Author: News Desk Benkiyabale

ಚಿಕ್ಕನಾಯಕನಹಳ್ಳಿ:       ಕರ್ನಾಟಕ ಒಂದು ಮಾಡಿದ ಭಾಗದಿಂದಲೇ ಇಂದು ವಿಭಜನೆ ಮಾತು ಕೇಳಿ ಬರುತ್ತಿದೆ. ಕನ್ನಡಿಗರೆಲ್ಲರೂ ಒಟ್ಟಾದರೆ ಮಾತ್ರ ಇಡೀ ಕರ್ನಾಟಕ ಉಳಿಯುತ್ತದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು.       ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ 63ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಭಿವೃದ್ದಿ ಹಾಗೂ ತಾರತಮ್ಯ ಹೆಸರಿನಲ್ಲಿ ಕರ್ನಾಟಕ ಒಡೆಯುವ ಮಾತುಗಳು ಸರಿಯಲ್ಲ, ಇಡೀ ಕರ್ನಾಟಕ-ಕನ್ನಡಿಗರು ಒಂದಾಗಿದ್ದರೆ ಮಾತ್ರ ಬೆಳವಣಿಗೆ ಕಾಣುತ್ತದೆ, 1956ರ ನವಂಬರ್ 1ರಂದು ಅನೇಕ ಕವಿಗಳು, ಹೋರಾಟಗಾರರ ಫಲವಾಗಿ ಹರಿದು ಹಂಚಿ ಹೋಗಿದ್ದ ಕನ್ನಡಿಗರನ್ನು ಒಗ್ಗೂಡಿಸಲಾಯಿತು, ಹೋರಾಟದ ಆಶಯದಂತೆ 1973ರ ನವಂಬರ್ 1ರಂದೇ ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡಿತು, ಇದರ ಸವಿ ನೆನಪಿಗಾಗಿಯೇ ಪ್ರತಿ ವರ್ಷ ನವಂಬರ್ ತಿಂಗಳು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದರು.       ಪ್ರತಿಯೊಬ್ಬ ಕನ್ನಡಿಗನು ಈ ನೆಲ, ಜಲದ ಅಭಿಮಾನ ಇಮ್ಮಡಿಸಿಕೊಳ್ಳಬೇಕು, ಸುದೀರ್ಘ ಇತಿಹಾಸವುಳ್ಳ ಕನ್ನಡ ಭಾಷೆ, ಕರ್ನಾಟಕದ ವೈಭವ ಮತ್ತೆ…

Read More

ದೆಹಲಿ:       ಭಾರತದ ನಂ.1 ಸುದ್ದಿ ಮತ್ತು ಪ್ರಾದೇಶಿಕ ಭಾಷೆಯ ಕಂಟೆಂಟ್ ಅಪ್ಲಿಕೇಷನ್ ಆಗಿರುವ ಡೇಲಿಹಂಟ್, ನೀಲ್ಸನ್ ಇಂಡಿಯಾ ಜತೆಗೂಡಿ ನಡೆಸಿರುವ ಪ್ರತಿಷ್ಠೆಯ “ಟ್ರಸ್ಟ್ ಆಫ್ ದಿ ನೇಷನ್” ಜಂಟಿ ರಾಜಕೀಯ ಸಮೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. https://twitter.com/DailyhuntApp/status/1057903796574175232       ಸಮೀಕ್ಷೆಯಲ್ಲಿ ಮೋದಿಯವರ ಮೇಲೆ ಭಾರತದ ನಂಬಿಕೆ ಅವ್ಯಾಹತವಾಗಿದೆ. ಪ್ರಾಮಾಣಿಕ, ಬಲಿಷ್ಠ ಮತ್ತು ನಿರ್ಣಾಯಕ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ. ಮೋದಿಯವರಿಗೆ ಎರಡನೇ ಅವಕಾಶ ನೀಡಬೇಕು, ಅವರು ಭವ್ಯ ಭವಿತವ್ಯ ನೀಡಲಿದ್ದಾರೆ ಎಂದು ಶೇ.50ಕ್ಕಿಂತ ಹೆಚ್ಚು ಮತದಾರರು ನಂಬಿಕೆ ವ್ಯಕ್ತವಾಗಿದೆ.        ಸಮೀಕ್ಷೆಯನ್ನು ಭಾರತದ ಅತೀದೊಡ್ಡ ಮತ್ತು ಅತ್ಯಂತ ಕರಾರುವಾಕ್ಕಾದ, ಸ್ವತಂತ್ರ ರಾಜಕೀಯ ಡಿಜಿಟಲ್ ಸಮೀಕ್ಷೆ ಎಂದು ರಾಷ್ಟ್ರಾದ್ಯಂತ ಪರಿಗಣಿಸಲಾಗಿದ್ದು, ಭಾರತ ಮತ್ತು ವಿದೇಶದಿಂದ 54 ಲಕ್ಷಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ.       ಮೋದಿಯವರು ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನ 2014 ವರ್ಷಕ್ಕೆ ಹೋಲಿಸಿದರೆ ಶೇ.63ಕ್ಕಿಂತ ಹೆಚ್ಚು ಮತದಾರರು…

