Author: News Desk Benkiyabale

ತುಮಕೂರು: ಮಲ್ಲ@ವೀರಣ್ಣ (೩೮) ವರ್ಷ ಇತನನ್ನ ಬೀಕರವಾಗಿ ಹತ್ಯೆಮಾಡಲಾಗಿದ್ದು, ಮತ್ತೆ ತುಮಕೂರಿನಲ್ಲಿ ನೆತ್ತರು ಹರಿದಿದೆ, ಇದನ್ನು ಗಮನಿಸಿದರೆ ತುಮಕೂರು ನಗರ ಕ್ರೆ0 ಸಿಟಿಯಾಗಿ ಮಾರ್ಪಾಡಾಗುತ್ತಿದೆಯಾ ಎನ್ನುವ ಆತಂಕ ತುಮಕೂರು ನಗರದ ಸಾರ್ವಜನಿಕರಲ್ಲಿ ಮೂಡುತ್ತಿದೆ. ಕೊಲೆಯಾದ ರೌಡಿಶೀಟರ್ ಮಲ್ಲನನ್ನ ಬೆಳಗುಂಬ ಬಳಿಯಿರುವ ಗರುಡ ಕೆಫೆ ಮುಂಭಾಗದಲ್ಲಿ ಕೊಚ್ಚಿ ಕೊಲೆಗೈದಿದ್ದಾರೆ. ತುಮಕೂರು ನಗರಕ್ಕೆ ಅಂಟಿಕೊ0ಡ0ತಿರುವ ಬೆಳಗುಂಬ ಸಮೀಪ ನಡೆದಿರುವ ಭೀಕರ ಹತ್ಯೆ ನಗರದ ಜನರನ್ನ ಬೆಚ್ಚಿ ಬೀಳಿಸಿದೆ, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ನಾಲ್ಕೆದು ಮಂದಿ ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ೮:೩೦ ಸುಮಾರಿಗೆ ರೌಡಿಶೀಟರ್ ಮಲ್ಲನ ಮೇಲೆ ಚೇತನ್ @ ಗೂಳಿ ಎನ್ನುವ ಜಿಮ್ ಟ್ರೆನರ್ ಪುಡ ಹುಡುಗರ ಗುಂಪು ಕಟ್ಟಿಕೊಂಡು ಬಂದು ಏಕಾ ಏಕಿ ಅಟ್ಯಾಕ್ ಮಾಡಿ ಕೊಚ್ಚಿ ಕೊಲೆಗೈದಿದ್ದಾರೆ, ದುಷ್ಕರ್ಮಿಗಳು ಮಲ್ಲ ಎಂದಿನ0ತೆ ಬಾರಿನಲ್ಲಿ ಪಾನಮತ್ತನಾಗಿ ಮನೆಗೆ ಹಿಂತಿರುಗುತ್ತಿದ್ದ ಸಮಯದಲ್ಲಿ ಹೊಂಚು ಹಾಕಿ ಸಂಚು ರೂಪಿಸಿ ಆತನ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ನಂತರ ಹತ್ಯೆ ಮಾಡಿದ್ದಾರೆ.…

Read More

ತುಮಕೂರು: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ,ಇಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ನಗರದ ಟೌನ್‌ಹಾಲ್‌ನ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಟೌನ್‌ಹಾಲ್ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾವಣೆಗೊಂಡಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತ ರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ,ದೇಶದಾದ್ಯAತ ಕೇಂದ್ರ ಸರಕಾರದ ವೈಫಲ್ಯ ಮತ್ತು ನೀಟ್ ಪರೀಕ್ಷೆಯಲ್ಲಿ ಪ್ರತಿಭಾವಂತರಿಗೆ ಆಗಿರುವ ಅನ್ಯಾಯವನ್ನು ಖಂಡಸಿ ಪ್ರಚಾರ ಸಮಿತಿ ನೇತೃತ್ವದಲ್ಲಿ ಎನ್.ಎಸ್.ಯುಐ,ಯುವ ಕಾಂಗ್ರೆಸ್ ಹಾಗು ಎಲ್ಲಾ ಮಂಚೂಣಿ ಘಟಕಗಳ ಸಹಯೋಗದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ.ನೀಟ್ ವೈಫಲ್ಯದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬುದು ನಮ್ಮೆಲ್ಲರ ಬೇಡಿಕೆಯಾಗಿದೆ.ಸರಕಾರ ಇದೇ ಮೊಂಡತನವನ್ನು ಪ್ರದರ್ಶಿಸಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದವತಿಯಿಂದ ಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ…

