Author: News Desk Benkiyabale

 ತುಮಕೂರು:       ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2019ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ತಿಪಟೂರು/ ಶಿರಾ ನಗರಸಭೆ, ಕುಣಿಗಲ್/ ಪಾವಗಡ ಪುರಸಭೆ, ತುರುವೇಕೆರೆ ಪಟ್ಟಣ ಪಂಚಾಯತಿ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆ ಹಾಗೂ ತಹಸೀಲ್ದಾರರ ಕಛೇರಿಗಳಲ್ಲಿ ಡಿಸೆಂಬರ್ 10ರಂದು ಪ್ರಕಟಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.       ಪಟ್ಟಿಗೆ ಸಂಬಂಧಿಸಿದಂತೆ ಮತದಾರರು ತಮ್ಮ ಹೆಸರು ವಾಸವಿರುವ ವಾರ್ಡಿನ ವ್ಯಾಪ್ತಿಯಲ್ಲಿ ಇರದೆ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ, ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು.       ಆಕ್ಷೇಪಣೆಗಳನ್ನು ಡಿಸೆಂಬರ್ 15ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗಧಿತ ಸಮಯದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಡಿಸೆಂಬರ್ 20ರೊಳಗೆ ಇತ್ಯರ್ಥಪಡಿಸಿ, ಅಗತ್ಯವಿದ್ದಲ್ಲಿ ಸೂಕ್ತ ಬದಲಾವಣೆ…

Read More

 ತುಮಕೂರು :       ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗಾಗಿ ನೋಂದಾಯಿಸಿಕೊಂಡಿರುವ 1,15,196 ರೈತರ ಅರ್ಜಿಗಳ ಪೈಕಿ ಬಾಕಿ ಇರುವ 7634 ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತಿಯಲ್ಲಿಂದು ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುವ ವಿವಿಧ ಯೋಜನಾ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಕಳೆದ 2017-18ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ 1,15,196 ರೈತರು ತಮ್ಮ ಬೆಳೆಯನ್ನು ವಿಮೆಗೊಳಪಡಿಸಲು ನೋಂದಾಯಿಸಿಕೊಂಡು ಪ್ರೀಮಿಯಂ ಹಣ ಕಟ್ಟಿದ್ದರೂ ಬ್ಯಾಂಕಿನ ಅಧಿಕಾರಿಗಳು ಇಲ್ಲ-ಸಲ್ಲದ ನೆಪವೊಡ್ಡಿ 7634 ರೈತರ ಅರ್ಜಿಗಳನ್ನು ವಿಲೇವಾರಿ ಬಾಕಿ ಉಳಿಸಿಕೊಂಡಿದ್ದಾರೆ. ಬ್ಯಾಂಕ್ ಹಾಗೂ ಕೃಷಿ ಇಲಾಖೆಗಳ ನಡುವೆ ಸಾಮರಸ್ಯ ಇಲ್ಲದಿರುವುದೇ ಇದಕ್ಕೆ ಕಾರಣ ಎಂದರು.       ಬ್ಯಾಂಕ್‍ನವರು ಇಲಾಖೆ ವಿರುದ್ಧ ಹಾಗೂ ಇಲಾಖೆಯು ಬ್ಯಾಂಕಿನ ವಿರುದ್ಧ ಆರೋಪ ಪ್ರತ್ಯಾರೋಪ ಮಾಡುವುದರಿಂದ ರೈತರಿಗೆ ವಿಮಾ ಪರಿಹಾರ…

Read More

ತುಮಕೂರು :       ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದ್ದು ಎಲ್ಲರೂ ಸಂವಿಧಾನಕ್ಕೆ ಅನುಸಾರವಾಗಿ ನಡೆದುಕೊಂಡು ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ರಾಜೇಂದ್ರ ಬಾದಾಮಿಕರ್ ತಿಳಿಸಿದರು.       ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿದ್ದ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನಾದಿ ಕಾಲದಿಂದಲೂ ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ಜರುಗುತ್ತಲೇ ಇವೆ. 1990ರ ಕಾಯಿದೆಯಂತೆ ಮಾನವ ಹಕ್ಕುಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ತಿದ್ದುಪಡಿ ಕಾಯ್ದೆಯಲ್ಲಿ ಜನರು ಸಂವಿಧಾನದಲ್ಲಿರುವ ಹಕ್ಕುಗಳ ಬಗ್ಗೆ ಕೇಳಿದರೆ ಸಾಲದು. ಕರ್ತವ್ಯಗಳನ್ನು ಕೂಡ ಅರಿಯಬೇಕು ಎಂದರು.       ತುಮಕೂರು ಜಿಲ್ಲೆಯಲ್ಲಿ ಕೇವಲ 3 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದು, ಈ ಪೈಕಿ 1 ಪ್ರಕರಣ ಇತ್ಯರ್ಥಪಡಿಸಿದ್ದು,…

