Author: News Desk Benkiyabale

 ತುಮಕೂರು:       ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ತುಮಕೂರು ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ಗೋಶಾಲೆ ತೆರೆಯಲಾಗಿದೆ.       ಮಧುಗಿರಿ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಹಿಪ್ಪೆ ತೋಪು,: ತಿಪಟೂರು ತಾಲ್ಲೂಕು ಹೊನ್ನವಳ್ಳಿ ಹೋಬಳಿಯ ಬಾಗವಾಳದ ಮುನಿಯಪ್ಪನ ಆಲದಮರ: ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣ: ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ಗಂಡಿಹಳ್ಳಿ ಮಠ: ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಚಿಕ್ಕತೊಟ್ಲುಕೆರೆ ಅಟವಿಸ್ವಾಮಿ ಮಠ: ಪಾವಗಡ ತಾಲ್ಲೂಕು ನಿಡಗಲ್ ಹೋಬಳಿಯ ವದನಕಲ್ಲು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣ: ತುರುವೇಕೆರೆ ತಾಲ್ಲೂಕು ದಬ್ಬೇಘಟ್ಟ ಹೋಬಳಿಯ ಅರೆಮಲ್ಲೇನಹಳ್ಳಿ ರಂಗನಾಥಸ್ವಾಮಿ ದೇವಸ್ಥಾನದ ಆವರಣ: ಚಿಕ್ಕನಾಯನಕಹಳ್ಳಿ ತಾಲ್ಲೂಕು ಶೆಟ್ಟಿಕೆರೆ ಹೋಬಳಿಯ ಗೋಡೆಕೆರೆ ಶ್ರೀಗುರು ಸಿದ್ದರಾಮೇಶ್ವರ ದೇವಸ್ಥಾನದ ಹಿಂಭಾಗ: ಕುಣಿಗಲ್ ತಾಲ್ಲೂಕು ಹುತ್ರಿದುರ್ಗ ಹೋಬಳಿಯ ಬೆಟ್ಟದಳ್ಳಿ ಮಠದ ಆವರಣದಲ್ಲಿ ಗೋಶಾಲೆಗಳನ್ನು ಆರಂಭಿಸಲಾಗಿದೆ.       ಮೇವಿನ ಕೊರತೆಯಿರುವ ಜಿಲ್ಲೆಯ ರೈತಬಾಂಧವರು ತಮ್ಮ ಜಾನುವಾರುಗಳನ್ನು ಗೋಶಾಲೆಗೆ…

Read More

 ತುಮಕೂರು:       ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, 1 ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ಸ್ ಹಾಗೂ 7 ಕಾಮಗಾರಿಗಳ ಗುತ್ತಿಗೆದಾರರಿಗೆ ಒಟ್ಟು 65,09,553 ರೂ.ಗಳ ದಂಡ ವಿಧಿಸಲಾಗಿದೆ.        ತುಮಕೂರು ನಗರವನ್ನು ಸ್ಮಾರ್ಟ್ ನಗರವನ್ನಾಗಿಸುವ ನಿಟ್ಟಿನಲ್ಲಿ ನಗರದಲ್ಲಿ ಸ್ಮಾರ್ಟ್‍ಸಿಟಿ ಲಿಮಿಟೆಡ್ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ರವರು ಕಾಮಗಾರಿಗಳಿಗೆ ಸಂಬಂಧಿಸಿದ ನಕ್ಷೆ ಮತ್ತು ಇತರೆ ವಿವರಗಳನ್ನು ಸರಿಯಾದ ಸಮಯಕ್ಕೆ ನೀಡದೆ ಇರುವುದರಿಂದ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗುತ್ತಿದೆ ಎಂದು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪಾಲಿಕೆ ಆಯುಕ್ತ ಟಿ.ಭೂಬಾಲನ್ ತಿಳಿಸಿದ್ದಾರೆ.       ಸ್ಮಾರ್ಟ್‍ಸಿಟಿ ಪ್ರಾಜೆಕ್ಟ್ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ಹಾಗೂ ಕಾಮಗಾರಿಗಳ ಗುತ್ತಿಗೆದಾರರಿಗೆ ವಿಧಿಸಿರುವ ದಂಡದ ವಿವರ ಇಂತಿದೆ.         ಕೆ.ಆರ್. ಬಡಾವಣೆಯ ಬಸ್ ನಿಲ್ದಾಣದಿಂದ ರೂರಲ್ ಪೊಲೀಸ್ ಸ್ಟೇಷನ್ ವರೆಗಿನ ಫೀಲ್ಡ್ ಮಾರ್ಷಲ್ ಕಾರಿಯಪ್ಪ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆದಾರ ಶ್ರೀ ಶ್ರೀನಿವಾಸ ಕನ್ಸ್‍ಸ್ಟ್ರಕ್ಷನ್ಸ್…

