Author: News Desk Benkiyabale

ತುಮಕೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಗೆ ಸಂಬAಧಿಸಿದAತೆ ಎಂಪಾರಿಕಲ್ ಡಾಟಾ ಸಂಗ್ರಹಕ್ಕೆ ಸಮೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಛಲವಾದಿ ಸಮುದಾಯದ ಜನರು ಸಮೀಕ್ಷೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬ ಮಾಹಿತಿ ನೀಡುವ ಸಲುವಾಗಿ ಜಿಲ್ಲಾ ದಲಿತ ಛಲವಾದಿ ಸಮುದಾಯ ಭವನದಲ್ಲಿ ಸಭೆ ಆಯೋಜಿಸಲಾಗಿತ್ತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಹಿರಿಯ ಛಲವಾದಿ ಮುಖಂಡರುಗಳು ಸಭೆಗೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಸಿ.ಭಾನುಪ್ರಕಾಶ್,ರಾಜ್ಯದಲ್ಲಿ ಎಕೆ, ಎಡಿ, ಎಎ ಉಪಜಾತಿಗಳ ಹೆಸರಿನಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸಿಕೊಳ್ಳಲು ಇದು ಸುವರ್ಣ ಅವಕಾಶ. ಹಾಗಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಎಲ್ಲರು ಈ ಸಮೀಕ್ಷೆಯಲ್ಲಿ ಪಾಲ್ಗೊಂಡು, ಉಪಜಾತಿಯ ಕಲಂನಲ್ಲಿ ಅವರ ಉಪಜಾತಿಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಬೇಕು ಎಚ್ಚರಿಕೆ ನೀಡಿದರು. ಜಿಲ್ಲಾ ಛಲವಾದಿ ಮಹಾಸಭಾದ ತಾಲೂಕು ಮುಖಂಡ ಗಿರೀಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗಾAಜನೇಯ, ಸಭೆಯಲ್ಲಿ ಛಲವಾದಿ ಮುಖಂಡರಾದ ಡಾ.ಪಿ.ಚಂದ್ರಪ್ಪ,ಶ್ರೀನಿವಾಸ್,ಹೊನ್ನುಡಿಕೆ ಗ್ರಾ.ಪಂ.ಸದಸ್ಯ ಗಿರೀಶ್, ಗಳಿಗೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ಬಿ.ಮಂಗಳಮ್ಮ, ಮಲ್ಲಸಂದ್ರ…

Read More

ಪಾವಗಡ: ತಾಲ್ಲೂಕಿನ ಮುಗದಾಳಬೆಟ್ಟದ ಗೊಲ್ಲರಹಟ್ಟಿಗೆ ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಹಟ್ಟಿಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು. ಹೆಣ್ಮಕ್ಕಳು ಸೀರೆಯನ್ನು ಪರದೆಯಾಗಿ ಕಟ್ಟಿಕೊಂಡು ಸ್ನಾನ ಮಾಡುತ್ತಿರುವ ಸ್ಥಿತಿಯು ನಾಗರಿಕ ಸಮಾಜಕ್ಕೆ ತಲೆತಗ್ಗಿಸುವ ಸಂಗತಿಯೆAದು ಅಭಿಪ್ರಾಯಪಟ್ಟ ಅವರು, ವಿಷಯ ನ್ಯಾಯಾಲ ಯದಲ್ಲಿದ್ದರೂ, ಜೂನ್ ೧೬ರ ಬಳಿಕ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು. ಈವರೆಗೆ ತಾತ್ಕಾಲಿಕ ಪರಿಹಾರವಾಗಿ ಮೊಬೈಲ್ ಶೌಚಾಲಯಗಳನ್ನು ಹಟ್ಟಿಯಲ್ಲಿ ಸ್ಥಾಪಿಸಲು ಇ.ಒ. ಜಾನಕಿರಾಂ ಅವರಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ, ನಿವೇಶನ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ತಹಶೀಲ್ದಾರ್ ವರದರಾಜುಗೆ ಸೂಚಿಸಿದ ಡಾ. ನಾಗಲಕ್ಷ್ಮಿ, ಹಟ್ಟಿಯಲ್ಲಿನ ಕರಡಿಗಳ ಹಾವಳಿಯನ್ನು ಗಮನಿಸಿ, ಮಧ್ಯಭಾಗದಲ್ಲಿ ಡೂಮ್ ಲೈಟ್ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು. ವಿಶೇಷ ಅತಿಥಿಯಾಗಿ ಬಂದ ಅಧ್ಯಕ್ಷೆ ಯನ್ನು ಹಟ್ಟಿಯ…

