Author: News Desk Benkiyabale

ಗುಬ್ಬಿ: ದನದ ಕೊಟ್ಟಿಗೆ ಗೊಬ್ಬರ ಬಳಸಿ ರಾಗಿ ಬೆಳೆದು ಯಶಸ್ವಿಯಾದ ಮಾಜಿ ಶಾಸಕ ಮಸಾಲೆ ಜಯರಾಮ್. ಸಾವಯುವ ಗೊಬ್ಬರವನ್ನು ಬಳಸಿ ರಾಗಿ.ಭತ್ತ. ಹಾಗೂ ಬಾಳೆ ತೆಂಗಿನ ಗಿಡಗಳು ಮತ್ತು ಸಿದ್ದು ಹಲಸಿನ ಗಿಡಗಳನ್ನು ಬೆಳೆಸಿ ಉತ್ತಮ ರೀತಿಯಲ್ಲಿ ರುಚಿಕರವಾದ ಆಹಾರವನ್ನು ಸೇವನೆ ಮಾಡಬಹುದು ಹಾಗಾಗಿ ರೈತರು ದನದ ಕೊಟ್ಟಿಗೆ ಗೊಬ್ಬರವನ್ನು ಬಳಸಿ ಬೆಳೆಯುವ ಬೆಳೆಯಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎನ್ನುತ್ತಾರೆ. ರಾಸಾಯನಿಕ ಗೊಬ್ಬರವನ್ನು ಬಳಸುವುದಕ್ಕಿಂತ ದನದ ಕೊಟ್ಟಿಗೆ ಗೊಬ್ಬರವನ್ನು ಬಳಸಿ ರಾಗಿ ಬೆಳೆಯುವುದರಿಂದ ಉತ್ತಮ ಇಳುವರಿಯನ್ನು ಪಡೆಯಬಹುದು ಹಾಗೆ ರಾಗಿ ತೆನೆಯಲ್ಲಿ ಹೆಚ್ಚು ಇಳುವರಿ ಸಹ ಬೀಳುತ್ತದೆ. ತುರುವೇಕೆರೆ ಕ್ಷೇತ್ರದ ಮಾ.ಶಾಸಕ ಮಸಾಲೆ ಜಯರಾಮ್ ಅವರು ತಮ್ಮ ಫಾರಂ ಹೌಸ್ ನಲ್ಲಿ ವಿವಿಧ ತಳಿಯ, ಹಳ್ಳಿಕಾರ್ ,ಅಮೃತ್ ಮಹಲ್ ,ಮಲೆನಾಡ ಗಿಡ್ಡ ,ಪುಂಗನೂರು,ಗಿರ್ ತಳಿಯ ನಾಟಿ ಹಸು ಮತ್ತು ಎತ್ತುಗಳನ್ನು ಸಾಕಿದ್ದು ಇವುಗಳ ಸಗಣಿ ಯಿಂದ ಕೊಟ್ಟಿಗೆ ಗೊಬ್ಬರ ಶೇಖರಿಸಿ ರಾಗಿ ಬೆಳೆಯನ್ನು ಬೆಳೆದು ಉತ್ತಮ ರೀತಿಯಲ್ಲಿ ಇಳುವರಿ ಬಂದಿರುವುದು ಸಂತಸ…

