ತುಮಕೂರು: ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು ೭೫ ವರ್ಷ ಪೂರ್ಣಗೊಳಿಸಿದ ನಂತರ ಆ ಪಕ್ಷದಲ್ಲಿನ ನಿಯಮಾವಳಿ ಪ್ರಕಾರ ತೆರೆಮರೆಗೆ ಸರಿದಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳು ರಾಷ್ಟ್ರಮಟ್ಟದಲ್ಲಿ ಆಗಬಹುದು ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಧಾನಿ ಮೋದಿ ಅವರ ಬಗೆಗಿನ ಕುರಿತು ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರು ನಿರ್ಧರಿಸಲಿದ್ದಾರೆ ಎಂದರು. ಪ್ರಸ್ತುತ ರಾಜಕೀಯ ಚಟುವಟಿಕೆಗಳಲ್ಲಿ ಸಾಕಷ್ಟು ಊಹಾಪೋಹಗಳು ಕೇಳಿ ಬರುತ್ತಿದ್ದು ಅದಕ್ಕೆ ಯಾವುದೇ ರೀತಿ ಅರ್ಥ ಕಲ್ಪಿಸಬೇಕಿಲ್ಲ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷ ಸಾಕಷ್ಟು ಸದೃಢವಾಗಿದೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ ಕೆಲವು ಸಣ್ಣಪುಟ್ಟ ಬದಲಾವಣೆಗಳು ಆಗಬಹುದು ಆದರೆ ಕೆಲವು ಊಹಾಪೋಹಗಳು ಕೂಡ ಇದ್ದು ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
Author: News Desk Benkiyabale
ತುಮಕೂರು:ತನ್ನ ಅಭಿವೃದ್ಧಿಗೆೆ ಬೇರೆ ಸಮುದಾಯದ ಆಸರೆ ಬೇಡದೆ,ಸ್ವತಹಃ ಸಂಘಟಿತರಾಗಿ,ಸ್ವಾಭಿಮಾನದಿ0ದ ಬದುಕುತ್ತಿರುವ ಹಿಂದೂ ಸಾದರ ಸಮಾಜ.ತನ್ನ ಶೈಕ್ಷಣಿಕ ಅಭಿವೃದ್ದಿಗಾಗಿ ಬಾಲಕ, ಬಾಲಕಿಯರ ಹಾಸ್ಟಲ್ಗಳನ್ನು ತೆರೆದು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ನಗರದ ಕ್ಯಾತ್ಸಂದ್ರ ರಿಂಗ್ರಸ್ತೆಯಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ದಿ ಸಂಘದವತಿಯಿAದ ನೂತನವಾಗಿ ನಿರ್ಮಿಸಿರುವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ ನೆರವೇರಿಸಿ ಮಾತನಾಡುತಿದ್ದ ಅವರು,ಬಡತನವನ್ನು ಮೆಟ್ಟಿನಿಂತು ಸಮಾಜದ ಏಳಿಗೆಗೆ ಸಮುದಾಯದ ದಾನಿಗಳು ನಿರಂತರವಾಗಿ ನಿಸ್ವಾರ್ಥದಿಂದ ಶ್ರಮಿಸುತ್ತಿರುವುದೇ ಸಮುದಾಯ ಉತ್ತರೋತ್ತರವಾಗಿ ಬೆಳೆಯಲು ಕಾರಣವಾಗಿದೆ ಎಂದರು. ಹಿAದೂ ಸಾದರು ಜನಸಂಖ್ಯೆಯಲ್ಲಿ ಕಡಿಮೆಯಿದ್ದರೂ ಶೈಕ್ಷಣಿಕವಾಗಿ, ಅರ್ಥಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ. ಇದಕ್ಕೆ ಮಂಡಿ ಹರಿಯಣ್ಣನವರಿಂದ ಹಿಡಿದು ಇಂದಿನ ರವಿಕುಮಾರ್ ಅವರವರೆಗೆ ಎಲ್ಲರೂ ಸಹ ಶ್ರಮಿಸಿದ್ದಾರೆ. ಸಮುದಾಯದ ವತಿಯಿಂದ ನಿರ್ಮಿಸಿರುವ ಹಾಸ್ಟಲ್ಗಳಿಗೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಆಯಾಯ ಕಾಲದ ಸರಕಾರಗಳು ನೆರವು ನೀಡಿವೆ. ಹಿರಿಯರ ಕೋರಿಕೆಯಂತೆ ತುಮಕೂರಿನಲ್ಲಿ ನಿರ್ಮಾಣವಾಗುತ್ತಿರುವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣ…
ತಿಪಟೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದು, ಪರಿಣಾಮ ಘಟನೆಯಲ್ಲಿ ೧೭ ಮಹಿಳೆಯರು ಸೇರಿ ೩೨ ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಆಗುಂಬೆಯಿ0ದ ಕೋಲಾರದತ್ತ ಸಾಗುತ್ತಿದ್ದ ಬಸ್ ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುತ್ತಿದ್ದ ವೇಳೆ ಟೈಯರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ನೇರವಾಗಿ ಮನೆಗೆ ನುಗ್ಗಿದೆ. ಅಪಘಾತದ ಪರಿಣಾಮ ಬಸ್ನ ಮುಂಭಾಗ ಜಖಂಗೊAಡಿದ್ದು, ಮನೆಗೂ ಹಾನಿಯಾಗಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ೧೭ ಮಹಿಳೆಯರೂ ಸೇರಿ ೩೨ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆ ಬೆನ್ನಲ್ಲೇ ತಿಪಟೂರು ಡಿವೈಎಸ್ಪಿ ವಿನಾಯಕ ಶೇಟಿಗೇರಿ, ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ಪಿಎಸ್ಐ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದರು. ಇದೇ ವೇಳೆ ಕೆಎಸ್ಆರ್ಟಿಸಿ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ…
ತುಮಕೂರು: ಸ್ವಾತಂತ್ರö್ಯ ಪೂರ್ವದ ಇತಿಹಾಸವುಳ್ಳ ತುಮಕೂರು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿಗೆ ನಗರ ಮಾತ್ರವಲ್ಲದೆ ಜಿಲ್ಲೆಯ ವಿವಿಧ ಗ್ರಾಮೀಣ ಭಾಗದಿಂದ ಬಡ-ಮಧ್ಯಮ ವರ್ಗದ ವಿದ್ಯಾರ್ಥಿನಿಯರು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಆಗಮಿಸುತ್ತಿರುವುದು ತಮಗೆಲ್ಲ ತಿಳಿದಿರುವ ಸಂಗತಿ. ಈ ಪೈಕಿ ನೂರಾರು ಮಂದಿ ಬೆಳಗಿನ ಉಪಾಹಾರವನ್ನೇ ಮಾಡದೆ ಬರುತ್ತಿರುವ ಕಾರಣ ಅಪೌಷ್ಠಿಕತೆಗೆ ತುತ್ತಾಗುತ್ತಿದ್ದು, ಇದು ಅವರ ಶೈಕ್ಷಣಿಕ ಪ್ರಗತಿ ಮೇಲೂ ಪರಿಣಾಮ ಬೀರುತ್ತಿದೆ. ಈ ಗಂಭೀರ ಸಂಗತಿಯನ್ನು ಮನಗಂಡ ತುಮಕೂರಿನ ‘ಕಲ್ಪಾಮೃತ’ ಸಂಸ್ಥೆ ಅಮೃತ ಆಹಾರ, ದಾನಿಗಳ ಸಹಕಾರದೊಂದಿಗೆ ಮಧ್ಯಾಹ್ನದ ಬಿಸಿಯೂಟ ವಿತರಣಾ ಯೋಜನೆಯನ್ನು ‘ಪೌಷ್ಠಿಕಾಮೃತ’ ಹೆಸರಿನಲ್ಲಿ ಜುಲೈ ೨ರಿಂದ ಜಾರಿಗೊಳಿಸುತ್ತಿದ್ದು, ಸುಮಾರು ೧೦೦೦ ವಿದ್ಯಾರ್ಥಿನಿಯರಿಗೆ ಕಲಿಕಾ ವರ್ಷದ ಹತ್ತು ತಿಂಗಳು ಅವಧಿಪೂರ್ಣ ಯೋಜನೆಯ ಪ್ರಯೋಜನ ದೊರೆಯಲಿದೆ. ಪೂಜ್ಯ ಸ್ವಾಮಿ ಜಪಾನಂದಜೀ ಅವರ ಮಾರ್ಗದರ್ಶನದಲ್ಲಿ ತುಮಕೂರು ವಿವಿ ಹಾಗೂ ಸರ್ಕಾರಿ ಪ.ಪೂ ಕಾಲೇಜಿನಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ಅನುಷ್ಠಾನಗೊಳಿಸಿರುವ ಬಿಸಿಯೂಟ ಯೋಜನೆಯನ್ನು ಮಾದರಿಯಾಗಿಸಿಕೊಂಡು ಎಂಪ್ರೆಸ್ನಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ. ಈ…
