Author: News Desk Benkiyabale

ತುರುವೇಕೆರೆ: ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಬಸವ ಜಯಂತಿಯನ್ನು ಆ ಚರಿಸಲಾಯಿತು. ಶಾಸಕ ಎಂ.ಟಿ.ಕೃಷ್ಣಪ್ಪನವರು ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು ಸಮಾಜದ ವಿವಿಧ ಸ್ತರದ ಜನರು ತಮ್ಮ ಕಾಯಕವನ್ನು ನಿಷ್ಠೆಯಿಂದ ಮಾಡುವ ಮೂಲಕ ಅದರಲ್ಲೇ ಆಧ್ಯಾತ್ಮಿಕ ನೆಲೆಯನ್ನು ಕಂಡುಕೊಳ್ಳುವAತೆ ಮಾಡಿದ ಮಹಾನ್ ಜ್ಞಾನಿಯಾಗಿದ್ದರು. ನಡೆ ನುಡಿಗಳು ಒಂದಾದಾಗ ಮಾತ್ರ ವ್ಯಕ್ತಿತ್ವ ಪರಿಪೂರ್ಣಗೊಳ್ಳಲು ಸಾದ್ಯವಿದೆ ಎಂದು ನಂಬಿದ್ದವರು. ‘ಇವನಾರವ ಇವನಾರವ ಎನ್ನದೆ, ಇವ ನಮ್ಮವ’ ಎನ್ನುವ ಮೂಲಕ ಸಮಾಜದಲ್ಲಿ ಮೇಲು ಕೀಳು ಎಂಬ ಬೇಧಬಾವ ಬಿಡಬೇಕು. ಸಾಮಾಜಿಕ, ಧಾರ್ಮಿಕವಾಗಿ ಎಲ್ಲರೂ ಸಮಾಜದಲ್ಲಿ ಸರಿಸಮಾನತೆ ಜೀವನ ನಡೆಸ ಬೇಕು. ಢಾಂಬಿಕತೆ ತೊರೆದು ನಿಷ್ಕಲ್ಮಶ ಭಕ್ತಿಯನ್ನು ಹೊಂದ ಬೇಕು. ಹೆಣ್ಣು, ಗಂಡಿನ ನಡುವೆ ಯಾವುದೇ ಬೇಧ ತೊರಬಾರದು ಇಬ್ಬರ ಸಮಾನರು. ಮಹಿಳೆಗೆ ಶಿಕ್ಷಣದ ಜೊತೆಗೆ ಧಾರ್ಮಿಕ ಸ್ವಾತಂತ್ರ‍್ಯವನ್ನು ನೀಡಬೇಕು ಎಂದು ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ ಎಂದರು. ತಹಶೀಲ್ದಾರ್ ಎನ್.ಎ.ಕುಂಞಅಹಮದ್ ಮಾತನಾಡಿ, ಬಸವಾಧಿ ಶರಣರ ವಚನಗಳು ಮನುಷ್ಯನ…

