ಪಾವಗಡ: ತಾಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿಯಲ್ಲಿನ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಗೆ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಹಲವಾರು ಮೂಲ ಸೌಲಭ್ಯದಿಂದ ನರಳುತ್ತಿದ್ದು, ಸ್ಥಳದಲ್ಲಿದ್ದು ಯೋಜನೆಯನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕಾದ ಪಿಡಿಓ ಹಾಗೂ ಸಿಬ್ಬಂದಿಯವರು ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರಿಂದ ಗ್ರಾಮ ಸ್ಥರಿಗೆ ದಿಕ್ಕು ತೋಚದಂತಾಗಿದೆ. ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂ ಟರ್ ಆಪರೇಟರ್ ಬಡ್ತಿ ಪಡೆದು ಬೇರೊಂದು ಪಂಚಾಯಿತಿಗೆ ವರ್ಗಾವಣೆಯಾಗಿದ್ದಾರೆ, ಇಲ್ಲಿಯ ವರೆಗೂ ಕಂಪ್ಯೂಟರ್ ಆಪರೇಟರ್ ಅನ್ನು ನೇಮಿಸಿ ಕೊಂಡಿಲ್ಲ, ಇದರಿಂದಾಗಿ ಇ ಖಾತೆ, ನರೇಗಾ ಸೇರಿದಂತೆ ಹಲವು ಕೆಲಸಗಳನ್ನು ಮಾಡಲು ಸಾಧ್ಯ ವಾಗುತ್ತಿಲ್ಲ, ಇಲ್ಲಿನ ಸದಸ್ಯರ ಹೊಂದಾಣಿಕೆಯ ಕೊರತೆಯಿಂದಾಗಿ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಚೇರಿಗೆ ಬರುತ್ತಿಲ್ಲ ಎಂದು ತಿಳಿದು ಬಂದಿದೆ. ಪ್ರಭಾರ ಪಿ.ಡಿ.ಒ ರವರು ವಾರಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ಬರುತ್ತಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಟಾನಗೊಂಡರೆ…
Author: News Desk Benkiyabale
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾ ರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ ಸ್ಪರ್ಧಿ ಸಲು ತಯಾರಾಗಿ ಮುನ್ನುಗ್ಗಿ ಆಗಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದಲ್ಲಿನ ಡಾ. ಜಿ.ಪಿ ನೆಕ್ಸಾಸ್ ಸಭಾಂ ಗಣದಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದಿಂದ ಆಯೋಜಿಸಿದ್ದ ಉದ್ಯಮಶೀಲತಾ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಸಾಧಿಸಲು ಸಾಕಷ್ಟು ಅವಕಾಶಗಳಿವೆ ಆ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ತಮ್ಮ ಗುರಿಯನ್ನು ತಲುಪಲು ಸಾಧ್ಯ. ಹಾಗಾಗಿ ನಿಮ್ಮ ಗರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಾಹೇ ವಿಶ್ವವಿದ್ಯಾಲಯದ ಕುಲಪತಿಗಳ ಆಪ್ತ ಸಲಹೆಗಾರರಾದ ವಿವೇಕ್ ವೀರಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳೂ ಉದ್ಯಮಿಗಳಾಗಲು ಪ್ರಯತ್ನಿಸಿ ಹಾಗೂ ಇದಕ್ಕೆ ಬೇಕಾದ ಮಾರ್ಕೆಟಿಂಗ್ ಸ್ಕಿಲ್ಸ್, ಸಂವಹನ ಕೌಶಲ್ಯವನ್ನು ಬೆಳೆಸಿಕೊಂಡು ನಿಮ್ಮ ಗುರಿಗಳತ್ತ ಮುನ್ನಡೆಯಿರಿ. ಪ್ರತಿಯೊಂದು ಆವಿಷ್ಕಾರಗಳಾಗಿರುವುದು ಅವಶ್ಯಕತೆಗಳು ಬಂದಾಗ ಮಾತ್ರ. ಹಾಗಾಗಿ…