ಪಾವಗಡ: ನಾಡು ಕಂಡ ಶ್ರೇಷ್ಠ ವ್ಯಕ್ತಿಗಳಲ್ಲಿ ನಾಡಪ್ರಭು ಕೆಂಪೇಗೌಡರು ಒಬ್ಬರು ಎಂದು ಹೇಳಿದ ಪಾವಗಡ ಕ್ಷೇತ್ರದ ಶಾಸಕರು ಹಾಗೂ ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ವಿ. ವೆಂಕಟೇಶ್, ಒಕ್ಕಲಿಗ ಸಮುದಾಯದ ಸಂಘಟನೆ ಮತ್ತು ಶಕ್ತಿಯ ಬಗ್ಗೆ ಮಹತ್ವದ ಸಂದೇಶ ನೀಡಿದ್ದಾರೆ. ಪಟ್ಟಣದ ಎಸ್.ಎಸ್.ಕೆ. ಸಮುದಾಯ ಭವನದಲ್ಲಿ ಕುಂಚಿಟಿಗ ಒಕ್ಕಲಿಗರ ಸಂಘ, ಕುಂಚಿಟಿಗ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ನಾಡಪ್ರಭು ಕೆಂಪೇಗೌಡ ಯುವಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಭಾಷಣ ಮಾಡಿದರು. “ಕರ್ನಾಟಕದ ರಾಜಕೀಯದಲ್ಲಿ ಒಕ್ಕಲಿಗ ಸಮುದಾಯದ ಪಾತ್ರ ಅತ್ಯಂತ ಪ್ರಭಾವಶೀಲ ವಾಗಿದೆ. ಹಳೆ ಮೈಸೂರು ಭಾಗದಲ್ಲಿ ಈ ಸಮುದಾಯದ ಬಲದ ಹಿನ್ನೆಲೆ, ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು. ಈಗಲೂ ತಾಲೂಕು ರಾಜಕಾರಣದಲ್ಲಿ ಈ ಸಮುದಾಯದ ಹಿಡಿತ ಉತ್ತಮವಾಗಿದ್ದು, ಸಂಘಟನೆ ಇನ್ನಷ್ಟು ಬಲವಾಗಬೇಕು,” ಎಂದು ಅವರು ಹೇಳಿದರು. “ನಾಡಪ್ರಭು ಕೆಂಪೇಗೌಡರ ಹೆಸರನ್ನು…
ತುಮಕೂರು: ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಸ್ವಾವಲಂಬಿ ಜೀವನವನ್ನು ತಮ್ಮದಾಗಿಸಿಕೊಂಡಾಗ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಕಂಡ ಕನಸು ನನಸಾಗಲಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀಶ್ರೀಶಿವಶಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ದತ್ತಿ ಪ್ರಶಸ್ತಿ ಪ್ರಧಾನ, ರ್ಯಾಂಕ್ ವಿಜೇತರಿಗೆ ಪುರಸ್ಕಾರ,ಸ್ಪೂರ್ತಿ ಎನ್.ಎಸ್.ಎಸ್.,ಎನ್.ಸಿ.ಸಿ.,ರೆಡ್ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಅವರು,ಸ್ಪೂರ್ತಿ ಕಾರ್ಯಕ್ರಮ ಮಕ್ಕಳ ಅಭಿವ್ಯಕ್ತಿಗೆ ಒಳ್ಳೆಯ ವೇದಿಕೆಯಾಗಿದೆ.ನಾನು ಪಕ್ಕದ ಕಾಲೇಜಿನಲ್ಲಿಯೇ ಒದಿದ್ದು, ಅಲ್ಲಿನ ಅಭಿವ್ಯಕ್ತಿ ವೇದಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಪರಿಣಾಮ ನಿಮ್ಮ ಮುಂದೆ ನಿಂತು ಮಾತನಾಡುವಂತಹ ಆತ್ಮಸ್ಥೆöÊರ್ಯ ಹೊಂದಲು ಸಾಧ್ಯವಾಯಿತು ಎಂದರು. ಒAದು ವಿದ್ಯಾಸಂಸ್ಥೆಯ ತೇರು ಸುಗಮವಾಗಿ ಸಾಗಬೇಕೆಂದರೆ, ಅದರ ಚಕ್ರಗಳಾಗಿರುವ ಬೋಧಕ ಮತ್ತು ಬೋಧಕೇತರ ವರ್ಗದವರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಿದ್ದಗಂಗಾ ಮಹಿಳಾ ಪದವಿ ಕಾಲೇಜಿನ ಸಿಬ್ಬಂದಿ ವರ್ಗ ಚನ್ನಾಗಿ ಕೆಲಸ ಮಾಡುತ್ತಿದೆ.ಕೇವಲ ವೇತನಕ್ಕಾಗಿ ಇಲ್ಲಿನ…
