Author: News Desk Benkiyabale

 ತುಮಕೂರು:      ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು ಅಡಿಯಲ್ಲಿ 200ಕ್ಕೂ ಹೆಚ್ಚು ರೈತಕೂಲಿಕಾರರ ಸಂಘಟನೆಗಳು ದೆಹಲಿಯಲ್ಲಿ ನಡೆಸಿದ ನವೆಂಬರ್ 29 ಮತ್ತು 30ರ ಹೋರಾಟವನ್ನು ಬೆಂಬಲಿಸಿ ತುಮಕೂರು ನಗರದ ಸ್ವಾತಂತ್ರ್ಯ ಚೌಕದಲ್ಲಿ ರೈತ-ಕಾರ್ಮಿಕ, ವಿದ್ಯಾರ್ಥಿ-ಯುವಜನ, ಕಲಾವಿದರು ಒಳಗೊಂಡಂತೆ ಪ್ರತಿಭಟನೆ ನಡೆಸಲಾಯಿತು.       ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಸತ್ ವಿಶೇಷ ಅಧಿವೇಶನವನ್ನು ಕರೆದು ಮೋದಿಯವರು ಚುನಾವಣೆಗೆ ಮುಂಚೆ ನೀಡಿದ ಭರವಸೆಯ ಭಾಗವಾಗಿ ರೈತರ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚಕ್ಕೆ ಶೇಕಡ 50ರಷ್ಟು ಲಾಭದ ಖಾತ್ರಿ ಕಾನೂನು, ರೈತಸ್ನೇಹಿ ವಿಮಾ ಯೋಜನೆ, ಕೃಷಿ ಅಭಿವೃದ್ಧಿಗೆ ಮಾಡಿರುವ ರೈತರ ಎಲ್ಲ ರೀತಿಯ ಸಾಲ ಮನ್ನಾ ಮಾಡಿ ಸಾಲಮುಕ್ತಿ ಕಾಯಿದೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕೆಂದು ಒತ್ತಾಯಿಸಲಾಯಿತು.       ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಗತಿಪರ ಚಿಂತಕ ಕೆ.ದೊರೈರಾಜ್ ಅವರ ಭರವಸೆಗಳಿಂದಲೇ ಜನರ ಬದುಕನ್ನು ಉಳಿಸಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜ್ವಲಂತ ಸಮಸ್ಯೆಗಳ…

Read More

ಮಧುಗಿರಿ :       ಕ್ಷೇತ್ರದಲ್ಲಿ ಶಾಸಕರ ಅಧಿಕಾರವೇನು ಎಂಬುದರ ಬಗ್ಗೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆದು ತಾ.ಪಂ.ಅಧ್ಯಕ್ಷರಾದಿಯಾಗಿ ಬಹುತೇಕ ಸದಸ್ಯರು ಒಕ್ಕೂರಲಿನ ತಮ್ಮ ಕಾರ್ಯ ವ್ಯಾಪ್ತಿಯ ಕೆಲಸಗಳಿಗೆ ಮೂಗು ತೂರಿಸದಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದಂತಹ ಘಟನೆ ಶುಕ್ರವಾರ ನಡೆಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಾಸಕರ ಅನುದಾನದಲ್ಲಿ ನಾವ್ಯಾರು ಕೆಲಸ ಕೇಳುವುದಿಲ್ಲ ತಾಲೂಕು ಪಂಚಾಯಿತಿಗೆ ಬಂದಿರುವ ಅನುದಾನದಲ್ಲಿ ನಮ್ಮ ಕೆಲಸ ನಾವು ಮಾಡುತ್ತೇವೆ. ನಾವುಗಳು ಸರಕಾರದ ಹಂತದಲ್ಲಿ ಸಚೀವರುಗಳನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿರುತ್ತೇವೆ. ನಮ್ಮ ಕ್ಷೇತ್ರಗಳ ವ್ಯಾಪ್ತಿಯ ಕಾಮಗಾರಿಗಳಿಗೆ ಶಾಸಕರ ನೆಪವೊಡ್ಡಿ ಕೆಲಸ ಬದಲಾವಣೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ತಾಲೂಕು ಪಂಚಾಯಿತಿ ಇರುವುದು ಯಾಕೆ ಎಂದು ಅಧ್ಯಕ್ಷ ಇಂದಿರಾದೇನಾನಾಯ್ಕ ಹಾಗೂ ಕೆಲವು ಸದಸ್ಯರುಗಳು ಒಕ್ಕೂರಲಿನಿಂದ ತಮ್ಮ ಅಧಿಕಾರ ಚಲಾವಣೆಯಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ತಾಲೂಕು…