Read More

ತುಮಕೂರು: ನಗರ ವೀರಶೈವ ಸಮಾಜ ಸೇವಾ ಸಮಿತಿ, ವೀರಶೈವ ಸಮಾಜದ ಅಂಗ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಜಗದ್ಗುರು ರೇಣುಕಾಚಾರ್ಯರ, ಜಗಜ್ಯೋತಿ ಶ್ರೀ ಬಸವೇಶ್ವರರ ಮತ್ತು ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರರ ಜಂಟಿ ಜಯಂತ್ಯೋತ್ಸವ ಹಾಗೂ ಬಸವಜಯಂತಿ ಅಂಗವಾಗಿ ಅರಳೇಪೇಟೆ ಶ್ರೀ ಬಸವೇಶ್ವರ ದೇವಾಲಯದಲ್ಲಿ ಬೆಳಗ್ಗೆ ರುದ್ರಾಭಿಷೇಕ, ಮಹಾಮಂಗಳರಾತಿ, ಪ್ರಸಾದ ವಿನಿಯೋಗ ನಡೆಯಿತು. ಬುಧವಾರ ಸಂಜೆ ಮೆರವಣಿಗೆಯು ಅರಳೇಪೇಟೆ ದೇವಾಲಯದಿಂದ ಹೊರಪೇಟೆ, ಮಂಡಿಪೇಟೆ ಆಯಿಲ್ ಮಿಲ್ ರಸ್ತೆ, ನರಸಿಂಗ ಸ್ಟೋರ್ ಮುಂಭಾಗದಿAದ ಮಂಡಿಪೇಟೆಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಬಳಿ ಮುಕ್ತಾಯವಾಯಿತು. ಜಗದ್ಗುರು ಶ್ರೀ ರೇಣುಕಾಚಾರ್ಯರ, ಜಗಜ್ಯೋತಿ ಶ್ರೀ ಬಸವೇಶ್ವರರ ಮತ್ತು ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರರ ಜಂಟಿ ಉತ್ಸವ ವಿವಿಧ ಕಲಾ ತಂಡ ಹಾಗೂ ಆನೆ ಲಕ್ಷಿö್ಮ ಪಾಲ್ಗೊಳ್ಳುವಿಕೆಯೊಂದಿಗೆ ವೈಭವವಾಗಿ ನಡೆಯಿತು ನಡೆಯಿತು. ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ಉತ್ಸವದ ಉದ್ಘಾಟನೆ ನೆರವೇರಿಸುವರು. ಶ್ರೀ ಚನ್ನಬಸವರಾಜೇಂದ್ರ ಸ್ವಾಮಿಗಳು, ಶ್ರೀ ಅಟವೀ ಶಿವಲಿಂಗ ಸ್ವಾಮಿಗಳು, ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು, ಶ್ರೀ ವೀರಭದ್ರ…

Read More

ಹುಳಿಯಾರು: ಹೋಬಳಿ ಕೆಂಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ರಥೋತ್ಸವ ಬುಧ ವಾರ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಸಹ ಸ್ತಾçರು ಭಕ್ತರ ಸಮ್ಮು ಖದಲ್ಲಿ ಅದ್ದೂರಿ ಜರುಗಿತು. ಬಸವ ಜಯಂತಿ ಹಿನ್ನೆಲೆ ಚನ್ನಬಸವೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾ ಗಿತ್ತು, ಸ್ವಾಮಿಯನ್ನು ಬಸ ವನ ಉತ್ಸವ ಹಾಗೂ ಧ್ವಜದ ಕುಣಿತದೊಂದಿಗೆ ಮೆರವ ಣಿಗೆಯಲ್ಲಿ ಕರೆತಂದು, ಗಣ ಪತಿ ಪೂಜೆ, ಪುಣ್ಯಾಹ, ದಿಕ್‌ಬಲಿ ಹರಣ ಮತ್ತು ಅಷ್ಟೋತ್ತರ ಪೂಜೆ ಮುಂತಾದ ಪೂಜಾ ಕೈಂಕರ್ಯದೊAದಿಗೆ ಆರಂಭವಾದ ಶ್ರೀ ಸ್ವಾಮಿಯವರ ಮಹಾ ರಥೋತ್ಸವಕ್ಕೆ ದೇವಸ್ಥಾವದ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ರಂಗು ರಂಗಿನ ಬಾವುಟಗಳು, ತಳಿರು ತೋರಣಗಳು, ಎಳನೀರಿನ ಗೊಂಚಲುಗಳು, ಬಾಳೆಗೊನೆ, ಕೊಬ್ಬರಿಹಾರ ಹಾಗೂ ಹೂವಿನ ಹಾರಗಳಿಂದ ಶೃಂಗಾರಗೊAಡು, ಮಂಗಳ ವಾದ್ಯಗಳೊಂದಿಗೆ ಸಾಗಿಬಂದ ಅದ್ದೂರಿ, ಆಕರ್ಷಕ, ವೈಭವದ ಮಹಾ ರಥೋತ್ಸವವನ್ನು ಗ್ರಾಮಸ್ಥರು ಜಯ ಘೋಷದೊಂದಿಗೆ ರಥ ಎಳೆದು ಸಂಭ್ರಮಿಸಿದರು. ೩ ವರ್ಷಗಳ ನಂತರ ನಡೆಯು ತ್ತಿರುವ ರಥೋತ್ಸವ…

