Author: News Desk Benkiyabale

ತುಮಕೂರು: ಪಹಲ್ಗಾಮ್, ಅನಂತನಾಗ್ ಜಿಲ್ಲೆ, ಜಮ್ಮು ಕಾಶ್ಮೀರದಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸುತ್ತಾ ತುಮಕೂರು ಜಿಲ್ಲೆಯ ಕರ್ನಾಟಕ ರಾಜ್ಯ ಪಿಂಜಾರ ನದಾಫ್ ಜನಾಂಗದ ಕ್ಷೇಮಾಭಿವೃದ್ಧಿ ಸಂಘ (ರಿ), ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ನಗರದ ಬಿ.ಜಿ.ಎಸ್.ವೃತ್ತ (ಟೌನ್ ಹಾಲ್ ವೃತ್ತ)ದವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿ ಮೇಣದಬತ್ತಿ ಹಚ್ಚಿಯನ್ನು ಕೃತ್ಯದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪಿಂಜಾರ ನದಾಫ್ ಜನಾಂಗದ ಕ್ಷೇ ಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಬಷೀರ್ ಅಹಮದ್ ರವರು ಮಾತನಾಡುತ್ತಾ ನಮ್ಮ ದೇಶದ ಅವಿಭಾಜ್ಯ ಅಂಗವಾದ ಜಮ್ಮು ಕಾಶ್ಮೀರ ರಾಜ್ಯದ ಅನಂತನಾಗ್ ಜಿಲ್ಲೆಯಲ್ಲಿನ ಪೆಹೆಲ್ಗಾಂ ಎಂಬ ಪಟ್ಟಣದಲ್ಲಿ ಇತ್ತೀಚೆಗೆ ಕೆಲವು ಭಯೋತ್ಪಾದಕರಿಂದ ನಡೆದಂತಹ ಭಯೋತ್ಪಾದಕ ಕೃತ್ಯಯುವು ಅತ್ಯಂತ ಖಂಡನೀಯವಾದದ್ದು. ಇಂಥಹ ಹೀನ ಕೃತ್ಯ ವನ್ನು ಎಸಗಿ ಅಮಾಯಕ ಜೀವಗಳನ್ನು ಬಲಿ ಪಡೆದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಭಯೋತ್ಪಾದನೆಯ ನಿರ್ಮೂಲನೆಗೆ ಪಣತೊಟ್ಟಿರುವ ಭಾರತದ ಪ್ರಧಾನ ಮಂತ್ರಿಗಳ ಕಾರ್ಯಕ್ಕೆ ತುಮಕೂರು ಜಿಲ್ಲೆಯ ಕರ್ನಾಟಕ…

Read More

ತುಮಕೂರು: ನಗರದ ೧೦ ಕೇಂದ್ರಗಳಲ್ಲಿ ಮೇ ೪ರಂದು ನಡೆಯಲಿರುವ ನೀಟ್(ಓಇಇಖಿ)-೨೦೨೫ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತುಮಕೂರಿನಲ್ಲಿ ನೀಟ್ ಪರೀಕ್ಷೆಗೆ ಒಟ್ಟು ೪೮೦೦ ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಯಾವುದೇ ಲೋಪದೋಷಗಳಾಗದಂತೆ ಪರೀಕ್ಷೆಯನ್ನು ಸುಗಮವಾಗಿ ನಡೆಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅನುಕೂಲವಾಗುವಂತೆ ನಗರದ ವ್ಯಾಪ್ತಿಯಲ್ಲಿ ವಿಶೇಷ ಸಾರಿಗೆ ವ್ಯವಸ್ಥೆ, ನಿರಂತರ ವಿದ್ಯುತ್ ವ್ಯವಸ್ಥೆ, ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಚಿಕಿತ್ಸಾ ವಾಹನ ಹಾಗೂ ಅಗ್ನಿಶಾಮಕ ವಾಹನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೀಲ್ ಚೇರ್ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರಲ್ಲದೆ, ಪ್ರಶ್ನೆ ಪತ್ರಿಕೆ ಪಡೆಯುವ ಹಾಗೂ ಉತ್ತರ ಪತ್ರಿಕೆಗಳನ್ನು ತಲುಪಿಸುವ ಸಂದರ್ಭದಲ್ಲಿ ಮಾರ್ಗಾಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದರು. ನೀಟ್ ಪರೀಕ್ಷೆಗೆ ಸಂಬAಧಿಸಿದAತೆ ಯಾವುದೇ ಸಂದರ್ಶನ ಹಾಗೂ ಹೇಳಿಕೆಗಳನ್ನು ಮಾಧ್ಯಮಗಳಿಗೆ ನೀಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪ್ರತಿ…