Read More

ಪಾವಗಡ :       ಬಿಸಿಯೂಟ ಯೋಜನೆಯಲ್ಲಿ ವಸತಿನಿಲಯಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡದೇ ಮಕ್ಕಳ ಬಾಯಿಗೆ ಮಣ್ಣು ಹಾಕುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಶಾಸಕ ವೆಂಕಟರವಣಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.       ಶುಕ್ರವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರೆದಿದ್ದ ತಾಲ್ಲೂಕು ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಮಾತನಾಡುತ್ತಾ, ಶಾಲೆಗಳಲ್ಲಿನ ಬಿಸಿಯೂಟ ಯೋಜನೆಯಲ್ಲಿ, ಎಸ್.ಸಿ. ಎಸ್.ಟಿ. ಹಾಗೂ ಬಿ.ಸಿ.ಎಂ. ವಸತಿ ನಿಲಯಗಳಲ್ಲಿ ತರಕಾರಿ, ಎಣ್ಣೆ ಉಳಿಸಿಕೊಂಡು ಕಳಪೆ ಅಡುಗೆ ಮಾಡುವುದು ಕಂಡು ಬಂದಿದೆ. ಸಂಬಂಧಿಸಿದ ಅಕ್ಷರ ದಾಸೋಹ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಬಿ.ಇ.ಒ. ಸಿದ್ದಗಂಗಪ್ಪ, ಶಿವಣ್ಣ, ಮತ್ತು ಸುಬ್ಬರಾಯಗೆ ಎಚ್ಚರಿಕೆ ನೀಡಿದರು. ಅಲ್ಲದೇ ಪ್ರತಿನಿತ್ಯ ವಸತಿನಿಲಯಗಳಿಗೆ ಬೇಟಿ ನೀಡಿ ಮಕ್ಕಳ ಜೊತೆಯಲ್ಲಿ ಊಟ ಮಾಡಬೇಕೆಂದು ತಾಕೀತು ಮಾಡಿದರು. ಮೇವು ಬ್ಯಾಂಕ್‍ಗಳಲ್ಲಿ ಲೋಡ್ ಗಟ್ಟಲೆ ಹುಲ್ಲು ನೀಡುತ್ತಿದ್ದೀರ.. ಬಡ ರೈತರಿಗೆ ಅನ್ಯಾಯ ಮಾಡುತ್ತೀದ್ದಿರ ಎಂದು ಪಶು ವೈದ್ಯಾಧಿಕಾರಿ…

Read More

ಮಧುಗಿರಿ :        ಜನರ ರುದ್ರಭೂಮಿ ಸಂವಿಧಾನಬದ್ಧ ಮೂಲಭೂತ ಹಕ್ಕು. ಜಮೀನು ನೀಡುವವರಿದ್ದರೆ ಸಾರ್ವಜನಿಕ ರುದ್ರಭೂಮಿಗಾಗಿ ನಾನೇ ಹಣ ನೀಡುತ್ತೇನೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಭರವಸೆ ನೀಡಿದರು.       ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿಯಲ್ಲಿ ತಾಲೂಕು ಆಡಳಿತ ಹಾಗೂ ರೆಡ್ಡಿಹಳ್ಳಿ ಗ್ರಾ.ಪಂ.ವತಿಯಿಂದ ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೆಡ್ಡಿಹಳ್ಳಿ ಗ್ರಾಮಸ್ಥರು ನಮ್ಮೂರಿಗೆ ರುದ್ರಭೂಮಿಯಿಲ್ಲ ಎಂದು ಮನವಿ ನೀಡಿದಾಗ ಪರಿಶೀಲಿಸಲು ಕಂದಾಯಾಧಿಕಾರಿಗೆ ಸೂಚಿಸಿದರು. ಆದರೆ ಸುತ್ತಮುತ್ತ ಸರ್ಕಾರಿ ಜಮೀನು ಲಭ್ಯವಿಲ್ಲ ಎಂದಾಗ, ಖಾಸಗಿ ಜಮೀನು ನೀಡುವವರು ಇದ್ದರೆ ನಾನೇ ಹಣ ನೀಡುತ್ತೇನೆ ಎಂದು ಭರವಸೆ ನೀಡಿದರು. ತಾಲೂಕಿನಲ್ಲಿ ಸರಿ ಸುಮಾರು 10 ಸಾವಿರದಷ್ಟು ಮಾಶಾನದ ದೊರೆಯದ ಫಲಾನುಭವಿಗಳು ಇದ್ದಾರೆ. ಹಿಂದಿನವರು ಏನು ಮಾಡುತ್ತಿದ್ದರು ಎಂಬುದರ ಬಗ್ಗೆ ನಾನು ಚರ್ಚೆ ಮಾಡಲ್ಲ. ಬದಲಿಗೆ ತಾಲೂಕಿನೆಲ್ಲೆಡೆ ಕ್ಯೂಬಿಂಗ್ ಮಾಡಿಸಲಿದ್ದು, ಎಲ್ಲರಿಗೂ ಹಂತ ಹಂತವಾಗಿ ಮಾಶಾಸನ ಕೊಡಿಸುವುದಾಗಿ ಭರವಸೆ ನೀಡಿದರು. ಪೌತಿ ಖಾತೆಗೆ ದಾಖಲಾತಿ ಹೊಂದಿಸದೆ ರೈತರು…

