Author: News Desk Benkiyabale

ತುಮಕೂರು: ಹಾಂಗ್ ಕಾಂಗ್ ವಿಶ್ವವಿದ್ಯಾಲಯ ಹಾಗೂ ಸ್ಥಳೀಯ ಹಾಂಗ್ ಕಾಂಗ್ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಹಾಂಗ್ ಕಾಂಗ್‌ನಲ್ಲಿ ಆಯೋಜಿಸಲಾಗಿದ್ದ ‘ಮಲ್ಟಿ-ಕಲ್ಚರಲ್ ಅಂಡ್ ಗ್ಲೋಬಲ್ ಡೈವರ್ಸಿಟಿ ಪ್ರಾಜೆಕ್ಟ್’ ಅಂತರರಾಷ್ಟಿçÃಯ ಸಾಂಸ್ಕೃತಿಕ ವೇದಿಕೆಯಲ್ಲಿ ತುಮಕೂರಿನ ಪ್ರತಿಷ್ಠಿತ ಕಲಾಸಂಸ್ಥೆ ಸ್ವರವಿ ಆರ್ಟ್ಸ್ ಫೌಂಡೇಶನ್ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ, ಗಮನ ಸೆಳೆದಿದೆ. ಹಾಂಗ್‌ಕಾ0ಗ್ ವಿಶ್ವವಿದ್ಯಾಲಯದ ಪ್ರಸಿದ್ಧ ರೇಸನ್ ಹುವಾಂಗ್ ರಂಗಮAದಿರದಲ್ಲಿ ಆಯೋಜನೆಯಾದ ಈ ಕಾರ್ಯಕ್ರಮದಲ್ಲಿ, ಸ್ವರವಿ ತಂಡವು ಕರ್ನಾಟಕದ ಶಾಸ್ತ್ರೀಯ ಕಲಾ ಪ್ರಕಾರವಾದ ಭರತನಾಟ್ಯಕ್ಕೆ ವಿಶೇಷ ಒತ್ತು ನೀಡಿ, ಕಲೆಯ ಔನ್ನತ್ಯತೆ ಹಾಗೂ ವೈಶಿಷ್ಟ್ಯತೆಯನ್ನು ಪ್ರಪಂಚದ ಎದುರು ಪ್ರದರ್ಶಿಸಿತು. ಕರ್ನಾಟಕದ ಹೆಮ್ಮೆಯ ಜಾನಪದ ಕಲೆಯಾದ ಯಕ್ಷಗಾನದ ರೋಮಾಂಚಕ ಪ್ರಸ್ತುತಿಯೊಂದಿಗೆ ಅವರು ಪ್ರೇಕ್ಷಕರನ್ನು ಮತ್ತಷ್ಟು ಆಕರ್ಷಿಸಿದರು. ತಂಡವು ನೀಡಿದ ಎರಡೂವರೆ ಗಂಟೆಗಳ ಅತ್ಯುತ್ತಮ ಪ್ರದರ್ಶನದಲ್ಲಿ, ಸಂವಾದಕ ಭರತನಾಟ್ಯ ಹಾಗೂ ಜನಪದ ಕಾರ್ಯಾಗಾರಗಳು ಸಹ ಸೇರಿದ್ದವು. ಈ ಪ್ರದರ್ಶನಕ್ಕೆ ಕಲಾವಿದರಿಗೆ ಉತ್ತಮ ಬೆಂಬಲದ ಪ್ರತಿಕ್ರಿಯೆ ದೊರೆಯಿತು. ಕಾರ್ಯಕ್ರಮದಲ್ಲಿ ಭಾರತದ ಹಾಂಗ್‌ಕಾAಗ್ ಕಾನ್ಸುಲೇಟ್‌ನ ಕೌನ್ಸುಲ್ ಶ್ರೀಮತಿ ಸುರಭಿ…

