Author: News Desk Benkiyabale

ತುಮಕೂರು: ಗೃಹಿಣಿಯಾಗಿಯೇ, ತನ್ನಕುಟುಂಬವನ್ನುತಿದ್ದಿ, ತೀಡಿ, ಸಮಾಜದಲ್ಲಿಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುವ ಮೂಲಕ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ, ಭಾರತೀಯಗೃಹಿಣಿಯರಿಗೆ ಮಾದರಿಯಾಗಿದ್ದಾರೆಎಂದುತುಮಕೂರು ತಹಶೀಲ್ದಾರ್ ರಾಜೇಶ್ವರಿಅಭಿಪ್ರಾಯಪಟ್ಟಿದ್ದಾರೆ. ನಗರದಡಾ.ಗುಬ್ಬಿ ವೀರಣ್ಣಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾರೆಡ್ಡಿಜನಸಂಘ(ರಿ), ವತಿಯಿಂದ ಆಯೋಜಿಸಿದ್ದ ಹೇಮರೆಡ್ಡಿ ಮಲ್ಲಮ್ಮಜಯಂತಿಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದಅವರು,ಹೇಮರೆಡ್ಡಿ ಮಲ್ಲಮ್ಮ, ವಿಜ್ಞಾನಿಯಾಗಿರಲಿಲ್ಲ, ವೈದ್ಯರಾಗಿರಲಿಲ್ಲ. ರಾಣಿಯಾಗಿರಲಿಲ್ಲ. ಶಿಕ್ಷಕರು ಅಲ್ಲ, ಆದರುಅವರನ್ನು ನಾವು ಇಂದು ಪೂಜ್ಯನೀಯ ಭಾವನೆಯಿಂದ ನೋಡುತ್ತಿದ್ದೇವೆಎಂದರೆ, ಅವರು ಸಂಸಾರಿಕ ಜೀವನದಲ್ಲಿಇದ್ದುಕೊಂಡೇ ಸಂತರರೀತಿ ಬದುಕಿದವರು.ಪಾಮರನಾಗಿದ್ದ ಪತಿಯನ್ನು ಪಂಡಿತನಾಗಿಸಿದ್ದಲ್ಲದೆ,ಲೋಪಪನಾಗಿದ್ದ ಮೈದುನ ವೇಮನನ್ನು ತಪಸ್ವಿಯಾಗಿಸಿದ್ದು ಈಕೆಯದೊಡ್ಡ ಸಾಧನೆಎಂದರು. ಸಾAಸಾರಿಕಜೀವನದಲ್ಲಿಎಲ್ಲರಿಗೂಅತ್ತೆ, ನಾದಿನಿಯರ ಕಾಟ ಇದ್ದದ್ದೇ, ಆದರೆಅವೆಲ್ಲವನ್ನು ಮೀರಿ, ತನ್ನ ಸಹನೆ, ತಾಳ್ಮೆ, ಪ್ರೀತಿಯಿಂದ ಮಲ್ಲಿಕಾರ್ಜುನನ್ನೇ ಒಲಿಸಿಕೊಂಡ ಮಹಾನ್ ಸಾದ್ವಿ ಹೇಮರೆಡ್ಡಿ ಮಲ್ಲಮ್ಮ.ಜೀವನದಲ್ಲಿ ನಡೆದಅಹಿತಕರಘಟನೆಯನ್ನೇ ನೆಪಮಾಡಿಕೊಂಡುಕೊರಗೆದೆ, ಅದರ ಹೊರಬರಲುಆಧ್ಯಾತ್ಮದ ಮೊರೆ ಹೋಗಿ,ಇಡೀ ಮಹಿಳಾ ಕುಲಕ್ಕೆ ಕಳಸ ಪ್ರಾಯರಾಗಿದ್ದಾರೆ.ಸ್ವಾರ್ಥವಿಲ್ಲದಅವರ ನಡೆಇಡೀಗೃಹಿಣಿಯರಿಗೆ ಮಾದರಿಯಾದುದ್ದುಎಂದು ತಹಶೀಲ್ದಾರ್ ರಾಜೇಶ್ವರಿ ನುಡಿದರು. ಕಸಾಪ ಜಿಲ್ಲಾಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ,ಅವಿಭಕ್ತಕುಟುಂಬದಓರ್ವ ಸೊಸೆಯಾಗಿ,ತನಗಾದಎಲ್ಲಅವಮಾನ, ಅಪಮಾನಗಳನ್ನು ಸಹಿಸಿಕೊಂಡು, ಸಮಾಜದಎದುರುಕುಟುಂಬದಘನತೆಯನ್ನುಎತ್ತಿ ಹಿಡಿದಕೀರ್ತಿ…

