Author: News Desk Benkiyabale

ತುಮಕೂರು :       ನಾನು ಪವರ್‍ಫುಲ್ ಅಥವಾ ಪವರ್ ಲೆಸ್ ಸಚಿವನಲ್ಲ. ನಾನೊಬ್ಬ ಸರ್ಕಾರ ವಹಿಸಿರುವ ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿ ನಿರ್ವಹಿಸುವ ಸಚಿವ. ಸಚಿವನಾಗಿ ಸರ್ಕಾರದ ಮಟ್ಟದಲ್ಲಿ ಏನು ಕೆಲಸ ಮಾಡಬೇಕೋ ಅದನ್ನು ಕಾನೂನು ವ್ಯಾಪ್ತಿಯಲ್ಲಿ ಮಾಡುತ್ತಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಇಂದಿಲ್ಲಿ ಸ್ಪಷ್ಟಪಡಿಸಿದರು.       ನಗರದಲ್ಲಿ ಸ್ಮಾರ್ಟ್‍ಸಿಟಿ, ಮಹಾನಗರ ಪಾಲಿಕೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ವತಿಯಿಂದ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.       ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಈವರೆವಿಗೂ ಆಯುಕ್ತರನ್ನು ನೇಮಕ ಮಾಡಿಲ್ಲ. ಸರ್ಕಾರದಲ್ಲಿ ನೀವು ಪವರ್ ಲೆಸ್ ಅಥವಾ ಪವರ್ ಫುಲ್ ಸಚಿವರ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಈ ಮೇಲಿನಂತೆ ಉತ್ತರಿಸಿದರು.       ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಶೀಘ್ರದಲ್ಲೆ ಆಯುಕ್ತರನ್ನು ನೇಮಕ ಮಾಡಲಾಗುವುದು ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳನ್ನು ಕಾರ್ಯಗತಗೊಳಿಸುವ…

Read More

ಮಧುಗಿರಿ :       ರಾಜ್ಯದಲ್ಲಿ ಬರಗಾಲವಿದ್ದು, ಸಮಸ್ಯೆ ನಿಭಾಯಿಸಲು ಹಣದ ಕೊರತೆಯಿಲ್ಲ. 700 ಕೋಟಿ ರಾಜ್ಯದ ಬರಗಾಲಕ್ಕೆ ನೀಡಿದ್ದು, ನಿಮ್ಮ ಜನ-ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಪಂಚಾಯತ್ ರಾಜ್ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.       ಮಧುಗಿರಿ ತಾಲೂಕಿನ ಕಸಬಾ ಚಿನಕವಜ್ರ ಗ್ರಾಮದ ಬರಗಾಲ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ದಕ್ಷಿಣ ಕರ್ನಾಟಕದಲ್ಲಿ ಈ ಬಾರಿಯೂ ಮಳೆ ಕೈಕೊಟ್ಟಿದೆ. ಲೋಕಸಭೆ ಚುನಾವಣೆಯ ಪ್ರಯುಕ್ತ ಸ್ಪಂದಿಸಲು ಆಗಲಿಲ್ಲ. ಆದರೆ ಪ್ರಸ್ತುತ ಯಾವುದೇ ಸಮಸ್ಯೆಯಿಲ್ಲದೆ ಬರವನ್ನು ನಿರ್ವಹಣೆ ಮಾಡಲಾಗುವುದು. ಎಲ್ಲಿವರೆಗೂ ಮೇವು ಬ್ಯಾಂಕಿನ ಅಗತ್ಯವಿರುತ್ತದೋ ಅಲ್ಲಿಯವರೆಗೂ ಮೇವು ಹಾಗೂ ನೀರಿಗೆ ಸಾಕಷ್ಟು ಅನುದಾನವನ್ನು ನೀಡಲಾಗುವುದು. ಕೇಂದ್ರ ಸರ್ಕಾರ 3 ತಿಂಗಳ ನಂತರ ನೀರು ನೀಡಲು ಹಣಕಾಸು ಕೊಡುವುದಿಲ್ಲ. ಆದರೆ ರಾಜ್ಯ ಸರ್ಕಾರ ಅಧಿಕಾರ ವಿಕೇಂದ್ರೀಕರಣ ಮಾಡಿ ತಹಶೀಲ್ದಾರ್‍ರವರಿಗೆ ಅಧಿಕಾರಿ ನೀಡಿದ್ದು, ಸಾಧ್ಯವಾದಷ್ಟು ನೀರು ಮೇವು ನೀಡಲು ಆದೇಶಿಸಿದ್ದೇವೆ. ಕನಿಷ್ಟ 40…

