ತುಮಕೂರು: ನಗರದ ಟೂಡಾ ಕಚೇರಿ ಎದುರಿನ ಸಾಯಿಬಾಬಾ ನಗರದ ಶಿರಡಿ ಸಾಯಿಬಾಬಾ ಮಂದಿರದ ೧೪ನೇ ವಾರ್ಷಿಕೋತ್ಸವ ಸಮಾರಂಭ ಗುರುವಾರ ವೈಭವದಿಂದ ನೆರವೇರಿತು. ಇದರ ಅಂಗವಾಗಿ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಿ ಸಿಂಗರಿಸಲಾಗಿತ್ತು. ಬೆಳಿಗ್ಗೆ ಶಿರಡಿ ಸಾಯಿಬಾಬಾ ಮೂರ್ತಿಗೆ ಕಾಕಡ ಆರತಿ, ಮಂಗಳ ಸ್ನಾನ ನಂತರ ಮಹಾ ಮಂಗಳಾರತಿ, ಮಧ್ಯಾಹ್ನ ಸಾಮೂಹಿಕ ವಿಷ್ಣು ಸಹಸ್ರನಾಮ, ಸಾಯಿಬಾಬಾ ಅಷ್ಟೋತ್ತರ ಪಠಣ, ಸಂಜೆ ಧೂಪ ಆರತಿ, ರಾತ್ರಿ ತೇಜಾರತಿ ಮಾಡಲಾಯಿತು. ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಮಲ್ಲಿಕಾರ್ಜುನ್ ಮತ್ತು ತಂಡದವರಿAದ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮವಿತ್ತು. ಬೆಳಗಿನಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿರಡಿ ಸಾಯಿಬಾಬಾರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶಿರಡಿ ಸಾಯಿಬಾಬಾ ಮಂದಿರ ಟ್ರಸ್ಟ್ ಅಧ್ಯಕ್ಷ ನಟರಾಜ ಶೆಟ್ಟರು, ಟ್ರಸ್ಟ್ನಿಂದ ನಿರಂತರವಾಗಿ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಡ…
Author: News Desk Benkiyabale
ತುಮಕೂರು: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಅಭಿವೃದ್ಧಿ ಕೆಲಸಗಳನ್ನು ಮಾಡಿಸುವುದು ಎಂದರೆ ನನಗೆ ಇನ್ನಿಲ್ಲದ ಪ್ರೀತಿ ಎಂದು ಹೇಳಿದ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಮತ್ತು ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವಂತಹ ಸ್ವಭಾವ ನನ್ನದಲ್ಲ. ಹಿಡಿದ ಕೆಲಸವನ್ನು ನಿಗದಿತ ಕಾಲ ಮಿತಿಯಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆ ಗೊಳ್ಳುವವರೆಗೂ ಕೂಡ ಕಾಮಗಾರಿಯ ಹಿಂದೆ ಇರುತ್ತೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ತಿಳಿಸಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸಬಾ ಹೋಬಳಿ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ಇಂದು ರೂ೧೨ ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಶಾಸಕರಾದ ಬಿ. ಸುರೇಶ್ ಗೌಡ ಹಾಗೂ ಜ್ಯೋತಿಗಣೇಶ್ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ತುಮಕೂರು ಗ್ರಾಮಾಂತರ ಹಾಗೂ ನಗರ ವಿಧಾನಸಭಾ ಕ್ಷೇತ್ರಗಳನ್ನು ಸಂಪರ್ಕಿಸುವ ದೇವರಾಯಪಟ್ಟಣದಿಂದ ಮಾರನಾಯಕನಪಾಳ್ಯ ಮಾರ್ಗವಾಗಿ ಕುಂದೂರು, ಕುಂದೂರು ಕ್ರಾಸ್ ಗೆ ಸಂಪರ್ಕಿಸುವ ರಸ್ತೆಯನ್ನು ೧೦ ಕೋಟಿಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಇದರಲ್ಲಿ ನಗರ…