ತುಮಕೂರು: ಸಿದ್ದಗಂಗಾ ಶ್ರೀಗಳ ಕುರಿತು ಬರೆಯುವುದೆಂದರೆ ಭಗವಂತನ ಕುರಿತು ಬರೆದಂತೆ. ಹಾಗಾಗಿ ಶ್ರೀಸಿದ್ದಗಂಗಾ ಶ್ರೀಗಳ ಬಗ್ಗೆ ಕನ್ನಡ, ಸಂಸ್ಕೃತದಲ್ಲಿ ಇರುವ ಸಾಹಿತ್ಯವನ್ನು ಇಂಗ್ಲಿಷ್ಗೆ ತರ್ಜುಮೆ ಮಾಡಿ, ನಾಡಿನ ಮೂಲೆ ಮೂಲೆಗೂ ತಲುಪುವಂತೆ ಮಾಡಬೇಕಾಗಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಹಾಗೂ ನಾಡೋಜ ಗೋ.ರು.ಚನ್ನಬಸಪ್ಪ ತಿಳಿಸಿದ್ದಾರೆ. ನಗರದ ಶ್ರೀಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀಉದ್ಯಾನ ಶಿವಯೋಗಿಗಳ ಸಮುದಾಯ ಭವನದಲ್ಲಿ ಜಾನಪದ ವಿದ್ವಾಂಸ ಹಾಗೂ ಸಿದ್ದಗಂಗಾ ಮಾಸಪತ್ರಿಕೆಯ ಸಂಪಾದಕರಾದ ಹೆಚ್.ಎಸ್.ಸಿದ್ದಗಂಗಪ್ಪ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಜೀವನ, ಸಾಧನೆ, ಸಂದೇಶ ಕುರಿತು ಬರೆದಿರುವ ಪದ್ಮಭೂಷಣ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಎಂಬ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡುತಿದ್ದ ಅವರು,ಭಕ್ತರಿಂದ ನಡೆದಾಡುವ ದೇವರು ಎಂದು ಕರೆಯಿಸಿಕೊಂಡ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಭಕ್ತರಲ್ಲಿಯೇ ದೇವರನ್ನು ಕಂಡವರು.ಧಾರ್ಮಿಕತೆಗೆ ಹೊಸ ಭಾಷ್ಯ ಬರೆದ ಇವರನ್ನು ವರ್ಣಿಸಿದರೆ, ದೇವರನ್ನು ಪರಿಚಯಿಸಿದಂತೆ ಎಂದರು. ಪದ್ಮಭೂಷಣ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಕೃತಿಯ ಲೇಖಕರಾದ ಹೆಚ್.ಎಸ್.ಸಿದ್ದಗಂಗಪ್ಪ ಅವರು ಶ್ರೀಗಳನ್ನು ಹತ್ತಿರದಿಂದ ಬಲ್ಲವರು ಹಾಗಾಗಿಯೇ ಹೆಚ್ಚು ನಿಖರವಾಗಿ ಅವರ ಜೀವನ ಚರಿತ್ರೆಯನ್ನು ಕಟ್ಟಿಕೊಟ್ಟಿದ್ದಾರೆ.ನಾಡಿನ ಹಲವು ಗುರುಗಳನ್ನು ನೋಡಿದ್ದೇನೆ.ಯಾವ ಗುರುವರ್ಯರಿಗೂ ಶ್ರೀಶಿವಕುಮಾರಸ್ವಾಮೀಜಿಗಳ ಕುರಿತು ಬಂದಿರುವಷ್ಟು…