Read More

ತುಮಕೂರು: ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾ ರ್ಥ ದಂತ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಕೃತಕ ದಂತ ಚಿಕಿತ್ಸಾ ವಿಭಾಗದ ವೈದ್ಯರ ತಂಡ ವಿಶ್ವ ಬಾಯಿ ಆರೋಗ್ಯ ದಿನದ ಅಂಗವಾಗಿ ನಗರದ ಶ್ರೀ ಶಾರದಾಂಬ ಟ್ರಸ್ಟ್ ನಡೆಸುತ್ತಿರುವ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ಉಚಿತ ದಂತ ತಪಾಸಣೆ ಮತ್ತು ದಂತ ಜೋಡಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಅನಾಥಾಶ್ರಮದ ಆವರಣದಲ್ಲಿ ನಡೆದ ವಿಶ್ವ ಬಾಯಿ ಆರೋಗ್ಯದಿನದ ಕಾರ್ಯಕ್ರಮದಲ್ಲಿ ಕೃತಕ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ, ಪ್ರತಿ ವರ್ಷ ವಿಶ್ವ ಬಾಯಿಯ ಆರೋಗ್ಯ ದಿನವು ಉತ್ತಮ ಸಾಮಾನ್ಯ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಮೌಖಿಕ ನೈರ್ಮಲ್ಯದ ಪ್ರಾಮುಖ್ಯತೆಯ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಪ್ರತಿ ಯೊಬ್ಬರು ತಮ್ಮ ಮೌಖಿಕ ಆರೋಗ್ಯದ ಜವಾಬ್ದಾರಿಯನ್ನು ನಿರ್ವಹಿಸಿಕೊಳ್ಳಬೆಕು. ಮೌಖಿಕ ಆರೋಗ್ಯ ಮತ್ತು ಸಾಮಾನ್ಯ ಆರೋಗ್ಯವು ಪರಸ್ಪರ ಸಂಬAಧ ಹೊಂದಿದೆ ಎಂದರು. ಬಾಯಿ ಆರೋಗ್ಯ ಎಂದರೆ ಆತ್ಮವಿಶ್ವಾಸ ಹೆಚ್ಚಿಸುವುದು, ಆರೋಗ್ಯ ಕಾಪಾಡಿಕೊಳ್ಳುವುದು. ದಿನಕ್ಕೆ ೨ ಬಾರಿ ಹಲ್ಲುಜ್ಜಿ, ಫ್ಲೋಸಿಂಗ್…

Read More

ಚಿಕ್ಕನಾಯಕನಹಳ್ಳಿ: ಟೀಕಿಸುವವರು ಟೀಕಿಸಲಿ ಜನರಿಗೆ ಮಾತ್ರ ಮನೆ ಮಗ ಮನೆ ಬಾಗಿಲಿಗೆ ಕಾರ್ಯಕ್ರಮ ವಿಶ್ವಾಸ ಮೂಡಿಸಿದೆ ಜನರ ಬಳಿಯೇ ತಾಲ್ಲೂಕು ಆಡಳಿತಾಧಿಕಾರಿಗಳು ಹೋಗಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುತ್ತಿರುವುದು ಶ್ಲಾಘನೀಯವಾಗಿದ್ದು ಇದರೊಂದಿಗೆ ಇನ್ನು ತ್ವರಿತವಾಗಿ ಕೆಲಸಗಳು ನಡೆಯಲಿ ಎಂಬ ಕಾರಣಕ್ಕೆ ನಮ್ಮ ಸಿ.ಬಿ.ಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಲ್ಯಾಬ್ ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಚಿಕ್ಕನಾಯಕನಹಳ್ಳಿ ವಿಧಾನ ಸಭಾಕ್ಷೇತ್ರದ ಎಲ್ಲಾ ಗ್ರಾಮಪಂಚಾಯಿತಿಗಳ ಅಭಿವೃದ್ದಿ ಅಧಿಕಾರಿಗಳಿಗೆ ಸಿ.ಬಿ.ಎಸ್ ಟ್ರಸ್ಟ್ ವತಿಯಿಂದ ಲ್ಯಾಬ್ ಟಾಪ್ ವಿತರಣೆ ಮಾಡಿ ಮಾತನಾಡಿದ ಅವರು ನಮ್ಮ ಸಿ.ಬಿ.ಎಸ್.ಚಾರಿಟಬಲ್ ಟ್ರಸ್ಟ್ ವತಿಯಿಂದ ಆರೋಗ್ಯ ಹಾಗೂ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತದ ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ವಾರದಲ್ಲಿ ಎರಡು ದಿನಗಳ ಕಾಲ ಕೈಜೊಡಿಸಿ ಯಾವುದೇ ಜಾತಿ, ಪಕ್ಷ, ಬೇದ ಬಾವ ಇಲ್ಲದೇ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸನವ್ನು ಮಾಡಲಾಗುತ್ತಿದೆ…

