ವಿಶ್ವ ಗುರು, ಜಾಗತಿಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣ ರವರ ಜಯಂತಿಯ ದಿನವಾದ ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬೆಳಗ್ಗೆ ೦೮:೩೦ ರ ಸಮಯದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಐಪಿಎಸ್ ರವರು ಪುಪ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಅಬ್ದುಲ್ ಖಾದರ್, ಸಿ. ಗೋಪಾಲ್ ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತಿತರಿದ್ದರು.
Author: News Desk Benkiyabale
ತುಮಕೂರು: ಜಗತ್ತಿನ ಮೊದಲ ಸಂಸತ್ತು ಎಂದು ಕರೆಯಲ್ಪಡುವ ಅನುಭವ ಮಂಟಪ, ವಿವಿಧ ಸಮುದಾಯಗಳ ಜನರ ಅನುಭವ ಮತ್ತು ಆನುಭಾವದ ಸಮ್ಮೀಲನ ಎಂದು ಅಪರಜಿಲ್ಲಾಧಿಕಾರಿಡಾ.ತಿಪ್ಪೇಸ್ವಾಮಿಅಭಿಪ್ರಾಯಪಟ್ಟಿದ್ದಾರೆ. ನಗರದಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಮಹಾನಗರಪಾಲಿಕೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ವೀರಶೈವ, ಲಿಂಗಾಯಿತ ಸಮುದಾಯದ ಸಂಘಟನೆಗಳ ಸಹಕಾರದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದಅವರು,ಜಾತಿ, ಮತ, ಲಿಂಗ ಭೇದವಿಲ್ಲದೆಎಲ್ಲ ಸಮುದಾಯವರಿಗೂತಮ್ಮ ನೋವು, ನಲಿವುಗಳನ್ನು ಅಭಿವ್ಯಕ್ತಿಗೊಳಿಸಲು ಅವಕಾಶವಿದ್ದ ಮೊದಲು ವೇದಿಕೆ ಅನುಭವ ಮಂಟಪಎAದರು. ಬಸವಣ್ಣನವರ ವಚನಗಳಲ್ಲಿ ನಾಡಿನ ಸಾಂಸ್ಕೃತಿಕ, ಸಾಮಾಜಿಕ,ಆರ್ಥಿಕ, ರಾಜಕೀಯ, ಧಾರ್ಮಿಕ ವಿಚಾರಗಳನ್ನು ಒಳಗೊಂಡಿದ್ದು, ಇಂದಿಗೂ ಪ್ರಸ್ತು ತವಾಗಿದೆ. ಪಂಡಿತ, ಪಾಮರರ ಭಾಷೆಗೆ ಬದಲಾಗಿ, ಜನರಆಡು ಭಾಷೆಯಾದಕನ್ನಡದ ಮೂಲಕ ಜಗತ್ತಿನ ಆಗು ಹೋಗುಗಳನ್ನು ತಿಳಿಸುವ ಮೂಲಕ ಜನರನ್ನು ಜಾಗೃತಗೊಳಿಸುವ ಕೆಲಸವನ್ನು ಬಸವಣ್ಣವರು ವಚನ ಸಾಹಿತ್ಯದ ಮೂಲಕ ಮಾಡಿದರು.ಸಕಲ ಜೀವರಾಶಿಗಳಿಗೆ ಲೇಸನ್ನೇ ಬಯಸಿದ ಅವರು, ನುಡಿದಂತೆ ನಡೆದವರು.ಅಲ್ಲದೆ ಸಮಾಜದಲ್ಲಿ ನಡೆ, ನುಡಿಗಳು ಹೇಗಿರಬೇಕುಎಂಬುದನ್ನು ತೋರಿಸಿಕೊಟ್ಟರು.ಕಾಯಕ, ದಾಸೋಹದ ಎಂಬ…
ತುಮಕೂರು: ವಿಶ್ವದಲ್ಲಿ ಪಶು ವೈದ್ಯಕೀಯ ಕ್ಷೇತ್ರವು ವೈದ್ಯಕೀಯ ಕ್ಷೇತ್ರಕ್ಕೆ ಸರಿಸಮನಾಗಿ ಬೆಳೆದಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವೈ.ಜಿ. ಕಾಂತರಾಜು ಅಭಿಪ್ರಾಯಪಟ್ಟರು. ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸಂಘದ ಸಹಯೋಗದಲ್ಲಿ ನಗರದಲ್ಲಿ ಏ. ೨೬ರಂದು ಹಮ್ಮಿಕೊಂಡಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆ ಮತ್ತು ತಾಂತ್ರಿಕ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶು ವೈದ್ಯಕೀಯ ವೃತ್ತಿ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಅಮೋಘವಾದ ಸಂಶೋಧನೆಗಳ ಮೂಲಕ ಉತ್ತಮ ರಾಸುಗಳ ತಳಿಗಳನ್ನು ಅಭಿವೃದ್ಧಿಗೊಳಿಸಿದೆ. ನಾಗಾಲೋಟದಲ್ಲಿ ಬೆಳೆದಿರುವ ಮಾನವ ಸಂಕುಲಕ್ಕೆ ಸಾಕಾಗುವಷ್ಟು ಪ್ರಾಣಿಜನ್ಯ ಪೋಷಕಾಂಶಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಇದರ ಜೊತೆಗೆ ಪ್ರಾಣಿಜನ್ಯ ರೋಗಗಳನ್ನು ಪತ್ತ ಹಚ್ಚಿ ತಡೆಗಟ್ಟುವ ಮೂಲಕ ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ವಿಶ್ವದ ಆರ್ಥಿಕ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು. ಒನ್ ಹೆಲ್ತ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಪಶುವೈದ್ಯಕೀಯ ಕ್ಷೇತ್ರ ಮಹತ್ತರವಾದ ಪಾತ್ರವಹಿಸಿದೆ. ಪಶುವೈದ್ಯಕೀಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಮಹನೀಯರನ್ನು ಹಾಗೂ ಅವರ…
ತುರುವೇಕೆರೆ: ಹದಗೆಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಅಮ್ಮಸಂದ್ರ ಹಾಗೂ ದಂಡಿನಶಿವರ ಗ್ರಾಮಸ್ಥರು ಅಮ್ಮಸಂದ್ರ ಶುದ್ದನೀರಿನ ಘಟಕದ ಬಳಿ ಸೋಮವಾರ ರಸ್ತೆಗೆ ತೆಂಗಿನ ಸಸಿ ನೆಡುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೆ.ಸಿದ್ದಗಂಗಯ್ಯ ಬಿ.ಹೆಚ್. ರಸ್ತೆಯಿಂದ ಕಲ್ಲೂರು, ತುರುವೇಕೆರೆ ಹಾಗೂ ಬಾಣಸಂದ್ರ ಮುಖ್ಯ ಸಂಪರ್ಕ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ದಿನಾಲು ನೂರಾರು ವಾಹನಗಳು ಈ ಭಾಗದಲ್ಲಿ ಸಂಚರಿಸಲಿವೆ. ಇಲ್ಲಿ ರೈಲ್ವೇ ನಿಲ್ದಾಣವೂ ಇರುವುದರಿಂದ ಈ ಭಾಗದಲ್ಲಿ ಹೆಚ್ಚು ವಾಹನಗಳು ಸಂಚರಿಸಲಿದ್ದು. ಅಮ್ಮಸಂದ್ರದಿAದ ನಾಗರಕಟ್ಟೆ ವರೆಗೆ ಮದ್ಯೆ ಮದ್ಯೆ ರಸ್ತೆ ಗುಂಡಿ ಬಿದ್ದು ಸಂಪೂರ್ಣ ರಸ್ತೆ ಹಾಳಾಗಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಾದಿಯಾಗಿ ಪ್ರಯಾಸ ಪಡುವಂತಾಗಿದೆ. ಈಗಾಗಲೇ ಅದೆಷ್ಟೋ ಆವಘಡಗಳು ಸಂಭವಿಸಿವೆ. ಇದೀಗ ಒಂದು ವಾರಗಳ ಕಾಲ ನಡೆಯುವ ದಂಡಿನಶಿವರ ಗ್ರಾಮದೇವತೆ ಶ್ರೀ ಹೊನ್ನಾದೇವಿ ಜಾತ್ರೆ ಪ್ರಾರಂಬವಾಗುತ್ತಿದ್ದು ಪ್ರತಿ ದಿನ ಸಾವಿರಾರು ಜನ ಜಾತ್ರೆಗೆ ಆಗಮಿಸಲಿದ್ದಾರೆ. ನೂರಾರು ವಾಹನಗಳು ಈ…
ತುರುವೇಕೆರೆ: ಹಲ್ಲೆ ಮಾಡಿ ಪರಾರಿಯಾಗಿರುವ ಮಹೇಶ್, ರಾಮಣ್ಣ, ತಂಗ್ಯಮ್ಮ, ಮಂಜುನಾಥ್ ಆರೋ ಪಿಗಳನ್ನು ಪೋಲೀಸರು ಬಂದಿಸುವಲ್ಲಿ ವಿಪಲರಾಗಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ಕೆಂಪಮ್ಮ ಮತ್ತು ನವೀನ್ ಕುಟುಂಬದವರು ಪಟ್ಟಣದ ಪೋಲೀಸ್ ಠಾಣೆ ಮುಂಬಾಗ ಸೋಮವಾರ ಪ್ರತಿಭಟನೆ ನೆಡೆಸಿ ಒತ್ತಾಯಿಸಿದರು. ತಾಲ್ಲೂಕಿನ ನರೀಗೆಹಳ್ಳಿ ಗ್ರಾಮದ ಮುನೇಶ್ ಮಾತನಾಡಿ ಸಂಬAದಿಗಳಾದ ಆರೋಪಿಗಳು ಹಾಗಿರುವ ರಾಮಣ್ಣ, ತಂಗ್ಯಮ್ಮ, ಮಹೇಶ್, ಸಿದ್ದಮ್ಮ ರವರು ಕೆಲ ದಿನಗಳ ಹಿಂದೆ ಗಾಲಾಟೆ ನೆಡೆಸಿ ನಮ್ಮ ತಾಯಿ ಕೆಂಪಮ್ಮ, ಅಣ್ಣನಾದ ನವೀನ್ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ್ದರು. ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು .ಈ ಘಟನೆ ಬಗ್ಗೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಆರೋಪಿಗಳ ಮೇಲೆ ಕೇಸ್ ದಾಖಲಾಗಿತ್ತು. ಅದಲ್ಲದೇ ತುಮಕೂರು ಎಸ್.ಪಿ.ಕಛೇರಿ ಮುಂಬಾಗದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ಮಾಡಿದ್ದು ಈ ಸಂದರ್ಭದಲ್ಲಿ ಅಡಿಷನಲ್ ಎಸ್.ಪಿ. ಅಬ್ದುಲ್ ಖಾದರ್ ಆರೋಪಿಗಳನ್ನು ಬಂದಿಸಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದರು ಅದು ಸಹ ಹುಸಿಯಾಗಿದೆ. ಪ್ರಕರಣ ದಾಖಲಾಗಿ ಸುಮಾರು ೧೫ ದಿನಗಳು ಕಳೆದರು ಅರೋಪಿಗಳನ್ನು ಪೋಲೀಸರು…
ತುಮಕೂರು: ರೈತರು ತಮ್ಮ ರಾಸುಗಳಿಗೆ ತಪ್ಪದೇ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಹೆಚ್.ಎ.ನಂಜೇಗೌಡ ಮನವಿ ಮಾಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಸಹಯೋಗದಲ್ಲಿ ತುಮಕೂರು ತಾಲ್ಲೂಕು ಕೆಸರಮಡು ಗ್ರಾಮದಲ್ಲಿ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ೭ನೇ ಸುತ್ತಿನ ರಾಷ್ಟಿçÃಯ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ(ಎನ್.ಎ.ಡಿ.ಸಿ.ಪಿ.)ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಡಾ: ವೈ.ಜಿ.ಕಾಂತರಾಜು ಮಾತನಾಡಿ ಕಾಲುಬಾಯಿ ರೋಗದ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು. ರೋಗ ನಿರ್ಮೂಲನೆ ಮಾಡಲು ಲಸಿಕೆಯೊಂದೇ ಮಾರ್ಗವಾಗಿದ್ದು, ಎಲ್ಲಾ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ: ಜಿ.ಮಲ್ಲೇಶಪ್ಪ, ಡಾ: ಎಂ. ಸುರೇಶ್, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿಲೀಪ್, ಕೆಸರುಮಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಹೆಚ್.ಗಂಗಾಧರ್,…
ಚಿಕ್ಕನಾಯಕನಹಳ್ಳಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳ ನಿವಾರಣೆಗೆ ‘ಮನೆಬಾಗಿಲಿಗೆ ಮನೆಮಗ’ ಕಾರ್ಯಕ್ರಮ ಒಂದು ಮಹತ್ವದ ಮೈಲಿಗಲ್ಲಾಗಲಿದೆ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ತಿಳಿಸಿದರು. ಅವರು ಪಟ್ಟಣದ ತೀನಂಶ್ರೀ ಭವನದಲ್ಲಿ ನೂತನ ಕಾರ್ಯಕ್ರಮದ ಮನೆ ಬಾಗಿಲಿಗೆ ಮನೆಮಗ ಶೀರ್ಷಿಕಾ ಫಲಕವನ್ನು ಬಿಡುಗಡೆ ಗೊಳಿಸಿ ಮಾತನಾಡಿ ಈಗಾಗಲೇ ಎರಡುವರ್ಷದಿಂದ ಪ್ರತಿವಾರ ತಾಲ್ಲೂಕು ಕೇಂದ್ರದಲ್ಲಿ ಜನಸ್ಪಂದನ ಸಭೆ ಯಶಸ್ವಿಯಾಗಿ ನಡೆದಿದೆ. ಈವರೆಗೆ ೧೦ ಸಾವಿರ ರೈತರಿಗೆ ಬಗರ್ಹುಕುಂ ನಲ್ಲಿ ಹಕ್ಕುಪತ್ರ ನೀಡಲಾಗಿದೆ. ಇದರ ಮುಂದುವರೆದ ಭಾಗದಂತೆ ವರ್ಷದೊಳಗೆ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನೊಳಗೊಂಡ ಗ್ರಾಮ ಸಭೆ ನಡಸಲಾಗುವುದು. ಇದರಿಂದ ಅಲ್ಲಿನ ಜನರ ಸಮಸ್ಯೆಯನ್ನು ಅಲ್ಲಿಯೇ ಭಗೆಹರಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದೆ, ಇದರಲ್ಲಿ ಹುಳಿಯಾರು ಪಟ್ಟಣ ಪಂಚಾಯಿತಿ ಹಾಗೂ ಚಿಕ್ಕನಾಯಕನಹಳ್ಳಿ ಪುರಸಭೆಯ ವಾರ್ಡ್ಗಳಲ್ಲೂ ಸಹ ಸಭೆ ನಡೆಸಲಾಗುವುದೆಂದರು. ನಾನು ಜನರೊಟ್ಟಿಗಿದ್ದು ಕೆಲಸ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿ ಯಶಸ್ವಿಯಾಗಿ ನಡೆಸುವ ಸದುದ್ದೇಶಹೊಂದಿದ್ದೇನೆ ಎಂದರು. ಸದರಿ ಯೋಜನೆ ಮೇ.೨ರಿಂದ ಆರಂಭಗೊಳ್ಳಲಿದೆ…