Read More

ತುಮಕೂರು: ಭಾರತ ಪಾಕ್ ನಡುವಿನ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ತುಮಕೂರು ರೈಲ್ವೆ ನಿಲ್ದಾಣದಲ್ಲಿ ವಿದ್ವಂಸಕ ಕೃತ್ಯ ತಪಾಸಣಾ ತಂಡವು ನಿರಂತರವಾಗಿ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದೆ. ಅಲ್ಲದೆ ತುಮಕೂರು ನಗರದ ಪ್ರಮುಖ ಜನನಿ ಬಿಡ ಪ್ರದೇಶಗಳಾದ ಪ್ರವಾಸಿ ಮಂದಿರ, ಬಸ್ ನಿಲ್ದಾಣ, ಮಾಲ್ ಗಳು ಸೇರಿದಂತೆ ಅನೇಕ ಕಡೆಗಳಲ್ಲಿ ನೆನ್ನೆಯಿಂದ ನಿರಂತರವಾಗಿ ತಪಾಸಣೆ ನಡೆಸುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಜನರ ಬಳಿ ಜಾಗೃತಿ ಮೂಡಿಸುತ್ತಿದೆ. ವಿದ್ವಂಸಕ ಕೃತ್ಯಗಳ ಕುರಿತು ಸುಳಿವು ದೊರೆತರೆ ತಕ್ಷಣ ಸಮೀಪದ ಪೊಲೀಸ್ ಸಿಬ್ಬಂದಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಅಲ್ಲದೆ ಕಟ್ಟೆಚ್ಚರ ವಹಿಸುವಂತೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಮುಂದಾಗ ಬೇಕಿದೆ ಎಂದು ಹೇಳುತ್ತಿದ್ದಾರೆ. ನಿನ್ನೆಯಿಂದ ನಿರಂತರವಾಗಿ ತುಮಕೂರು ನಗರದಲ್ಲಿಡೆ ಪೊಲೀಸ್ ಸಿಬ್ಬಂದಿಗಳು ಭಾರೀ ಅಲರ್ಟ್ ಆಗಿದ್ದಾರೆ.

Read More

ತುಮಕೂರು: ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಜನರ ಆತ್ಮಕ್ಕೆ ಶಾಂತಿ ಕೋರಿ, ಹಾಗೆಯೇ ಉಗ್ರರ ವಿರುದ್ದ ದಾಳಿಗೆ ಮುಂದಾಗಿರುವ ಭಾರತೀಯ ಸೇನೆ ವಿಜಯ ಸಾಧಿಸಲಿ ಎಂದು ಇಂದು ಮುಸ್ಲಿಂ ಬಾಂಧವರು ನಗರದ ಮೆಕ್ಕಾ ಮಸೀದಿ ಸೇರಿದಂತೆ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಮುತ್ತುವಲ್ಲಿಗಳ ನೇತೃತ್ವದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವಕ್ಫ್ ಮತ್ತು ಅಲ್ಪಸಂಖ್ಯಾತರ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ಕರೆಯ ಮೇರೆಗೆ ರಾಜ್ಯದಲ್ಲಿ ಶುಕ್ರವಾರದ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ದೇಶದ ಸೇನಗೆ ನೈತಿಕ ಬೆಂಬಲ ಕೋರಿ, ಹಾಗೂ ಯುದ್ದದಲ್ಲಿ ಭಾರತೀಯ ಸೇನೆಗೆ ವಿಜಯ ಲಭಿಸಲಿ ಎಂದು ಕೋರಿದರು. ಈ ವೇಳೆ ಮಾತನಾಡಿದ ಅಲ್ಪಸಂಖ್ಯಾತ ಮುಖಂ ಡರಾದ ತಾಜುದ್ದೀನ್ ಷರಿಫ್,ಭಾರತದಲ್ಲಿರುವ ಮುಸ್ಲಿಂರಿಗೆ ಭಾರತವೇ ತಾಯ್ನಾಡು.ದೇಶ ಮೊದಲು ಹಾಗಾಗಿ ಪಾಕಿಸ್ಥಾನದೊಂದಿಗೆ ಆರಂಭ ಗೊಂಡಿರುವ ಯುದ್ದದಲ್ಲಿ ಭಾರತದ ಸೇನೆ ವಿಜಯ ಸಾಧಿಸುವುದರ ಜೊತೆಗೆ, ಪೆಹಲ್ಗಾಮ್ ದಾಳಿಯಲ್ಲಿ ಮೃತರ ಆತ್ಮಕ್ಕೆ ಶಾಂತಿ ದೊರಕಿಸಲು, ಪ್ರವಾಸಿಗರ ಮೇಲೆ ದಾಳಿ ನಡೆಸಿದ ಎಲ್ಲಾ ಉಗ್ರರನ್ನು…

