Author: News Desk Benkiyabale

ಪಾವಗಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಯರ ವಸತಿ ನಿಲಯದ ಬಳಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಸತಿ ನಿಲಯದ ಸುತ್ತಮುತ್ತ ದುರ್ವಾಸನೆ ಬೀರುತ್ತಿರುವುದರಿಂದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಶುದ್ಧ ಗಾಳಿಯೂ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಗಬ್ಬು ವಾಸನೆಯಿಂದಾಗಿ ದಿನನಿತ್ಯದ ಓದು, ಊಟ ಹಾಗೂ ನಿದ್ರೆಗೂ ತೊಂದರೆಯಾಗುತ್ತಿದ್ದು, ಆರೋಗ್ಯ ಕೈಕೊಡುವ ಭೀತಿ ಎದುರಾಗಿದೆ. ಇದಲ್ಲದೆ, ರಸ್ತೆಯ ಮೇಲೆಯೇ ಕೊಳಚೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಸ್ಥಳೀಯ ವಕೀಲರಾದ ಪ್ರಭಾಕರ್ ರವರು ಸಮಸ್ಯೆಯನ್ನು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪುರಸಭೆ ಸಂಪೂರ್ಣ ನಿರ್ಲಕ್ಷ÷್ಯ ವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರ ಆರೋಗ್ಯ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಪುರಸಭೆಯು ತಕ್ಷಣವೇ…

Read More

ತುಮಕೂರು: ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯಲ್ಲಿ ಇಪ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಲ್ಲಿ ಮಳೆಯಿಂದ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸುವ ಅವಕಾಶವಿದೆ. ಪ್ರಸಕ್ತ ಸಾಲಿನಲ್ಲಿ ಎಲ್ ನಿನೋದಿಂದ ಮಳೆ ಕೊರತೆಯಿದ್ದು, ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ವಿಮಾ ಕಂತು ಪಾವತಿಸಿ ಭಾಗವಹಿಸಬಹುದು. ಈ ಯೋಜನೆಯಡಿ ಮಳೆಯಿಂದ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಸಂದರ್ಭದಲ್ಲಿ ಬೆಳೆ ವಿಮೆ ನಷ್ಟ ಪರಿಹಾರವನ್ನು ಪಾವತಿಸಲಾಗುವುದು. ಇದುವರೆಗೆ ೪೪,೧೫೪ ರೈತರು ನೊಂದಣಿಯಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯಾಗಬೇಕಿರುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್…

Read More

ತುಮಕೂರು: ತಾಲ್ಲೂಕಿನ ಚಿನಗ ಗ್ರಾಮದಲ್ಲಿ ರೈತರಿಗಾಗಿ ರೇಷ್ಮೆ ಕೃಷಿ ಹಾಗೂ ರೇಷ್ಮೆ ಹುಳು ಸಾಕಾಣಿಕೆ ಕುರಿತು ಗುಂಪು ಚರ್ಚೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ತುಮಕೂರಿನ ರೇಷ್ಮೆ ಇಲಾಖೆಯ ಉಪ ನಿರ್ದೇಶಕರು ಲಕ್ಷಿ÷್ಮನರಸಯ್ಯ ಟಿ. ರವರು ರೈತರಿಗೆ ರೇಷ್ಮೆ ಕೃಷಿಯ ಮಹತ್ವ, ಹಿಪುö್ಪನೇರಳೆ ಬೆಳೆ ಬೆಳೆಯುವ ವೈಜ್ಞಾನಿಕ ವಿಧಾನ, ರೇಷ್ಮೆ ಹುಳು ಸಾಕಾಣಿಕೆಯ ಆಧುನಿಕ ತಂತ್ರಜ್ಞಾನ, ಗುಣಮಟ್ಟದ ಕೋಕೂನ್ ಉತ್ಪಾದನೆ ಹಾಗೂ ರೇಷ್ಮೆ ಕೃಷಿಯಿಂದ ಹೆಚ್ಚಿನ ಆದಾಯ ಗಳಿಸುವ ಸಾಧ್ಯತೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಈಗಾಗಲೇ ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಳ್ಳದ ರೈತರು ಸಹ ಇಲಾಖೆಯ ವಿವಿಧ ಯೋಜನೆಗಳ ಪ್ರಯೋಜನ ಪಡೆದು ರೇಷ್ಮೆ ಕೃಷಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಸರ್ಕಾರದಿಂದ ರೇಷ್ಮೆ ಕೃಷಿಗೆ ಲಭ್ಯವಿರುವ ವಿವಿಧ ಸಹಾಯಧನಗಳ ಕುರಿತು ವಿವರಿಸಿದ ಅವರು, ವಿಬಿಜಿ-ರಾಮ್‌ಜಿ ಯೋಜನೆಯಡಿ ಹಿಪುö್ಪನೇರಳೆ ತೋಟ ಅಭಿವೃದ್ಧಿಗೆ ಕೊಡುವ ಸಹಾಯಧನ ಬಗ್ಗೆ ಮಾಹಿತಿ ನೀಡಿದರು, ಹನಿ ನೀರಾವರಿ (ಡ್ರಿಪ್ ಇರಿಗೇಷನ್) ವ್ಯವಸ್ಥೆ ಅಳವಡಿಸಿಕೊಳ್ಳಲು ಶೇ.೯೦ರಷ್ಟು ಸಹಾಯಧನ. ರೇಷ್ಮೆ ಹುಳು…

