗಳ ಡಿಜೈನ್, ಪ್ರಾಸೆಸ್,…

Read More

ತುಮಕೂರು:       ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸೂಪರ್ ಸೀಡ್ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಡಿಸಿಸಿ ಬ್ಯಾಂಕ್ ನೌಕರರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.       ನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸೇರಿದಂತೆ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರಗಳ ಶಾಖೆ ಮುಂಭಾಗ ಕಪ್ಪುಪಟ್ಟಿ ಧರಿಸಿ ಜಮಾಯಿಸಿದ ಬ್ಯಾಂಕ್ ನೌಕರರು ಬ್ಯಾಂಕ್‍ನ ಆಡಳಿತ ಮಂಡಳಿಯನ್ನು ರದ್ದುಮಾಡಿ ಸೂಪರ್ ಸೀಡ್ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಕಾರ್ಯದರ್ಶಿ ಮಧುಸೂದನ್ ಮಾತನಾಡಿ, ಕೂಡಲೇ ರದ್ದುಪಡಿಸಿರುವ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಮತ್ತೆ ಅಧಿಕಾರ ನೀಡಬೇಕು. ಕೇವಲ ರಾಜಕೀಯ ದ್ವೇಷಕ್ಕೋಸ್ಕರ ಇಡೀ ಜಿಲ್ಲೆಯ ರೈತ…

Read More

ತುಮಕೂರು:       ತುಮಕೂರು ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯನ್ನು ವಜಾ(ಸೂಪರ್‍ಸೀಡ್)ಗೊಳಿಸಿ ತಮ್ಮನ್ನು ಒಂದು ವರ್ಷದ ಅವಧಿಗೆ ಬ್ಯಾಂಕಿನ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಬೆಂಗಳೂರು ವಿಭಾಗದ ಸಹಕಾರ ಸಂಘಗಳ ಜಂಟಿ ನಿಬಂಧಕರು ಜುಲೈ 19ರಂದು ಹೊರಡಿಸಿರುವ ಆದೇಶದನ್ವಯ ಜುಲೈ 20ರ ಸಂಜೆ ಆಡಳಿತಾಧಿಕಾರಿಯ ಸ್ವಯಂ ಪ್ರಭಾರವನ್ನು ವಹಿಸಿಕೊಂಡಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‍ಕುಮಾರ್ ಅವರು ತಿಳಿಸಿದರು.          ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆಗಿರುವ ಹಿನ್ನೆಲೆಯಲ್ಲಿ ಬ್ಯಾಂಕಿನ ಮುಂದಿನ ಕಾರ್ಯಚಟುವಟಿಕೆಗಳನ್ನು ರೂಪಿಸುವ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.        ಸೂಪರ್ ಸೀಡ್ ಮಾಡಲು ಕಾರಣವೇನೆಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು 6 ಪುಟಗಳನ್ನೊಳಗೊಂಡ ಜಂಟಿ ನಿಬಂಧಕರ ಆದೇಶದಲ್ಲಿ ಪ್ರತ್ಯೇಕವಾಗಿ ಕಾರಣವೇನೆಂದು ತಿಳಿಸಿಲ್ಲ. ಆದರೆ ಬ್ಯಾಂಕಿನ ಹಣಕಾಸು ವ್ಯವಹಾರದಲ್ಲಿ ಲೋಪವಾಗಿರುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈ ವಿಷಯದ ಬಗ್ಗೆ ವಿವರವಾದ ಮಾಹಿತಿ ನನಗೆ ಗೊತ್ತಿಲ್ಲ.…

Read More

ತುಮಕೂರು:      ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ನಗರದ ಹೊರವಲಯದ ಬೆಳಗುಂಬ ಗ್ರಾಮ ಪಂಚಾಯಿತಿ ಕಚೇರಿಗೆ ಮಹಿಳೆಯರು ಬುಧವಾರ ಮುತ್ತಿಗೆ ಹಾಕಿದರು. ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.        ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಜನರ ಮನವಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಕುಡಿಯುವ ನೀರಿನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದರು       ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಮತ್ತು ಅಧ್ಯಕ್ಷರು ಸ್ಪಂದಿಸುತ್ತಿಲ್ಲ. ಇದರಿಂದ ಬೇಸರವಾಗಿದೆ. ನಾನು ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರಯ್ಯ ಅವರು ಈ ವೇಳೆ ತಿಳಿಸಿದರು.      ಅಧಿಕಾರಿಗಳು ಮೊದಲು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಮಹಿಳೆಯರು ಆಗ್ರಹಿಸಿದರು. ಪಿಡಿಒ ವರ್ಗಾವಣೆಗೆ ಮನವಿ: ಬೆಳಗುಂಬ ಪಂಚಾಯಿತಿ ಪಿಡಿಒ ಮೋಹನ್ ಕುಮಾರ್ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ಬೇರೆಡೆ…