Read More

ಹಾಸನ:       ಹಾಸನದ ಐತಿಹಾಸಿಕ ಹಾಸನಾಂಬ ದೇವಾಲಯದ ಬಾಗಿಲನ್ನು ಇಂದು ಜಿಲ್ಲಾಡಳಿತ ತೆರೆದಿದೆ. ಇಂದಿನಿಂದ ಒಂಬತ್ತು ದಿನಗಳ (ನವೆಂಬರ್‌ 1 ರಿಂದ 9) ಕಾಲ ದೇವರ ದರ್ಶನ ದೊರಕಲಿದೆ.       ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ  ಹಾಸನಾಂಬ ದೇಗುಲದ ಬಾಗಿಲು ಇಂದು ಮಧ್ಯಾಹ್ನ ತೆರೆಯಲಾಗಿದ್ದು.ಒಂದು ವರ್ಷದ ಭಕ್ತರ ನಿರೀಕ್ಷೆ ಫಲಿಸಿದೆ. ಇಂದೂ ಕೂಡ ಬಾಗಿಲು ತೆರೆದಾಗ ಇಟ್ಟಿದ್ದ ನೈವೇದ್ಯ ಹಾಗೆ ಇತ್ತು ಜೊತೆಗೆ ದೀಪವು ಉರಿಯಯುತ್ತಲೇ ಇತ್ತು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.        ಮೊದಲ ದಿನವೇ ಹಾಸನಾಂಬೆ ದರ್ಶನ ಮಾಡಲು ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ದೇವಾಲಯದ ಬಳಿ ನೆರೆದಿದ್ದರು. ಪೊಲೀಸರ ಬಿಗಿ ಪಹರೆಯಲ್ಲಿ ಭಕ್ತಾದಿಗಳು ಹಾಸನಾಂಬೆ ದರ್ಶನ ಮಾಡಿದರು.