Read More

ಹುಳಿಯಾರು:  ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆಯಾಗಿದೆ. ಯಾವ ಮಳಿಗೆಯವರು ಎಷ್ಟು ಬಾಡಿಗೆ ಕಟ್ಟಿದ್ದಾರೆ, ಎಷ್ಟು ಬಾಕಿ ಉಳಿದಿದೆ ಎನ್ನುವ ಯಾವ ನಿಖರ ಮಾಹಿತಿಯೂ ಇಲ್ಲಿ ಲಭ್ಯವಿಲ್ಲ. ಬರೋಬ್ಬರಿ ಐವತ್ತಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿಂದ ಮಾಸಿಕ ಲಕ್ಷಾಂತರ ರೂ.ಬಾಡಿಗೆ ಸಂಗ್ರಹವಾಗುವ ಹಣಕಾಸಿನ ವಹಿವಾಟಿನ ಪುಸ್ತಕ ಇಲ್ಲದಿರುವುದು ಅವ್ಯವಹಾರ ನಡೆಯುತ್ತಿರುವ ಅನುಮಾನವನ್ನು ಹುಟ್ಟುಹಾಕಿದೆ. ಹುಳಿಯಾರು ಪಂಚಾಯ್ತಿಯ ಪ್ರಮುಖ ಆದಾಯ ಮೂಲವೇ ಐವತ್ತಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು. ಬರೋಬ್ಬರಿ ೪೦ ವರ್ಷಗಳಿಂದ ಈ ಮಳಿಗೆಗಳನ್ನು ವಿವಿಧ ವ್ಯಾಪಾರಕ್ಕೆ ಬಾಡಿಗೆ ಕೊಟ್ಟಿದ್ದಾರೆ. ಈ ಮಳಿಗೆಗಳ ಬಾಡಿಗೆ ಎಷ್ಟು, ಯಾವ ಸಭೆಯಲ್ಲಿ ಬಾಡಿಗೆ ನಿಗದಿ ಮಾಡಲಾಯಿತು. ಯಾವ ಮಾಹೆಯಲ್ಲಿ ಯಾರು ಎಷ್ಟು ಬಾಡಿಗೆ ಕಟ್ಟಿದ್ದಾರೆ. ಎಷ್ಟು ಬಾಡಿಗೆ ಬಾಕಿ ಉಳಿದಿದೆ ಎನ್ನುವ ನಿಖರ ಮಾಹಿತಿಯ ಡಿಸಿಬಿ ಪುಸ್ತಕ ಪಂಚಾಯ್ತಿಯಲ್ಲಿ ನಿರ್ವಹಿಸಬೇಕಿದೆ. ಆದರೆ ಒಬ್ಬೊಬ್ಬರು ಬಿಲ್ ಕಲೆಕ್ಟರ್‌ಗಳು ತಮ್ಮತಮ್ಮ ಅವಧಿಯಲ್ಲಿ ಒಂದೊAದು ಪುಸ್ತಕ ಇಟ್ಟಿದ್ದಾರೆ. ಅದರಲ್ಲಿ ಬಾಡಿಗೆದಾರರು ಬ್ಯಾಂಕ್‌ನಲ್ಲಿ ಕಟ್ಟಿದ ಅಥವಾ ಬಿಲ್ ಕಲೆಕ್ಟರ್…

