ತುಮಕೂರು: ಅಂಗನವಾಡಿ ಕೇಂದ್ರಗಳಲ್ಲಿ ಕಲ್ಪಿಸಲಾಗುತ್ತಿರುವ ಐ.ಸಿ.ಡಿ.ಎಸ್ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿದ್ಧಪಡಿಸಲಾಗಿರುವ ಸ್ನೇಹ ತಂತ್ರಾಂಶ(ಮೊಬೈಲ್ ಆ್ಯಪ್)ವನ್ನು ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಬಳಸಲು ತುಮಕೂರನ್ನು ಪೈಲೆಟ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಸಿ.ಸ್ಟೆಪ್ (ತಂತ್ರಜ್ಞಾನ ಮತ್ತು ನೀತಿ ಸಂಶೋಧನಾ) ಸಂಸ್ಥೆಗಳ ಸಹಯೋಗದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು/ ಅಂಗನವಾಡಿ ಕಾರ್ಯಕರ್ತೆಯರು/ ಮೇಲ್ವಿಚಾರಕರಿಗಾಗಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿಂದು ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿ.ಸ್ಟೆಪ್ ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸ್ನೇಹ ಮೊಬೈಲ್ ತಂತ್ರಾಂಶವನ್ನು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸುವುದರಿಂದ ಏಕರೂಪದ ಮಾಹಿತಿ ಸಂಗ್ರಹಿಸಲು ಅನುವಾಗುತ್ತದೆ ಎಂದು ತಿಳಿಸಿದರು. ಸ್ನೇಹ ತಂತ್ರಾಂಶದ ಪರಿಣಾಮಕಾರಿ ಅಳವಡಿಕೆಗೆ ಜಿಲ್ಲೆಯಲ್ಲಿರುವ 4095…
Author: News Desk Benkiyabale
ತುಮಕೂರು : ತುಮಕೂರು ನಗರದ ರೈಲುನಿಲ್ದಾಣದ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಹಾಗೂ ಮಾಸ್ಟರ್ ಕಿಚನ್ಗೆ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ಮಂಗಳವಾರ ಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇಲ್ಲಿ ಇಂದಿರಾ ಕ್ಯಾಂಟೀನ್ ಜೊತೆಗೆ ಮಾಸ್ಟರ್ ಕಿಚನ್ ಇದೆ. ನಗರದಲ್ಲಿರುವ ಎಲ್ಲ ನಾಲ್ಕು ಇಂದಿರಾ ಕ್ಯಾಂಟೀನ್ಗಳಿಗೂ ಈ ಮಾಸ್ಟರ್ ಕಿಚನ್ನಿಂದಲೇ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟ ತಯಾರಾಗಿ ಸರಬರಾಜಾಗುತ್ತದೆ. ಆಯುಕ್ತರು ಇವೆರಡನ್ನೂ ಪರಿವೀಕ್ಷಣೆ ಮಾಡಿದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂದಿರಾ ಕ್ಯಾಂಟೀನ್ಗೆ ದಿಢೀರನೆ `ಭೂಬಾಲನ್ ಅವರು ಆಗಮಿಸಿದರು. ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್ ಕುಮಾರ್, ಪರಿಸರ ಇಂಜಿನಿಯರ್ಗಳಾದ ಮೃತ್ಯುಂಜಯ ಮತ್ತು ನಿಖಿತಾ, ಹೆಲ್ತ್ಇನ್ಸ್ಪೆಕ್ಟರ್ ರುದ್ರೇಶ್ ಜೊತೆಯಲ್ಲಿದ್ದರು. ಊಟ ಮಾಡಿದ ಆಯುಕ್ತರು: ಆಗಷ್ಟೇ ಕ್ಯಾಂಟೀನ್ ಸಿಬ್ಬಂದಿ ವರ್ಗದವರು ಕ್ಯಾಂಟೀನ್ ಆವರಣವನ್ನು ಶುದ್ಧಗೊಳಿಸಿದ್ದು, ಮಧ್ಯಾಹ್ನ 12-30 ಕ್ಕೆ ಆರಂಭವಾಗಲಿದ್ದ ಊಟದ ವಿತರಣೆಗೆ…
