Author: News Desk Benkiyabale

ತುಮಕೂರು: ಬಹುದೊಡ್ಡ ಪಿಡುಗಾಗಿರುವ ಮಾದಕ ವಸ್ತುಗಳ ನಿರ್ಮೂಲನೆಗೆ ಪ್ರಬಲ ಕಾನೂನೂನಿದೆ. ಎನ್‌ಡಿಪಿಎಸ್ ಕಾಯಿದೆ, ಕಾನೂನು ಅನುಷ್ಠಾನ ಬಿಗಿಗೊಳ್ಳಬೇಕು. ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದರ ಜತೆಗೆ, ತಪ್ಪಿಸ್ಥರ ವಿರುದ್ಧ ಕಾನೂನಾತ್ಮಕ ಕ್ರಮ ಮುಲಾಜಿಲ್ಲದೆ ಜರುಗಿಸಬೇಕು. ಆಗ ಮಾತ್ರ ಡ್ರಗ್ಸ್ ನಿರ್ಮೂಲನೆ ಸಾಧ್ಯವೆಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್ ಕರೆ ನೀಡಿದರು. ಕುವೆಂಪು ನಗರದ ವಿದ್ಯಾವಾಹಿನಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೋಮವಾರ ಬೆಂಗಳೂರಿನ ನವಸಹಯೋಗ್ ಫೌಂಡೇಶನ್, ಯಂಗ್ ಇಂಡಿಯನ್ಸ್ ಆರ್ಗನೈಸೇಷನ್ ಮತ್ತು ಸತ್‌ಕೃತಿ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ `ಡ್ರಗ್ಸ್ ವಿರುದ್ಧ ಯುವಜನತೆ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡ್ರಗ್ಸ್ ಪೂರೈಕೆ, ಬಳಕೆಯಲ್ಲಿ ವಿದ್ಯಾರ್ಥಿಗಳು ಸಿಕ್ಕಿಬಿದ್ದರೆ ಕಾನೂನಾತ್ಮಕ ಕ್ರಮ ಜರುಗಿಸಬೇಕು. ವಿದ್ಯಾರ್ಥಿ ಎಂಬ ಐಡಿ ಕಾರ್ಡ್ಗೆ ವಿನಾಯಿತಿ ನೀಡಿ ಕಳುಹಿಸಿದರೆ ಕಾನೂನು ಮೇಲೆ ಭಯವೇ ಇಲ್ಲದಂತಾಗುತ್ತದೆ. ಇತರೆ ವಿದ್ಯಾರ್ಥಿಗಳು ತಪ್ಪೆಸುಗುವ ಸಾಧ್ಯತೆ ಇರುತ್ತದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು, ವಿದ್ಯಾರ್ಥಿಗಳೆಂದು ತಪ್ಪನ್ನು ಲಘುವಾಗಿ ಪರಿಗಣಿಸದೆ ತಪ್ಪೆಸೆಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದರು. ಡ್ರಗ್ಸ್ ಎ0ಲ್ಲಿದ? ಎಲ್ಲಿಗೆ?…