Read More

ತುಮಕೂರು:        ಜಿಲ್ಲೆಯಲ್ಲಿ ನಡೆಯುತ್ತಿರುವ ಖಾಸಗಿ ವಸತಿ/ ವಿದ್ಯಾರ್ಥಿ ನಿಲಯಗಳಲ್ಲಿ 18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಸುರಕ್ಷತೆ ಒದಗಿಸುವುದು ಆಯಾ ವಸತಿ ನಿಲಯಗಳ ಮುಖ್ಯಸ್ಥರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.        ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಖಾಸಗಿ ವಸತಿ ನಿಲಯಗಳಲ್ಲಿ ದಾಖಲಾಗುವ 18ವರ್ಷದೊಳಗಿನ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಆಯಾ ನಿಲಯಗಳ ಮುಖ್ಯಸ್ಥರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ತಿಳಿಸಿದರಲ್ಲದೆ, ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು, ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗುವ ಆರೋಪಿಗಳು ಖುಲಾಸೆಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಳ್ಳುವಾಗ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.        ಬಾಲ್ಯ ವಿವಾಹ ಹಾಗೂ ಪೊಕ್ಸೊ…

Read More

ತುಮಕೂರು :       ತಾಲ್ಲೂಕಿನ ವಕೀಲರು,  ಕುರುಬ ಸಮಾಜದ ಮುಖಂಡರು ಹಾಗೂ ಸಮಾಜ ಸೇವಕರಾದ ಆರ್.ಪಾತಣ್ಣ ನವರನ್ನು ತುಮಕೂರು ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಇಂದು  ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ಅವರು ಅಧಿಕಾರ ಸ್ವೀರಿಸಿದರು.         ಈ ಸಂದರ್ಭದಲ್ಲಿ   ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ತುಮಕೂರು ಜಿಲ್ಲಾ ಹಾಲುಮತ ಮಹಾಸಭಾ ವತಿಯಿಂದ ಸನ್ಮಾನಿಸಲಾಯಿತು.        ಹಾಲುಮತ ಮಹಾಸಭಾ ರಾಜ್ಯ ಸಂಚಾಲಕರು, ತುಮಕೂರು ಮಹಾನಗರಪಾಲಿಕೆ ಹಣಕಾಸು ಮತ್ತು ತೆರಿಗೆ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಲಕ್ಷ್ಮೀನರಸಿಂಹರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಟಿ.ಇ.ರಘುರಾಮ್, ತುಮಕೂರು ಹಾಲುಮತ ಮಹಾಸಭಾ ಜಿಲ್ಲಾ ಕನಕ ಯುವ ಸೇನೆಯ ಅಧ್ಯಕ್ಷರಾದ ಕೆಂಪರಾಜು, ಕಾಳಿದಾಸ ವಿದ್ಯಾವರ್ಧಕದ ಸಂಘದ ಜಿಲ್ಲಾ ನಿರ್ದೇಶಕ ಪಾವಗಡದ ಮೈಲಾರಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಜಯರಾಮ್,  ಸಮಾಜದ ಮುಖಂಡರಾದ ಚಿಕ್ಕಸ್ವಾಮಿ, ಕೆ.ಲಕ್ಕಪ್ಪವರು ಹಾಗೂ ಪದಾಧಿಕಾರಿಗಳು ಅಭಿನಂದಿಸಿದರು.    