Read More

ಚಿಕ್ಕನಾಯಕನಹಳ್ಳಿ :       ನವೋದಯ ಕಾಲೇಜಿನ ಆವರಣದಲ್ಲಿ ಡಿ.24ರಂದು ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಅನುಕೂಲವನ್ನು ಪಡೆಯಬೇಕು ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.       ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಕ್ಯಾನ್ಸರ್ ಖಾಯಿಲೆ ಬಂದರೆ ರೋಗಿಯು ಸಾವನ್ನಪ್ಪುತ್ತಾನೆ, ಕ್ಯಾನ್ಸರ್ ಖಾಯಿಲೆಯನ್ನು ಮೊದಲ ಹಂತದಲ್ಲೇ ಗುರುತಿಸಿ ಸರಿಯಾದ ಚಿಕಿತ್ಸೆ ಪಡೆದರೆ ರೋಗಿಯು ಗುಣಮುಖಿಯಾಗಿ ಬದುಕುತ್ತಾನೆ, ಈ ನಿಟ್ಟಿನಲ್ಲಿ ತಾಲ್ಲೂಕಿನ ಜನರ ಹಿತಾಸಕ್ತಿಗಾಗಿ ಕ್ಯಾನ್ಸರ್ ಶಿಬಿರವನ್ನು ನವೋದಯ ಸಂಸ್ಥೆ ಆಡಳಿತ, ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಲಾಗಿದೆ ಎಂದರು. ತಾಲ್ಲೂಕು ಆರೋಗ್ಯ ಇಲಾಖೆಯು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬರುವ ರೋಗಿಯನ್ನು ಗುರುತಿಸಿ ಶಿಬಿರಕ್ಕೆ ಕರೆತನ್ನಿ ಎಂದು ಸೂಚನೆ ನೀಡಿದರು.       ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ 10ರಿಂದ 12ಜನ ನುರಿತ ವೈದ್ಯರ ತಂಡ ಶಿಬಿರಕ್ಕೆ ಆಗಮಿಸುತ್ತಿದ್ದು ಶಿಬಿರದಲ್ಲಿ ಕ್ಯಾನ್ಸರ್ ರೋಗವನ್ನು ತಪಾಸಣೆ ಮಾಡಿ ಖಾಯಿಲೆ…