Read More

ತುಮಕೂರು: ತುಮಕೂರು ಜಿಲ್ಲೆಯ ಕುರಿ ಮತ್ತು ಮೇಕೆ ಮಾಂಸ ಮಾರಾಟಗಾರರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಸರಕಾರ ಮತ್ತು ಸಂಘ ಸಂಸ್ಥೆಗಳೊAದಿಗೆ ಸಂಪರ್ಕ ಸಾಧಿಸಲು ಸಂಘವೊAದನ್ನು ಸ್ಥಾಪಿಸಿದ್ದು ಖುರೇಷಿ ಅಸೋಸಿಯೇಷನ್, ತುಮಕೂರು ಜಿಲ್ಲೆ ಇಂದಿನಿ0ದ ಕಾರ್ಯನಿರ್ವಹಿಸಲಿದೆ ಎಂದು ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದ್ದಾರೆ. ನಗರದ ಬಿ.ಜಿ.ಪಾಳ್ಯ ವೃತ್ತ, ಸುಬ್ರಮಣ್ಯ ಸ್ವಾಮಿ ದೇವಸ್ಥಾನ ರಸ್ತೆ ಬಳಿ ಖುರೇಷಿ ಅಸೋಸಿಯೇಷನ್, ತುಮಕೂರು ಡಿಸ್ಟಿçಕ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಇದು ಕುರಿ ಮತ್ತು ಮೇಕೆ ಮಾಂಸ ಮಾರಾಟಗಾರರ ಬಹುದಿನಗಳ ಬೇಡಿಕೆಯಾಗಿತ್ತು. ಉದ್ಯಮದಲ್ಲಿ ಉಂಟಾಗುವ ಸಮಸ್ಯೆಗಳ ಚರ್ಚೆ, ಪರಿಹಾರ ಹಾಗೂ ಸಾರ್ವಜನಿಕರ ಸಂಪರ್ಕವಲ್ಲದೆ, ಭವಿಷ್ಯದಲ್ಲಿ ಉದ್ಬವಿಸಬಹುದಾದ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ಖುರೇಷಿ ಅಸೋಸಿಯೇಷನ್ ಮಹತ್ವದ ಪಾತ್ರ ವಹಿಸಲಿದೆ. ಹತ್ತಾರು ವರ್ಷಗಳಿಂದ ಈ ಸಮುದಾಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳನ್ನು ಸರಕಾರ ಹಾಗೂ ಸಂಬAಧಪಟ್ಟ ಸಂಸ್ಥೆಗಳ ಮುಂದಿಡಲುಇAತಹ ಸಂಘದ ಅಗತ್ಯವಿತ್ತು. ಆದು ಇಂದು ಈಡೇರಿದೆ. ಸಂಘದ ಅಧ್ಯಕ್ಷರಾಗಿ ಅನ್ಸರ್ ಪಾಷ, ಕಾರ್ಯದರ್ಶಿಯಾಗಿ ನೂರುಲ್ಲಾ, ಜಂಟಿ ಕಾರ್ಯದರ್ಶಿಯಾಗಿ…

