ಚಿಕ್ಕನಾಯಕನಹಳ್ಳಿ: ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾದ್ಯ ಇಂತಹ ಸಮಾಜವನ್ನು ಕಟ್ಟುವ ವ್ಯಕ್ತಿಯನ್ನು ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರಲ್ಲಿ ಮಾತ್ರಅದ್ದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚು ಇಂತಹ ಶಿಕ್ಷಣವನ್ನು ಕೇವಲ ಶೈಕ್ಷಣಿಕವಾಗಲ್ಲದೆ ಶೈಕ್ಷಣೇತರವಾದ ಶಿಸ್ತು, ಸಂಯಮ, ಏಕಾಗ್ರತೆ, ಸಂಸ್ಕಾರ, ಸಂಸ್ಕೃತಿಯನ್ನು ಅವರಲ್ಲಿ ಬೆಳೆಸುವ ಮೂಲಕ ಮುಂದೆ ಉತ್ತಮ ಪಲಿತಾಂಶವನ್ನು ನಿರೀಕ್ಷಿಸಬಹುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ೨೦೨೫-೨೬ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ನಾನು ನಮ್ಮ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಮಾಡಬೇಕೆಂಬ ಉದ್ದೇಶದಿಂದ ಚುನಾವಣೆಯ ನಂತರ ಮೊದಲು ಶಿಕ್ಷಕರ ಸಭೆ ಕರೆದು ಪ್ರತಿ ಶಾಲೆಗೆ ಮೂಲಭೂತವಾಗಿ ಯಾವ ಕೆಲಸಗಳು ಅಗಬೇಕು ಹಾಗೂ ಶಿಕ್ಷಕರ ಸಮಸ್ಯೆ ಎನು ಎಂಬುದರ ಬಗ್ಗೆ ಚರ್ಚಿಸಿ ೫೪ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿದ್ದು ಅದಾದನಂತರ ನಮ್ಮ ತಾಲ್ಲೂಕಿಗೆ ಗಣಿಬಾದಿತ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ೫೩ಕೋಟಿ ಮಂಜೂರಾಗಿದ್ದು ಅದರ ಜೊತೆ ನಮ್ಮ…
Author: News Desk Benkiyabale
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಂಚಾಘಟ್ಟ ಗ್ರಾಮದ ಮಜರೆ ಗೊಲ್ಲರಹಟ್ಟಿ ಗ್ರಾಮ ತಿಪಟೂರು ನಗರಕ್ಕೆ ಹೊಂದಿಕೊAಡAತೆ ಇದ್ದು, ಸುಮಾರು ೫೦ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುವ ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯವಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ನಮ್ಮ ಗ್ರಾಮಕ್ಕೆ ರಸ್ತೆ ಸೌಕರ್ಯ ಕಲ್ಪಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಿಪಟೂರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಕಾಡುಗೊಲ್ಲ ಸಮಾಜದ ಮುಖಂಡ ಪ್ರಕಾಶ್ ಯಾದವ್ ಮಾತನಾಡಿ, ಕಂಚಾಘಟ್ಟ ಗೊಲ್ಲರ ಹಟ್ಟಿಗೆ ಸೂಕ್ತ ರಸ್ತೆ ಸಂಪರ್ಕವಿಲ್ಲದೆ ಪರದಾಡುವಂತಾಗಿದೆ, ಮಹಿಳೆಯರು ಮಕ್ಕಳು ಪರದಾಡುವಂತಾಗಿದೆ. ಶಾಲಾ ಮಕ್ಕಳು ರಸ್ತೆ ಸಂಪರ್ಕವಿಲ್ಲದೆ, ಸುಮಾರು ಮೂರ್ನಾ ಲ್ಕು ಕಿಲೋ ಮೀಟರ್ ಸುತ್ತಿಕೊಂಡು ನಗ ರದ ಶಾಲಾ ಕಾಲೇಜಿಗೆ ತಲುಪಬೇಕು. ಅಂಗ ವಿಕಲರು ವಯೋವೃದ್ದರ ಸ್ಥಿತಿಯಂತೂ ಅಯೋ ಮಯವಾಗಿದೆ. ಹಟ್ಟಿಯಲ್ಲಿ ಯಾರಾದರೂ ಅನಾರೋಗ್ಯ ಪೀಡಿತರಾದರೆ ಅಂಬುಲೆನ್ಸ್ ಬರುವುದಕ್ಕೂ ರಸ್ತೆಇಲ್ಲ. ಸರ್ಕಾರ ಕೂಡಲೇ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಗ್ರಾಮದ ಮುಖಂಡ ಹೊನ್ನಪ್ಪ ಮಾತನಾಡಿ, ಕಂಚ್ಚಾಘಟ್ಟ ಗೊಲ್ಲರ ಹಟ್ಟಿ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ, ಹಿಂದೆ ಇದ್ದ…