ತುಮಕೂರು: ಮೊದಲು ಮದ್ಯಪಾನ, ಧೂಮಪಾನ, ಇಂತವುಗಳನ್ನ ಬಿಡಿಸುವಂತಹ ಶಿಬಿರಗಳು ನಡೆಯುತ್ತಿದ್ದವು. ಇತ್ತೀಚೆಗೆ ಮೊಬೈ ಲ್ ಗೀಳಿನಿಂದ ಹೊರ ತರುವ ಶಿಬಿರಗಳು ಮುಂಬೈ, ಬೆಂಗಳೂರಿನಲ್ಲಿ ನಡೆಯುತ್ತಿವೆ. ಅಂತಹ ಶಿಬಿರಗಳಲ್ಲಿ ಮಕ್ಕಳು ಅದರಿಂದ ಗುಣವಾಗುತ್ತಾರೋ ಇಲ್ಲವೋ ತಿಳಿದಿಲ್ಲ ಆ ದರೆ ಇಂತಹ ಬಣ್ಣದ ಶಿಬಿರಗಳಲ್ಲಿ ಖಂಡಿತವಾಗಿ ಆ ಗೀಳಿನಿಂದ ಹೊರಗೆ ಬರುತ್ತಾರೆ. ಆದ್ದರಿಂದ ಈ ರೀತಿಯ ಶಿಬಿರಗಳ ಪ್ರಯೋಜನ ಪಡೆದುಕೊಂಡ ಪೋಷಕರೇ ಭಾಗ್ಯವಂತರು ಎಂದು ಕೇರಿಂಗ್ ವಿಥ್ ಕರ್ಸ್ ಸಂಸ್ಥಾಪಕರಾದ ಡಾ. ಪ್ರಸನ್ನ ಕುಮಾರ್ ಅಭಿಪ್ರಾಯಪಟ್ಟರು. ಇವರು ತುಮಕೂರು ತಾಲ್ಲೂಕಿನ ಮೆಳೇಹ ಳ್ಳಿಯ ವಿ. ರಾಮಮೂರ್ತಿ ರಂಗಸ್ಥಳದಲ್ಲಿ ಶನಿವಾ ರ ಸಂಜೆ ಡಮರುಗ ರಂಗ ತಂಡದ ಒಂದು ತಿಂಗಳ ಚಿಣ್ಣರ ಬಣ್ಣದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ರಾಷ್ಟಿçÃಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮಧುಸೂದನ್ ರಾವ್ ಮಾತನಾಡಿ, ಪುರಾ ಣವೊಂದರ ಎಳೆ ಇಟ್ಟುಕೊಂಡು ವರ್ತಮಾನದ ಸಮಸ್ಯೆಗಳನ್ನ ಮಕ್ಕಳಿಗೆ ಪರಿಚಯಿಸುತ್ತ, ಮಕ್ಕ ಳು ಸ್ಪಷ್ಟ, ನಿಖರ ಮತ್ತು ನಿರರ್ಗಳವಾಗಿ ಮಾತ ನಾಡುವಂತೆ ಮಾಡಲು ಶಾಲೆಯಲ್ಲಿ ಶಿಕ್ಷಕರು…
ಚಿಕ್ಕನಾಯಕನಹಳ್ಳಿ: ನನ್ನ ವಿಧಾನ ಸಭಾ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಪಡಿಸುವುದರೊಂದಿಗೆ ಇಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಅವರ ಸ್ವಂತ ಜೀವನ ರೂಪಿಸಿಕೊಂಡರೆ ಅದೇ ನನಗೆ ಹಾಗೂ ಈ ಕ್ಷೇತ್ರಕ್ಕೆ ಮತ್ತು ಪೋಷಕರಿಗೆ ನೀಡುವ ಗೌರವ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ಎಸ್.ಬಿ.ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ನಮ್ಮಗೆ ಪ್ರೇರಣೆ ನಮ್ಮ ಮೇಷ್ಟ್ರು ಎಂಬ ವಿಶೇಷ ಶಿರ್ಷಿಕೆಯಡಿಯಲ್ಲಿ ತಾಲ್ಲೂಕಿನ ೪೪ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿಯಲ್ಲಿ ೬೨೫ಕ್ಕೆ ೬೦೦ಕ್ಕು ಹೆಚ್ಚು ಅಧಿಕ ಅಂಕಗಳನ್ನು ಪಡೆದಿದ್ದು ಇವರ ಸಾಧನೆಗೆ ಪ್ರೇರಣಾದಾಯಿಗಳಾದ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಾಲ್ಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ,ಅನುದಾನರಹಿತ ಶಾಲೆಯ ಎಲ್ಲಾ ಶಿಕ್ಷಕರನ್ನೊಳಗೊಂಡ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಬಿಇಒ ನೇತೃತ್ವದಲ್ಲಿ ಉತ್ತಮವಾದ ಪ್ರೇರಣಾ ಶಿಬಿರಗಳೊಂದಿಗೆ ಮಕ್ಕಳ ಹಾಗೂ ಪೋಷಕರೊಂದಿಗೆ ಉತ್ತಮ ಬಾಂದ್ಯವನ್ನು ಇಟ್ಟುಕೊಂಡು ಈ ಬಾರಿ ನಮ್ಮ ಕ್ಷೇತ್ರದಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ೬೦೦ಕ್ಕು ಅಧಿಕ ಅಂಕಗಳನ್ನು…