Read More

ಹುಳಿಯಾರು: ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ತಹಸೀಲ್ದಾರ್ ಮಮತಾ ಎಂ. ಅವರ ಅಧ್ಯಕ್ಷತೆಯಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವೀಕ್ಷಿಸಿದ ತಹಸೀಲ್ದಾರರು, ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಹಾಗೂ ಮತಗಟ್ಟೆ ಏಜೆಂಟರೊAದಿಗೆ ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು. ಸಮಸ್ಯೆಗಳ ಕುರಿತು ಚರ್ಚೆ: ಎಲ್ಲಾ ವಾರ್ಡ್ಗಳಲ್ಲಿ ಕಂಡುಬರುವ ವಿಶೇಷ ಪ್ರಕರಣಗಳಾದ ಸ್ಥಳಾಂತರಗೊAಡವರು, ಮೃತರಾದವರು, ಇತರೆಡೆ ನೋಂದಣಿ ಮಾಡಿಸಿಕೊಂಡವರು ಹಾಗೂ ಅಲಭ್ಯರಿರುವ ಮತದಾರರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ತಹಸೀಲ್ದಾರರು, ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆ ಅಥವಾ ತಕರಾರು ಬಂದಿದೆಯೇ ಎಂದು ವಿಚಾರಿಸಿದರು. ಸಾರ್ವಜನಿಕರಿಗೆ ಮನವಿ: ಸಭೆಯ ನಂತರ ಮಾತನಾಡಿದ ತಹಸೀಲ್ದಾರ್ ಮಮತಾ, “ಅರ್ಹ ಯಾವುದೇ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ (ಫಾರ್ಮ್) ಫಾರಂಗಳನ್ನು ವಿತರಿಸುವ ಕಾರ್ಯ ಬಹುತೇಕ ಮುಕ್ತಾಯವಾಗಿದೆ. ಆದರೆ,…

Read More

ಹುಳಿಯಾರು: ಪ್ರತಿಯೊಬ್ಬರ ಜೀವನದಲ್ಲೂ ಕಷ್ಟಪಟ್ಟು ಶ್ರಮವಹಿಸಿದರೆ ಎಂತಹ ಸವಾಲುಗಳನ್ನಾದರೂ ಮೆಟ್ಟಿ ನಿಲ್ಲಬಹುದು. ಕೇವಲ ಕನಸು ಕಾಣುವುದಷ್ಟೇ ಅಲ್ಲ, ಅದನ್ನು ನನಸು ಮಾಡಿಕೊಳ್ಳಲು ದೃಢ ಸಂಕಲ್ಪ, ಶಿಸ್ತು ಮತ್ತು ಸಮರ್ಪಣಾ ಭಾವ ಅತ್ಯಗತ್ಯ” ಎಂದು ನೇತ್ರ ತಜ್ಞೆ ಹಾಗೂ ಹಿಮಾಲಯ ಪರ್ವತಾರೋಹಿ ಡಾ.ಚಿನ್ಮಯಿ ಕರೆ ನೀಡಿದರು. ಹುಳಿಯಾರು ಹೋಬಳಿಯ ದೊಡ್ಡಬಿದರಿಯ ಜೆಸಿಎಂ ಇಂಟರ್ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಸಂಸತ್ ಪದಗ್ರಹಣ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಪ್ರೇರಣಾದಾಯಿಕವಾಗಿ ಮಾತನಾಡಿದರು. ಹಿಮಾಲಯ ಪರ್ವತಾರೋಹಣದ ಅನುಭವ: ತಮ್ಮ ಹಿಮಾಲಯ ಪರ್ವತಾರೋಹಣದ ರೋಚಕ ಪಯಣವನ್ನು ನೆನಪಿಸಿಕೊಂಡ ಡಾ. ಚಿನ್ಮಯಿ, “ಪ್ರಥಮ ಬಾರಿಗೆ ಹಿಮಾಲಯ ಏರಲು ಹೊರಟಾಗ ನನಗೆ ಅಲ್ಲಿನ ಹವಾಮಾನದ ಬಗ್ಗೆ ಪೂರ್ಣ ಅರಿವಿರಲಿಲ್ಲ. ಆದರೆ ಸತತ ಪ್ರಯತ್ನ, ದೈಹಿಕ ಶಕ್ತಿ ಹಾಗೂ ಮುಖ್ಯವಾಗಿ ಮಾನಸಿಕ ಧೈರ್ಯ ನನ್ನನ್ನು ಹಿಮಾಲಯದ ತುತ್ತತುದಿಗೆ ಕರೆದೊಯ್ಯಿತು” ಎಂದರು. “ಸಾಧನೆಗೆ ವಯಸ್ಸು ಅಥವಾ ಲಿಂಗ ತಾರತಮ್ಯ ತಡೆಯಾಗುವುದಿಲ್ಲ. ವೈದ್ಯಕೀಯ ವೃತ್ತಿಯ ನಡುವೆಯೂ ದಿನಕ್ಕೆ ಒಂದೆರಡು ಗಂಟೆಗಳ ಕಾಲ ಕಠಿಣ ಅಭ್ಯಾಸ ಮಾಡಿ…