ಸಾಂದರ್ಭಿಕ ಚಿತ್ರ ತುಮಕೂರು: ಇತ್ತೀಚಿನ ದಿನಗಳಲ್ಲಿ ಆಹಾರ ಅರಸುತ್ತ ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವುದು ಸರ್ವೆ ಸಾಮಾನ್ಯ ವಾಗಿಬಿಟ್ಟಿದೆ. ಇತ್ತ ಅರಣ್ಯ ಇಲಾಖೆಯೂ ಕೂಡ ಕಾಡುಪ್ರಾಣಿಗಳ ಹಾವಳಿಯ ಸ್ಥಳಗಳಲ್ಲಿ ಬೋನ್ ಗಳನ್ನು ಇಟ್ಟು ಹಿಡಿಯಲು ಪ್ರಯತ್ನಿಸುತ್ತೆ. ಆದ್ರೆ ಕಾಡುಪ್ರಾಣಿಗಳು ಬೋನಿಗೆ ಬೀಳದೆ ಪರಾರಿಯಾಗುತ್ತಿವೆ. ಇಂತಹ ಘಟನೆಗಳಿಂದಾಗಿ ಹಲವು ಗ್ರಾಮಗಳು, ಊರುಗಳಲ್ಲಿನ ಜನರು ಭಯದಿಂದಲೇ ಬದುಕುವಂತಾಗುತ್ತಿದೆ. ಇತ್ತ ತುಮಕೂರು ನೂತನ ವಿವಿ ಬಳಿಯಲ್ಲಿಯೇ ಚಿರತೆಯೊಂದು ಪ್ರತ್ಯೆಕ್ಷವಾಗಿದ್ದು, ಸುತ್ತಲಿನ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಬಿದರಕಟ್ಟೆಯ ನೂತನ ವಿವಿ ಕ್ಯಾಂಪಸ್ ಬಳಿ ಚಿರತೆ ಮೇಕೆಯ ಮೇಲೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ನಡದಿದೆ. ವಿಷಯ ತಿಳಿದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಯಭೀತರಾಗಿದ್ದಾರೆ. ವಿವಿ ಕ್ಯಾಂಪಸ್ ಜ್ಞಾನ ಸಿರಿ ಬಳಿ ಇರುವ ಕಾಂತಣ್ಣ ಎಂಬುವವರ ತೋಟದ ಮನೆಯ ಹತ್ತಿರ, ಸಂಜೆ ಸಮಯದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ. ಮೂರು ಮೇಕೆಗಳಲ್ಲಿ ಒಂದು ಮೇಕೆಯನ್ನು ಹೊತ್ತೊಯ್ದು, ಸುಮಾರು ೨ ಕಿ.ಮೀ. ದೂರದ ಪೊದೆಯೊಳಗೆ ಎಳೆದೊಯ್ದು ಸಾಯಿಸಿದೆ. ಇನ್ನು ವಿಚಾರ…
ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ. ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು…
ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅಭಿಪ್ರಾಯಪಟ್ಟರು. ನಗರದಲ್ಲಿ ಮಾದಿಗ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮೊದಲಿನಿಂದಲೂ ಬಡವರು, ಅಸಹಾಯಕರ ಹೋರಾಟಕ್ಕೆ ಧ್ವನಿಯಾಗಿದ್ದಾರೆ, ಸಾಮಾನ್ಯರೊಂದಿಗೆ ಬೆರೆ ಯುವ ಅಸಾಮಾನ್ಯಗುಣವನ್ನು ಹೊಂದಿರುವ ಕೆ.ಎನ್.ರಾಜಣ್ಣ ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲದಂತಹ ವ್ಯಕ್ತಿತ್ವದವರು ಎಂದರು. ಸಹಕಾರಿ ತತ್ವವನ್ನೇ ಉಸಿರಾಗಿಸಿಕೊಂಡು ಸಹಕಾರ ರಂಗದಲ್ಲಿ ಶೋಷಿತ ಸಮುದಾಯವನ್ನು ಗುರುತಿಸಿ, ಬೆಳೆಸಿ ರುವ ಕೆ.ಎನ್.ರಾಜಣ್ಣ ಅವರು ಸಹಕಾರಿ ರಂಗದಲ್ಲಿಯೂ ಮೀಸಲಾತಿಯನ್ನು ತರುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದ್ದು, ದಲಿತ ಸಂಘಟನೆಗಳು ಹಾಗೂ ಯುವ ಸಮುದಾಯ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಸರ್ಕಾರಿ ಎಸ್ಸಿ,ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯ ಗೌರವಾಧ್ಯಕ್ಷ ಡಾ. ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ, ಶೋಷಿತ ಸಮುದಾಯದ ಮುಖಂಡರಾಗಿರುವ ಕೆ.ಎನ್.ರಾಜಣ್ಣ ಅವರಿಗೆ ಪರ್ಯಾಯ ನಾಯಕರಿಲ್ಲ, ಸಣ್ಣ, ಪುಟ್ಟ…