ಚಿಕ್ಕನಾಯಕನಹಳ್ಳಿ :ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಗಣಿ ಬಾದಿತ ಪ್ರದೇಶಾಭಿವೃದ್ದಿ ಹಣದಲ್ಲಿ ತಾಲ್ಲೂಕಿಗೆ ಹಂಚಿಕೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ ಅಭಿವೃದ್ದಿ ಪಡಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಗೃಹ ಮಂತ್ತಿ ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದ ಅವರು ಕೃಷಿ, ತೋಟಗಾರಿಕೆ ರೇಷ್ಮೆ , ಪಶು ಸಂಗೋಪನೆ ಇಲಾಖೆಗಳು ಸೇರಿದಂತೆ ಶಿಕ್ಷಣ ಇಲಾಖೆಗಳು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಲು ಸೂಚನೆ ನೀಡಿದ ಅವರು ಕೃಷಿ ಇಲಾಖೆಯಿಂದ ರೈತರಿಗೆ ಸಿಗಬೇಕಾಗಿರುವಂತಹ ಬಿತ್ತನೆ ಬೀಜ, ರಸಗೊಬ್ಬರದ ಸಮಸ್ಯೆ ಬಾರದಂತೆ ಕ್ರಮವಹಿಸವಂತೆ ತಿಳಿಸಿದರು, ಆಹಾರ ಇಲಾಖೆಯಿಂದ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು, ಈ ತಾಲ್ಲೂಕಿಗೆ ಭದ್ರಮೇಲ್ದಂಡೆ, ಎತ್ತಿನಹೊಳೆ, ಹೇಮಾವತಿ ಮೂರು ನೀರಾವರಿ ಯೋಜನೆಗಳಿದ್ದು ಅವುಗಳು ಸಮಪರ್ಕವಾಗಿ ಆಗಬೇಕಾಗಿದ್ದು ಈ…
Author: News Desk Benkiyabale
ತುಮಕೂರು: ರಾಜಕೀಯ ಅಧಿಕಾರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗವಾಗಿದ್ದು, ರಾಜಕೀಯ ಅಧಿಕಾರಕ್ಕಾಗಿ ಅವಕಾಶ ವಂಚಿತ ಎಲ್ಲ ತಳಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಪಾದಿಸಿದ್ದಾರೆ ನಗರದ ಏಂಪ್ರೆಸ್ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ನ ಜಿಲ್ಲಾ ಶಾಖೆವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ೩೯೮ ನೇ ಜಯಂತೋತ್ಸವ ಹಾಗು ಕೆಕೆಎಂಪಿಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಪಿ.ಜಿ.ಆರ್.ಸಿಂಧ್ಯ,ಮೋರೆ ಅವರನ್ನು ಬಿಟ್ಟರೆ ಉಳಿದಂತೆ ಮರಾಠ ಸಮುದಾಯದಲ್ಲಿ ರಾಜಕೀಯ ಧರೀಣರಿಲ್ಲ. ಹಿಂದೆ ಬೆಳಗಾವಿ ಭಾಗದಿಂದ ಸುಮಾರು ಐದರಿಂದ ಆರು ಜನರು ವಿಧಾನಸಭೆಗೆ ಆಯ್ಕೆಯಾಗುತಿದ್ದರು.ಆದರೆ ಪರಿಸ್ಥಿತಿ ಬದಲಾಗಿದೆ.ರಾಜಕಾರಣದಲ್ಲಿ ಮಾರಾಠಿಗರ ಪ್ರಾತಿನಿಧ್ಯ ಕಡಿಮೆಯಾಗಿದೆ. ಹಾಗಾಗಿ ರಾಜಕೀಯ ಅಧಿಕಾರ ವಂಚಿತ ಎಲ್ಲಾ ಸಮುದಾಯಗಳು ಒಗ್ಗೂಡುವ ಅಗತ್ತವಿದೆ ಎಂದರು. ಮರಾಠ ಎಂದರೆ ಧೈರ್ಯ, ಸಹಾಸ,ಆತ್ಮಗೌರವಕ್ಕೆ ಹೆಸರು ವಾಸಿಯಾದ ಸಮುದಾಯ. ದೇಶ ಮತ್ತು ರಾಜ್ಯಕ್ಕೆ ಇವರ ಕೊಡುಗೆ ಅಪಾರ. ಈ ಇತಿಹಾಸವನ್ಬು ನಮ್ಮ ಯುವ ಪಿಳೀಗೆಗೆ ಪರಿಚಯೀಸುವ ಕೆಲಸ ಆಗಬೇಕಿದೆ.ಅಲ್ಲದೆ ಇತ್ತೀಚಿನ ದಿನಗಳಲ್ಲಿ ರಾಜ್ಯ…