Read More

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ೮೮೯ನೇ ಬಸವೇಶ್ವರ ಜಯಂತಿಯನ್ನು ನಗರದ ಅಮಾನಿಕೆರೆಯ ಪಾರ್ಕ್ನಲ್ಲಿ ಆಚರಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್‌ರವರು ಮಾತನಾಡುತ್ತಾ ೧೨ನೇ ಶತಮಾನದಲ್ಲಿ ವಚನ ಕ್ರಾಂತಿಯ ಮೂಲಕ ಸಮಾಜದಲ್ಲಿ ಸಮಾನತೆಯನ್ನು ಸಾಧಿಸಿದ, ದಾರ್ಶನಿಕ, ಸಾಂಸ್ಕೃತಿಕ ನಾಯಕ ವೀರ ಶರಣ ಜಗಜ್ಯೋತಿ ಬಸವಣ್ಣನವರ ಚಿಂತನೆಗಳು, ತತ್ವ ಆ ದರ್ಶಗಳು, ಇಂದಿಗೂ ಪ್ರಸ್ತುತ. ಸಾಮಾಜಿಕ ಸುಧಾರಣೆಗೆ ಅವರು ನೀಡಿರುವ ಕೊಡುಗೆಗಳು ಅಪಾರ, ಶಿವಶರಣರ ಒಗ್ಗೂಡುವಿಕೆಗೆ ರಚಿಸಿದ ಅನುಭವ ಮಂಟಪವು, ದೇಶದ ಸಂಸತ್ ಭವನ ನಿರ್ಮಾಣಕ್ಕೂ ಪ್ರೇರಣೆಯಾಗಿದೆ. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದು ಪ್ರಶ್ನಿಸಿದ ಬಸವಣ್ಣನವರ ಅನೇಕ ವಚನಗಳು ಸಾಮಾಜಿಕ, ಧಾರ್ಮಿಕ ಕ್ರಾಂತಿಗೆ ಕಾರಣವಾಗಿದೆ. ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಸ್ಥಾನ ಪಡೆದು ಸರ್ವ ಧರ್ಮದ ಸಮಾನತೆಯನ್ನು ಸಾರಿ, ಬಡ ಜನತೆಗೆ…

Read More

ಪಟ್ಟನಾಯಕನಹಳ್ಳಿ: ಜನ್ಮ ಕೊಟ್ಟ ತಂದೆ-ತಾಯಿ, ವಿದ್ಯೆ ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಲು ಜ್ಞಾನವನ್ನು ನೀಡುವ ಗುರುಗಳನ್ನು ನಮ್ಮ ಬದುಕಿನಲ್ಲಿ ಆದರ್ಶವಾಗಿಟ್ಟುಕೊಂಡು ಮುನ್ನಡೆ ದಾಗ ಯಶಸ್ಸು ತಾನಾಗಿಯೇ ಲಭಿಸಲಿದೆ ಎಂದು ನಾರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಚಂಗಾವರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪಿ.ಜಿ. ಮಂಜುನಾಥ್ ರವರಿಗೆ ಬೀಳ್ಕೊಡುಗೆ ಮತ್ತು ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಜ್ಞಾನ ಎಂಬ ವಿದ್ಯ ನೀಡಿ ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಯಾಗಿ ಬದುಕಲು ದಾರಿದೀಪವಾದ ಶಿಕ್ಷಕರು ದೈವ ಸ್ವರೂಪಿಗಳು ಎಂದರು. ಶಿರಾ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ ಮಾತನಾಡಿ ಹಲವಾರು ದಶಕ ಗಳಿಂದ ಚಂಗಾವರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಕಲಿಸಿ ಯಶಸ್ವಿ ವ್ಯಕ್ತಿಗಳಾಗಿ ರೂಪಿಸಿದ ಮುಖ್ಯ ಶಿಕ್ಷಕರಾದ ಪಿ.ಜಿ. ಮಂಜುನಾಥ್ ರವರ ಸೇವೆ ಅವಿಸ್ಮರಣೀಯ ಎಂದರು. ತಾಲೂಕು ಪಂಚಾಯಿತಿ ಕಾರ್ಯ ನಿರ್ವ ಹಣಾಧಿಕಾರಿ…