ತುಮಕೂರು: ಡೆಂಗ್ಯು, ಚಿಕುನ್ಗುನ್ಯಾ, ಮಲೇರಿಯಾ, ನಿಫಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲು ನಮ್ಮಲ್ಲಿರುವ ಉದಾಸೀನ ಮನೋಭಾವವೇ ಕಾರಣ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ|| ಸಿದ್ದೇಗೌಡ ಬೇಸರ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನರ್ಸಿಂಗ್ ಕಾಲೇಜ್, ಎನ್ಸಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ “ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ”ವನ್ನುದ್ದೇಶಿಸಿ ಅವರು ಮಾತನಾಡಿದರು. ಡೆಂಗ್ಯು ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ರೋಗ ಹರಡದಂತೆ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ತಿಳುವಳಿಕೆ ಇದ್ದರೂ ಸಹ ಉದಾಸೀನ ನಡವಳಿಕೆ ತೋರುತ್ತಿದ್ದಾರೆ. ರೋಗ ತಗುಲಿದಾಗ ವಾಸಿ ಮಾಡುವುದಕ್ಕಿಂತ ರೋಗ ಹರಡದಂತೆ ನಿಯಂತ್ರಿಸುವುದೇ ಬಹುಪಾಲು ಮೇಲು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದಿಲ್ಲ. ಆರೋಗ್ಯವಿರದ…
ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಲವಾರು ಸ್ಮಾರ್ಟ್ ಕಾಮಗಾರಿಗಳಲ್ಲಿ ಮಳೆನೀರುಗಾಲುವೆಗಳಿಗೆ ಪರಿಸರಸ್ನೇಹಿ ರೂಪ ನೀಡುವ ಕಾಮಗಾರಿಯೂ ಒಂದಾಗಿದ್ದು, ಸ್ಮಾರ್ಟ್ ಸಿಟಿ ಲಿಮಿಟೆಡ್ ಈ ಪ್ರಯತ್ನಕ್ಕೆ ಮುಂದಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರ ಪರಿಕಲ್ಪನೆಯಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ಯೋಜನಾ ನಿರ್ವಹಣಾ ಸಲಹೆಗಾರ ಸಂಸ್ಥೆಯಾದ ಐಪಿಇ ಗ್ಲೋಬಲ್ ಉಸ್ತುವಾರಿಯಲ್ಲಿ ರೂಪುಗೊಳ್ಳುತ್ತಿರುವ ಈ ಕಾಮಗಾರಿಯು ಈಗಾಗಲೇ ಚಾಲನೆಯಲ್ಲಿದೆ. ತ್ಯಾಜ್ಯ ನೀರು ಸೇರದ ನೀರ್ಗಾಲುವೆ ನಿರ್ಮಾಣ: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ರಿಂಗ್ ರಸ್ತೆಯ ಎರಡೂ ಬದಿ(14.2 ಕಿ.