Read More

ತುಮಕೂರು: ಜನಪದ ಕಲೆಗಳನ್ನು ಯುವಜನತೆ ಮೈಗೂಡಿಸಿಕೊಂಡಾಗ ಮಾತ್ರ ಕಲೆ ಮುಂದಿನ ಪೀಳಿಗೆಗೂ ಉಳಿಯುತ್ತದೆ ಎಂದು ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕೆಂಕೆರೆ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜನಪದ ಉತ್ಸವವನ್ನು ರಾಶಿ ಪೂಜೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮೊಬೈಲ್ ಗೀಳಿಗೆ ಒಳಗಾಗಿ ನಾಡಿನ ಸಾಹಿತ್ಯ, ಕಲೆ, ಸಂಸ್ಕöÈತಿಯನ್ನು ಕಡೆಗಣಿಸುತ್ತಿದ್ದಾರೆ. ಈ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವ ಜತೆಗೆ ಕಲೆ, ಸಾಹಿತ್ಯ, ಜನಪದದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು. ಅತಿಥಿಯಾಗಿ ಭಾಗವಹಿಸಿದ್ದ ತಮಟೆ ನರಸಮ್ಮ ಅವರು, ತಮಟೆಯ ಕಲೆ, ಅದರ ವಿಶೇಷತೆ ಹಾಗೂ ಗಸ್ತುಗಳನ್ನು ಕುರಿತು ವಿವರಿಸಿದರು. ಆರತಿ ಪಟ್ರಮೆ ಮಾತನಾಡಿ, ಯಕ್ಷಗಾನ ಕಲೆ ಕರಾವಳಿಯಲ್ಲಿ ಹುಟ್ಟಿ ನಾಡಿನಾದ್ಯಂತ ವಿಸ್ತರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಸಾಂಸ್ಕöÈತಿಕ ಸಂಚಾಲಕರಾದ ಡಾ. ಮುದ್ದಗಂಗಯ್ಯ ಕೆ.ಸಿ., ಕಲೆ ಮನುಷ್ಯರನ್ನು ನಿಜ ಮನುಷ್ಯರನ್ನಾಗಿ ಮಾಡುತ್ತದೆ ಎಂದರು.…

Read More

ತುಮಕೂರು: ಕಾಶ್ಮೀರದ ಫಹಲ್ಗಾಮ್ ನಲ್ಲಿ ಮರಣ ಹೊಂದಿದ ೨೭ ಜನರ ಪೈಕಿ ೩ ಜನ ಕರ್ನಾಟಕದವರು,ಯಾವುದೇ ತಪ್ಪು ಮಾಡದೆ ಉಗ್ರರ ದಾಳಿಗೆ ತುತ್ತಾಗಿ ಮರಣ ಹೊಂದಿರುವುದು ದುರದೃಷ್ಟಕರ,ಇಡೀ ದೇಶವೇ ಸತ್ತವರ ಕುಟುಂಬದ ಜೊತೆ ನಿಂತಿದೆ,ಉಗ್ರರ ಧಮನವನ್ನು ನಮ್ಮ ಭಾರತ ಸರ್ಕಾರ,ಸೈನಿಕರು ಮಾಡಲಿದ್ದಾರೆ ಉಗ್ರರಿಗೆ ಯಾವುದೇ ದಯೆ ಇಲ್ಲ,ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ದೇಶ ಅಭಿವೃದ್ಧಿ ಆಗುತ್ತದೆ,ಹೊರಗಿನ ಶತೃಗಳಿಂದ ನಮ್ಮ ದೇಶಕ್ಕೆ ಅಪಾಯವಿದೆ,ಈ ನಿಟ್ಟಿನಲ್ಲಿ ಎಲ್ಲರೂ ದೇಶದ ಪರ ಹೋರಾಟ ಮಾಡಬೇಕು,ಪ್ರಧಾನಿ,ಗೃಹ,ರಕ್ಷಣಾ ಸಚಿವರ ಕೈ ಬಲಪಡಿಸಬೇಕು,ಸತ್ತವರ ಕುಟುಂಬ ಸದಸ್ಯರ ಕಥೆ ಏನಾಗಬೇಕು?ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದರೆ ಪ್ರೀತಿ ವಿಶ್ವಾಸದಿಂದ ಇದ್ದರೆ ಹೊರಗಿನ ಶತೃಗಳನ್ನು ಹೊಡೆದು ಎದುರಿಸಬಹುದು ಎಂದು ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘದ ಕಾರ್ಯದರ್ಶಿ ಮತ್ತು ನಿರ್ಭಯ ಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಗೀತಾನಾಗೇಶ್ ರವರು ತಿಳಿಸಿದರು. ಅವರು ಇಂದು ನಗರದ ಜಯನಗರ ಸರ್ಕಲ್ ನಲ್ಲಿ ಸಂಕಲ್ಪ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಘ, ನಿರ್ಭಯ ಮಹಿಳಾ ಜಾಗೃತಿ ವೇದಿಕೆ,ಜಯನಗರ ಕ್ಷೇಮಾಭಿವೃದ್ಧಿ ಸಂಘ ಜಂಟಿಯಾಗಿ ಆಯೋಜಿಸಿದ್ದ…