Read More

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.೧೩ ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು, ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯ ಪ್ರತಿಕಾರವಾಗಿ ಭಾರತ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವುದು ಪಾಕಿಸ್ಥಾನ ಮತ್ತು ಭಾರತದ ನಡುವೆ ಯುದ್ದದ ವಾತಾವರಣ ನಿರ್ಮಾಣವಾಗಿದೆ.ಎರಡು ದೇಶಗಳ ನಡುವೆ ನಡೆಯುತ್ತಿರುವ ಕ್ಷಿಪಣ್ಣಿ ಮತ್ತು ಯುದ್ದ ವಿಮಾನಗಳ ಶೆಲ್ ದಾಳಿಯಿಂದ ಉಗ್ರರ ನೆಲೆಗಳು ದ್ವಂಶಗೊAಡಿವೆ. ಇಂತಹ ಸಂದರ್ಭದಲ್ಲಿ ಭಾರತೀಯರೆಲ್ಲರೂ ಸೈನಿಕರೊಂದಿಗೆ ನಿಲ್ಲಬೇಕಾಗಿದೆ. ಹಾಗಾಗಿ ಮೇ.೧೩ರ ಕಾರ್ಯಕ್ರಮವನ್ನು ಮುಂದೂಡಿದ್ದು,ದೇಶದಲ್ಲಿ ವಾತಾವರಣ ತಿಳಿಗೊಂಡ ನಂತರ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಅಭಿನಂದನಾ ಸಮಿತಿ ತಿಳಿಸಲಿದೆ ಎಂದರು. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾಧಕರು ದಾಳಿ…

Read More

ತುಮಕೂರು: ಕಣ್ಣು ದೇಹದ ಪ್ರಮುಖ ಅಂಗ ಮತ್ತು ಸೂಕ್ಷö್ಮ ಅಂಗ,ಅದನ್ನು ಚೆನ್ನಾಗಿ ಕಾಪಾಡಿಕೊಳ್ಳಿ,ಗೃಹರಕ್ಷಕರು ನಮ್ಮ ದೇಶದ ಆಸ್ತಿ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ,ಹಗಲು ರಾತ್ರಿ ಪೋಲೀಸರೊಂದಿಗಿದ್ದು ಸಮಾಜವನ್ನು ಕಾಪಾಡುವ ಜೀವಗಳು ಆದ್ದರಿಂದ ಅವರ ಕಣ್ಣನ್ನು ನಾವು ಕಾಪಾಡುವುದು ನಮ್ಮ ಜವಾಬ್ದಾರಿ,ಗೃಹರಕ್ಷಕರು ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು ಪ್ರತಿ ವರ್ಷಕ್ಕೊಮ್ಮೆ ಎಲ್ಲರೂ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು,ರೋಗ ಇರಲಿ ಇಲ್ಲದಿರಲಿ ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಪ್ರತಿ ವರ್ಷಕ್ಕೊಮ್ಮೆ ದೇಹ,ಕಣ್ಣು,ಇತರೆ ಎಲ್ಲ ಅಂಗಾAಗಗಳ ತಪಾಸಣೆ ಮುಖ್ಯ, ವೈದ್ಯರ ಸಲಹೆಯಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘ(ಎನ್.ಜಿ.ಓ)ದ ಅಧ್ಯಕ್ಷ ರಾದ ರಮೇಶ್ ರವರು ತಿಳಿಸಿದರು. ಅಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘ(ಎನ್.ಜಿ.ಓ)ದ ಕಾರ್ಯದರ್ಶಿ ಶ್ರೀಮತಿ ಗೀತಾನಾಗೇಶ್ ರವರು ಮಾತನಾಡುತ್ತಾ ಪೋಲೀ ಸರು ನಮ್ಮ ಸಮಾಜಕ್ಕೆ ಎಷ್ಟು ಮುಖ್ಯವೋ ಗೃಹ ರಕ್ಷಕರು ಸಹ ಅಷ್ಟೇ ಮುಖ್ಯ,ಗೃಹರಕ್ಷಕರು ಸದಾ ಒತ್ತಡದಲ್ಲಿರುತ್ತಾರೆ ಕಾನೂನು ಸುವ್ಯವಸ್ಥೆ ಕಾಪಾಡಲು ಅವರ ಕೊಡುಗೆ ಸಮಾಜಕ್ಕೆ ಅತ್ಯಂತ ಅವಶ್ಯ ಮತ್ತು ದೊಡ್ಡದು,ಈ ನಿಟ್ಟಿನಲ್ಲಿ ಅವರು ಆಸ್ಪತ್ರೆಗೆ…

