ತುಮಕೂರು ನಗರ: ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ನಿವೇಶನ ಹಂಚಿಕೆ ಸಂಬ0ಧ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹ ತ್ವದ ಚರ್ಚೆ ನಡೆಸಲಾಯಿತು. ಈಗಾಗಲೇ ಗುರು ತಿಸಲಾದ ನಿವೇಶನಗಳನ್ನು ವಿಳಂಬವಿಲ್ಲದೆ, ನಿಯ ಮಾನುಸಾರವಾಗಿ ಅರ್ಹ ಫಲಾನುಭವಿಗಳಿಗೆ ವಿತರಿಸುವಂತೆ ಸಂಬ0ಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಯಿತು. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಅರ್ಹರಿಗೆ ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಯಾವುದೇ ಅಡೆತಡೆಗಳು ಉಂಟಾಗದ0ತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಈ ಸಭೆಯಲ್ಲಿ ಉಪ ಕಾರ್ಯದರ್ಶಿ (ಅಭಿವೃದ್ಧಿ), ಉಪ ಕಾರ್ಯದರ್ಶಿ (ಆಡಳಿತ), ಮುಖ್ಯ ಯೋಜನಾಧಿಕಾರಿಗಳು, ವಿವಿಧ ಯೋಜನಾ ನಿರ್ದೇಶಕರು ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊ0ಡರು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನಹಿತದ ಕಾರ್ಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಯುಕ್ತವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.
Author: News Desk Benkiyabale
ತುಮಕೂರು: ಉದ್ಯೋಗ ಸೃಷ್ಟಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ದೀರ್ಘ ಕಾಲದ ಸೌಕರ್ಯಗಳನ್ನು ಒದಗಿಸುವ ಗುರಿ ಹೊಂದಿರುವ ವಿಕಸಿತ ಭಾರತ-ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ -ಜಿ ರಾಮ್ ಜಿ) ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಅಪಪ್ರಚಾರ ಮಾಡುತ್ತಾ ಜನರನ್ನು ದಿಕ್ಕತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಡಾ.ಸಿ. ಅಶ್ವತ್ಥನಾರಾಯಣ ಆರೋಪಿಸಿದರು. ಗುರುವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೦೬ರಲ್ಲಿ ಪ್ರಾರಂಭವಾದ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯನ್ನು ೨೦ ವರ್ಷದ ನಂತರ ಅದರ ಲೋಪದೋಷಗಳನ್ನು ಸರಿಪಡಿಸಿ, ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಸ್ವರೂಪದಲ್ಲಿ ಜನಪರವಾದ ಗ್ರಾಮೀಣ ಮೂಲಭೂತ ಸೌಕರ್ಯ, ಆಸ್ತಿ ನಿರ್ಮಾಣ, ಮೌಲ್ಯವರ್ಧನೆಗಾಗಿ ಜಾರಿಗೆ ತರಲಾಗುತ್ತಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖಂಡರು ಈ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಭಾವನೆ ಬಿತ್ತುತ್ತಿದ್ದಾರೆ ಎಂದು ಟೀಕಿಸಿದರು. ನ್ಯೂನ್ಯತೆ ಸರಿಪಡಿಸಿ ಯೋಜನೆಯನ್ನು ಉತ್ತಮಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಮುಖ್ಯವಾಗಿ ನೀರಿನ…
