Author: News Desk Benkiyabale

ಕೊರಟಗೆರೆ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷ ಕಳೆದರೂ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ, ೫ ಗ್ಯಾರಂಟಿ ಯೋಜನೆಯ ಅನುಷ್ಠಾನ ಮಾಡುವುದರಲ್ಲೆ ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಅಭಿವೃದ್ದಿ ಶೂನ್ಯವಾಗುವುದರೊಂದಿಗೆ ದಿನಬಳಕೆಯ ಹಾಲಿ ನಿಂದ ಆಲ್ಕೋಹಾಲ್ ದಿನದಿಂದ ದಿನಕ್ಕೆ ಬೆಲೆ ಏರಿಕೆ ಮಾಡಿ ಸಾರ್ವಜನಿಕರ ಮೇಲೆ ಬರೆ ಎಳೆದಿದ್ದು ಬೆಲೆ ಏರಿಕೆ ವಿರೋದಿಸಿ ಇಂದು ತುಮಕೂರಿನಲ್ಲಿ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದು ಪಕ್ಷದ ಕಾರ್ಯಕರ್ತರೊಂದಿಗೆ ಸಾರ್ವ ಜನಿಕರು ಭಾಗವಹಿಸುವಂತೆ ಬಿಜೆಪಿ ಮುಖಂಡ ಹಾಗೂ ಐಎಎಸ್ ನಿವೃತ್ತ ಅಧಿಕಾರಿ ಅನಿಲ್ ಕುಮಾರ್ ತಿಳಿಸಿದರು. ಅವರು ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರು ಆತಂಕ ಗೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯದ ಹರಿಕಾರರು ಎನ್ನುವ ಹೆಸರಿನಲ್ಲಿ ಅಧಿಕಾರ ಪಡೆದು ಬಡವರು, ದಲಿತರು, ಹಿಂದುಳಿದವರನ್ನು ಸಂಪೂರ್ಣ ಕಡೆಗಣಿಸಿದ್ದು ಕಾಂಗ್ರೆಸ್ ಸರ್ಕಾರದಿಂದ ಬಡಜನರು ಜೀವನ ನಿರ್ವಹಣೆ ಕಷ್ಟ…

Read More

ಪಾವಗಡ: ಕಾಶ್ಮೀರದ ಪಹಲ್ಕಾಮ್ ನಲ್ಲಿ ಮೂವರು ಕನ್ನಡಿಗರು ಸೇರಿದಂತೆ ೨೬ ಜನರನ್ನು ಬರ್ಬರವಾಗಿ ಹತ್ಯೆ ಮಾಡಿದ ಪಾಕಿಸ್ತಾನ ಬೆಂಬಲಿತ ಉಗ್ರರು ಅದೇ ರೀತಿ ಬುದ್ಧಿ ಕಲಸ ಬೇಕು ಇಡೀ ಪಾವಗಡ ಮುಸ್ಲಿಂ ಸಮುದಾಯದವರು ಖಂಡಿಸಿ ದಾಳಿಗೆ ಕಾರಣರಾದ ಉಗ್ರರನ್ನು ಪತ್ತೆ ಹಚ್ಚಿ ಶಿಕ್ಷಿಸಲು ಪಣತೊಟ್ಟಿಲು ಒಂದಾಗಬೇಕು ಎಂದರು. ಇAತಹ ದಾಳಿಗಳಿಗೆ ಕುಮ್ಮಕ್ಕು ನೀಡಿರುವ ಪಾಕಿಸ್ತಾನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇದೇ ಸಂದರ್ಭದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ದೇಶದ ೨೬ ಜನರ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಾಲೂಕು ಕಚೇರಿ ಮುಂದೆ ಮುಸ್ಲಿಂ ಸಮುದಾಯದವರು ಎರಡು ನಿಮಿಷ ಮೌನ ಚರಣೆ ನಿರ್ವಹಿಸಿ ತದನಂತರ ತಹಸಿಲ್ದಾರ್ ಅವರಿಗೆ ಮನವಿಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.ಇದೇ ವೇಳೆ ಪುರಸಭೆ ಸದಸ್ಯ ಮಹಮದ್ ಇಮ್ರಾನ್ ಮಾತನಾಡಿ ಭಾರತ ಶಾಂತಿಯ ತೋಟ ಇದ್ದಂತೆ ಇಲ್ಲಿ ಎಲ್ಲಾರೂ ಒಗ್ಗೂಟದಿಂದ ಜೀವನ ಮಾಡುತ್ತಿದ್ದೇವೆ ಹಾಗೂ ನೆಮ್ಮದಿಯ ಜೀವನ ಮಾಡುತ್ತಿದ್ದೇವೆ. ಇಂತಹದರಲ್ಲಿ ಕಿಡಿಗೇಡಿಗಳು ಇಂತಹ ಕೃತಗಳು ಮಾಡಿ ನಮ್ಮಲ್ಲಿ ನಮ್ಮಗೆ ಶತ್ರುತ್ವ…