ತುಮಕೂರು: ರಾಷ್ಟçದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ ೩೦೦೦ ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆAಟ್ ಹೋಮ್ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬAಧಿಸಿದAತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು. ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು ೧೮ ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು. ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು.…
ತುಮಕೂರು: ಇಂಡಿಯಾ-ಪಾಕಿಸ್ತಾನ್ ಯುದ್ಧ ಸಂದರ್ಭ ದಲ್ಲಿ ಜಿಲ್ಲೆಯ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಸೇವೆಗಾಗಿ ಹಾಟ್ ಲೈನ್ ಸಹಾಯ ವಾಣಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊ ಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾರತ ಸಂಚಾರ ನಿಗಮದ ಎಜಿಎಂ ಆನಂದಿ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂ ಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾನುವಾರ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಹಾಗೂ ತಾಲೂಕು ಕಚೇರಿಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಈ ಸಹಾಯವಾಣಿ ಕೇಂದ್ರಗಳು ದಿನದ ೨೪ ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸಬೇಕು. ಸಹಾಯವಾಣಿ ಕೇಂದ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿ ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಆಸ್ಪತ್ರೆ ಹಾಗೂ ಇನ್ನಿತರ ತುರ್ತು ಸೇವೆಯ ಕೇಂದ್ರಗಳಲ್ಲಿ ಅವಶ್ಯಕತೆ ಇರುವ ಎಲ್ಲಾ ಸಾಮಗ್ರಿಗಳನ್ನು ಖರೀದಿಸಿ ಇಟ್ಟುಕೊಳ್ಳಬೇಕು ಹಾಗೂ ತುರ್ತು ಪರಿಸ್ಥಿತಿ ಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮತ್ತು ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡಲು ಕ್ರಮ…