Read More

ತುಮಕೂರು: ಜಾತಿ, ಮತ, ಪಂಗಡ ಬಿಟ್ಟು ಎಲ್ಲಾ ಜನರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ.ಶ್ರೀಶಿವಕುಮಾರಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿದ್ದಗಂಗಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆ ಹಾಗೂ ಸ್ಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂಸ್ಥಾಪಕರಾದ ಶ್ರೀಶಿವಕುಮಾರಸ್ವಾಮೀಜಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಜಾತಿ ಭೇಧವಿಲ್ಲದೆ ಎಲ್ಲಾ ವರ್ಗದ ಮಕ್ಕಳಿಗೆ ಅನ್ನ, ಅಕ್ಷರ ,ಆಶ್ರಯ ನೀಡಿ, ಅವರ ಉನ್ನತ್ತಿಗೆ ಶ್ರಮಿಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ ಎಂದರು. ಭಕ್ತರಿAದ ನಡೆದಾಡುವ ದೇವರು ಎಂದು ಕರೆಯಿಸಿಕೊಂಡ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಮಠದಲ್ಲಿ ಓದುತ್ತಿರುವ ಮಕ್ಕಳನ್ನೇ ದೇವರೆಂದು ತಿಳಿದು, ಅವರ ಸೇವೆಯಲ್ಲಿ ಇಡೀ ಜೀವನವನ್ನೇ ಸವೆಸಿದವರು. ನಡೆ,ನುಡಿಗಳಲ್ಲಿ ವೆತ್ಯಾಸವಿಲ್ಲದೆ ಬದುಕಿದವರು. ಮಕ್ಕಳ ಜೊತೆಗೆ, ಗೋವುಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದ ಶ್ರೀಗಳು, ಮಾತೃ ಹೃದಯದ ಅವರು ಆನಾಥ ಮಕ್ಕಳಿಗೆ ತಾಯಿ ಯಾಗಿಯೇ ಸಾಕಿ ಸಲುಹಿದವರು.ಇಂದು ಇಡೀ ವಿಶ್ವದಲ್ಲಿ ಸಿದ್ದಗಂಗಾ ಮಠದಲ್ಲಿ ಓದಿದ ಮಕ್ಕಳು ಇದ್ದಾರೆ.ಅವರು ಶ್ರೀಮಠಕ್ಕೆ ಬಂದಾಗ…

Read More

ತುಮಕೂರು: ಒಬ್ಬ ವ್ಯಕ್ತಿಯ ದೃಷ್ಟಿಕೋನ, ಜೀವನದ ಬಗ್ಗೆ ಇರುವ ಆಳವಾದ ಅರಿವು, ಅನಿಸಿಕೆ, ಲೋಕದೃಷ್ಟಿ ಮುಂತಾದವುಗಳ ಮೊತ್ತ ಜೀವನದರ್ಶನವಾಗಿದೆ. ಜೀವ ಜಗತ್ತಿನಲ್ಲಿ ಮನುಷ್ಯನ ಪಾತ್ರ, ಸುಖ ದುಃಖಗಳ ಅರ್ಥ, ಬದುಕಿನಲ್ಲಿ ಅವುಗಳ ಪರಿಣಾಮ ಇಂತಹ ವಿಚಾರವನ್ನು ಸಾಹಿತ್ಯದಲ್ಲಿ ಹುಡುಕುವ ಪ್ರಕ್ರಿಯೆ ಉಂಟಾಗಿದೆ. ಸಾಹಿತ್ಯವು ಜೀವನದ ದೃಷ್ಟಿಕೋನದ ಜೊತೆ ಬದುಕಿನ ಪ್ರತಿಬಿಂಬದ0ತೆ ಕಾರ್ಯನಿರ್ವಹಿಸುತ್ತದೆ ಎಂದು ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ. ಎನ್. ಆರ್ ಲಲಿತಾಂಬ ಅಭಿಪ್ರಾಯ ಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಗುರುವಾರ ಹಮ್ಮಿಕೊಂಡಿದ್ದ ದಿ. ಗುಬ್ಬಿ ಬೊಮ್ಮಣ್ಣಯ್ಯ ಸ್ಮಾರಕ ಹಳಗನ್ನಡ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಳಗನ್ನಡ ಸಾಹಿತ್ಯದಲ್ಲಿ ಪ್ರಮುಖವಾಗಿ ನೈತಿಕ ಮತ್ತು ನಾಗರಿಕ ಜೀವನ ದರ್ಶನ ತತ್ವಗಳು, ಯಾವುದು ಹಿತ ಯಾವುದು ಅಹಿತ ಎಂಬುದನ್ನು ಕಾಣಬಹುದು. ಮಾನವನು ವೈರಾಗ್ಯ, ಮೋಹ, ದ್ವೇಷವನ್ನು ತ್ಯಜಿಸಿ ಆತ್ಮಶುದ್ಧಿ, ತ್ಯಾಗ, ನೈತಿಕ ಮೌಲ್ಯಗಳನ್ನು ರೂಡಿ ಸಿಕೊಳ್ಳಬೇಕು ಎಂದರು. ಆದಿಪುರಾಣ, ವಿಕ್ರಮಾರ್ಜುನ…

