Author: News Desk Benkiyabale

ತುಮಕೂರು:        ನವಜಾತ ಶಿಶುವಿಗೆ ಆರು ತಿಂಗಳೊಳಗಾಗಿ ಶ್ರವಣ ದೋಷವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಶಿಶು ಆರೋಗ್ಯವಾಗಿ ಸಾಮಾನ್ಯರಂತೆ ಇರಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.        ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ವಾಣಿ ಡೆಫ್ ಚಿಲ್ಡ್ರನ್ಸ್ ಫೌಂಡೇಷನ್ ಹಾಗೂ ಅಜೀಮ್ ಪ್ರೇಮ್‍ಜಿ ಫಿಲಂಥ್ರೋಫಿಕ್ ಇನಿಷಿಯೇಟಿವ್ಸ್ ಸಹಯೋಗದಲ್ಲಿ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿಂದು ನಡೆದ “ಸೋಹಮ್” ನವಜಾತ ಶಿಶುಗಳ ಶ್ರವಣದೋಷ ಪರೀಕ್ಷಾ ಸಾಧನ ಅನುಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.         ಜಿಲ್ಲಾಸ್ಪತ್ರೆಗೆ ಈ ಸಾಧನವನ್ನು ನೀಡಿರುವ ವಾಣಿ ಡೆಫ್ ಚಿಲ್ಡ್ರನ್ಸ್ ಫೌಂಡೇಷನ್ ಸಂಸ್ಥೆಗೆ ಅಭಿನಂದಿಸಿದ ಅವರು ಇನ್ನು ಮುಂದೆ ಈ ಸಾಧನವನ್ನು ಬಳಸಿಕೊಂಡು ಜನಿಸುವ ಮಗುವಿಗೆ ಶಬ್ದ ಕೇಳಿಸುತ್ತಿದ್ದೆಯೋ, ಇಲ್ಲವೋ ಎಂಬುದು ಮಗು ಜನಿಸಿದ ದಿನದಂದೆ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿಯೂ ಈ ಸೌಲಭ್ಯ ಒದಗಿಸಲಾಗುವುದು ಎಂದು…

Read More

ತುಮಕೂರು:        ತುಮಕೂರು ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ನಡೆಯುತ್ತಿರುವ ಕಳ್ಳತನಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಇದಕ್ಕೆ ತುಮಕೂರು ಗ್ರಾಮಾಂತರದ ಶಾಸಕರೂ ಸಾಥ್ ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಸುರೇಶ್ ಗೌಡ ಆರೋಪಿಸಿದರು.       ಪತ್ರಿಕಾಗೋಷ್ಠಿಯಲ್ಲಿ ಅವರು ಮಂಗಳವಾರ ಮಾತನಾಡಿದರು. ಸರಣಿ ಕಳ್ಳತನದ ಪ್ರಕಟರಣಗಳ ಪಟ್ಟಿ ತಯಾರಿಸಿ ಎಸ್ಪಿ ಅವರಿಗೂ ಕೊಟ್ಟಿದ್ದೇವೆ. ಪೊಲೀಸರು ಕಳ್ಳತನದ ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಿ, ಚಾರ್ಜ್‍ಶೀಟ್ ಹಾಕುತ್ತಿಲ್ಲ. ಕಾನೂನು ಬಾಹಿರ ಚಟುವಟಿಕೆಗಳು ಕಾಣುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ದೂರಿದರು.         ಪಿಎಸ್‍ಐ  10 ಲಕ್ಷ, ಸಿಪಿಐ  15 ಲಕ್ಷ ಮತ್ತು ಡಿವೈಎಸ್ಪಿ  25 ಲಕ್ಷ ಕೊಟ್ಟು ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ ಎಂಬ ಮಾತುಗಳನ್ನು ಪೊಲೀಸರೇ ಹೇಳುತ್ತಿದ್ದಾರೆ. ಲಂಚ ಕೊಟ್ಟು ಬಂದವರು ಪ್ರತಿ ತಿಂಗಳು ಶಾಸಕರಿಗೆ ಮಾಮೂಲಿ ಕೊಡಬೇಕು. ನಿಮ್ಮ ಕಷ್ಟಗಳನ್ನು ಶಾಸಕರಿಗೆ ಹೋಗಿ ಹೇಳಿ ಎಂದು ಹಣ, ಒಡವೆ ಕಳೆದುಕೊಂಡ ಸಂತ್ರಸ್ತರಿಗೆ ಪೊಲೀಸರು ಹೇಳುತ್ತಿದ್ದಾರೆ ಎಂದು ಬಿ.ಸುರೇಶ್ ಗೌಡ…