Read More

ಗುಬ್ಬಿ :       ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿಯ ಮಾದಾಪುರ ಗ್ರಾಮದಲ್ಲಿ ರೈತನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಸಣ್ಣ ಕೈಗಾರಿಕಾ ಸಚಿವರ ತವರೂರಲ್ಲೇ ರೈತನು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಸಾರ್ವಜನಿಕರು ಇಂತಹ ಬರಗಾಲದಲ್ಲಿ ಯಾವ ರೈತನು ಬದುಕನ್ನು ಸಾಗಿಸುತ್ತಾನೆ. ಸಾಲ ಕೊಟ್ಟವರ ಮಾನಸಿಕ ಹಿಂಸೆಯನ್ನು ತಡೆಯಲಾರದೆ ವಿಷ ಕುಡಿದು ನೇಣಿಗೆ ಶರಣಾಗುವ ಘಟನೆಗಳು ಹೆಚ್ಚಾಗುತ್ತಿವೆ.       ತಾಲ್ಲೂಕಿನ ಮಾದಾಪುರ ಗ್ರಾಮದ ಎಂ.ಪಿ.ಮಂಜುನಾಥ್ (40ವರ್ಷ) ಈತನಿಗೆ ನಾಲ್ಕು ಎಕರೆ ಜಮೀನಿದ್ದು ಆ ಜಮೀನನಲ್ಲಿ ಇಲ್ಲಿಯವರೆಗೂ ಒಟ್ಟು ಕುಟುಂಬವನ್ನು ಕಾಪಾಡಿಕೊಂಡು ಬರುತ್ತಿದ್ದು ಹಿಂದಿನ ವರ್ಷಗಳಲ್ಲಿ ಅಂತರ್ಜಲ ಕುಸಿದ ಕಾರಣ ಕೊಳವೆ ಬಾವಿಯು ಬತ್ತಿದ್ದು ಪಕ್ಕದಲ್ಲೇ ಇರುವ ಬಿದರೆ ಗ್ರಾಮದಲ್ಲಿರುವ ಕೆ.ಜಿ.ಬಿ.ಬ್ಯಾಂಕ್‍ನಲ್ಲಿ 4 ಲಕ್ಷ ಸಾಲ ಪಡೆದು ಹೊಸ ಕೊಳವೆಬಾವಿಯನ್ನು ಕೊರೆಸಿದ್ದು ಇಷ್ಟೆಲ್ಲ ಖರ್ಚು ಮಾಡಿ ಕೇವಲ 6 ದಿನ ಮಾತ್ರ ನೀರನ್ನು ಕಂಡಿದ್ದು ಮುಂದಿನ ದಿನಗಳಲ್ಲಿ ಯಾವುದೇ ಹನಿ ನೀರು ಈ ಕೊಳವೆ ಬಾವಿಯಿಂದ ದೊರಕದೆ…

Read More

ಚೆನ್ನೈ:        ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಪ್ರತಿಷ್ಠಿತ ರೇಲಾ ಆಸ್ಪತ್ರೆಗೆ ದಾಖಲಾಗಿರುವ ತುಮಕೂರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.        ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ನ ಪ್ರಖ್ಯಾತ ವೈದ್ಯರಾದ ಮಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜಿಎಸ್ ನ ಡಾ. ರವೀಂದ್ರ ಅವರ ಉಪಸ್ಥಿತಿಯಲ್ಲೇ ಶಸ್ತ್ರಚಿಕಿತ್ಸೆ ನಡೆದಿದೆ.       ಮೇದೋಜೀರಕ ಗ್ರಂಥಿಯಿಂದ ಪಿತ್ತಕೋಶಕ್ಕೆ ಹೋಗಬೇಕಾದ ನೀರಿನ ಅಂಶ ಸರಾಗವಾಗಿ ಹೋಗಲು 11 ಸ್ಟಂಟ್‍ಗಳನ್ನು ಅಳವಡಿಸಲಾಗಿದೆ. ಮೇದೋಜೀರಕ ಗ್ರಂಥಿಯಿಂದ ನೀರಿನ ಅಂಶ ಗಟ್ಟಿಯಾಗಿ ನಿಲ್ಲುತ್ತಿತ್ತು. ಪರಿಣಾಮವಾಗಿ ಈ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರು ವುದರಿಂದ ಸಣ್ಣ ಪ್ರಮಾಣದ ಸರ್ಜರಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು.       ಸದ್ಯಕ್ಕೆ ಶ್ರೀಗಳನ್ನು ಆಪರೇಶನ್ ಥಿಯೇಟರ್ ನಿಂದ ಐಸಿಯು ವಾರ್ಡ್ ಗೆ ಶಿಫ್ಟ್…

Read More

ತುಮಕೂರು:      ಮೈತ್ರಿ ಸರಕಾರದ ಮುಖ್ಯಮಂತ್ರಿ ಸ್ಥಾನದಿಂದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕಾಂಗ್ರೆೆಸ್‌ನ ಮೂವರು ಹಿರಿಯ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ  ಆರೋಪಿಸಿದ್ದಾರೆ.       ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೀಘ್ರವೇ ಸಿಎಂ ಗಾದಿಯಿಂದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಕಾಂಗ್ರೆೆಸ್‌ನ ಮೂವರು ಮಾಡುತ್ತಿರುವ ಹುನ್ನಾರಕ್ಕೆೆ ಶಾಸಕರು ಕೂಡ ಕೈ ಜೋಡಿಸಿದ್ದಾರೆ ಎಂದು ಹೇಳಿದರು. ಆ ಮೂವರು ಹಿರಿಯ ನಾಯಕರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಆಪರೇಷನ್ ಕಮಲ ಎಂಬ ಬೆದರುಬೊಂಬೆ ಇಟ್ಟುಕೊಂಡು ಹುನ್ನಾರ ನಡೆಸುತ್ತಿದ್ದು, ಜೆಡಿಎಸ್ ಮುಖಂಡರನ್ನು ಹೆದರಿಸುತ್ತಿದ್ದಾರೆ. ಮೂವರು ನಾಯಕರಲ್ಲಿ ಒಬ್ಬರು ಸಚಿವರು ಮತ್ತು ಇನ್ನಿಬ್ಬರು ಸಚಿವ ಸ್ಥಾನದ ಆಕಾಂಕ್ಷಿಗಳು ಎಂದರು. ಇವರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.