Read More

ಚಿಕ್ಕನಾಯಕನಹಳ್ಳಿ: ದಿನೇ ದಿನೇ ಹೆಚ್ಚುತ್ತಿರುವಂತಹ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರವಾಗಿ ಶಿಸ್ತುಬದ್ದವಾಗಿ ಅಧ್ಯಯನ ನಡೆಸಿ ಅರ್ಥೈಹಿಸಿಕೊಂಡು ಪರೀಕ್ಷೆಗಳನ್ನು ಹೆದರಿಸಿದರೆ ಖಂಡಿತವಾಗಿಯೂ ಸಾಧನೆ ಮಾಡಲು ಸಾದ್ಯ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದಲ್ಲಿ ಅವರ ಗೃಹಕಚೇರಿಯ ಸಭಾಂಗಣದಲ್ಲಿ   ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿ,  ಕೃಷಿ ಕೊಟಾ ಅಡಿಯಲ್ಲಿ  ಹಲವಾರು ಕೋರ್ಸ್ ಗಳಿಗೆ ಸೇರ ಬಯಸುವ ವಿಧ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್ನ ವತಿಯಿಂದ ಕಳೆದ ಮೂರುದಿನಗಳಿಂದ ನಡೆದ ಪ್ರಾಯೋಗಿಕ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ಅವರು ತಂದೆತಾಯಿಗಳಿಗೆ ಹೊರೆಯಾಗದಂತೆ ಉತ್ತಮ ವಾಗಿ ಅದ್ಯಯನ ನಡೆಸಿ ನಿರಂತರ ಕಲಿಕೆಯನ್ನು ರೂಢಿಸಿಕೊಳ್ಳಿ ಸರ್ಕಾರಿ ಕೋಟಾದಡಿ ಸೀಟುಗಳನ್ನು ತೆಗೆದುಕೊಂಡು ನಿಮ್ಮ ಮುಂದಿನ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ ಇರುವಂತಹ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ  ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತಹ ತರಬೇತಿ ಇದಾಗಲೆಂದೆ ನುರಿತ ಹಾಗೂ ಅತ್ಯುನ್ನತವಾದ ಅಂತಹ ಸಂಪನ್ಮೂಲನ ವ್ಯಕ್ತಿಗಳಿಂದ ನಿಮಗೆ ತರಬೇತಿ ನೀಡಿಸಲಾಗಿದೆ ಇ೯ದರಿಂದ ನೀವುಗಳು…