Read More

ತುಮಕೂರು: ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ೨೦೨೩-೨೪ ರಿಂದ ೨೦೨೫-೨೬ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ನಿಗಮದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಯೋಜನೆ (೦.೫೦ ಲಕ್ಷ ಸಹಾಯಧನ), ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (೨.೦೦ ಲಕ್ಷ ಸಹಾಯಧನ), ಸ್ವಾವಲಂಬಿ ಸಾರಥಿ ಯೋಜನೆ (೪.೦೦ ಲಕ್ಷ ಸಹಾಯಧನ) ಹಾಗೂ ಲ್ಯಾಪ್‌ಟಾಪ್ ಯೋಜನೆಗಳಡಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳ ಅರ್ಜಿಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಪರಿಶೀಲಿಸಲಾಯಿತು. ಫಲಾನುಭವಿಗಳ ಆಯ್ಕೆಗೆ ಸಂಬAಧಿಸಿದ ಸಾಮಾನ್ಯ ಅರ್ಹತಾ ಷರತ್ತುಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕನಿಷ್ಠ ೨೧ ವರ್ಷ ವಯಸ್ಸು ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ೩ ಲಕ್ಷ ಹಾಗೂ ನಗರ ಪ್ರದೇಶದಲ್ಲಿ ೫ ಲಕ್ಷ ಮಿತಿಯೊಳಗಿರಬೇಕು. ಅರ್ಜಿದಾರರು…

Read More

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿಗಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ದಿಢೀರ್ ಭೇಟಿ ನೀಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಕೊರಟಗೆರೆ ತಾಲ್ಲೂಕಿನ ದೊಡ್ಡಸಾಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರಹಳ್ಳಿ ಗ್ರಾಮದ ರಾಮಯ್ಯ ಅವರ ಜಮೀನಿನಿಂದ ವೀರ ಚೌಡಪ್ಪನ ಜಮೀನಿನವರೆಗೆ ಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ೧೨೫ ದಿನಗಳ ಕೂಲಿ ಕೆಲಸ ನೀಡಲಾಗುತ್ತಿದೆ. ಪುರುಷರು ಹಾಗೂ ಮಹಿಳೆಯರಿಗೆ ಸಮಾನವಾಗಿ ದಿನಕ್ಕೆ ೩೮೨ ರೂ.ಗಳ ಕೂಲಿ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ಜನತೆ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವAತೆ ಸಲಹೆ ನೀಡಿದರು. ಕಾಲುವೆ ಅಭಿವೃದ್ಧಿ ಕಾಮಗಾರಿಯಲ್ಲಿ ೧೫ ಮಂದಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ವಿಜಿ-ಜಿ ರಾಮ್ ಜಿ ಯೋಜನೆಯಡಿ ಸ್ಥಳೀಯವಾಗಿಯೇ ಕೆಲಸ ನೀಡಿದ ಕಾರಣ ಗ್ರಾಮದ ಕೂಲಿ ಕಾರ್ಮಿಕರು ಸಂತಸ ವ್ಯಕ್ತಪಡಿಸಿ, ಮುಖ್ಯ ಕಾರ್ಯ…