Read More

ರಾಮನಗರ:        ಚುನಾವಣೆಯ ಹೊಸ್ತಿಲಿನಲ್ಲಿಯೇ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಭಾರಿ ಆಘಾತ ಎದುರಾಗಿದೆ.       ಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇರುವಾಗಲೇ ರಾಮನಗರ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಮರಳಿ ಸೇರ್ಪಡೆಗೊಂಡು ಬಿಜೆಪಿ ಭಾರಿ ಮುಖಭಂಗ ಉಂಟುಮಾಡಿದ್ದಾರೆ. ಈ ಮೂಲಕ ಉಪ ಚುನಾವಣೆಗೆ ಭಾರಿ ಟ್ವಿಸ್ಟ್ ಸಿಕ್ಕಿದೆ.        ಬೆಂಗಳೂರಿನ ಸದಾಶಿವನಗರದಲ್ಲಿ ಸಂಸದ ಡಿ.ಕೆ.ಸುರೇಶ್​ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್  ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿದ್ದಾರೆ.        ಕಾಂಗ್ರೆಸ್‌ನ ಪ್ರಮುಖ ಮುಖಂಡನನ್ನೇ ಪಕ್ಷಕ್ಕೆ ಸೆಳೆದುಕೊಂಡು ಸಮ್ಮಿಶ್ರ ಸರ್ಕಾರದ ವಿರುದ್ಧದ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಲು ಬಿಜೆಪಿ ಪ್ರಯತ್ನಿಸಿತ್ತು. ಆದರೆ, ಈಗ ಅದರ ಬಾಣವೇ ಹಿಂದಿರುಗಿ ಬಂದು ಬಿಜೆಪಿಗೆ ತಗುಲಿದೆ.

Read More

ಬೆಂಗಳೂರು:         ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭದ ಮೇಲೆ ಚುನಾವಣಾ ನೀತಿ ಸಂಹಿತೆ ಕರಿನೆರಳು ಬಿದ್ದಿದ್ದು, ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯನ್ನು ಮುಂದೂಡಲಾಗಿದೆ.       ನಾಳೆ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಬೇಕಿತ್ತು. ಆದರೆ, ಐದು ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರಶಸ್ತಿ ಘೋಷಣೆ ರದ್ದು ಪಡಿಸಲಾಗಿದೆ.        2018 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರಕಟವಾಗಬೇಕಿತ್ತು. ಮಂಡ್ಯ, ರಾಮನಗರ, ಬಳ್ಳಾರಿ, ಬಾಗಲಕೋಟೆ, ಶಿವಮೊಗ್ಗ ಸೇರಿದಂತೆ ಒಟ್ಟು ಐದು ಕಡೆ ಉಪ ಚುನಾವಣೆಗಳು ನಡೆಯಲಿದೆ.ಚುನಾವಣೆ ಮುಗಿದ  ನಂತರ ನವೆಂಬರ್ 3ರ ಬಳಿಕ ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Read More

 ತುಮಕೂರು:         ತುಮಕೂರಿನ ಮಾಜಿ ಮೇಯರ್ ರವಿ ಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಧುಗಿರಿ ಮಲ್ಲೇಶ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.       ತುಮಕೂರು ತಾಲೂಕಿನ ಬೆಳಧರ ಬಳಿ ಪೈರಿಂಗ್ ನಡೆದಿದೆ. ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಮುಖ ಆರೋಪಿಯಾಗಿರುವ ಮಧುಗಿರಿ ಮಲ್ಲೇಶ್ ತಾಲೂಕಿನ‌ ಬೆಳಧರದಲ್ಲಿ‌ ನಸುಕಿನ ಜಾವ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ  ಡಿವೈಎಸ್ಪಿ ನಾಗರಾಜು, ಆರೋಪಿ ಕಾಲಿಗೆ ಶೂಟ್ ಮಾಡಿ ಬಂಧಿಸಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಕಾಲಿಗೆ ಗುಂಡೇಟು ತಗುಲಿರುವ ಮಲ್ಲೇಶ್‍‍‍‍‍ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.       ಕಳೆದ ತಿಂಗಳೂ ತುಮಕೂರಿನ ಹೊರವಲಯದಲ್ಲಿ ತುಮಕೂರಿನ ಮಾಜಿ ಮೇಯರ್ ರವಿ ಕುಮಾರ್ ಅಲಿಯಾಸ್ ಗಡ್ಡ ರವಿಯನ್ನು ಬೆಳಗಿನ ಜಾವ ವಾಕಿಂಗ್ ಗೆ ಹೋಗಿದ್ದಾಗ ಹಾಲಿನ ವಾಹನದಲ್ಲಿ ಬಂದಿದ್ದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದರು.ರವಿ ಹತ್ಯೆಯ ಬಳಿಕ ಬೆಟ್ಟ-ಗುಡ್ಡಗಳಲ್ಲಿ ಅಡಗಿಕೊಂಡು ಪೊಲೀಸರಿಗೆ…

