ಶಿರಾ: ರೈತರ ಅನುಕೂಲಕ್ಕಾಗಿ ಶಿರಾ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ೧೨.೫ ಕೋಟಿ ರೂಪಾಯಿ ವೆಚ್ಚದ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು, ರೈತರು ಬೆಳೆದಂತಹ ತರಕಾರಿ ಮತ್ತು ಇತರೆ ಬೆಳೆಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಶೇಖರಣೆ ಮಾಡಿ ಸೂಕ್ತ ಬೆಲೆ ಸಿಕ್ಕ ಸಂದರ್ಭದಲ್ಲಿ ಮಾರಾಟ ಮಾಡಲು ಅನುಕೂಲ ವಾಗಲಿದೆ. ಇದಲ್ಲದೆ ಹುಣಸೆ ಪಾರ್ಕ್ ಮಾಡುವ ಉದ್ದೇಶದಿಂದ ಎಪಿಎಂಸಿ ಆವರಣದ ಪಕ್ಕದಲ್ಲಿಯೇ ೨೦ ಎಕರೆ ಭೂಮಿಯನ್ನು ಮೀಸಲಿಡಲಾಗಿದ್ದು, ಹುಣಸೆ ಸಂಸ್ಕರಣ ಘಟಕ ಶೀಘ್ರದಲ್ಲಿಯೇ ನಿರ್ಮಾಣವಾಗಲಿದೆ. ಹೈನುಗಾರಿಕೆ ಬಡ ಕುಟುಂಬಗಳ ಪಾಲಿಗೆ ವರದಾನವಾಗಿದ್ದು ಹುಳಿ ಗೆರೆ ನೂತನ ಹಾಲು ಉತ್ಪಾದಕರ ಕಟ್ಟಡ ನಿರ್ಮಾಣ ಮಾಡಲು ೧೦. ಲಕ್ಷ ರೂಪಾಯಿ ಅನುದಾನ ನೀಡಲಿದ್ದೇನೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಶಿರಾ ತಾಲೂಕಿನ ಹುಳಿಗೆರೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರ ವೇರಿಸಿ ಮಾತನಾಡಿದರು. ಬಡ ಕುಟುಂಬಗಳಿಗೆ ಆರ್ಥಿಕ…
Author: News Desk Benkiyabale
ತುಮಕೂರು: ಸಿ.ಇ.ಟಿ. ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಯ ವಿರುದ್ಧ ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿತು. ನಗರದ ಬಿ.ಹೆಚ್. ರಸ್ತೆಯ ಶಂಕರಮಠದಲ್ಲಿ ಜಿಲ್ಲಾ ಬಾಹ್ಮಣ ಸಭಾದ ನೇತೃತ್ವದಲ್ಲಿ ಸಮಾವೇಶಗೊಂಡ ಆರ್ಯವೈಶ್ಯ, ವಿಶ್ವಕರ್ಮ ಹಾಗೂ ಜೈನ ಸಮುದಾಯದ ಮುಖಂಡರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಕುರಿತು ನಿರ್ಣಯ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆ ಮುಖಂಡ ಜಿ.ಎಸ್. ಬಸವ ರಾಜು ಸ್ವಾತಂತ್ರ್ಯ ಭಾರತದಲ್ಲಿ ಈ ರೀತಿಯ ಘಟನೆ ಎಂದೂ ಸಹ ನಡೆದಿರಲಿಲ್ಲ. ಈ ಘಟನೆ ಒಂದು ಸಮುದಾಯದ ಮೇಲೆ ನಡೆದ ದೌರ್ಜನ್ಯವಲ್ಲ, ಬದಲಾಗಿ ಸಂವಿಧಾನದ ಮೇಲೆ ನಡೆದ ದೌರ್ಜನ್ಯ. ಸಮಸ್ತ ಹಿಂದೂ ಸಮಾಜ ಇದನ್ನು ಖಂಡಿಸಬೇಕು ಎಂದರು. ಆರ್ಯವೈಶ್ಯ ಸಮಾಜದ ಮುಖಂಡರಾದ ಡಾ. ರಮೇಶ್ ಬಾಬು ಮಾತನಾಡಿ, ನಿರಂತರವಾಗಿ ಬಹುಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಂಘಟನೆಯ ಕೊರತೆ ಕಾರಣವಾಗಿದೆ. ಬೇರೆ ದೇಶದ ಜನರು ಇಂದು ಸನಾತನ ಧರ್ಮದ ಕಡೆಗೆ ಆಕರ್ಷಿತವಾಗುತ್ತಿರುವ…
