Author: News Desk Benkiyabale

 ತುಮಕೂರು:       ಉತ್ತಮ ಆರೋಗ್ಯಕ್ಕೆ ಆಯುಷ್ ಚಿಕಿತ್ಸೆ ಅಗತ್ಯ ಎಂದು ಜಿಲ್ಲಾ ಆಯುಷ್ ಆರೋಗ್ಯಾಧಿಕಾರಿ ಸಂಜೀವ್‍ಮೂರ್ತಿ ತಿಳಿಸಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಅರುಣ ಎಜುಕೇಷನ್ ಟ್ರಸ್ಟ್‍ಗಳ ಸಹಯೋಗದಲ್ಲಿಂದು ನಗರದ ಅಶ್ವಿನಿ ಆಯುರ್ವೇದ ಆಸ್ಪತ್ರೆಯಲ್ಲಿ ಎಸ್.ಸಿ.ಪಿ ಫಲಾನುಭವಿಗಳಿಗಾಗಿ ಏರ್ಪಡಿಸಲಾಗಿದ್ದ “ಜಿಲ್ಲಾ ಮಟ್ಟದ ಆಯುಷ್ ಕಾರ್ಯಾಗಾರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಆಯುಷ್ ಚಿಕಿತ್ಸೆಯಿಂದ ಇಂತಹ ರೋಗಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು. ಸರ್ಕಾರದ ಐ.ಇ.ಸಿ ಕಾರ್ಯಕ್ರಮದಡಿ ಎಸ್.ಸಿ.ಪಿ/ಟಿಎಸ್.ಪಿ ಫಲಾನುಭವಿಗಳಿಗಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.       ಕಾರ್ಯಾಗಾರದಲ್ಲಿ ಅರುಣ ಎಜುಕೇಷನ್ ಟ್ರಸ್ಟ್‍ನ ನಿರ್ದೇಶಕ ರಾಘವೇಂದ್ರ, ಕಾರ್ಯದರ್ಶಿ ಸುಜಾತ, ಅಶ್ವಿನಿ ಆರ್ಯುವೇದ ಕಾಲೇಜಿನ ಪ್ರಾಂಶುಪಾಲ ಹರೀಶ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Read More

 ತುಮಕೂರು:      ಮಕ್ಕಳು ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದೇ ಮಹಾ ಭಾಗ್ಯ ಎಂದು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗಸ್ವಾಮಿ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು.      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ದಗಂಗಾ ಶಾಲೆಗಳ ಸಹಯೋಗದಲ್ಲಿ ಮಠದ ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಮಕ್ಕಳು ಆಲ್ಬೆಂಡಜೋಲ್ ಜಂತು ನಿವಾರಕ ಮಾತ್ರೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಯಾವುದೇ ಸಾಧನೆ ಮಾಡಲು ದೈಹಿಕ ಆರೋಗ್ಯ ಅಗತ್ಯ. ಈ ನಿಟ್ಟಿನಲ್ಲಿ ಮಕ್ಕಳು ತಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ ಮಾತನಾಡಿ, ಜಂತುಹುಳು ನಿವಾರಣೆಗೆ ಸ್ವಚ್ಛತೆ ಅವಶ್ಯ. ಜಂತುಹುಳು ಸೋಂಕಿನಿಂದ ಮಕ್ಕಳು ರಕ್ತಹೀನತೆ, ಪೌಷ್ಠಿಕಾಂಶ ಕೊರತೆ, ಹಸಿವೆಯಾಗದಿರುವುದು, ನಿಶ್ಯಕ್ತಿ ಮತ್ತು ಆತಂಕ, ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವಂತಹ ಅಪಾಯಕಾರಿ ಆರೋಗ್ಯ…

Read More

 ತುಮಕೂರು:       ರಾಷ್ಟ್ರೀಯ ಸಪ್ತಾಹದ ಅಂಗವಾಗಿ ತುಮಕೂರು ರೋಟರಿ ಕ್ಲಬ್ ವತಿಯಿಂದ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಆವರಣದಲ್ಲಿಂದು ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.       ಪ್ರಾದೇಶಿಕ ಸಾರಿಗೆ ಇಲಾಖೆ, ರೋಟರಿ, ಜೆ.ಸಿ. ವಾಲೆಂಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಈ ಶಿಬಿರವನ್ನುದ್ದೇಶಿಸಿ ಮಾತನಾಡಿದ ಉಪ ಸಾರಿಗೆ ಪ್ರಾದೇಶಿಕ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಕ ಬಸವರಾಜ್ ಆರಾಧ್ಯ, ರಕ್ತದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತಾಗುತ್ತದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಅಗತ್ಯತೆ ಇರುವವರಿಗೆ ನೀಡುವ ಮೂಲಕ ಮಾನವೀಯತೆ ತೋರಬೇಕು ಎಂದು ತಿಳಿಸಿದರು.       ತುಮಕೂರು ರೋಟರಿ ಅಧ್ಯಕ್ಷ ಉದಯ್ ಕುಮಾರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಬಿರದಲ್ಲಿ ಸುಮಾರು 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.