Read More

ತುಮಕೂರು:       ಹೇಮಾವತಿ ಯೋಜನೆ ಅಡಿಯಲ್ಲಿ ಭೂಮಿಯನ್ನು ಪಡೆಯಲು 2013ನೇ ಕಾಯ್ದೆ ಪ್ರಕಾರ ಕೆಲ ಗ್ರಾಮಗಳಲ್ಲಿ ರೈತರ ಜಮೀನುಗಳ ಖರೀದಿಗೆ ನಿರ್ದಿಷ್ಠ ಮೊತ್ತವನ್ನು ನಿಗದಿ ಮಾಡಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಒಂದು ತಿಂಗಳೊಳಗಡೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದರು.       ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನಹಳ್ಳಿಯ ಕೆಲ ಹಳ್ಳಿಗಳಲ್ಲಿ ಹೇಮಾವತಿ ನಾಲಾ ಯೋಜನೆಗೆ ರೈತರ ಜಮೀನು ಪಡೆಯಲು ಗುಂಟೆಗೆ 8900, 9250 ರೂಗಳಂತೆ ನಿಗದಿ ಪಡಿಸಲಾಗಿದೆ. ಒಂದು ಗುಂಟೆಗೆ 8900 ರೂಗಳಂತೆ 1:4 ಅನುಪಾತದಲ್ಲಿ ಒಂದು ಎಕರೆಗೆ 14 ಲಕ್ಷದಷ್ಟು ಹಣ ನೀಡಿ ಜಮೀನು ನೇರ ಖರೀದಿ ಮಾಡಲಾಗುವುದು ಎಂದರು.        ಸಭೆಯಲ್ಲಿ ಮಾತನಾಡಿದ ರೈತರು, ಈ ಮುಂಚೆ ಕೆಲ ರೈತರ ಜಮೀನುಗಳು ವಿವಿಧ ಯೋಜನೆಗಳಿಗೆ ಹೋಗಿದ್ದು, ಅದಕ್ಕೆ ಇಲ್ಲಿಯವರೆಗೆ ಹಣ ಬಂದಿಲ್ಲ. ಈಗ ಮತ್ತೆ ಹೇಮಾವತಿ ಯೋಜನೆ ಹೆಸರಿನಲ್ಲಿ ಜಮೀನು ಪಡೆಯಲು…

Read More

ಮಧುಗಿರಿ :       ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಗುರುವಾರ ತಡರಾತ್ರಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಕಿಡಿಗೇಡಿಗಳ ದಾಳಿಗೆ ಬಲಿಯಾಯ್ತ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.        ರಾತ್ರಿ ಸುಮಾರು 11 ಘಂಟೆಯ ಸಂದರ್ಭದಲ್ಲಿ ಆಸ್ಪತ್ರೆಯ ಆವರಣದ ಕಾಂಪೌಂಡ್ ಮೇಲ್ಬಾಗದಲ್ಲಿ ಹೆಬ್ಬಾವು ಓಡಾಡುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಭಯಬೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ ಹೆಬ್ಬಾವು ಚರಂಡಿಯೊಳಗೆ ನುಸುಳಿದೆ. ಚರಂಡಿಯೊಳಗೆ ಹೋದ ಹಾವು ಮತ್ತೆ ಮೇಲೆ ಬರುವುದಿಲ್ಲ. ಯಾರಿಗೂ ಏನೂ ತೊಂದರೆ ಮಾಡುವುದಿಲ್ಲ. ಬೆಳಗ್ಗೆ ಬಂದು ಹಿಡಿಯುವುದಾಗಿ ಸಿಬ್ಬಂದಿ ಅಲ್ಲಿಂದ ನಿರ್ಗಮಿಸಿದ್ದಾರೆ.       ಸ್ವಲ್ಪ ಸಮಯದ ನಂತರ ಮತ್ತೆ ಮೇಲೆ ಬಂದ ಹಾವು ಅಸ್ಪತ್ರೆಯ ಆವರಣ ಕಾಂಪೌಂಡ್ ಮೇಲ್ಬಾಗದಲ್ಲಿ ಓಡಾಡಿದೆ. ಇದರಿಂದ ಗಾಬರಿಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಹೊರಕ್ಕೆ ಓಡಿ ಬಂದಿದ್ದಾರೆ. ಒಂದು ಘಂಟೆಯಾದರೂ ಹೆಬ್ಬಾವು ಆಸ್ಪತ್ರೆಯ ಕಾಂಪೌಚಿಡ್ ಮೇಲಿಂದ ಕದಲದೆ ಮಲಗಿಬಿಟ್ಟಿದೆ. ಈ ಸಂದರ್ಭದಲ್ಲಿ…

Read More