Read More

ತುಮಕೂರು :       ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಆರ್ ಶ್ರೀನಿವಾಸ್ ಅವರು ಸಂಸದ ಜಿ ಎಸ್ ಬಸವರಾಜು ಅವರನ್ನು ಅವಹೇಳನಾಕಾರಿಯಾಗಿ ನಿಂದಿಸಿದ್ದಾರೆಂದು ಆಪಾದಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸಂಸ್ಕೃತಿ ಇಲ್ಲದ ಶ್ರೀನಿವಾಸ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.       ಸಂಸದ ಜಿ ಎಸ್ ಬಸವರಾಜು ಅವರನ್ನು ಬಫೂನ್ ಎಂದು ಏಕ ವಚನದಲ್ಲಿ ನಿಂದಿಸಿದ್ದನ್ನು ಖಂಡಿಸಿದ ಕಾರ್ಯಕರ್ತರು, ಸಾಮಾಜಿಕ ಪ್ರಜ್ಞೆಯ ಅರಿವಿಲ್ಲದ, ಸಚಿವ ಸ್ಥಾನಕ್ಕೆ ಅನರ್ಹರಂತೆ ನಡೆದುಕೊಳ್ಳುವ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.       ಕೆಲ ಕಾಲ ಬಿಜಿಎಸ್ ವೃತ್ತದಲ್ಲಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಸಚಿವರ ವರ್ತನೆ ಖಂಡಿಸಿದರು. ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಡಾ. ಎಂ ಆರ್ ಹುಲಿನಾಯ್ಕರ್, ಸಚಿವ ಶ್ರೀನಿವಾಸ್…

Read More

 ಮಧುಗಿರಿ:       ತಾಲೂಕಿನಲ್ಲಿ ಹಲವೆಡೆ ಸುರಿದ ಮಳೆ ಹಾಗೂ ಗಾಳಿಗೆ ಕೆಲವೆಡೆ ಮರಗಳು ಧರೆಗೆ ಊರಳಿದ್ದು ವಿಧ್ಯುತ್ ಕಂಬಗಳು ಸಹ ಮುರಿದು ಬಿದ್ದ ಘಟನೆ ವರದಿಯಾಗಿದೆ.       ಕೊಡಿಗೇನಹಳ್ಳಿ ಹೊಬಳಿಯಲ್ಲಿ ಮಂಗಳವಾರ ಸುರಿದ ಸಾಧಾರಣ ಮಳೆ ಹಾಗೂ ಬಿರುಗಾಳಿಗೆ ಮುತ್ಯಾಲಮ್ಮನಹಳ್ಳಿ ಗ್ರಾಮದಲ್ಲಿ ತೆಂಗಿನ ಮರವೊಂದು ವಿಧ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ಎರಡು ಕಂಬಗಳು ಮುರಿದು ಬಿದ್ದಿವೆ.        ವಿಧ್ಯುತ್ ಕಂಬದ ಕೆಳೆಗಿದ್ದ ಹಸವೊಂದು ಸ್ಥಳದಲ್ಲೇ ಮೃತಪಟ್ಟಿದ್ದು, ರಾಮಪ್ಪ ಎಂಬುವವರಿಗೆ ಸೇರಿದ ಹಸು ಎನ್ನಲಾಗಿದ್ದು ಸುಮಾರು 45 ಸಾವಿರ ಮೂಕ ಜೀವಿ ಬಲಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಅಂದಾಜಿಸಿದ್ದಾರೆ.        ಸ್ಥಳಕ್ಕೆ ಬೆಸ್ಕಾಂ ಇಲಾಖೆಯ ಇಂಜಿನಿಯರ್, ಪಶು ವೈಧ್ಯಾಧಿಕಾರಿ ಡಾ ಜಗದೀಶ್ ಹಾಗೂ ಡಾ ಸೀಮಾ ಭೇಟಿ ನೀಡಿದ್ದು ಕೊಡಿಗೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಮಧುಗಿರಿ :       ಸತತ ಬರಗಾಲದಿಂದಾಗಿ ಈ ಬಾರಿ ರೈತರಿಗೆ ಬಹಳಷ್ಟು ತೊಂದರೆಯುಂಟಾಗಿದ್ದು, ಶೇ. 75 ರಷ್ಟು ಸಬ್ಸಿಡಿ ದರದಲ್ಲಿ 4 ಸಾವಿರ ಕೆಜಿ ಮೇವಿನ ಬೀಜ ವಿತರಿಸಲಾಗಿದೆ ಎಂದು ತುಮುಲ್ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.       ಪಟ್ಟಣದ ಹಿಂದೂಪುರ ರಸ್ತೆಯಲ್ಲಿರುವ ತುಮುಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿಯ ಬೇಸಿಗೆ ತೀವ್ರತೆಯಿಂದಾಗಿ ಮೇವಿನ ಅಭಾವ ಕಂಡು ಬಂದು ಹಾಲಿನ ಗುಣಮಟ್ಟದಲ್ಲಿ ಕುಂಟಿತಗೊಂಡಿದ್ದು, ಈಗ ಮತ್ತೆ ಮಳೆಗಾಲ ಆರಂಭವಾಗಿದ್ದು, ರೈತರು ಹೆಚ್ಚಿನ ಗುಣಮಟ್ಟದ ಹಾಲು ಪೂರೈಕೆಗೆ ಆದ್ಯತೆ ನೀಡಬೇಕು ಈ ನಿಟ್ಟಿನಲ್ಲಿ ರೈತರಿಗೆ ಮೇವಿನ ಬೀಜವನ್ನು ವಿತರಿಸಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.       ನನ್ನ ಅವಧಿಯಲ್ಲಿ ಒಕ್ಕೂಟವನ್ನು ಯಾರೂ ಮಾಡದಷ್ಟು ಅಭಿವೃದ್ದಿ ಮಾಡಲಾಗಿದ್ದು, ಹಿಂದೆ ನಷ್ಟದಲ್ಲಿದ್ದ ತುಮುಲ್ ಸಂಸ್ಥೆ ಇಂದು ಆರ್ಥಿಕ ಸಂಮೃದ್ದಿಯಾಗಿದೆ. ಒಕ್ಕೂಟ ಲಾಭದಲ್ಲಿದ್ದಾಗ ರೈತರ…

