ಕೊರಟಗೆರೆ: ತುಮಕೂರು ಪಟ್ಟಣದಲ್ಲಿ ಮೇ ೧೩ ರಂದು ನಡೆಯುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನದ ಅಮೃತ್ಸವ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರöಮವನ್ನು ಅದ್ದೂರಿಯಾಗಿ ಆಚರಿಸಲ್ಲಿದ್ದು ಸಚಿವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಧನ್ಯ ಕುಮಾರ್ ಮನವಿ ಮಾಡಿದ್ದಾರೆ. ಅವರು ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತಿರ್ಮಾನದಂತೆ ಮೇ.೧೩ ರಂದು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನವಾಗಿದ್ದು ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು ೭೫ನೇ ವರ್ಷಕ್ಕೆ ಕಾಲಿರಿಸಿದ್ದಾರೆ, ಅವರು ಅಪೆಕ್ಸ್ ಬ್ಯಾಂಕ್…
Author: News Desk Benkiyabale
ತುಮಕೂರು: ನಗರದ ಕೋತಿ ತೋಪು ಬಾಬು ಜಗಜೀವನ್ರಾಂ ವೃತ್ತದಲ್ಲಿ ಕರ್ನಾಟಕ ಸರ್ಕಾರದ ಆದೇಶ ಮತ್ತು ಜಸ್ಟೀಸ್ ಹೆಚ್ ಎನ್.ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟರ ಜಾತಿಗಳ ಸಮಗ್ರ ಸಮೀಕ್ಷೆ- ೨೦೨೫ಕ್ಕೆ ಜಿಲ್ಲಾಡಳಿತದಿಂದ ಚಾಲನೆ ನೀಡಲಾಯಿತು. ಕಾಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿ ಹರಿಕಾರರಾದ ಬಾಬು ಜಗಜೀವನ್ರಾಂ ರವರ ಬಾವಚಿತ್ರಳಿಗೆ ಪುಸ್ಪ ನಮನವನ್ನು ಸಲ್ಲಿಸಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ- ೨೦೨೫ಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದ ಅವರು ಜಸ್ಟೀಸ್ ಹೆಚ್ ಎನ್.ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟರ ಜಾತಿಗಳ ಸಮಗ್ರ ಸಮೀಕ್ಷೆ ಕರ್ನಾಟಕದಲ್ಲೆ ಪ್ರಥಮವಾಗಿದೆ. ಒಳ ಮೀಸಲು ಸಮೀಕ್ಷೆ ಸಂಬAದ ಸಮೀಕ್ಷಾ ವರದಿ ಸಂಗ್ರಹಣೆ ಬಗ್ಗೆ ೧೦ ದಿನಗಳ ಕಾಲ ರಾಜ್ಯ ಮಟ್ಟದಲ್ಲಿ ವೈಜ್ಞಾನಿಕ ತರಬೇತಿ ನೀಡಲಾಗಿದೆ. ಜಿಲ್ಲಾ ಮಟ್ಟದ ೧೫ ಜನ ಅಧಿಕಾರಿಗಳನ್ನು ಗುರುತಿಸಿ ಮಾಸ್ಟರ್…
ತುಮಕೂರು: ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ೪೦೦ ರಿಂದ ೫೦೦ ಜನ ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೧ ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಗುರಿಯನ್ನು ತಲುಪಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿAದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿಗಳೊAದಿಗೆ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಮೊದಲ ಸ್ಥಾನ ಪಡೆದಿದೆ. ಈ ವರ್ಷವೂ ಮೊದಲ ಸ್ಥಾನವನ್ನು ಯಥಾರೀತಿ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು. ಕಳೆದ ವರ್ಷ ಸುಮಾರು ೧೨೨ ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿದ್ದ ೩೬೬೦ ಶಾಲಾಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿವೆ. ಪ್ರಸಕ್ತ ಆರ್ಥಿಕ…