ಕೊರಟಗೆರೆ:-ಸೂರ್ಯಚಂದ್ರ ಇರುವ ತನಕ ಎತ್ತಿನಹೊಳೆ ಯೋಜನೆಯ ನೀರು ಕೊರಟಗೆರೆ ಕ್ಷೇತ್ರದ ೧೦೪ಕೆರೆಗಳಿಗೆ ಹರಿಯುತ್ತೇ. ನಾನು ಕೊರಟಗೆರೆ ವಿಧಾನಸಭಾ ಕ್ಷೇತ್ರದ ರೈತರ ಮನೆಮಗ. ೨ವರ್ಷದ ಅವಧಿಯಲ್ಲಿ ನನ್ನ ಕ್ಷೇತ್ರಕ್ಕೆ ೭೫೦ಕೋಟಿಗೂ ಅಧಿಕ ಅನುಧಾನ ಬಂದಿದೆ. ಮುಂದಿನ ೩ವರ್ಷದ ಅವಧಿಯಲ್ಲಿ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಚಿತ್ರಣ ಬದಲಾಗುವ ರೀತಿ ಕೆಲಸ ಮಾಡ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಗೊರವನಹಳ್ಳಿ ಶ್ರೀಕ್ಷೇತ್ರದಲ್ಲಿ ಜಿಲ್ಲಾಢಳಿತ ಮತ್ತು ಜಿಪಂಯಿAದ ಶನಿವಾರ ಏರ್ಪಡಿಸಲಾಗಿದ್ದ ೪೫೪ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರದ ಅತಿಸೂಕ್ಷö್ಮ ಗೃಹಇಲಾಖೆಗೆ ನನ್ನನ್ನು ನೇಮಿಸಿದ್ದಾರೆ. ಹಳ್ಳಿಗಳಿಗೆ ನಾನು ಬರುವುದಕ್ಕೆ ಆಗುತ್ತೀಲ್ಲ ಅದಕ್ಕಾಗಿ ನಾನು ಜನರಲ್ಲಿ ಕ್ಷಮೆ ಕೇಳ್ತಿನಿ. ನಾನು ನಿಮ್ಮ ಮನೆಯ ಮಗನಾಗಿ ಪ್ರತಿಯೊಂದು ಹಳ್ಳಿಯಲ್ಲಿಯು ಅಭಿವೃದ್ದಿಗೆ ಅನುಧಾನ ತರ್ತಿನಿ. ಗ್ಯಾರಂಟಿ ಯೋಜನೆಯ ಜೊತೆಯಲ್ಲೇ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯು ಆಗಲಿದೆ ಎಂದರು. ನನ್ನ ರಾಜಕೀಯ ಜೀವನದಲ್ಲಿ ಯಾವತ್ತು ಸಹ ಭೂಟಾಟಿಕೆ ಮಾಡಿದ ವ್ಯಕ್ತಿ…
ತುಮಕೂರು: ಹರಿಕಥೆ ಎನ್ನುವುದು ಒಂದು ಜಾತ್ಯಾತೀತ ಕಲೆ. ಈ ಕಲೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ.ಹಾಗಾಗಿ ಈ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಕ ಕಲಾವಿದರನ್ನು ಇತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದು ಹಿರಿಯ ಸುಗಮ ಸಂಗೀತ ಕಲಾವಿದರಾದ ಡಾ.ಆರ್.ಕೆ.ಪದ್ಮನಾಭನ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಿ.ಸೋಮಶೇಖರದಾಸ್ ಪ್ರತಿಷ್ಠಾನ ಬೆಂಗಳೂರು ಇವರು, ಚಿರಂತ ಸಾಂಸ್ಕೃತಿಕ ಟ್ರಸ್ಟ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಹರಿದಾಸರ ಸಮಾವೇಶ-೨೦೨೫ ವನ್ನು ಉದ್ಭಾಟಿಸಿ ಮಾತನಾಡುತಿದ್ದ ಅವರು, ಸುಗಮ ಸಂಗೀತ, ನೃತ್ಯ,ಗಮಕ ಇಂತಹ ಕಲೆಗಳಿಗೆ ಅದರದ್ದೇ ಪ್ರೇಕ್ಷಕರ ವರ್ಗವಿದೆ.ಆದರೆ ಹರಿಕಥೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಸಹ ಆಗಮಿಸಿ, ಕೇಳಿ ಆಸ್ವಾಧಿಸುತ್ತಾರೆ. ಹಾಗಾಗಿ ಇದೊಂದು ಜಾತ್ಯಾತೀತ ಕಲೆ. ಇದು ಉಳಿದು ಬೆಳೆಯಬೇಕಿದೆ ಎಂದರು. ನಾನು ಸಹ ಬಾಲ್ಯದಿಂದಲೂ ಹರಿಕಥೆಯನ್ನು ಕೇಳಿ ಬೆಳದವ. ಕಾಲೇಜು ದಿನಗಳಲ್ಲಿ ಗುರುರಾಜುಲುನಾಯ್ಡು ಅವರ ಹರಿಕಥಾ ಕಾರ್ಯಕ್ರಮಕ್ಕೆ ತಪ್ಪದೇ ಹೋಗುತ್ತಿದ್ದೇ, ನನ್ನ ಗಾಯನದ ಮೇಲೆ…
ಪಾವಗಡ: ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಜಾರಿಯಾಗಲು ಶ್ರಮಿಸಿದ ಹೋರಾಟಗಾರರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದುಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆಯ ಅಧ್ಯಕ್ಷರಾದ ಶಿವಪ್ರಸಾದ್ ರವರು ತಿಳಿಸಿದರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಾ.ನಂಜುAಡಪ್ಪ ವರದಿಯ ಪ್ರಕಾರ ಅತೀ ಹಿಂದುಳಿದ ಪ್ರದೇಶವಾಗಿದ್ದು, ಸದಾ ಬರಗಾಲಕ್ಕೆ ತುತ್ತಾಗುತಿತ್ತು ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಕೆರೆಗಳನ್ನು ತುಂಬಿಸುವ ಯೋಜನೆಗಳ ಜಾರಿಗೆ ಸಂಬAಧಿಸಿದAತೆ ಹಲವಾರು ಹೋರಾಟಗಳು ನಡೆದಿವೆ, ಆದ್ದರಿಂದ ಹೋರಾಟಗಾರರನ್ನು ಗೌರವಿಸಿ ಸನ್ಮಾನಿಸಲಾಗುವುದು. ಹೊಸಪೇಟೆ ಜಲಾಶಯದಿಂದ ತಾಲೂಕಿಗೆ ಕುಡಿಯುವ ನೀರು ಹರಿದು ಬಂದಿದೆ ದಶಕಗಳ ಹೋರಾಟ ಯಶಸ್ವಿಯಾಗಿದೆ ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನವಾಗಿದ್ದು ಪ್ರಗತಿಪ ಪದದತ್ತ ಸಾಗಿದೆ ಎತ್ತಿನಹೊಳೆ ಯೋಜನೆ ಮಂಜೂರಾಗಿದೆ ಸರ್ಕಾರವು ಕಾಮಗಾರಿಗಳನ್ನು ಕೈಗೊತ್ತಿಕೊಂಡಿದ್ದು ಈ ಮೂರು ಯೋಜನೆಗಳು ತಾಲೂಕಿಗೆ ಮಂಜೂರಾಗಲು ಅನುಷ್ಠಾನಗೊಳ್ಳಲು ಹಲವಾರು ದಶಕಗಳಿಂದ ಅನೇಕ ಹೋರಾಟಗಳು ನಡೆದಿವೆ, ವಿವಿಧ ರೀತಿಯ ಪ್ರತಿಭಟನೆಗಳು ನಡೆದು ಅವು ವಿವಿಧ ರೂಪ ಪಡೆದುಕೊಂಡು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು ಯಶಸ್ವಿಯಾಗಿವೆ.…