Read More

ತುಮಕೂರು: ಮೂವತ್ತು ವರ್ಷಗಳ ಸುದೀರ್ಘ ಕ್ಷೇತ್ರಕಾರ್ಯದ ಫಲವಾಗಿ ಹುಟ್ಟಿಕೊಂಡಿರುವ ‘ದೇವುಗಾನಿಕೆ’ ಕೃತಿಯಲ್ಲಿ ಹೆಣ್ಣು- ಗಂಡು ಇಬ್ಬರನ್ನೂ ಸಮಾನವಾಗಿ ಕಾಣಲಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ವಿಶ್ರಾಂತ ಕಾರ್ಯದರ್ಶಿ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಕುಮಾರವ್ಯಾಸ ಅಧ್ಯಯನ ಪೀಠದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಡಿ. ವಿ. ಜಿ. ಕನ್ನಡ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕ ಡಾ.ಪಿ.ಎಂ ಗಂಗಾಧರಯ್ಯ ಅವರ ‘ದೇವುಗಾನಿಕೆ’ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೌಖಿಕ ಕಾವ್ಯಗಳು, ಕಥೆಗಳು, ನಮ್ಮ ಚರಿತ್ರೆಯನ್ನು ಇಂದಿಗೂ ಹಿಡಿದಿಟ್ಟುಕೊಂಡಿರುವ ಪರಿಯನ್ನು ದೇವುಗಾನಿಕೆ ಪರಿಚಯಿಸುತ್ತದೆ. ಅಂಚಿಗೆ ಸರಿದ ಅನೇಕ ಸಮುದಾಯಗಳ ಚರಿತ್ರೆಗಳನ್ನು ಹೊರ ತರುವುದರಲ್ಲಿ ಕೃತಿಕಾರರು ಮಾಡಿರುವ ಕಾರ್ಯ ಶ್ಲಾಘನೀಯ ಎಂದರು. ಕರ್ನಾಟಕದಲ್ಲಿ ೩೦- ೩೫ ವರ್ಷಗಳ ಹಿಂದೆ ಜಾನಪದದ ಹೆಚ್ಚು ಚಟುವಟಿಕೆಗಳು ನಡೆಯುತ್ತಿದ್ದವು. ಇತ್ತೀಚಿಗೆ ಆಧುನೀಕರಣಗೊಂಡು ಎಲ್ಲವೂ ಮರೆಯಾಗುತ್ತಿದೆ. ಪ್ರಸ್ತುತ ಕೃತಿ ಇವನ್ನು ನೆನಪಿಸಿಕೊಳ್ಳುವಂತೆ ಮಾಡಿದೆ ಎಂದರು. ಈ ಕೃತಿಯಲ್ಲಿ  ದೇವತೆಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ. ಒಟ್ಟು ಏಳು ಮಾತೃ ದೇವತೆಗಳ ಗುಂಪನ್ನು…