ಪಾವಗಡ: ಕರ್ನಾಟಕ ರಾಜ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇಂದು ದಾಖಲೆ ಬರೆದ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆಯನ್ನು ಮಾಡಲಾಯಿತು. ಬ್ಲಾಕ್ ಕಾಂಗ್ರೆಸ್ ಕಛೇರಿಯಿಂದ ಇಂದಿರಾ ಗಾಂಧಿ ವೃತ್ತದವರೆಗೆ ತೆರಳಿ ಸಿದ್ದರಾಮಯ್ಯ ರವರ ಪರ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು,ಮಾಜಿ ಸಚಿವರಾದ ವೆಂಕಟರಮಣಪ್ಪ ಕೇಕ್ ಕತ್ತರಿಸುವ ಮೂಲಕ ಸಿದ್ದರಾಮಯ್ಯ ರವರಿಗೆ ಅಭಿನಂದನೆಗಳನ್ನು ತಿಳಿಸಿದರು. ನಂತರ ಕನಕ ವೃತ್ತದ ಬಳಿ ತೆರಳಿ ಕನಕ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿದರು. ತದನಂ ತರ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು,ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಾಂಜಿನಪ್ಪ, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮೈಲಾರಪ್ಪ, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಪುರಸಭೆ ಮಾಜಿ ಅಧ್ಯಕ್ಷರಾದ ಸುಮಾ…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಮತ್ತು ಅಮೂಲ್ಯ ಪುಸ್ತಕ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗೀತಾ ವಸಂತ ಅವರ “ತೆರೆದಷ್ಟೂ ಅರಿವು” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ವಿಮರ್ಶಕ ಒಂದು ನಿಲುವನ್ನು ತಾಳಬೇಕು ಮತ್ತು ಈ ನಿಲುವಿನ ಬಗೆಗೂ ವಿಮರ್ಶೆ ಇರಬೇಕು. ಒಂದು ಸಾಹಿತ್ಯ ಕೃತಿಯನ್ನು ಅರ್ಥ ಮಾಡಿಕೊಳ್ಳುವುದು ಎನ್ನುವುದು ಇಲ್ಲ. ಅರ್ಥ ಎನ್ನುವುದು ಅನುಭವದ ಸಾವು. ಒಂದು ಸತ್ಯ ಎನ್ನುವುದು ಇದೆಯೇ, ಸತ್ಯ, ಅನುಭವ ಎಂದರೇನು, ಅನುಭವಗಳ ಮೂಲಕ ಅರಳಿ ಬೆಳೆಯುವುದೆಂದರೇನು ಇತ್ಯಾದಿ ಮಹತ್ವದ ಪ್ರಶ್ನೆಗಳನ್ನು ಹಾಕಿಕೊಳ್ಳುವ ಲೇಖಕಿ, ತಮ್ಮ ಓದನ್ನು ಕುರಿತ ಪ್ರಾಮಾಣಿಕವಾದ ವಿಮರ್ಶೆಯನ್ನು ಈ ಕೃತಿಯಲ್ಲಿ ಮಂಡಿಸಿದ್ದಾರೆ ಎಂದು ಹೇಳಿದರು. ಕೃತಿಯನ್ನು ಕುರಿತು ಮಾತನಾಡಿದ ರಂಗನಾಥ ಕಂಟನಕುAಟೆಯವರು “ಕೃತಿಯ ಒಳಗಿನ ಅನುಭವ, ತಿಳಿವು ಮತ್ತು ದರ್ಶನವನ್ನು ನಾವು ನಮ್ಮದಾಗಿಸಿಕೊಳ್ಳುವುದು ಗೀತ ವಸಂತ ಅವರ ವಿಮರ್ಶೆಯ ಮಾದರಿ. ಬೇರೆ ಬೇರೆ ಸಿದ್ಧಾಂತಗಳ ಹೊರಗೆ ನಿಂತು ಕೃತಿಯ ಅನುಭವ ಲೋಕವನ್ನು ಪ್ರವೇಶಿಸಬೇಕು. ಆ ಮೂಲಕ ನಮ್ಮ ಅನುಭವದ ತಿಳುವಳಿಕೆಯ ಕ್ರಮವನ್ನು…