Read More

ತುಮಕೂರು: ನಿಯಮವನ್ನು ಉಲ್ಲಂಘಿಸಿ ಪರ ವಾನಗಿ ಇಲ್ಲದೆ ದೋಷಪೂರಿತ ದಾಖ ಲೆಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಬಳಸುವ ೭,೭೮,೮೦೦ ರೂ. ಮೌಲ್ಯದ ೩೦ ಟನ್ ಟೆಕ್ನಿಕಲ್ ಯೂರಿಯಾ ರಸಗೊಬ್ಬರವನ್ನು ಸಾಗಾಣಿಕೆ ಮಾಡುತ್ತಿದ್ದ ಸರಕು ವಾಹನ(ಆರ್.ಜೆ-೧೧ ಜಿ.ಸಿ.-೩೮೧೮)ವನ್ನು ಮೇ ೧೯ರಂದು ಜಪ್ತಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ(ಜಾರಿದಳ-೧) ಪುಟ್ಟರಂಗಪ್ಪ ತಿಳಿಸಿದ್ದಾರೆ. ನಗರದ ರಾಷ್ಟಿçÃಯ ಹೆದ್ದಾರಿ ಕ್ಯಾತ್ಸಂದ್ರ ಜಾಸ್ ಟೋಲ್ ಬಳಿ ಜಾಗೃತಿ ಕಾರ್ಯಕ್ರಮದಲ್ಲಿ ಪರಿಶೀಲಿಸಿದಾಗ ನಿಯಮ ಉಲ್ಲಂಘನೆ ಪ್ರಕರಣ ಬೆಳಕಿಗೆ ಬಂದಿದ್ದರಿ0ದ ವಾಣಿಜ್ಯ ತೆರಿಗೆ ಅಧಿಕಾರಿ(ಜಾರಿ-೨) ಕೆ.ಎನ್. ನರಸಿಂಹರಾಜು, ಸಹಾಯಕ ಆಯುಕ್ತ(ಜಾರಿ) ನಾಗರಾಜು ಜಪ್ತಿ ಮಾಡಿ ಕೃಷಿ ಇಲಾಖೆ ಮಾಹಿತಿ ನೀಡಿದ್ದರು. ಮಾಹಿತಿಯನ್ನಾಧರಿಸಿ ಕೃಷಿ ಇಲಾಖೆ ಅಧಿಕಾರಿಗಳು ದಾಖಲೆಯನ್ನು ಪರಿಶೀಲಿಸಿ ಸರಕನ್ನು ವಿಶ್ಲೇಷಣೆಗಾಗಿ ಪ್ರಯೋಗಾಲಕ್ಕೆ ಕಳುಹಿಸಿದ್ದು, ಪ್ರಯೋಗಾಲಯದ ವರದಿಯಲ್ಲಿ ಸಾಗಾಣಿಕೆ ಮಾಡುತ್ತಿದ್ದ ರಸಗೊಬ್ಬರವು ಕಾರ್ಖಾನೆಗಳಿಗೆ ಬಳಸುವ ರಸಗೊಬ್ಬರವೆಂದು ತಿಳಿದು ಬಂದಿದೆ. ಪರವಾನಗಿ ಇಲ್ಲದೆ ಇಂತಹ ರಸಗೊಬ್ಬ ರವನ್ನು ಸರಬರಾಜು, ಸಾಗಾಣಿಕೆ, ವಿತರಣೆ ಮಾಡುವುದು ಅಪರಾಧ. ಕೇಂದ್ರ…