ತುಮಕೂರು: ವಿದೇಶದಲ್ಲಿ ಕಲಿತಿದ್ದರು,ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮಗಾಂಧಿಯೊAದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟ ದೇಶ ಪ್ರೇಮ ಹೊಂದಿದ್ದ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ದೇಶದ ಮೊದಲ ಪ್ರಧಾನಿ ಪಂಡಿತ ಜವಹರಲಾಲ್ ನೆಹರು ಅವರು ೬೧ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅತ್ಯಂತ ಶ್ರೀಮಂತ ಕುಟುಂಬದಲ್ಲಿ ಹುಟ್ಟಿ,ಸಾವಿರಾರು ಕೋಟಿ ರೂಗಳ ಆಸ್ತಿಯನ್ನು ಸರಕಾರಕ್ಕೆ ದಾನ ನೀಡಿ,ದೇಶವನ್ನು ಸುಭೀಕ್ಷವಾಗಿ ಕಟ್ಟಲು ಕಟ್ಟಿಬದ್ದರಾಗಿ ದುಡಿದವರು ಪಂಡಿತ ನೆಹರು.ಪಂಚವಾರ್ಷಿಕ ಯೋಜನೆಗಳು, ಅಲಿಪ್ತ ನೀತಿಯ ಮೂಲಕ ಭಾರತ ಎಲ್ಲ ರಂಗದಲ್ಲಿಯೂ ಉನ್ನತ್ತಿ ಸಾಧಿಸಲು ಕಾರಣರಾದರು.ನೆರೆಯ ರಾಷ್ಟçಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದರು. ಬಿಜೆಪಿ ಪಕ್ಷದವರು ನೆಹರು ಕುಟುಂಬವನ್ನು ಬದ್ದ ವೈರಿಗಳಂತೆ ಭಾವಿಸಿ,ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ.ತಮ್ಮ ಪತ್ನಿ ಕಮಲ ನೆಹರು ಅವರ ಅನಾರೋಗ್ಯದ ನಡುವೆಯೂ ದೇಶದ ಸ್ವಾತಂತ್ರಕ್ಕಾಗಿ ೯ ವರ್ಷಗಳ…
ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಗಂಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಮಳೆ ಗಾಳಿಗೆ ಹಾನಿಗೊಳಗಾದ ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ಧನವನ್ನು ವಿತರಿಸಬೇಕೆಂದು ನಿರ್ದೇಶಿಸಿದರು. ಮಧುಗಿರಿಯ ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ ೧೦ರಲ್ಲಿ ಕೊಳವೆ ಬಾವಿ ನೀರಿನ ಮೂಲವನ್ನು ಪರಿಶೀಲಿಸಿದಾಗ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೇರೊಂದು ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ೩೩೦ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕ್ಲೋರಿನೇಷನ್ ಪ್ರಕ್ರಿಯೆ ಕಡ್ಡಾಯವಾಗಿ…