Read More

ತುರುವೇಕೆರೆ:  ಜಲ ಜೀವನ್ ಮಿಷನ್ ಆಡಿಯಲ್ಲಿ ತಾಲೂ ಕಿನ ದಬ್ಬೇಘಟ್ಟ ಹೋಬಳಿ ತಂಡಗ ಹಾಗೂ ಸೋಪ್ಪನಹಳ್ಳಿ ಗ್ರಾಮಗಳಲ್ಲಿ ಮನೆಮನೆ ಗಂಗಾ ಯೋಜನೆ ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಬುಧುವಾರ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ದಬ್ಬೇಘಟ್ಟ ಹೋಬಳಿ ತಂಡಗ ಗ್ರಾಮದಲ್ಲಿ ಗ್ರಾಮಾಭಿವೃದ್ದಿ ಹಾಗೂ ಪಂಚಾ ಯತ್‌ರಾಜ್ ವಿಶೇಷ ಯೋಜನೆಯಡಿಯಲ್ಲಿ ಅಂದಾಜು ವೆಚ್ಚ ೮೦ಲಕ್ಷ ಹಾಗೂ ಸೋಪ್ಪನಹಳ್ಳಿ ಗ್ರಾಮದಲ್ಲಿ ಅಂದಾಜು ೪೪.೨೩ ಲಕ್ಷ ವ್ಯಚ್ಚದಲ್ಲಿನ ಕಾಮಗಾರಿಗಳಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ದಬ್ಬೇಘಟ್ಟ ಹೋಬಳಿ ಕೋಳಾಲ ಕೆರೆಯ ಕೋಡಿ ಹಳ್ಳಕ್ಕೆ ಹೇಮಾವತಿ ಎಡದಂಡೆ ನಾಲಾ ವಿಭಾಗದಿಂದ ಸುಮಾರು ೪೬.೫೬ ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಗ್ರಾಮೀ ಣ ಭಾಗದ ಜನರಿಗೆ ಮನೆಯ ಬಳಿಗೆ ಶುದ್ದ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರದ ಇದೋಂದು ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಗ್ರಾಮೀಣ ಭಾಗದ ಜನರು ಇದರ ಸದೂಪಯೋಗ ಪಡಿಸಿಕೊಳ್ಳಬೇಕು. ಈಗಾಗಲೇ ತಾಲ್ಲೂಕಿನ ೨೫೦ಕ್ಕು ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿಲಾಗಿದೆ.…

Read More

ತುಮಕೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯದಲ್ಲಿ ನಡೆದಿರುವ ಸಮೀಕ್ಷೆಯಲ್ಲಿ ಮನೆಗೆ ಬರುವ ಸಮೀಕ್ಷೆ ಅಧಿಕಾರಿಗಳಿಗೆ ಜಿಲ್ಲೆಯ ಲಂಬಾಣಿ ಸಮುದಾಯದವರು ತಪ್ಪದೇ ಬಂಜಾರ(ಲAಬಾಣಿ) ಎಂದು ನಮೂದಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವ ನಾಯ್ಕ ಮನವಿ ಮಾಡಿದರು. ನಗರದ ಮರಳೂರುದಿಣ್ಣೆಯ ಬಂಜಾರ ಭವನದಲ್ಲಿ ಗುರುವಾರ ನಡೆದ ಮುಖಂಡರ ಸಭೆಯಲ್ಲಿ ಸೇವಾಲಾಲ್ ಹಾಗೂ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಂಜಾರ ಸಮುದಾಯದವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ನಮಗೆ ನಿರ್ದಿಷ್ಟ ಕುಲಕಸುಬು ಇಲ್ಲ, ಕೂಲಿನಾಲಿ ನಂಬಿ ಬದುಕುತ್ತಿರುವವರು. ಈ ಪರಿಸ್ಥಿತಿಯಲ್ಲಿ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆಯಲು ಸಮುದಾಯದವರು ತಮ್ಮದೇ ಸಮೀಕ್ಷೆಯಲ್ಲಿ ಭಾಗವಹಿಸಿ ನಿಖರವಾದ ಮಾಹಿತಿಯನ್ನು ನೊಂದಾಯಿಸುವAತೆ ಕೋರಿದರು. ತಾಂಡಾದ ನಾಯಕ, ಡಾವೋ, ಕಾರಬಾರಿ, ಗ್ರಾಮ ಪಂಚಾಯ್ತಿ ಸದಸ್ಯರು, ವಿದ್ಯಾವಂತರು ಮುಂದೆ ನಿಂತು ಸಮೀಕ್ಷಾ ಕಾರ್ಯದಲ್ಲಿ ಸಹಕರಿಸಿ ನಮ್ಮ ಸಮುದಾಯದವರನ್ನು ಸಮೀಕ್ಷೆಯಲ್ಲಿ ನೋಂದಣಿ ಮಾಡಿಸಬೇಕು. ಸಮೀಕ್ಷೆಯಲ್ಲಿ ಜನಸಂಖ್ಯೆ, ಕುಟುಂಬಗಳ ಸಂಖ್ಯೆ, ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ,…

