ತುಮಕೂರು: ಮಾಹತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಟರಿ ಸಂಸ್ಥೆ ಸಹಯೋಗದಲ್ಲಿ ತುಮಕೂರು ತಾಲೂಕನ್ನು ಹಸಿರು ತಾಲೂಕನ್ನಾಗಿಸುವ ನಿಟ್ಟಿನಲ್ಲಿ ಕೋಟಿ ಗಿಡಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು. ತಮ್ಮ ಕಚೇರಿಯಲ್ಲಿಂದು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದ ಅವರು ಕೋಟಿ ಗಿಡಗಳನ್ನು ನೆಡಲು ರೂಪುರೇಷೆಗಳನ್ನು ಸಿದ್ಧಪಡಿಸುವ ಸಲುವಾಗಿ ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತುಮಕೂರು ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ತಾಲೂಕಿನ ಎಲ್ಲ ಶಾಲೆಗಳನ್ನು ಸ್ವಚ್ಛ ಹಾಗೂ ಸುಂದರವನ್ನಾಗಿಸುವ ಚಿಂತನೆ ನಡೆಸಿದ್ದು, ಇದಕ್ಕಾಗಿ ಪ್ರತಿ ಶಾಲೆಗೆ ತಲಾ 2 ಲಕ್ಷ ರೂ.ಗಳನ್ನು ನೀಡಲು ರೋಟರಿ ಸಂಸ್ಥೆ ಮುಂದಾಗಿದೆ. ಮೊದಲಿಗೆ ಸುಮಾರು 30 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. …
Author: News Desk Benkiyabale
ಕೊರಟಗೆರೆ: ಖಾಸಗಿ ಜಮೀನಿನಲ್ಲಿ ಶೇಖರಣೆ ಆಗಿರುವ ಮರಳನ್ನು ಜೆಸಿಬಿ ಬಳಕೆಯಿಂದ ಟ್ರಾಕ್ಟರ್ನಿಂದ ಅಕ್ರಮವಾಗಿ ಗ್ರಾಮದ ಹೊರವಲಯದ ನಿರ್ಜನ ಪ್ರದೇಶಕ್ಕೆ ಸಾಗಾಣಿಕೆ ಮಾಡಿದ ನಂತರ ಲಾರಿ ಮೂಲಕ ಬೆಂಗಳೂರಿಗೆ ಸಾಗಿಸುವ ವೇಳೆ ಪಿಎಸ್ಐ ಮಂಜುನಾಥ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ. ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಪಂ ವ್ಯಾಪ್ತಿಯ ಅಜ್ಜಿಹಳ್ಳಿ ಗ್ರಾಮದ ರಂಗಪ್ಪ ಎಂಬುವರ ಖಾಸಗಿ ಜಮೀನಿನಿಂದ ಅಕ್ರಮವಾಗಿ ಮಂಗಳವಾರ ಮಧ್ಯರಾತ್ರಿ ವೇಳೆ ಮರಳನ್ನು ಜೆಸಿಬಿಯ ಮೂಲಕ ಟ್ರಾಕ್ಟರ್ಗಳಿಗೆ ತುಂಬುತ್ತೀದ್ದ ವೇಳೆ ಸ್ಥಳದಲ್ಲಿದ್ದ 3ಟ್ರಾಕ್ಟರ್ ಮತ್ತು 1ಜೆಸಿಬಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜ್ಜಿಹಳ್ಳಿ ಗ್ರಾಮದ ರಂಗಪ್ಪ ಎಂಬುವರ ಖಾಸಗಿ ಜಮೀನಿನಿಂದ ಪ್ರತಿದಿನ ಅಕ್ರಮವಾಗಿ ಮರಳನ್ನು ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಶೇಖರಣೆ ಮಾಡಿ ನಂತರ ಅದನ್ನು ಲಾರಿಯ ಮೂಲಕ ಊರ್ಡಿಗೆರೆ-ದಾಬಸ್ಪೇಟೆ ಮಾರ್ಗವಾಗಿ ಬೆಂಗಳೂರಿಗೆ ಸಾಗಿಸುವ ಖಚಿತ ಮಾಹಿತಿಯನ್ನು ಪಡೆದು ಕೊರಟಗೆರೆ ಪೊಲೀಸರು ದಾಳಿ…
ತಿಪಟೂರು: ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿರುವ ಡ್ರಾಮಾ ಜ್ಯೂನಿಯರ್ಸ್ ಸೀಜನ್ -3ರ ಗ್ರ್ಯಾಂಡ್ ಫಿನಾಲೆ ಮಾ.9 ರಂದು ಸಂಜೆ 6 ಗಂಟೆಗೆ ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ದಿ. ನರಸಿಂಹರಾಜು ಅವರ ಹುಟ್ಟೂರು ತಿಪ ಟೂರಿನ ಕಲ್ಪತರು ಕ್ರೀಡಾಂಗಣ ದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೇವಲ ರಂಗಭೂಮಿಯ ನಾಟಕಕ್ಕೆ ಸೀಮಿತವಾಗದೆ 1 ರಿಂದ 10ನೇ ತರಗತಿಯ ಮಕ್ಕಳ ಪಠ್ಯ ವಿಷಯಗಳನ್ನು ನಾಟಕಕ್ಕೆ ಅಳವಡಿಸಿಕೊಂಡು ಅಭಿನಯಿಸಿರುವುದು ಈ ಸೀಜನ್ನ ವಿಶೇಷ ಎಂದಿದ್ದಾರೆ. ಡ್ರಾಮಾ ಜೀನಿಯರ್ಸ್ ಪುಟಾಣೆಗಳ ಮನರಂಜನೆ ಜೊತೆ ನೃತ್ಯ ಪ್ರದರ್ಶನ ಹಾಗೂ ಸರಿಗಮಪ ರಿಯಾ ಲಿಟಿ ಶೋ ವಿಜೇತರಾದ ಕೀರ್ತನ್ ಹೊಳ್ಳ ಹಾಗೂ ಹನುಮಂತಣ್ಣ ಇವರಿಂದ ಗಾಯನ ಕಾರ್ಯಕ್ರಮ ಇದ್ದು ತೀರ್ಪುಗಾರರಾದ ನಟಿ ಲಕ್ಷ್ಮಿ, ನಟರಾದ ಮುಖ್ಯ ಮಂತ್ರಿ ಚಂದ್ರು, ವಿಜಯ ರಾಘವೇಂದ್ರ, ನಿರೂಪಕ ಮಾ.ಆನಂದ್ ಈ ಕಾರ್ಯ ಕ್ರಮದಲ್ಲಿ ಭಾಗವಹಿಸುವರು. ಮಾ.8…
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಗೊಂದಲ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಡೆಸುತ್ತಿದ್ದು, ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಕಾಂಗ್ರೆಸ್ ಪಕ್ಷ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರಗಳಿಗೆ ಸೀಟು ಹಂಚಿಕೆ ಬಗ್ಗೆ ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ಗಾಂಧಿಯವರ ಬಳಿ ಚರ್ಚೆ ನಡೆಸಿದ್ದು ಜೆಡಿಎಸ್ಗೆ 12 ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಮನವಿ ಮಾಡಿದ್ದಾರೆ. ಆದರೆ ಅದು ಇನ್ನು ಸ್ಪಷ್ಟವಾಗಿಲ್ಲ. ಇನ್ನು ಮೂಱ್ನಾಲ್ಕು…
ಕೊರಟಗೆರೆ: ಗರ್ಭಕೋಶದ ಸಮಸ್ಯೆಯ ಹೊಟ್ಟೆ ನೋವಿನಿಂದ ಬಳಲುತ್ತೀದ್ದ ಮಹಿಳೆ ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ತೀರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ ತಾಲೂಕಿನ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಪಂ ವ್ಯಾಪ್ತಿಯ ಸೂರೇನಹಳ್ಳಿ ಗ್ರಾಮದ ವಾಸಿಯಾದ ಗೋವಿಂದರಾಜು ಎಂಬುವನ ಮಡದಿ ರಾಧಮ್ಮ(35) ತನ್ನ ತಂದೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಆಗಿದ್ದಾಳೆ. ಮೃತ ಮಹಿಳೆ ಮೂಲತಃ ತುಮಕೂರು ತಾಲೂಕಿನ ಸಿಬಿ ಗ್ರಾಮದವರಾಗಿದ್ದು ತನ್ನ ತಂದೆಯ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ. ಪಿಎಸೈ ಮಂಜುನಾಥ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರಟಗೆರೆ: ರಸ್ತೆ ಬದಿಯಲ್ಲಿ ಪಾದಚಾರಿ ಚಲಿಸುವ ವೇಳೆ ಅಪರಿಚಿತ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟಕ್ಕೆ ಹೋಗುವ ತುಂಬಾಡಿ ಬಳಿಯ ತಿರುವಿನಲ್ಲಿ ಫೆ.27ರಂದು ಅಪರಿಚಿತ ದ್ವಿಚಕ್ರ ವಾಹನ ಫೆ.27ರಂದು ಡಿಕ್ಕಿ ಹೊಡೆದ ಪರಿಣಾಮ ಸುಬ್ಬರಾಯಪ್ಪ(65) ಆಸ್ಪತ್ರೆಯಲ್ಲಿ ಮೃತಪಟ್ಟ ದುದೈವಿ. ಮೃತ ಸುಬ್ಬರಾಯಪ್ಪ ಮೂಲತಃ ಕೊರಟಗೆರೆ ಪಟ್ಟಣದ ವಾಸಿಯಾಗಿದ್ದಾನೆ. ಪೊಲೀಸ್ ಆರಕ್ಷಕ ವೃತ್ತ ಉಪನಿರೀಕ್ಷಕ ಮಂಜುನಾಥ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.
