Author: News Desk Benkiyabale

ತುಮಕೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟçಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು. ಬಿಜಿಎಸ್ ವೃತ್ತದಿಂದ ಭದ್ರಮ್ಮ ವೃತ್ತದವರೆಗೆ ಪಾದಯಾತ್ರೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಪ್ರವಾಸಿಗರ ಮೇಲೆ ಅಮಾನುಷವಾಗಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿದರು, ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಬೇಕು, ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ತಮ್ಮ ಬೆಂಬಲವಿದೆ ಎಂದು ಘೋಷಿಸಿದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಮಾತನಾಡಿ, ಪ್ರವಾಸಿಗರ ಸ್ವರ್ಗವಾಗಿರುವ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಹತ್ಯೆ ಮಾಡಿರುವುದು ನೋವಿನ ಸಂಗತಿ, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಹಿಂದೆ ಇಂತಹುದೇ ಘಟನೆ ನಡೆದಾದ ಕೇಂದ್ರ ಸರ್ಕಾರ ಒಂದು ತಲೆಗೆ ಎರಡು ತಲೆ ತರುವ ಭರವಸೆ ನೀಡಿತ್ತು, ಈಗ ಆ ಭರವಸೆ…

Read More

ತುರುವೇಕೆರೆ : ತಾಲ್ಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಸಮೀಪ ರೈಲ್ವೆ ಹಳಿ ದಾಟುವಾಗ ಚಿರತೆ ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಎರಡು ವರ್ಷದ ಹೆಣ್ಣು ಚಿರತೆ ಸುಮಾರು ೫ ಗಂಟೆಯ ಸಮಯದಲ್ಲಿ ಮೈಸೆಂಕೋ ಫ್ಯಾಕ್ಟರಿ ಎದುರಿನ ರೈಲ್ವೆ ಹಳಿ ದಾಟುವಾಗ ಆಕಸ್ಮಿಕವಾಗಿ ಚಿರತೆ ರೈಲುಗಾಲಿಗೆ ಸಿಲುಕಿದೆ ಪರಿಣಾಮ ಅದರ ತಲೆ ಮತ್ತು ಮುಂಗಾಲು ಕತ್ತರಿಸಿದ ರೀತಿ ಸಾವನ್ನಪ್ಪಿದೆ. ಬೆಳಗ್ಗೆ ಎಂದಿನAತೆ ಲೈನ್ ಮೆನ್ ಗಳು ರೈಲ್ವೆ ಹಳಿ ಪರೀಕ್ಷಿಸುವಾಗ ಚಿರತೆ ರೈಲಿಗೆ ಸಿಕ್ಕಿ ಅಸುನೀಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಆರ್.ಎಫ್.ಒ ಅರುಣ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ಅರಣ್ಯ ಗಸ್ತು ಅಧಿಕಾರಿ ರೂಪೇಷ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಆರ್.ಎಫ್.ಒರವರು ದಂಡಿನಶಿವರ ಪಶು ವೈದ್ಯಾಧಿಕಾರಿ ಡಾ.ಮಂಜುಶ್ರೀ ಮತ್ತು ಡಾ.ಪುಟ್ಟರಾಜುರವರನ್ನು ಕರೆಯಿಸಿ ಚಿರತೆ ಮೃತಪಟ್ಟ ಸ್ಥಳದಲ್ಲೇ ಮರಣೊತ್ತರ ಪರೀಕ್ಷೆ ನಂತರ ಸುಟ್ಟು ಹಾಕಲಾಗಿತೆಂದು ಅರಣ್ಯಾಧಿಕಾರಿಗಳು ತಿಳಿದರು.