ತುಮಕೂರು: ಗ್ಯಾರಂಟಿ ಯೋಜನೆಗಳ ಮೂಲಕ ಇದೂವರೆ ಸುಮಾರು ೬೦ ಸಾವಿರ ಕೋಟಿ ರೂ.ಗಳಿಂದ ರಾಜ್ಯದ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಸಹಾಯವಾಗುತ್ತದೆ ಎಂದು ಹೇಳಿದ ಪೌರಾಡಳಿತ ಮತ್ತು ವಕ್ಫ್ ಖಾತೆ ಸಚಿವ ರಹೀಮ್ ಖಾನ್, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರಿಗೆ ತಿರುಗೇಟು ನೀಡಿದರು. ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ವಿರೋಧಿಗಳು ಏನೇ ಹೇಳಿಕೊಳ್ಳಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಹಲವು ರೀತಿಯ ಸಹಾಯವಾಗಿದೆ. ಕುಟುಂಬದ ವಿವಿಧ ಖರ್ಚು, ಔಷಧಿ ಮತ್ತಿತರ ವೆಚ್ಚಕ್ಕೆ ಗೃಹಲಕ್ಷಿö್ಮ ಯೋಜನೆ ಹಣ ಉಪಯೋಗವಾಗುತ್ತಿದೆ. ಉಚಿತ ವಿದ್ಯುತ್ ಬಡವರ ಮನೆ ಬೆಳಗಿದೆ. ಶಕ್ತಿ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಇವೆಲ್ಲವೂ ಬಡವರಿಗೆ ಅನುಕೂಲವಾಗುವ ಕಾರ್ಯಕ್ರಮ ಎಂದರು. ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಮುಖ್ಯವಾಗಿ ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಒತ್ತು ನಿಡಲಾಗಿದೆ. ಅಶಾಂತಿ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಸರ್ಕಾರ ತಕ್ಷಣ…
ಸಿರಾ: ಆರೋಪಿ ಹರೀಶ್ ರವರು ನೊಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಿರಾ ಟೌನ್ ಪೊಲೀಸ್ ಠಾಣೆ ಮೋ. ನಂ ೪೩/೨೦೨೩ ಕಲಂ- ಇಲಂ:೩೭೬(೨)(ಟಿ) ಐಪಿಸಿ ಜೊತೆಗೆ ಕಲಂ-೬ Poಛಿso ಂಛಿಣ-೨೦೧೨ ಪ್ರಕರಣವನ್ನು, ಪ್ರಕಾಶ್.ಕೆ ಪೊಲೀಸ್ ಇನ್ಸ್ಪೆಕ್ಟರ್ ಶಿರಾ ನಗರ ಪೊಲೀಸ್ ಠಾಣೆಯ ರವರು ತನಿಖೆ ಕೈಗೊಂಡು ಪ್ರಕರಣದ ಆರೋಪಿಯಾದ ಹರೀಶ್.ಇ ಬಿನ್ ಈರಣ್ಣ, ೨೨ ವರ್ಷ, ಶಿರಾ ತಾಲ್ಲೂಕು ರವರನ್ನು ದಸ್ತಗಿರಿ ಮಾಡಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣವು ತುಮಕೂರು ಜಿಲ್ಲಾ ಈಖಿSಅ-೧ ನ್ಯಾಯಾಲಯದಲ್ಲಿ ಸ್ಪೇಷಲ್ ಸಿ.ಸಿ ನಂಬರ್-೨೯೩/೨೦೨೩ ರಲ್ಲಿ ವಿಚಾರಣೆ ನಡೆದು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಿನಾಂಕ-೦೮-೦೫-೨೦೨೫ ರಂದು ಪ್ರಕರಣದ ಆರೋಪಿ ಹರೀಶ್ ರವರಿಗೆ ೪೦ ವರ್ಷ ಜೈಲು ಶಿಕ್ಷೆ ಹಾಗೂ ೨ ಲಕ್ಷದ ೫೦ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿರುತ್ತದೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಆಶಾ.ಕೆ.ಎಸ್ ರವರು ವಾದ ಮಂಡಿಸಿರುತ್ತಾರೆ.…