ಸಾಗರ ಕ್ಷೇತ್ರದ ಮಾಜಿ ಶಾಸಕರು ಹಾಗು ಹಾಲಿ ಕಾಂಗ್ರೇಸ್ ಮುಖಂಡರಾಗಿರುವ ಬೇಳೂರು ಗೋಪಾಲಕೃಷ್ಣ ಅವರು ನರೇಂದ್ರ ಮೋದಿ ಅವರಿಗೆ ಗನಗನು ಇಟ್ಟು ಶೂಟ್ ಮಾಡಿ ಬನ್ನಿ ಎಂದು ಹೇಳಿರುವ ಬೇಳೂರು ವಿರುದ್ದ ಇಂದು ತುಮಕೂರಿನ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಈ ಕೂಡಲೆ ಬಂಧಿಸಿ ಜೈಲಿಗೆ ಬಿಡುವಂತೆ ಒತ್ತಾಯ ಮಾಡಿ ಪತ್ರ ನೀಡಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗು ರಾಜ್ಯ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಪ್ರಭಾಕರ ತಿಳಿಸಿದರು. ಇಂದು ತುಮಕೂರಿನ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಪರವಾಗಿ ಅಡಿಷನಲ್ ಎಸ್,ಪಿ ಅವರು ದೂರು ಸ್ವೀಕರಿಸಿ ಕ್ರಮ ಜರುಗಿಸುವುದಾಗಿ ತಿಳಿಸಿದರು ಎಂಚು ಪ್ರಭಾಕರ ತಿಳಿಸಿದರು, ಕಳೆದ ಫೆಬ್ರವರಿ 4 ರಂದು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿರುವ ಈ ದೇಶದ ಪ್ರಧಾನಿಗಳನ್ನು ಗನ್ನು ಇಟ್ಟು ಶೂಟ್ ಮಾಡಿ ಬನ್ನಿ…
ತುಮಕೂರು: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ಟೌನ್ಹಾಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಟೌನ್ಹಾಲ್ನಲ್ಲಿ ಸಮಾವೇಶಗೊಂಡ ಕಟ್ಟಡ ಮತ್ತು ಕ್ವಾರಿ ಕಾರ್ಮಿಕರ ಸಂಘದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಸಂಚಾಲಕ ಗಿರೀಶ್ ಅವರು, ಕಾರ್ಮಿಕರ ಮಂಡಳಿಯಲ್ಲಿ ನೊಂದಣಿಯನ್ನು ಮಾಡುವ ವಿಧಾನವನ್ನು ಬದಲಾಯಿಸಬಾರದು, ಸಾರ್ವಜನಿಕರು ಅಥವಾ ಕಾರ್ಮಿಕರಿಗೆ ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದರೆ, ಕಾರ್ಮಿಕರಲ್ಲದವರು ನೋಂದಣಿಯಾಗುವ ಸಾಧ್ಯತೆ ಇದ್ದು, ನೈಜ ಕಾರ್ಮಿಕರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಯಾವುದೇ ಕಾರಣಕ್ಕೂ ಈ ವಿಧಾನವನ್ನು ಬದಲಿಸಲು ಮುಂದಾಗಬಾರದು ಎಂದು ಒತ್ತಾಯಿಸಿದರು. ರಾಜ್ಯ ಸಮಿತಿ ಮಾರ್ಚ್ 06ರನ್ನು ಬೇಡಿಕೆ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದು, ರಾಜ್ಯದೆಲ್ಲೆಡೆ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಅಂಬೇಡ್ಕರ್ ಕಾರ್ಮಿಕ…
