ತುಮಕೂರು: ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಇಲ್ಲದ ಸಬೂಬು ಹೇಳಿ ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ಕುಮಾರ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ತುರ್ತು ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಎಲ್ಲ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ನಡೆಯುವ ಎಲ್ಲ ತರಬೇತಿಗಳು ಹಾಗೂ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗಬೇಕು. ಸೂಚಿಸಿದ ಚುನಾವಣಾ ಕೆಲಸಗಳನ್ನು ನಿಗಧಿತ ಅವಧಿಯಲ್ಲಿ ಮುಗಿಸಬೇಕು ಎಂದರಲ್ಲದೆ ಯಾವುದೇ ಲೋಪದೋಷಗಳಿಲ್ಲದೆ ಪಾರದರ್ಶಕವಾಗಿ ಚುನಾವಣೆಯನ್ನು ನಡೆಸಲು ಸಿದ್ಧರಾಗಿರಬೇಕು ಎಂದು ಸೂಚಿಸಿದರು. ನಿಯೋಜಿತ ಎಲ್ಲ ನೋಡಲ್ ಅಧಿಕಾರಿಗಳು ತಪ್ಪದೇ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ, ಕಿಟಕಿ-ಬಾಗಿಲುಗಳು ಸುಸ್ಥಿತಿ, ಶೌಚಾಲಯ,…
Author: News Desk Benkiyabale
ತುಮಕೂರು: ಬಿಜೆಪಿ ಗೆಲುವಿಗೆ ಎಲ್ಲಾ ಲೋಕಸಭಾ ಕ್ಷೇತದಲ್ಲಿ ದಲಿತ ಮತಗಳಿಗೆ ಪ್ರಮುಖ ಪಾತ್ರ ವಹಿಸಬೇಕು. ದಲಿತರು ಪ್ರಮುಖವಾಗಿ ಬಿಜೆಪಿ ಪಕ್ಷದ ಗೆಲುವಿಗಾಗಿ ಶ್ರಮಿಸಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂದು ಆನೆಕಲ್ ನಾರಾಯಣಸ್ವಾಮಿಯವರು ಕರೆಕೊಟ್ಟರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಶಾಸಕರು ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಎಸ್.ಸಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಆತ್ಮಾನಂದ, ಮಾಜಿ ವಿಧಾನ ಪರಿಷತ್ ಸದಸ್ಯರು ಡಾ|| ಹುಲಿನಾಯ್ಕ್ರ್, ರಾಜ್ಯ ರೈತಮೋರ್ಚಾ ಉಪಾಧ್ಯಕ್ಷರು ಎಸ್. ಶಿವಪ್ರಸಾದ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿ.ರಂಗನಾಯ್ಕ್, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷರು ಎಂ.ಎನ್.ರಂಗಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಶಾರದ ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು & ಹಾಲಿ ಸದಸ್ಯರು ವೈ.ಹೆಚ್.ಹುಚ್ಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರು, ಗುಬ್ಬಿ, ಜಿ.ಹೆಚ್.ಜಗನ್ನಾಥ್, ಎಸ್.ಸಿ.ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಕೃಷ್ಣಮೂರ್ತಿ. ಇನ್ನೂ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.