Read More

ತುಮಕೂರು: ಜಿಲ್ಲೆಯಲ್ಲಿ ಜನವರಿ ೨೦೨೨ರಿಂದ ಈವರೆಗೂ ಯಾವುದೇ ಸ್ಥಳೀಯ ಮಲೇರಿಯಾ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ತಿಳಿಸಿದರು. ವಿಶ್ವ ಮಲೇರಿಯ ದಿನಾಚರಣೆ ಅಂಗವಾಗಿ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮಲೇರಿಯಾ ರೋಗವನ್ನು ೨೦೨೭ಕ್ಕೆ ನಿವಾರಣೆ ಮಾಡುವ ಗುರಿ ಹೊಂದಲಾಗಿದ್ದು, ಜಿಲ್ಲೆಯು ಈಗಾಗಲೇ ಮಲೇರಿಯಾ ನಿವಾರಣಾ ಗುರಿ ತಲುಪಿದೆ ಎಂದು ತಿಳಿಸಿದರು. ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಲೇರಿಯಾ ರೋಗಕ್ಕೆ…

Read More

ತುಮಕೂರು: ಸಾವಿರ ಸಂಗಮಗಳಲ್ಲಿ ಸ್ನಾನ ಮಾಡುವುದರಿಂದ ಮೈಮೇಲಿನ ಕೊಳೆ ಹೋಗಬಹುದೇ ಹೊರತು, ಮನಸ್ಸಿನ ಕೊಳೆ ತೊಳೆಯಲು ನಾಟಕ, ಸಂಗೀತ, ಸಾಹಿತ್ಯ,ನೃತ್ಯಗಳಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯಎಂದುಕರ್ನಾಟಕ ನಾಟಕಅಕಾಡೆಮಿಅಧ್ಯಕ್ಷರಾದ ಕೆ.ವಿ.ನಾಗರಾಜಮೂರ್ತಿ ಪ್ರತಿಪಾದಿಸಿದ್ದಾರೆ. ನಗರದಕನ್ನಡ ಭವನದಲ್ಲಿ ಶ್ರೀನಾಗಾರ್ಜುನ ಕಲಾ ಸಂಘ(ರಿ)ದ ೧೫ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಂಗಸಾಧಕರಿಗೆ ಸನ್ಮಾನ,ಸಾಂಸ್ಕೃತಿಕ ಸಂಗೀತ ಸೌರಭ ಹಾಗೂ ಸಂಘದ ವಾರ್ಷಿಕ ಮಹಾಸಭೆಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದಅವರು,ತಾವು ಮಾಡಿದ ಪಾಪ ಹೋಗುತ್ತದೆಎಂದು ಸಂಗಮದಲ್ಲಿ ಸ್ನಾನ ಮಾಡುವುದಕ್ಕಿಂತಇAತಹದೊAದು ಸಂಸ್ಥೆಯ ಮೂಲಕ ಮನಸ್ಸುಗಳನ್ನು ಬೆಸೆಯುವ ಕೆಲಸ ಮಾಡುವುದುಅತ್ಯಂತ ಪುಣ್ಯದ ಕೆಲಸ ಎಂದು ನಂಬಿದ್ದೇನೆ.ಆ ಕೆಲಸವನ್ನು ನಾಗಾರ್ಜುನ ಕಲಾಸಂಘ ಕಳೆದ ಹದಿನೈದು ವರ್ಷಗಳಿಂದ ಮಾಡುತ್ತಿರುವುದುಅಭಿನಂದನಾರ್ಹಎAದರು. ಸ0ಘಗಳು ಕೇವಲ ವಾರ್ಷಿಕೋತ್ಸವಗಳಿಗೆ ಸಿಮೀತವಾಗಿರುವ ಇಂದಿನ ಕಾಲದಲ್ಲಿಒಂದು ಸಂಘವನ್ನು ಹದಿನೈದು ವರ್ಷಗಳ ಕಾಲ ಅತ್ಯಂತ ಕ್ರಿಯಾಶೀಲವಾಗಿ ಜೀವಂತವಾಗಿಡುವ ಕೆಲಸವನ್ನು ನಾಗಾರ್ಜುನ ಕಲಾ ಸಂಘದಅಧ್ಯಕ್ಷರಾದ ಕೆ.ಸಿ.ನರಸಿಂಹಮೂರ್ತಿ ಮತ್ತುಅವರತಂಡ ಮಾಡುತ್ತಿದೆ.ಕಲೆಗೆತಮ್ಮಜೀವನವನ್ನು ಮುಡಿಪಾಗಿಟ್ಟರುವಡಾ.ಗುಬ್ಬಿ ವೀರಣ್ಣ ಮತ್ತುಡಾ.ರಾಜ್‌ಕುಮಾರ್‌ಅವರನ್ನುಆದರ್ಶವಾಗಿಟ್ಟುಕೊಂಡು ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ. ಡಾ.ಗುಬ್ಬಿ ವೀರಣ್ಣಅವರಕನ್ನಡದ ಮೂಲಕ ಭಾರತೀಯರಂಗಭೂಮಿಯನ್ನುಕಟ್ಟುವ ಕೆಲಸ ಮಾಡಿದರು.ಅದೇರೀತಿಡಾ.ರಾಜಕುಮಾರ್ ಹಲವು ಕನ್ನಡಗಳ ನಡುವೆ,…