Read More

ತುಮಕೂರು: ನಗರದ ಎಸ್.ಎಸ್.ಪುರಂ ಮುಖ್ಯ ರಸ್ತೆಯಲ್ಲಿರುವ ಅರಳೀಮರದ ಸಮೀಪ ಮಯೂರ ವೇದಿಕೆ ವತಿಯಿಂದ ಪದ್ಮಭೂಷಣ, ವರನಟ ಡಾ. ರಾಜ್‌ಕುಮಾರ್ ರವರ ಜನ್ಮದಿನವನ್ನು ಆಚರಿಸಲಾಯಿತು. ವರನಟ ಡಾ. ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ ಅವರ ಕಲಾ ಸೇವೆಯನ್ನು ಗುಣಗಾನ ಮಾಡಲಾಯಿತು. ಮಯೂರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎನ್.ಆರ್. ಸ್ವಾಮಿ ಮಾತನಾಡಿ, ಪ್ರತಿ ವರ್ಷವೂ ಕರುನಾಡಿನ ವರನಟ ಡಾ. ರಾಜ್‌ಕುಮಾರ್‌ರವರ ಹುಟ್ಟುಹಬ್ಬವನ್ನು ವೇದಿಕೆ ವತಿಯಿಂದ ಆಚರಿಸುತ್ತಾ ಬಂದಿದ್ದೇವೆ ಎಂದರು. ಡಾ. ರಾಜ್‌ಕುಮಾರ್ ರವರಿಗೂ ತುಮಕೂರಿಗೂ ಅವಿನಾಭಾವ ಸಂಬAಧ ಇದೆ. ಡಾ. ಗುಬ್ಬಿ ವೀರಣ್ಣರವರ ಕಂಪೆನಿಯಲ್ಲಿ ಡಾ. ರಾಜ್‌ಕುಮಾರ್ ಅವರು ನಾಟಕಗಳಲ್ಲಿ ಬಣ್ಣ ಹಚ್ಚಿ ಹಲವಾರು ಪಾತ್ರಗಳಲ್ಲಿ ಅಭಿನಯಿಸಿದ್ದರು. ಈ ಮೂಲಕ ತುಮಕೂರು ಜಿಲ್ಲೆಯೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ನಂತರ ದಿನಗಳಲ್ಲಿ ಚಲನಚಿತ್ರ ರಂಗದಲ್ಲೂ ವರನಟರಾಗಿ, ಹಿರಿಯಣ್ಣನಾಗಿ ಕರುನಾಡಿನ ಕೀರ್ತಿಯನ್ನು ವಿಶ್ವದಾದ್ಯಂತ ಎತ್ತಿ ಹಿಡಿದಿದ್ದಾರೆ. ಡಾ. ರಾಜ್‌ಕುಮಾರ್ ರವರು ಅಭಿನಯಿಸಿದ ಸಿನಿಮಾಗಳನ್ನು ಇಡೀ ಕುಟುಂಬವೇ ಕುಳಿತು ನೋಡುವಂತಿತ್ತು. ಅವರ ಸಿನಿಮಾಗಳಲ್ಲಿ…