Read More

 ಕೊರಟಗೆರೆ:       ಕರುನಾಡಿನ ಪುಣ್ಯಕ್ಷೇತ್ರ ಶ್ರೀಗೊರವನಹಳ್ಳಿ ಮಹಾಲಕ್ಷ್ಮೀ ದೇವಿಯ ಬ್ರಹ್ಮ ರಥೋತ್ಸವ ಮತ್ತು ಲಕ್ಷ ದಿಪೋತ್ಸವ ಕಾರ್ಯಕ್ರಮ ಕಾರ್ತಿಕ ಮಾಸದ ಕೊನೆಯ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.       ಕಲ್ಪತರು ನಾಡು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಸುಪ್ರಸಿದ್ದ ಪ್ರವಾಸಿ ಪುಣ್ಯಕ್ಷೇತ್ರ ಆಗಿರುವ ಗೊರವನಹಳ್ಳಿ ಮಹಾಲಕ್ಷ್ಮೀ ಸನ್ನಿದಾನಕ್ಕೆ ಶುಕ್ರವಾರ ಮುಂಜಾನೆಯಿಂದ ರಾತ್ರಿ 8ಗಂಟೆಯ ವರೇಗೂ ಸಾವಿರಾರು ಭಕ್ತಾಧಿಗಳು ಸರದಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದರು.      ಶುಕ್ರವಾರ ಮುಂಜಾನೆ 8ಗಂಟೆಯಿಂದ ಪ್ರಾರಂಭವಾದ ವಿಶೇಷ ಪೂಜಾ ಕಾರ್ಯಕ್ರಮ, ಪಂಚಾಮೃತ ಅಭಿಷೇಕ, ಹೋಮ, ಹವನ ಹಾಗೂ ಭಕ್ತರಿಂದ ದೇವಾಲಯಕ್ಕೆ ಮತ್ತು ದೇವಿಗೆ ಹೂವಿನ ಅಲಂಕಾರ ಮಾಡಿಸಲಾಗಿತ್ತು. ಮಧ್ಯಾಹ್ನ 1ಗಂಟೆಗೆ ಬ್ರಹ್ಮ ರಥೋತ್ಸವ, ಸಂಜೆ ಲಕ್ಷ ದಿಪೋತ್ಸವ ಕಾರ್ಯಕ್ರಮ ಮತ್ತು ರಾತ್ರಿ 8ಗಂಟೆಗೆ ಮುತ್ತಿನ ಪಲ್ಲಕ್ಕಿ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ,…