ತುಮಕೂರು: ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರವನ್ನು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ನಗರ ವೀರಶೈವ ಸಮಾಜದ ವತಿಯಿಂದ ಬೆಂಬಲಿಸಿ ನಗರದ ಭದ್ರಮ್ಮ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಹೋಮ, ಹವನ ಹಾಗೂ ಪೂಜೆಯನ್ನು ನೆರವೇರಿಸಿ, ಭಾರತೀಯ ಸೈನ್ಯಕ್ಕೆ ಹೆಚ್ಚಿನ ಶಕ್ತಿ ತುಂಬುವAತೆ ಪ್ರಾರ್ಥಿಸಲಾಯಿತು. ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿಯ ಕಾರದ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ದೇಶದ ಒಳಿತಿಗಾಗಿ ಹೋರಾಡುತ್ತಿರುವ ಸೈನಿಕರ ಆರೋಗ್ಯಕ್ಕಾಗಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಲಾಯಿತು. ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥಿಸಲಾಯಿತು. ದುಷ್ಟರ ಸಂಹಾರಕ್ಕಾಗಿ ಮಹಾಗಣಪತಿ ಹೋಮ, ಜಯಾಧಿಹೋಮ, ಶೋಭ ರಹಿತ ಹೋಮ ಸೇರಿದಂತೆ…
ತುಮಕೂರು: ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಅವರಿಂದು ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತಿಪಟೂರು ಜನಸ್ಪಂದನ ಟ್ರಸ್ಟ್ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಡಿಗ್ರಿ ಕಾಲೇಜು ವಿದ್ಯಾಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಏರ್ಪಡಿಸಲಾಗಿದ್ದ ಸಂವಿಧಾನ ಅರಿವು ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈಗ ನಮ್ಮ ಸಂವಿಧಾನವನ್ನು ರಕ್ಷಣೆ ಮಾಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ಬಂದಿದೆ, ಸಂವಿಧಾನದಲ್ಲಿ ಸಮಾನತೆ ಕೊಟ್ಟಿರುವುದರಿಂದ ಒಂದು ಧರ್ಮದಂತೆ ಸಮಾಜ ನಡೆಯಬೇಕು ಎಂದು ಮನುವಾದ ಪ್ರತಿಪಾದಿಸುತ್ತಿದ್ದವರು ಈ ಸಂವಿಧಾನವನ್ನು ವಿರೋಧ ಮಾಡಿದರು. ಮನುಸ್ಮೃತಿ ಆಶಯದವರು ಕೆಲವರು ಮಾತ್ರ ವಿದ್ಯೆ, ಸಂಪತ್ತು, ಅಧಿಕಾರ ಅನುಭವಿಸಬೇಕು ಎಂದು ಸಮಾನತೆ ನೀಡದೆ ಲಿಂಗ ತಾರತಮ್ಯ ಇರಬೇಕು ಎಂದುಕೊAಡು ಸಂವಿಧಾನದ ಮೂಲ ಆಶಯಕ್ಕೆ ವಿರೋಧಿಗಳಾಗಿದ್ದಾರೆ ಎಂದರು. ಸಂವಿಧಾನದಲ್ಲಿ ಜಾತ್ಯತೀತೆ ಹೇಳುತ್ತಿದ್ದು, ಸಮಾನವಾಗಿ ಬದುಕಬೇಕು ಎಂದು ಸಂವಿಧಾನ…