Read More

ತುಮಕೂರು: ಒಳಮೀಸಲಾತಿಗೆ ಸಂಬAಧಿಸಿದAತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ.೦೧ ರಿಂದ ೦೭ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕರಾದ ಡಾ.ವೈ.ಕೆ.ಬಾಲಕೃಷ್ಣ ತಿಳಿಸಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಒಳಮೀಸಲಾತಿ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷರುಗಳ ಸಭೆಯಲ್ಲಿ ಮಾತನಾಡಿದ ಅವರು,ಮೇ೦೧ ರಂದು ಕೊರಟಗೆರೆಯಿಂದ ಆರಂಭವಾಗುವ ೭ನೇ ತಾರೀಖು ಮುಕ್ತಾಯಗೊಳ್ಳಲಿದೆ.ಆಯಾಯ ತಾಲೂಕಿನಲ್ಲಿ ಮಾದಿಗ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅವರಿಗೆ ಸಮೀಕ್ಷೆಯ ರೂಪುರೇಷೆ,ಭರ್ತಿ ಮಾಡಬೇಕಾದ ವಿಷಯಗಳು ಎಲ್ಲವನ್ನು ತಿಳಿಸಿ, ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕಿದೆ ಎಂದರು. ಒಳಮೀಸಲಾತಿಗೆ ಸಂಬAಧಿಸಿದAತೆ ನ್ಯಾ.ನಾಗಮೋಹನ್ ದಾಸ್ ಸಮಿತಿವತಿಯಿಂದ ಸಮೀಕ್ಷೆಗೆ ಸಂಬAಧಿಸಿದAತೆ ಪ್ರತಿಯೊಬ್ಬ ಮಾದಿಗ ಸಮುದಾಯದ ಮುಖಂಡರು ಜಾಗೃತರಾಗಿ ಜಾತಿ ಕಲಂನಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಕಲಂನಲ್ಲಿ ಮಾದಿಗ ಎಂದು ನಮೂದಿಸಬೇಕು,ಗೊಂದಲಕ್ಕೆ ಒಳಗಾಗುವ ಯಾವ ಜಾತಿ ಸೂಚಕ ಪದಗಳನ್ನು ಬಳಸದೆ ಕೇವಲ ಮಾದಿಗ ಎಂದು ಬರಸಬೇಕು.ಜೊತೆಗೆ,ನಿಮ್ಮ ಅಕ್ಕಪಕ್ಕದ ಮನೆಯ, ಅಥವಾ…

Read More

ತುಮಕೂರು: ಹಾಸ್ಟಲ್, ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆಗುತ್ತಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆತಪ್ಪಿಸುವ ನಿಟ್ಟಿನಲ್ಲಿ ಬೀದರ್ ಮಾದರಿಯಲ್ಲಿ ಸೋಸೈಟಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅಗತ್ಯಕ್ರಮ ಕೈಗೊಳ್ಳಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವತಿಯಿAದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ,ತುಮಕೂರುಜಿಲ್ಲಾಧ್ಯಕ್ಷರವಿಕುಮಾರ್‌ಅವರ ನೇತೃತ್ವದಲ್ಲಿ ನೂರಾರು ನೌಕರರು ಜಿಲ್ಲಾಧಿಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಿ,ಈ ಸಂಬAಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮಂತೇಗೌಡ,ಮೊದಲಿಗೆ ನಾವು ಸರಕಾರಕ್ಕೆಅಭಿನಂದನೆ ಸಲ್ಲಿಸುತ್ತೇವೆ.ಹೊರಗುತ್ತಿಗೆ ನೌಕರರಿಗೆ ಕನಿಷ್ಠ ೩೧ ಸಾವಿರರೂ ವೇತನ ನೀಡಬೇಕೆಂದು ಸರಕಾರದ ಮೇಲೆ ಒತ್ತಡತಂದಿದ್ದು, ಸರಕಾರ ಏ.೧೧ ರಂದು ಮಾಸಿಕ ೨೫.೭೧೪ ರೂಗಳಿಗೆ ಕನಿಷ್ಠ ವೇತನ ನಿಗದಿ ಪಡಿಸಿದೆ.ಇದಕ್ಕಾಗಿ ಸರಕಾರದ ಮುಖ್ಯಮಂತ್ರಿಗಳು,ಉಪಮುಖ್ಯ ಮಂತ್ರಿಗಳು…