ಕೊರಟಗೆರೆ: ಪಟ್ಟಣದ ೧೫ ನೇ ವಾರ್ಡಿನ ವಾಲ್ಮೀಕಿ ನಗರಕ್ಕೆ ಎರಡು ಕರಡಿಗಳು ಆಹಾರ ಹರಸಿ ಬಂದಿದ್ದು, ಕರಡಿಗಳನ್ನು ಕಂಡು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ನಗರದ ರಸ್ತೆಯನ್ನು ಕರಡಿ ದಾಟುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾ ಣದಲ್ಲಿ ವೈರಲ್ ಆಗುತ್ತಿದೆ. ಕರಡಿಗಳ ದೃಶ್ಯ ನೋಡಿದ ಕೊರಟಗೆರೆ ಪಟ್ಟಣದ ಜನತೆ ಬೆಚ್ಚಿ ಬಿದ್ದಿದ್ದಾರೆ. ಕರಡಿ ದಾಳಿಯ ಭೀತಿಯಿಂದ ಮನೆಯಿಂದ ಹೊರಗಡೆ ಬರಲು ಜನ ಭಯ ಪಡುವಂತಾಗಿದೆ. ಕರಡಿಗಳು ಪಟ್ಟಣಕ್ಕೆ ಬರದಂತೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಕರಡಿ ಗಳನ್ನು ಹಿಡಿಯಲು ಮುಂದಾಗಿದೆ.
ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕೋ ನ್ಯಾಯಾಲಯ ೪೦ ವರ್ಷಗಳ ಜೈಲು ಶಿಕ್ಷೆ ಹಾಗೂ ೨ ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕುಮಾರ್ ಅಲಿಯಾಸ್ ಕುಮಾರಸ್ವಾಮಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು. ನೊಂದ ಬಾಲಕಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿದ್ದ ಈತ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಜನವರಿ ೩, ೨೦೨೩ರಂದು ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬAಧ ದಾಖಲಾದ ದೂರಿನಂತೆ ಡಾ.ನವೀನ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ನ್ಯಾಯಾಲಯದ ವಿಚಾರಣೆಯಲ್ಲಿ ಅಭಿಯೋಜನೆಯ ಪರವಾಗಿ ಮಾಡಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಕುಮಾರಸ್ವಾಮಿಯ ಮೇಲಿನ…
ತುಮಕೂರು: ವಿದ್ಯುತ್ ಸ್ಪರ್ಶಿಸಿ ಗೆ ೯ ವರ್ಷದ ಬಾಲಕ ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮ ನಹಳ್ಳಿಯಲ್ಲಿ ನಡೆದಿದೆ. ಮಹೇಶ್ ಎಂಬುವರ ಪುತ್ರ ಕುಶಾಲ್ (೯) ಮೃತ ಬಾಲಕನಾಗಿದ್ದಾನೆ. ಹಳೆಯ ತಂತಿಗಳನ್ನ ಬದಲಾಯಿಸದೆ ಇರುವುದೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಮಗ ನನ್ನು ಕಳೆದುಕೊಂಡ ತಂದೆ ತಾಯಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕನಾ ಯಕನಹಳ್ಳಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಸಾಂತ್ವನ ಹೇಳಿದರು. ಸ್ಥಳದಲ್ಲೇ ಬೆಸ್ಕಾಂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.