ತುಮಕೂರು: ವಿವೇಕಾನಂದ ಕ್ರೀಡಾಕ್ಲಬ್ ಏಕತೆಗಾಗಿ ಓಟ ಎಂಬ ಹೆಸರಿನಲ್ಲಿ ಆಯೋಜಿಸಿದ್ದ ತುಮಕೂರು ಮ್ಯಾರಥಾನ್-2019ರ ಓಟದ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಈಥಿಯೋಪಿಯ ದ ಅಮಾನ್ಯುಲ ಅಬ್ದು ಪ್ರಥಮ ಸ್ಥಾನ ಪಡೆದರೆ, ಮಹಿಳಾ ವಿಭಾಗದಲ್ಲಿ ಚೈತ್ರಾ ದೇವಾಡಿಗ, ಬಾಲಕರ ವಿಭಾಗದಲ್ಲಿ ಬೈರೇಶ್, ಬಾಲಕಿಯರ ವಿಭಾಗದಲ್ಲಿ ಚರಿತಾ ಅವರುಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಸ್ವಾವಿವಿವೇಕಾನಂದ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಈ ಮ್ಯಾರಥಾನ್ ಓಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 781 ಜನ ಕ್ರೀಡಾಪಟುಗಳು ಭಾಗವಹಿಸಿದ್ದು,ಪುರುಷರುರಿಗೆ 10 ಕಿ.ಮಿ. ಮಹಿಳೆಯರಿಗೆ, 16 ವರ್ಷದ ಒಳಗಿನ ಬಾಲಕ,ಬಾಲಕಿಯರಿಗೆ, 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ತಲಾ 5 ಕಿ.ಮಿ. ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪುರುಷರ 10 ಕಿ.ಮಿ.ಯಲ್ಲಿ ಮೊದಲ ಆರು ಸ್ಥಾನಗಳನ್ನು ಅಮಾನ್ಯುಲ್ ಅಬ್ದು, ಪ್ರವೀಣ್ ಕಂಬಾಳೆ, ಸಂದೀಪ್ ಟಿ.ಎಸ್., ವೆಂಕಟೇಶ್ ಕೆ.ಕೆ, ಸಂತೋಷ್, ಚಂದ್ರಕುಮಾರ್ ಪಡೆದರೆ, ಮಹಿಳಾ ವಿಭಾಗದ…
ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರ ಅಂತರಿಕ ಕಿತ್ತಾಟದಿಂದ ರಾಜಕೀಯ ಆರಾಜಕತೆ ಉಂಟಾಗಿದ್ದು, ಕೂಡಲೇ ಇಂತಹ ಗೊಂದಲಗಳಿಗೆ ಪರಿಸಮಾಪ್ತಿ ಹಾಡುವಂತೆ ಕರ್ನಾಟಕ ವೀರಶೈವ-ಲಿಂಗಾಯಿತ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಪರಸ್ವರ ನಾಯಕರ ಕಿತ್ತಾಟ, ಆಡಿಯೋ ಬಿಡುಗಡೆ ಸೇರಿದಂತೆ ನಡೆಯುತ್ತಿರುವ ವಿದ್ಯಮಾನಗಳಿಂದ ಇಡೀ ರಾಜ್ಯದ ಮಾನ, ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹಾರಾಜಾಗುತ್ತಿದೆ. ಮುಂದಿನ ಪೀಳಿಗೆಗೆ ಒಳ್ಳೆಯ ನಡೆತೆಯನ್ನು ಬಿಟ್ಟು ಹೋಗುವಂತೆ ಅವರು ಸಲಹೆ ಮಾಡಿದ್ದಾರೆ. ಕಳೆದ 2006ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರವಿದ್ದಾಗ ಉತ್ತಮ ಆಡಳಿತ ನೀಡಿದ್ದನ್ನು ನಾವು ಗಮನಿಸಬ ಹುದಾಗಿದೆ.ಅಂದು ನೀಡಿದ ಆಡಳಿತವನ್ನು ಇಂದಿಗೂ ರಾಜ್ಯದ ಜನತೆ ಮರೆತಿಲ್ಲ.ಆ ರೀತಿ ಉತ್ತಮ ಆಡಳಿತದ ಮೂಲಕ ಜನತೆಗೆ ಅನುಕೂಲ ಮಾಡಿಕೊಟ್ಟರೆ, ಮುಂದಿನ ಜನಾಂಗ ನಿಮ್ಮನ್ನು ಮರೆಯುವುದಿಲ್ಲ.ಆದರೆ ಈ ರೀತಿ ಕೆಸರೆರಚಾಟದಿಂದ ಯಾರಿಗೂ ಲಾಭವಿಲ್ಲ.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಮನ್ವಯ…
ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ಸಂಖ್ಯಾ ಬಲವಿಲ್ಲ ಎಂದು ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ವಿಶ್ವಾಸ ಮತಯಾಚನೆಗೆ ನಮ್ಮ ಮೈತ್ರಿ ಸರಕಾರ ಸಿದ್ಧವಿದೆ. ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ಸಂಖ್ಯಾ ಬಲವಿಲ್ಲ ಎಂದು ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿ. ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವಂತಹ ರೀತಿಯಲ್ಲಿ ವರ್ತಿಸುವುದನ್ನು ಮೊದಲು ಬಿಜೆಪಿ ನಿಲ್ಲಿಸಲಿ, ಸಂವಿಧಾನದಲ್ಲಿ ಅವಕಾಶವಿರುವುದರಿಂದಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದ್ದೇವೆ, ಇಲ್ಲಿ ಅಪವಿತ್ರತೆಯ ಪ್ರಶ್ನೆಯೇ ಇಲ್ಲ ಎಂದರು. ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕರೊಬ್ಬರೊಂದಿಗೆ ಬಿಜೆಪಿ ಶಾಸಕರು ಮಾತನಾಡಿರುವ ವಿಷಯದಲ್ಲಿ ಸ್ವೀಕರ್ ಹಾಗೂ ಪ್ರಧಾನಿ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಈಗಾಗಲೇ ವಿಧಾನಸಭಾ ಸ್ವೀಕರ್ ಗಮನಕ್ಕೆ ತಂದಿದ್ದು, ಸದನದಲ್ಲಿ ತೀರ್ಮಾನಕೈಗೊಳ್ಳಲಿದ್ದಾರೆ ಎಂದರು. ಧ್ವನಿ ಎಸ್ಎಫ್ಎಲ್ ಪರೀಕ್ಷೆಯಾಗಲಿ: ಮಾಜಿ ಸಿಎಂ, ಬಿಜೆಪಿ…
ತುಮಕೂರು : ರಾಜ್ಯದ 2019-20ನೇ ಸಾಲಿನ ಆಯವ್ಯಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರ ಮಂಡಿಸಿರುವ ಈ ಆಯವ್ಯಯವನ್ನು ಯಾವುದೇ ಕ್ಷೇತ್ರದ ಶಾಸಕರನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಿಲ್ಲ. ಇಡೀ ರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿರುವ ಈ ಆಯವ್ಯಯವು ಜನಪರ ಹಾಗೂ ರೈತಪರವಾಗಿದೆ ಎಂದು ತಿಳಿಸಿದರು. ಕಳೆದ 2018-19ರಲ್ಲಿ 2,18,488ಕೋಟಿ ರೂ.ಗಳಷ್ಟಿದ್ದ ಆಯವ್ಯಯ ಗಾತ್ರವನ್ನು ಪ್ರಸಕ್ತ 2019-20ನೇ ಸಾಲಿಗಾಗಿ ಅಂದಾಜು 2,34,153ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದಾಗ ಸುಮಾರು ಶೇ.7.17ರಷ್ಟು ಅಂದರೆ 15,665ಕೋಟಿ ರೂ.ಗಳಷ್ಟು ಹೆಚ್ಚಿನ ಹಣವನ್ನು ಆಯವ್ಯಯದಲ್ಲಿ ಮಂಡನೆ ಮಾಡಲಾಗಿದೆ. ಈ ಆಯವ್ಯಯದಲ್ಲಿ ಬಿಡುಗಡೆ ಮಾಡಲಾಗಿರುವ 2,34,000ಕೋಟಿ ರೂ.ಗಳ ಪೈಕಿ ಕೃಷಿಗಾಗಿ 46,853 ಕೋಟಿ ರೂ.ಗಳಷ್ಟು ಮೀಸಲಿಡುವ ಮೂಲಕ ಕೃಷಿಗೆ ಆದ್ಯತೆ ನೀಡಲಾಗಿದೆ…