Read More

ತುಮಕೂರು :       ಕಾಮಗಾರಿ ನಿರ್ವಹಿಸಲು ಕಾರ್ಯಾದೇಶ ಪಡೆದ ಗುತ್ತಿಗೆದಾರನಿಗೆ ಸಂಬಂಧಪಟ್ಟ ಇಂಜಿನಿಯರ್ಗಳು ನಿಯಮದ ಪ್ರಕಾರ ತಕ್ಷಣವೇ ಕಾಮಗಾರಿ ಕೈಗೊಳ್ಳಬೇಕಾದ ಸ್ಥಳವನ್ನು ಅಧಿಕೃತವಾಗಿ ವಹಿಸುವುದಿಲ್ಲ. ಅದಕ್ಕೆ ಬದಲಾಗಿ ಮೊದಲು ಹೋಗಿ ಆ ವಾರ್ಡಿನ ಕಾಪೆರ್Çೀರೇಟರ್ರನ್ನು ಭೇಟಿಯಾಗಿ ಬನ್ನಿ ಎಂದು ಸಲಹೆ ಕೊಡುತ್ತಾರೆ.       ಗುತ್ತಿಗೆದಾರನು ಅವರನ್ನು ಭೇಟಿ ಆಗದಿದ್ದರೆ ಆ ಕಾಮಗಾರಿಯ ಚಾಲನೆಯೇ ಆಗುವುದಿಲ್ಲ. ವಿನಾಕಾರಣ ಗುತ್ತಿಗೆದಾರ ತೊಂದರೆಗೆ ಸಿಲುಕುತ್ತಾನೆ’’ ಎಂದು ತುಮಕೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ವೈ.ಆರ್.ವೇಣುಗೋಪಾಲ್ ಅವರು ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರ ಎದುರು ಗುತ್ತಿಗೆದಾರರ ಸಂಕಷ್ಟವನ್ನು ತೋಡಿಕೊಂಡಿದ್ದಾರೆ.       ತುಮಕೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ “ಪಾಲಿಕೆಯ ಗುತ್ತಿಗೆದಾರರ ಸಂಘ’’ದವರೊಡನೆ ಪಾಲಿಕೆ ಆಯುಕ್ತರು ನಡೆಸಿದ ಚರ್ಚಾ ಸಭೆಯಲ್ಲಿ ಅವರು ಗುತ್ತಿಗೆದಾರರು ಎದುರಿಸುತ್ತಿರುವ ಬಹುಮುಖ ಸಮಸ್ಯೆಗಳನ್ನು ವಿವರಿಸುತ್ತ ಈ ಸಂಗತಿಯ ಮೇಲೂ ಬೆಳಕು ಚೆಲ್ಲಿದ್ದಾರೆ.       ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಆಯುಕ್ತ ಭೂಬಾಲನ್ ಅವರು ಕಾರ್ಯಾದೇಶ…