Read More

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಭಾಷೆಯ ಮೇಲೆ ಹಿಡಿತ ಮತ್ತು ತಾಂತ್ರಿಕ ಕೌಶಲ್ಯ ಇದ್ದರೆ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಓದುವುದರ ಜೊತೆಗೆ ತಾಂತ್ರಿಕ ಕೌಶಲ್ಯಗಳನ್ನು ಕಲಿಯಬೇಕು ಎಂದು ಉಪನ್ಯಾಸಕ ಮತ್ತು ಪತ್ರಕರ್ತರಾದ ಹಾರೋಗೆರೆ ಶಂಕರಪ್ಪ ಎಚ್.ಎನ್ ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೪-೨೫ ಸಾಲಿನ ಎನ್.ಎಸ್.ಎಸ್ ಶಿಬಿರದಲ್ಲಿ ಮಾತನಾಡುತ್ತಾ ಪತ್ರಿಕೋದ್ಯಮ ಕ್ಷೇತ್ರ ಇಂದು ಬೃಹತ್ ಉದ್ಯಮವಾಗಿ ಬೆಳೆದಿದ್ದು ಸಾವಿರಾರು ಜನರಿಗೆ ಈ ಕ್ಷೇತ್ರದಲ್ಲಿ ಉದ್ಯೋಗವಿದೆ,ಕೌಶಲ್ಯ ಮತ್ತು ತಾತಾಂತ್ರಿಕವಾಗಿ ನೈಪುಣ್ಯತೆ ಹೊಂದಿ ರಬೇಕು. ಪತ್ರಿಕಾ ಕ್ಷೇತ್ರ ಇಂದು ಡಿಜಿಟಲ್ ಮಾಧ್ಯಮವಾಗಿ ಬೆಳೆಯುತ್ತಿದ್ದು, ದೃಶ್ಯ ಮಾಧ್ಯಮ ,ಪ್ರಿಂಟ್ ಮೀಡಿಯಾ, ರೇಡಿಯೋ ಮತ್ತು ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ತಾಂತ್ರಿಕವಾಗಿ ನೈಪುಣ್ಯತೆ ಹೊಂದಿರುವವರಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರೆಯುತ್ತಿವೆ. ಪತ್ರಿಕೆಗಳು ಸದಾ ಸಮಾಜದ ಮತ್ತು ಜನರ ಕ್ಷೆಯೋಭಿವೃದ್ಧಿಯ ಗುರಿಯಾಗಿರಿಸಿಕೊಂಡು ಸುದ್ದಿಗಳನ್ನು ಬಿತ್ತರಿಸುತ್ತೇವೆ ಎಂದರು. ಸAಗೀತ ಗಾಯಕ ದಿಬ್ಬೂರು ಮಂಜಣ್ಣ ಮಾತನಾಡಿ ವಿದ್ಯಾರ್ಥಿಗಳು ಇಂತಹ ಶಿಬಿರದ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದರ ಜೊತೆಗೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವ ಮುಖೇನ ಮುಂದಿನ…