ತುಮಕೂರು: ಕೊಲಂಬೋದಲ್ಲಿ ನಡೆದ ಅಂಧ ಮಹಿಳೆಯರ ಟಿ-೨೦ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತ ತಂಡದ ನಾಯಕಿ ಟಿ.ಸಿ.ದೀಪಿಕಾ ಹಾಗೂ ಅವರ ತಂಡವನ್ನು ಜನವರಿ 11 ರಂದು ತುಮಕೂರಿನಲ್ಲಿ ಸನ್ಮಾನಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ ತಿಳಿಸಿದರು. ತುಮಕೂರಿನಲ್ಲಿ ರಾಜ್ಯ ಕಾಡುಗೊಲ್ಲರ ಸಂಘ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿರಾ ತಾಲ್ಲೂಕಿನ ಗಡಿ ಭಾಗದ ಒಂದು ಕುಗ್ರಾಮ ಗೊಲ್ಲರಹಟ್ಟಿಯ ಬಡ ಕುಟುಂಬದ ಆಟಗಾರ್ತಿ ವಿಶ್ವಕಪ್ ವಿಜೇತೆಯಾಗಿ ಇಡೀ ಭಾರತಕ್ಕೆ ಹೆಮ್ಮೆಯ ಸ್ಥಾನ ತಂದುಕೊಟ್ಟಿದ್ದಾರೆ. ತುಮಕೂರು ಜಿಲ್ಲೆಗೆ ಮಾತ್ರವಲ್ಲದೆ, ಕರ್ನಾಟಕಕ್ಕೆ ಇದು ಹೆಮ್ಮೆಯ ವಿಷಯ. ಬಡ ಕುಟುಂಬದ ಹೆಣ್ಣು ಮಕ್ಕಳು ಮಾಡಿರುವ ಸಾಧನೆಯನ್ನು ನಾವೆಲ್ಲ ಸ್ಮರಿಸಿಕೊಳ್ಳಬೇಕಿದೆ. ಬಡ ಕುಟುಂಬದ ಗೊಲ್ಲ ಜನಾಂಗದಲ್ಲಿ ಹುಟ್ಟಿ ವಿಶ್ವ ಮಟ್ಟದಲ್ಲಿ ಕೀರ್ತಿಪತಾಕೆ ಹಾರಿಸಿರುವ ಈಕೆ ಮತ್ತು ಇವರ ತಂಡವನ್ನು ತುಮಕೂರಿನ ಬಾಲ ಭವನದಲ್ಲಿ ಭಾನುವಾರದಂದು ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು. ಜ.೧೧ರಂದು ಬೆಳಗ್ಗೆ ೧೨.೩೦ಕ್ಕೆ ಜಿಲ್ಲಾ ಬಾಲ…
ತುಮಕೂರು: ರೈತರು, ವ್ಯಾಪಾರಸ್ಥರು ಮತ್ತು ಉದ್ಯಮಿಗಳ ಅಭ್ಯುದಯದ ಉದ್ದೇಶದಿಂದ ಜ. 9, 10ಮತ್ತು 11 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರಾಂಡ್ ಮತ್ತು ಗಾಯಿತ್ರಿ ವೃಕ್ಷ ಸಭಾಂಗಣದಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಎಫ್ ಸಿ ತುಮಕೂರು ಅಧ್ಯಕ್ಷ ಮಂಜುನಾಥ್ ಹೆಚ್. ಎಸ್. ತಿಳಿಸಿದ್ದಾರೆ. ನಗರದಲ್ಲಿ ಸಮಾವೇಶ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಸುಮಾರು ೫೦ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ತುಮಕೂರಿನಿಂದಲೂ ೫೦೦ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಮೊದಲ ದಿನ ಸುಮಾರು ೫ ಸಾವಿರ ಜನ, ಎರಡನೇ ದಿನ ೨೫ ಸಾವಿರ ಹಾಗೂ ಮೂರನೇ ದಿನ ೩೦ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಭಾಗವಹಿಸಿಲಿದ್ದು,…