Read More

ಕೊರಟಗೆರೆ :       ಇಲಾಖಾ ಅಧಿಕಾರಿಗಳು ತಾವು ಕಾರ್ಯನಿರ್ವಹಿಸುವ ಸ್ಥಳದಲ್ಲೆ ವಾಸವಿದ್ದು ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರಮಾಣಿಕವಾಗಿ ಅನುಷ್ಢಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.       ಅವರು ತಮ್ಮ ಸ್ವಕ್ಷೇತ್ರವಾದ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ತ್ರೈಮಾಸಿಕ ಕೆ.ಡಿ.ಪಿ ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಇಲಾಖಾ ಅಧಿಕಾರಿಗಳು ಪ್ರತಿನಿತ್ಯ ಬೆಂಗಳೂರು ಸೇರಿದಂತೆ ದೂರದ ಊರುಗಳಿಂದ ಬರುತ್ತಿದ್ದು ಕಛೇರಿಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅಧಿಕಾರಿಗಳು ಲಭ್ಯವಿಲ್ಲದೆ ಕೆಲಸ ಕಾರ್ಯಗಳು ಕುಂಟಿತವಾಗಿದ್ದು ಉಪಮುಖ್ಯಮಂತ್ರಿಗಳು ತಮ್ಮ ಕ್ಷೇತ್ರದಲ್ಲಿ ಇಲಾಖಾ ಅಧಿಕಾರಿಗಳನ್ನು ಹಿಡಿತದಲ್ಲಿ ಇಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದ್ದು ಇನ್ನು ಮುಂದೆ ಜನರಿಗೆ ಸ್ಪಂದಿಸಿ ಸರ್ಕಾರಿ ಕಾರ್ಯಕ್ರಮಗಳು ಸಮಪರ್ಕವಾಗಿ ಅನುಷ್ಠಾನಮಾಡುವುದರೊಂದಿಗೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.       ಲಕ್ಷಾಂತರ ರೂಗಳ ವೆಚ್ಚದಲ್ಲಿ ತಾಲೂಕು ಕೇಂದ್ರದಲ್ಲಿ ಸುಂದರವಾದ ತಾಲೂಕು ಕಛೇರಿ ಮತ್ತು ತಾ.ಪಂ. ಕಛೇರಿಗಳ ಕಟ್ಟಡವಿದ್ದು ಶುಚ್ಚಿಸ್ವವಿಲ್ಲದೆ ನೂತನ…

Read More

ಕೊರಟಗೆರೆ:       ಕಾರು ಚಾಲಕನ ಅಜಾಗರೂಕತೆ ಮತ್ತು ಅತಿವೇಗದ ಚಾಲನೆಯಿಂದ ಆಹಾರಕ್ಕಾಗಿ ಗ್ರಾಮಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ಡಿಕ್ಕಿ ಹೊಡೆದು, ಚಿರತೆಯ ತಲೆ, ಹೊಟ್ಟೆ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿ ಚಿರತೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಘಟನೆ ಸೋಮವಾರ ನಡೆದಿದೆ.       ಊರ್ಡಿಗೆರೆ ಸಮೀಪದ ದೇವರಾಯನದುರ್ಗ ಅರಣ್ಯ ಪ್ರದೇಶದಿಂದ ಎಲೆರಾಂಪುರ ಗ್ರಾಪಂ ಸಮೀಪದ ಹೊಸಪಾಳ್ಯದ ಕಡೆಗೆ ಆಹಾರ ಅರಸಿ ಬಂದಿರುವ ಚಿರತೆ ಭಾನುವಾರ ರಾತ್ರಿ ರಸ್ತೆ ದಾಟುವ ವೇಳೆಯಲ್ಲಿ ಅತಿ ವೇಗವಾಗಿ ಬಂದಿರುವ ಕಾರಿನಿಂದ ಅಪಘಾತವಾಗಿದೆ. ಅಪಘಾತ ನಡೆದ ಕೂಡಲೆ ತಿರುಗಿಯೂ ಸಹ ನೋಡದೆ ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾರೆ. ಹೊಸಪಾಳ್ಯಕ್ಕೆ ತೆರಳುವ ವೇಳೆ ಯುವಕರಿಗೆ ಸೋಮವಾರ ಮುಂಜಾನೆ ಚಿರತೆಯ ದರ್ಶನವಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿಯೇ ಚಿರತೆಗೆ ಅಪಘಾತವಾಗಿ ರಸ್ತೆ ಬದಿಯ ಬೇಲಿಗೆ ಬಿದ್ದು ಹಾರಾಟ ಚೀರಾಟ ನಡೆಸಿದೆ.        ಬೇಲಿಯಲ್ಲಿನ…