ತುರುವೇಕೆರೆ: ವಿದೇಶಿ ಸಂಸ್ಕೃತಿಯನ್ನು ಮಾರು ಹೋಗದೇ ನಮ್ಮ ದೇಶದ ಸಂಸ್ಕೃತಿಯನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಟಿ .ಕೃಷ್ಣಪ್ಪನವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧುವಾರ ಏರ್ಪಡಿಸಿದ್ದ “ನಮ್ಮ ಸಂಸ್ಕೃತಿ-ನಮ್ಮ ಹೆಮ್ಮೆ” ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಾವಿರಾ ರು ವರ್ಷಗಳಿಂದ ಬಂದAತ ದೇಶದ ಸಂಸ್ಕೃತಿ ಮುಂದೆಯೂ ಇರಲಿದೆ. ಆದರೆ ಹಳ್ಳಿಗಾಡಿಗಿಂತ ಪಟ್ಟಣದಲ್ಲಿ ದೇಶೀ ಸಂಸ್ಕೃತಿ ನಶಿಸುತ್ತಿರುವುದು ನಿಜಕ್ಕೂ ವಿಷಾದನೀಯ ಸಂಗತಿ. ನಮ್ಮ ತಾಲ್ಲೂಕಿನಲ್ಲೂ ಸಹಾ ಅತ್ಯುತ್ತಮ ಕಲಾವಿದರಿದ್ದು ಅಂತಹವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ದೇಶೀ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ನೀಡಲು ನಾವು ನೀವೆಲ್ಲರೂ ಕೈಜೋಡಿಸಬೇಕಾದ್ದು ನಮ್ಮೆಲ್ಲರ ಕರ್ತ ವ್ಯವಾಗಿದ್ದು ಇಂದು ಈ ಕಾಲೇಜಿನಲ್ಲಿ ಹಳ್ಳಿ ಗಾಡಿನ ಸೊಬಗನ್ನು ಬಿಂಬಿಸುವAತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯವೆಂದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೋ. ಈರಯ್ಯನವರು ಮಾತನಾಡಿ ನಮ್ಮ ಸಂಸ್ಕೃತಿಯನ್ನು ಪ್ರಾಚೀನ ದೇಶಗಳಲ್ಲಿ ಅನುಕರಣೆ ಮಾಡುತ್ತಿದ್ದು ಅಂತಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ…
ತುರುವೇಕೆರೆ: ರಾಜ್ಯ ಕಾಂಗ್ರೇಸ್ ಸರ್ಕಾರನ ದುರಾಡಳಿತ ಹಾಗೂ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಿಂದ ಏ.೨೧ ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಸಾಲಜಯರಾಮ್ ತಿಳಿಸಿದರು. ಪಟ್ಟಣದ ಸಮೀಪದ ತೋಟದ ಮನೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ತುಗಲಕ್ ದರ್ಬಾರ್ ಮಾಡುತ್ತಿದ್ದಾರೆ. ಇಂದು ವರ್ಗದ ಜನರನ್ನು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇವರ ಸರ್ಕಾರದಿಂದ ಬಡವರು ಜೀವನ ನೆಡೆಸಲು ಸಾದ್ಯವಿಲ್ಲ ದಂತಾಗಿದೆ. ಪೇಟ್ರೋಲ್, ಹಾಲು, ಸ್ಟಾಪ್ ಪೇಪರ್, ಮದ್ಯ, ವಿದ್ಯುತ್, ಬಸ್ ಧರ ಸೇರಿ ಎಲ್ಲದರ ಮೇಲೆ ಟ್ಯಾಕ್ಸ್ ಹಾಕಿ ತಮ್ಮ ಗ್ರಾರಂಟಿಗಳಿಗೆ ಹಣ ನೀಡಲು ಜನರ ಹೊಟ್ಟೇ ಮೇಲೆ ಹೊಡೆಯುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ಶೇ ೪೦ ಕಮಿಷನ್ ಸರ್ಕಾರ ಎಂದು ಹೇಳುತ್ತಿದ್ದ ಕಾಂಗ್ರೇಸ್ ನವರು ಇಂದು ಶೇ ೬೦ ಕಮಿಷನ್ ಸರ್ಕಾರವಾಗಿದೆ ಎಂದು ಕಾಂಗ್ರೇಸ್ ಮುಖಂಡರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಪ್ರತಿಭಟನೆಗೆ ಜೆಡಿಎಸ್ ಯುವ…
ತುರುವೇಕೆರೆ: ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಗ್ರಾಮದೇವತೆ ಶ್ರೀ ಉಡುಸಲಮ್ಮ ದೇವಿ ರಥೋತ್ಸವದ ಅಂಗವಾಗಿ ಏ.೨೧ರಂದು ಸೋಮವಾರ ಬೆಳಿಗ್ಗೆ ಭೀಮೋತ್ಸವ ಕೃಪಾಪೋಷಿತ ನಾಟಕ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಧರ್ಮರಾಜ್ಯ ಸ್ಥಾಪನೆ ಎಂಬ ಪೌರಾಣಿಕ ನಾಟಕವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್ಎಸ್ ಸಂಚಾಲಕ ಬಾಣಸಂದ್ರ ಕೃಷ್ಣಸ್ವಾಮಿ ತಿಳಿಸಿದರು. ಭೀಮೋತ್ಸವ ಆಚರಣಾ ಸಮಿತಿ ಕಛೇರಿಯಲ್ಲ್ಲಿ ನಾಟಕ ಕರಪತ್ರ ವಿತರಿಸಿ ಮಾತನಾಡಿದ ಅವರು ೨೧ರಂದು ಬೆಳಿಗ್ಗೆ ೯:೩೦ಕ್ಕೆ ನಾಟಕ ಪ್ರಾರಂಬಗೊಳ್ಳಲಿದೆ. ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದು ಇದೇ ಸಂಧರ್ಭದಲ್ಲಿ ತಾಲ್ಲೂಕಿನ ಹಲವು ಹಿರಿಯ ಕಲಾವಿದರಾದ ಸಂಗೀತ ನಿರ್ಧೇಶಕ ರಾದ ನಾಗಣ್ಣ, ರಂಗರಾಜು, ನಾದಸ್ವರವಾದಕ ಶಿವಣ್ಣ, ಹಿರಿಯ ರಂಗಭೂಮಿ ಕಲಾವಿದ ಮರಿಯಣ್ಣ, ಎಂ.ಎನ್.ಮೂರ್ತಿ ಹಾಗೂ ಜನಪದ ಕಲಾವಿದ ಮುನಿಯಪ್ಪ ಅವರನ್ನು ಗುರ್ತಿಸಿ ಸನ್ಮಾನಿಸಲಾಗುವುದು. ನಾಟಕ ಪ್ರದರ್ಶನದಲ್ಲಿ ಮಧ್ಯಾನಃ ಪ್ರೇಕ್ಷಕರಿಗೆ ಉಪಾಹಾರದ ವ್ಯವಸ್ಥೆ ಸಹಾ ಮಾಡಲಾಗಿದ್ದು ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಲೆಗೆ ಪ್ರೋತ್ಸಾಹ ನೀಡಬೇಕೆಂದು ಈ ಮೂಲಕ ಮನವಿ ಮಾಡಿಕೊಂಡಿದ್ದಾರೆ.…