Read More

ಚಿಕ್ಕನಾಯಕನಹಳ್ಳಿ: ಕಂದಾಯ ಇಲಾಖೆಯ ಅಧಿಕಾರಿಗಳೇ ನಕಲಿ ದಾಖಲೆಸೃಷ್ಠಿಸಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ದಾಖಲೆ ಮಾಡಿದ ಅಪರೂಪದ ಪ್ರಕರಣವನ್ನು ಕೆಆರ್‌ಎಸ್ ಪಕ್ಷದ ಮುಖಂಡರು ದಾಖಲೆ ಸಮೇತ ಬಯಲಿಗೆಳೆದಿದ್ದಾರೆ. ಪಟ್ಟಣದ ತಾಲ್ಲೂಕು ಕಚೇರಿಗೆ ಕೆಆರ್‌ಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೆರಳಿ ಕಂದಾಯ ಇಲಾಖೆಯಲ್ಲಾಗುತ್ತಿರುವ ಭ್ರಷ್ಟಾಚಾರದ ಪ್ರಕರಣಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಖಂಡ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ ತಾಲ್ಲೂಕಿನಲ್ಲಿ ಈಗಾಗಲೇ ಅಧಿಕಾರಿಶಾಹಿ ಆಡಳಿತದಿಂದಾಗಿ ಮುಗ್ದ ಜನರ ಭೂಧಾಖಲೆಗಳು ನಕಲಿ ದಾಖಲೆಗಳ ಮೂಲಕ ಪರಭಾರೆಯಾಗಿ ಸುದ್ದಿಯಾದ ನಂತರ ಕೆಲ ಅಧಿಕಾರಿಗಳ ತಲೆದಂಡವಾದರೂ ಇನ್ನೂ ಕಂದಾಯ ಇಲಾಖೆಯ ಅಧಿಕಾರಿವರ್ಗ ಬುದ್ದಿಕಲಿತಿಲ್ಲ, ತಾಲ್ಲೂಕಿನ ಹಂದನಕೆರೆ ಹೋಬಳಿ ಸಬ್ಬೇನಹಳ್ಳಿ ಗ್ರಾಮದ ಸ.ನಂ.೩೪ರಲ್ಲಿ ರಾಜಪ್ರಮುಖ ಮೈಸೂರು ಹೆಸರಿಗೆ ೩೬ ಗುಂಟೆ ಜಮೀನನ್ನು ವ್ಯಕ್ತಿಯೊಬ್ಬರು ದಾನವಾಗಿ ನೀಡಿದ್ದರು. ಸದರಿ ಜಮೀನಿನ ದಾಖಲೆಯನ್ನು ಇಲ್ಲಿನ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಖ್ಖಿಗರು ಸೇರಿ ನಕಲಿ ಭೂ ದಾಖಲೆ ಸೃಷ್ಠಿಸಿ ಬೇರೊಬ್ಬರ ಹೆಸರಿಗೆ ಖಾತೆ ಮಾಡಿದ್ದಾರೆ ಎಂದು ಎಲ್ಲಾ ಧಾಖಲೆಗಳನ್ನು ಪ್ರದರ್ಶಿಸಿದರು.…

Read More

ತುಮಕೂರು: ನಗರದಲ್ಲಿ ಅನಧಿಕೃತವಾಗಿ ಚಲಿಸುತ್ತಿರುವ ಬೈಕ್ ಟ್ಯಾöಕ್ಸಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕು, ಹೊಸದಾಗಿ ಆಟೋ ಪರವಾನಗಿ ತಡೆಹಿಡಿಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಆಟೋ ಚಾಲಕರು, ಮಾಲೀಕರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಆವರಣದ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಆಟೋ ಚಾಲಕರು, ಮಾಲೀಕರು ಹೋರಾಟ ಆರಂಭಿಸಿದರು. ತಮ್ಮ ಆಟೋಗಳನ್ನು ನಗರಪಾಲಿಕೆ ಆವರಣದಲ್ಲಿ ನಿಲ್ಲಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ತೆರಳಿ, ಅಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ವಿ.ಪ್ರತಾಪ್ ಮದಕರಿ ಮಾತನಾಡಿ, ನೀಡಿ, ನಗರದಲ್ಲಿ ನಗರ ಸಾರಿಗೆ ಸೇವೆ ಆರಂಭವಾದಾಗಿನಿAದ ಆಟೋಗಳ ವ್ಯವಹಾರ ಕುಸಿತಗೊಂಡು ಆಟೋ ಚಾಲಕರು ತಮ್ಮ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರದಲ್ಲಿ ದಿನೇದಿನೆ ಆಟೋಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಮ್ಮಲ್ಲೇ ಬದುಕಿಗಾಗಿ…

