ತುಮಕೂರು: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ವಿವಿಧ ಕಡೆ ಕೈಗೆತ್ತಿಕೊಂಡಿರುವ 134 ಕೋಟಿ ರೂ. ವೆಚ್ಚದ 3 ಸ್ಮಾರ್ಟ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು. ನಗರದ ಸುಮಾರು 14 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 191.10 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ರಸ್ತೆಗಳನ್ನಾಗಿ ಪರಿವರ್ತಿಸುವ ಕಾಮಗಾರಿಯಡಿ ಈ 3 ರಸ್ತೆಗಳ ನಿರ್ಮಾಣ ಕೈಗೊಳ್ಳಲಾಗಿದ್ದು, 47.74ಕೋಟಿ ರೂ. ವೆಚ್ಚದ ಸ್ಮಾರ್ಟ್ ರಸ್ತೆಯನ್ನು ಡಾ: ಶಿವಕುಮಾರ ಸ್ವಾಮೀಜಿ ವೃತ್ತ, 49.87 ಕೋಟಿ ರೂ. ವೆಚ್ಚದ ರಸ್ತೆಯನ್ನು ಡಾ: ರಾಧಾಕೃಷ್ಣ ರಸ್ತೆ ಹಾಗೂ 36.88 ಕೋಟಿ ರೂ. ವೆಚ್ಚದ ಸ್ಮಾರ್ಟ್ ರಸ್ತೆಯನ್ನು ಭಗವಾನ್ ಮಹಾವೀರರಸ್ತೆಯಲ್ಲಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು. ಸ್ಮಾರ್ಟ್ ರಸ್ತೆ ವಿಶೇಷ ಪ್ಯಾಕೇಜ್ನಡಿ ಹಂತ ಹಂತವಾಗಿ ಉತ್ತಮವಾದ ಪಾದಚಾರಿ ಮಾರ್ಗ, ಪ್ರತ್ಯೇಕ ಬೈಸಿಕಲ್ ಟ್ರ್ಯಾಕ್, ಅಂಡರ್ಗ್ರೌಂಡ್ ಡಕ್ಟಿಂಗ್, ಬಹುಕ್ರಿಯಾತ್ಮಕ ವಲಯ, ಹಸಿರು ವಲಯ…
Author: News Desk Benkiyabale
ತುಮಕೂರು: ರಕ್ತ ಕುದಿಯೋದು ಆರಬೇಕು ಅಂದ್ರೆ ಸಂಪೂರ್ಣ ಕಾಶ್ಮೀರ ನಮ್ಮದಾಗಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಯುವಕರು ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ಭಾರತದ ವೀರ ಯೋಧರು ದಾಳಿ ಮಾಡಿ ಮುಗಿಸಿದ್ದರು. ಪ್ರಧಾನ ಮಂತ್ರಿ ಯೋಧರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ನನಗೂ ರಕ್ತ ಕುದಿಯುತ್ತಿದೆ. ರಕ್ತ ಕುದಿಯೋದು ಆರಬೇಕು ಅಂದ್ರೆ ಸಂಪೂರ್ಣ ಕಾಶ್ಮೀರ ನಮ್ಮದಾಗಬೇಕು ಎಂದಿದ್ದಾರೆ. ಪ್ರಧಾನಿ ಮೋದಿಯವರು ಉಗ್ರಗಾಮಿಗಳ ಬೇರು ಸಹಿತ ಕಿತ್ತುಹಾಕಬೇಕು. ಪಾಕಿಸ್ತಾನದಲ್ಲಿರುವ ಭಾರತೀಯ ಬಂಧುಗಳು ಸಿವಿಲ್ ವಾರ್ ಮಾಡಬೇಕು. ಚೈನಾದವರ ಬಗ್ಗೆ ಮಾತನಾಡಿದ್ರೆ ಸುಟ್ಟುಹಾಕ್ತಾರೆ ಅದೇ ತರ ಹುರಿಹತ್ ನಲ್ಲಿ ಇರುವವರನ್ನು ಸುಟ್ಟಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.