Read More

ತುಮಕೂರು: ನಗರದ ಮಹಾಲಕ್ಷ್ಮಿ ಬಡಾವಣೆ ವಾಸಿ ಶಿವಣ್ಣ ಟೈರ್ಸ್ ಮಾಲಿಕರಾದ ಕಾರ್ತಿಕ್ ರವರ ಕಟ್ಟಡ ಕಾರ್ಮಿಕರ ಶೆಡ್ ನಲ್ಲಿ ಕಾಣಿಸಿಕೊಂಡ ೪೩ ಕೊಳಕುಮಂಡಲ (ರಸೆಲ್ಸ್ ವೈಪರ್) ಮರಿಗಳು ಹಾಗೂ ೪ ಅಡಿ ಉದ್ದದ ತಾಯಿ ಕೊಳಕುಮಂಡಲ ಹಾವು ಕಾಣಿಸಿಕೊಂಡಿದೆ. ಈ ಹಾವುಗಳು ನವೆಂಬರ್ ಡಿಸೆಂಬರ್ ನಲ್ಲಿ ಮಿಲನಗೊಂಡು ಪೂರ್ವ ಮುಂಗಾರು ಸಮಯದಲ್ಲಿ ಸಂತಾನೋತ್ಪತಿ ಮಾಡುತ್ತವೆ. ಕೊಳಕುಮಂಡಲ ಹಾವುಗಳು (ಔvoviviಠಿಚಿಡಿous) ಅಂದರೆ ತಾಯಿಯ ದೇಹದೊಳಗೆ ಮೊಟ್ಟೆಗಳು ಬೆಳೆದು ಹೊಟ್ಟೆ ಒಳಗಿನಿಂದಲೆ ಜೀವಂತ ಮರಿಗಳು ಹೊರಬಂದಿವೆ. ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ರವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಸಿ ಸಮೀಪದ ದೇವರಾಯನ ದುರ್ಗಾ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ತುಮಕೂರು ನಗರ ಹಾಗೂ ಹೊರವಲಯಗಳಲ್ಲಿ ಈ ಪ್ರಕ್ರಿಯೆ ಪ್ರಸ್ತುತ ಪ್ರಾರಂಭವಾಗಿದ್ದು ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸಂಜೆ ಕತ್ತಲು ಸಮಯದಲ್ಲಿ ಟಾರ್ಚ್…