Read More

ತುಮಕೂರು: ಎಐಸಿಸಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ ಸಂಘಟನಾ ಅಭಿಯಾನದ ಅಂಗವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಸಂಬAಧಿಸಿದAತೆ ಕಾರ್ಯಕರ್ತರ ಅಭಿಪ್ರಾಯ ಆಲಿಸುವ ಸಭೆಯನ್ನು ಎಐಸಿಸಿ ವೀಕ್ಷಕರಾದ ಸಂಗೀತ ಬೇನಿವಾಲ್ ಅವರ ಸಮ್ಮುಖದಲ್ಲಿ ಡಿಸಿಸಿ ಅಧ್ಯಕ್ಷರಾದ ಜಿ.ಚಂದ್ರಶೇಖರ ಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ಮಾತನಾಡಿ, ಎಐಸಿಸಿ ವೀಕ್ಷಕರಾಗಿರುವ ಸಂಗೀತ ಬೇನಿವಾಲ್ ಅವರು ಪಕ್ಷದ ಹಿರಿಯರ ನಿರ್ದೇಶನದಂತೆ ಜಿಲ್ಲಾಧ್ಯಕ್ಷರ ನೇಮಕಕ್ಕೆ ಕಾರ್ಯಕರ್ತರ ಅಭಿವೃದ್ದಿ ಸಂಗ್ರಹಿಸಲು ಇಲ್ಲಿಗೆ ಆಗಮಿಸಿದ್ದಾರೆ. ಕಾರ್ಯಕರ್ತರು, ಮುಖಂಡರು ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು. ಇದು ಪಕ್ಷ ಸಂಘಟನೆಗೆ ಬಹಳ ಪ್ರಮುಖವಾಗಲಿದೆ. ಈಗಾಗಲೇ ಸಂಗೀತ ಬೇನಿವಾಲ್ ಅವರು ಬಿಹಾರ, ಮಹಾರಾಷ್ಟç ಮತ್ತು ಉತ್ತರಾಖಾಂಡ ರಾಜ್ಯಗಳಲ್ಲಿ ಪ್ರವಾಸ ಮಾಡಿ, ಅಲ್ಲಿನ ವಿವಿಧ ಜಿಲ್ಲೆಗಳ ಅಧ್ಯಕ್ಷರ ಆಯ್ಕೆಗೆ ನಿಷ್ಪಕ್ಷಪಾತ ವರದಿ ಸಲ್ಲಿಸಿ, ಎಲ್ಲರನ್ನು ಒಳಗೊಳ್ಳುವ ವ್ಯಕ್ತಿಗಳನ್ನು ಆಯ್ಕೆ ಮಾಡಲು ಸಹಕರಿಸಿದ್ದಾರೆ. ಹಾಗಾಗಿ ನೀವುಗಳು…

Read More

ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ನಗರದ ಟೌನ್‌ಹಾಲ್‌ನ ಅಂಬೇಡ್ಕರ್ ಪ್ರತಿಮೆ ಬಳಿ ಮೇಣದ ಬತ್ತಿ ಹಿಡಿದು ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರಕ್ಕೆ ಜನಪರವಾದ ಕಾಳಜಿ ಇಲ್ಲವಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಹಲವು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರೂ, ಪ್ರತಿಭಟನೆ ನಡೆಸಿದ್ದರೂ ಸಹ ಕೇಂದ್ರ ಸರ್ಕಾರ ಮೌನವಾಗಿತ್ತು. ದೆಹಲಿ ಸೇರಿದಂತೆ ದೇಶಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ನಂತರ ಎಚ್ಚೆತ್ತುಕೊಂಡು ಕೇಂದ್ರ ಸರ್ಕಾರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ತೆಗೆದುಕೊಂಡಿತು. ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಮೊದಲನೇ ಜಯವಾಗಿದೆ. ದೇಶಾದ್ಯಂತ ವಿದ್ಯಾರ್ಥಿ-ಯುವ ಜನರು ಜಾಗೃತರಾಗಿದ್ದಾರೆ. ಕೋಮುವಾದಿ ಅಟ್ಟಹಾಸ ನಡೆಯುವುದಿಲ್ಲ ಎಂದ ಸಂದೇಶವನ್ನು ವಿದ್ಯಾರ್ಥಿಗಳು ನೀಡಿದ್ದಾರೆ. ದೇಶದಲ್ಲಿ ಉಂಟಾಗಿರುವ ಶಿಕ್ಷಣದಲ್ಲಿನ ಭ್ರಷ್ಟಾಚಾರ, ನಿರುದ್ಯೋಗ ವಿದ್ಯಾರ್ಥಿ ಯುವಜನರನ್ನು ಹತಾಶರನ್ನಾಗಿ ಮಾಡಿದೆ. ಆದ್ದರಿಂದ ಈ ಉಂಟಾಗಿರುವ ಹೋರಾಟ ನಿಲ್ಲಬಾರದು.…