ನವದೆಹಲಿ: ಭಾರತದ ಕಾಶ್ಮೀರದಲ್ಲಿ ಹಿಂಸಾಕೃತ್ಯ ಎಸಗುವ ಕನಸು ಕಾಣುತ್ತ ಪಾಕಿಸ್ತಾನಿ ಉಗ್ರರು ಸುಖನಿದ್ರೆಯಲ್ಲಿ ತೊಡಗಿದ್ದಾಗ, ಮಂಗಳವಾರ ಬೆಳಗಿನ ಜಾವ 3.45ರ ಸುಮಾರಿಗೆ ದಾಳಿ ನಡೆಸಿದ ಭಾರತೀಯ ವಾಯು ಸೇನೆ, ಬಾಲಕೋಟ್ ನಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಈ ದಾಳಿಯ ಬಗ್ಗೆ ಅರಿಯುವ ಮುನ್ನವೇ ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಕಂಟ್ರೋಲ್ ರೂಮ್ ಸೇರಿದಂತೆ ಹಲವಾರು ಉಗ್ರರ ತರಬೇತಿ ನೆಲೆಗಳು ಧ್ವಂಸವಾಗಿವೆ. ಈ ದಾಳಿಯಲ್ಲಿ ಕನಿಷ್ಠಪಕ್ಷ 300ಕ್ಕೂ ಹೆಚ್ಚು ಪಾಕ್ ಬೆಂಬಲಿತ ಉಗ್ರರು ಹತರಾಗಿದ್ದಾರೆ. ಈ ದಾಳಿ ನಡೆದಿದ್ದು ಕೇವಲ 21 ನಿಮಿಷಗಳು ಮಾತ್ರ. ಬೆಳಗಿನ ಜಾವ 3.45ಕ್ಕೆ ಆರಂಭವಾದ ದಾಳಿ 4 ಗಂಟೆ 6 ನಿಮಿಷದ ಹೊತ್ತಿಗೆ ಮುಕ್ತಾಯವಾಗಿತ್ತು. ಮೊದಲಿಗೆ ಬಾಲಕೋಟ್ ನಲ್ಲಿ ದಾಳಿ ನಡೆದರೆ, ನಂತರ ಮುಜಫರಾಬಾದ್ ಮತ್ತು ಚಾಕೋಟಿಯಲ್ಲಿ, ಭಾರತೀಯ ವಾಯು ಸೇನೆಯ ಮಿರಾಜ್ 2000 ಯುದ್ಧ ವಿಮಾನ ಬಳಸಿ ದಾಳಿ ಮಾಡಲಾಗಿದೆ. …
ಚಿಕ್ಕನಾಯಕನಹಳ್ಳಿ : ರಾಷ್ಟ್ರೀಯ ಹೆದ್ದಾರಿ 150 ಎ ಕೆ.ಬಿ.ಕ್ರಾಸ್ನಿಂದ ಹುಳಿಯಾರು ರಸ್ತೆಯ ಅಭಿವೃದ್ದಿ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸರ್ಕಾರದ ಶಿಷ್ಟಾಚಾರವನ್ನು ಉಲ್ಲಂಘನೆಯಾಗಿದೆ ಎಂದು ತಾಲ್ಲೂಕು ಬಿ.ಜೆ.ಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಜಾಗೃತಗೊಂಡ ಪೋಲಿಸರು ಪ್ರತಿಭಟನೆಗೆ ಮುನ್ನವೇ 37 ಮಂದಿ ಬಂಧಿಸುವಲ್ಲಿ ಯಶಸ್ವಿಯಾಗಿ ಕಾಮಗಾರಿಯ ಪೂಜೆಗೆ ಅನುಮಾಡಿಕೊಟ್ಟರು. ಪಟ್ಟಣದ ನೆಹರು ವೃತ್ತದಲ್ಲಿ ಕೇಂದ್ರ ಸರ್ಕಾರ ರಸ್ತೆ ಅಭಿವೃದ್ದಿ ಕಾಮಗಾರಿಗೆ 255ಕೋಟಿ ಕಾಮಗಾರಿಯನ್ನು ಎಸ್.ಪಿ.ಮುದ್ದಹನುಮೇಗೌಡರು ಶಂಕುಸ್ಥಾಪನೆಗೆ ಆಗಮಿಸಿದ ಸಂದರ್ಭದಲ್ಲಿ ಬಿ.,ಜೆ.ಪಿ ಕಾರ್ಯಕರ್ತರು ಸಂಸದರಿಗೆ ಮತ್ತು ಮೈತ್ರಿ ಸರ್ಕಾರಕ್ಕೆ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಲು ಮುಂದಾದರು. ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಹೆಚ್.ಆರ್.ಶಶಿಧರ್ ಮಾತನಾಡಿ ಕೇಂಧ್ರ ಬಿ.ಜೆ.ಪಿ ಸರ್ಕಾರ ರಸ್ತೆ ಅಭಿವೃದ್ದಿಗೆ ಹಣ ನೀಡಿದ್ದು, ತಾಲ್ಲೂಕಿನ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಶಾಸಕರಿದ್ದು, ಸರ್ಕಾರಿ ಕಾರ್ಯಕ್ರಮವಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪೂಜೆಗೆ ಶಾಸಕರನ್ನು ಆಹ್ವಾನ ನೀಡದೇ ಇರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು…