Read More

ಚಿಕ್ಕನಾಯಕನಹಳ್ಳಿ :       2018-19ನೇ ಸಾಲಿಗೆ ಗ್ರಾಮೀಣ ರಸ್ತೆಗಳ ನಿರ್ವಹಣೆ ಕಾಮಗಾರಿಗಳಿಗಾಗಿ ತಾಲ್ಲೂಕಿಗೆ 67.94ಲಕ್ಷರೂ ಬಿಡುಗಡೆಯಾಗಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.       ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರೊಂದಿಗೆ ಸಭೆ ನಡೆಸಿದ ಶಾಸಕರು, ತಾಲ್ಲೂಕಿಗೆ 2018-19ನೇ ಸಾಲಿನ ರಸ್ತೆಗಳ ನಿರ್ವಹಣೆಗೆ ನಿರ್ವಹಣಾ ಅನುದಾನದ ಅಡಿಯಲ್ಲಿ ಹಂಚಿಕೆಯಾಗಿರುವ ಅನುದಾನಕ್ಕೆ ಕಾಮಗಾರಿಯ ಕ್ರಿಯಾ ಯೋಜನೆ ಪಟ್ಟಿ ತಯಾರಿಸುವ ಬಗ್ಗೆ ಚರ್ಚಿಸಿದರು.       ಸರ್ಕಾರ ನೀಡಿರುವ ಅನುದಾನದಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ತುರ್ತು ಹಾಗೂ ಅಗತ್ಯ ರಸ್ತೆ, ಚರಂಡಿ ಮತ್ತು ಕಾಲುಸಂಕ ಕಾಮಗಾರಿಗಳನ್ನು ನಿರ್ವಹಣೆ ಮಾಡಲು ಮತ್ತು ಅನುದಾನವನ್ನು ತಾಲ್ಲೂಕಿನ ಗ್ರಾಮೀಣ ರಸ್ತೆಗಳ ಉದ್ದಳತೆಗಳಿಗೆ ಅನುಗುಣವಾಗಿ ಸಮನಾಗಿ ಹಂಚಿಕೆ ಮಾಡಬೇಕಾಗಿದೆ ಎಂದ ಅವರು, ಕ್ರಿಯಾ ಯೋಜನೆ ತಯಾರಿಸುವಾಗ ಪ್ರಕೃತಿ ವಿಕೋಪದಿಂದ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆ, ಚರಂಡಿ ಮತ್ತು ಕಾಲುಸಂಕಗಳನ್ನು ತುರ್ತು ದುರಸ್ತಿ ಕೈಗೊಳ್ಳುವುದು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ನಮ್ಮ ಗ್ರಾಮ-ನಮ್ಮ…

Read More

ತುಮಕೂರು :       ಕನ್ನಡ ನಾಡು-ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಅವರು ಮಕ್ಕಳಿಗೆ ಕರೆ ನೀಡಿದರು. ಬೆಂಗಳೂರಿನ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ, ಮಕ್ಕಳ ಸಹಾಯವಾಣಿಯ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಬಾಲಭವನದಲ್ಲಿ “ಕನ್ನಡ ರಾಜ್ಯೋತ್ಸವ” ಹಾಗೂ “ಮಕ್ಕಳ ದಿನಾಚರಣೆ”ಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ಚಿತ್ರಕಲೆ/ಕನ್ನಡ ಗೀತೆ/ರಂಗೋಲಿ/ವೇಷಭೂಷಣ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಆಂಗ್ಲಭಾಷೆಯನ್ನು ಕಲಿಯುವುದರೊಂದಿಗೆ ಮಾತೃ ಭಾಷೆ ಕನ್ನಡವನ್ನು ಎಂದಿಗೂ ಮರೆಯಬಾರದು ಎಂದು ಕಿವಿ ಮಾತು ಹೇಳಿದರು.       ಡಿಡಿಪಿಐ ಕೆ.ಮಂಜುನಾಥ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಉತ್ತಮವಾಗಿ ಆಯೋಜಿಸುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರಲ್ಲದೆ, ಇಂತಹ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆಯಿಂದ ಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.  …