Read More

ತುಮಕೂರು: ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಶೇ.೧೦೦ರಷ್ಟು ಶುದ್ಧ ಮತದಾರರ ಪಟ್ಟಿಗಾಗಿ ರಾಜಕೀಯ ಪಕ್ಷಗಳು ತಮ್ಮ ಮತಗಟ್ಟೆ ಏಜೆಂಟರುಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಸಂಬAಧಿಸಿದAತೆ ನೋಂದಾಯಿತ ರಾಜಕೀಯ ಪಕ್ಷಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿದೆ. ಪ್ರಸ್ತುತ ಪರಿಷ್ಕರಿಸಿದ ಮತದಾರರ ಪಟ್ಟಿ ಪರಿಪಕ್ವವಾಗಲು ರಾಜಕೀಯ ಪಕ್ಷಗಳು ತಮ್ಮ ಮತಗಟ್ಟೆ ಏಜೆಂಟರುಗಳನ್ನು ಮತ್ತಷ್ಟು ಚುರುಕುಗೊಳಿಸಿ ಮತಗಟ್ಟೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ತಿಳಿಸಿದರು. ೨೦೨೫ರ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ೨೨ಲಕ್ಷ ಮತದಾರರಿಗೆ ಗಣತಿ ನಮೂನೆಯನ್ನು ವಿತರಣೆ ಮಾಡಲಾಗಿದೆ. ಇಂದಿನ ಮಾಹಿತಿಯಂತೆ ಜಿಲ್ಲೆಯಲ್ಲಿ ಶೇ. ೭೭.೧೮ರಷ್ಟು ಗಣಕೀಕರಣಗೊಳಿಸಲಾಗಿದೆ. ಆಗಸ್ಟ್ ೮ರವರೆಗೂ ಕಾಲಾವಕಾಶ ವಿಸ್ತರಿಸಲಾಗಿರುವುದರಿಂದ ರಾಜಕೀಯ ಪಕ್ಷಗಳು ತಮ್ಮ ಏಜೆಂಟರುಗಳಿಗೆ ತಿಳಿಸಿ…

Read More

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ೨,೦೯,೪೯೫ ಜನ ಮತದಾರರಿಗೆ ಮತದಾರರ ಗಣಕೀಯ ನಮೂನೆ ಪತ್ರಗಳು ಶೇ.೧೦೦ರಷ್ಟು ತಲುಪಿ ಪ್ರಗತಿ ಸಾಧಿಸಿದ್ದು ಈಗಾಗಲೇ ೧,೬೮,೪೮೨(೮೨.೨೫)ಜನ ಮತದಾರರ ಡಿಜಿಟಲ್ ಸೇರ್ಪಡೆಯಾಗಿದೆ ಎಂದು ಕೊರಟಗೆರೆ ಕ್ಷೇತ್ರದ ಮತದಾನ ನೋಂದಾಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು. ಕೊರಟಗೆರೆ ಪಟ್ಟಣದ ೩ನೇ ವಾರ್ಡಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಬಿಎಲ್‌ಓ ಮನೆ ಮನೆಗೆ ಬೇಟಿಯ ವೇಳೆ ಸ್ಥಳಕ್ಕೆ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದ ಗ್ರಾಮೀಣ ಮತ್ತು ಪಟ್ಟಣದಲ್ಲಿ ವೇಗವಾಗಿ ಮತದಾರರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ನಿಧಾನ ಮತ್ತು ಗೊಂದಲ ಇರುವ ಸ್ಥಳಗಳಿಗೆ ಮತ್ತೋರ್ವ ಹೆಚ್ಚುವರಿ ಬಿಎಲ್‌ಓ ಮತ್ತು ಸಿಬ್ಬಂಧಿಗಳನ್ನು ನೇಮಿಸಲಾಗಿದೆ. ಮುಂದಿನ ೮ ದಿನದೊಳಗೆ ಮತದಾರರ ಡಿಜಿಟಲ್ ಕಾರ್ಯ ಶೇ.೧೦೦ರಷ್ಟು ಪ್ರಗತಿ ಸಾಧಿಸುವ ವಿಶ್ವಾಸವಿದೆ ಎಂದರು. ಕೊರಟಗೆರೆ ತಹಶೀಲ್ದಾರ್ ಮಂಜುನಾಥ.ಕೆ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸ್ಥಳೀಯ ಜನ ಪ್ರತಿನಿಧಿಗಳ ಸಹಕಾರ ಅತಿಮುಖ್ಯ. ಮನೆ ಮನೆಗೆ ಬೇಟಿ ನೀಡುವ ಅಧಿಕಾರಿಗಳಿಗೆ ಮತದಾರರ…