ತುಮಕೂರು: ದೇವರಾಜ ಅರಸು ಅವರು ಒಬ್ಬ ಮುತ್ಸದ್ದಿ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿ ಸಾಧನೆ ಮಾಡಿದ್ದಾರೆ, ಆದರೆ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವುದರಲ್ಲಿ ಸಾಧನೆ ಮಾಡಿದ್ದಾರೆ ಎಂದು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ಗೌಡರು ಟೀಕಿಸಿದರು. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಾಡು ಕಂಡ ಶ್ರೇಷ್ಠ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತದ ದಿನಗಳ ದಾಖಲೆ ಮುರಿದಿದ್ದಾರೆ. ಸಿದ್ದರಾಮಯ್ಯ ಅವರು ಅರಸು ಅವರು ಅಧಿಕಾರದಲ್ಲಿ ಇದ್ದ ೨,೭೮೯ ದಿನಗಳಿಗಿಂತ ಒಂದು ದಿನ ಹೆಚ್ಚಿಗೆ ಅಂದರೆ ೨,೭೯೦ ದಿನ ಅಧಿಕಾರದಲ್ಲಿ ಇದ್ದಾರೆ. ನೀವು ಅಧಿಕಾರದಲ್ಲಿ ಎಷ್ಟು ದಿನ ಇದ್ದಿರಿ ಎನ್ನುವುದು ಮುಖ್ಯವಲ್ಲ. ಇದ್ದ ದಿನಗಳಲ್ಲಿ ಜನರಿಗಾಗಿ ಏನು ಮಾಡಿದಿರಿ ಎಂದು ಪ್ರಶ್ನಿಸಿದರು. ಇತಿಹಾಸದ ಪುಟಗಳಲ್ಲಿ ಅರಸು ಅವರು ಅಜರಾಮರವಾಗಿ ಉಳಿದಿದ್ದಾರೆ. ಸಿದ್ದರಾಮಯ್ಯ ಅವರು ಯಾವ ಕಾರಣಕ್ಕಾಗಿ ಇತಿಹಾಸದಲ್ಲಿ ಉಳಿಯಬೇಕು ಎಂದು ಇತಿಹಾಸವೇ ಕೇಳುತ್ತಿದೆ. ಪಕ್ಷದ ಅಧ್ಯಕ್ಷನಾಗಿ ದುಡಿದು ಅದನ್ನು…
ಕುಣಿಗಲ್: ಪ್ರಾಣ ಹೋದರು ಸರಿಯೇ ಖಾಸಗಿ ಇಟ್ಟಿಗೆ ಕಾರ್ಖಾನೆಯಾದ ವಿನ್ನರ್ ಬರ್ಗರ್ ಗೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಕೆರೆಯಲ್ಲಿ ಮಣ್ಣನ್ನು ತೆಗೆಯಲು ಬಿಡುವುದಿಲ್ಲ ಎಂದು ಕಿತ್ನಮಂಗಲ ಕೆರೆಯ ಸುತ್ತಮುತ್ತಲ ನೂರಾರು ರೈತರು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾಂಬೆ ಶಿವಣ್ಣನವರ ನೇತೃತ್ವದಲ್ಲಿ ಕೆರೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಿವಣ್ಣನವರು ಮಾತನಾಡಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಾಸಕರು ರೈತರು, ರೈತರು ಎಂದು ಮಾತನಾಡುತ್ತಾರೆ ಆದರೆ ರೈತರ ಜೀವನಾಡಿಯಾಗಿರುವ ಕೆರೆಯ ಮಣ್ಣನ್ನು ಖಾಸಗಿ ವಿನ್ನರ್ ಬರ್ಗರ್ ಇಟ್ಟಿಗೆ ಫ್ಯಾಕ್ಟರಿಗೆ ಮಣ್ಣನ್ನು ಸಾಗಾಟ ಮಾಡುವ ವ್ಯಕ್ತಿಗೆ ಹಿನ್ನೆಲೆಯಾಗಿ ಸಹಕಾರ ನೀಡುವುದು ಎಷ್ಟು ಸರಿ? ಹೇಗಂದರೆ ಕೆರೆಯ ಮಣ್ಣನ್ನು ತುಂಬುವುದಕ್ಕೆ ತನ್ನದೇ ಆದಂತಹ ಕಾನೂನುಗಳಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡುತ್ತಾರೆ ಇವರ ಹೇಳಿಕೆ ರೈತರ ವಿರೋಧಿ ಹೇಳಿಕೆಯಾಗುವುದಿಲ್ಲವೇ? ಕೆರೆಯ ತುಂಬೆಲ್ಲ ಮರಳು ತುಂಬಿದೆ ಕೆಲವರು ಹಣದ ಆಸೆಯಿಂದ ಖಾಸಗಿ ಕಾರ್ಖಾನೆಗಳಿಗೆ, ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮನಸ್ಸು ಇಚ್ಚೆ ಮಣ್ಣು ತುಂಬಿದರೆ ಸುತ್ತಮುತ್ತಲ ಹಳ್ಳಿಗಳ ಕೊಳವೆ…