Read More

 ತುಮಕೂರು:       ಕಟ್ಟಡ ಕಾರ್ಮಿಕರ ಮಂಡಳಿಗೆ ನರೇಗಾ ಕಾರ್ಮಿಕರ ನೊಂದಣಿಯನ್ನು ತಡೆಗಟ್ಟಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 2 ರಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ವತಿಯಿಂದ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಗಿರೀಶ್ ತಿಳಿಸಿದ್ದಾರೆ.       ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಎಐಟಿಯುಸಿ ಹಾಗೂ ಇನ್ನಿತರ ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ 2006ರಲ್ಲಿ ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಅಸ್ವಿತ್ವಕ್ಕೆ ಬಂದಿದ್ದು,2018ರ ಸೆಪ್ಟಂಬರ್ ಅಂತ್ಯಕ್ಕೆ ಸುಮಾರು 18.18 ಲಕ್ಷದ ಕಾರ್ಮಿಕರು ತಮ್ಮ ಹೆಸರು ನೊಂದಾಯಿಸಿದ್ದು, ಸೆಸ್ ರೂಪದಲ್ಲಿ 7064.74 ಕೋಟಿ ರೂ ಹಣ ಸಂಗ್ರಹವಾಗಿದೆ.ತಮ್ಮಲ್ಲಿ ನೊಂದಾಯಿಸಿರುವ ಕಾರ್ಮಿಕರಿಗೆ 14 ವಿವಿಧ ತರಹದ ಸೌಲಭ್ಯ ನೀಡಬೇಕಾದ ಮಂಡಳಿ ಇದುವರೆಗೂ ಕೇವಲ 418 ಕೋಟಿ ರೂ ಮಾತ್ರ ಖರ್ಚು ಮಾಡಿದ್ದು, 415 ಕೋಟಿರೂಗಳ ತೆರಿಗೆ ಪಾವತಿಸಿದೆ. ಸೌಲಭ್ಯಗಳಿಗಾಗಿ ಅರ್ಜಿ…

Read More

ತುಮಕೂರು:         ಐದು ಬೆರಳಿನ ಗೂಬೆ ಹಾಗೂ ಎರಡು ತಲೆಯ ಹಾವು ನೀಡುವುದಾಗಿ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಬೆದರಿಸಿ ಜನರಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲಾ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ಆನಂದ(35), ದೀಪಾ(38), ಜಯಾ(45) ಬಂಧಿತ ಆರೋಪಿಗಳು.  ಕಾರ್ಯಾಚರಣೆ ವೇಳೆ ಅದೇ ಕಾಲೋನಿಯ ನಿವಾಸಿಗಳಾದ ಚಿನ್ನು(25), ವಿಜುಕುಮಾರ್(45) ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.       ಆರೋಪಿಗಳು ಪತ್ರಕರ್ತರೊಬ್ಬರನ್ನು ಸಂಪರ್ಕಿಸಿ ಐದು ಬೆರಳಿನ ಗೂಬೆ ಹಾಗೂ 2 ಕಾಲಿನ ಹಾವುಗಳನ್ನು ಮನೆಯಲ್ಲಿಟ್ಟುಕೊಂಡು ಸಾಕಿದರೆ ಬೇಗ ಶ್ರೀಮಂತರಾಗುತ್ತಾರೆ ಎಂದು ನಂಬಿಸಿದ್ದರು. ಇದನ್ನು ಪೊಲೀಸಗರ ಗಮನಕ್ಕೆ ತಂದಾಗ ಪೊಲೀಸರು ಆ ಪತ್ರಕರ್ತನ ಮೂಲಕ ಕಾರ್ಯತಂತ್ರ ರೂಪಿಸಿದ್ದಾರೆ.        ಅದರಂತೆ ಪತ್ರಕರ್ತ ತನ್ನ ಸ್ನೇಹಿತನೊಂದಿಗೆ ಅಕ್ಕಿಪಿಕ್ಕಿ ಕಾಲೋನಿಗೆ ಹೋದಾಗ ಆರೋಪಿಗಳು ಒಂದು ಗೂಬೆಯನ್ನು ತೋರಿಸಿ ಎರಡು ಲಕ್ಷ ನೀಡಿದರೆ ಅದನ್ನು ಮಾರುವುದಾಗಿ ಹೇಳಿದ್ದಾರೆ.…

