ತಿಪಟೂರು : ತಾಲ್ಲೂಕು ಆಡಳಿತ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಲ್ಲಿನ ಶಾಸಕರು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ತಮ್ಮ ಹಿಂಬಾಲಕರಿಗೆ ನೀಡಿದ್ದು, ಪ್ರಶಸ್ತಿ ಆಯ್ಕೆಯಲ್ಲಿ ಸರಿಯಾದ ಮಾನದಂಡ ಬಳಕೆಯಾಗಿಲ್ಲ ಎಂದು ಜಯ ಕರ್ನಾಟಕ ಸಂಘಟನೆ ತಾ. ಅಧ್ಯಕ್ಷ ಬಿ.ಟಿ. ಕುಮಾರ್ ಗಂಭೀರ ಆರೋಪ ಮಾಡಿದರು. ಈ ಸಂಬಂಧ ನಗರದಲ್ಲಿ ಗುರುವಾರ ಸಂಜೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಬಾರಿ ಎಲ್ಲಾ ಕ್ಷೇತ್ರಗಳನ್ನು ಗುರುತಿಸಿ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಆದರೆ ಈ ಬಾರಿ ಕ್ರೀಡೆ, ಪತ್ರಿಕೋದ್ಯಮ, ವೈದ್ಯಕೀಯ, ಕನ್ನಡಪರ ಹೋರಾಟಗಾರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಬಿಟ್ಟು ಕೇವಲ ಜಾತಿ ರಾಜಕಾರಣದ ಆಧಾರದ ಮೇಲೆ ತಾ. ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಆಯ್ಕೆ ಸಂದರ್ಭದಲ್ಲಿ ಶಾಸಕರು ತಮಗೆ ಬೇಕಾದವರ ಹೆಸರನ್ನು ಸೇರಿಸಿ ಪ್ರಶಸ್ತಿ ನೀಡಲು ಸಹಕರಿಸಿದ್ದಾರೆ. ಪ್ರಶಸ್ತಿ ಪಡೆದವರು ಬಹುತೇಕ ಶಾಸಕರ ಹಿಂಬಾಲಕರಾಗಿದ್ದಾರೆ. ಶಾಸಕರೇ ಸಾಧನೆ ಮಾಡದ ಹಾಗೂ…
Author: News Desk Benkiyabale
ಹುಳಿಯಾರು: ಪಟ್ಟಣದ ಕರ್ನಾಟಕ ರತ್ನ ಡಾ.ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಡಾ.ರಾಜ್ ಕುಮಾರ್ ರಸ್ತೆಯಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಹಾಗೂ ಡಾ.ರಾಜ್ ಕುಮಾರ್ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಪಿಎಸ್ಐ ವಿಜಯಕುಮಾರ್ ಹೆಬ್ಬಾಗಿಲು ಉದ್ಘಾಟಿಸಿ ಮಾತನಾಡಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕನ್ನಡಿಗರಲ್ಲಿ ಕನ್ನಡಾಭಿಮಾನ ಬೆಳೆಯುತ್ತಿದೆ. ರಾಜ್ಯೋತ್ಸವವೂ ಇಲ್ಲದಿದ್ದರೆ ಕನ್ನಡವೂ ಇಲ್ಲ ಅಭಿಮಾನವೂ ಇಲ್ಲ ಅನ್ನುವಂತಾಗುತ್ತಿತ್ತು. ನವೆಂಬರ್ ಮಾಹೆಯಲ್ಲಿ ಭಾಷೆ ಮೇಲೆ ಉಕ್ಕುವ ಪ್ರೀತಿ ವರ್ಷ ಪೂರ್ತಿ ಇದ್ದರೆ ಕನ್ನಡಕ್ಕೆ ಎಂದೆಂದೂ ಧಕ್ಕೆಯಾಗದು ಎಂದರಲ್ಲದೆ ಹುಳಿಯಾರಿನಲ್ಲಿ ಟೀ ಅಂಗಡಿ ಪರಪ್ಪ ಅವರಿಗಿರುವ ಕನ್ನಡಾಭಿಮಾನ ಇತರರಿಗೆ ಮಾಧರಿಯಾಗಿದೆ ಎಂದರಲ್ಲದೆ ರಾಜ್ಕುಮಾರ್ ಅಭಿಮಾನಿ ಬಳಗ ರಚಿಸಿಕೊಂಡು ದಾನಿಗಳ ನೆರವಿನಿಂದ ಹೆಬ್ಬಾಗಿಲು ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ರತ್ನ ಡಾ.ರಾಜಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಪರಪ್ಪ, ಉಪಾಧ್ಯಕ್ಷ ಈರುಳ್ಳಿ ಹೊನ್ನಪ್ಪ, ಪರಮೇಶ್, ಕಂಪನಹಳ್ಳಿ ರಂಗಸ್ವಾಮಿ, ಅರ್ಚಕ ರಾಜಣ್ಣ,…