ಪಾವಗಡ: ತಾಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿಯಲ್ಲಿನ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಗೆ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಹಲವಾರು ಮೂಲ ಸೌಲಭ್ಯದಿಂದ ನರಳುತ್ತಿದ್ದು, ಸ್ಥಳದಲ್ಲಿದ್ದು ಯೋಜನೆಯನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕಾದ ಪಿಡಿಓ ಹಾಗೂ ಸಿಬ್ಬಂದಿಯವರು ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರಿಂದ ಗ್ರಾಮ ಸ್ಥರಿಗೆ ದಿಕ್ಕು ತೋಚದಂತಾಗಿದೆ. ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂ ಟರ್ ಆಪರೇಟರ್ ಬಡ್ತಿ ಪಡೆದು ಬೇರೊಂದು ಪಂಚಾಯಿತಿಗೆ ವರ್ಗಾವಣೆಯಾಗಿದ್ದಾರೆ, ಇಲ್ಲಿಯ ವರೆಗೂ ಕಂಪ್ಯೂಟರ್ ಆಪರೇಟರ್ ಅನ್ನು ನೇಮಿಸಿ ಕೊಂಡಿಲ್ಲ, ಇದರಿಂದಾಗಿ ಇ ಖಾತೆ, ನರೇಗಾ ಸೇರಿದಂತೆ ಹಲವು ಕೆಲಸಗಳನ್ನು ಮಾಡಲು ಸಾಧ್ಯ ವಾಗುತ್ತಿಲ್ಲ, ಇಲ್ಲಿನ ಸದಸ್ಯರ ಹೊಂದಾಣಿಕೆಯ ಕೊರತೆಯಿಂದಾಗಿ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಚೇರಿಗೆ ಬರುತ್ತಿಲ್ಲ ಎಂದು ತಿಳಿದು ಬಂದಿದೆ. ಪ್ರಭಾರ ಪಿ.ಡಿ.ಒ ರವರು ವಾರಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ಬರುತ್ತಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಟಾನಗೊಂಡರೆ…
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾ ರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ ಸ್ಪರ್ಧಿ ಸಲು ತಯಾರಾಗಿ ಮುನ್ನುಗ್ಗಿ ಆಗಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದಲ್ಲಿನ ಡಾ. ಜಿ.ಪಿ ನೆಕ್ಸಾಸ್ ಸಭಾಂ ಗಣದಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದಿಂದ ಆಯೋಜಿಸಿದ್ದ ಉದ್ಯಮಶೀಲತಾ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಸಾಧಿಸಲು ಸಾಕಷ್ಟು ಅವಕಾಶಗಳಿವೆ ಆ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ತಮ್ಮ ಗುರಿಯನ್ನು ತಲುಪಲು ಸಾಧ್ಯ. ಹಾಗಾಗಿ ನಿಮ್ಮ ಗರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಾಹೇ ವಿಶ್ವವಿದ್ಯಾಲಯದ ಕುಲಪತಿಗಳ ಆಪ್ತ ಸಲಹೆಗಾರರಾದ ವಿವೇಕ್ ವೀರಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳೂ ಉದ್ಯಮಿಗಳಾಗಲು ಪ್ರಯತ್ನಿಸಿ ಹಾಗೂ ಇದಕ್ಕೆ ಬೇಕಾದ ಮಾರ್ಕೆಟಿಂಗ್ ಸ್ಕಿಲ್ಸ್, ಸಂವಹನ ಕೌಶಲ್ಯವನ್ನು ಬೆಳೆಸಿಕೊಂಡು ನಿಮ್ಮ ಗುರಿಗಳತ್ತ ಮುನ್ನಡೆಯಿರಿ. ಪ್ರತಿಯೊಂದು ಆವಿಷ್ಕಾರಗಳಾಗಿರುವುದು ಅವಶ್ಯಕತೆಗಳು ಬಂದಾಗ ಮಾತ್ರ. ಹಾಗಾಗಿ…