Read More

ತುಮಕೂರು: ಕಾಶ್ಮೀರದ ಪೆಹಲ್ಗಾಮ್ ಪ್ರವಾಸಿ ತಾಣದಲ್ಲಿ ಭಾರತೀಯರ ಮೇಲೆ ನಡೆದ ಉಗ್ರಗಾಮಿಗಳ ದಾಳಿಯನ್ನು ಖಂಡಿಸಿ, ಉಗ್ರರನ್ನು ಸದೆ ಬಡಿಯುವಂತೆ ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ನಗರದ ಟೌನ್‌ಹಾಲ್ ಮುಂಭಾಗ ಮೇಣದ ಬತ್ತಿ ಹಚ್ಚಿ ಮೃತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಘಟನೆಯಲ್ಲಿ ಮೃತರಾದವರಿಗೆ ಮುಂಬತ್ತಿ ಹಚ್ಚಿ, ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ,ಭಾರತದ ಮುಕುಟ ಮಣಿ ಎಂದು ಕರೆಯಲ್ಪಡುವ ಕಾಶ್ಮೀರದಲ್ಲಿ ನಡೆದ ಭಯೋತ್ಪಾಧಕರ ದಾಳಿ ಕೇಂದ್ರದ ಬೇಹುಗಾರಿಕೆ ಮತ್ತು ಭದ್ರತಾ ವೈಫಲ್ಯಗಳೇ ಕಾರಣ.ಇದನ್ನು ಖಂಡಿಸುತ್ತೇವೆ. ಹಾಗೆಯೇ ಉಗ್ರರನ್ನು ಸದೆ ಬಡೆಯಲು ಕಾಂಗ್ರೆಸ್ ಪಕ್ಷ ಸದಾ ದೇಶದ ಪರವಾಗಿ ನಿಲ್ಲಲಿದೆ ಎಂದರು. ಕಾಶ್ಮೀರದಲ್ಲಿ ಭಯೋತ್ಪಾಧನೆಯನ್ನು ಮಟ್ಟ ಹಾಕಲಾಗಿದೆ ಎಂದು ಕಳೆದ ಎಂಟು ದಿನಗಳ ಹಿಂದೆಯಷ್ಟೇ ಕೇಂದ್ರದ ಗೃಹ ಮಂತ್ರಿ ಅಮಿತಾ ಷಾ ಹೇಳಿಕೆ ನೀಡಿದ್ದರು. ಇದನ್ನು ನಂಬಿದ್ದ ಸಾವಿರಾರು ಪ್ರವಾಸಿಗರು ಕಾಶ್ಮೀರದ ಪ್ರಕೃತಿ ಸೌಂಧರ್ಯ ಸವಿಯಲು ಹೋಗಿದ್ದರು.…