ಚಿಕ್ಕನಾಯಕನಹಳ್ಳಿ :ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಗಣಿ ಬಾದಿತ ಪ್ರದೇಶಾಭಿವೃದ್ದಿ ಹಣದಲ್ಲಿ ತಾಲ್ಲೂಕಿಗೆ ಹಂಚಿಕೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ ಅಭಿವೃದ್ದಿ ಪಡಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಗೃಹ ಮಂತ್ತಿ ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ ರೇಷ್ಮೆ , ಪಶು ಸಂಗೋಪನೆ ಇಲಾಖೆಗಳು ಸೇರಿದಂತೆ ಶಿಕ್ಷಣ ಇಲಾಖೆಗಳು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಲು ಸೂಚನೆ ನೀಡಿದ ಅವರು ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾಗಿರುವಂತಹ ಬಿತ್ತನೆ ಬೀಜ, ರಸಗೊಬ್ಬರದ ಸಮಸ್ಯೆ ಬಾರದಂತೆ ಕ್ರಮವಹಿಸವಂತೆ ತಿಳಿಸಿದರು, ಆಹಾರ ಇಲಾಖೆಯಿಂದ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು, ಈ ತಾಲ್ಲೂಕಿಗೆ ಭದ್ರಮೇಲ್ದಂಡೆ, ಎತ್ತಿನಹೊಳೆ, ಹೇಮಾವತಿ ಮೂರು ನೀರಾವರಿ ಯೋಜನೆಗಳಿದ್ದು ಅವುಗಳು ಸಮಪರ್ಕವಾಗಿ ಆಗಬೇಕಾಗಿದ್ದು ಈ…
ತುಮಕೂರು: ರಾಜಕೀಯ ಅಧಿಕಾರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗವಾಗಿದ್ದು, ರಾಜಕೀಯ ಅಧಿಕಾರಕ್ಕಾಗಿ ಅವಕಾಶ ವಂಚಿತ ಎಲ್ಲ ತಳಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಪಾದಿಸಿದ್ದಾರೆ ನಗರದ ಏಂಪ್ರೆಸ್ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ನ ಜಿಲ್ಲಾ ಶಾಖೆವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ೩೯೮ ನೇ ಜಯಂತೋತ್ಸವ ಹಾಗು ಕೆಕೆಎಂಪಿಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಪಿ.ಜಿ.ಆರ್.ಸಿಂಧ್ಯ,ಮೋರೆ ಅವರನ್ನು ಬಿಟ್ಟರೆ ಉಳಿದಂತೆ ಮರಾಠ ಸಮುದಾಯದಲ್ಲಿ ರಾಜಕೀಯ ಧರೀಣರಿಲ್ಲ. ಹಿಂದೆ ಬೆಳಗಾವಿ ಭಾಗದಿಂದ ಸುಮಾರು ಐದರಿಂದ ಆರು ಜನರು ವಿಧಾನಸಭೆಗೆ ಆಯ್ಕೆಯಾಗುತಿದ್ದರು.ಆದರೆ ಪರಿಸ್ಥಿತಿ ಬದಲಾಗಿದೆ.ರಾಜಕಾರಣದಲ್ಲಿ ಮಾರಾಠಿಗರ ಪ್ರಾತಿನಿಧ್ಯ ಕಡಿಮೆಯಾಗಿದೆ. ಹಾಗಾಗಿ ರಾಜಕೀಯ ಅಧಿಕಾರ ವಂಚಿತ ಎಲ್ಲಾ ಸಮುದಾಯಗಳು ಒಗ್ಗೂಡುವ ಅಗತ್ತವಿದೆ ಎಂದರು. ಮರಾಠ ಎಂದರೆ ಧೈರ್ಯ, ಸಹಾಸ,ಆತ್ಮಗೌರವಕ್ಕೆ ಹೆಸರು ವಾಸಿಯಾದ ಸಮುದಾಯ. ದೇಶ ಮತ್ತು ರಾಜ್ಯಕ್ಕೆ ಇವರ ಕೊಡುಗೆ ಅಪಾರ. ಈ ಇತಿಹಾಸವನ್ಬು ನಮ್ಮ ಯುವ ಪಿಳೀಗೆಗೆ ಪರಿಚಯೀಸುವ ಕೆಲಸ ಆಗಬೇಕಿದೆ.ಅಲ್ಲದೆ ಇತ್ತೀಚಿನ ದಿನಗಳಲ್ಲಿ ರಾಜ್ಯ…