ತುಮಕೂರು: ರಾಷ್ಟçದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ ೩೦೦೦ ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆAಟ್ ಹೋಮ್ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬAಧಿಸಿದAತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು. ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು ೧೮ ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು. ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು.…
ತುಮಕೂರು: ಇಂಡಿಯಾ-ಪಾಕಿಸ್ತಾನ್ ಯುದ್ಧ ಸಂದರ್ಭ ದಲ್ಲಿ ಜಿಲ್ಲೆಯ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಸೇವೆಗಾಗಿ ಹಾಟ್ ಲೈನ್ ಸಹಾಯ ವಾಣಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊ ಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾರತ ಸಂಚಾರ ನಿಗಮದ ಎಜಿಎಂ ಆನಂದಿ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂ ಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾನುವಾರ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಹಾಗೂ ತಾಲೂಕು ಕಚೇರಿಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಈ ಸಹಾಯವಾಣಿ ಕೇಂದ್ರಗಳು ದಿನದ ೨೪ ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸಬೇಕು. ಸಹಾಯವಾಣಿ ಕೇಂದ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿ ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಆಸ್ಪತ್ರೆ ಹಾಗೂ ಇನ್ನಿತರ ತುರ್ತು ಸೇವೆಯ ಕೇಂದ್ರಗಳಲ್ಲಿ ಅವಶ್ಯಕತೆ ಇರುವ ಎಲ್ಲಾ ಸಾಮಗ್ರಿಗಳನ್ನು ಖರೀದಿಸಿ ಇಟ್ಟುಕೊಳ್ಳಬೇಕು ಹಾಗೂ ತುರ್ತು ಪರಿಸ್ಥಿತಿ ಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮತ್ತು ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡಲು ಕ್ರಮ…