ಚಿಕ್ಕನಾಯಕನಹಳ್ಳಿ: ಹುಳಿಯಾರು, ಕಂದಿಕೆರೆ, ಶೆಟ್ಟಿಕೆರೆಗಳಲ್ಲಿ ಡಾ.ಅಂಬೇಡ್ಕರ್ ಭವನ ನಿರ್ಮಿಸಲು ತಲಾ 25 ಲಕ್ಷ ರೂ. ಮಂಜೂರಾಗಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಹಿತರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಜನಾಂಗಕ್ಕೆ ಮನೆಗಳನ್ನು ನಿರ್ಮಿಸಲು ನಿವೇಶನದ ಕೊರತೆ ಇರುವುದರಿಂದ, ಹುಳಿಯಾರು ಹಾಗೂ ಕೆಂಕೆರೆ ಗ್ರಾಮಗಳಲ್ಲಿ ಒಬ್ಬರಿಗೆ ಒಂದು ಮನೆ ಕಟ್ಟಿಕೊಡುವ ಬದಲು ಕೆಳಮನೆ ಹಾಗೂ ಮೇಲಂತಸ್ತಿನ ಮನೆ ನಿರ್ಮಿಸಲು ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಮಾತುಕತೆ ನಡೆಸಿದ್ದೇನೆ ಎಂದರು. ಡಿಎಸ್ಎಸ್ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ ಮಾತನಾಡಿ, ಸರ್ಕಾರ ಎಸ್.ಸಿ, ಎಸ್.ಟಿ ಜನಾಂಗಕ್ಕೆ ಶೇ.22.75% ರ ಅನುನಾನದಲ್ಲಿ ಶಿಕ್ಷಣಕ್ಕೆ ವೈಯಕ್ತಿಕವಾಗಿ ಹಾಗೂ ಸಾಮಾಜಿಕ ಕಾರ್ಯಗಳಿಗೆ ಮೀಸಲಿಟ್ಟಿರುವ ಹಣವನ್ನು ಸರಿಯಾಗಿ ಬಳಸಿ ಎಂದು ಸಲಹೆ ನೀಡಿದರು. …
ತುರುವೇಕೆರೆ: ಬಡ್ಡಿ ರಹಿತ ಸಾಲ ಪಡೆದುಕೊಳ್ಳುವ ಬೀದಿ ಬದಿ ವ್ಯಾಪಾರಿಗಳು ಸದುಪಯೋಗ ಮಾಡಿಕೊಂಡು ಆರ್ಥಿಕ ಸಬಲತೆ ಹೊಂದಬೇಕೆಂದು ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಆರ್. ರಾಜೇಂದ್ರ ಕಿವಿಮಾತು ಹೇಳಿದರು. ಪಟ್ಟಣದ ಪಟ್ಟಣ ಪಂಚಾಯತ್ ಆವರಣದಲ್ಲಿ ಡಿ.ಸಿ.ಸಿ. ಬ್ಯಾಂಕ್ ಬೀದಿಬದಿ ವ್ಯಾಪಾರಿಗಳಿಗೆ ಬಡವರಬಂಧು ಯೋಜನೆಯ ಸಾಲ ವಿತರಣೆ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ಐದಾರು ವರ್ಷಗಳ ಹಿಂದೆಯೇ ಬೀದಿ ಬದಿ ವ್ಯಾಪಾರಿಗಳಿಗೆ ಜಿಲ್ಲಾ ಕೇಂದ್ರ ಬ್ಯಾಂಕ್ ವತಿಯಿಂದ ಬಡ್ಡಿ ರಹಿತ ಸಾಲ ನೀಡಬೇಕೆಂಬುದು ಅಧ್ಯಕ್ಷರಾಗಿದ್ದ ಕೆ.ಎನ್.ರಾಜಣ್ಣನವರು ಆಕಾಂಕ್ಷೆಯನು ಹೊಂದಿದ್ದರು. ಈ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ವಿತರಿಸುವ ಮೂಲಕ ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸಶಕ್ತತೆಗೊಳಿಸಲು ಡಿ.ಸಿ.ಸಿ.ಬ್ಯಾಂಕ್ ಮುಂದಾಗಿದ್ದನ್ನು ಸ್ಮರಿಸಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕೆ ಉತ್ತಮವಾದ ಯೋಜನೆಯಾಗಿದೆ ಎಂದರು. ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಬಿ.ಎಸ್. ದೇವರಾಜು ಮಾತನಾಡಿ ಸರ್ಕಾರದ…