Read More

ಕೊರಟಗೆರೆ:         ಚಿರತೆಯೊಂದು ದಾಳಿ ಮಾಡಿ  ಹೊಲದಲ್ಲಿ  ಮೇಯುತ್ತಿದ್ದ ಮೇಕೆಯನ್ನು  ಕೊಂದು ಪರಾರಿಯಾಗಿರುವ ಘಟನೆ ಇಂದು ನಡೆದಿದೆ.         ತಾಲೂಕಿನ ಕೋಳಾಲ ಸಮೀಪದ ಗೋಪೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ರೈತ ವಸಂತಕುಮಾರ್ ಎಂಬುವರ ಜಮೀನಿನಲ್ಲಿ ಮೇಕೆ ಮೇವು ತಿನ್ನುವಾಗ ದಿಡೀರನೆ ದಾಳಿ ನಡೆಸಿದ ಚಿರತೆ ಮೇಕೆಯ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ ಸಾಯಿಸಿದೆ. ಇದನ್ನು ಕಂಡ ರೈತರು ಬಯದಿಂದಲೇ ಕೂಗಾಟ ನಡೆಸಿ ಚಿರತೆಯನ್ನು ಅಟ್ಟಿದ್ದಾರೆ.       ಇದರಿಂದ ಗಾಬರಿಗೊಂಡಿರುವ ರೈತರು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಚಿರತೆ ಹಾವಳಿಯನ್ನು ತಪ್ಪಿಸುವಂತೆ ಒತ್ತಾಯಿಸಿದ್ದು ರೈತನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.

Read More

ಬೆಂಗಳೂರು:      ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ನೆಪ ಹೇಳಿ ಯುವತಿಯರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತಿದ್ದ ಖದೀಮನೊಬ್ಬನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.       ಟೊಮಿ ಟಾಮ್ (36) ಎಂಬ ಆರೋಪಿ ಪೋಲೀಸರ ಬಲೆಗೆ ಬಿದ್ದಿದ್ದು ಈ ವೇಳೆ ಅವನ ಸಂಪರ್ಕದಲ್ಲಿದ್ದ 32 ಯುವತಿಯರನ್ನು ರಕ್ಷಿಸಲಾಗಿದೆ. ಟೊಮಿ ತಾನು ಯುವತಿಯರಿಗೆ ವಿದೇಶದಲ್ಲಿ ವಿದ್ಯಾಭ್ಯಾಸ ಕಲ್ಪಿಸುವುದಾಗಿ ನಂಬಿಸಿದ್ದಾನೆ. 32 ಯುವತಿಯರೂ ಕೇರಳ ಮೂಲದವರಾಗಿದ್ದು ಇವರೆಲ್ಲಾ ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಪಡೆದಿದ್ದರು ಎನ್ನಲಾಗಿದೆ. ಟೊಮಿ ಅವರಿಗೆ ಜರ್ಮನಿಯಲ್ಲಿ ಅಲ್ಪಾವಧಿ ಕೋರ್ಸ್ ಗೆ ಸೇರಿಸುವ ಆಮಿಷವೊಡ್ಡಿ ವಿದೇಶಕ್ಕೆ ಕರೆದೊಯ್ಯುತ್ತಿದ್ದ.       ಆದರೆ ವಿಮಾನ ಸಿಬ್ಬಂದಿಗೆ ಯುವತಿಯರನ್ನು ಕಂಡು ಸಂದೇಹ ಮೂಡಿದ್ದು ತಕ್ಷಣ ಇಮಿಗ್ರೇಷನ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಸತ್ಯ ಬಯಲಾಗಿದೆ. ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಪೋಲೀಸರಿಗೆ ಮಾಹಿತಿ ನೀಡಿದ್ದು ಮಾನವ ಕಳ್ಳಸಾಗಣೆ ಜಾಲದ ನಂಟು ಹೊಂದಿದ್ದ ಆರೋಪಿ ಟೊಮಿಯನ್ನು ಬಂಧಿಸಲಾಗಿದೆ.