ತುಮಕೂರು : ರಾಜ್ಯ ಸರ್ಕಾರದ ದಿನಕ್ಕೊಂದು ನೀತಿಯ ಮೂಲಕ ಕ್ವಾರಿ ಮತ್ತು ಕ್ರಷರ್ಗಳ ಮಾಲೀಕರ ಮೇಲೆ ಗಧಾ ಪ್ರಹಾರ ನಡೆಸುತ್ತಿರುವುದನ್ನು ಹಾಗೂ ಎರಡೆರಡು ತೆರಿಗೆ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಫೆಡರೇಷನ್ ಆಫ್ ಕರ್ನಾಟಕ ಕ್ಯಾರಿ ಮತ್ತು ಸ್ಟೋನ್ ಕ್ರಷರ್ ಒನ¾õï್ಸ ಅಸೋಸಿಯೇಷನ್ಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಕ್ರಷರ್ ಮಾಲೀಕರು ಹಾಗೂ ಕಾರ್ಮಿಕರು ಸರ್ಕಾರದ ದ್ವಂದ್ವ ನೀತಿ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕ್ರಷರ್ ಮತ್ತು ಕ್ವಾರಿ ಮಾಲೀಕರು ಸಂಘದ ರಾಜ್ಯ ಕಾರ್ಯದರ್ಶಿ ಭಾಸ್ಕರ್, ಜೆಲ್ಲಿ ಕ್ರಷರ್ ಹಾಗೂ ಕ್ವಾರಿ ಮಾಲೀಕರ ಮೇಲೆ ಸರ್ಕಾರ ದ್ವಂದ್ವ ನಿಲುವು ತೋರುತ್ತಿದ್ದು, ಇದರಿಂದ ಕ್ವಾರಿ ಮಾಲೀಕರಿಗೆ…
ತುಮಕೂರು: ಇತಿಹಾಸ ಪ್ರಸಿದ್ದ ಸಿದ್ದಗಂಗಾ ಕ್ಷೇತ್ರದ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವೋಪೇತವಾಗಿ ಇಂದು ನಡೆಯಿತು. ನಡೆದಾಡುವ ದೇವರಾಗಿದ್ದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ನಂತರ ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಮೊದಲ ರಥೋತ್ಸವ ಇದಾಗಿದ್ದು, ಮಧ್ಯಾಹ್ನ 12.10 ಗಂಟೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ಹಿರಿಯ ಶ್ರೀಗಳಂತೆ ರಥದ ಬಲಭಾಗದ ಗಾಲಿಗೆ ತೆಂಗಿನಕಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವಕ್ಕೂ ಮುನ್ನ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯನ್ನು ಶ್ರೀಗಳ ಗದ್ದುಗೆ ಬಳಿಗೆ ಕೊಂಡೊಯ್ದು ಪೂಜೆ ಸಲ್ಲಿಸಿ, ನಂತರ ರಥದ ಸುತ್ತ ಮೂರು ಸುತ್ತು ಸುತ್ತಿದ ನಂತರ ರಥಕ್ಕೆ ಕೂರಿಸಲಾಯಿತು. ನಂತರ ಸಿದ್ದಲಿಂಗ ಸ್ವಾಮೀಜಿಯವರು ರಥದ ಗಾಲಿಗೆ ತೆಂಗಿನಕಾಯಿ ಒಡೆದು ಚಾಲನೆ ನೀಡುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಸಮೂಹದ ಹರ್ಷೋದ್ಗಾರ ಮುಗಿಲು ಮುಟ್ಟಿತು. ನೆತ್ತಿ ಸುಡುವ ಬಿಸಿಲಿನ ಝಳವನ್ನು ಲೆಕ್ಕಿಸದೆ…