Read More

ತುಮಕೂರು: ಜೆಡಿಯು ಪಕ್ಷದ ವತಿಯಿಂದ ನಗರದಲ್ಲಿ ಅಕ್ಟೋಬರ್ ೧೨ ರಂದು ನಡೆಯುವ ರಾಷ್ಟçಪಿತ ಮಹಾತ್ಮಗಾಂಧಿ,ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮ.ಜೆ.ಪಟೇಲ್ ಅವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿರುವ ಚುನಾವಣಾ ಸುಧಾರಣೆಗಳ ಕುರಿತು ವಿಚಾರ ಸಂಕಿರಣದ ಪೂರ್ವಭಾವಿ ಸಭೆಯನ್ನು ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್, ಚುನಾವಣೆಗಳು ಅವುಗಳು ನಡೆಯುತ್ತಿರುವ ರೀತಿಗಳ ಬಗ್ಗೆ ರಾಜಕೀಯ ಪಕ್ಷಗಳ ಜೊತೆಗೆ,ಜನಸಾಮಾನ್ಯರಲ್ಲಿಯೂ ಹಲವಾರು ಅನುಮಾನ ಗಳು ಹುಟ್ಟಿಕೊಂಡಿರುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣಬಹುದಾಗಿದೆ.ಮತಗಳ್ಳತನ,ಮತಗಳನ್ನು ಖರೀದಿಸುವುದು, ಆಸೆ, ಅಮೀಷಗಳ ಮೂಲಕ ಮತದಾರರನ್ನು ಭ್ರಷ್ಟರನ್ನಾಗಿಸಿ,ತಮ್ಮ ಬೆಳೆ ಬೆಯಿಸಿಕೊಳ್ಳುತ್ತಿರುವ ಇಂದಿನ ಯುಗದಲ್ಲಿ ಮತದಾನ ವೆಂಬುದು ಒಂದು ಪವಿತ್ರ ಕರ್ತವ್ಯ.ಮತಗಳನ್ನು ಮಾರಿಕೊಳ್ಳಬಾರದು ಎಂಬ ನೈತಿಕ ರಾಜಕಾರಣದ ಪಾಠವನ್ನು ಜನರಿಗೆ ತಿಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜೆಡಿಯು ಪಕ್ಷದ ರಾಜ್ಯಾಧ್ಯಕ್ಷರಾದ ಮಹಿಮ ಜೆ ಪಟೇಲ್ ಅವರ ನೇತೃತ್ವದಲ್ಲಿ ನಗರದ ಕನ್ನಡ ಭವನದಲ್ಲಿ ಆಕ್ಟೋಬರ್ ೧೨ ರಂದು…

Read More

ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ.ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು.ಜೆಡಿಯು ಅಭ್ಯರ್ಥಿಯೊಂದಿಗೆ ಈ ಬಾರಿಯ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಭ್ರಷ್ಟಾಚಾರ ರಹಿತವಾಗೇ ನಡೆಸುತ್ತೇವೆ ಎಂದು ಮಾಜಿ ಶಾಸಕ, ಸಂಯುಕ್ತ ಜನತಾದಳ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಹೇಳಿದರು. ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಕೆ. ನಾಗರಾಜು ಅವರು ಆಗ್ನೇಯ ಪದವಿಧರರ ಕ್ಷೇತ್ರದ ಜೆಡಿಯುನ ಅಧಿಕೃತ ಅಭ್ಯರ್ಥಿ. ಇವರು ಈಗಾಗಲೇ ಕ್ಷೇತ್ರದಾದ್ಯಂತ ಪ್ರಚಾರ ಆರಂಭಿಸಿದ್ದಾರೆ. ಪಾರದರ್ಶಕವಾದ ಮಾದರಿ ಚುನಾವಣೆ ನಡೆಸುತ್ತೇವೆ ಎಂದು ಹೇಳಿದರು. ಚುನಾವಣೆಯಲ್ಲಿ ಎನ್‌ಡಿಎ ಜೊತೆಜೆಡಿಯು ಮೈತ್ರಿ ಮಾಡಿಕೊಳ್ಳುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಹಿಮಾ ಪಟೇಲ್, ಮೈತ್ರಿ ಇಲ್ಲ, ಅವರ ಬೆಂಬಲ ಕೋರುತ್ತೇವೆ, ಕೊಟ್ಟರೆ ಬೆಂಬಲ ಪಡೆಯುತ್ತೇವೆ. ಇಲ್ಲವಾದರೆ ಜೆಡಿಯು ಪ್ರತ್ಯೇಕವಾಗಿ ಸ್ಪರ್ಧೆ ಮಾಡುತ್ತದೆ ಎಂದರು. ಈಗಿನ ಚುನಾ ವಣೆ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಬೇಸರವಾಗಿದೆ. ಆ ದರೆ ಸರಿಮಾಡುವವರು ಯಾರು? ನಾವೆಲ್ಲರೂ ಸರಿಮಾಡಬೇಕು.ಮಾಡಬೇಕು ಎಂಬ ಆಲೋಚನೆ ಮಾಡಿ ಮುಂದುವರೆದರೆ ಸಾಧ್ಯವಾಗುತ್ತದೆ.…