Read More

 ತುಮಕೂರು:       ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಮ್ಮ ಕಛೇರಿಯಲ್ಲಿಂದು ವಿವಿಧ ರಾಜಕೀಯ ಪಕ್ಷಗಳ ಸಭೆ ನಡೆಸಿದರು.       ಸಭೆಯಲ್ಲಿ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ರಾಜಕೀಯ ಪಕ್ಷಗಳು ನಿರ್ವಹಿಸಬೇಕಾದ ಖರ್ಚು-ವೆಚ್ಚಗಳ ಅಂತಿಮ ದರವನ್ನು ನಿಗಧಿಗೊಳಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ಜಿಲ್ಲಾಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ, ಮಾದರಿ ನೀತಿ ಸಂಹಿತೆ, ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ದೂರು ಸಲ್ಲಿಕೆಗಳ ಬಗ್ಗೆ ಹಾಜರಿದ್ದ ಕಾಂಗ್ರೆಸ್ ಪಕ್ಷದ ನರಸಿಂಹಮೂರ್ತಿ, ಸಿಪಿಐಎಂ ಪಕ್ಷದ ಬಿ.ಉಮೇಶ್, ಸಿ.ಪಿ.ಐ ಪಕ್ಷದ ಗಿರೀಶ್ ಅವರಿಂದ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ಪಡೆದರು.       ನಂತರ ಮಾತನಾಡಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು, ದಿನಾಂಕ:01-01-2019ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಈಗಾಗಲೇ ಪರಿಷ್ಕøತ ಮತದಾರರ ಪಟ್ಟಿಯನ್ನು ತಯಾರಿಸಿ ಪ್ರಕಟಿಸಲಾಗಿದೆ. ಮತಪಟ್ಟಿಗೆ ಹೆಸರನ್ನು ಸೇರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ. ಆದರೆ ಮತಪಟ್ಟಿಗೆ ಹೊಸದಾಗಿ ಹೆಸರನ್ನು ಸೇರಿಸಲು ಚುನಾವಣೆ…

Read More

 ತುಮಕೂರು:       ನಗರದ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿ ಫೆಬ್ರುವರಿ 15 ಹಾಗೂ 16ರಂದು ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಮೇಳದಲ್ಲಿ ಕಿದ್ವಾಯಿ ಆರೋಗ್ಯ ಸಂಸ್ಥೆ, ಅಪೊಲೋ ಆಸ್ಪತ್ರೆ, ಸಿದ್ದಾರ್ಥ ಮೆಡಿಕಲ್ ಕಾಲೇಜಿನಿಂದ ತಜ್ಞ ವೈದ್ಯರು ಪಾಲ್ಗೊಂಡು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ದೀರ್ಘ ಕಾಲದಿಂದ ರೋಗದಿಂದ ಬಳಲುತ್ತಿರುವವರು ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ ಮಾತನಾಡಿ ಮೇಳದಲ್ಲಿ ಹೃದಯ ಸಂಬಂಧಿ ಕಾಯಿಲೆ, ಕಣ್ಣಿನ ಸಮಸ್ಯೆ, ಕುಷ್ಠರೋಗ, ಕ್ಷಯರೋಗ, ಕ್ಯಾನ್ಸರ್, ಚರ್ಮ ಸಂಬಂಧಿ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ: ವೀರಭದ್ರಯ್ಯ, ಕೆಎಸ್‍ಆರ್‍ಟಿಸಿ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

Read More

ತುರುವೇಕೆರೆ:       ಮನುಷ್ಯನ ತನ್ನ ಜೀವನದ ಆದರ್ಶದ ಬದುಕು ಸಮಾಜದಲ್ಲಿ ಉತ್ತಂಗಕ್ಕೆ ಕರೆದೊಯ್ಯಲಿದೆ ಎಂದು ಮೈಸೂರು ಮಹಾರಾಜ ಯುದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.       ತಾಲೂಕಿನ ಆನಡಗು ಗ್ರಾಮದಲ್ಲಿ ಚಿತ್ರನಟ ಜಗ್ಗೇಶ್ ಕುಟುಂಬ ನಿರ್ಮಿಸಿರುವ ಕಾಲಬೈರವೇಶ್ವರ ನೂತನ ದೇವಾಲಯ ಲೋಕಾರ್ಪಣೆ, ಸ್ಥಿರಮೂರ್ತಿ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಚಿತ್ರ ನಟ ಜಗ್ಗೇಶ್ ತನ್ನ ಹುಟ್ಟೂರಿನಲ್ಲಿ ದೇವಸ್ಥಾನ ನಿರ್ಮಿಸಿ ಅದರ್ಶವನ್ನು ಮುಂದುವರೆದಿದ್ದಾರೆ. ಪ್ರತಿಯೊಬ್ಬರು ಸಮಾಜಕ್ಕೆ ತನ್ನ ಕೈಲಾದ ಕೊಡುಗೆ ನೀಡಬೇಕಾಗಿದೆ. ಉತ್ತರ ಕರ್ನಾಟಕದಲ್ಲಿ ಕಾರ್ಯಕ್ರಮ ಒತ್ತಡ ಇದ್ದರು ಸಹ ದೈವ ಕೃಪೆಯಿಂದ ಕಾರ್ಯಕ್ರಮವನ್ನು ರದ್ದು ಮಾಡಿ ಆಗಮಿಸಿದ್ದೇನೆ. ಮೈಸೂರು ಸಂಸ್ಥಾನ ಜೊತೆ ಸಾರ್ವಜನಿಕರ ಸಂಬಂದ ಈಗೇ ಮುಂದುವರೆಯಬೇಕು ಎಂದು ತಿಳಿಸಿದರು       ಚಿತ್ರ ನಟ ಜಗ್ಗೇಶ್ ಮಾತನಾಡಿ ನಮ್ಮ ತಾತ 1930ರಲ್ಲಿಯೇ ನಮ್ಮ ಗ್ರಾಮಕ್ಕೆ ಒಂದು ಬಾವಿ, ಶಾಲೆಯನ್ನು ಕಟ್ಟಿಸಿದ್ದರು. ಮಲೇಶಿಯಗೇ ಹೋಗಬೇಕಿದ್ದ ಕಾಲಬೈರವ ಮೂರ್ತಿ ನನಗೆ ಸಿಕ್ಕಿ ಇಂದು ನಮ್ಮ…

Read More

ದೆಹಲಿ:        ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ 0.25ರಷ್ಟು ಅಂಕ ಇಳಿಕೆ ಮಾಡಿದೆ. ಇದರಿಂದಾಗಿ ಈ ಹಿಂದೆ ಇದ್ದ ಶೇ.6.50 ರೆಪೋ ದರ ಈಗ ಶೇ.6.25ಕ್ಕೆ ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಗೃಹ, ಮೋಟಾರು ವಾಹನ ಸಾಲಗಳ ಮೇಲಿನ ಬಡ್ಡಿದರ ಕಡಿಮೆಯಾಗಲಿವೆ.        ಆರ್‌ಬಿಐನ ನೂತನ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಆರ್‌ಬಿಐ ಬಿಡುಗಡೆ ಮಾಡಿದ ಮೊದಲ ವಿತ್ತೀಯ ನೀತಿ ಇದಾಗಿದೆ. ಆರು ಸದಸ್ಯರನ್ನು ಒಳಗೊಂಡ ಹಣಕಾಸು ನೀತಿ ಸಮಿತಿಯು ಸರ್ವಾನುಮತದಿಂದ ಈ ನಿರ್ಧಾರಕ್ಕೆ ಒಪ್ಪಿಗೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.       ಆರ್‌ಬಿಐನ ಈ ನಿರ್ಧಾರದಿಂದ ಗೃಹ, ಮೋಟಾರು ವಾಹನ ಸಾಲ ಪಡೆಯುವ ಆಕಾಂಕ್ಷಿಗಳಿಗೆ ಇಎಂಐ ಹೊರೆ ಕಡಿಮೆಯಾಗಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದರು. ಆರ್‌ಬಿಐನ ಈ ದರ ಇಳಿಕೆ ನೀತಿಯನ್ನು ಅನುಸರಿಸಿ ಬ್ಯಾಂಕುಗಳ ತಾವು ನೀಡುವ ಗೃಹ, ಮೋಟಾರು ವಾಹನಗಳ ಸಾಲದ ಮೇಲಿನ ಬಡ್ಡಿಯು ಕಡಿಮೆಯಾಗಲಿದೆ…