ತುಮಕೂರು: ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ ೮ ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು. ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿದ ನಂತರ ನಗರದ ಎಂ.ಜಿ.ಸ್ಟೇಡಿಯAನಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಗೊರೂರು ಜಲಾಶಯದಿಂದ ಹೇಮಾವತಿ ನಾಲೆಗೆ ಮೇ ೨೩ರಂದು ನೀರು ಹರಿಯಬಿಟ್ಟಿದ್ದು, ಮೇ ೨೫ರ ರಾತ್ರಿ ಬುಗಡನಹಳ್ಳಿ ಕೆರೆಗೆ ನೀರು ತಲುಪಿದೆ ಎಂದು ತಿಳಿಸಿದ ಅವರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆAಬ ಉದ್ದೇಶದಿಂದ ಹಾಸನದಲ್ಲಿ ಇತ್ತೀಚೆಗೆ ಜರುಗಿದ ನೀರಾವರಿ ಸಮಿತಿ ನಿರ್ಣಯದಂತೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಮಕೂರಿಗೆ ಗೊರೂರು ಜಲಾಶಯದಿಂದ ನೀರು ಹರಿಸಲಾಗಿದೆ. ಮುಂದಿನ ೫೦ ದಿನಗಳಿಗೆ ಮಾತ್ರ ಪೂರೈಕೆ ಮಾಡುವಷ್ಟು ಕೆರೆಯಲ್ಲಿ ನೀರು ಲಭ್ಯವಿತ್ತು. ಮುಂದಾಲೋಚನೆಯಿAದ ಕೆರೆಗೆ ನೀರು ಹರಿಸಲಾಗಿದೆ ಎಂದು ತಿಳಿಸಿದರು. ಹೇಮಾವತಿ ನೀರನ್ನು ಬುಗುಡನಹಳ್ಳಿ ಕೆರೆಯಲ್ಲಿ ಸಂಗ್ರಹಿಸಿ ಶುದ್ಧೀಕರಿಸಿ ನಾಗರಿಕರಿಗೆ…
ತುಮಕೂರು: ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನಸ್ವಾಮಿಯ ಪುನ: ಪ್ರತಿಷ್ಠಾಪನಾ ಮಹೋತ್ಸವ ಶ್ರೀ ಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು. ವಿವಿಧ ಮಠಗಳ ಮಠಾಧೀಶರು, ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿದರು. ಇದರ ಅಂಗವಾಗಿ ಮಠದಲ್ಲಿ ಮೂರು ದಿನ ಕಾಲ ನಡೆದ ವಿವಿಧ ಧಾರ್ಮಿಕ, ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಿಲಾಗಿತ್ತು. ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ವಸತಿ ನಿಲಯ ಮತ್ತು ದಾಸೋಹ ಭವನದ ಉದ್ಘಾಟನೆ ಮಾಡಲಾಯಿತು. ಧಾರ್ಮಿಕ ಮಹಾಸಭೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಭಾನುವಾರ ಬೆಳಿಗ್ಗೆ ಶುಭ ಬ್ರಾಹ್ಮೀ ಮುಹೂರ್ತದಲ್ಲಿ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಅಮೃತಾಸ್ತದಿಂದ ಮಲ್ಲಿಕಾರ್ಜುನಸ್ವಾಮಿ, ನಂದೀಶ್ವರ ಸ್ವಾಮಿ ವಿಗ್ರಹಗಳಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿತು. ನೇತ್ರೋನ್ಮೀಲನ ಮತ್ತು ಗೋಪುರ ಕಲಶಾರೋಹಣ, ಕುಂಭಾಭಿಷೇಕ, ನಂತರ ಮಲ್ಲಿಕಾರ್ಜುನ ಸ್ವಾಮಿಗೆ ಮಹಾರುದ್ರಾಭಿಷೇಕ, ಜಯಾದಿ ಹೋಮಗಳು, ನಂತರ ಮಹಾಪೂರ್ಣಾಹುತಿ, ರಾಜೋಪಚಾರಸಹಿತ ಮಹಾಮಂಗಳಾರತಿ ಹಮ್ಮಿಕೊಳ್ಳಲಾಗಿತ್ತು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ,…