ಬೆಂಗಳೂರು: ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಶನಿವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತು ಸಭೆ ನಡೆಯಿತು. ಸಚಿವ ಜಮೀರ್ ಅಹಮದ್ ಕೂಡ ಸಭೆಯಲ್ಲಿ ಪಾಲಗೊಂಡಿದ್ದರು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿ ಸಲ್ಲಿಸಲಾಯಿತು. ನಿನ್ನೆಯಷ್ಟೇ ಕುಮಾರಸ್ವಾಮಿ ಟಿಪ್ಪು ಜಯಂತಿ ವಿಚಾರದ ಕುರಿತು ಮಾತನಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಗೊಂಡು ಭಾರಿ ವಿವಾದ ಸೃಷ್ಠಿಸಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಸರ್ಕಾರ ಕೈಬಿಡುವುದಿಲ್ಲವೆಂದು ಮುಖ್ಯಮಂತ್ರಿ ಅವರೇ ಸ್ಪಷ್ಟಪಡಿಸಿದ್ದರು. ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ ಟಿಪ್ಪು ಆಚರಣೆ ಒಂದು ರೂಪ ಪಡೆದುಕೊಳ್ಳಲಿದೆ.
ನವದೆಹಲಿ: ಹನ್ನೆರಡು ಕೋಟಿ ಫೇಸ್ ಬುಕ್ ಬಳಕೆದಾರರ ಖಾಸಗಿ ಚಾಟ್ ಮಾಹಿತಿ ಸಹಿತ ಹಲವಾರು ವಿವರಗಳನ್ನು ಹ್ಯಾಕ್ ಮಾಡಿ ಅವುಗಳನ್ನು ಅಂತರ್ಜಾಲದಲ್ಲಿ ಮಾರಾಟಕ್ಕಿಡಲಾಗಿತ್ತು ಎಂದು ಬಿಬಿಸಿ ರಷ್ಯನ್ ಸರ್ವಿಸ್ ವರದಿ ಮಾಡಿದೆ. ಹ್ಯಾಕರ್ ಗಳು ಫೇಸ್ ಬುಕ್ನ 81,000 ಬಳಕೆದಾರರ ಖಾಸಗಿ ಮಾಹಿತಿಗಳನ್ನು ಬಿಡುಗಡೆಗೊಳಿಸಿದ್ದಾರೆಂದು ಹೇಳಲಾಗಿದೆ. ಈ ಹ್ಯಾಕ್ ಆದ ವಿಚಾರ ಸೆಪ್ಟೆಂಬರ್ ತಿಂಗಳಲ್ಲಿ ಎಫ್ಬಿ ಸೇಲರ್ ಎಂಬ ಬಳಕೆದಾರ ಆಂಗ್ಲ ಭಾಷೆಯ ಅಂತರ್ಜಾಲ ವೇದಿಕೆಯಲ್ಲಿ ಜಾಹೀರಾತನ್ನು ಹಾಕಿ ಒಂದು ಫೇಸ್ ಬುಕ್ ಖಾತೆಯ ಡಾಟಾ ಮಾಹಿತಿಯನ್ನು ಹತ್ತು ಸೆಂಟ್ಸ್ ಗೆ ಒದಗಿಸುವುದಾಗಿ ಹೇಳಿದಾಗ ಬಹಿರಂಗಗೊಂಡಿತ್ತು. ಆದರೆ ಆ ಜಾಹೀರಾತು ಈಗ ಅಂತರ್ಜಾಲದಲ್ಲಿ ಕಾಣಿಸುತ್ತಿಲ್ಲ. ತನ್ನ ಸೆಕ್ಯುರಿಟಿ ಫೀಚರ್ಸ್ ಸುರಕ್ಷಿತವಾಗಿದ್ದು, ಕೆಲವು ಶಂಕಾಸ್ಪದ ಬ್ರೌಸರ್ ಎಕ್ಸ್ಟೆನ್ಶನ್ಗಳ ಮುಖಾಂತರ ಈ ಮಾಹಿತಿಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಫೇಸ್ ಬುಕ್ ಬಿಬಿಸಿಗೆ ಹೇಳಿದೆ. ಇನ್ನಷ್ಟು ಫೇಸ್ಬುಕ್ ಖಾತೆಗಳು ಬಾಧಿತವಾಗದೇ ಇರುವಂತೆ ತಾನು ಕ್ರಮ…
ನವದೆಹಲಿ: ಅಕ್ಟೋಬರ್ನಲ್ಲಿ ಒಟ್ಟು 67.45 ಲಕ್ಷ ವ್ಯಾಪಾರಸ್ಥರು ಜಿಎಸ್ಟಿ ರಿಟರ್ನ್ಸ್ ಸಲ್ಲಿಸಿದ್ದು, 1,00,710 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ಗುರುವಾರ ಹೇಳಿದೆ. ತೆರಿಗೆ ವಂಚನೆಗೆ ಅಂಕುಶ, ಹಲವು ವಸ್ತುಗಳ ತೆರಿಗೆ ಇಳಿಕೆ, ದೇಶಾದ್ಯಂತ ಏಕ ತೆರಿಗೆ ಜತೆಗೆ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಲಗಾಮು ಹಾಕಲಾದ ಕಾರಣ ಜಿಎಸ್ಟಿ ಸಂಗ್ರಹ ಕೋಟಿ ಲಕ್ಷ ದಾಟಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ. ಒಟ್ಟಾರೆ ಜಿಎಸ್ಟಿ ಸಂಗ್ರಹದಲ್ಲಿ ಕೇರಳ ಅಸಾಧಾರಣ ಬೆಳವಣಿಗೆ (ಶೇ. 