Read More

ಹುಳಿಯಾರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಬೋರನಕಣಿವೆ ಜಲಾಶಯದ ಹಿನ್ನೀರಿನಲ್ಲಿರುವ ಮಾರುಹೊಳೆ ಗ್ರಾಮವು ತನ್ನ ಒಡಲಲ್ಲಿ ಸುಮಾರು ೮೦೦ ವರ್ಷಗಳ ಸುದೀರ್ಘ ಇತಿಹಾಸವನ್ನು ಬಚ್ಚಿಟ್ಟುಕೊಂಡಿದೆ. ಆದರೆ, ಈ ಐತಿಹಾಸಿಕ ಹಿರಿಮೆಗೆ ಸಾಕ್ಷಿಯಾಗಿ ನಿಂತಿದ್ದ ಹೊಯ್ಸಳರ ಕಾಲದ ಅಪರೂಪದ ಶಾಸನವೊಂದು ಇಂದು ಅನಾಥವಾಗಿ, ಅವಸಾನದ ಅಂಚು ತಲುಪಿರುವುದು ಅತ್ಯಂತ ವಿಷಾದನೀಯ ಸಂಗತಿ. ಗ್ರಾಮದ ‘ಕೊರಮರಕಟ್ಟೆ’ ಎಂಬ ಜಾಗದಲ್ಲಿರುವ ಈ ಶಾಸನವು ಕ್ರಿ.ಶ. ೧೨೨೬ ರ ಕಾಲಘಟ್ಟಕ್ಕೆ ಅಂದರೆ, ಹೊಯ್ಸಳ ಸಾಮ್ರಾಟ ಎರಡನೇ ನರಸಿಂಹನ ಆಳ್ವಿಕೆಯ ಅವಧಿಗೆ ಸೇರಿದ್ದಾಗಿದೆ. ಇಷ್ಟೊಂದು ಪ್ರಮುಖ ಇತಿಹಾಸ ಸಾರುವ ಕಲ್ಲು, ಪ್ರಸ್ತುತ ಬೇಲಿ-ಪೊದೆಗಳ ನಡುವೆ ಹಾಳಾಗುತ್ತಿದ್ದು, ನಿಧಿಚೋರರ ದುರಾಶೆಗೆ ಸಿಲುಕಿ ಮಣ್ಣಿನಲ್ಲಿ ಮುಚ್ಚಿಹೋಗುವ ದುಸ್ಥಿತಿಯಲ್ಲಿದೆ. ಇಂತಹ ಅಪರೂಪದ ಶಾಸನವನ್ನು ಶಾಸನ ಸಂಶೋಧಕರಾದ ಶಶಿಕುಮಾರನಾಯ್ಕ ಅವರು ಬೆಳಕಿಗೆ ತಂದಿದ್ದು ಇದನ್ನು ರಕ್ಷಿಸುವ ಕಾರ್ಯ ಆಗಬೇಕಿದೆ. ಕರ್ನಾಟಕದ ಸಾಂಸ್ಕöÈತಿಕ ಇತಿಹಾಸವನ್ನು ದಾಖಲಿಸುವಲ್ಲಿ ’ಎಪಿಗ್ರಾಫಿಯಾ ಕರ್ನಾಟಿಕ’ ಗ್ರಂಥಮಾಲೆ ಅತ್ಯಂತ ಪ್ರಾಮಾಣಿಕ ಆಕರವಾಗಿದೆ. ಸಂಪುಟ ೨೫ ರ ಚಿಕ್ಕನಾಯಕನಹಳ್ಳಿ ತಾಲೂಕು ಶಾಸನ…

Read More

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಸಿ. ವೀರಣ್ಣ ಅವರು ಶುಕ್ರವಾರ ರಾತ್ರಿ ತಾಲೂಕಿನ ಬುಕ್ಕಾಪಟ್ಟಣ ಗ್ರಾಮದ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅಂತಿಮ ದರ್ಶನ ಪಡೆದರು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರೆವೇರಿತು. ಮಾಜಿ ಸಚಿವ ಸಿ.ವೀರಣ್ಣ ಅವರು ಕಳೆದ ತಿಂಗಳು ತೀರ್ವ ಅನಾರೋಗ್ಯದಿಂದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ವಿಚಾರಿಸಿದ್ದರು. ಆದರೆ, ಚಿಕಿತ್ಸೆ ಬಳಿಕವೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಸಿ.ವೀರಣ್ಣ ಅವರು ರಾಜಕೀಯ ಪ್ರವೇಶಿಸಿದ ಬಳಿಕ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ೧೯೮೩ರಲ್ಲಿ ವಿಧಾನ ಸಭೆಯ ಉಪಸಭಾಧ್ಯಕ್ಷರಾಗಿ (ಡೆಪ್ಯೂಟಿ ಸ್ಪೀಕರ್) ಕಾರ್ಯ ನಿರ್ವಹಿಸಿದ್ದ ಅವರು, ೧೯೮೪ರಿಂದ ೧೯೮೯ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದಿವಂಗತ ರಾಮಕೃಷ್ಣ ಹೆಗಡೆ ಹಾಗೂ ಎಸ್.ಆರ್.ಬೊಮ್ಮಾಯಿ ನೇತೃತ್ವದ ಸರ್ಕಾರಗಳಲ್ಲಿ ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ ಮತ್ತು ವಾಣಿಜ್ಯ, ಬಂಧಿಖಾನೆ ಸೇರಿದಂತೆ ೧೧ ಇಲಾಖೆಗಳ…