ತುರುವೇಕೆರೆ: ಕೃಷಿ ಇಲಾಖೆಯಿಂದ ಸಿಗುವಂತ ಸವಲತ್ತುಗಳನ್ನು ರೈತರು ಪಡೆದುಕೊಂಡು ಅದುನಿಕ ಕೃಷಿಗೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ಬೀಜ ವಿತರಣೆ, ಜೀಜೋಪಚಾರ ಆಂದೋಲನ ಹಾಗೂ ಕೃಷಿ ಪರಿಕರ ವಿತರಣ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು ರೈತರು ಆದುನಿಕ ಕೃಷಿಗೆ ಬೇಕಾದ ಸಲಕರಣೆಗಳನ್ನು ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ತೆಗೆದುಕೊಂಡು ವ್ಯವಸಾಯಕ್ಕೆ ಬಳಸಿಕೊಳ್ಳಬೇಕು. ಕೇವಲ ಒಂದೇ ಬೆಳೆಯನ್ನು ನಂಬಿ ವ್ಯವಸಾಯ ಮಾಡುವ ಬದಲು ರೈತರ ಆರ್ಥಿಕ ಸ್ಥಿತಿ ಸುದಾರಿಸಲು ಲಾಭ ಬರುವಂತಹ ಬೆಳೆಗಳನ್ನು ರೈತರು ಬೆಳೆಯಬೇಕು ಎಂದು ಸಲಹೆ ನೀಡಿದರು. ಈ ಸಂದರ್ಬದಲ್ಲಿ ಪಲಾನುಭವಿಗಳಿಗೆ ಟಾರ್ಪಲ್, ನೇಗಿಲುಸೇರಿದಂತೆ ಕೃಷಿಗೆ ಸಂಬAದಿಸಿದAತೆ ಕೃಷಿ ಪರಿಕರಗಳನ್ನು ನೀಡಲಾಯಿತು. ಸಮಗ್ರ ಅಭಿವೃದ್ದಿ ಹೊಂದಿದ ಪ್ರಗತಿಪರ ರೈತರನ್ನು ಗುರುತಿಸಿ ಆತ್ಮ ಶ್ರೇಷ್ಟ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಹಾಯಕ ನಿದೇಶಕ ಪೂಜಾ, ಕೃಷಿಕ…
ತುಮಕೂರು: ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಮೇ.೧೩ರಂದು ಹಮ್ಮಿಕೊಂಡಿರುವ ಕೆ.ಎನ್.ಆರ್.ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ,ರಾಜಣ್ಣನವರ ಪರ ಶಕ್ತಿ ಪ್ರದರ್ಶನವಲ್ಲ, ಬದಲಿಗೆ ಅವರ ಅಭಿಮಾನ ದರ್ಶನ ಸಮಾವೇಷವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ತುಮಕೂರು ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷರಾದ ಎನ್.ಗೋವಿಂದರಾಜು ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಕೆ.ಎನ್.ಆರ್.ಅಭಿನಂದನಾ ಗ್ರಂಥ ಬಿಡುಗಡೆ ಸಮಿತಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ನಾನು ಕೂಡ ಕೆ.ಎನ್.ರಾಜಣ್ಣನವರ ಅಭಿಮಾನಿ.ಅಹಿಂದ ಸಮುದಾಯಕ್ಕೆ ಕೆ.ಎನ್.ರಾಜಣ್ಣ ಅವರು ಮಾರ್ಗದರ್ಶಕರಿದ್ದಂತೆ ಎಂದರು. ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಐದು ದಶಕಗಳ ರಾಜಕೀಯ ಜೀವನವನ್ನು ಅವಲೋಕಿಸಿದರೆ ಜಿಲ್ಲೆಯ ರಾಜಕೀಯ, ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಇಂತಹ ಓರ್ವ ರಾಜಕಾರಣಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಅವರ ಅಭಿಮಾನಿಗಳು ೭೫ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ “ಸಹಕಾರ ಸಾರ್ವಬೌಮ” ಅಭಿನಂದನಾ ಗ್ರಂಥ ಸಮರ್ಪಣೆಯನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗೋವಿಂದರಾಜು…
ತುಮಕೂರು: ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಇಂದು ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ವಿವಿಧ ಯೋಜನೆಗಳಡಿ ನೋಂದಾಯಿಸುವ ಸಲುವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂ ಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವಾರು, ಚಿಂದಿ ಆಯುವವರು, ಗೃಹ ಕಾರ್ಮಿ ಕರು, ಟೈಲರ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಬೀಡಿ ಕಾರ್ಮಿ ಕರು ಮತ್ತಿತರ ಅಸಂಘಟಿತ…
ಶಿರಾ: ಗುರು ಕಲಿಸಿದ ವಿದ್ಯೆ ಕಲಿತು, ಜೊತೆಗೆ ಸಮಾಜದಲ್ಲಿ ಎಲ್ಲರನ್ನೂ ಗೌರವಿಸುವಂತಹ ಸಂಸ್ಕಾರ ಬೆಳಸಿಕೊಂಡ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಎಷ್ಟೇ ದಶಕಗಳು ಕಳೆದರೂ ಗುರು- ಶಿಷ್ಯರ ಬಾಂಧವ್ಯ ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಇಂತಹ ಹಳೆಯ ವಿದ್ಯಾರ್ಥಿಗಳು ಮುಂದಿನ ಯುವ ಪೀಳಿಗೆಗೆ ಆದರ್ಶವಾಗಬೇಕು ಎಂದು ನಿವೃತ್ತ ಮುಖ್ಯ ಶಿಕ್ಷಕ ಬಿ. ಎಲ್. ಅಶ್ವತ್ ನಾರಾಯಣ ಹೇಳಿದರು. ಶಿರಾ ತಾಲೂಕಿನ ಕರೇಜವ ನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಕಠಾವೀರನಹಳ್ಳಿ ಶ್ರೀರಂಗನಾಥ ವಿದ್ಯಾಸಂಸ್ಥೆಯ ೧೯೮೪- ೮೫ನೇ ಸಾಲಿನ ಎಸ್ ಎಸ್ ಎಲ್ ಸಿ ಹಳೆಯ ವಿದ್ಯಾ ರ್ಥಿ, ವಿದ್ಯಾರ್ಥಿನಿಯರು ಭಾನುವಾರ ಆಯೋಜಿಸಿದ್ದ ಸ್ನೇಹಕೂಟ ಸಮಾರಂಭ ಉದ್ಘಾಟಿಸಿ ಮಾತನಾಡಿದರು ೪೦ ವರ್ಷಗಳ ನಂತರ ನಾನು ಬೋಧನೆ ಮಾಡುತ್ತಿದ್ದ ಶಾಲೆಯಲ್ಲಿ ವಿದ್ಯೆ ಕಲಿತ ವಿದ್ಯಾರ್ಥಿಗಳು, ಇಂದು ಸ್ನೇಹ ಮಿಲನಗೊಂಡು ವೈಶಿಷ್ಟ್ಯ ಪೂರ್ಣ ಕ್ಷಣ ಒದಗಿಸಿರುವುದು ನಾನು ಕಲಿಸಿದ ವಿದ್ಯೆ ಸಾರ್ಥಕವಾಯಿತು ಎಂಬ ಮನೋಭಾವ ಮೂಡಿದೆ. ಇದೇ ರೀತಿ ತಮ್ಮ ಮಕ್ಕಳಿಗೆ, ಮೊಮ್ಮಕ್ಕಳಿಗೆ ಇಂತಹ ಸಂಸ್ಕಾರವನ್ನು ಕಲಿಸಿ ಪರಸ್ಪರ ಸ್ನೇಹ ಬಾಂಧವ್ಯವನ್ನು…
ತುಮಕೂರು: ಮಂಗಳೂರು ಘಟನೆಗೆ ಸಂಬAಧಿಸಿದAತೆ ರಾಜ್ಯ ಸರಕಾರ ನಿಷ್ಕ್ರಿಯ ಆದಾಗ ಎನ್ ಐಎ ಮತ್ತು ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಲಿದೆ. ಅಂತಹ ಆರೋಪಿಗಳನ್ನು ರಕ್ಷಣೆ ಮಾಡುವುದನ್ನು ರಾಜ್ಯ ಸರಕಾರ ಬಿಡಬೇಕು. ಮನುಷ್ಯನ ಜೀವವನ್ನು ತೆಗೆಯುತ್ತೇವೆ ಎಂಬುವರ ಮೇಲೆ ಅನುಕಂಪ ತೋರಿಸಬಾರದು. ಪಹಲ್ಲಾಮ್ ಘಟನೆಗೆ ಸಂಬAಧಿಸಿದAತೆ ತೆಗೆದುಕೊಂಡ ಕಠಿಣ ಕ್ರಮವನ್ನು ಮಂಗಳೂರು ಘಟನೆಗೂ ತೆಗೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಮಾತನಾಡಿದ ಅವರು, ಮುಲಾಜಿಲ್ಲದೆ ಗೃಹ ಸಚಿವ ತಮ್ಮ ಅನುಭವವನ್ನು ಇದ್ರಲ್ಲಿ ತೋರಿಸಬೇಕು. ಇಲ್ಲದಿದ್ದರೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗೊತ್ತಾಗದಿದ್ದಲ್ಲಿ ಕೇಂದ್ರ ಸರಕಾರ ಪತ್ರ ಬರೆಯಲಿ, ೧೦ ನಿಮಿಷದಲ್ಲಿ ಕ್ರಮ ಆಗಲಿದೆ ಎಂದರು. ಕೆಲ ಅಯೋಗ್ಯರು, ದೇಶಕ್ಕೆ ಮಾರಕವಾಗಿರ ಬಗ್ಗೆ ಮೃಧು ಧೋರಣೆ ಅನುಸರಿಸಿದರೆ ಬಹಳ ಕಷ್ಟವಾಗಲಿದೆ. ಆರೋಪಿಗಳು ಎಷ್ಟೆ ದೊಡ್ಡವರಾದ್ರೂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು. ರಾಜ್ಯ ಸರಕಾರ ಮಾತನಾಡುವುದನ್ನು ಕಡಿಮೆ ಮಾಡಿ, ಆರೊಪಿಗಳನ್ನು ಸರಿಯಾದ ಕ್ರಮ…