44) ದಾಖಲಿಸಿದೆ. ರಾಜಸ್ಥಾನದಲ್ಲಿ ಸಂಗ್ರಹ ಶೇ. 14 ಏರಿಕೆ ಕಂಡರೆ, ಉತ್ತರಾಖಂಡದಲ್ಲಿ ಶೇ. 13 ಮತ್ತು ಮಹಾರಾಷ್ಟ್ರದಲ್ಲಿ ಶೇ. 11 ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. ಲಕ್ಷ ಕೋಟಿ ರೂ. ಜಿಎಸ್ಟಿಯಲ್ಲಿ ಕೇಂದ್ರ ತೆರಿಗೆ 16,464 ಕೋಟಿ ರೂ., ರಾಜ್ಯ ತೆರಿಗೆ 22,826 ಕೋಟಿ ರೂ., ಐಜಿಎಸ್ಟಿ 53,419 ಕೋಟಿ ರೂ. ಮತ್ತು 8…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಮದ್ಯ ಮಾರಾಟವನ್ನು ಶೀಘ್ರವೇ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರ ಸ್ವೀಕರಿಸುವ ಮುಂಚೆ, ಹಿಂದಿನ ಸರ್ಕಾರ ಆನ್ಲೈನ್ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಈ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ. ಹಿಂದೆ ಅನುಮತಿ ಕೊಟ್ಟಿರುವ ಫೈಲ್ ಹಿಡಿದು ಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಫೈಲ್ ಪರಿಶೀಲಿಸಿ ಆನ್ಲೈನ್ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಆನ್ಲೈನ್ ಮದ್ಯ ಮಾರಾಟವನ್ನು ಅಧಿಕಾರಿಗಳು ಜಾರಿಗೊಳಿಸಿದ್ದಾರೆ . ಇದು ನನ್ನ ಗಮನಕ್ಕೆ ಬರುತ್ತಿದ್ದಂತೆಯೇ ಅದನ್ನು ನಿಲ್ಲಿಸಲು ಸೂಚನೆ ನೀಡಿದ್ದೇನೆ, ಯಾವ ಗುತ್ತಿಗೆದಾರರಿಗೆ ಲಾಭ ಮಾಡಿಕೊಡುಬ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಮನಗರ : ರಾಮನಗರ ಕ್ಷೇತ್ರದ ಉಪ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಹಿಂದೆ ಸರಿದಿದ್ದಾರೆ. ಆದರೆ, ಎಲೆಕ್ಟ್ರಾನಿಕ್ ವೋಟಿಂಗ್ ಮಿಷಿನ್ನಲ್ಲಿ ಅವರ ಹೆಸರು ಇರುತ್ತದೆ. ಗುರುವಾರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎಲ್.ಚಂದ್ರಶೇಖರ್ ಕಣದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದರು. ನವೆಂಬರ್ 3ರ ಶನಿವಾರ ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯಲಿದೆ. ಎಲ್.ಚಂದ್ರಶೇಖರ್ ಅವರು ಕಣದಿಂದ ಹಿಂದೆ ಸರಿದರೂ ಅವರ ಹೆಸರು ಮತಯಂತ್ರದಲ್ಲಿ ಇರಲಿದೆ. ಹಿಂದೆಯೂ ಈ ರೀತಿಯ ಹಲವಾರು ಪ್ರಕರಣಗಳು ನಡೆದಿವೆ ಎಂದು ಚುನಾವಣಾ ಆಯೋಗ ಹೇಳಿದೆ. ನಾಮಪತ್ರ ವಾಪಸ್ ಪಡೆಯಲು ನಿಗದಿ ಪಡಿಸಿದ ಕೊನೆಯ ದಿನಾಂಕದ ನಂತರ ಉಳಿಯುವ ಎಲ್ಲಾ ಅಭ್ಯರ್ಥಿಗಳ ಹೆಸರು ಮತಯಂತ್ರದಲ್ಲಿ ಇರಲಿದೆ. ಕೆಲವು ಬಿಜೆಪಿ ಕಾರ್ಯಕರ್ತರು ಅಭ್ಯರ್ಥಿ ಇಲ್ಲದಿದ್ದರೂ ಮತವನ್ನು ಬಿಜೆಪಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ. ದೇಶದ ಹಿತಕ್ಕಾಗಿ ಬಿಜೆಪಿಗೆ ಮತ ಹಾಕಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ. …