Read More

ಪಾವಗಡ: ರಾಷ್ಟ್ರೀಯ ಗೋರ್ ಸಿಕವಾಡಿ & ಗೋರ್ ಸೇನಾ ಸಂಘಟನೆ ಹಾಗೂ ಭೀಮಾಸತಿ ಗ್ರಾಮೀಣಾಭಿವೃದ್ಧಿ ಮತ್ತು ಯುವಕರ ಸಬಲೀಕರಣ ಸಂಸ್ಥೆ(ರಿ.) ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಎಲ್ಲಾ ಬಂಜಾರ ತಾಂಡಾಗಳಲ್ಲಿ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ (ಒಳಮೀಸಲಾತಿ) ಸಮೀಕ್ಷೆಯ ಕುರಿತು ಜನಜಾಗೃತಿ ಹಾಗೂ ಸಮಾಲೋಚನ ಅಭಿಯಾನ ನಡೆಯಿತು. ಪ್ರತಿ ತಾಂಡದಲ್ಲಿ ಜಾತಿ ಸಮೀಕ್ಷೆಯ ಉದ್ದೇಶ, ಅಗತ್ಯ ಮಾಹಿತಿ, ತಾಂಡಾದ ಪ್ರತಿ ಮನೆ ಯೂ, ಕುಟುಂಬದ ಸದಸ್ಯನೂ ಅವರು ಎಲ್ಲೇ ಇದ್ದರೂ, ಈ ಒಂದು ಸಮೀಕ್ಷೆ ಯಿಂದ ಹೊರಗುಳಿಯಬಾರದು ಹಾಗೂ ಉಪಜಾತಿ ಕಾಲಂನಲ್ಲಿ ಕಡ್ಡಾಯವಾಗಿ ಲಂಬಾಣಿ ಎಂದು ಬರೆಸಲು ಮಾಹಿತಿ ನೀಡಲಾಯಿತು. ಪ್ರತಿ ತಾಂಡಾದ ಹಿರಿಯರು, ಯುವಕರು ಮತ್ತು ಮಹಿಳೆಯರು ತುಂಬಾ ಒಳ್ಳೆಯ ಸಂದೇಶ, ಕೆಲಸ ಮಾಡುತ್ತಿದ್ದೀರಿ ತಮಗೆ ಧನ್ಯವಾದಗಳು ತಿಳಿಸಿದರು. ಅವರಿಗೆಲ್ಲರಿಗೂ ಅಭಾರಿ ಯಾಗಿರುತ್ತೇವೆ ಎಂದರು. ತಾAಡಾಗಳ ನಾಯಕ್, ಡಾವೋ, ಕಾರಬಾರಿ ಮತ್ತು ಪ್ರತಿನಿಧಿಗಳು, ವಿದ್ಯಾವಂತ ಯುವಕ, ಯುವತಿಯರು ಈ ಸಮೀಕ್ಷೆಯನ್ನು ತಮ್ಮ ಸ್ವಂತ ಕೆಲಸವೆಂದು ತಿಳಿದು ತಮ್ಮ ಊರಿನ, ತಾಂಡಾದ ಸಮೀಕ್ಷೆಯನ್ನು…

Read More

ತುಮಕೂರು: ಮಧುಗಿರಿ ಪಟ್ಟಣದಲ್ಲಿ ದಿನಾಂಕ: ೧೨-೦೩-೨೦೨೧ ರಂದು ಬೆಳಗ್ಗೆ ಸುಮಾರು ೦೯:೧೫ ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್.ವೀರಭದ್ರ ಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ-೧ ಗುರುಕಿರಣ್ ಡ್ರಾಗರ್ ನಿಂದ, ೨ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, ೩ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸದರಿ ೩ ಜನ ಆರೋಪಿತರಿಗೆ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಚಂದನ್ ಕುಮಾರ್ ಬಿನ್ ರಾಮಪ್ಪ ಇವರುಗಳು ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆಯಿಂದ ದೃಢಪಟ್ಟ ಮೇರೆಗೆ ಅಂದಿನ ತನಿಖಾಧಿಕಾರಿಯಾದ ಎಂ.ಎಸ್ ಸರ್ದಾರ್ ರವರು…

Read More

ಸಿರಾ: ದಿ. ೧೪-೦೪-೨೦೨೫ ರಂದು ರಾತ್ರಿ ೦೭-೧೫ ಗಂಟೆಗೆ ಪಿರ್ಯಾದಿ ಶ್ರೀಮತಿ ಪುಟ್ಟರಂಗಮ್ಮ ಕೊಂ ಲೇಟ್ ಮರಡಿರಂಗಯ್ಯ, ರವರು ಠಾಣೆಗೆ ಹಾಜರಾಗಿ ದಿನಾಂಕ:೧೪-೦೪-೨೦೨೫ ರಂದು ಮಧ್ಯಾಹ್ನ ೦೧-೩೦ ಗಂಟೆ ಸಮಯದಲ್ಲಿ ಮರಡಿ ರಂಗನಾಥ ಸ್ವಾಮಿ ದೇವಸ್ಥಾನದ ಜಾತ್ರ ರ ಥೋತ್ಸವದಲ್ಲಿದ್ದಾಗ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಪಿರ್ಯಾದಿಯ ಕೊರಳಿದ್ದ ಸುಮಾರು ೩೬ ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆ. ಕಳ್ಳನನ್ನು ಪತ್ತೆ ಮಾಡಿ ಕಿತ್ತುಕೊಂಡು ಹೋದ ಸರವನ್ನು ಪತ್ತೆ ಮಾಡಿಕೊಡ ಬೇಕೆಂದು ನೀಡಿದ ದೂರಿನ ಮೇರೆಗೆ ಸಿರಾ ಠಾಣಾ ಮೊ ನಂ ೧೭೭/೨೦೨೫ ಕಲಂ ೩೦೯(೪) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿರುತ್ತೆ. ಮಾನ್ಯ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ರವರ ಮಾರ್ಗದರ್ಶನದಲ್ಲಿ ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳಾದ ಗೋಪಾಲ್ ಸಿ ಹಾಗೂ ಬಿ.ಎಸ್. ಅಬ್ದುಲ್ ಖಾದರ್ ರವರ ನೇತೃತ್ವದಲ್ಲಿದಲ್ಲಿ, ಶಿರಾ ಉಪ ವಿಭಾಗದ ಡಿ.ಎಸ್.ಪಿ ಯವರಾದ ಬಿ.ಕೆ ಶೇಖರ್ ರವರ ಮಾರ್ಗಸೂಚನೆ ಮೇರೆಗೆ ಶಿರಾ ಪೊಲೀಸ್…