Read More

ತುಮಕೂರು: ಸರ್ಕಾರದಿಂದ ಮಂಜೂರಾದ ಸಾಗುವಳಿ ಭೂಮಿ ಹಕ್ಕಿಗೆ ಯಾವುದೇ ಧಕ್ಕೆಯಾಗದಂತೆ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದಪಡಿ ತರಲು ಆಗ್ರಹಿಸಿ, ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ, ಎಲ್ಲಾ ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ, ಸಾಗುವಳಿ ಚೀಟಿ ಪಡೆದ ಎಲ್ಲಾ ಭೂಮಿಯ ದುರಸ್ತಿಗೆ ಒತ್ತಾಯಿಸಿ ಜುಲೈ ೨೭ರ ಸೋಮವಾರ ಶಿರಾ ತಾಲೂಕು ಬುಕ್ಕಾ ಪಟ್ಟಣದ ಪ್ರಸನ್ನ ಗಣಪತಿ ಸಭಾಂಗಣದಲ್ಲಿ ಸಾಗುವಳಿ ರೈತರ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಚಿಂತಕ ಕೆ.ದೊರೆರಾಜು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಡಿಮ್ಡ್ ಫಾರೆಸ್ಟ್ ಹೆಸರಿನಲ್ಲಿ ನಾಲ್ಕೆöÊದು ತಲೆಮಾರುಗಳಿಂದ ಸಾಗುವಳಿ ಮಾಡುತ್ತಿದ್ದ ರೈತರನ್ನು ಒಕ್ಕಲೆಬ್ಬಿಸಲು ಹೊರಟಿರುವ ಅರಣ್ಯ ಇಲಾಖೆಯ ವಿರುದ್ದ ಈ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಶಿರಾ ತಾಲೂಕಿನ ಹುಳಿಯಾರು ಹೋಬಳಿ ಮುತ್ತುಗದನಹಳ್ಳಿ, ಅಂಬ್ರಾಪುರ ಸೇರಿದಂತೆ ಹಲವು ಹಳ್ಳಿಗಳ ರೈತರಿಗೆ ಮೈಸೂರು ಮಹಾರಾಜರ ಕಾಲದಲ್ಲಿ ೧೯೨೬ ಮತ್ತು ೧೯೪೮ ರಲ್ಲಿ ಭೂಮಿ ಮಂಜೂರಾಗಿ ಗೆಜೆಟ್ ನೋಟಿಫಿಕೇಷನ್ ಅಹ ಆಗಿದೆ. ರೈತರು ತಮಗೆ…

Read More

ತುಮಕೂರು: ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿAದ ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು ಹಾಗೂ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ತಕ್ಷಣವೇ ಜಮೆ ಮಾಡಬೇಕೆಂದು ಆಗ್ರಹಿಸಿ, ಹೊರಗುತ್ತಿಗೆದಾರರು ಹಾಗೂ ಸಿಬ್ಬಂದಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಮುಂಭಾಗ ಶಾಂತಿಯುತ ಪ್ರತಿಭಟನೆ ನಡೆಸಿದರು. ಕಚೇರಿ ಆವರಣದಲ್ಲಿ ಶಿಸ್ತುಬದ್ಧವಾಗಿ ಜಮಾಯಿಸಿದ ಗುತ್ತಿಗೆದಾರರು ನೌಕರರು ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದರು. ಇದೆ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘ (ರಿ) ಬೆಂಗಳೂರು ರಾಜ್ಯ ಘಟಕದ ಅಧ್ಯಕ್ಷರು ಅಕ್ಷಯ್ ರವರು ಈ ನಾಲ್ಕು ತಿಂಗಳಿAದ ವೇತನ ನೀಡಿಲ್ಲ ಹಾಗೂ ೧೦ ತಿಂಗಳಿನ ಪಿ ಎಫ್ ಐ ಕಟ್ಟಿಲ್ಲ ಎಂದು ಆರೋಪಿಸಿ ಇಂದು ಡಿಎಚ್‌ಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಬಾಕಿ ವೇತನ ತಕ್ಷಣವೇ ಪಾವತಿಯಾಗಲಿ ಆರೋಗ್ಯ ಕೇಂದ್ರಗಳಲ್ಲಿ ಹಗಲಿರುಳು ಶ್ರಮಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸಮಯಕ್ಕೆ ಸರಿಯಾಗಿ…

Read More