ತುಮಕೂರು: ಆಡಳಿತ ಮಂಡಳಿಯ ಆರ್ಥಿಕ ಶಿಸ್ತು, ಬದ್ಧತೆ, ಆತ್ಮವಿಶ್ವಾಸದಿಂದ ಸಹಕಾರ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲು ಸಾಧ್ಯವಿದೆ. ಠೇವಣಿದಾರರು ಸಂಸ್ಥೆಯಲ್ಲಿ ಹೂಡಿರುವ ಹಣವನ್ನು ಲಾಭದಾಯಕವಾಗಿ ಬೆಳೆಸುವ ನಂಬಿಕೆ, ವಿಶ್ವಾಸ ಗಳಿಸಿಕೊಳ್ಳಬೇಕು ಎಂದು ಹಿರೇಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಲಹೆ ಮಾಡಿದರು. ನಗರದಲ್ಲಿ ಶನಿವಾರ ತುಮಕೂರು ಸಿಟಿ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ೧೩ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ವಾರ್ಷಿಕ ಸಭೆಗಳು ಆ ಸಹಕಾರ ಸಂಸ್ಥೆಯ ಹಿಂದಿನ, ಈ ಸಾಲಿನ ಹಾಗೂ ಮುಂದಿನ ವರ್ಷದ ಸಾಧನೆ ನೋಟ, ಆಡಳಿತ ಮಂಡಳಿಯ ಆತ್ಮಾವಲೋಕನಾ ಸಭೆ. ಸದಸ್ಯರ, ಗ್ರಾಹಕರ, ಠೇವಣಿದಾರರ ನಂಬಿಕೆ, ವಿಶ್ವಾಸ ಮೂಡಿಸುವ ಸಾಧನೆ ಆಗಬೇಕು ಎಂದು ಹೇಳಿದರು. ದುಡ್ಡಿನ ಜೊತೆಗಿನ ಸಂಬAಧ, ವ್ಯವಹಾರ ಸೂಕ್ಷö್ಮವಾದದ್ದು, ಹಣಕಾಸು ಸಂಸ್ಥೆಯನ್ನು ಬಹಳ ಎಚ್ಚರಿಕೆಯಿಂದ, ಜವಾಬ್ದಾರಿಯಿಂದ ಹೆಗಲ ಮೇಲೆ ಹೊತ್ತು ನಿರ್ವಹಿಸಬೇಕಾಗುತ್ತದೆ. ಈ ಸಂಸ್ಥೆ ಅಂತಹ ಜವಾಬ್ದಾಯೊಂದಿಗೆ ಪ್ರಗತಿ ಸಾಧಿಸುತ್ತಿದೆ. ಸಂಸ್ಥೆ ಕಟ್ಟುವಲ್ಲಿ ಎಡವಿದರೆ ಎಲ್ಲರಿಗೂ ನಷ್ಟ, ಹಾನಿ ಅನುಭವುಸಬೇಕಾಗುತ್ತದೆ ಎಂದು ಎಚ್ಚರಿಕೆ…
ಹುಳಿಯಾರು: ಕಳೆದ ಮರ್ನಲ್ಕು ವರ್ಷಗಳಿಂದಲೂ ಹುಳಿಯಾರು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರೂ ಸ್ಪಂಧಿಸಿಲ್ಲ. ಈ ವರ್ಷ ಬಿಸಿಲಿನ ಝಳ ಹೆಚ್ಚಾಗಿದ್ದು ಈ ಬೇಸಿಗೆಯಲ್ಲಾದರೂ ದಾಹ ತಣಿಸಲು ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಪ್ರಯಾಣಿಕರು ಹುಳಿಯಾರು ಪಟ್ಟಣ ಪಂಚಾಯ್ತಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮನವಿ ಮಾಡಿದ್ದಾರೆ. ಹುಳಿಯಾರು ಮೈಸೂರು, ಚಿತ್ರದುರ್ಗ, ಹಾಸನ, ಬೆಂಗಳೂರು, ಹೊಸದುರ್ಗ, ಬಳ್ಳಾರಿ ಹೀಗೆ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುತ್ತದೆ. ಹಾಗಾಗಿ ಹುಳಿಯಾರು ಬಸ್ ನಿಲ್ದಾಣಕ್ಕೆ ಸಸ್ತಾçರು ಜನರು ನಿತ್ಯ ಬಂದೋಗುತ್ತಾರೆ. ಅಲ್ಲದೆ ಶಾಲಾಕಾಲೇಜಿಗೆ ಮಕ್ಕಳು, ಆಸ್ಪತ್ರೆಗಳಿಗೆ ರೋಗಿಗಳು, ಬ್ಯಾಂಕ್ಗಳಿಗೆ ವೃದ್ಧರು, ಅಂಗವಿಕಲರು, ವ್ಯಾಪಾರ ವಹಿವಾಟಿಗೆ ಸಹ ಇಲ್ಲಿಗೆ ಜನರು ಬರುತ್ತಾರೆ. ಆದರೆ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ನಾನಾ ಕಡೆಯಿಂದ ಬಸ್ ಹಿಡಿಯಲು ಆಗಮಿಸಿದ ಪ್ರಯಾಣಿಕರಿಗೆ ನೀರಿನ ಬವಣೆಯ ಬಿಸಿ ತಟ್ಟಿದೆ. ಈ ಬಸ್ ನಿಲ್ದಣದಲ್ಲಿ ಮುದ್ದಹನುಮೇಗೌಡರು ಸಂಸದರಾಗಿದ್ದ ಸಂದರ್ಭದಲ್ಲಿ ಶುದ್ದ ನೀರಿನ ಘಟಕ ನಿರ್ಮಿಸಿದ್ದರು. ಆದರೆ…
ತುಮಕೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮೇ ೫ ರಿಂದ ಪರಿಶಿಷ್ಟ ಜಾತಿಯ ಉಪಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯವು ಕೆಲ ತಾಲೂಕುಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷಾ ಕಾರ್ಯ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಡಿಡಿಪಿಐಗಳಿಗೆ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಗ್ರ ಪರಿಶಿಷ್ಟ ಜಾತಿ ಉಪಜಾತಿಯ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಗಣತಿದಾರರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸಮೀಕ್ಷೆಯನ್ನು ನಡೆಸಬೇಕು. ನೋಡಲ್ ಅಧಿಕಾರಿಗಳು ಪ್ರತಿ ದಿನಗಳಿಗೊಮ್ಮೆ ಸಮೀಕ್ಷೆ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿದಿನ ಗಣತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗಣತಿದಾರರಿಗೆ ಮಾರ್ಗದರ್ಶನ ನೀಡಬೇಕು ಎಂದು ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ಯಾವುದೇ ಗೊಂದಲಗಳುAಟಾಗದAತೆ ನಡೆಸಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕು. ನೆಟ್ವರ್ಕ್ ಸಮಸ್ಯೆ…
ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಇದೇ ಮೇ ೨೫ ರಂದು ನಡೆಯಲಿರುವ ಸ್ಲಂ ಜನರ ಹಬ್ಬ, ಸಮಾವೇಶ ಮತ್ತು ಪ್ರತಿಭಾಪುರಸ್ಕಾರದ ಕರಪತ್ರ ಬಿಡುಗಡೆ ಮಾಡಲಾಯಿತು. ನಗರದ ಸೂಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್ ರಮೇಶ್ ಕರಪತ್ರ ಬಿಡುಗಡೆ ಮಾಡಿ ಪ್ರತಿಯೊಂದು ಸ್ಲಂಗಳು ಪುಟ್ಟ ಭಾರತ ಇಲ್ಲಿರುವ ಬಹುತ್ವಯುತ ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರ, ಜಾತಿ, ಧರ್ಮ, ಭಾಷೆಗಳಿದ್ದರು ಸ್ಲಂಗಳಲ್ಲಿ ಸೋದರತೆಯ ಸೌಹಾರ್ಧತೆಯಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವುದು ಇಂದಿನ ಮನುಷ್ಯ ಸಮಾಜಕ್ಕೆ ಮಾದರಿಯಾಗಿದೆ. ಕಳೆದ ೨೦ ವಷಗಳಲ್ಲಿ ಕರ್ನಾಟಕದ ನಗರ ಪ್ರದೇಶಗಳಲ್ಲಿ ಕೆಳಜಾತಿಯ ಬಡ ಜನರು ವಾಸಿಸುವ ಕೊಳಚೆ ಪ್ರದೇಶಗಳಲ್ಲಿರುವ ಶ್ರಮ ಸಂಸ್ಕೃತಿ ಹಲವಾರು ಪಲ್ಲಟನೆಗಳನ್ನು ತಂದಿದ್ದು ಶ್ರಮಿಕರ ಸಾಂಸ್ಕೃತಿಕತೆಯನ್ನು ಬೆಸೆಯುತ್ತಿದ್ದು ೨೦೦೭ರಲ್ಲಿ ಪ್ರಾರಂಭಿಸಲಾದ ಸ್ಲಂ ಹಬ್ಬ ಸ್ಲಂ ನಿವಾಸಿಗಳಿಗೆ ನಗರದ ಮೇಲಿನ ಉತ್ತರದಾಯಕತ್ವಕ್ಕಾಗಿ ಮತ್ತು ಸಾಂಸ್ಕೃತಿಕ ನೆಲೆಗಾಗಿ ತಳಸಮುದಾಯಗಳನ್ನು ಕಲೆಗಳ ಅನಾವರದಿಂದಾಗಿ ನಗರ ಪ್ರದೇಶಗಳಲ್ಲಿರುವ ಅಭಿವೃದ್ಧಿ ತಾರತಮ್ಯ, ಅಸಮಾನತೆಗಳನ್ನು ನಗರ ವಂಚಿತ ಸಮುದಾಯಗಳು…