Read More

ತುಮಕೂರು: ಕಲಾವಿದರು, ಸಾಹಿತಿಗಳು ,ರಾಜಕಾರಣಿಗಳ ನುಡಿ, ನಡೆಗಳಲ್ಲಿ ನೈತಿಕತೆ ಕಾಣೆಯಾಗುತ್ತಿರುವ ಈ ಕಾಲದಲ್ಲಿ, ಡಾ.ರಾಜ್‌ಕುಮಾರ್ ತಾವು ಬದುಕಿರುವಷ್ಟು ಕಾಲವೂ ನುಡಿ, ನಡೆಯಲ್ಲಿ ನೈತಿಕತೆಯನ್ನು ಉಳಿಸಿಕೊಂಡು, ಜನರ ಅಭಿರುಚಿ ಕೆಡಿಸದೆ ಕಲಾಸೇವೆ ಮಾಡಿದ ಮಹಾನ್ ಕಲಾವಿದರು ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಅಮರಜೋತಿ ಸಾಂಸ್ಕೃತಿಕ ಟ್ರಸ್ಟ್ ದಿಬ್ಬೂರು ಆಯೋಜಿಸಿದ್ದ ಡಾ.ರಾಜ್‌ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪತ್ರಕರ್ತರಾದ ಗಂಗಾಧರ ಮೊದಲಿಯಾರ್ ಮತ್ತು ಸಂಗೀತ ನಿರ್ದೇಶಕ ಐ.ಎಲ್.ರಂಗಸ್ವಾಮಯ್ಯ ಅವರಿಗೆ ೨೦೨೫ನೇ ಸಾಲಿನ ಡಾ.ರಾಜರತ್ನ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತಿದ್ದ ಅವರು,ಚಮ್ಮಾರನಿಂದ ಹಿಡಿದು, ಚಕ್ರವರ್ತಿಯವರೆಗೆ ಎಲ್ಲಾ ರೀತಿಯ ಪಾತ್ರಗಳನ್ನು ಮಾಡುವ ಮೂಲಕ ಎಲ್ಲಾ ವರ್ಗದ ಜನರನ್ನು ಪ್ರತಿನಿಧಿಸಿದ ಏಕೈಕ ಕಲಾವಿದ ಡಾ.ರಾಜ್ ಎಂದರು. ಕನ್ನಡ ಕಲಾವಿದರಲ್ಲಿ ಜಾತಿ ಮೀರಿ ಕಲಿತವರು ಇದ್ದಾರೆ, ಕಲಿಸಿದವರು ಇದ್ದಾರೆ. ಇದೇ ನಿಜವಾದ ಅಂತಃಸತ್ವ.ಆದರೆ ರಾಜಕುಮಾರ್ ಎಂದಿಗೂ ತನ್ನ ತಾರಮೌಲ್ಯವನ್ನು ತಲೆಗೆ ಏರಿಸಿಕೊಳ್ಳದೆ ಅದನ್ನು ಪ್ರೇಕ್ಷಕರ ಹೃದಯಕ್ಕೆ ತಲುಪಿಸಿದವರು ಡಾ.ರಾಜ್‌ಕುಮಾರ್.ಹಾಗಾಗಿಯೇ ಅವರು ಚಲನಚಿತ್ರರಂಗದಲ್ಲಿ ಡಾ.ರಾಜಕುಮಾರ್ ಆಗಿದ್ದರೂ, ಪ್ರೇಕ್ಷಕರ ಪಾಲಿಗೆ…