ತುಮಕೂರು: ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರವನ್ನು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ನಗರ ವೀರಶೈವ ಸಮಾಜದ ವತಿಯಿಂದ ಬೆಂಬಲಿಸಿ ನಗರದ ಭದ್ರಮ್ಮ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಹೋಮ, ಹವನ ಹಾಗೂ ಪೂಜೆಯನ್ನು ನೆರವೇರಿಸಿ, ಭಾರತೀಯ ಸೈನ್ಯಕ್ಕೆ ಹೆಚ್ಚಿನ ಶಕ್ತಿ ತುಂಬುವAತೆ ಪ್ರಾರ್ಥಿಸಲಾಯಿತು. ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿಯ ಕಾರದ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ದೇಶದ ಒಳಿತಿಗಾಗಿ ಹೋರಾಡುತ್ತಿರುವ ಸೈನಿಕರ ಆರೋಗ್ಯಕ್ಕಾಗಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಲಾಯಿತು. ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಯಿತು. ದುಷ್ಟರ ಸಂಹಾರಕ್ಕಾಗಿ ಮಹಾಗಣಪತಿ ಹೋಮ, ಜಯಾಧಿಹೋಮ, ಶೋಭ ರಹಿತ ಹೋಮ ಸೇರಿದಂತೆ…
ತುಮಕೂರು: ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಅವರಿಂದು ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತಿಪಟೂರು ಜನಸ್ಪಂದನ ಟ್ರಸ್ಟ್ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಡಿಗ್ರಿ ಕಾಲೇಜು ವಿದ್ಯಾಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಏರ್ಪಡಿಸಲಾಗಿದ್ದ ಸಂವಿಧಾನ ಅರಿವು ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈಗ ನಮ್ಮ ಸಂವಿಧಾನವನ್ನು ರಕ್ಷಣೆ ಮಾಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ, ಸಂವಿಧಾನದಲ್ಲಿ ಸಮಾನತೆ ಕೊಟ್ಟಿರುವುದರಿಂದ ಒಂದು ಧರ್ಮದಂತೆ ಸಮಾಜ ನಡೆಯಬೇಕು ಎಂದು ಮನುವಾದ ಪ್ರತಿಪಾದಿಸುತ್ತಿದ್ದವರು ಈ ಸಂವಿಧಾನವನ್ನು ವಿರೋಧ ಮಾಡಿದರು. ಮನುಸ್ಮೃತಿ ಆಶಯದವರು ಕೆಲವರು ಮಾತ್ರ ವಿದ್ಯೆ, ಸಂಪತ್ತು, ಅಧಿಕಾರ ಅನುಭವಿಸಬೇಕು ಎಂದು ಸಮಾನತೆ ನೀಡದೆ ಲಿಂಗ ತಾರತಮ್ಯ ಇರಬೇಕು ಎಂದುಕೊAಡು ಸಂವಿಧಾನದ ಮೂಲ ಆಶಯಕ್ಕೆ ವಿರೋಧಿಗಳಾಗಿದ್ದಾರೆ ಎಂದರು. ಸಂವಿಧಾನದಲ್ಲಿ ಜಾತ್ಯತೀತೆ ಹೇಳುತ್ತಿದ್ದು, ಸಮಾನವಾಗಿ ಬದುಕಬೇಕು ಎಂದು ಸಂವಿಧಾನ…