Read More

ತುಮಕೂರು:  ಆಡುವುದೊಂದು ಮಾಡುವುದೊಂದು ಆದರೆ ವ್ಯಕ್ತಿಯನ್ನು ಸಮಾಜ ಗೌರವಿಸುವುದಿಲ್ಲ. ಮಾತು ಕೃತಿಗೆ ಬಂದಾಗಲೇ ವ್ಯಕ್ತಿ ಶ್ರೇಷ್ಠನೆನಿಸಿಕೊಳ್ಳುವುದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಬಸವೇಶ್ವರ ಅಧ್ಯಯನ ಪೀಠ ಬುಧವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿವಿ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಬಸವಣ್ಣ ಮೊದಲಾದ ಮಹಾತ್ಮರನ್ನು ನಿರ್ದಿಷ್ಟ ಜಾತಿ, ಸಮುದಾಯಗಳಿಗೆ ಸೀಮಿತಗೊಳಿಸಬಾರದು. ಅವರ ತತ್ವಗಳ ಸ್ಮರಣೆ ಜಯಂತಿಗಳಿಗೂ ಸೀಮಿತವಾಗಬಾರದು ಎಂದರು. ಕಾಯಕವೇ ಕೈಲಾಸ ತತ್ವವೊಂದನ್ನು ಅಳವಡಿಸಿಕೊಂಡರೆ ವ್ಯಕ್ತಿ ಮಹಾತ್ಮನಾಗುತ್ತಾನೆ. ಸಮಾಜ ಸುಧಾರಣೆಯ ಪ್ರಕ್ರಿಯೆ ವಿಶ್ವವಿದ್ಯಾನಿಲಯಗಳಿಂದ ಆರಂಭವಾಗಬೇಕು ಎಂದು ಅಭಿಪ್ರಾಯಪಟ್ಟರು. ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಸಮಾನತೆಯ ಹರಿಕಾರರಾದ ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲೇ ಮಹಿಳಾ ಸಬಲೀಕರಣದ ಬಗ್ಗೆ ಗಟ್ಟಿ ದನಿಯಲ್ಲಿ ಮಾತನಾಡಿದವರು. ಗುಡಿಯಲ್ಲಿದ್ದ ದೇವರನ್ನು ಅಂಗೈಗಳಿಗೆ ತಂದಿಟ್ಟವರು ಎಂದರು. ಬಸವೇಶ್ವರ ಅಧ್ಯಯನ ಪೀಠದ ಸಂಚಾಲಕ ಡಾ. ವೆಂಕಟರೆಡ್ಡಿ ರಾಮರೆಡ್ಡಿ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಬಸವಣ್ಣನವರು ನೀಡಿದ ಕೊಡುಗೆ ಅಪಾರ.…