ಮೀ ಉದ್ದ)ಯಲ್ಲಿ ಈ ಪರಿಸರಸ್ನೇಹಿ ರೂಪ ಪಡೆಯಲು ಮಳೆನೀರುಗಾಲುವೆಗಳು ಸಿದ್ಧವಾಗಿವೆ. ಸದ್ಯ ಈ ಮಳೆನೀರುಗಾಲುವೆಗಳಲ್ಲಿ ತ್ಯಾಜ್ಯನೀರು ಹರಿಯುತ್ತಿದ್ದು, ಮಳೆಗಾಲದಲ್ಲೂ ಸ್ವಚ್ಛ ನೀರು ಹರಿಯುವ ದೃಶ್ಯ ಕಾಣಸಿಗದಾಗಿದೆ. ಅಲ್ಲದೆ ಮಳೆ ನೀರಿನೊಂದಿಗೆ ತ್ಯಾಜ್ಯ ನೀರು ಸೇರಿಕೊಂಡು ಹರಿವನ್ನು ಇನ್ನಷ್ಟು ಕಲುಷಿತಗೊಳಿಸುತ್ತಿದೆ. ಈ ಸಮಸ್ಯೆಯನ್ನು ನಿವಾರಿಸಲು ಒಳ ಕೊಳವೆ ಚರಂಡಿಗಳಲ್ಲಿ…
ತುಮಕೂರು: ನಗರದ ಹೊರವಲಯದ ಗಾರೆನರಸಯ್ಯನಕಟ್ಟೆ ಹಾಗೂ ಅಕ್ಕತಂಗಿಯರ ಕೆರೆಯಂಗಳದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ 2 ಲಗೇಜ್ ಆಟೋಗಳನ್ನು ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದು ದಂಡ ವಿಧಿಸಿರುವ ಘಟನೆ ನಡೆದಿದೆ. ನಗರದ ಅಕ್ಕತಂಗಿಯರ ಕೆರೆಯಂಗಳದಲ್ಲಿ ತರಕಾರಿ ಕಸ ಹಾಕಲು ತೆರಳಿದ್ದ ಲಗೇಜ್ ಆಟೋವನ್ನು ವಶಕ್ಕೆ ಪಡೆದು ಪಾಲಿಕೆ ಅಧಿಕಾರಿಗಳು 2 ಸಾವಿರ ರೂ. ದಂಡ ವಿಧಿಸಿದ್ದಾರೆ. ಇದೇ ರೀತಿ ಗಾರೆನರಸಯ್ಯನಕಟ್ಟೆ ಬಳಿ ಖಾಸಗಿ ಬ್ಯಾಂಕ್ವೊಂದರ ಸಿಬ್ಬಂದಿ ಲಗೇಜ್ ಆಟೋದಲ್ಲಿ ಪೇಪರ್ ಸೇರಿದಂತೆ ಇತರೆ ಕಸವನ್ನು ತುಂಬಿಕೊಂಡು ಬಂದು ಕಸ ಹಾಕಲು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ಅರಿತ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ಸದರಿ ಆಟೋವನ್ನು ವಶಪಡಿಸಿಕೊಂಡು ಎರಡೂ ಆಟೋಗಳನ್ನು ಪಾಲಿಕೆ ಕಚೇರಿಗೆ ಕರೆ ತಂದು ಆಯುಕ್ತರ ಮುಂದೆ ಹಾಜರುಪಡಿಸಿದ್ದಾರೆ. ಎರಡೂ ಕಡೆ ಆಟೋಗಳಲ್ಲಿ ಕಸ ಸುರಿಯಲು ಬಂದಿದ್ದವರಿಗೆ ನಗರದಲ್ಲಿ ಸ್ವಚ್ಚತೆ ಕಾಪಾಡುವ ಕುರಿತು ಅರಿವು…
ತುಮಕೂರು : ಸಾರ್ವಜನಿಕ ವಲಯದ ರೈಲು, ಭದ್ರಾವತಿ ಉಕ್ಕು ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಕಾರ್ಮಿಕರಿಗೆ ಕನಿಷ್ಟ ಕೂಲಿ 24,000 ನಿಗದಿ ಮಾಡುವಂತೆ ಹಾಗೂ ಸ್ಕೀಂ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ತುಮಕರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಾರ್ಮಿಕ ಕಾನೂನುಗಳನ್ನು ಸಂಹಿತೆಗಳಾಗಿ ಪರಿವರ್ತಿಸುವುದು ಸಾಮಾಜಿಕ, ಸ್ವಭಾವಿಕ ನ್ಯಾಯಕ್ಕೆ ವಿರುದ್ದವಾಗಿದೆ. ದೇಶದ ಜನರ ಶ್ರಮದ ದುಡ್ಡಿನಲ್ಲಿ ಕಟ್ಟಿದ ಸಾರ್ವಜನಿಕ ವಲಯದ ರೈಲ್ವೆ, ಬಿಎಸ್ಎನ್ಎಲ್, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಎಲ್ಲಾ ಕಾರ್ಮಿಕರಿಗೆ ಕಡ್ಡಾಯ ಖಾತ್ರಿ ಪಿಂಚಣಿ ಯೋಜನೆ ರೂಪಿಸಬೇಕು. ಕನಿಷ್ಠ ಪಿಂಚಣಿ ಮಾಸಿಕ 6000 ರೂಪಾಯಿ ನಿಗದಿಗೊಳಿಸಬೇಕು. ಬೀಡಿ, ಗಣಿ, ಸಿನಿಮಾ, ಮತ್ತಿತರೆ ಕಾರ್ಮಿಕರ ಸಂರಕ್ಷಣೆಗೆ ಇದ್ದ ಕಲ್ಯಾಣ ಮಂಡಳಿಯನ್ನು…
ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಕಾಳೇನಹಳ್ಳಿ ಗ್ರಾಮದ ಜಾನಕಿರಾಮಯ್ಯ ಎಂಬುವವರ ಮನೆಯ ಮೇಕೆಯೊಂದು ಮನುಷ್ಯನ ರೂಪ ಹೋಲುವ ಮೇಕೆ ಮರಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ನಡೆದಿದೆ. ಅವರ ಮನೆಯ ಮೇಕೆಯೊಂದು ಶನಿವಾರ ಎರಡು ಮರಿಗಳಿಗೆ ಜನ್ಮನೀಡಿದ್ದು ಒಂದು ಗಂಡು ಮರಿ ಆರೋಗ್ಯವಾಗಿದೆ, ಮತೊಂದು ಮರಿ ಮೃತಪಟ್ಟಿದ್ದು ಮೃತಪಟ್ಟ ಮರಿಯ ದೇಹ ಮನುಷ್ಯನ ಆಕಾರಹೊಂದಿದೆ. ವಿಷಯ ತಿಳಿದ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಜನ ತಂಡೋಪ ತಂಡವಾಗಿ ಬಂದು ವೀಕ್ಷಿಸಿದರು.
ತುರುವೇಕೆರೆ: ಜಿಲ್ಲಾತಂಬಾಕು ನಿಯಂತ್ರಣ ಕೋಶ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಪೊಲೀಸ್ ಇಲಾಖೆ ತುರುವೇಕರೆ ಇವರುಗಳು ಜಂಟಿಯಾಗಿ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪಟ್ಟಣದಲ್ಲ್ಲಿ ಹಮ್ಮಿಕೊಂಡು ಅಂಗಡಿ ಮುಂಗಟ್ಟು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ನಿಷೇಧಿತ ಪ್ರದೇಶದಲ್ಲಿ ಧೂಮಪಾನ ಮಾಡುವುದು ಅಪರಾಧ ಎಂಬ ನಾಮಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಲು ತಿಳಿಸಿದರಲ್ಲದೇ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದರು. ಒಟ್ಟು 50 ಪ್ರಕರಣಗಳನ್ನು ದಾಖಲಿಸುವ ಮುಖೇನ ರೂ.4560 ಗಳನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಯಿತು.ಸದರಿಕಾರ್ಯಾಚರಣೆಯಲ್ಲಿ ಜಿಲ್ಲಾ ಸಲಹೆಗಾರರಾದ ರವಿಪ್ರಕಾಶ್, ಎಂ.ಆರ್.ಪುಂಡಲೀಕ ಲಕಾಟಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಬಿ. ಚಂದ್ರಶೇಖರ್, ಎ.ಎಸ್.ಐ. ವೆಂಕಟೇಶ್ ಹಾಜರಿದ್ದರು.ಸದರಿ ಕಾರ್ಯಾಚರಣೆ ಮಾಡುವ ಮುಖೇನ ತುರುವೇಕೆರೆಯನ್ನು ತಂಬಾಕು ಮುಕ್ತ ಪ್ರದೇಶವಾಗಿ ಮಾರ್ಫಡಿಸಲು ಶ್ರಮಸುತ್ತಿರುವುದಾಗಿ ಜಿಲ್ಲಾ ಸಲಹೆಗಾರ ರವಿಪ್ರಕಾಶ್ ತಿಳಿಸಿದರಲ್ಲದೆ ಸಾರ್ವಜನಿಕರ ಸಹಕಾರ ಈ ಕಾರ್ಯಕ್ಕೆ ಅತಿ ಮುಖ್ಯವೆಂದು ತಿಳಿಸಿದರು.