Read More

ತುಮಕೂರು: ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಜಿಲ್ಲೆಯ ತುರುವೇಕೆರೆ-ತಿಪಟೂರು ತಾಲ್ಲೂಕಿನ ಗಡಿಭಾಗ ಕುಂದೂರು ಬಳಿ ರಾಷ್ಟಿçÃಯ ಹೆದ್ದಾರಿ ೧೫೦ಎ ನ ೪೨.೨೩೬ ಕಿ.ಮೀ. ಉದ್ಧದ ಕೆ.ಬಿ. ಕ್ರಾಸ್, ಬಾಣಸಂದ್ರ, ತುರುವೇಕೆರೆ, ಮಾಯಸಂದ್ರ, ಚುಂಚನಹಳ್ಳಿ ಹಾಗೂ ನೆಲ್ಲಿಗೆರೆ ಭಾಗದ ಸುಮಾರು ೬೧೭.೨೮ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ. ಉಳಿದ ದಿನಗಳಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಯಾವುದೇ ಪಕ್ಷದವರಿಗೆ ನನ್ನಿಂದ ಒಂದು ಸಣ್ಣ ಅಪಚಾರವಾಗಿದ್ದರೆ ನಾನು ಒಂದು ಸೆಕೆಂಡ್ ಸಹ ರಾಜಕಾರಣದಲ್ಲಿ ಇರುವುದಿಲ್ಲ ಎಂದರು. ಸರ್ಕಾರಗಳಿಗೆ ತೆರಿಗೆ ರೂಪದಲ್ಲಿ ಬರುವ ಸಾರ್ವಜನಿಕರ ಹಣವನ್ನು ಇನ್ನೊಂದು ರೀತಿಯಲ್ಲಿ…

Read More

ತುರುವೇಕೆರೆ: ಕಾರ್ಮಿಕರಲ್ಲಿ ಸಂಘಟನೆ ಕೊರತೆಯಿದ್ದು ಕಾರ್ಮಿಕರು ಸಂಘಟಿತರಾದಾಗ ಮಾತ್ರ ಸಾಧನೆ ಮಾಡಲು ಸಾದ್ಯವಿದೆ ಕಸಾಪ ತಾಲ್ಲೂಕು ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು. ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಶ್ರೀ ಮಂಜುನಾಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ ತುರುವೇಕೆರೆ, ಶ್ರಮಜೀವಿ ಕಟ್ಟಡ ಕಾರ್ಮಿಕರ ಹಿತರಕ್ಷಣಾ ಸಮಿತಿ ಕುಣಿಗಲ್, ಕರ್ನಾಟಕ ರಾಜ್ಯ ಕಟ್ಟಡ ಮಹಾತ್ಮಗಾಂಧಿ ನರೇಗಾ ಇತರೆ ನಿರ್ಮಾಣ ಅಸಂಘಟಿತ ಕಾರ್ಮಿಕರ ಸಂಘ ಇವುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾರ್ಮಿಕರು ಸಂಘಟಿತರಾಗದ ಹೊರತು ಸಂಘದ ಅಭಿವೃದ್ದಿ ಸಾದ್ಯವಿಲ್ಲ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸರ್ಕಾರದ ವಿವಿಧ ಸವಲತ್ತುಗಳನ್ನು ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕೆಂದು ಕಿವಿಮಾತು ಹೇಳಿದರು. ಶ್ರಮಜೀವಿ ಕಟ್ಟಡ ಕಾರ್ಮಿಕ ಹಿತರಕ್ಷಣಾ ಸಮಿತಿ ಕುಣಿಗಲ್ ಅಧ್ಯಕ್ಷರಾದ ಕೃಷ್ಣರಾಜ್ ಮಾತನಾಡಿ ನಿರ್ಧಿಷ್ಟ ಕಾನೂನುಗಳು ರೂಪಿತವಾಗುವ ಮುಂಚೆ ಕಾರ್ಮಿಕರಿಗೆ ಸೂಕ್ತ ನಿಯಮಗಳಿರಲಿಲ್ಲ. ಆ ವೇಳೆ ಕಾರ್ಮಿಕರು ಅನಾರೋಗ್ಯ ಇನ್ನಿತರ ತೊಂದರೆಗಳಿಗೆ ಒಳಗಾಗುತ್ತಿದ್ದರು. ಭಾರತದಲ್ಲಿ ೧೯೨೩ರ ನಂತರ ಅಧಿಕೃತವಾಗಿ…