ಯಾದಗಿರಿ: ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ನಡೆದ ಅಪಘಾತದಲ್ಲಿ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಶಹಾಬಾದ್ ನಿವಾಸಿಗಳಾದ ಸುಧಾಕರ್(47), ಪೃಥ್ವಿ(7) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಗಳೂರಿನಿಂದ ಶಹಾಬಾದ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸೈದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಿಎಸ್ಎನ್ಎಲ್ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ಉಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿರುವ 6 ತಿಂಗಳ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬಿಎಸ್ಎನ್ಎಲ್ ನೌಕರರು ಸಿಐಟಿಯು ನೇತೃತ್ವದಲ್ಲಿ ತುಮಕೂರು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಕೇಂದ್ರ ಸರ್ಕಾರ ಸಾವಿರಾರು ಬಿಎಸ್ಎನ್ಎಲ್ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಪಿತೂರಿ ನಡೆಸಿದ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲು ಪಿತೂರಿ ನಡೆಸುತ್ತಿದೆ. ಇದಕ್ಕೆ ಪ್ರಜ್ಞಾವಂತರು ಮತ್ತು ದೇಶಭಕ್ತರು ಬೆಂಬಲ ನೀಡಬಾರದು ಎಂದು ಮನವಿ ಮಾಡಿದರು. ಸಿಐಟಿಯು ಮೊದಲಿನಿಂದಲೂ ಸಾರ್ವಜನಿಕ ಉದ್ದಿಮೆಗಳ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಸಾರ್ವಜನಿಕ ಉದ್ದಿಮೆಗಳನ್ನು ಉಳಿಸುವುದರಿಂದ ಲಕ್ಷಾಂತರ ಕುಟುಂಬಗಳು ಜೀವನ ಸಾಗಲಿಸಲು ಅನುಕೂಲವಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಬಿಎಸ್ಎನ್ಎಲ್ ಸಂಸ್ಥೆಗೆ ಸಂಪನ್ಮೂಲ, ಸೆಕ್ಟ್ರಂ ಮತ್ತು ಹಣಕಾಸು ನೆರವು ನೀಡುವ ಮೂಲಕ ಸಂಸ್ಥೆಯು ಜನಸ್ನೇಹಿಯಾಗಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. …