ಬೆಂಗಳೂರು: ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊಕ್ ನೀಡಲಾಗಿದ್ದು, ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಸ್ಥಾನಕ್ಕೆ ನೂತನವಾಗಿ ಪುಷ್ಟ ಅಮರನಾಥ್ ಅವರು ನೇಮಕವಾಗಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಪಾಲಿಸಿರುವ ಕಾಂಗ್ರೆಸ್ ಪಕ್ಷ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿಯಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನವನ್ನು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರಿಗೆ ವಹಿಸಿದೆ. ಪುಷ್ಪಾ ಅವರು ಮೈಸೂರು ನಗರದವರಾಗಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ ಅವರ ಬೆಂಬಲಿಗರಾಗಿ ಇವರು ಗುರುತಿಸಿಕೊಂಡಿದ್ದರು. ಇದರಿಂದಾಗಿ ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ಮೇಲುಗೈ ಆಗಿದೆ.
ತುಮಕೂರು: ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣಿಗೆ ಶರಣಾದ ಘಟನೆ ಮಧುಗಿರಿ ತಾಲೂಕಿನ ಸುದ್ದೇಗುಂಟೆ ಗ್ರಾಮದ ಹೊರವಲಯದಲ್ಲಿ ಗುರುವಾರ ನಡೆದಿದೆ. ಸಂದೇಶ್(17), ಮೀನಾಕ್ಷಿ(17) ಮೃತ ಪ್ರೇಮಿಗಳು. ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕುಟುಂಬದವರಿಗೆ ಹೆದರಿ ಗ್ರಾಮದ ಹೊರಭಾಗದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪಿಎಸ್ಐ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರು: ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಒಟ್ಟು 65ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ 47ಲಕ್ಷ ಶೌಚಾಲಯ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಆಯುಕ್ತ ಡಾ: ವಿಶಾಲ್ ಆರ್. ತಿಳಿಸಿದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ನಗರದ ಬಿರ್ಲಾ ಆಡಿಟೋರಿಯಂನಲ್ಲಿಂದು ಸ್ವಚ್ಛಭಾರತ ಮಿಷನ್ ಯೋಜನೆಯಡಿ ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕುರಿತು ಅರಿವು ಮೂಡಿಸುವ ಸಲುವಾಗಿ ಜನಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 65ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿಯನ್ನು ಮರು ಪರಿಶೀಲಿಸಿ ಅಂತಿಮವಾಗಿ 47ಲಕ್ಷ ಶೌಚಾಲಯಗಳ ನಿರ್ಮಾಣಕ್ಕೆ ಮಾತ್ರ ಇಲಾಖೆಯಿಂದ ಮಂಜೂರಾತಿ ನೀಡಲಾಗಿದೆ. ಇದರಲ್ಲಿ 10ಲಕ್ಷ ಶೌಚಾಲಯಗಳನ್ನು ವಿವಿಧ ಯೋಜನೆಗಳಡಿ ನಿರ್ಮಾಣ ಮಾಡಲಾಗಿದೆ. ಉಳಿದ 37ಲಕ್ಷ ಶೌಚಾಲಯಗಳ ಪೈಕಿ 70ಸಾವಿರ ಶೌಚಾಲಯ ನಿರ್ಮಾಣ ಮಾತ್ರ ಬಾಕಿ ಉಳಿದಿದ್ದು, ಕೂಡಲೇ…