Read More

ತುರುವೇಕೆರೆ: ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಸಮುದಾಯ ವಿದ್ಯಾರ್ಥಿ ಧರಿಸಿದ್ದ ಯಜ್ಞೋಪವಿತ (ಜನಿವಾರ) ತೆಗಿಸಿದ್ದ ಘಟನೆಯನ್ನು ಖಂಡಿಸಿ ತಾಲೂಕು ಬ್ರಾಹ್ಮಣ ಸಮಾಜದವತಿಯಿಂದ ಉಪ ತಹಸೀಲ್ದಾರ್ ಸುಮತಿರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಬ್ರಾಹ್ಮಣ ಸಭಾದ ಮಾಜಿ ಅಧ್ಯಕ್ಷ ಅಮಾನಿಕೆರೆ ಮಂಜುನಾಥ್ ಮಾತನಾಡಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಬೀದರ್ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಪರಿಶೀಲನೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಅಧಿಕಾರಿ ತೆಗಿಸಿ ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ, ಕೂಡಲೇ ಸರ್ಕಾರ ಇಂತಹ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕೆಲಸದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಆರ್. ಸತ್ಯನಾರಾಯಣ್ ಮಾತನಾಡಿ ಒಂದು ಸಮುದಾಯದಕ್ಕೆ ಅಗೌರವ ನೀಡಿರುವುದು ಸರಿಯಲ್ಲ ಇದರಿಂದ ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿದಂತೆ. ಮುಂದೆ ಇಂತಹ ಘಟನೆ ಮರುಕಳಿಸದಂತೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಬದಲ್ಲಿ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕರಾದ ಶ್ರೀನಿವಾಸ್,…

Read More

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ಯೋಗ ಡಿಪ್ಲೊಮಾ ಕೋರ್ಸ್ ಇದ್ದು, ಮುಂದೆ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸುವ ಚಿಂತನೆಯಿದೆ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು. ವಿಶ್ವವಿದ್ಯಾನಿಲಯ ಆಯೋಜಿಸಿದ್ದ ೨೧ ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್ನ ಸಮಾರೋಪ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ಈ ವಿಶೇಷ ಕೋರ್ಸ್ ಅನ್ನು ನಮ್ಮ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗಾಗಿಯೇ ಆರಂಭಿಸಿದ್ದೇವೆ. ಮುಂದೆ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ತೆರೆಯಲಾಗುವುದು ಎಂದರು. ಯೋಗವು ವಯಸ್ಸಿನ ಭೇದವಿಲ್ಲದೆ ಎಲ್ಲರಿಗೂ ಅವಶ್ಯಕವಾಗಿದ್ದು, ಇದರಿಂದ ಮನುಷ್ಯ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗಿ, ಉತ್ತಮ ಆರೋಗ್ಯವನ್ನು ಪಡೆಯುತ್ತಾನೆ ಎಂದರು. ಯೋಗದ ಮಹತ್ವವನ್ನು ಅರ್ಥಮಾಡಿಕೊಂಡು ಲಕ್ಷಾಂತರ ಮಂದಿ ದಿನವೂ ಯೋಗವನ್ನು ತಮ್ಮ ಜೀವನಶೈಲಿಯಾಗಿ ಮಾಡುತ್ತಿದ್ದಾರೆ. ಯೋಗ ಕೇವಲ ಆರೋಗ್ಯವರ್ಧಕವೇ ಅಲ್ಲ, ಅದು ವ್ಯಕ್ತಿತ್ವವರ್ಧಕವೂ ಹೌದು. ಈ ವರ್ಷದ ಯೋಗ ಸರ್ಟಿಫಿಕೇಟ್ ಕೋರ್ಸ್ನಲ್ಲಿ ೫೪ ಅಭ್ಯರ್ಥಿಗಳು ಭಾಗವಹಿಸಿದ್ದು ಸಂತಸದ ವಿಷಯ ಎಂದು ತಿಳಿಸಿದರು. ಕಾರ್ಯಕ್ರಮದ ಸಂಚಾಲಕ ಡಾ. ಎ. ಎಂ. ಮಂಜುನಾಥ…