ತುಮಕೂರು: ದೇಶದ ಗಡಿ ಕಾಯುವ ಯೋಧರಂತೆ ನಗರದ ಆರೋಗ್ಯವನ್ನು ಕಾಪಾಡುವ ಸಫಾಯಿ ಕರ್ಮಚಾರಿಗಳಿಗೂ ಸಮಾನ ಮನ್ನಣೆ ಇದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಅವರು ತಿಳಿಸಿದರು. ನಗರದ ಸಿದ್ದಿವಿನಾಯಕ ಸಮುದಾಯ ಭವನದಲ್ಲಿ ಇಂದು ಸಫಾಯಿ ಕರ್ಮಚಾರಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಲೆತಲಾಂತರಗಳಿಂದ ತಲೆಯ ಮೇಲೆ ಮಲವನ್ನು ಹೊತ್ತು ಊರು- ಕೇರಿಗಳ ಸ್ವಚ್ಛತೆಗಾಗಿ ಶ್ರಮಿಸಿದ್ದವರ ಜೀವನ ಮಟ್ಟವನ್ನು ಉತ್ತಮಗೊಳಿಸಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಚುನಾಯಿತ ಪ್ರತಿನಿಧಿಗಳು, ಆಡಳಿತ ಯಂತ್ರಗಳು ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರಿಗೆ ಇರುವ ಸರ್ಕಾರಿ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು. ಅವರನ್ನು ಮುಖ್ಯ ವಾಹಿನಿಗೆ ತಂದು ಸಮಾಜದಲ್ಲಿ ಸಾಮಾನ್ಯರಂತೆ ಯಾವುದೇ ಬೇಧ ತೋರದೆ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.…
ಪಾವಗಡ :- ತಾಲ್ಲೂಕಿನಲ್ಲೇ ಆತ್ಯಂತ ಹಿಂದುಳಿದ ಭಾಗವಾದ ನಾಗಲಮಡಿಕೆ ಹೋಬಳಿ ಅಭಿವೃದ್ದಿಗೆ ಆದ್ಯತೆ ನೀಡಿ 25 ಕೋಟಿ ವೆಚ್ಚದಲ್ಲಿ ಏಕಲವ್ಯ ವಸತಿ ಶಾಲೆ ನಿರ್ಮಾಣಕ್ಕೆ ಪ್ರಪೋಸಲ್ ಕಳುಹಿಸಲಾಗಿದೆ ಎಂದು ಕಾರ್ಮಿಕ ಸಚಿವಾ ವೆಂಕಟರಮಣಪ್ಪ ತಿಳಿಸಿದರು. ತಾಲ್ಲೂಕಿನ ರ್ಯಾಪ್ಟೆ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕಂದಾಯ ಮತ್ತು ಪಿಂಚಣೆ ಆದಾಲತ್ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ವೆಂಕಟರಮಣಪ್ಪ ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತೀಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಂದೇ ಭಾರಿ ಮಾಶಾಸನ ನೀಡಲು ನಿರ್ದರಿಸಿದ ಕಾರಣದಿಂದ ಇಂದು 525 ಫಲಾನುಭವಿಗಳಿಗೆ ಆದೇಶದ ಪ್ರತಿ ನೀಡಲಾಗುತ್ತಿದ್ದು ಯಾವುದೇ ತಾಂತ್ರಿಕ ಸಮಸ್ಯೆ ಇದ್ದರೂ ಕೂಡಲೇ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಚಿತ್ರದುರ್ಗ ಸಂಸದರಾದ ಚಂದ್ರಪ್ಪ ಮಾತನಾಡಿ, ಈ ಹಿಂದೆ ಐದುವರ್ಷ ಪೂರ್ಣವದಿ ಸರ್ಕಾರ ನಡೆಸಿದ್ದು ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಹಿಡೇರಿಸಿ ಜನಪರ ಸರ್ಕಾರವಾಗಿ ರೈತರ ಸಾಲಮನ್ನ ಮಾಡಿದ್ದವೆ ಇಂದಿನ ಸಂಮಿಶ್ರ ಸರ್ಕಾರ 45…