Read More

ತುಮಕೂರು:        ಎಲ್ಲಿ ಜ್ಞಾನ ಇರುತ್ತದೆಯೇ, ಆ ಜ್ಞಾನವನ್ನು ಹುಡುಕಿಕೊಂಡು ನಾವು ಜ್ಞಾನ ಇರುವಲ್ಲಿಗೆ ಹೋಗಬೇಕು. ಆಗ ಜ್ಞಾನ ಎಲ್ಲರಿಗೂ ಸಿಗುತ್ತದೆ. ಇಷ್ಟು ವರ್ಷ ನಮ್ಮ ನಡುವೆ ನೂರಾಹನ್ನೊಂದು ವರ್ಷ ಬದುಕಿದ್ದ ನಡೆದಾಡುವ ದೇವರು ಎನ್ನಿಸಿಕೊಂಡಿದ್ದ ಲಿಂಗೈಕ್ಯ ಡಾ.ಶಿವಕುಮಾರಸ್ವಾಮೀಜಿ ಅವರು ನಡೆದ ದಾರಿಯಲ್ಲಿ ನಡೆದರೆ ಸಾಕು ನಾವು ಅವರಿಗೆ ಸಲ್ಲಿಸುವ ಗೌರವ ಎಂದು ತುಮಕೂರಿನ ಹಿರೇಮಠ ಅಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.       ಅವರು ಸಓಮೇಶ್ವರಪುರಂ ನಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಜ್ಞಾನಬುತ್ತಿ ಸತ್ಸಂಗದ 500ನೇ ಸಾಪ್ತಾಹಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜ್ಞಾನಬುತ್ತಿ ಸತ್ಸಂಗದ ಬಗ್ಗೆ ನನಗೆ ತುಂಬಾ ಗೌರವ ಇದೆ. ಈ ಸಂಘದ ಪಿ.ಶಾಂತಿಲಾಲ್ ಮತ್ತು ಟಿ.ಮುರಳೀಕೃಷ್ಣಪ್ಪ ಇಬ್ಬರು ಎರಡು ಕಣ್ಣುಗಳಿದ್ದಂತೆ. ಈ ಎರಡು ಕಣ್ಣುಗಳು ಅತ್ಯಂತ ಶ್ರೇಷ್ಠ ಎಂದು ಹೇಳಿದರು.       ಅಮ್ಮ ಮಕ್ಕಳಿಗೆ ಕೈತುತ್ತು ಕೊಡುತ್ತಾರೆ. ಅದೇ ಅಮ್ಮ ಮಕ್ಕಳು ಹಸಿದುಕೊಂಡಿರಬಾರದೆಂದು ಬುತ್ತಿ ಕೊಡುತ್ತಾಳೆ.…

Read More

ಗುಬ್ಬಿ :       ಮನೆ ಬಾಗಿಲು ಬೀಗ ಮುರಿದು ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳು, ನಗದು ದೋಚಿದ ಘಟನೆ ಪಟ್ಟಣದ ವಿನಾಯಕನಗರ ಬಡಾವಣೆಯಲ್ಲಿ ನಡೆದಿದೆ.       ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ಅವರ ಮನೆಗೆ ಕನ್ನ ಹಾಕಿದ ಕಳ್ಳರು ಟವಿ, 10  ಸಾವಿರ ರೂ. ನಗದು ಸೇರಿದಂತೆ ಕೆಲ ಗೃಹೋಪಯೋಗಿ ವಸ್ತುಗಳನ್ನು ದೋಚಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸುಳಿವು ಪಡೆದು ಈ ಕೃತ್ಯವೆಸಗಿದ್ದಾರೆ. ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

 ತುಮಕೂರು:       ಪಾವಗಡ ತಾಲೂಕು ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಮೇಗಲಹಳ್ಳಿ ಗ್ರಾಮದ ಮನೆಗಳ ಬಾಗಿಲಿಗೆ ಕ್ಯಾನ್‍ಗಳ ಮೂಲಕ ಶುದ್ಧ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.       ಮಂಗಳವಾರ ಪಾವಗಡ ತಾಲೂಕು  ಪಂಚಾಯತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಓ.ಗೆ ಮೇಗಲಹಳ್ಳಿಯಲ್ಲಿರುವ ಎಲ್ಲ ಮನೆಗಳ ಬಾಗಿಲಿಗೆ ಕುಡಿಯುವ ನೀರನ್ನು ಕ್ಯಾನ್ ಮೂಲಕ ಸರಬರಾಜು ಮಾಡಲು ನಿರ್ದೇಶನ ನೀಡಲಾಗಿತ್ತು. ಮೇಗಲಹಳ್ಳಿಯಲ್ಲಿದ್ದ ಆರ್.ಓ. ಪ್ಲಾಂಟ್ ಕೆಟ್ಟು ಹೋಗಿದ್ದರಿಂದ ಗ್ರಾಮಸ್ಥರು 1 ಕಿ.ಮೀ. ದೂರದಿಂದ ಕುಡಿಯುವ ನೀರು ತರುತ್ತಿರುವ ಬಗ್ಗೆ ಕಳೆದ ಫೆಬ್ರುವರಿ 2ರಂದು ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಬರ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಗಿತ್ತು. ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದ್ದರ ಪರಿಣಾಮ ಮೇಗಳಹಳ್ಳಿ ಗ್ರಾಮದ ಮನೆಗಳ ಬಾಗಿಲಿಗೆ…

Read More