Read More

ಕುಣಿಗಲ್: ನನ್ನ ಮಗನ ಸಾವಿಗೆ ಕ್ರಿಕೆಟ್ ಮ್ಯಾಚ್ ನಡೆಸಿದವರೆ ಕಾರಣ ಎಂದು ಮೃತ ಮನೋಜ್‌ನ ತಾಯಿ ಲಕ್ಷ್ಮಮ್ಮ ಆರೋಪಿಸಿದ್ದಾರೆ. ಯಾರನ್ನು ಮಗ ಅಂತ ಕರೆಯಲಿ ಎಂದು ಮನೋಜ್ ತಾಯಿ ರೋಧಿಸಿದ್ದಾರೆ. ಸ್ನೇಹಿತರು ಕರೆದುಕೊಂಡು ಹೋಗಿ ಕರೆದುಕೊಂಡು ಬಂದಿಲ್ಲ, ಸ್ನೇಹಿತರು ಚೆನ್ನಾಗಿದ್ದಾರೆ ಮಗ ಮೃತಪಟ್ಟಿದ್ದಾನೆ. ಸರಕಾರದ ದುಡ್ಡು ತೆಗೆದುಕೊಂಡು ಏನು ಮಾಡಲಿ, ನನಗೆ ಮಗ ಬೇಕು ಎಂದಿದ್ದಾರೆ. ಮೊಬೈಲ್ ಮರೆತು ಹೋಗಿದ್ದ ವಾಪಸ್ ಬಂದು ತೆಗೆದುಕೊಂಡು ಹೋಗಿದ್ದ ಅದೇ ಕೊನೆಯದಾಗಿತ್ತು ಎಂದಿದ್ದಾರೆ. ಐಪಿಎಲ್ ವಿಜಯೋತ್ಸವದ ಕಾಯಕ್ರಮ ಈ ರೀತಿ ಪ್ಲಾನ್ ಮಾಡಬಾರದಿತ್ತು, ಸರಕಾರ ಬೇಕಾಬಿಟ್ಟಿ ಧೋರಣೆಯಿಂದ ಕಾಯಕ್ರಮ ಮಾಡಿದ್ದರಿಂದ ರಾಜ್ಯದಲ್ಲಿ ೧೧ ಜನ ಮೃತಪಟ್ಟಿದ್ದಾರೆ. ಇದಕ್ಕೆ ನೇರ ಹೊಣೆ ರಾಜ್ಯ ಸರಕಾರವಾಗಿದೆ ಎಂದು ವಿಜ ಯೋತ್ಸವದ ವೇಳೆ ಮೃತಪಟ್ಟ ಐಪಿಎಲ್ ಅಭಿಮಾನಿ ಮನೋಜ್ ಅವರ ಅಂಕಲ್ ತಿಮ್ಮಪ್ಪ ತಿಳಿಸಿದ್ದಾರೆ. ಸುಮಾರು ೨೦ ಹಿಂದೆ ಮಕ್ಕಳ ವಿದ್ಯಾಬ್ಯಾಸಕ್ಕೆ ಬೆಂಗಳೂರಿಗೆ ಹೋಗಿದ್ದರು. ರಾಜ್ಯ ಸರಕಾರ ೧೦ ಲಕ್ಷ ರೂ. ಪರಿಹಾರ ಕೊಡುತ್ತೇವೆ ಎನ್ನುತ್ತಾರೆ, ಮಕ್ಕಳನ್ನು ತಂದು…

Read More

ತುಮಕೂರು: ನಗರದ ಅರ್ಬನ್ ರೆರ್ಸಾಟ್‌ನಲ್ಲಿ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆಯನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಖಿಲ್ ರಾಜಣ್ಣ ಮಾತನಾಡಿ, ಚುನಾವಣೆಗಳಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿರುತ್ತದೆ. ಹಾಗಾಗಿ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ.ಈಗಾಗಲೇ ಪಕ್ಷದ ಅಂತರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಶೀಘ್ರವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತುಂಬಲಾಗುವುದು.ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಶೀಘ್ರವೇ ಪಟ್ಟಿಯನ್ನು ಜಿಲ್ಲಾ ಸಂಘಕ್ಕೆ ಕಳುಹಿಸುವಂತೆ ಸೂಚನೆ ನೀಡಿದ ಅವರು,ಕಾಂಗ್ರೆಸ್ ಪಕ್ಷದಲ್ಲಿ ಯುವ ಘಟಕವನ್ನು ಸದೃಢವಾಗಿ ಕಟ್ಟಲು ಇದು ಸಹಕಾರಿಯಾಗಲಿದೆ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಹಿಲಾಯಿ ಸಿಖಂದರ್ ಮಾತನಾಡಿ,ಜಿಲ್ಲೆಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆಯ್ಕೆಯಾಗಿರುವ ವ್ಯಕ್ತಿಗಳು ತಮ್ಮ ಕ್ಷೇತ್ರದ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಲಹೆ ಪಡೆದು,ಯೂತ್ ಕಾಂಗ್ರೆಸ್‌ನಲ್ಲಿ ಖಾಲಿ ಹುದ್ದೆಗಳ…

Read More

ತುಮಕೂರು: ನಗರದ ಹೊರವಲಯದ ನಂದಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ರಾಜೇಶ್ (೨೫), ಧನಂಜಯ (೨೭), ಧನುಷ್ (೨೩) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸಮೀಪದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದಂತೆ ಎದುರಾದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ತಕ್ಷಣ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಮೃತಪಟ್ಟಿರುವ ಮೂವರು ದಾಬಸ್ ಪೇಟೆಯ ಸೋಲಾರ್ ಕಂಪನಿಯೊ0ದರಲ್ಲಿ ಗಾರ್ಡುಗಳಾಗಿ ಕೆಲಸ ಮಾಡುತ್ತಿದ್ದರು.    ಬೆಳಗಿನ ಜಾವ ತಮ್ಮ ಕೆಲಸವನ್ನು ಮುಗಿಸಿಕೊಂಡು ವಾಪಸ್ ತುಮಕೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಈ ಸಂಬAಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…