Read More

ತುಮಕೂರು:       ಶಾಸಕದ್ವಯರಾದ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸತ್ಯವೇ ಆಗಿದ್ದರೆ, ಸದ್ಯದಲ್ಲಿರುವ ಸಂಖ್ಯಾಬಲದಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದರು.       ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬೆಳಿಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಅವರು ಆನಂದ್‍ಸಿಂಗ್ ಹಾಗೂ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಸುದ್ದಿ ಇದೆ. ಆದರೆ ಇವರಿಬ್ಬರ ರಾಜೀನಾಮೆಯನ್ನು ಸ್ಪೀಕರ್ ಅವರು ಇನ್ನೂ ಸ್ಪಷ್ಟಪಡಿಸಿಲ್ಲ. ಒಂದು ವೇಳೆ ಅವರು ರಾಜೀನಾಮೆ ನೀಡಿರುವುದು ಸತ್ಯವಾಗಿದ್ದರೆ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆಂಬ ಬಗ್ಗೆ ತಮಗೆ ಮಾಹಿತಿಯಿಲ್ಲ. ಇದೇ ಜುಲೈ 12 ರಿಂದ ಅಧಿವೇಶನ ನಡೆಸಲು ಈಗಾಗಲೇ ತೀರ್ಮಾನಿಸಿ ಘೋಷಿಸಲಾಗಿದ್ದು, ರಾಜ್ಯಪಾಲರೂ ಸಹ ಈ ನಿರ್ಣಯಕ್ಕೆ ಅಂಕಿತ ಹಾಕಿರುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆ…

Read More

 ತುಮಕೂರು :       ದ್ವಿಚಕ್ರ ವಾಹನದಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಗಾಂಜಾ ಮಾರಾಟ ಮಾಡುತ್ತಿರುವಾಗ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾರೆ.        ನಗರದ ಮಾರುತಿ ಟಾಕೀಸ್ ಮತ್ತು ಟಿ.ಹೆಚ್.ಎಸ್. ಆಸ್ಪತ್ರೆಯ ಪಕ್ಕದಲ್ಲಿರುವ ಕಾಂಪ್ಲೆಕ್ಸ್ ಮುಂಭಾಗದಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾಂಜಾ ಮಾರುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಸಿಪಿಐ ಚಂದ್ರಶೇಖರ್ ರವರು ದಾಳಿ ನಡೆಸಿ ಇಬ್ಬರು ಆರೋಪಿಗಳಾದ ಇರ್ಫಾನ್ ಮತ್ತು ಜಿತೇಂದ್ರ ರ ಬಳಿಯಿದ್ದ 2.5ಕೆ.ಜಿ.ಗಾಂಜಾ ಸಮೇತ ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಲಾಗಿದೆ.        ಆರೋಪಿಗಳ ಪತ್ತೆಗೆ ಶ್ರಮಿಸಿದ ಸಿಪಿಐ ಕೆ.ಆರ್. ಚಂದ್ರಶೇಖರ್, ಪಿಎಸ್‍ಐ ವಿಜಯಲಕ್ಷ್ಮಿ ಹಾಗೂ ಸಿಬ್ಬಂಧಿ ವರ್ಗವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿರುತ್ತಾರೆ.

Read More