ತುಮಕೂರು: ನಗರದ ಬಾಳನಕಟ್ಟೆ ಪ್ರದೇಶದಲ್ಲಿರುವ ಪತ್ರಿಕಾಭವನಕ್ಕೆ ಪಾಲಿಕೆ ಆಯುಕ್ತ ಭೂಬಾಲನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅವರು ಪತ್ರಿಕಾಭವನದ ಸುತ್ತಮುತ್ತ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಭವನದ ಮುಂದೆ ಖಾಸಗಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ತೊಂದರೆಯುಂಟಾಗುತ್ತಿದ್ದು, ಕ್ರಮ ಕೈಗೊಳ್ಳಬೇಕೆಂದು ಆಯುಕ್ತರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ನಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಭೇಟಿ ನೀಡಿ ಆವರಣವನ್ನು ಪರಿಶೀಲಿಸಿದರು. ಆವರಣದ ಮುಂದಿರುವ ಚರಂಡಿಯಲ್ಲಿ ಶೌಚಾಲಯದ ನೀರು ಹರಿಯುತ್ತಿರುವುದರಿಂದ ದುರ್ವಾಸನೆ ಬರುತ್ತಿದ್ದು, ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ವಾರ್ತಾ ಸಹಾಯಕಿ ರೂಪಕಲಾ ಅವರು ಮನವಿ ಮಾಡಿದಾಗ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಹಾಗೂ ಮರಳು ದಂಧೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಜನಪ್ರತಿನಿಧಿಗಳಿಂದ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಗಳಿಗೆ ಸೇರಿದ ಭೂಪ್ರದೇಶವನ್ನು ಕೂಡಲೇ ಜಂಟಿ ಸರ್ವೆಗೆ ಕ್ರಮ ಕೈಗೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಅವರು ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪರವಾನಗಿ ಇಲ್ಲದೆ ಅನಧಿಕೃತವಾಗಿ ನಡೆಸುವ ಕ್ರಷರ್ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಗುತ್ತಿಗೆ ಪಡೆದ ಕ್ವಾರಿಗಳು ಸ್ಥಳಾಂತರಗೊಂಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ವಾಹನಗಳಲ್ಲಿ ಜಲ್ಲಿ, ಮರಳು, ಅಲಂಕಾರಿಕ ಶಿಲೆ ಮತ್ತಿತರ ಖನಿಜ ಹಾಗೂ ಗಣಿಗಾರಿಕೆ ಸರಕುಗಳನ್ನು ನಿಗಧಿತ ಭಾರಕ್ಕಿಂತ ಅತಿಯಾಗಿ ಹೇರಿಕೊಂಡು ಸಾಗಿಸುವಂತಿಲ್ಲ ಎಂದು ತಿಳಿಸಿದರಲ್ಲದೆ, ಗಣಿಬಾಧಿತ ಪ್ರದೇಶಗಳಿಗೆ ಸರ್ಕಾರ ಮೀಸಲಿಟ್ಟಿರುವ ಡಿಎಂಎಫ್(ಜಿಲ್ಲಾ ಗಣಿಗಾರಿಕೆ ನಿಧಿ) ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ…
ಕೊರಟಗೆರೆ: ಅಪರಿಚಿತ ಯುವತಿಗೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿ ಗುರುತು ಸೀಗದ ರೀತಿಯಲ್ಲಿ ಕೊಲೆ ಮಾಡಿರುವ ಘಟನೆ ತುಂಬುಗಾನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಭಾನುವಾರ ಮುಂಜಾನೆ ರೈತ ತನ್ನ ಜಮೀನಿಗೆ ತೆರಳುವ ವೇಳೆ ಶವ ಪತ್ತೆಯಾಗಿದ್ದು, ತಾಲೂಕಿನ ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ತುಂಬಗಾನಹಳ್ಳಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಬೇರೆ ಕಡೆ ಕೊಲೆ ಮಾಡಿ ಗುರುತು ಸೀಗದೇ ಇರಲಿ ಎಂದು ದೂರದ ಅರಣ್ಯದಲ್ಲಿ ಯುವತಿಯ ಶವ ತಂದು ಸೀಮೆಎಣ್ಣೆಯಿಂದ ಸಂಪೂರ್ಣವಾಗಿ ಸುಟ್ಟು ಹಾಕಿದ್ದಾರೆ. ಕೊಲೆಯಾದ ಯುವತಿಗೆ ಸುಮಾರು 22ರಿಂದ 25ವರ್ಷ ವಯಸ್ಸಾಗಿದೆ. ಕಾಲಿಗೆ ಹೊಸ ಚಪ್ಪಲಿ, ಕೈತುಂಬ ಹಸಿರು ಬಳೆ ಮತ್ತು ಚೂಡಿದಾರ ಹಾಕಿದ್ದಾಳೆ. ಕುತ್ತಿಗೆ, ಮುಖ, ತಲೆ ಮತ್ತು ದೇಹ ಗುರುತು ಸೀಗದಂತಾಗಿದೆ. ಹಾಕಿ ಮೇಲ್ನೋಟಕ್ಕೆ ಪ್ರೀತಿಯ ಹತಾಶೆಯಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ಶವ ಸಂಪೂರ್ಣ ಸುಟ್ಟು ಹೋಗಿದೆ.…
ತುಮಕೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ನಿಗಧಿಪಡಿಸಲಾಗಿದೆ ಎಂದು ತುಮಕೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ. ವಿ.ವಿ.ಯಲ್ಲಿ 2011-12 ಹಾಗೂ 2012-13ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಹಾಗೂ 2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಎ/ಬಿ.ಕಾಂ, ಎಂ.ಎ/ಎಂ.ಕಾಂ ವಿದ್ಯಾರ್ಥಿಗಳು 200 ರೂ.ಗಳ ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಜೂನ್ 29 ಅಂತಿಮ ದಿನವಾಗಿರುತ್ತದೆ. ಅದೇ ರೀತಿ 2018-19ನೇ ಸಾಲಿನಲ್ಲಿ ಪ್ರವೇಶ ಪಡೆದ ಎಂಬಿಎ ವಿದ್ಯಾರ್ಥಿಗಳಿಗೆ (ಪ್ರಥಮ ಸೆಮಿಸ್ಟರ್)ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಜುಲೈ 6 ಕಡೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ www.ksoumysore.karnataka.gov.in ಅಥವಾ ದೂರವಾಣಿ ಸಂಖ್ಯೆ 0821-2519947/2515405/2519948/2519942ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ತುರುವೇಕೆರೆ: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗ್ರಾಮವಾಸ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಬಿಜೆಪಿಯ ಕ್ರಮವನ್ನು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಖಂಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಗ್ರಾಮವಾಸ್ತವ್ಯದಿಂದ ಜನರ ಸಮಸ್ಯೆಗಳು ದೂರಾಗುತ್ತವೆ ಅಲ್ಲದೇ ಗ್ರಾಮಗಳ ಅಭಿವೃದ್ಧಿಯಾಗುತ್ತದೆ ಎಂಬ ನಂಬಿಕೆಯಿಂದ ಗ್ರಾಮವಾಸ್ತವ್ಯ ಮಾಡುತ್ತಿರುವ ಕುಮಾರಸ್ವಾಮಿಯವರ ಕಾರ್ಯಕ್ರಮಕ್ಕೆ ಬಿಜೆಪಿಯವರು ವಿನಾಕಾರಣ ತೊಂದರೆಕೊಡುತ್ತಿದ್ದಾರೆ. ಈ ಗ್ರಾಮವಾಸ್ತವ್ಯ ಮುಂದುವರೆದಲ್ಲಿ ಕುಮಾರಸ್ವಾಮಿಯವರ ವರ್ಚಸ್ಸು ಹೆಚ್ಚುತ್ತದೆ ಅಲ್ಲದೇ ಜನರ ಮನಸ್ಸಿನಲ್ಲಿ ಕುಮಾರಸ್ವಾಮಿ ಉಳಿದುಬಿಡುತ್ತಾರೆ ಎಂಬ ಭಯದಿಂದ ಬಿಜೆಪಿಯವರು ಸಣ್ಣತನಕ್ಕೆ ಮುಂದಾಗಿದ್ದಾರೆ. ಇದೇ ಪ್ರವೃತ್ತಿಯನ್ನು