Read More

ಕೊರಟಗೆರೆ: ಪಟ್ಟಣದ ಭಕ್ತರ ಅಡಿಗಡೆಯ ಧಾರ್ಮಿಕ ನಿಷ್ಠೆಯ ಫಲವಾಗಿ ಇಲ್ಲಿನ ಬಹುತೇಕ ದೇವಾಲಯಗಳು ಈಗಾಗಲೇ ಜೀರ್ಣೋದ್ಧಾರಗೊಂಡಿವೆ,ಆದರೆ ಪಟ್ಟಣದ ಎತ್ತರದ ಸ್ಥಳದಲ್ಲಿ ನೆಲೆಸಿರುವ ಗಂಗಾಧರೇಶ್ವರ ದೇವಾಲಯ ಮಾತ್ರ ಇನ್ನು ಪುನರ್‌ನಿರ್ಮಾಣದ ನಿರೀಕ್ಷೆಯಲ್ಲಿದೆ,ಈ ದೇವಾಲಯದ ಜೀರ್ಣೋದ್ಧಾರಕ್ಕೆ ತಕ್ಷಣ ಕ್ರಮವಹಿಸುವಂತೆ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸ ಶಾಖಾಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಮನವಿ ಮಾಡಿದರು. ಪಟ್ಟಣದಲ್ಲಿ ಕಳೆದ ಮೂರು ದಿನಗಳಿಂದ ವಿಜೃಂಭಣೆಯಿAದ ನಡೆಯುತ್ತಿದ್ದ ಮಾರಮ್ಮ ಮತ್ತು ಕೊಲ್ಲಾಪುರದಮ್ಮ ದೇವಿಯ ಪ್ರತಿಷ್ಠಾಪನ ಮಹೋತ್ಸವದ ಅಂತಿಮ ದಿನವಾದ ಗುರುವಾರ ನಡೆದ ಕುಂಭಕಳಶ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ದಿವ್ಯ ಸ್ಥಾನ ವಹಿಸಿ ಮಾತನಾಡಿದರು. “ಪುನಃ ನವೀಕರಣಗೊಂಡ ದೇವಾಲಯಗಳು ನಮ್ಮ ಸಂಸ್ಕೃ ತಿಯ ಸಂಜೀವಿನಿಯAತೆ ಭಕ್ತರಲ್ಲಿ ನಂಬಿಕೆಯನ್ನು ತುಂಬುತ್ತವೆ,” ಎಂದು ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ಗಂಗಾಧರೇಶ್ವರ ದೇವಾಲಯವು ಎತ್ತಿನ ಬೆಟ್ಟದ ಮೇಲೆ ಇರುವ ಕಾರಣದಿಂದಾಗಿ ಭಕ್ತರ ನೆರೆದಾಣಿಕೆಗೆ ಸವಾಲಾಗಿದ್ದು, ಪುನರ್ ನಿರ್ಮಾಣದೊಂದಿಗೆ ಮೂಲ ಸೌಲಭ್ಯಗಳ ಸಹಿತ ಅಭಿವೃದ್ಧಿ ಅಗತ್ಯವಿದೆ ಎಂದು ತಿಳಿಸಿದರು. ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಮಾರಮ್ಮ ದೇವಾಲಯ ಸಮಿತಿಯೇ ಮುನ್ನಡೆವಹಿಸಬೇಕು. ಇಂತಹ ಪವಿತ್ರ…

Read More