Read More

 ತುಮಕೂರು:       ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಎಸಿಬಿ ಅಧಿಕಾರಿಗಳು ತಮ್ಮ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಇವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿ ಸೋಮವಾರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವೈ.ಹೆಚ್.ಹುಚ್ಚಯ್ಯ ಹಾಗೂ ಮತ್ತಿತರರು ಎಸಿಬಿ ಡಿವೈಎಸ್ಪಿ ರಘುಕುಮಾರ್ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು.       ಬಡವರು,ನಿಗರ್ತಿಕರು,ಅನ್ಯಾಯಕ್ಕೆ ಒಳಗಾದವರು ನ್ಯಾಯ ಅರಸಿ ಕೋರ್ಟುಗಳಿಗೆ ಬರುವುದು ಸಹಜ. ಆದರೆ ನ್ಯಾಯಾಲಯ ದಲ್ಲಿ ಸರಕಾರದ ಪರವಾಗಿ ದೂರದಾರರ ಪರ ವಾದ ಮಾಡಿ ನ್ಯಾಯ ಒದಗಿಸಬೇಕಾದ ಸರಕಾರಿ ವಕೀಲರೇ ಲಂಚದ ಆಸೆಗೆ ಬಿದ್ದು ಶೋಷಣೆ ಮಾಡಿದ ಪ್ರಕರಣವನ್ನು ಇತ್ತೀಚಿಗೆ ಎಸಿಬಿ ಕೈಗೆತ್ತಿಕೊಂಡು, ಆರೋಪಿಯನ್ನು ಜೈಲಿಗೆ ಕಳುಹಿಸಲು ಕ್ರಮ ವಹಿಸಿದೆ.ಇದು ನಿಜಕ್ಕೂ ಪ್ರಶಂಶನೀಯ ಕೆಲಸ,ಇದರ ಜೊತೆಗೆ ಇತ್ತೀಚಗೆ ಲೋಕಾಯುಕ್ತ ಹಲವು ಪ್ರಕರಣಗಳಲ್ಲಿ ಭ್ರಷ್ಟಾಚಾರ ಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದೆ.ಈ ಹಿನ್ನೆಲೆಯಲ್ಲಿ ಇಲಾಖೆಯ ಕಾರ್ಯವೈಖರಿಯನ್ನು ಮೆಚ್ಚಿ, ಅಭಿನಂದನೆ ಸಲ್ಲಿಸುತ್ತಿರುವುದಾಗಿ ವೈ.ಹೆಚ್.ಹುಚ್ಚಯ್ಯ ತಿಳಿಸಿದರು.       ಒಲ್ಲದ ಮನಸ್ಸಿನಿಂದ ಅಭಿನಂದನೆ ಸ್ವೀಕರಿಸಿದ…

Read More

ತುಮಕೂರು:       ಪಶ್ಚಿಮ ಬಂಗಾಳದ ಎನ್.ಆರ್.ಎಸ್. ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ವತಿಯಿಂದ ನಗರದಲ್ಲಿ ಮುಷ್ಕರ ನಡೆಸಲಾಯಿತು.       ನಗರದ ಟೌನ್‍ಹಾಲ್ ವೃತ್ತದಲ್ಲಿರುವ ಭಾರತೀಯ ವೈದ್ಯಕೀಯ ಸಂಘದ ಕಚೇರಿ ಮುಂಭಾಗದ ಜಮಾಯಿಸಿದ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯರು ಹಲ್ಲೆಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಘೋಷಣೆಗಳನ್ನು ಕೂಗಿದರು.       ನಗರದಾದ್ಯಂತ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಇಂದು ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿತ್ತು. ಜತೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಖಾಸಗಿ ವೈದ್ಯರುಗಳು ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ.       ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಮುಷ್ಕರದ ಮಾಹಿತಿ ತಿಳಿಯದೆ ನಗರಕ್ಕೆ ಬಂದಿದ್ದ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದ ದೃಶ್ಯ ಕಂಡು ಬಂತು.  ಇನ್ನು ಜಿಲ್ಲಾಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಂತೂ ರೋಗಿಗಳು ಕಿಕ್ಕಿರಿದು…