Read More

ಮಧುಗಿರಿ:       3 ತಿಂಗಳ ಕಾಲ ಹೇಮಾವತಿ ನಾಲೆಯಿಂದ ಸಿದ್ದಾಪುರ ಕೆರೆಗೆ ನೀರು ಹರಿಸಲಾಗುವುದು, ಯಾವುದೇ ಕಾರಣಕ್ಕೂ ಮಧುಗಿರಿಯ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಸಂಸದರಾದ ಜಿ.ಎಸ್.ಬಸವರಾಜು ತಿಳಿಸಿದರು.       ತಾಲೂಕಿನ ಕಸಬಾ ಹೋಬಳಿಯ ಸಿದ್ದಾಪುರ ಕೆರೆಗೆ ಹೇಮಾವತಿ ನಾಲೆಯಿಂದ ಹರಿದು ಬರುತ್ತಿರುವ ನೀರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಹೇಮಾವತಿ ನಾಲೆಯಿಂದ ಜಿಲ್ಲೆಗೆ 24.5 ಟಿಎಂಸಿ ನೀರು ಸರಬರಾಜು ಮಾಡಲಾಗುವುದು. ಸಿದ್ಧಾಪುರ ಕೆರೆಗೆ 03 ಮೋಟಾರ್ ಮೂಲಕ ನೀರು ಹರಿಸಲು ಉದ್ದೇಶಿಸಿದ್ದು, ಸತತವಾಗಿ ಎರಡು ಮೋಟಾರುಗಳು ಕಾರ್ಯನಿರ್ವಹಿಸುತ್ತವೆ ಎಂದರು.       ಇಲ್ಲಿನ ಅಶಕ್ತ ಶಾಸಕರು ನೀರು ಹರಿಸುವ ನಿಟ್ಟಿನಲ್ಲಿ ಜವಾಬ್ದಾರಿ ವಹಿಸದೆ ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದರಿಂದ ನೀರು ಹರಿಸಲು ತಡವಾಯಿತು.  ಇಪ್ಪತ್ತೈದು ಲಕ್ಷ ರೂ ಮೌಲ್ಯದ ಪರಿಕರಗಳು ಪಂಪ್‍ಹೌಸ್‍ನಲ್ಲಿ ಕಾಣೆಯಾಗಿರುವುದು ವಿಪರ್ಯಾಸ ಎಂದ ಅವರು ಇನ್ನು ಮುಂದೆ ಇಲ್ಲಿನ ಜನತೆ ನೀರಿಗಾಗಿ ಪರಿತಪಿಸುವ ಅಗತ್ಯವಿಲ್ಲ ಎಂದು…

Read More

ಕೊರಟಗೆರೆ:       ವಯೋವೃದ್ದೆ ಮತ್ತು ಮಹಿಳೆಯ ಕೈಕಾಲುಗಳನ್ನು ಟೈನ್‍ದಾರದಿಂದ ಕಟ್ಟಿ ಬಾಯಿಯೊಳಗೆ ಬಟ್ಟೆ ತೂರಿಸಿ ಕಿರುಚಿದರೇ ಅತ್ಯಾಚಾರ ಮಾಡುವ ಬೆದರಿಕೆ ಹಾಕಿ ಮನೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರವನ್ನು ದೋಚಿ ಸಿನಿಮೀಯ ರೀತಿಯಲ್ಲಿ ಪರಾರಿ ಆಗಿರುವ ಘಟನೆ ನಡೆದಿದೆ.       ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮದ ಶಾರದಮ್ಮ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಅರಸಾಪುರ ಗ್ರಾಮದ ಸರಕಾರಿ ಶಾಲೆಯ ಹಿಂಭಾಗ ಇರುವ ಒಂಟಿ ಮನೆಯಲ್ಲಿ ಶಾರದಮ್ಮ ಮತ್ತು ತಾಯಿ ಲಕ್ಕಮ್ಮ ಇಬ್ಬರು ವಾಸವಿದ್ದಾರೆ. ಏಕಾಏಕಿ ಐದು ಜನರ ತಂಡ ಮನೆಯ ಒಳಗೆ ಪ್ರವೇಶ ಮಾಡಿ ಬೆದರಿಕೆ ಹಾಕಿ ಕಳ್ಳತನ ಮಾಡಿದ್ದಾರೆ.       ಟೀಶರ್ಟು ಧರಿಸಿದ್ದ ಐದು ಜನ ಕಳ್ಳರ ತಂಡ ಕೊಠಡಿಯಲ್ಲಿದ್ದ ವೃದ್ದೆಗೆ ಬೆದರಿಕೆ ಹಾಕಿ ಬಾಗಿಲು ಹಾಕಿದ್ದಾರೆ. ನಂತರ ಅಡುಗೆ ಮನೆಯಲ್ಲಿದ್ದ ಶಾರದಮ್ಮ ಎಂಬುವರ ಮುಖಕ್ಕೆ ಹೊಡೆದು ಕೆಳಗೆ ಬಿಳಿಸಿ ಕೈಕಾಲುಗಳಿಗೆ ಟೈನ್ ದಾರದಿಂದ ಕಟ್ಟಿ ಕಿರುಚಿದರೇ ಅತ್ಯಚಾರ ಮಾಡುವ ಬೆದರಿಕೆ…