ತುಮಕೂರು: ನರೇಗಾ ಅನುದಾನವನ್ನು ಬಳಕೆ ಮಾಡಿ ಬತ್ತಿಹೋಗಿರುವ ಕೆರೆ, ಕಟ್ಟೆ, ಕಲ್ಯಾಣಿಗಳನ್ನು ಪುನಶ್ಚೇತನ ಹಾಗೂ ರಾಜಕಾಲುವೆ ತೆರವು ಮಾಡಿ ನೀರು ಹರಿಯುವಂತೆ ಮಾಡಬೇಕೆಂದು ಗ್ರಾಮೀಣ ಮೂಲಭೂತ ಸೌಕರ್ಯಗಳ ನಿರ್ದೇಶಕ ಡಾ|| ಎನ್. ಕೃಷ್ಣಪ್ಪ ಕೋಡಿಪಾಳ್ಯ ಸಲಹೆ ನೀಡಿದರು. ಕುಣಿಗಲ್ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಇತ್ತೀಚೆಗೆ ಕುಣಿಗಲ್ ತಾಲೂಕಿನ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ನಡೆಸಿ ಮಾತನಾಡಿದ ಅವರು ಪಾತಾಳಕ್ಕೆ ಕುಸಿದಿರುವ ಅಂತರ್ಜಲವನ್ನು ಭರ್ತಿ ಮಾಡಲು ಮಳೆ ನೀರು ಇಂಗಿಸುವ ಕ್ರಮವನ್ನು ಅನುಸರಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗಳು ಕನಿಷ್ಠ ಒಂದು ಕೋಟಿ ರೂ.ಗಳ ಅನುದಾನ ಬಳಸಿಕೊಳ್ಳಲು ಅವಕಾಶವಿದ್ದು, ಸ್ಥಳೀಯ ಜನಪ್ರತಿನಿಧಿಗಳಿಂದ ಸಲಹೆ ಸಹಕಾರ ಪಡೆದು 2019-20ನೇ ಸಾಲಿನಲ್ಲಿ ಉತ್ತಮ ಕ್ರಿಯಾ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಸಭೆಯಲ್ಲಿ ಕುಣಿಗಲ್ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶಿವರಾಜು, ವ್ಯವಸ್ಥಾಪಕ ಬೋರೇಗೌಡ, ವಿವಿಧ ಗ್ರಾಮ…
ತುಮಕೂರು: ಗ್ರಾಮಂತರ ಕ್ಷೇತ್ರದಲ್ಲಿರುವ ವಿದ್ಯಾವಂತ ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಚ್ ತಿಂಗಳಲ್ಲಿ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೋಧ್ಯಮಿಗಳ ಕೆ ಐ ಎ ಡಿ ಬಿ ಅಧಿಕಾರಿಗಳು, ಡಿ ಐ ಸಿ ಅಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒ ಒಳಗೊಂಡಂತೆ ಬೃಹತ್ ಸಭೆ ಕರೆದು ಯುವಕರಿಗೆ ಉದ್ಯೋಗವಕಾಶ ಕಲ್ಪಿಸುವ ಸಂಬಂಧ ಚರ್ಚಿಸುವುದಾಗಿ ಶಾಸಕ ಡಿ. ಸಿ. ಗೌರೀಶಂಕರ್ ಭರವಸೆ ನೀಡಿದರು. ಅವರು ಗೂಳೂರು ಜಿಲ್ಲಾ ಪಂಚಾಯ್ತಿ ವಾಪ್ತಿಯಯಲ್ಲಾಪುರ ಗ್ರಾಮದಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿ ನೂತನ ಆಲಯ ಜೀರ್ಣೋದ್ದಾರ ಮತ್ತು ದುರ್ಗಾದೇವಿಯ ನೂತನ ಸ್ತಿರಬಿಂಭಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮಂತರ ಕ್ಷೇತ್ರದ ವಿದ್ಯಾವಂತ ಯುವಕರು ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ವಿವಿಧೆಡೆ ಫಲಾಯನ ಮಾಡುತ್ತಿದ್ದಾರೆ.ಇನ್ನು ಕೆಲ ಯುವಕರು ತಮ್ಮ ವಿಧ್ಯಾಭ್ಯಾಸಕ್ಕೆ ತಕ್ಕ ಉದೋಗ ಲಭಿಸದೆ ನಿರುದ್ಯೋಗಿಗಳಾಗಿದ್ದಾರೆ ಇದನ್ನು ತಪ್ಪಿಸಲು ವಸಂತ ನರಸಾಪುರದಲ್ಲಿ ಕೈಗಾರಿಕೋಧ್ಯಮಿಗಳು ಹಾಗು ಅಧಿಕಾರಿಗಳ ಬೃಹತ್ ಸಭೆ…