Read More

ತುಮಕೂರು :       ಬೆಂಗಳೂರಿನ ಐಎಂಎ ಪ್ರಕರಣ ಮಾದರಿಯಲ್ಲಿ ತುಮಕೂರಿನಲ್ಲೂ ಸಾರ್ವಜನಿಕರಿಂದ ಕೋಟ್ಯಾಂತರ ರೂ ಸಂಗ್ರಹಿಸಿ ವಂಚಿಸಿರುವ ಪ್ರಕರಣ ಬಯಲಿಗೆ ಬಂದಿದೆ. ನಗರದ ಹೆಚ್‍ಎಂಎಸ್ ಶಾದಿ ಮಹಲ್ ಕಾಂಪ್ಲೆಕ್ಸ್‍ನಲ್ಲಿ ಈಝಿ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಲಿಮಿಟೆಡ್ ಎಂಬ ಹೆಸರಿನ ಕಛೇರಿ ತೆರೆದು ಅಸ್ಲಾಂ ಪಾಷಾ ಎಂಬುವವರು ಸಾರ್ವಜನಿಕರಿಂದ 250ರಿಂದ 300 ಕೋಟಿ ರೂ ಸಂಗ್ರಹಿಸಿ ನಾಪತ್ತೆಯಾಗಿದ್ದಾರೆ.       ಆತ ದುಬಾಯ್‍ನಲ್ಲಿ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಹಣ ತೊಡಗಿಸಿರುವ ಯಾರೂ ಈವರೆಗೆ ಪೊಲೀಸರಿಗೆ ದೂರು ನೀಡಿಲ್ಲ. 3-4 ತಿಂಗಳಿನಿಂದ ಕಛೇರಿ ಬಾಗಿಲು ತೆರೆದಿಲ್ಲ. ಹಣ ಹೂಡಿಕೆ ಮಾಡಿದವರು ದಿಕ್ಕು ತೋಚದೆ ಕಚೇರಿ ಬಳಿ ಬಂದು ಹೋಗುತ್ತಿದ್ದಾರೆ. ಶುಕ್ರವಾರ ಕೂಡಾ ನೂರಾರು ಜನ ಈ ಕಛೇರಿ ಮುಂದೆ ಜಮಾಯಿಸಿದ್ದರು       ತುಮಕೂರು ನಿವಾಸಿಯಾದ ಅಸ್ಲಾಂ ಪಾಷಾ 3-4 ವರ್ಷದಿಂದ ಹೆಚ್‍ಎಂಎಸ್ ಶಾದಿ ಮಹಲ್ ಕಾಂಪ್ಲೆಕ್ಸ್‍ನಲ್ಲಿ ಈಝಿ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಲಿಮಿಟೆಡ್…

Read More

ತುಮಕೂರು:       ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ವಿಳಂಬ ಮಾಡಿ ಕರ್ತವ್ಯ ನಿರ್ಲಕ್ಷತೆ ತೋರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಯಾವುದೇ ಗ್ರಾಮದಿಂದ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಕೊಳವೆ ಬಾವಿ ಕೊರೆಯುವುದು, ಪಂಪ್‍ಸೆಟ್/ಮೋಟಾರ್ ಅಳವಡಿಕೆ, ವಿದ್ಯುತ್ ಸಂಪರ್ಕ ಕಲ್ಪಿಸುವುದು, ಕೊಳವೆಬಾರಿ ದುರಸ್ತಿ, ಮತ್ತಿತರ ಕುಡಿಯುವ ನೀರಿನ ಕಾಮಗಾರಿಗಳನ್ನು ಯಾವುದೇ ಕ್ರಿಯಾ ಯೋಜನೆ, ಮೇಲಧಿಕಾರಿಗಳ ಅನುಮತಿಗೆ ಕಾಯದೇ ತಕ್ಷಣವೇ ಕೈಗೊಂಡು ಪರಿಹಾರ ಒದಗಿಸಬೇಕು ಎಂದರಲ್ಲದೆ ಚುನಾವಣೆ ಮತ್ತಿತರ ಕಾರಣಗಳಿಂದ ಸ್ಥಗಿತಗೊಂಡ ಕಾಮಗಾರಿಗಳನ್ನು…

Read More

ತುಮಕೂರು:       ಎಷ್ಟೇ ಬೆಲೆ ತೆತ್ತರೂ, ಕೃತಕವಾಗಿ ತಯಾರಿಸಲಾಗದಿರುವ ರಕ್ತಕ್ಕೆ ಪರ್ಯಾಯ ಮತ್ತೊಂದಿಲ್ಲವೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅಭಿಪ್ರಾಯಪಟ್ಟರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಹೆಚ್.ಐ.ವಿ. ಮತ್ತು ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಆಸ್ಪತ್ರೆ ಮತ್ತು ರಕ್ತನಿಧಿ ಕೇಂದ್ರ, ಜಿಲ್ಲಾ ಪೊಲೀಸ್ ಇಲಾಖೆ, ಸಂಜೀವಿನಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ಏರ್ಪಡಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಹಾಗೂ ಕಾರಾಗೃಹ ಇಲಾಖೆ ಪ್ರಶಿಕ್ಷಣಾರ್ಥಿಗಳ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಜನಸಂಖ್ಯೆಗನುಗುಣವಾಗಿ 11000 ಯುನಿಟ್(ಪಿಂಟ್) ರಕ್ತದ ಅವಶ್ಯಕತೆಯಿದ್ದು, ಕೇವಲ 4500 ಯುನಿಟ್‍ನಷ್ಟು ಮಾತ್ರ ದಾನಿಗಳಿಂದ ರಕ್ತಸಂಗ್ರಹವಾಗುತ್ತಿದೆ. ಅಲ್ಲದೆ ಅಪಘಾತ, ಅನಾರೋಗ್ಯ, ಮತ್ತಿತರ ತುರ್ತು ಸಂದರ್ಭಗಳಲ್ಲಿ ರೋಗಿಯ ರಕ್ತದ ಗುಂಪಿಗೆ ಹೊಂದಿಕೆಯಾಗುವ ರಕ್ತ ಪೂರೈಕೆ ಮಾಡಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಅಮೂಲ್ಯವಾದ ರಕ್ತವನ್ನು ದಾನ…

Read More

 ತುಮಕೂರು:       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ತಂಡ ಜೂನ್ 11ರಂದು ತುಮಕೂರು ಹಾಗೂ ಗುಬ್ಬಿ ತಾಲ್ಲೂಕುಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಕಲಿ ವೈದ್ಯರ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದೆ.       ದಾಳಿಯಲ್ಲಿ ಗುಬ್ಬಿ ತಾಲ್ಲೂಕು ತಾಳೆಕೊಪ್ಪದ ಮಾರುತಿ ಪಾಲಿಕ್ಲಿನಿಕ್, ಚೇಳೂರಿನ ಸಂಜೀವಿನಿ ಕ್ಲಿನಿಕ್ ಹಾಗೂ ಹೆಲ್ತ್ ಸೆಂಟರ್; ತುಮಕೂರು ತಾಲ್ಲೂಕು ಗೂಳೂರು ಹಾಗೂ ರಾಜೀವ್ ಗಾಂಧಿ ನಗರದಲ್ಲಿರುವ ಶಿಫಾ ಕ್ಲಿನಿಕ್‍ಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರೀಕ್ಷಿಸಿದ ನಂತರ ನಕಲಿ ವೈದ್ಯರಿರುವುದು ಕಂಡು ಬಂದಿದೆ. ಕೂಡಲೇ ಕ್ರಮ ಕೈಗೊಂಡು ಸದರಿ ಆಸ್ಪತ್ರೆಗಳನ್ನು ಮುಚ್ಚಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ: ಶರತ್ ಚಂದ್ರ ತಿಳಿಸಿದ್ದಾರೆ.