ತುಮಕೂರು: ಗಿಡ, ಮರ, ಸೂರ್ಯ, ಚಂದ್ರ ಸೇರಿದಂತೆ ಪ್ರಕೃತಿಯು ಬೇರೆಯವರಿಗೆ ಸಹಾಯ ಮಾಡುವ ಪರೋಪಕಾರಿಯಾಗಿದೆ. ಮನುಷ್ಯ ಕೂಡಾ ಪರೋಪಕಾರದ ಪಾಠವನ್ನು ಪ್ರಕೃತಿಯಿಂದ ಕಲಿತು, ಪರೋಪಕಾರ ಮಾಡುತ್ತಾ ತನ್ನ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಉಳ್ಳವರು ಬಡವರಿಗೆ ಸಹಾಯ ಮಾಡುವ ಔದಾರ್ಯ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಹೇಳಿದರು. ಭಾನುವಾರ ನಗರದಲ್ಲಿ ಶ್ರಮಜೀವಿ ಬೀದಿಬದಿ ವ್ಯಾಪಾರಿಗಳ ಸಂಘದಿAದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಎಂ.ಗೋಪಿಯವರ ಅಕಾಲಿಕ ಮರಣಕ್ಕೀಡಾದ ಮಗ ಗೌತಮ್ ನೆನಪಿನಲ್ಲಿ ಬಡ ಮಕ್ಕಳಿಗೆ ವಿವಿಧ ಸವಲತ್ತು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸಿ ಮಾತನಾಡಿದರು. ನಮ್ಮ ಸಮಾಜದಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿರುವ ಅನೇಕ ಶ್ರೀಮಂತರಿದ್ದಾರೆ. ಆದಾಯ ತೆರಿಗೆ, ಇ.ಡಿ. ಅಧಿಕಾರಿಗಳು ದಾಳಿ ಮಾಡಿ ಬಹಿರಂಗ ಮಾಡಿದಾಗಲಷ್ಟೇ ಅವರ ಆಸ್ತಿಪಾಸ್ತಿಯ ಮಾಹಿತಿ ಗೊತ್ತಾಗುತ್ತದೆ. ಅಂತಹ ಶ್ರೀಮಂತರು ಬಡವರಿಗೆ, ಅಸಹಾಯಕರಿಗೆ ಸಹಾಯ ಮಾಡುವ ಉದಾರತನ ಹೊಂದಬೇಕು. ಅಗತ್ಯವಿರುವವರಿಗೆ ಸಹಾಯ ಮಾಡುವ ಮನೋಭಾವವನ್ನು ಶ್ರೀಮಂತರು ಬೆಳೆಸಿಕೊಳ್ಳಬೇಕು. ಸಂಘದ ಅಧ್ಯಕ್ಷ ಗೋಪಿಯವರು ತಮ್ಮ ಮಗನ…
ಕೊರಟಗೆರೆ: ದಲಿತ ಸರ್ವೋದಯ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ, ಹರೀಶ ಬಿಸಿ ಹಾಗೂ ಸಾಮಾಜಿಕ ಹೋರಾಟಗಾರ ಸಿನಿಮಾರಂಗದ ನಿರ್ಮಾಪಕ ನಿರ್ದೇಶಕ ಜಟ್ಟಿ ಅಗ್ರಹಾರ ನಾಗರಾಜು ಎಂಬವರು ಗೌರವಾನ್ವಿತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಲೋಕೋಪಯೋಗಿ ಇಲಾಖೆ ಇವರಿಗೆ, ಕರ್ನಾಟಕ ಸರ್ಕಾರದ ಮಾನ್ಯ ಮಹಾ ಲೆಕ್ಕ ಪಾಲಕರು ವಿಧಾನಸೌಧ ಇವರಿಗೆ, ಲೋಕೋಪಯೋಗಿ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ , ಜಿಲ್ಲಾಧಿಕಾರಿಗಳು ತುಮಕೂರು, ಲೋಕೋಪಯೋಗಿ ಇಲಾಖೆ ತುಮಕೂರು ಸೇರಿದಂತೆ ಇನ್ನಿತರ ತನಿಕಾ ಅಧಿಕಾರಿಗಳಿಗೆ ಇವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಜಂಗಲ್ ಕ್ಲೀನಿಂಗ್ ಹಾಗೂ ರಸ್ತೆ ಪ್ಯಾಚ್ ಹಗಲು ದರೋಡೆ ಕೊರಟಗೆರೆ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ವಹಿಸಿರುವ ಜಂಗಲ್ ಕ್ಲೀನಿಂಗ್ ಹಾಗೂ ರೋಡ್ ಪ್ಯಾಚ್ ಈವರೆಗೂ ಯಾವುದೇ ಕಾಮಗಾರಿಗಳು ಗುಣಮಟ್ಟದಲ್ಲಿ ನಿರ್ವಹಣೆ ಮಾಡಿರುವುದಿಲ್ಲ, ಕಾಟಾಚಾರಕ್ಕೆ ಜಂಗಲ್ ಕ್ಲೀನಿಂಗ್ ಅದು ಒಂದೇ ವಾರಕ್ಕೆ ಇಲ್ಲವೇ ೧೫ ದಿನಗಳೊಳಗೆ ಮತ್ತೆ ಜಂಗಲ್ ಮಾಮೂಲಿಯಾಗಿ ಬೆಳೆಯುವ ರೀತಿಯಲ್ಲಿ ರಸ್ತೆಯ ಎರಡು…