Read More

ಶಿವಮೊಗ್ಗ:       ಮಹಾನಗರ ಪಾಲಿಕೆಗೆ ಇಂದು ನಡೆದ ಚುನಾವಣೆಯಲ್ಲಿ ನೂತನ ಮೇಯರ್ ಆಗಿ ಲತಾ ಗಣೇಶ್, ಉಪ ಮೇಯರ್ ಆಗಿ ಚನ್ನಬಸಪ್ಪ ಆಯ್ಕೆಯಾಗುವ ಮೂಲಕ ಬಿಜೆಪಿ ತೆಕ್ಕೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಒಲಿದಿದೆ.       ಒಟ್ಟು 35 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ 20, ಕಾಂಗ್ರೆಸ್ 7, ಜೆಡಿಎಸ್ 2, ಪಕ್ಷೇತರರು 5, ಎಸ್.ಡಿ.ಪಿ.ಐ 1 ಸ್ಥಾನ ಗಳಿಸಿತ್ತು. ಇದಲ್ಲದೆ ಇಬ್ಬರು ಬಿಜೆಪಿಯ ಶಾಸಕರು ಹಾಗೂ ಇಬ್ಬರು ಬಿಜೆಪಿಯ ವಿಧಾನ ಪರಿಷತ್ ಸದಸ್ಯರು ಹಾಗೂ ಒರ್ವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರು ಸೇರಿ ಒಟ್ಟು 40 ಸದಸ್ಯರಿಗೆ ಮತ ಚಲಾವಣೆಗೆ ಅವಕಾಶವಿದ್ದು ಪಾಲಿಕೆ ಅಧಿಕಾರ ಹಿಡಿಯಲು ಕನಿಷ್ಟ 21 ಸದಸ್ಯರ ಬೆಂಬಲ ಬೇಕಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯ 20 ಪಾಲಿಕೆ ಸದಸ್ಯರ ಜೊತೆಗೆ ನಾಲ್ವರು ಬಿಜೆಪಿಯ ಶಾಸಕರು, ಮೂವರು ಪಕ್ಷೇತರ ಸದಸ್ಯರ ಬೆಂಬಲ ಸೇರಿ ಸದಸ್ಯ ಬಲ 27 ಕ್ಕೆ ತಲುಪಿ ನಿಚ್ಚಳ ಬಹುಮತ ಪಡೆಯಲು…

Read More

 ತುಮಕೂರು:       ಅಕ್ಷರ ದಾಸೋಹ ಬಿಸಿಯೂಟ ನೌಕರರಿಗೆ ಕನಿಷ್ಠ 10500 ರೂ ವೇತನ ನೀಡಬೇಕು,ಕೆಲಸದ ಭದ್ರತೆ, ಪಿ.ಎಫ್ ಮತ್ತು ಇಎಸ್‍ಐ ಹಾಗೂ 3000 ಮಾಸಿಕ ಪಿಂಚಿಣಿಗೆ ಆಗ್ರಹಿಸಿ ಡಿಸೆಂಬರ್ 2 ರಿಂದ ಅಕ್ಷರ ದಾಸೋಹ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುತ್ತಿರುವುದಾಗಿ ನೌಕರರ ಸಂಘದ ಜಿಲ್ಲಾ ಸಂಚಾಲಕಿ ರಾಧಮ್ಮ ತಿಳಿಸಿದ್ದಾರೆ.       ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,2002ರಿಂದ ಸರಕಾರದ ಈ ಯೋಜನೆಯಲ್ಲಿ ಮಹಿಳೆಯರು ಅತ್ಯಂತ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ಇಂದು ಸಹ ಮುಖ್ಯ ಅಡುಗೆಯವರಿಗೆ ಮಾಸಿಕ 2700 ಮತ್ತು ಅಡುಗೆ ಸಹಾಯಕರಿಗೆ 2600 ರೂ ನೀಡಲಾಗುತ್ತಿದೆ. ಇಂದಿನ ಬೆಲೆ ಹೆಚ್ಚಳದಲ್ಲಿ ಕೇವಲ 2700 ರೂಗಳಿಗೆ ಜೀವನ ನಡೆಸುವುದು ದುಸ್ತರವಾಗಿದೆ. ಮಕ್ಕಳು ಓದು, ಮನೆಯ ಖರ್ಚು ಸೇರಿದಂತೆ ಮನೆ ನಿಭಾಯಿಸುವುದು ಕಷ್ಟವಾಗಿದೆ.ಆದ್ದರಿಂದ ಬೆಲೆ ಹೆಚ್ಚಳಕ್ಕೆ ಅನುಗುಣವಾಗಿ ಸರಕಾರವೇ ನಿಗಧಿಪಡಿಸಿರುವಂತೆ ಮಾಸಿಕ 10500 ರೂ ಕನಿಷ್ಠ ವೇತನ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ.ಕಳೆದ 10 ವರ್ಷಗಳಿಂದ ಈ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರೂ ಇದುವರೆಗೂ…

Read More