Read More

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ಉತ್ತಮ ಜನಪರ ಕೆಲಸಗಾರರು, ಹಿಡಿದ ಕೆಲಸವನ್ನು ಮಾಡಿ ಮುಗಿಸುವ ಛಲಗಾರ. ಅವರು ರೈಲ್ವೆ ಸಚಿವರಾದ ನಂತರ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗುತ್ತಿವೆ, ನೆನೆಗುದಿಗೆ ಬಿದ್ದಿದ್ದ ಕೆಲಸಗಳಿಗೆ ಚಾಲನೆ ದೊರಕಿದೆ ಎಂದು ಸಿದ್ಧಗಂಗಾ ಮಠ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ನಗರದ ರೈಲು ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮೋದನೆ ನೀಡಿದ ಸಂದರ್ಭದಲ್ಲಿ ಸಚಿವ ವಿ.ಸೋಮಣ್ಣ ಅಭಿಮಾನಿ ಬಳಗ, ಜಿಲ್ಲಾ ಕನ್ನಡ ಸೇನೆ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಸಿಹಿ ವಿತರಿಸಿ ಸಂಭ್ರಮ ಆಚರಿಸುವ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸೋಮಣ್ಣ ಅವರು ಕೇಂದ್ರ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಬಸವ ಜಯಂತಿ ಆಚರಣೆಗೆ ಕಾರಣರಾದರು ಎಂದು ಅಭಿನಂದಿಸಿದರು. ರೈಲು ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯಲ್ಲಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲು ಹಾಗೂ ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿಗಳ ನಾಮಕರಣ ಮಾಡಲು ಸಚಿವ ಸೋಮಣ್ಣ ಕಾಳಜಿ ವಹಿಸಿದ್ದಾರೆ ಎಂದು…

Read More

ತುಮಕೂರು: ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಿಳಾ ಕಾಲೇಜು ವತಿಯಿಂದ ಐಕ್ಯೂಎಸಿ ಮತ್ತು ೨೦೨೫ರ ವಾರ್ಷಿಕ ಸಂಚಿಕೆ ಆಶ್ರಯದಲ್ಲಿ ಲೇಖನ ರಚನೆ ಕೌಶಲಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಸತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೂಜ್ಯ ಶ್ರೀ ಸಿದ್ಧಲಿಂಗಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬರವಣಿಗೆಯ ಕಾರ್ಯಾಗಾರದಲ್ಲಿ ಪಠ್ಯದಷ್ಟೇ ಪಠ್ಯೇತರವೂ ಮುಖ್ಯ ಎಂಬುದಕ್ಕೆ ಒತ್ತು ನೀಡಿದೆ. ಪ್ರಕೃತಿಗೆ ಸಂಸ್ಕಾರ ಕೊಟ್ಟರೆ ಸಂಸ್ಕೃತಿಯಾಗುತ್ತದೆ. ಆಲೋಚನಾ ಶಕ್ತಿ ಹೊಂದಿರುವ ಮನುಷ್ಯನ ಅನುಭವಗಳಿಗೆ ಬರವಣಿಗೆ ರೂಪ ನೀಡಿದಾಗ ನೈಜ ಸಾಹಿತ್ಯ ರೂಪುಗೊಳ್ಳುತ್ತದೆ ಎಂದರು. ಒಂದು ವಾರ್ಷಿಕ ಸಂಚಿಕೆ ಉತ್ತಮ ಬರಹಗಾರರನ್ನು ಬೆಳಕಿಗೆ ತರಬಲ್ಲ ಸಾಮ ರ್ಥ್ಯ ಹೊಂದಿದೆ. ವಿದ್ಯಾರ್ಥಿನಿಯರು ಪ್ರಗತಿಯತ್ತ ಸಾಗಲು ಇದು ಸೂಕ್ತ ಮಾರ್ಗವೆಂದರು. ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾ ಖೆ ನಿವೃತ್ತ ಉಪನಿರ್ದೇಶಕ ಹೆಚ್.ಕೆ.ನರ ಸಿಂಹಮೂರ್ತಿಯವರು ಸಾಹಿತ್ಯ ರಚನೆ ಬರವಣಿಗೆಯ ಒಂದು ಕಲೆ, ಅಭಿವ್ಯಕ್ತಿಯ ಮಾಧ್ಯಮ. ಒಳ್ಳೆಯ ಅಭ್ಯಾಸ, ವಿಷಯವನ್ನು…

Read More