ಬಿಜೆಪಿಯವರು ಮುಂದುವರೆಸಿದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯವರಿಗೂ ತಕ್ಕ ಪಾಠ ಕಲಿಸಬೇಕಾದೀತು ಎಂದು ಎಚ್ಚರಿಸಿದರು. ಜನ ಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸಿರುವ ಏಕೈಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯಾಗಿದ್ದಾರೆ. ಇಂತಹ ಉತ್ತಮ ಕಾರ್ಯ ಮಾಡುತ್ತಿರುವ ಮುಖ್ಯಮಂತ್ರಿಗಳಿಗೆ ಸಹಕಾರ ನೀಡುವುದನ್ನು ಬಿಟ್ಟು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವುದು ಅವರ ಕೀಳು ಅಭಿರುಚಿಗೆ ಸಾಕ್ಷಿಯಾಗಿದೆ. ಇಂತಹ ಕೃತ್ಯಕ್ಕೆ ಕೈ ಹಾಕಬಾರದೆಂದು…
ಮಧುಗಿರಿ : ಸಾರ್ವಜನಿಕರು ನೀಡುವ ಒಂದು ಅರ್ಜಿಯು ಕೇವಲ ಕಾಗದವಲ್ಲ. ಅದರಲ್ಲಿ ನೊಂದವರ ಬದುಕು ಅಡಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಕಿವಿಮಾತು ಹೇಳಿದರು. ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ದೊಡ್ಡದಾಳವಟ್ಟ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಹೋಬಳಿ ಮಟ್ಟದ ಪ್ರಥಮ ಜನಸ್ಪಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಧಿಕಾರಿಗಳು ಕೇವಲ ಅರ್ಜಿಯನ್ನು ಪಡೆದರಷ್ಟೆ ಸಾಲದು. ಅವರ ಸಮಸ್ಯೆಗೆ ಮುಂದಿನ ಜನಸ್ಪಂದನೆ ಕಾರ್ಯಕ್ರಮದ ಹೊತ್ತಿಗೆ ಸ್ಪಷ್ಟ ಪರಿಹಾರ ಕೊಡಿಸಬೇಕು. ಹಾಗೂ ಅಧಿಕಾರಿಗಳು ಈ ಕಾರ್ಯಕ್ರಮದ ಅರ್ಜಿಗೆ ಪ್ರತ್ಯೇಕ ಕಡತವನ್ನು ಇಡಬೇಕು. ಇಂದಿನ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಯ ಸಮಸ್ಯೆಗಳು ಇದ್ದು, ಖಾತೆ ಬದಲಾವಣೆ, ಪವತಿ ಖಾತೆ ಹಾಗೂ ಪಹಣಿ ತಿದ್ದುಪಡಿಯನ್ನು ಮಾಡಬೇಕಿದ್ದು, ಹಲವಾರು ವರ್ಷಗಳಿಂದ ಬಾಕಿಯಿದೆ. ಹಾಗೂ ಸಾಮಾನ್ಯ ವರ್ಗದ ಮನೆಗಳಿಗೆ ಬೇಡಿಕೆಯಿದ್ದು, ಹೆಚ್ಚುವರಿ 700 ಮನೆಗಳು ಹಾಗೂ ಅಂಬೇಡ್ಕರ್ ವಸತಿ ನಿಗಮದಿಂದ 1 ಸಾವಿರ ಮನೆಗಳನ್ನು…
ತುಮಕೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಸಾರ್ವಜನಿಕರಲ್ಲಿ ಜನ ಜಾಗೃತಿ ಮೂಡಿಸಲು ಸಂಚರಿಸಲಿರುವ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ತುಮಕೂರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರು ತಾಲ್ಲೂಕು ಮಟ್ಟದ ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಹಸಿರು ನಿಶಾನೆ ತೋರಿಸವ ಮೂಲಕ ಚಾಲನೆ ನೀಡಿದರು. ಈ ಜಾಗೃತಿ ರಥವು ತುಮಕೂರು ತಾಲ್ಲೂಕಿನ 41 ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕುರಿತ ಮಾಹಿತಿ ನೀಡಲಿದೆ. ನಂತರ ಮಾತನಾಡಿದ ಶುಭಾ ಕಲ್ಯಾಣ ಅವರು ಈ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ವಿವರ, ಗಂಡು ಮತ್ತು ಹೆಣ್ಣಿಗೆ 249/-ರೂ.ಗಳ ಸಮಾನ ಕೂಲಿ ನೀಡುವ ಕುರಿತು ಮಾಹಿತಿ ನೀಡಿದರು. ಪ್ರತಿಯೊಬ್ಬರೂ ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು. ತಮಗೆ…