Read More

ತುಮಕೂರು: ನಗರದ ಹಾಸ್ಟೆಲ್, ಮೈದಾನ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ನೀಟ್ ಹಗರಹಣ ವಿರುದ್ಧ ಸುದೀರ್ಘಕಾಲ ನಡೆದ, ವಿದ್ಯಾರ್ಥಿ ಹೋರಾಟದ ಐತಿಹಾಸಿಕ ವಿಜಯವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸಿದ ಬೃಹತ್ ಹೋರಾಟದ ಫಲವಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೀಟ್ (ಓಇಇಖಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಆಗ್ರಹಿಸಿದ್ದರು! ಈ ಐತಿಹಾಸಿಕ ವಿಜಯವನ್ನು ದೇಶದಾದ್ಯಂತ ವಿದ್ಯಾರ್ಥಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ, ಸಚಿವರ ರಾಜೀನಾಮೆಯ ಮಾರನೇ ದಿನವೇ ಕೇಂದ್ರ ಸರ್ಕಾರವು ಸುಧಾರಣೆಯ ಹೆಸರಿನಲ್ಲಿ ಮತ್ತೊಂದು ಹೊಸ ತಂತ್ರವನ್ನು ಹೆಣೆದಿದೆ. ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರವು ಟಾಸ್ಕ್ ಫೋರ್ಸ್ ಒಂದನ್ನು ರಚಿಸಿದ್ದು, ದಕ್ಷಿಣ ಭಾರತದ ಕಾರ್ಪೊರೇಟ್ ದೈತ್ಯ ನಂದನ್ ನೀಲಖೇಣಿ ಅವರನ್ನು ಇದರ ಅಧ್ಯಕ್ಷರನ್ನಾಗಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ವಿದ್ಯಾರ್ಥಿ ಸಮುದಾಯಕ್ಕೆ ಮತ್ತೆ…

Read More

ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ೭೫ ವರ್ಷಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಆರಂಭವಾದ ಆರು ದಿನಗಳ ಯೋನೆಕ್ಸ್- ಸನ್‌ರೈಸ್ ರಾಜ್ಯ ರ‍್ಯಾಂಕಿAಗ್ ಬ್ಯಾಡ್ಮಿಂಟನ್ ಅಂಡರ್-೧೧ ಮತ್ತು ಅಂಡರ್-೧೩ ವಿಭಾಗಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಜಿ.ಬಿ. ಜ್ಯೋತಿಗಣೇಶ್, ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ಅವರು ಬ್ಯಾಡ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಸ್ವಾಮೀಜಿ, ಮಕ್ಕಳನ್ನು ಕೇವಲ ಓದಿಗೆ ಸೀಮಿತ ಗೊಳಿಸಬೇಡಿ, ಅವರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು. ಇಲ್ಲಿ ಸೇರಿರುವ ೧೧ರಿಂದ ೧೩ ವರ್ಷದ ಮಕ್ಕಳ ಮುಖದಲ್ಲಿ ಉತ್ಸಾಹದ ಚಿಲುಮೆ ಉಕ್ಕುತ್ತಿದೆ.ಇಂತಹ ಮಕ್ಕಳಿಗೆ ಸರಿಯಾದ ತರಬೇತಿ ನೀಡಿದರೆ ಅವರು ದೊಡ್ಡ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋತವರು ಕುಗ್ಗುವುದು, ಗೆದ್ದವರು ಹಿಗ್ಗುವುದು ಬೇಡ. ಸೋತವರು ಮತ್ತಷ್ಟು ತಯಾರಿ ಮಾಡಿಕೊಂಡು ಗೆಲುವು ಪಡೆಯಲು ಪ್ರಯತ್ನಿಸಿಬೇಕು. ಗೆದ್ದವರು ಮತ್ತೊಂದು ಸ್ಪರ್ಧೆಯ ಗೆಲುವಿನತ್ತ ಗಮನಹರಿಸಬೇಕು. ಶ್ರದ್ಧೆ, ಆತ್ಮವಿಶ್ವಾಸ, ತಯಾರಿಯೊಂದಿಗೆ…

Read More