Read More

ತುಮಕೂರು: ೨ನೇ ಶತಮಾನದಲ್ಲಿ ದೇವನೊಬ್ಬ ನಾಮ ಹಲವು,ಕಾಯಕವೇ ಕೈಲಾಸ,ಪರಸ್ತಿçà ಸಹೋದರಿಯ ಸಮ,ಪರಧನ ನಮ್ಮದಲ್ಲ,ದೇವನೊಬ್ಬ ನಾಮ ಹಲವು,ಕೆಲಸದಲ್ಲಿ ಮೇಲು ಕೀಳು ಅಂತ ಯಾ ವುದೂ ಇಲ್ಲ,ದುಡಿದು ತಿನ್ನುವ ಕೈಗಳೇ ಶ್ರೇಷ್ಠ,ವಿಶ್ವದ ಮೊದಲ ಪಾರ್ಲಿಮೆಂಟ್ ಎಂದು ಅನುಭವ ಮಂಟಪವನ್ನು ಸ್ಥಾಪಿಸಿ ಅಲ್ಲಿ ಎಲ್ಲಾ ಜಾತಿ ಜನಾಂಗದವರನ್ನು ಒಂದೆಡೆ ಸೇರಿಸಿ ಸಮಾಜದ ಹಲವು ಸಮಸ್ಯೆಗಳಿಗೆ ಚರ್ಚಿಸಿ ತಕ್ಷಣವೇ ಪರಿ ಹಾರ ಕಂಡುಕೊAಡು ವಿಶ್ವದ ಶಕ್ತಿಯಾಗಿ ವಿಶ್ವದ ಜ್ಯೋತಿಯಾಗಿ ಬಾಳಿ ಬದುಕಿ ನಮಗೆ ಉತ್ತಮ ದಾರಿ ಕಲ್ಪಿಸಿದ್ದು ಜಗಜ್ಯೋತಿ ಬಸವೇಶ್ವರರು ಎಂದು ಸಮಾಜಸೇವಕ,ವೀರಶೈವ ಮುಖಂಡರಾದ ಎಸ್.ಆರ್.ಶಿವಶಂಕರ್ ರವರು ತಿಳಿಸಿದರು. ಅವರು ಇಂದು ಜಯನಗರಪೂರ್ವ ಬಡಾವಣೆಯ ೧ನೇ ಮುಖ್ಯರಸ್ತೆಯಲ್ಲಿರುವ ಅಶ್ವತ್ಥಕಟ್ಟೆಯ ಬಳಿ ಜಯನಗರ ಕ್ಷೇಮಾಭಿವೃದ್ಧಿ ಸಂಘ,ಸ್ಮಾರ್ಟ್ಸಿಟಿ ಹಣ್ಣು-ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರಿಂದ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವೀರಶೈವ ಮುಖಂಡರೂ ಬಡಾವಣೆಯ ಹಿರಿಯರಾದ ಪಾಲಾಕ್ಷಯ್ಯನವರು ಮಾತನಾಡುತ್ತಾ ಜಾತಿ,ಮತ,ಪಂಥಗಳನ್ನು ಪಕ್ಕಕ್ಕೆ ಸರಿಸಿ ಮಾನವ ಜಾತಿಯೇ ಶ್ರೇಷ್ಠ,ಬಡಿದು ತಿನ್ನುವುದಕ್ಕಿಂತ ದುಡಿದು ತಿನ್ನುವವನೇ ಶ್ರೇಷ್ಠ,ಮಾನವೀಯತೆ,ದಯೆ ಇಲ್ಲದ ಧರ್ಮವು ಧರ್ಮವೇ…

Read More

ತುಮಕೂರು: ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಆಟೋ ಚಾಲಕರು ಹಾಗೂ ಇಶ್ರಮ್ ಯೋಜನೆಯಡಿ ವಿವಿಧ ವರ್ಗದ ಕಾರ್ಮಿಕರನ್ನು ನೋಂದಣಿ ಮಾಡುವ ಅಭಿಯಾನವನ್ನು ಮೇ ೫ರಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಅಭಿಯಾನದಲ್ಲಿ ನೋಂದಾ ಯಿಸುವವರ ವಯೋಮಿತಿ ೧೮ ರಿಂದ ೬೦ ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಪಿ.ಎಫ್. ಹಾಗೂ ಇ.ಎಸ್.ಐ ಸೌಲಭ್ಯ ಹೊಂದಿರಬಾರದು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ. ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅರ್ಹರು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಊರ್ಜಿತ ಚಾಲನಾ ಪರವಾನಗಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಅಭಿಯಾನದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ/ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು…