ತುಮಕೂರು : ನಾವೆಲ್ಲಾ ಉಸಿರಾಡಲು ಹಸಿರು ಗಿಡ-ಮರಗಳು ಬೇಕೇ ಬೇಕು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ಎಲ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬರಮುಕ್ತ ಕರ್ನಾಟಕ ಆಂದೋಲನಾ ಸಮಿತಿ, ಮರಡಿ ರಂಗನಾಥಸ್ವಾಮಿ ಧಾರ್ಮಿಕ ಮತ್ತು ದತ್ತಿ ಸಂಸ್ಥೆ, ಶಿರಾ ಲೋಹಿಯಾ ಸಮತಾ ವಿದ್ಯಾಲಯ, ಜಿಲ್ಲಾ ಹಾಗೂ ಶಿರಾ ತಾಲೂಕು ವಕೀಲರ ಸಂಘಗಳ ಸಹಯೋಗದಲ್ಲಿಂದು ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಮರಡೀಗುಡ್ಡ ಗ್ರಾಮದಲ್ಲಿ “ಸಹಸ್ರ ಸಸಿ ನೆಡುವ ಹಾಗೂ ಏಳು ಸಹಸ್ರ ಬೀಜದುಂಡೆ ನೆಡುವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಜೀವಿಯ ಅಳಿವು-ಉಳಿವು ಹಸಿರಿನ ಮೇಲೆ ನಿಂತಿದೆ. ಉಸಿರಾಡುವ ಗಾಳಿ, ತಿನ್ನುವ ಆಹಾರಕ್ಕಾಗಿ ಮರ ಗಿಡಗಳು ಬೇಕೇ ಬೇಕು. ಆಧುನಿಕ ಜಗತ್ತಿನಲ್ಲಿ…
ತುಮಕೂರು : ಕುಣಿಗಲ್ ತಾಲ್ಲೂಕಿನ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇನೋವಾ ಕಾರೊಂದು ರಸ್ತೆ ವಿಭಜಕ ದಾಟಿ ಪಲ್ಟಿಯಾದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಡಿಯೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು, ವಿಭಜಕ ದಾಟಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 8 ಮಂದಿಯಲ್ಲಿ 6 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಮಹಿಳೆ, ಮಗು ಬಿಟ್ಟು ಉಳಿದವರೆಲ್ಲ ಮೃತಪಟ್ಟಿದ್ದಾರೆ. ಅಮೃತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅತಿವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
ಮಧುಗಿರಿ : ದ್ವಿಚಕ್ರ ವಾಹನವೊಂದು ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಗನಿಗೆ ಗಂಬೀರ ಗಾಯಗಳಾದ ಘಟನೆ ಪಟ್ಟಣದ ಕಸಬಾ ವ್ಯಾಪ್ತಿಯ ಡಿ.ವಿ. ಹಳ್ಳಿ ಬಳಿ ನಡೆದಿದೆ. ಸಿರಾ ಪಟ್ಟಣದ ವಾಸಿ ರತ್ನಮ್ಮ(55) ಸ್ಥಳದಲ್ಲೇ ಮೃತಪಟ್ಟವರು. ಮಗ ಗಿರೀಶ್ ಗೆ ಗಂಬೀರ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮಗ ಇಬ್ಬರು ಸಿರಾ ದಿಂದ ಮಧುಗಿರಿಗೆ ಬರುವಾಗ ಘಟನೆ ನಡೆದಿದ್ದು, ಮಳೆ ಬರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನ ಆಯತಪ್ಪಿ ರಸ್ತೆ ಬದಿಗೆ ಜಾರಿ ಬಿದ್ದಾಗ ರಸ್ತೆಯ ಬದಿಯ ಕಲ್ಲಿಗೆ ಹೊಡೆದಿದ್ದರಿಂದ ಘಟನೆ ನಡೆದಿದೆ.ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