ತುರುವೇಕೆರೆ: ತಾಲ್ಲೂಕಿನ ಗೋಣಿ ತುಮಕೂರಿನಲ್ಲಿ ಗ್ರಾಮದೇವತೆಗಳಾದ ಶ್ರೀ ಗದ್ದೆ ಕೆಂಪಮ್ಮದೇವಿ ಮತ್ತು ಶ್ರೀ ಆದಿಶಕ್ತಿ ಅರಸಮ್ಮದೇವಿಯ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯ ಗಳೊಂದಿಗೆ ವೈಭವಯುತವಾಗಿ ನಡೆಯಿತು. ಗ್ರಾಮದಲ್ಲಿ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವದ ಸಂಭ್ರಮದ ಪರಾಕಾಷ್ಠೆ ಮೇಳೈಸಿದ್ದು, ದೇವರಿಗೆ ತಂಬಿಟ್ಟಿನ ಆರತಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ಊರಿನ ಮಧ್ಯೆಭಾಗದಲ್ಲಿರುವ ದೇವರ ಗರ್ಭ ಗುಡಿಯಿಂದ ಕಳಸ ಮತ್ತು ಗೂಡೆಗಳೊಂದಿಗೆ ದೇವರನ್ನು ಅದ್ದೂರಿಯಾಗಿ ಊರಿನ ಹೆಬ್ಬಾಗಲಿನ ಮುಖೇನ ಅರಸಮ್ಮ ದೇವಾಲಯಕ್ಕೆ ವಿವಿಧ ವಾದ್ಯಗೋಷ್ಠಿಯೊಂದಿಗೆ ಕರೆದೊಯ್ಯಲಾಯಿತು. ಅರಸಮ್ಮ ದೇವಾಲಯಕ್ಕೆ ತೆರಳಿ ಮೂರು ಸುತ್ತು ದೇವಾಲಯ ಪ್ರದಕ್ಷಿಣೆ ಹಾಕಿದ ನಂತರ ನೆರೆದಿದ್ದ ಊರಿನ ಗ್ರಾಮಸ್ಥರು, ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಜಾತ್ರೆ ಯನ್ನು ಗ್ರಾಮಸ್ಥರು ಅದ್ದೂರಿಯಾಗಿ ಆಚರಿಸಿ ಅಮ್ಮನವರಿಗೆ ಸಕಲ ಸೇವೆಯನ್ನು ಸಲ್ಲಿಸಿ ಪುನೀತರಾದರು.
ತುಮಕೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಗಾಯತ್ರಿ ದೀಕ್ಷೆ ಪಡೆದು ಧರಿಸಿದ್ದ ಜನಿವಾರವನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಹಾಜರಾಗಿದ್ದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಬಗ್ಗೆ ಕೂಲುಕುಷ ತನಿಖೆ ನಡೆಸುವಂತೆ ಬ್ರಾಹ್ಮಣ ಸಭಾದ ಪದಾಧಿಕಾರಿಗಳು ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿರವರ ಮೂಲಕ ರಾಜ್ಯಪಾ ಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಶಿವಮೊಗ್ಗ ಹಾಗೂ ಬೀದರ್ ನಗರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳು ಸಿ.ಇ.ಟಿ.ಪರೀಕ್ಷೆ ಬರೆಯ ಲು ಬಂದಾಗ ಆತನು ಗಾಯತ್ರಿ ದೀಕ್ಷೆ ಪಡೆದು ಧರಿಸಿದ್ದ ಜನಿವಾರವನ್ನು ತೆಗೆಸಿ ಹಾಕಿರುವ ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ. ಇದು ನಮ್ಮ ನಂಬಿಕೆ, ಧರ್ಮಕ್ಕೆ, ಜೀವನಶೈಲಿ, ಸಂಸ್ಕಾರ, ಪದ್ದತಿಗಳಿಗೆ ಮಾಡಿರುವ ಅಪಮಾನ. ಕೂಡಲೇ ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಕ್ರಮ ಕೈಗೊ ಳ್ಳಬೇಕು ಎಂದು…