ತುಮಕೂರು: ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಸಂಘಕ್ಕೆ ತುಮಕೂರು ಜಿಲ್ಲಾ ಘಟಕದಿಂದ ಇಬ್ಬರು ನಿರ್ದೇಶಕರು ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ. ಮೇ.೨೫ ರಂದು ಚುನಾವಣೆ ನಿಗದಿಯಾಗಿದ್ದು, ಸಾಮಾನ್ಯ ಸ್ಥಾನಕ್ಕೆ ಸಮಾಜದ ಯುವ ಮುಖಂಡ ಬಿ.ಚಂದ್ರಬಾಬು ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ಜಿಪಂ ಮಾಜಿ ಸದಸ್ಯೆ ವರಲಕ್ಷ÷್ಮಮ್ಮ ಅವರುಗಳು ಮಾತ್ರ ಕಣದಲ್ಲಿದ್ದುದರಿಂದ ಇಬ್ಬ ರು ಅವಿರೋಧ ಆಯ್ಕೆಯಾಗಿದ್ದಾರೆಂದು ಉಪ ಚುನಾವಣಾಧಿಕಾರಿ ಟಿ.ಎನ್.ಗುರುರಾಜ್ ತಿಳಿಸಿ ದರು. ೨ ನಿರ್ದೇಶಕ ಸ್ಥಾನಕ್ಕೆ ಒಟ್ಟು ಐವರು ನಾಮಪತ್ರ ಸಲ್ಲಿಸಿದ್ದು, ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಹೆಬ್ಬೂರು ನಾಗರಾಜಚಾರ್ ಹಿರಿಯ ಮುಖಂಡರಾದ ಡಾ.ಕೆ.ವಿ.ಕೃಷ್ಣಮೂರ್ತಿ, ಕಾಳಿಕಾಂಬ ಪತ್ತಿನ ಸಹಕಾರ ಸಂಘದ ಅಧ್ಯ ಕ್ಷ ಗೋವರ್ಧನಚಾರ್, ನಿಗಮದ ಜಿಲ್ಲಾ ನಿರ್ದೇಶಕ ಟಿ.ಸಿ.ಡಮರುಗೇಶ್, ಶೇಖರ್ ಇತರರ ಸಮ್ಮುಖದಲ್ಲಿ ಅಭ್ಯರ್ಥಿಗಳೊಂದಿಗೆ ಸಮಾಲೋಚಿಸಿ ಮೂವರು ಅಭ್ಯರ್ಥಿಗಳಾದ ಚಂದ್ರಶೇಖರ್, ಜಿ.ಲೀಲಾ, ಎಸ್.ಹರೀಶ್ ಅವರು ಉಮೇದುವಾರಿಕೆ ಹಿಂಪಡೆದಿದ್ದರಿAದ ಚಂದ್ರಬಾಬು ಹಾಗೂ ವರಲಕ್ಷಮ್ಮ ಅವರು ಅವಿರೋಧ ಆಯ್ಕೆಯಾಗಲು ಸಾಧ್ಯವಾಯಿತು.
ತುಮಕೂರು: ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಚಕೋರ (ತುಮಕೂರು ಜಿಲ್ಲೆ ಉಪನ್ಯಾಸ ಮಾಲಿಕೆ-೬) “ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ” ಎಂಬ ವಿಷಯದ ಬಗ್ಗೆ ಉಪನ್ಯಾಸಮಾಲೆ ಹಮ್ಮಿಕೊಂಡಿದ್ದು ಸಸಿಗೆ ನೀರರೆಯುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ಜನಪ ದ ವಿದ್ವಾಂಸರಾದ ಶ್ರೀ ಉಜ್ಜಜ್ಜಿ ರಾಜಣ್ಣ ಬುಡಕಟ್ಟು ಕಾವ್ಯಗಳಲ್ಲಿ ಮಹಿಳೆ ವಿಷ ಯದ ಬಗ್ಗೆ ಯಾವ ರೀತಿ ಮಹಿಳೆಯರು ಸಮಾ ಜದಲ್ಲಿ ಸೋಲು ಗೆಲುವನ್ನು ಜಾತಿ ಬೇದ ಭಾವವನ್ನು ಎದುರಿಸುತ್ತಾ ಇದ್ದಾರೆ ಹಾಗೂ ಬಂದAತಹ ಕಷ್ಟಗಳಿಗೆ ಪರಿಹಾರವನ್ನು ಕೂಡ ಕಂಡುಕೊAಡು ಸಮಾಜದಲ್ಲಿ ಜೀವಿಸುತ್ತಿದ್ದಾರೆ ಎಂದು ಉಪನ್ಯಾಸಮಾಲೆಯಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಶ್ರೀಮತಿ ಸುಮಾ ಸತೀಶ್ ಚಕೋರ ಆಯೋಜನೆ ಹಾಗೂ ಉಪನ್ಯಾಸ ಮಾಲೆ ಬಗ್ಗೆ ಸಂಕ್ಷಿಪ್ತವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾ ಲರದ ಡಾ. ಪಿ ಹೇಮಲತಾ ಅಧ್ಯಕ್ಷತೆ ವಹಿಸಿ ಅಧ್ಯಕ್ಷತೆ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಚಕೋರ…