ತುಮಕೂರು : ವಿವಿಧ ಸರ್ಕಾರಿ ಇಲಾಖೆಗಳು ಸಾರ್ವಜನಿಕರಿಗಾಗಿ ಒದಗಿಸುತ್ತಿರುವ 640 ನಾಗರಿಕ ಸೇವೆ ಹಾಗೂ 320 ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೇವೆ ಸೇರಿದಂತೆ ಒಟ್ಟು 960 ಸಕಾಲ ಸೇವೆಗಳ ವಿಲೇವಾರಿಯಲ್ಲಿ ವಿಳಂಬ ಮಾಡುವ ಅಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ಸಕಾಲ ಮಿಷನ್ ನಿರ್ದೇಶಕರು ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿ ಕೆಸ್ವಾನ್ ಸೆಂಟರ್ನಲ್ಲಿಂದು ಸಕಾಲ ಸೇವೆಗಳ ಅಧಿನಿಯಮದ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ನಲ್ಲಿ ಅವರು ಈ ಸೂಚನೆ ನೀಡಿದರು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಸಕಾಲ ಅರ್ಜಿಗಳ ವಿಲೇವಾರಿ ವರದಿಯನ್ನು ಸಕಾಲ ಪೋರ್ಟಲ್ನಲ್ಲಿ ಪ್ರತೀದಿನ ಅಪ್ಡೇಟ್ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು. ಸಕಾಲ ಅರ್ಜಿ ವಿಲೇವಾರಿ ಮಾಡುವಲ್ಲಿ…
ತುರುವೇಕೆರೆ: ಪಟ್ಟಣದ ಸಂತೆಗೆ ಬರುತ್ತಿದ್ದ ಗ್ರಾಹಕರ ಕಿಸೆಯಲ್ಲಿದ್ದ ಮೊಬೈಲನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಶುಕ್ರವಾರ ಬಂದಿಸಿದ್ದಾರೆ. ಬಂದಿತ ಆರೋಪಿ ರಾಮು ಭದ್ರಾವತಿ ನಗರದ ಬೋವಿ ಕಾಲೋನಿಯಲ್ಲಿ ಮನೆಗಳ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದವನು ಎನ್ನಲಾಗಿದೆ. ನಿನ್ನೆ ಪಟ್ಟಣದಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಆರೋಪಿ ಎಪಿಎಂಸಿ ಯಾರ್ಡ್ನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದು ಪೊಲೀಸ್ ಸಿಬ್ಬಂದಿಗಳು ಈತನ್ನು ಠಾಣೆಗೆ ಕರೆ ತಂದು ವಿಚಾರಿಸಲಾಗಿ ಪಟ್ಟಣದ ಸಂತೆಯಲ್ಲಿ ಹಲವು ತಿಂಗಳುಗಳಿಂದ ಮೊಬೈಲ್ ಕಳವು ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂದಿತನಿಂದ 35 ಸಾವಿರ ರೂಪಾಯಿಗಳ 14 ಬೆಲೆ ಬಾಳುವ ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿ ರಾಮುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಟ್ಟಣದ ಪೊಲೀಸರು ತಿಳಿಸಿದ್ದಾರೆ.