ತುಮಕೂರು: ಆಡಳಿತ ಮಂಡಳಿಯ ಆರ್ಥಿಕ ಶಿಸ್ತು, ಬದ್ಧತೆ, ಆತ್ಮವಿಶ್ವಾಸದಿಂದ ಸಹಕಾರ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲು ಸಾಧ್ಯವಿದೆ. ಠೇವಣಿದಾರರು ಸಂಸ್ಥೆಯಲ್ಲಿ ಹೂಡಿರುವ ಹಣವನ್ನು ಲಾಭದಾಯಕವಾಗಿ ಬೆಳೆಸುವ ನಂಬಿಕೆ, ವಿಶ್ವಾಸ ಗಳಿಸಿಕೊಳ್ಳಬೇಕು ಎಂದು ಹಿರೇಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಲಹೆ ಮಾಡಿದರು. ನಗರದಲ್ಲಿ ಶನಿವಾರ ತುಮಕೂರು ಸಿಟಿ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ೧೩ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ವಾರ್ಷಿಕ ಸಭೆಗಳು ಆ ಸಹಕಾರ ಸಂಸ್ಥೆಯ ಹಿಂದಿನ, ಈ ಸಾಲಿನ ಹಾಗೂ ಮುಂದಿನ ವರ್ಷದ ಸಾಧನೆ ನೋಟ, ಆಡಳಿತ ಮಂಡಳಿಯ ಆತ್ಮಾವಲೋಕನಾ ಸಭೆ. ಸದಸ್ಯರ, ಗ್ರಾಹಕರ, ಠೇವಣಿದಾರರ ನಂಬಿಕೆ, ವಿಶ್ವಾಸ ಮೂಡಿಸುವ ಸಾಧನೆ ಆಗಬೇಕು ಎಂದು ಹೇಳಿದರು. ದುಡ್ಡಿನ ಜೊತೆಗಿನ ಸಂಬAಧ, ವ್ಯವಹಾರ ಸೂಕ್ಷö್ಮವಾದದ್ದು, ಹಣಕಾಸು ಸಂಸ್ಥೆಯನ್ನು ಬಹಳ ಎಚ್ಚರಿಕೆಯಿಂದ, ಜವಾಬ್ದಾರಿಯಿಂದ ಹೆಗಲ ಮೇಲೆ ಹೊತ್ತು ನಿರ್ವಹಿಸಬೇಕಾಗುತ್ತದೆ. ಈ ಸಂಸ್ಥೆ ಅಂತಹ ಜವಾಬ್ದಾಯೊಂದಿಗೆ ಪ್ರಗತಿ ಸಾಧಿಸುತ್ತಿದೆ. ಸಂಸ್ಥೆ ಕಟ್ಟುವಲ್ಲಿ ಎಡವಿದರೆ ಎಲ್ಲರಿಗೂ ನಷ್ಟ, ಹಾನಿ ಅನುಭವುಸಬೇಕಾಗುತ್ತದೆ ಎಂದು ಎಚ್ಚರಿಕೆ…
ಹುಳಿಯಾರು: ಕಳೆದ ಮರ್ನಲ್ಕು ವರ್ಷಗಳಿಂದಲೂ ಹುಳಿಯಾರು ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಕೇಳಿಕೊಂಡರೂ ಸ್ಪಂಧಿಸಿಲ್ಲ. ಈ ವರ್ಷ ಬಿಸಿಲಿನ ಝಳ ಹೆಚ್ಚಾಗಿದ್ದು ಈ ಬೇಸಿಗೆಯಲ್ಲಾದರೂ ದಾಹ ತಣಿಸಲು ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎಂದು ಪ್ರಯಾಣಿಕರು ಹುಳಿಯಾರು ಪಟ್ಟಣ ಪಂಚಾಯ್ತಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮನವಿ ಮಾಡಿದ್ದಾರೆ. ಹುಳಿಯಾರು ಮೈಸೂರು, ಚಿತ್ರದುರ್ಗ, ಹಾಸನ, ಬೆಂಗಳೂರು, ಹೊಸದುರ್ಗ, ಬಳ್ಳಾರಿ ಹೀಗೆ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುತ್ತದೆ. ಹಾಗಾಗಿ ಹುಳಿಯಾರು ಬಸ್ ನಿಲ್ದಾಣಕ್ಕೆ ಸಸ್ತಾçರು ಜನರು ನಿತ್ಯ ಬಂದೋಗುತ್ತಾರೆ. ಅಲ್ಲದೆ ಶಾಲಾಕಾಲೇಜಿಗೆ ಮಕ್ಕಳು, ಆಸ್ಪತ್ರೆಗಳಿಗೆ ರೋಗಿಗಳು, ಬ್ಯಾಂಕ್ಗಳಿಗೆ ವೃದ್ಧರು, ಅಂಗವಿಕಲರು, ವ್ಯಾಪಾರ ವಹಿವಾಟಿಗೆ ಸಹ ಇಲ್ಲಿಗೆ ಜನರು ಬರುತ್ತಾರೆ. ಆದರೆ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ನಾನಾ ಕಡೆಯಿಂದ ಬಸ್ ಹಿಡಿಯಲು ಆಗಮಿಸಿದ ಪ್ರಯಾಣಿಕರಿಗೆ ನೀರಿನ ಬವಣೆಯ ಬಿಸಿ ತಟ್ಟಿದೆ. ಈ ಬಸ್ ನಿಲ್ದಣದಲ್ಲಿ ಮುದ್ದಹನುಮೇಗೌಡರು ಸಂಸದರಾಗಿದ್ದ ಸಂದರ್ಭದಲ್ಲಿ ಶುದ್ದ ನೀರಿನ ಘಟಕ ನಿರ್ಮಿಸಿದ್ದರು. ಆದರೆ…