Read More

ತುಮಕೂರು:        ದೇಶದಲ್ಲಿರುವ ಎಲ್ಲ ವರ್ಗದ ಜನರೂ ನಾವೆಲ್ಲ ರೈತರು ಎಂದು ಹೇಳಿಕೊಳ್ಳಬೇಕಾದ ಅಗತ್ಯ ಒದಗಿಬಂದಿದೆ. ಇಲ್ಲದಿದ್ದರೆ ನಮಗೆ ಉಳಿಗಾಲವಿಲ್ಲವಾಗಿದೆ ಎಂದು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಕಳವಳ ವ್ಯಕ್ತಪಡಿಸಿದ್ದಾರೆ.       ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕ ವತಿಯಿಂದ ತುಮಕೂರು ನಗರದ ಮಾಕಂ ಕಲ್ಯಾಣ ಮಂದಿರದಲ್ಲಿ ಡಿಸೆಂಬರ್ 8ರಂದು ನಡೆದ ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ ವಿಷಯ ಕುರಿತು ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.      ರೈತ ವರ್ಗವನ್ನು ವಿಸ್ತರಿಸಬೇಕಾಗಿದೆ. ರೈತರು ಎಂಬ ಪದದ ವ್ಯಾಪ್ತಿಯಲ್ಲಿ ಭೂರಹಿತರೈತರು, ಗೇಣಿರೈತರು, ಭೂಮಿ ಇರುವ ರೈತರು, ರೈತ ಮಹಿಳೆಯರು, ಆದಿವಾಸಿ ರೈತರು, ಕೂಲಿ ಮಾಡುವ ರೈತರು ಹೀಗೆ ರೈತರ ನೆಲೆಯನ್ನು ವಿಸ್ತರಿಸುತ್ತ ಹೋಗಬೇಕು. ಆಮೂಲಕ ರೈತರಿಗೆ ಬೆಂಬಲಕ್ಕೆ ನಿಲ್ಲಬೇಕಾಗಿದೆ ಎಂದು ತಿಳಿಸಿದರು.       ವಿದ್ಯಾರ್ಥಿಗಳು ಬರಹಗಾರರು, ವೈದ್ಯರು ಸಾಹಿತಿಗಳ ಎದುರು ಹಲವಾರು ಸವಾಲುಗಳು ಇವೆ. ಇತ್ತೀಚಿನ ದಿನಗಳಲ್ಲಿ ನಮ್ಮ ಅಭಿವ್ಯಕ್ತಿಗೆ ಆತಂಕ ಸೃಷ್ಟಿಯಾಗಿದೆ.…

Read More

ತುಮಕೂರು:       ಕನ್ನಡದಂತಹ ಸುಂದರ ಲಿಪಿಯುಳ್ಳ ಭಾಷೆ ಇನ್ನೊಂದಿಲ್ಲ. ಇಂಗ್ಲೀಷ್ ಎಂಬುದು ಕೇವಲ ಮೋಹಕ ಭಾಷೆಯಾಗಿದೆ. ಪ್ರಪಂಚದ ಸುಮಾರು ದೇಶಗಳಲ್ಲಿ ಇಂಗ್ಲಿಷ್ ಎಂಬ ಪದವೇ ತಿಳಿದಿಲ್ಲ. ಇಂಗ್ಲಿಷ್ ಕಲಿತರೆ ಪ್ರಪಂಚದ ಎಲ್ಲಾ ದೇಶಗಳನ್ನು ಸುತ್ತಿಬರಬಹುದು ಎಂಬ ಜನರ ನಂಬಿಕೆ ಸುಳ್ಳು ಎಂದು ನಾಡೋಜ ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟರು.       ನಗರದ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಬಾಪೂಜಿ ವಿದ್ಯಾಸಂಸ್ಥೆ, ಜಿಲ್ಲಾ ಸರ್ವೋದಯ ಮಂಡಲ, ಚಿಕ್ಕನಾಯಕನಹಳ್ಳಿಯ ಶೃಂಗಾರ ಪ್ರಕಾಶನ ಪ್ರತಿಷ್ಠಾನ ವತಿಯಿಂದ ಬಾ,ಬಾಪೂ 150ನೇ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ನನ್ನ ಕನಸಿನ ಭಾರತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾತನಾಡಿದರು.       ಇಂದು ಪ್ರತಿಯೊಬ್ಬರಲ್ಲೂ ಆಂಗ್ಲಭಾಷೆ ಕಲಿಯಬೇಕು. ಅದನ್ನು ಕಲಿತರೆ ಪ್ರಪಂಚದ ಯಾವುದೇ ಮೂಲೆಗೋದರೂ ಜೀವನ ಮಾಡಬಹುದು ಎಂದುಕೊಂಡಿದ್ದಾರೆ. ಅದು ಶುದ್ಧ ಸುಳ್ಳು, ಜಪಾನ್, ಫ್ರಾನ್ಸ್ ನಂತರ ಸುಮಾರು ದೇಶಗಳಲ್ಲಿ ಆಂಗ್ಲ ಭಾಷೆಯ ಪರಿಜ್ಞಾನವೇ ಇಲ್ಲ. ಕೇವಲ ನಮ್ಮ ಭಾರತದಲ್ಲಿ ಮಾತ್ರವೇ ಆಂಗ್ಲ ಭಾಷೆಗೆ…

Read More