Read More

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ೧೩೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು. ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ ನೂತನ ಕಟ್ಟಡ ವಿನ್ಯಾಸದ ನೀಲನಕ್ಷೆ ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಚರ್ಚಿಸಿದ ಅವರು, ಪ್ರಸ್ತುತ ಇರುವ ಜಿಲ್ಲಾಸ್ಪತ್ರೆಯ ಕಟ್ಟಡವು ೭೮ ವರ್ಷ ಹಳೆಯದಾಗಿದ್ದು, ಆಧುನೀಕರಿಸಲು ಸಾಧ್ಯವಿಲ್ಲ. ಕಟ್ಟಡದ ಹಲವು ಭಾಗಗಳು ಶಿಥಿಲಗೊಳ್ಳುತ್ತಿವೆ. ಅಲ್ಲದೆ ಹಳೆಯ ಕಟ್ಟಡದ ಮೇಲೆ ಮೇಲಂತಸ್ತುಗಳ ನಿರ್ಮಾಣ ಸಾಧ್ಯವಿಲ್ಲದೆ ಇರುವುದರಿಂದ ನೂತ ನವಾಗಿ ಸುಸಜ್ಜಿತ ಹಾಗೂ ಆಧುನಿಕವಾದ ೩೦೦ ಹಾಸಿಗೆಗಳ ಕಟ್ಟಡವನ್ನು ನಿರ್ಮಿಸಲು ಉದ್ದೇ ಶಿಸಲಾಗಿದೆ ಎಂದು ತಿಳಿಸಿದರು. ಕಟ್ಟಡ ಕಾಮಗಾರಿಯನ್ನು ಗಣಿಬಾಧಿತ ಪ್ರದೇ ಶಗಳ ಸಮಗ್ರ ಪುನಃಶ್ಚೇತನ ಯೋಜನೆಯಡಿ ಕೈಗೊಳ್ಳಲಾಗುವುದು. ಕಾಮಗಾರಿ ಕೈಗೊಳ್ಳುವ ಮುನ್ನ ಬೇರೆ ಜಿಲ್ಲೆಯಲ್ಲಿ ಆಧುನಿಕವಾಗಿ ನಿರ್ಮಿ ಸಿರುವ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರಲ್ಲದೆ,…

Read More

ತುಮಕೂರು: ಗುರುವಾರ ಬೆಳಗ್ಗೆ ೧೧:೦೦ ಗಂಟೆಯ ಸಮಯದಲ್ಲಿ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಪುರುಷೋತ್ತಮ ಎಂ.ಎಲ್,( ಅಪರಾಧ) ಕೆ.ಎಸ್.ಪಿ.ಎಸ್ ರವರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ. ಗೋಪಾಲ್ ರವರ ಕಡೆಯಿಂದ ಅಧಿಕಾರ ವಹಿಸಿಕೊಂಡರು. ಇವರು ಈ ಹಿಂದೆ ಬೆಂಗಳೂರು ನಗರ,ಚಿಕ್ಕಬಳ್ಳಾಪುರ, ಮಾಗಡಿ,ಸಿಐಡಿ, ಲೋಕಾಯುಕ್ತ, ಎಸಿಬಿ ಹಾಸನ ಗಳಲ್ಲಿ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ.

Read More