Read More

ತುಮಕೂರು: ನಡೆ ನುಡಿಯಲ್ಲಿ ಒಂದಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯನವರು ತ್ರಿಕರಣ ಶುದ್ಧಿ ಏನು ಅನ್ನುವುದನ್ನು ಅವರ ಬದುಕಿನಿಂದ ಕಲಿಯಬಹುದು. ಮಾತಿನಲ್ಲಾಗಲೀ, ನಡತೆಯಲ್ಲಾಗಲೀ ಎಂದೂ ಅಶೌಚಕ್ಕೆ ಆಸ್ಪದ ಕೊಟ್ಟವರಲ್ಲ. ಬಹಳ ವರ್ಷಗಳಿಂದ ಅವರು ಸ್ವತಂತ್ರವಾಗಿ ನಡೆಯಲಾರದ ಸ್ಥಿತಿಯಲ್ಲಿದ್ದವರು. ೯೫ ವರ್ಷಗಳ ಸಾರ್ಥಕ ಬದುಕನ್ನು ಸವೆಸಿದ ಜಿ.ಎಸ್.ಸಿದ್ದಲಿಂಗಯ್ಯನವರು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲುವಿಕೆ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ನಾಡಿನ ಪ್ರಸಿದ್ಧ ಸಾಹಿತಿ ಡಾ. ಎಸ್.ಪಿ.ಪದ್ಮಪ್ರಸಾದ್ ನುಡಿದರು. ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಕಸಾಪ ಸಂಚಾಲಕರಾದ ಕೆ.ಎಸ್.ಉಮಾಮಹೇಶ್ ಮಾತನಾಡಿ ಮಧುಗಿರಿಯಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದರೂ ಅವರಿಗೆ ಅಖಿಲ ಭಾರತ ಮಟ್ಟದ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪದವಿ ಒದಗಿ ಬರದೆ ಇದ್ದುದು ವಿಷಾದನೀಯ ಸಂಗತಿ ಎಂದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಜಿ.ಸಿದ್ಧರಾಮಯ್ಯ ಮಾತನಾಡಿ ಜಿ.ಎಸ್.ಸಿದ್ದಲಿಂಗಯ್ಯನವರು ಸಿದ್ಧಗಂಗಾ ಮಠದೊಂದಿಗೆ ಉತ್ತಮ ಬಾಂಧವ್ಯವನ್ನು…

Read More

ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ ೪ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆಯ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಆರೋಗ್ಯಾ ಧಿಕಾರಿ ಹಾಗೂ ಮತ್ತಿತರ ಅಧಿಕಾರಿಗಳ ತಂಡ ದೊಂದಿಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಅವರು ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರೊಂದಿಗೆ ಆಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಹಾಗೂ ಶುಚಿ-ರುಚಿಯನ್ನು ಪರಿಶೀಲಿಸಿದರು. ಇತರೆ ಹೋಟೆಲ್‌ಗಳಿಗಿಂತ ಭಿನ್ನ ರೀತಿಯಲ್ಲಿ ಕಾಣಿಸುವಂತೆ ಇಂದಿರಾ ಕ್ಯಾಂಟೀನ್‌ಗಳನ್ನು ಸೌಂದರ್ಯೀಕರಣಗೊಳಿಸಲಾಗಿದೆ. ಪ್ರಸ್ತುತ ಇರುವ ೪ ಇಂದಿರಾ ಕ್ಯಾಂಟೀನ್‌ಗಳೊAದಿಗೆ ಶಿರಾಗೇಟ್ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ೨ ಹೊಸದಾಗಿ ಅನು ಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ. ಮುಂದಿನ ೨ ವಾರಗಳಲ್ಲಿ ಹೊಸ ಇಂದಿರಾ ಕ್ಯಾಂಟೀ ನ್‌ಗಳಲ್ಲಿ ಉತ್ತಮ ಗುಣಮಟ್ಟದ ಶುಚಿ-ರುಚಿಯಾದ ವಿತರಣೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿಗೆ ೫ ರೂ. ಹಾಗೂ ಊಟಕ್ಕೆ ೧೦ ರೂ.ಗಳ ದರ ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.

Read More

ತುಮಕೂರು: ಜಿಲ್ಲೆಯಲ್ಲಿ ೨೬೫ ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಕಡ್ಡಾಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಉರ್ದು ಭಾಷೆ ಬಲ್ಲ ಕಾರ್ಯಕರ್ತೆಯರನ್ನು ನೇಮಕ ಮಾಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಬೇಕು. ೧ನೇ ತರಗತಿಗೆ ದಾಖಲಾದ ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಮುಂದುವರೆಸಿ ೧೦ನೇ ತರಗತಿವರೆಗೂ ವ್ಯಾಸಂಗ ಮಾಡುತ್ತಿರುವ ಬಗ್ಗೆ ನಿಗಾವಹಿಸಬೇಕು ಎಂದು ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಮ್ಮ ಅವರಿಗೆ ನಿರ್ದೇಶನ ನೀಡಿದರು. ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ…

Read More

ತುಮಕೂರು: ದೇವರಾಜ ಅರಸು, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಅಹಿಂದ ವರ್ಗಗಳ ನಾಯಕರ ಸ್ಥಾನ ತುಂಬಿರುವ ಕೆ.ಎನ್.ರಾಜಣ್ಣ ಅವರ ೭೫ನೇ ಹುಟ್ಟು ಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ,  ಅಹಿಂದ ಮತ್ತು ಶೋಷಿತ ಸಮುದಾಯಗಳ ಪಾಲಿಗೆ ಸ್ವಾಭಿಮಾನದ ಹಬ್ಬವಾಗಿದ್ದು, ಎಲ್ಲಾ ಶೋಷಿತ ಸಮುದಾಯಗಳ ಜನರು ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ವಿರೂಪಾಕ್ಷ ಡ್ಯಾಗೇರಹಳ್ಳಿ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಅವರು ತಮ್ಮ ೫೦ ವರ್ಷಗಳ ರಾಜಕೀಯ ಜೀವನದಲ್ಲಿ ತಬ್ಬಲಿ ಸಮುದಾಯಗಳ ನೋವು, ನಲಿವುಗ ಳಲ್ಲಿ ಭಾಗಿಯಾಗಿದ್ದಾರೆ.ದ್ವನಿ ಯಿಲ್ಲದ ಸಮುದಾ ಯಗಳ ದ್ವನಿಯಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಅಹಿಂದ ವರ್ಗಗಳು ಬಯಸುತ್ತೇವೆ.ರಾಜಕಾರಣದ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಮತ್ತು ಬಡವರ ಪರವಾಗಿ ಕೆಲಸ ಮಾಡಿದ್ದಾರೆ.ಹಾಗಾಗಿ ಅವರ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯ ಕ್ರಮವನ್ನು ಅಹಿಂದ ವರ್ಗ ಹಬ್ಬದ ರೀತಿಯಲ್ಲಿ ಆಚರಿಸಬೇಕಿದೆ ಎಂದರು. ದಲಿತ ಹೋರಾಟಗಾರರಾದ ಕುಂದೂರು ತಿಮ್ಮಯ್ಯ…