Read More

ಮಧುಗಿರಿ :       2019-20 ರಲ್ಲಿ 107.92 ಕೋಟಿ ರೂ. ಅನುದಾನ ನಿಗದಿಯಾಗಿದ್ದು, 108.22 ಕೋಟಿ ರೂ. ಬಿಡುಗಡೆಯಾಗಿ 104.16 ಕೋಟಿ ರೂ. ಖರ್ಚಾಗಿದೆ. ಉಳಿಕೆ 8.55 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಳಸಲು ಅನುಮೋದನೆಗೆ ಸಭೆ ಒಪ್ಪಿಗೆ ಸೂಚಿಸಿದೆ ಎಂದು ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯಕ್ ತಿಳಿಸಿದರು.       ಅವರು ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಟ್ಟಡದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಭಿವೃದ್ಧಿ ಇಲಾಖೆಯು ಬಾಡಿಗೆಗೆ ಇದೆ. ಆದರೆ ವರ್ಷವಾದರೂ ಬಾಡಿಗೆ ನೀಡದ ಸಿಡಿಪಿಓಗೆ ಬಾಡಿಗೆ ನೀಡಲಿ, ಇಲ್ಲ ಕಚೇರಿ ಖಾಲಿ ಮಾಡಲಿ. ಕಚೇರಿಯನ್ನು ಖಾಲಿ ಮಾಡಿದರೆ ಅದನ್ನು ಅಕ್ಷರ ದಾಸೋಹ ಕಾರ್ಯ ನಿರ್ವಹಣೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿ, ಪಂಚಾಯತ್ ರಾಜ್ ಇಲಾಖೆಯು ಜೀವಗೊಂಡನಹಳ್ಳಿ-ಕದಿರೆಹಳ್ಳಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುತ್ತಿದ್ದು, ಎಂಜಿನಿಯರ್ ಅನುಪಸ್ಥಿತಿಯಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಈ ಬಗ್ಗೆ ಶಿಸ್ತು…

Read More

ಹುಳಿಯಾರು :       ಬುಧವಾರ ರಾತ್ರಿ ಪಟ್ಟಣದ ಬಾರ್, ದಿನಸಿ ಅಂಗಡಿ, ಕಬ್ಬಿಣದ ಅಂಗಡಿ, ಎಪಿಎಂಸಿಯಲ್ಲಿ ನ 3 ಅಂಗಡಿಗಳು ಸೇರಿ ಒಟ್ಟು ಆರು ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ಮಾಡಲಾಗಿದೆ.       ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿ ಕಳವು ಮಾಡಿದ್ದಾರೆ. ಸಿಸಿ ಟಿವಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ದಾಖಲಾಗಿದೆ. ಕೇವಲ ಕ್ಯಾಶ್ ಕೌಂಟರ್ ಗಳನ್ನು ಮಾತ್ರ ಗುರಿಯಾಗಿಸಿಕೊಂಡು ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ಪೆÇಲೀಸರು ಹೇಳಿದ್ದಾರೆ.       ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿರುವ ಸಪ್ತಗಿರಿ ಟ್ರೇಡರ್ಸ್, ಗಜಣ್ಣ ಅವರ ಅಂಗಡಿ, ಚಿಕ್ಕಬಿದರೆ ಚಂದ್ರಣ್ಣ ಅವರ ನಂದಿ ಟ್ರೇಡರ್ಸ್, ತೋಟದ ಶೇಖರಣ್ಣ ಅವರ ಎಸ್ಸೆಸ್ಸಾರ್ ಸ್ಟಿಲ್ಸ್, ವಿಶ್ವನಾಥ್ ಅವರ ಕೆಸಿಎಸ್ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನವಾಗಿದೆ.

Read More