ತುಮಕೂರು: ಎಲ್ಲರೂ ಚೆನ್ನಾಗಿರಬೇಕು ಎಂಬ ಭಾವನೆ ಭಾರತೀಯರದ್ದು, ಜಗತ್ತಿಗೇ ಹಿತ ಬಯಸುವವರು ಯಾರಾದರೂ ಇದ್ದರೆ ಅವರು ಭಾರತೀಯರು ಮಾತ್ರ. ಈ ನಿಟ್ಟಿನಲ್ಲಿ ನಮ್ಮ ಸಂಸ್ಕಾರ, ಸಂಸ್ಕೃತಿ, ಆಚಾರ, ವಿಚಾರ, ದೇಶಪ್ರೇಮ, ಪರಿಸರ ಪ್ರೇಮ, ನಾಗರೀಕ ಶಿಷ್ಟಾಚಾರಗಳನ್ನು ಅನುಸರಿಸುವ ಸಂಬ0ಧ ಹಿಂದೂ ಸಮಾಜೋತ್ಸವ ಸಮಿತಿ ನಗರದ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕಾರ್ಯ ಕ್ರಮಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಸಮಿತಿಯ ಗೌರವಾಧ್ಯಕ್ಷರೂ ಆದ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಬುಧವಾರ ಸಿದ್ಧಗಂಗಾ ಮಠದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ದೇಶ ಚೆನ್ನಾಗಿರಬೇಕು ಎಂದರೆ ಕುಟುಂಬ ಚೆನ್ನಾಗಿರಬೇಕು. ಇಂದು ಕುಟುಂಬ ವ್ಯವಸ್ಥೆ ಶಿಥಿಲ ವಾಗುತ್ತಿದೆ. ಕುಟುಂಬಗಳಲ್ಲೇ ಸಹಕಾರವಿಲ್ಲ, ಶಾಂತಿ, ನೆಮ್ಮದಿಯಿಲ್ಲ, ಇರುವ ನಾಲ್ಕು ಜನರೇ ನಾಲ್ಕು ಮುಖಗಳಾಗಿ ಕುಳಿತುಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ದೇಶ ಸರಿಹೋಗಬೇಕು ಎಂದರೆ ಮೊದಲು ಕುಟುಂಬ ಸರಿಯಾಗಬೇಕು, ಕುಟುಂಬ ಸರಿಯಾದರೆ ಸಮಾಜ ಸರಿಯಾಗುತ್ತದೆ, ದೇಶವೂ ಸರಿಯಾಗುತ್ತದೆ. ಅದಕ್ಕಾಗಿಯೇ ಹಿಂದೂ ಸಮಾಜೋತ್ಸವ ಸಮಿತಿ ಬಡಾವಣೆಗಳಲ್ಲಿ ಮಕ್ಕಳಿಂದ ಹಿರಿಯರವರೆಗೆ ಜಾಗೃತಿ…
ಚಿಕ್ಕನಾಯಕನಹಳ್ಳಿ: ಬೇಸಿಗೆ ಆರಂಭದ ಹಿನ್ನಲೆಯಲ್ಲಿ ಸಾಂಕ್ರಾ ಮಿಕ ರೋಗಗಳ ಹತೋಟಿಗೆ ಇಡೀ ತಾಲ್ಲೂಕು ಆಡಳಿತ ಸಜ್ಜಾಗ ಬೇಕಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಮತ ತಿಳಿಸಿದರು. ಪಟ್ಟಣದ ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಮುಂದೆ ಬೇಸಿಗೆ ಆರಂಭಗೊಳ್ಳಲಿದೆ, ಇದರ ಜೊತೆಗೆ ಜಾತ್ರೆಗಳು ಸಹ ಎಲ್ಲಡೆ ನಡೆಯಲಿದ್ದು, ದಾಸೋಹ ಹಾಗೂ ಪ್ರಸಾದ ವಿತರಣೆ ನಡೆಯುವುದರಿಂದ ಶುದ್ದ ಕುಡಿಯುವ ನೀರು ಮತ್ತು ಆಹಾರಗಳ ಬಗ್ಗೆ ನಾವು ಎಚ್ಚರಿಕೆಯಂದರಬೇಕಿದೆ. ಜಾತ್ರೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಥಳೀಯ ಸಂಸ್ಥೆಗಳ ಮೂಲಕ ಅನುಮತಿ ಕಡ್ಡಾಯ, ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ವಿವಿಧ ಮಾಧ್ಯಮಗಳ ಮೂಲಕ ತಲುಪಿಸಬೇಕೆಂದು ಎಲ್ಲಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಗ್ರಾಮ ಲೆಕ್ಕಿಗರಿಗೆ ಸೂಚಿಸಿದರು. ಬೇಸಿಗೆ ಆರಂಭಕ್ಕೂ ಮುನ್ನ ಶಾಲೆ, ವಸತಿ ನಿಲಯ ಮುಂತಾದ ಕೇಂದ್ರಗಳಿಗೆ ಸರಬರಾಜಾಗುವ ನೀರಿನ ಮೂಲಗಳು ಹಾಗೂ ಅದರ ಶುದ್ದತೆಯ ಇತ್ತೀಚಿನ ವರದಿಯನ್ನು ನಮಗೆ ಕಳುಹಿಸಬೇಕು ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ…