Read More

ತುಮಕೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಸೇವೆಯಲ್ಲಿ ತೊಡಗಿಕೊಂಡಿರುವ ಶಬರಿಮಲೆ ಅಯ್ಯಪ್ಪ  ಸೇವಾ ಸಮಾಜಂನ ರಾಷ್ಟಿçÃಯ  ಅಧ್ಯಕ್ಷ ಟಿ.ಬಿ.ಶೇಖರ್ ಅವರನ್ನು  ಅಭಿನಂದನಾ ಸಮಿತಿ ಬುಧವಾರ ನಗರದಲ್ಲಿ ನಾಗರೀಕ ಸನ್ಮಾನ ನೀಡಿಗೌರವಿಸಿ, ಅವರ  ಅನನ್ಯಸೇವೆ ಸ್ಮರಿಸಿತು. ಡಾ.ಗುಬ್ಬಿವೀರಣ್ಣ   ರಂಗಮAದಿರದಲ್ಲಿ ನಡೆದ  ಅಭಿನಂದನಾ   ಸಮಾರಂಭದಲ್ಲಿ   ಅಟವಿ   ಸುಕ್ಷೇತ್ರದ  ಅಟವಿ ಶಿವಲಿಂಗ ಸ್ವಾಮೀಜಿ, ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿಯವರು ಟಿ.ಬಿ.ಶೇಖರ್‌ಗೆ ಬೆಳ್ಳಿ ಕಿರೀಟ ತೊಡಿಸಿ, ‘ಸತ್ಯಾರ್ಥ ಸೇವಾ’ ಅಭಿದಾನ ನೀಡಿಶೇಖರ್ ಹಾಗೂ ಇವರ ಪತ್ನಿಟಿ.ಎಸ್.ಆಶಾಅವರನ್ನು ಸನ್ಮಾನಿಸಿ ಗೌರವಿಸಿದರು. ಸಮಾರಂಭ ಉದ್ಘಾಟಿಸಿದ ಸಹಕಾರ ಸಚಿವಕೆ.ಎನ್.ರಾಜಣ್ಣ ಮಾತನಾಡಿ, ಯಾವುದೇ ಪ್ರತಿ  ಫಲಾಪೇಕ್ಷೆ   ಇಲ್ಲದೆ ಸಮಾಜ ಸೇವಾಕಾರ್ಯ ಮಾಡುತ್ತಿರುವ ಟಿ.ಬಿ.ಶೇಖರ್‌ಅವರುದೇವರಲ್ಲಿ ನಂಬಿಕೆ, ಶ್ರದ್ಧೆಯಿಟ್ಟು   ದೇವರು ಮೆಚ್ಚುವಂಥಾ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥತೆಯಿಂದ ಸಮಾಜದ ಒಳಿತಿಗಾಗಿ ಶ್ರಮಿಸಿದರೆ ಭಗವಂತ ಶ್ರೇಯಸ್ಸುಕೊಡುತ್ತಾನೆ. ಮನುಷ್ಯರಾಗಿ ಹುಟ್ಟಿದ ಮೇಲೆ ಈ ಸಮಾಜಕ್ಕೆಏನನ್ನಾದರೂ ಮಾಡಬೇಕು, ನಮ್ಮ ಹೆಜ್ಜೆಗುರುತು ಉಳಿಸಿ ಹೋಗಬೇಕುಎಂದು ಹೇಳಿದರು. ಟಿ.ಬಿ.ಶೇಖರ್‌ಅವರಿಗೆ ಸಮಾಜಸೇವೆತಮ್ಮತಂದೆಯಿAದ ಬಂದ ಬಳುವಳಿ.ತಂದೆಯನ್ನು ಮೀರಿಸಿ ಸೇವಾಕಾರ್ಯದಲ್ಲಿತೊಡಗಿಕೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕಕಾರ್ಯದಲ್ಲಿತಮ್ಮನ್ನು ಅರ್ಪಿಸಿಕೊಂಡು…

Read More

ತುಮಕೂರು: ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಪರಿಸರಕ್ಕೆ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕರ್ನಾಟಕ ಅಲೈಡ್ & ಹೆಲ್ತ್ಕೇರ್ ಪ್ರೊಫೆಷನಲ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ಶ್ರೀ ಸಿದ್ದಾ ರ್ಥ  ವೈದ್ಯಕೀಯ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಹಮ್ಮಿಕೊ ಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ಉತ್ತಮ ಕಾರ್ಯತತ್ಪರತೆಯ ಪರಿಸ್ಥಿತಿಗಳನ್ನು ಅನಾವರಣಗೊಳಿಸುವುದು, ವೃತ್ತಿಜೀವನದ ನಿರಂತರ ಜ್ಞಾನದ ಉನ್ನತೀಕರಣ, ಮಾಹಿತಿ ಮತ್ತು ಆಲೋಚನೆಗಳು, ಜ್ಞಾನ, ಅನುಭವಗಳು ಮತ್ತು ಉತ್ತಮ ಅಭ್ಯಾಸಗಳ ಕಲಿಕೆಗೆ ಕಾರ್ಯಾಗಾರಗಳು ಅನುಕೂಲವಾಗುತ್ತವೆ ಎಂದರು. ಸಾಹೇ ರಿಜಿಸ್ಟಾçರ್ ಡಾ.ಅಶೋಕ್ ಮೆಹ್ತಾ ಮಾತನಾಡಿ, ಆಸ್ಪತ್ರೆಯ ವ್ಯವಸ್ಥೆಯಲ್ಲಿ, ಪ್ರಯೋಗಾಲಯದಲ್ಲಿ…

Read More