ದೆಹಲಿ: ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದ ವಿತ್ತ ಸಚಿವ ಅರುಣ್ ಜೇಟ್ಲಿ ಭಾರತಕ್ಕೆ ಮರಳಿದ್ದಾರೆ. ಭಾರತಕ್ಕೆ ಮರಳುತ್ತಲೇ ಟ್ವಿಟ್ ಮಾಡಿದ ಜೇಟ್ಲಿ, “ಮನೆಗೆ ಮರಳಿರುವುದಯ ಸಂತಸ ನೀಡಿದೆ” ಎಂದು ತಿಳಿಸಿದ್ದಾರೆ. ಜೇಟ್ಲಿ (66) ಅವರು ಅನಾರೋಗ್ಯ ಕಾರಣದಿಂದ ನಾರ್ಥ್ ಬ್ಲಾಕ್ನಲ್ಲಿರುವ ತಮ್ಮ ಆಫೀಸ್ಗೆ ಬರುವುದನ್ನು ಕಳೆದ ವರ್ಷದ ಏಪ್ರಿಲ್ನಲ್ಲೇ ಕೊನೆಗೊಳಿಸಿದ್ದರು. ಅದರ ಮರುತಿಂಗಳೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದರು. ಆನಂತರ ಆಗಸ್ಟ್ನಲ್ಲಿ ತಮ್ಮ ಕಚೇರಿ ಬಂದರಾದರೂ ಜನವರಿಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದರು. ಅಂಗಾಂಶದ ಕ್ಯಾನ್ಸರ್ಗೆ ತುತ್ತಾಗಿದ್ದ ಅವರು ಕಳೆದ ತಿಂಗಳು ಚಿಕಿತ್ಸೆಗೆಂದು ನ್ಯೂಯಾರ್ಕ್ಗೆ ತೆರಳಿದ್ದರು. ಮೇ 14, 2018ರಲ್ಲಿ AIIMS ನಲ್ಲಿ ದೊಡ್ಡ ಸರ್ಜರಿ ಮಾಡಿಸಿಕೊಂಡಿದ್ದ ಜೇಟ್ಲಿ ಇದೇ ಮೊದಲ ಬಾರಿಗೆ ವಿದೇಶಕ್ಕೆ ತೆರಳಿದ್ದರು. ಈ ಕಾರಣ ಅವರು, ಈ ವರ್ಷದ ಬಜೆಟ್ ಮಂಡನೆ ಮಾಡಲು ಆಗಲಿಲ್ಲ. ಜೇಟ್ಲಿ ಅನುಪಸ್ಥಿತಿಯಲ್ಲಿ…
ನವದೆಹಲಿ: ಪಾಕಿಸ್ತಾನ ಸೈನಿಕರ ಮತ್ತು ಅಲ್ಲಿನ ಉಗ್ರರ ಸ್ನೈಪರ್ ರೈಫಲ್ ಗಳಿಗೆ ಬಲಿಯಾಗುತ್ತಿದ್ದ ಭಾರತೀಯ ಸೈನಿಕರ ಬಹು ದಿನಗಳ ಆಸೆ ಕೊನೆಗೂ ಈಡೇರಿದ್ದು, ಇದೀಗ ಭಾರತೀಯ ಸೈನಿಕರ ಕೈಗೂ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಬಂದಿವೆ. ಡೆಡ್ಲಿ ಸ್ನೈಪರ್ ರೈಫಲ್ಸ್ ಎಂದೇ ಕರೆಯಲಾಗುವ ಅತ್ಯಾಧುನಿಕ ಬೆರೆಟ್ಟಾ ಸಂಸ್ಥೆಯ 0.338 ಲಪುವಾ ಮ್ಯಾಗ್ನಮ್ ಸ್ಲಾರ್ಪಿಯೋ ಟಿಜಿಟಿ ಸೂಪರ್ ಸ್ನೈಪರ್ ರೈಫಲ್ ಹಾಗೂ ಬರೆಟ್ಟ್ ಸಂಸ್ಥೆಯ 0.50 ಕ್ಯಾಲಿಬರ್ ಎ095 ಸ್ನೈಪರ್ ರೈಫಲ್ಗಳನ್ನ ಖರೀದಿ ಮಾಡಲಾಗಿದೆ. ಒಂದು ವರ್ಷದ ಹಿಂದೆಯೇ ಸರ್ಕಾರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಪಾಕ್ ಮೂಲದ ನುಸುಳುಕೋರ ಉಗ್ರರನ್ನು ಮತ್ತು ಅಪ್ರಚೋದಿತ ದಾಳಿ ಮಾಡುವ ಪಾಕ್ ಸೈನಿಕರ ಮಟ್ಟಹಾಕಲು ಅನುಕೂಲವಾಗುವಂತೆ ಅತ್ಯಾಧುನಿಕ ಸ್ನೈಪರ್ ರೈಫಲ್ ಗಳ ಬಳಕೆಯನ್ನು ಭಾರತೀಯ ಸೇನೆ ಆರಂಭಿಸಿದೆ. ಮೂಲಗಳ ಪ್ರಕಾರ ಈ ಎರಡೂ ಮಾದರಿ ಒಟ್ಟು…