ತುಮಕೂರು: ಕೊಳವೆಬಾವಿ ಕೊರೆದು ವರ್ಷಗಳೇ ಕಳೆದರೂ ಪಂಪು ಮೋಟಾರ್ ವಿತರಣೆ ಮಾಡದೆ ವಿಳಂಬ ಧೋರಣೆ ಅನುಸರಿಸಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವಿರುದ್ಧ ಶಾಸಕ ಬಿ ಸುರೇಶ್ ಗೌಡರು ತೀವ್ರ ಆಕ್ರೋಶಗೊಂಡರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನೊಡುಕೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪು ಮೋಟಾರ್ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಲಿತರು ಎಂದರೆ ಈ ಸರ್ಕಾರಕ್ಕೆ ತಾತ್ಸಾರ ಮನೋಭಾವ ಇದೆ. ದಲಿತರ ಹಾಗೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯರವರು ದಲಿತರಿಗೆ ಮೀಸಲಾಗಿರುವ ಎಲ್ಲ ನಿಗಮಗಳಲ್ಲೂ ಕೂಡ ಅವ್ಯಾಹತವಾಗಿ ಹಗರಣಗಳು ನಡೆದಿವೆ ಬೋವಿ ನಿಗಮ ವಾಲ್ಮೀಕಿ ನಿಗಮ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ವ್ಯಾಪಕವಾದ ಭ್ರಷ್ಟಾಚಾರ ಇದೆ. ಮೋಸ ಮಾಡಲು ದಲಿತರೇ ಬೇಕೆ ದಲಿತೋದ್ಧಾರಕ ಎಂದು ಉದ್ಘಾರ ಮಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸದೆ ಇರುವುದು ನೋಡಿದರೆ ಅವರಿಗೆ ದಲಿತರ ಉದ್ಧಾರ…
ಕೊರಟಗೆರೆ: ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು ಸಮಾಜದಲ್ಲಿ ಸಮುದಾಯವು ಮುನ್ನೆಲೆಗೆ ಬರಬೇಕಾದರೆ ನಮ್ಮ ಮಕ್ಕಳು ಕಡ್ಡಾಯವಾಗಿ ವಿದ್ಯಾವಂತಗರಾಗಲೇಬೇಕು ಅದಕ್ಕಾಗಿ ಮಡಿವಾಳ ಯುವ ವೇದಿಕೆಯಿಂದ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಕಾಂತರಾಜು ತಿಳಿಸಿದರು. ಪಟ್ಟಣದ ಹೊರವಲಯದ ನವೀನ್ಕಂಫರ್ಟ್ ಸಭಾಂಗಣದಲ್ಲಿ ಮಡಿವಾಳ ಯುವ ವೇದಿಕೆ ಮತ್ತು ಮಡಿವಾಳ ಮಲ್ಲಿಗಮ್ಮ ಸೇವಾ ಟ್ರಸ್ಟ್ ವತಿಯಿಂದ ನಡೆದ ಮಡಿವಾಳ ಜನಾಂಗದ ಪ್ರತಿ ಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ ಮಡಿವಾಳ ಜನಾ ಂಗವು ಹಿಂದುಳಿದ ಜನಾಂಗಗಳಲ್ಲಿ ಅತ್ಯಂತ ಹಿಂದೆ ಇರುವ ಸಮುದಾಯವಾಗಿದೆ. ಹಿಂದಿನಿAದಲೂ ಈ ಸಮುದಾಯವನ್ನು ಸಮಾಜದಲ್ಲಿ ಕೀಳು ಭಾವನೆಯಿಂದ ನೋಡುತ್ತಿದ್ದಾರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಜನಾಂಗಕ್ಕೆ ಸಿಗಬೇಕಿದ್ದ ಪರಿಶಿಷ್ಠ ಜಾತಿಯ ಸ್ಥಾನ ಸಿಗಲಿಲ್ಲ ಆದರ ಹೋರಾಟ ಮುಂದುವರೆಯುತ್ತಿದೆ ಎಂದರು. ಮಡಿವಾಳ ಮಲ್ಲಿಗಮ್ಮ ಸೇವಾ ಟ್ರಸ್ಟ್ನ ಕಾರ್ಯ ದರ್ಶಿ ತೋಳಸಮ್ಮ ಮಾತನಾಡಿ ಈ ಸಮಾಜಕ್ಕೆ ಮಡಿವಾಳ ಜನಾಂಗ ಅನೇಕ ಕೊಡಿಗೆಗಳನ್ನು ನೀಡಿದೆ ಸಮಾಜದ ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ…