Read More

ತುಮಕೂರು: ಜಿಲ್ಲೆಯಲ್ಲಿ ಜೂನ್ ೯ ರಿಂದ ೨೦ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾನಿಟೈಸರ್ ಮಾಡಿ ಯಾವುದೇ ಲೋಪದೋಷಗಳಿಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-೩ಕ್ಕೆ ಸಂಬ0ಧಿಸಿದAತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ- ೧ ಮತ್ತು ೨ ರ ಪರೀಕ್ಷೆಯನ್ನು ಯಾಶಸ್ವಿಯಾಗಿ ನಡೆಸಿದಂತೆ ಈ ಪರೀಕ್ಷೆಯನ್ನೂ ಪಾರದರ್ಶಕವಾಗಿ ನಡೆಸಬೇಕು ಎಂದು ತಿಳಿಸಿದರು. ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ ೪ ಹಾಗೂ ಉಳಿದೆಲ್ಲ ತಾಲೂಕುಗಳಲ್ಲಿ ತಲಾ ೧ ರಂತೆ ಒಟ್ಟು ೧೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ…

Read More

ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಸ್ವಾಮೀಜಿಗಳು, ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿ ನಿಲ್ಲಿಸಬೇಕು ಎಂದು ತುಮಕೂರು ನಗರ ವೀರಶೈವ ಸೇವಾ ಸಮಾಜ ಮತ್ತು ಅಖಿಲ ಭಾರತ ಲಿಂಗಾಯಿತ, ವೀರಶೈವ ಮಹಾಸಭಾ ಒತ್ತಾಯಿಸುತ್ತದೆ ಎಂದು ತುಮಕೂರು ನಗರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಚಂದ್ರಮೌಳಿ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಹೇಮಾವತಿ ನಾಲೆಗೆ ಲಿಂಕ್ ಕೆನಾಲ್ ನಿರ್ಮಿಸಿ ನಮ್ಮ ಪಾಲಿನ ನೀರನ್ನು ಪಕ್ಕದ ಜಿಲ್ಲೆಗೆ ತೆಗೆದುಕೊಂಡು ಹೋಗುವ ಅಪಾಯಕಾರಿ ಕೆಲಸಕ್ಕೆ ರಾಜ್ಯ ಸರ್ಕಾರ ಕೈ ಹಾಕಿರುವುದು ಜಿಲ್ಲೆಯ ರೈತರಿಗೆ ಭಾರೀ ಅನ್ಯಾಯ ಮಾಡಿದಂತೆ ಎಂದರು. ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ ೨೫.೩೧ಟಿಎಂಸಿ ನೀರು ಆದೇಶದಲ್ಲಿ ಅಷ್ಟೇ ಇದ್ದು ಮಳೆಯಾದರೂ ಪೂರ್ಣಪ್ರಮಾಣದಲ್ಲಿ ನಮಗೆ ಗೊರೂರು ಜಲಾಶಯದಿಂದ ದೊರೆ ಯುತ್ತಿಲ್ಲ.ಪರಿಸ್ಥಿತಿ ಹೀಗಿರುವಾಗ ಕುಣಿಗಲ್ ತಾಲೂಕನ್ನು ತೋರಿಸಿ ಮಾಗಡಿ ಹಾಗೂ ರಾಮನಗರ ಭಾಗಕ್ಕೆ ನೀರನ್ನು ತೆಗೆದುಕೊಂಡು ಹೋಗುವ ಕುತಂತ್ರ ನಡೆದಿದ್ದು ತುರುವೇಕೆರೆ, ಗುಬ್ಬಿ, ತುಮಕೂರು ಗ್ರಾಮಾಂತರ ಹಾಗೂ ತುಮಕೂರು…

Read More