Read More

ಬೆಂಗಳೂರು:       ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ.       ಬೆಂಗಳೂರಿನ ಚುನಾವಣಾ ಆಯೋಗ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಬಳ್ಳಾರಿ, ಮಂಡ್ಯ, ಶಿವಮೊಗ್ಗ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ಸಿದ್ಧತೆ ಪೂರ್ಣ ಗೊಂಡಿದೆ.        ರಾಜ್ಯದ ಎರಡು ವಿಧಾನಸಭೆ, ಮೂರು ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 39 ಕೇಂದ್ರಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನವೆಂಬರ್ 3ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು. 

Read More

ರಾಯ್ಪುರ:        ಅಮ್ಮ ಐ ಲವ್ ಯೂ, ಈ ದಾಳಿಯಲ್ಲಿ ನಾನು ಸಾಯಬಹುದು ಧೈರ್ಯವಾಗಿರು ಎಂದು ನಕ್ಸಲರು ದಾಳಿ ನಡೆಸುವ ವೇಳೆ ದೂರದರ್ಶನದ ಪತ್ರಕರ್ತ ಮೊರ್ ಮುಕ್ತ ಶರ್ಮಾ ತನ್ನ ಹೆತ್ತ ತಾಯಿಗೆ ರವಾನಿಸಿದ ಸಂದೇಶವಿದು.       ಛತ್ತೀಸ್‌ಗಡದ ದಂತೇವಾಡದಲ್ಲಿ ನಕ್ಸಲರು ನಡೆಸಿದ ಭಯಾನದ ದಾಳಿಯನ್ನು ಕಣ್ಣಾರೆ ನೋಡಿದ ದೂರದರ್ಶನದ ಪತ್ರಕರ್ತ ಸಾವು ಕಣ್ಣ ಮುಂದೆ ಇದ್ದರೂ ವಿಡಿಯೋ ಮಾಡಿ, ತಮ್ಮ ಅನುಭವ ಹಾಗೂ ತಾಯಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.       ನಕ್ಸಲರ ಬಳಿ ಗ್ರೆೆನೇಡ್, ಸ್ಫೋಟಕ ಸಾಮಾಗ್ರಿಗಳಿವೆ. ನಾವು ನಮ್ಮ ವಾಹಿನಿಯ ಲೋಗೋ ತೋರಿಸುವ ಪ್ರಯತ್ನ ಮಾಡಿದ್ದೆವು. ಆದರೆ, ಕ್ಷಣ ಕ್ಷಣಕ್ಕೂ ಗುಂಡಿನ ದಾಳಿ ಹೆಚ್ಚಾಗುತ್ತಲೇ ಹೋಯಿತು. ಅಷ್ಟೇ ಅಲ್ಲ. ನನಗೆ ಗುಂಡೇಟು ಬಿದ್ದಿದೆ. ನಾನು ಈ ದಾಳಿಯಲ್ಲಿ ಸಾಯಲೂ ಬಹುದು. ನನಗೆ ನನ್ನ ತಾಯಿ ಎಂದರೆ, ಬಹಳ ಇಷ್ಟ. ಅಮ್ಮ ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ. ದಾಳಿಯಲ್ಲಿ ನಾನು ಬದುಕದೇ…