Read More

ತುಮಕೂರು :       ಜಿಲ್ಲೆಯ ಪಾವಗಡ ತಾಲೂಕು ಕೋಮಾರ್ಲಹಳ್ಳಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಾಗೇಂದ್ರಪ್ಪ ಟಿ.ಎಸ್. ಎಂಬ ಸಹ ಶಿಕ್ಷಕ ಅವರು ಆಗಸ್ಟ್ 7ರಂದು ಮದ್ಯಪಾನ ಮಾಡಿ ಶಾಲೆಗೆ ಹಾಜರಾಗಿ ಶಾಲಾ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿರುತ್ತಾರೆ.          ಇವರು ಕರ್ತವ್ಯ ಲೋಪ ಎಸಗಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) 1957ರ ನಿಯಮ 10ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಕ್ರಮ ಕೈಗೊಂಡು ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ) ರವಿಶಂಕರ ರೆಡ್ಡಿ ತಿಳಿಸಿದ್ದಾರೆ.

Read More

ತುಮಕೂರು:       ಸಿಗ್ನಲ್ ಜಂಪ್ ಮಾಡುವುದು ಸೇರಿದಂತೆ ತುಮಕೂರು ನಗರದಲ್ಲಿ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನಗಳನ್ನು ಪತ್ತೆ ಹಚ್ಚುವುದು ಸೇರಿದಂತೆ ವಿವಿಧ 7 ಅತ್ಯಾಧುನಿಕ ಕೆಲಸಗಳನ್ನು ನಿರ್ವಹಿಸುವ ಇಂಟಿಗ್ರೆಟೆಡ್ ಸಿಟಿ ಕಮಾಂಡಿಂಗ್ ಅಂಡ್ ಕಂಟ್ರೋಲಿಂಗ್ ಕೇಂದ್ರವು ಮಹಾನಗರ ಪಾಲಿಕೆ ಆವರಣದಲ್ಲಿ ಇಂದಿನಿಂದ (ಗುರುವಾರ) ಕಾರ್ಯಾರಂಭ ಮಾಡಿದೆ.       ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ ಈ ಕೇಂದ್ರವನ್ನು ಸಂಸದರಾದ ಜಿ.ಎಸ್. ಬಸವರಾಜು ಅವರು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, ಈ ಕೇಂದ್ರದ ಮೂಲಕ ತುಮಕೂರು ನಗರದ 8 ಜಂಕ್ಷನ್‍ಗಳಲ್ಲಿ ರಸ್ತೆ ನಿಯಮ ಉಲ್ಲಂಘಿಸುವ ವಾಹನಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಇದರಿಂದಾಗಿ ಶಿಸ್ತುಬದ್ಧ ಸಾರಿಗೆ ವ್ಯವಸ್ಥೆ ನಗರದಲ್ಲಿ ಅನುಷ್ಟಾನಗೊಳ್ಳಲಿದೆ. ಈ ಯೋಜನೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿದೆ. ಇಂದು ಈ ಕೇಂದ್ರವನ್ನು ಆರಂಭಿಸಿದ್ದು, ಈ ಬಗ್ಗೆ ನಗರದ ಜನತೆಗೆ ವ್ಯಾಪಕ ಅರಿವು ಮೂಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ನಂತರ ಸಂಚಾರ ಉಲ್ಲಂಘನೆಗೆ ಈ ಕೇಂದ್ರದ ಮೂಲಕ…

Read More