Read More

ತುಮಕೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯಲ್ಲಿ ಗಣತಿದಾರರು ಮಾದಿಗ ಸಮುದಾಯವನ್ನು ಎಕೆ, ಎಡಿ, ಎಎ ಎಂದು ನಮೂದು ಮಾಡಿರುವುದರಿಂದ ಮಾದಿಗ ಸಮುದಾಯದ ಕಾಲೋನಿಗಳಲ್ಲಿ ಮರು ಸಮೀಕ್ಷೆ ನಡೆಸುವಂತೆ ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಒತ್ತಾಯಿಸಿದರು. ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕೊರಟಗೆರೆ, ಮಧುಗಿರಿ, ತುರುವೇಕೆರೆ, ಚಿಕ್ಕನಾಯಕನಹಳ್ಳಿ ಹಾಗು ಶಿರಾ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶಿಷ್ಠ ಜಾತಿ ಮುಖಂಡರೊ0ದಿಗೆ ಚರ್ಚಿಸಿದಾಗ ಸಮೀಕ್ಷೆಯಲ್ಲಿ “ಮಾದಿಗ” ಗುಂಪಿನ ಕುಟುಂಬಗಳು “ಆದಿಕರ್ನಾಟಕ” ಎಂದು ನಮೂದು ಮಾಡಿದ್ದಾರೆ ಎಂದು ತಿಳಿಸಿದರು. ಗಣತಿದಾರರು ವಿದ್ಯಾವಂತರಿಲ್ಲದಾಗ ಕುಟುಂಬದ ಮಾಹಿತಿಯನ್ನು ಪಡೆದು ಸಮೀಕ್ಷೆಯನ್ನು ತರಾತುರಿಯಲ್ಲಿ ಪೂರ್ಣಗೊಳಿಸುತ್ತಿದ್ದು, ನ್ಯಾ.ನಾಗಮೋಹನದಾಸ್ ಅವರ ವರದಿಯಲ್ಲಿ ನಮೂದಾಗಿರುವುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಆದಿ ಕರ್ನಾಟಕ ಎಂದು ಸಮೀಕ್ಷೆಯ ವೇಳೆ ಗಣತಿದಾರರು ನಮೂದು ಮಾಡಿರುವುದು ಜಿಲ್ಲೆಯಲ್ಲಿ ಕಂಡು ಬಂದಿದೆ ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ಗುರುತಿನ ಚೀಟಿ ಅಂಟಿಸಿಲ್ಲದ ಕಾರಣಕ್ಕೆ ಅಂತಹ ಮನೆಗಳನ್ನು ಕೈಬಿಟ್ಟು…

Read More

ತುಮಕೂರು: ಹಲವಾರು ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡಿ ಗಣೇಶೋತ್ಸವ ಆಚರಿಸಿಕೊಂಡು ಹಿಂದೂ ಸಮಾಜ ಪೋಷಣೆ ಮಾಡುತ್ತಾ, ಧಾರ್ಮಿಕ ಪರಂಪರೆಯನ್ನು ಮುಂದುವರೆಸುತ್ತಿರುವ ನಗರದ ವಿವಿಧ ಬಡಾವಣೆಗಳ ೫೮ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳನ್ನು ಗುರುವಾರ ತುಮಕೂರು ದಸರಾ ಸಮಿತಿಯಿಂದ ದಸರಾ ಉತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ, ತಮ್ಮದೇ ಆದರೀತಿಯಲ್ಲಿ ಸಮಾಜಕ್ಕೆ ವಿವಿಧ ಕೊಡುಗೆ ನೀಡಿರುವ ನಗರದ ನಾನಾ ಸಂಘಟನೆಗಳ ಮುಖಂಡರಿಗೆ ‘ಸಾರ್ಥಕ ಜೀವನ ಸಾಧಕ’ ಎಂದು ಗೌರವಿಸಿ ಸನ್ಮಾನಿಸಲಾಯಿತು. ಹಿರಿಯ ಪತ್ರಕರ್ತ, ಪ್ರಜಾಪ್ರಗತಿ ಸಂಪಾದಕ ಡಾ.ಎಸ್.ನಾಗಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಿ, ಶತಶತಮಾನಗಳಿಂದ ಭಾರತ ದೇಶಾದ್ಯಂತ ಹಿಂದೂ ಸಂಸ್ಕೃತಿ ಹಿನ್ನೆಲೆಯಲ್ಲಿ ನವರಾತ್ರಿ ಉತ್ಸವ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ತುಮಕೂರು ದಸರಾ ಸಮಿತಿಯು ೩೫ ವರ್ಷಗಳಿಂದ ಸಾಂಪ್ರದಾಯಕ, ಧಾರ್ಮಿಕವಾಗಿ ದಸರಾ ಉತ್ಸವ ಆಚರಿಸಿಕೊಂಡು ಬರುತ್ತಿದೆ. ಮುಂದೆಯೂ ನಿರಂತರವಾಗಿ ತುಮಕೂರಿನಲ್ಲಿ ಸಮಿತಿಯಿಂದ ದಸರಾ ಉತ್ಸವ ಮುಂದುವರೆಯಲಿ ಎಂದು ಆಶಿಸಿದರು. ಹಿಂದೂ ಧರ್ಮದ ಆಚರಣೆಯಾಗಿ ಗಣೇಶೋತ್ಸವ ನಡೆಸಿ ಕೊಂಡು ಬರುತ್ತಿರುವ ಮಂಡಳಿಯವರನ್ನು ಸನ್ಮಾನಿಸುತ್ತಿರುವುದು ಉತ್ತಮ…

Read More

ತುಮಕೂರು: ನಾವು ಮಾಡುವ ಸೇವೆ ನಿಸ್ವಾರ್ಥತೆಯಿಂದ ಕೂಡಿರಬೇಕು. ಆಗ ಮಾತ್ರ ನಮ್ಮ ಸೇವೆಗೆ ಜನಮನ್ನಣೆ ದೊರೆಯುತ್ತದೆ ಎಂದು ರಾಷ್ಟçಪತಿ ಪದಕ ಪುರಸ್ಕöÈತ ಕೊರಟಗೆರೆ ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ. ಅನಿಲ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಶ್ರೀ ಕೃಷ್ಣಮಂದಿರದಲ್ಲಿ ಅಖಿಲ ಭಾರತ ಮಾಧವ ಮಂಡಲ, ಕೃಷ್ಣ ಮಂದಿರ ಹಾಗೂ ವಿಪ್ರ ಬಾಂಧವರ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ನಮ್ಮ ಪೊಲೀಸ್ ಇಲಾಖೆಯಲ್ಲಿ ನಾನು ಮಾಡಿರುವ ಸೇವೆಯನ್ನು ಗುರುತಿಸಿ ಹಿರಿಯ ಅಧಿಕಾರಿಗಳ ಶಿಫಾರಸ್ಸಿನಿಂದ ರಾಷ್ಟçಪತಿ ಪದಕ ಬಂದಿರುವುದು ತುಂಬಾ ಖುಷಿ ತಂದಿದೆ. ಈ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಸಮಾಜ ರಕ್ಷಣೆಯ ಹೊಣೆ ಸದಾ ನಮ್ಮ ಮೇಲಿರುತ್ತದೆ ಎಂದು ಹೇಳಿದರು. ನಮ್ಮದು ಪೊಲೀಸ್ ಕುಟುಂಬ. ನಮ್ಮ ತಂದೆಯೂ ಸಹ ಪೊಲೀಸ್ ಅಧಿಕಾರಿಯಾಗಿದ್ದರು. ಈಗ ನಾನು ಮತ್ತು ನನ್ನ ಸಹೋದರ ಇಬ್ಬರು ಸಹ ಪೊಲೀಸ್ ಅಧಿಕಾರಿಗಳಾಗಿದ್ದೇವೆ. ಜನ ಸೇವೆಯೇ ನಮ್ಮ ಕುಟುಂಬದ ಉಸಿರಾಗಿದೆ ಎಂದರು. ದೇಶದ ಭವಿಷ್ಯವು…