Read More

 ತುಮಕೂರು:       ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 36 ಮಂದಿ ಸಾಧಕರನ್ನು ಪ್ರಸಕ್ತ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಪ್ರಶಸ್ತಿಯನ್ನು ನವೆಂಬರ್ 1ರಂದು ಸಂಜೆ 4 ಗಂಟೆಗೆ ಗಾಜಿನಮನೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ರಂಗಭೂಮಿ:-       ಕ್ಷೇತ್ರದ ಸಾಧನೆಗಾಗಿ ತುಮಕೂರಿನ ಕುಂಭಿ ನರಸಯ್ಯ, ಜಿ.ನಂಜಪ್ಪ ಹಾಗೂ ಜಿ. ಮುರಳಿಧರ (ಮೇಕಪ್), ಕೊರಟಗೆರೆಯ ಹೆಚ್. ನಾಗರಾಜಯ್ಯ ಹಾಗೂ ಎ.ಎನ್.ಚಂದ್ರಶೇಖರ್, ಗುಬ್ಬಿ ತಾಲ್ಲೂಕಿನ ರಂಗನಾಥಪ್ಪ, ತುರುವೇಕೆರೆಯ ರಂಗರಾಜು ಪತ್ರಿಕಾರಂಗ :- ಪ್ರಜಾಪ್ರಗತಿ ದಿನಪತ್ರಿಕೆಯ ಹಿರಿಯ ವರದಿಗಾರ ಆರ್.ಎಸ್.ಐಯ್ಯರ್, ವಿಶಾಲಪ್ರಭ ದಿನ ಪತ್ರಿಕೆ ಸಂಪಾದಕ ವಿ.ವೆಂಕಟೇಶ್ ಸೊಗಡು, ಮಧುಗಿರಿಯ ಬಂಡಿಚೌಡಯ್ಯ, ಚಿಕ್ಕನಾಯಕನಹಳ್ಳಿ ಕನ್ನಡಪ್ರಭ ವರದಿಗಾರ ಹೆಚ್. ಸಿದ್ಧರಾಮಯ್ಯ ಸಾಹಿತ್ಯ ಕ್ಷೇತ್ರ :- ತುಮಕೂರಿನ ನಾಗರತ್ನ ಚಂದ್ರಪ್ಪ, ಕೆ.ಡಬ್ಲ್ಯೂ. ಅಬ್ದುಲ್ ಹಫೀಝ್ (ಅಮರ್ ಹಫೀಝ್), ಡಾ. ಬೂದಾಳ್ ನಟರಾಜ್, ಡಾ. ಜಿ.ವಿ.ಆನಂದಮೂರ್ತಿ ಸಮಾಜ ಸೇವೆ…

Read More

ಕೊರಟಗೆರೆ:       ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ತೋಟದ ಮನೆಯ ಮುಂದಿನ ನೀಲಗಿರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.       ತಾಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಸಿರಿಗೋನಹಳ್ಳಿ ತಾಂಡದ ವಾಸಿಯಾದ ಶ್ಯಾಮನಾಯ್ಕನ ಮಗನಾದ ಪರಮೇಶನಾಯ್ಕ(27) ಆತ್ಮಹತ್ಯೆಗೆ ಶರಣಾದ ದುರ್ದೈವಿ.       ಮೃತ ಪರಮೇಶ್ ತನ್ನ ಕುಟುಂಬದಲ್ಲಿ ಕಳೆದ ನಾಲ್ಕೈದು ವಾರಗಳಿಂದ ಕೌಟುಂಬಿಕ ಕಲಹ ಉಂಟಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಮನೆಯ ಮುಂಭಾಗದ ನಿಲಗಿರಿ ಮರಕ್ಕೆ ಹಗ್ಗ ಹಾಕಿಕೊಂಡು ಆತ್ಮಹತ್ಯೆ ಹಾಕಿಕೊಂಡಿರುವ ಹಿನ್ನಲೆಯ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.         ಸ್ಥಳಕ್ಕೆ ಸಿಪಿಐ ಮುನಿರಾಜು ಮತ್ತು ಪಿಎಸೈ ಮಂಜುನಾಥ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ತಾತನ ದೂರಿನ ಮೇಲೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ಸಾವಿನ ಪ್ರಕರಣ ದಾಖಲಾ

Read More