Read More

ಪಾವಗಡ: ವಿಶ್ವದಾದ್ಯಂತ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣ ಅವರು ಸರ್ವ ಜನಾಂಗಗಳ ನಾಯಕರಾಗಿದ್ದರು ಎಂದು ತಹಶೀಲ್ದಾರ್ ಡಿ.ಎನ್. ವರದರಾಜು ತಿಳಿಸಿದರು, ಬುಧವಾರ ಪಟ್ಟಣದ ತಾಲೂಕು ಕಚೇರಿಯ ಸಭಾಂ ಗಣದಲ್ಲಿ ಜಗದ್ಗುರು ಬಸವಣ್ಣನವರ ಜಯಂತಿಯನ್ನು ಸರಳವಾಗಿ ಆಚರಿಸುವುದರ ಜೊತೆಗೆ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಹಿಸಿ ಮಾತನಾಡಿದ ಅವರು, ಪ್ರಪಂಚದಾದ್ಯAತ ಸಮಾಜದ ಒಳಿತಿಗಾಗಿ ವಚನಗಳ ಮೂಲಕ ಸಮಾನ ತೆಯನ್ನು ತಿಳಿ ಹೇಳಿದ ಬಸವಣ್ಣನವರು ನಮ್ಮೆಲ್ಲರಿಗೂ ಆದರ್ಶವಾಗಿದ್ದರು. ಜೊತೆಗೆ ತಮ್ಮ ಅನುಯಾಯಿಗಳ ಮೂಲಕವೂ ಸಹ ಮನೆಮನೆಗಳಿಗೆ ತೆರಳಿ ಸಮಾನತೆಯ ಬಗ್ಗೆ ತಿಳಿ ಹೇಳುವ ಕೆಲಸ ಮಾಡಿದ್ದರು ಎಂದರು. ಜಗದ್ಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಗ್ರೇಡ್ ೨ ತಹಸೀಲ್ದಾರ್ ಚಂದ್ರಶೇಖರ್, ಆರ್. ರಾಜಗೋಪಾಲ್, ಗ್ರಾಮ ಆಡಳಿತ ಅಧಿಕಾರಿಗಳಾದ ಈರಣ್ಣ ಗೋರ್ನಾಳ್, ರಾಜೇಶ್, ರವಿಕುಮಾರ್, ಸಿಬ್ಬಂದಿ ಪದ್ಮಾ, ಬಲರಾಂ,ಅಸ್ಲಾA, ಲಿಂಗಾಯತ ಸಮಾಜದ ಮುಖಂಡರಾದ ಕಾರ್ತಿಕ್ ರಾಜನ್, ಪ್ರೇಸ್ ನಾಗಭೂಷಣ್, ಶ್ರೇಯಸ್, ಹೆಚ್ ಕೃಷ್ಣಮೂರ್ತಿ, ವಕೀಲರಾದ ಆರ್ ಹನುಮಂತರಾಯ, ಎಂ.ಜಿ.ಮAಜುನಾಥ್, ರೈತ ಸಂಘದ ಗೋಪಾಲ್ ಸೇರಿದಂತೆ…

Read More

ತುಮಕೂರು: ದಿ: ೦೬/೧೨/೨೦೨೨ ರಂದು ನೊಂದ ಬಾಲಕಿಯ ತಾಯಿ ಠಾಣೆಗೆ ಹಾಜರಾಗಿ ನೀಡಿದ ದೂರನ್ನು ಪಡೆದು ತುಮಕೂರು ಮಹಿಳಾ ಪೊಲೀಸ್ ಠಾಣಾ ಮೊನಂ: ೧೫೭/೨೦೨೨ ಕಲಂ: ೩೭೬,೫೦೬ ಐಪಿಸಿ ಮತ್ತು ಕಲಂ: ೦೬ ಪೋಕೋ ಆಕ್ಟ್ ಪ್ರಕರಣವನ್ನು ಮನೋಹರ ಬಾಬು ಮುಖ್ಯ ಪೇದೆ ರವರು ದಾಖಲಿಸಿರುತ್ತಾರೆ. ನಂತರ ಪೊಲಿಸ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ಒ.ಃ ಮಹಿಳಾ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿಯಾದ ಖಾಮಿಲ್ ಪಾಷ ವಾಸ: ಪಿ.ಹೆಚ್ ಕಾಲೋನಿ ತುಮಕೂರು ಟೌನ್ ರವರನ್ನು ದಸ್ತಗಿರಿ ಮಾಡಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿಕೊಂಡಿರುತ್ತಾರೆ. ಸದರಿ ಪ್ರಕರಣವನ್ನು ಸ್ಪೆಷಲ್ ಸಿ.ಸಿ ನಂ:೫೦೬/೨೦೨೩ ರಲ್ಲಿ ಮಾನ್ಯ ತುಮಕೂರು ಎಫ್.ಟಿ.ಎಸ್.ಸಿ-೧ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿ ಆರೋಪಿಯ ವಿರುದ್ಧ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ದಿ: ೨೮/೦೪/೨೦೨೫ ರಂದು ಈ ಪ್ರಕರಣದ ಆರೋಪಿ ಖಾಮಿಲ್ ಪಾಷ ರವರಿಗೆ ಜೀವಾವಧಿ ಶಿಕ್ಷೆ ಮತ್ತು ೧ ಲಕ್ಷ ೫೦ ಸಾವಿರ…

Read More