Read More

ತುಮಕೂರು: ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಪಕ್ಷ ನೀಡಿರುವ ಅವಕಾಶವನ್ನು ಸಮರ್ಥವಾಗಿ ಬಳಿಸಿಕೊಂಡು ಸ್ಥಳೀಯವಾಗಿ ನಾಯಕತ್ವ ರೂಪಿಸಿಕೊಳ್ಳಬೇಕು. ಇಂದಿನ ಯುವ ಕಾಂಗ್ರೆಸ್ ಮುಖಂಡರು ನಾಳಿನ ಉತ್ತಮ ನಾಯಕರಾಗಿ ರೂಪುಗೊಂಡು ಪಕ್ಷ ಮುನ್ನಡೆಸಬೇಕು ಎಂಬ ಸಂಕಲ್ಪ ಮಾಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಹೇಳಿದರು. ಶುಕ್ರವಾರ ನಗರದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸಮಿತಿ ನೀಡುವ ಸೂಚನೆಗಳನ್ನು, ಕಾರ್ಯಕ್ರಮಗಳನ್ನು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮಾಡಬೇಕು. ಪಕ್ಷದ ಕಾರ್ಯಕ್ರಮಗಳು ಜನರ ಗಮನಕ್ಕೆ ಬರುವಂತೆ ಪ್ರಚಾರ ಕಾರ್ಯದಲ್ಲೂ ಗಮನಹರಿಸಬೇಕು ಹಾಗೂ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳ ಬಗ್ಗೆ ಜನರಿಗೆ ಪರಿಚಯಿಸಿ, ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ಒಲವು ಮೂಡಿಸಲು ಹಾಗೂ ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲಾ…

Read More

ತುಮಕೂರು: ತಮ್ಮ ಜೀವದ ಹಂಗು ತೊರೆದು ಇನ್ನೊಬ್ಬರ ಜೀವ ಉಳಿಸಲು ಕೆಲಸ ಮಾಡುವ ಅಂಬ್ಯುಲೆನ್ಸ್ ಡ್ರೈವರ್ ಗಳು ರೋಗಿಗಳ ಪಾಲಿಗೆ ದೇವರಾದರೆ, ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಅಖಿಲ ಕರ್ನಾಟಕ ಅಂಬುಲೆನ್ಸ್ ರೋಡ್ ಸೇಪ್ಟಿ (ರಿ)(ಎಕೆಎಆರ್‌ಎಸ್)ನ ತುಮಕೂರು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಇದು ಜೀವ ಕಳೆಯುವವರೇ ಹೆಚ್ಚಿರುವ ಸಂದರ್ಭದಲ್ಲಿ, ಜೀವ ಉಳಿಸುವ ಕೆಲಸ ಮಾಡುವ ಮೂಲಕ ಸಮಾಜವನ್ನು ಬೆಸೆಯುವ ಮಾನವೀಯ,ಪುಣ್ಯದ ಕೆಲಸ ಎಂದರು. ನಾವು ಇನ್ನೊಬ್ಬರಿಗೆ ನೋವು ಬಯಸಿದರೆ, ದೇವರು ನಮಗೆ ಕೇಡು ಬಯಸುತ್ತಾನೆ ಎಂಬುದಕ್ಕೆ ನಮ್ಮ ನಡುವೆ ಹಲವಾರು ಉದಾಹರಣೆಗಳಿವೆ.ಜಾತಿ, ಧರ್ಮ, ಬಡವ, ಬಲ್ಲಿದನೆಂದು ನೋಡದೆ, ರೋಗಿಯ ಪ್ರಾಣ ಕಾಪಾಡಲು ಹಗಲು, ರಾತ್ರಿ ಎನ್ನದೆ ಶ್ರಮಿಸುವ ಅಂಬುಲೆನ್ಸ್  ಡ್ರೈವರ್ ಗಳು ಮಾನವೀಯ ಗುಣಗಳನ್ನು ಎಲ್ಲೆಡೆ ಪಸರಿಸುವ ಸಂದೇಶವಾಹಕರಾಗಿದ್ದಾರೆ.ಜೀವನ ಎಷ್ಟು ನಶ್ವರ ಎಂಬುದನ್ನು ಬಹಳ ಹತ್ತಿರದಿಂದ ಬಲ್ಲವರು ನೀವು.ಎರಡು ದಿನದ ಬದುಕಿಗೆ ಹೊಡೆದಾಡುವ…