ತುಮಕೂರು: ಮನುಷ್ಯನನ್ನು ಕಾಡುತ್ತಿರುವ ಅನೇಕ ಗಂಬೀರ ಕಾಯಿಲೆಗಳಿಗೆ ಇಂದಿನ ತಾಂತ್ರಿಕ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳು ಉತ್ತರ ನೀಡಿವೆ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ.ಲಿಂಗೇಗೌಡ ಅವರು ತಿಳಿಸಿದರು. ನಗರದ ಸಮೀಪದ ನೆಲಮಂಗಲ ಸಮೀಪದ ಟಿ.ಬೇಗೂರಿನ ಶ್ರೀ ಸಿದ್ದಾರ್ಥ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ನಲ್ಲಿ ಇಂದು (ಮೇ.೯)ಸಾಹೇ ವಿಶ್ವವಿದ್ಯಾಲಯ, ಕಾಲೇಜಿನ ಆತಂರಿಕ ಗುಣಮಟ್ಟ ಘಟಕ ಹಾಗೂ ಕರ್ನಾಟಕ ಆರೋಗ್ಯ ಇಲಾಖೆ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ‘ನಿರಂತರ ವೈದ್ಯಕೀಯ ಶಿಕ್ಷಣ’ ಎಂಬ ಘೋಷ ವಾಕ್ಯದೊಂದಿಗೆ ‘ಆಧುನಿಕ ವೈದ್ಯಕೀಯ ಕೌಶಲ್ಯ ಪರಿಪಕ್ವತೆ ಸಂಶೋಧನಾ ವಿಧಾನಗಳು’ ವಿಷಯ ಕುರಿತು ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ಶಿಕ್ಷಣ ನೀಡಬೇಕು ಎಂಬ ಎಪ್ಪತ್ತರ ದಶಕದ ಕನಸು ಕಂಡಿದ್ದ ಓರ್ವ ಸಾಮಾನ್ಯ ಶಾಲಾ ಶಿಕ್ಷಕ ಗಂಗಾಧರಯ್ಯನವರು ಕನಸಿನಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಯನ್ನು ಮುಗಿಲು ಎತ್ತರಕ್ಕೆ ಕಟ್ಟಿ ಬೆಳೆಸಿರುವ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ್ ಅವರು ಉತ್ತಮವಾದ…
ತುರುವೇಕೆರೆ: ಅಕ್ರಮ ಕಲ್ಲುಗಣಿಗಾರಿಕೆ ನೆಡೆಸುತ್ತಿರುವ ಕ್ರಷರ್ ಮಾಲೀಕರ ವಿರುದ್ಧ ಜಿಲ್ಲಾ, ತಾಲೂಕು ಆಡಳಿತ ಕೂಡಲೇ ಕ್ರಮ ಕೈಗೊಂಡು ಕ್ರಷರ್ ಯಂತ್ರ ತೆರವುಗೊಳಿಸದಿದ್ದರೆ ರೈತರೇ ತೆರವುಗೊಳಿಸಲು ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಆರಾದ್ಯ ಎಚ್ಚರಿಸಿದರು. ತಾಲೂಕಿನ ಕೋಳಘಟ್ಟ ಗ್ರಾಮದ ಸರ್ವ ನಂಬರ್ ನಲ್ಲಿ ನೆಡೆಯುತ್ತಿರುವ ಕಲ್ಲು ಗಣಿಗಾರಿಕೆ ಕ್ರಷರ್ ಮಾಲೀಕನ ವಿರುದ್ದ ಗ್ರಾಮಸ್ಥರು ನೆಡೆಸುತ್ತಿರುವ ಆಹೋ ರಾತ್ರಿ ಪ್ರತಿಭಟನೆ ಹೋರಾಟದಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿದ ಅವರು ಈ ಭಾಗದ ರೈತರಿಗೆ ಮಾರಕವಾಗಿರುವ ಕಲ್ಲು ಕ್ರಷರ್ ಸ್ಥಗಿತಗೊಳಿಸುವಂತೆ ಸುಮಾರು ದಿನಗಳಿಂದ ಕೋಳಘಟ್ಟ ಭಾಗದ ಗ್ರಾಮದ ರೈತರು ಹೋರಾಟ ಮಾಡುತ್ತಿದ್ದರು ಜಿಲ್ಲಾ ಹಾಗೂ ತಾಲೂಕು ಆಡಳಿತ, ದಂಡಿನಶಿವರ ಪೋಲೀಸರು ಮತ್ತು ಗಣಿಗಾರಿಕೆ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಎಲ್ಲ ಅಧಿಕಾರಿಗಳು ಯಾವುದೋ ಅಮಿಷಕ್ಕೆ ಒಳಗಾಗಿ ಕ್ರಷರ್ ಮಾಲೀಕನ ಜೊತೆ ಶಾಮೀಲಾಗಿರುವ ಅನುಮಾನ ಮೂಡುತ್ತಿದೆ. ಕ್ರಷರ್ ಮಾಲೀಕ ಸರ್ಕಾರಿ ಗೋಮಾಳದಲ್ಲಿ ಕ್ರಷರ್ ಯಂತ್ರ ಹಾಗೂ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಸರ್ವೆಯಲ್ಲಿ…