Read More

ತುಮಕೂರು: ಸ್ನಾತಕೋತ್ತರ ಹಂತದಲ್ಲಿ ತರಬೇತಿಯನ್ನು ಪರಿಣಾಮಕಾರಿಯಾಗಿ ಅಭ್ಯಾಸ ಮಾಡಲು, ವೈಜ್ಞಾನಿಕ ಜ್ಞಾನ ಮತ್ತು ಕೌಶಲ್ಯದ ಆಧಾರದ ಮೇಲೆ ರೋಗಿಗಳೊಂದಿಗೆ ಸಹಾನುಭೂತಿ ವರ್ತಿಸುವುದು ಮತ್ತು ಕಾಳಜಿಯ ಮನೋಭಾವವನ್ನು ಕಂಡು ಕೊಳ್ಳುವ ನಿಟ್ಟಿನಲ್ಲಿ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಚರ್ಮರೋಗ ಶಾಸ್ತ್ರದ ವಿಭಾಗದ ವತಿಯಿಂದ ಒಂದು ದಿನದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ನಗರದ ಅಗಳಕೋಟೆಯಲ್ಲಿರುವ ಆಸ್ಪತ್ರೆಯ ನಾಗಾರ್ಜುನ ಸಭಾಂಗಣದಲ್ಲಿ ಭಾರತೀಯ ಚರ್ಮರೋಗ ತಜ್ಞರ ಸಂಘ ಹಾಗೂ ಕರ್ನಾಟಕ ಕುಷ್ಠರೋಗ ತಜ್ಞರ ಸಂಘ ಮತ್ತು ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಚರ್ಮ ಶಾಸ್ತç ವಿಭಾಗದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಾರ್ಷಿಕ ಕಾರ್ಯಾಗಾರವನ್ನು ರಾಷ್ಟಿçÃಯ ಘಟಕದ ಅಧ್ಯಕ್ಷರಾದ ಡಾ ಮಂಜುನಾಥ್ ಶೆಣೈ ಉದ್ಘಾಟಿಸಿದರು. ಚರ್ಮರೋಗ ಶಾಸ್ತ್ರದ ಪ್ರಥಮ ವರ್ಷದ ಸ್ನಾತಕೋತ್ತರ ಪದವೀಧರರಿಗಾಗಿ ಹಮ್ಮಿಕೊಳ್ಳಲಾಗಿರುವ ವಾರ್ಷಿಕ ಕಾರ್ಯಾ ಗಾರವು ಉತ್ತಮ ಮತ್ತು ಯಶಸ್ವಿ ಚರ್ಮರೋಗ ವೈದ್ಯರನ್ನು ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಅನೇಕ ಹಿರಿಯ ಮತ್ತು ಅನುಭವಿ ಪ್ರಾಧ್ಯಾಪಕರು ನೀಡುವ ವಿವಿಧ ರೀತಿಯ ಮಾರ್ಗದರ್ಶನ ಭಾವಿ ವೈದ್ಯರ ಜ್ಞಾನವನ್ನು…

Read More

ತುಮಕೂರು: ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಮಾಜಿ ಅಧ್ಯಕ್ಷರೂ,ಹಿರಿಯ ವಕೀಲರೂ, ಅಖಿಲ ಭಾರತ ಬಾರ್ ಕೌನ್ಸಿಲ್ ಉಪಾಧ್ಯಕ್ಷರಾದ ಸದಾಶಿವರೆಡ್ಡಿ ಅವರ ಮೇಲೆ ನಡೆದಿರುವ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ನೀಡಿದ ಪ್ರತಿಭಟನೆ ಕರೆಗೆ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರ ನೇತೃತ್ವದಲ್ಲಿ ಎಡ ತೋಳಿಗೆ ಕೆಂಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ನಂತರ ಸಂಘದ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಿರಿಯ,ಕಿರಿಯ,ಮಹಿಳಾ ವಕೀಲರುಗಳು ಮೌನ ಪ್ರತಿಭಟನೆ ಮೂಲಕ ತೆರಳಿ ಸದರಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳ ಪರವಾಗಿ ತಹಸೀಲ್ದಾರ್ ಜಿ.ವಿ.ಮೋಹನ್ ಕುಮಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು, ನಂತರ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಮಾತನಾಡುತ್ತಾ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬಂದಿದ್ದರೂ ಕಕ್ಷಿದಾರರು ವಕೀಲರ ಮೇಲೆ ನಡೆಸಿದ ಹಲ್ಲೆಯನ್ನು ತುಮಕೂರು ಜಿಲ್ಲಾ ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ,ತಪ್ಪಿತಸ್ಥರ ಮೇಲೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,ಇನ್ನುಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೋಲೀಸ್ ಇಲಾಖೆ…

Read More