Read More

ತುಮಕೂರು: ಹಣ, ಜಾತಿ ಬಿಟ್ಟು ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಬೇಕಾಗಿದೆ. ಶಿಕ್ಷಕರ ಸಂಘಟನೆಗಳ ನಡುವಿನ ಒಡಕನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್‌ಬಾಬು ಹೇಳಿದರು. ನಗರದ ಮಾರುತಿ ಮಹಾರಾಜ್ ಕನ್ವೆಷನ್ ಹಾಲ್ ಸಭಾಂಗಣದಲ್ಲಿ ರಮೇಶಬಾಬು ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ಮೀರಿ ಒಳ್ಳೆಯ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಾಗಿದೆ ಎಂದರು. ನಾನು ವಿಧಾನ ಪರಿಷತ್ ಸದಸ್ಯನಾಗಿ ನೇಮಕವಾಗಿದ್ದು, ಅವಕಾಶ ಸಿಕ್ಕಾಗಲೆಲ್ಲಾ ಶಿಕ್ಷಕರ ಪರವಾಗಿ ದ್ವನಿ ಎತ್ತಲಿದ್ದೇನೆ. ನನಗೆ ಅಭಿನಂದಿಸಲು ಶಿಕ್ಷಕರ ಸಂಘಟನೆಯವರು ಬೆಂಗಳೂರಿಗೆ ಬರುವುದು ಬೇಡ. ನಾನೇ ನಿಮ್ಮಲ್ಲಿಗೆ ಬರುತ್ತೇನೆ. ಅನೇಕ ಶಿಕ್ಷಕರು ಈ ಹಿಂದೆಯೂ ನನ್ನ ಜೊತೆ ಕೆಲಸ ಮಾಡಿದ್ದಾರೆ.ಈಗಲು ನಮ್ಮ ಜೊತೆ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು. ಎಂ.ಎಲ್.ಸಿ. ಸ್ಥಾನಕ್ಕಾಗಿ ನಾನು ದೆಹಲಿ ಪ್ರವಾಸ ಮಾಡಿದವನಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…

Read More

ತುಮಕೂರು: ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳದ ೮ನೇ ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ವೈಭವದಿಂದ ನೆರವೇರಿತು. ಅಲಂಕೃತ ಹೂವಿನ ಪಲ್ಲಕ್ಕಿಯಲ್ಲಿ ಬೃಹತ್ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮಂಗಳವಾದ್ಯ, ಕಲಾ ಮೇಳಗಳೊಂದಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ವಿಸರ್ಜನೆ ಮಾಡುವ ಕೆಎನ್‌ಎಸ್ ಕಲ್ಯಾಣಿವರೆಗೆ ಅದ್ದೂರಿ ಮೆರವಣಿಗೆ ಮಾಡಲಾಯಿತು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ, ಹೆಬ್ಬೂರು ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಅಟಿವಿ ಸುಕ್ಷೇತ್ರದ ಅಟವಿ ಮಲ್ಲಿಕಾರ್ಜುನ ಸ್ವಾಮೀಜಿ, ರೇವಣ್ಣಸಿದ್ಧೇಶ್ವರ ಮಠದ ಬಿಂದುಶೇಖರ ಒಡೆಯರ್ ಸ್ವಾಮೀಜಿ ಮತ್ತಿತರ ಗಣ್ಯರು ಗಣಪತಿಗೆ ಪೂಜೆ ಸಲ್ಲಿಸಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಹಿಂದೂ ಮಹಾಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಅಧ್ಯಕ್ಷ ಬಿ.ಎಸ್.ಮಂಜುನಾಥ್, ಉಪಾಧ್ಯಕ್ಷರಾದ ಮಹೇಂದ್ರ…

Read More