Read More

ತುಮಕೂರು: ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಸರ್ಕಾರ ನಿರ್ದೇಶನ ನೀಡಿದ್ದು, ದತ್ತಾಂಶ ಸಂಗ್ರಹಕ್ಕಾಗಿ ಜಿಲ್ಲೆಯಲ್ಲಿ ಮೇ ೫ ರಿಂದ ಮನೆ-ಮನೆ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ವಿಕಾಸ ಸೌಧದಿಂದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತು ನಡೆಸಿದ ವಿಡಿಯೋ ಸಂವಾದದ ಸಭೆಯ ನಂತರ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ, ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಗಣತಿದಾರರನ್ನಾಗಿ ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗುವುದು. ಆಶಾ…

Read More

ತುಮಕೂರು: ವರನಟ ಡಾ.ರಾಜ್‌ಕುಮಾರ್ ಅವರು ಈ ನಾಡಿನ ಹೆಮ್ಮೆ. ನಮ್ಮ ಸಾಂಸ್ಕೃತಿಕ ನಾಯಕ. ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಸಂಕಲ್ಪ ಮಾಡುವ ದಿನವಾಗಿ ಅವರ ಜನ್ಮದಿನವನ್ನು ಕನ್ನಡಿಗರು ಆಚರಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ಗುರುವಾರ ನಗರದ ಹೊರಪೇಟೆ ರಸ್ತೆಯ ಡಾ. ರಾಜ್‌ಕುಮಾರ್ ಹೋಟೆಲ್ ಎಂದೇ ಹೆಸರಾದ ಹರಳೂರು ಶಿವಕುಮಾರ್ ಹೋಟೆಲ್ ಬಳಗದಿಂದ ನಡೆದ ಡಾ.ರಾಜ್‌ಕುಮಾರ್ ಅವರ ೯೭ನೇ ಹುಟ್ಟು ಹಬ್ಬದ ಅಂಗವಾಗಿ ಡಾ.ರಾಜ್ ಅವರ ಬೆಳ್ಳಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಶಾಸಕರು, ಹರಳೂರು ಶಿವಕುಮಾರ್ ಅವರು ಡಾ.ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾ ನಿಯಾಗಿ ಅವರ ಎಲ್ಲಾ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಅವರು ನಿಧನರಾದ ನಂತರ ಶಿವಕುಮಾರ್ ಅವರ ಪುತ್ರ ಮನು ಅವರು ಆ ಪರಂಪರೆಯನ್ನು ಮುಂದುವರೆಸಿಕೊAಡು ಬರು ತ್ತಿದ್ದಾರೆ ಎಂದು ಶ್ಲಾಘಿಸಿದರು. ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ಡಾ.ರಾಜ್‌ಕುಮಾರ್ ಅವರು ಶ್ರೇಷ್ಠ ಕಲಾವಿದ ಅವರು ಅಭಿನಯಿಸಿದ್ದ ಪೌರಾಣಿಕ ಪಾತ್ರಗಳನ್ನು ಅಷ್ಟೊಂದು ಪರಿಣಾಮಕಾರಿಯಾಗಿ…

Read More

ತುಮಕೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟçಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು. ಬಿಜಿಎಸ್ ವೃತ್ತದಿಂದ ಭದ್ರಮ್ಮ ವೃತ್ತದವರೆಗೆ ಪಾದಯಾತ್ರೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಪ್ರವಾಸಿಗರ ಮೇಲೆ ಅಮಾನುಷವಾಗಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿದರು, ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಬೇಕು, ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ತಮ್ಮ ಬೆಂಬಲವಿದೆ ಎಂದು ಘೋಷಿಸಿದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಮಾತನಾಡಿ, ಪ್ರವಾಸಿಗರ ಸ್ವರ್ಗವಾಗಿರುವ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಹತ್ಯೆ ಮಾಡಿರುವುದು ನೋವಿನ ಸಂಗತಿ, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಹಿಂದೆ ಇಂತಹುದೇ ಘಟನೆ ನಡೆದಾದ ಕೇಂದ್ರ ಸರ್ಕಾರ ಒಂದು ತಲೆಗೆ ಎರಡು ತಲೆ ತರುವ ಭರವಸೆ ನೀಡಿತ್ತು, ಈಗ ಆ ಭರವಸೆ…

Read More

ತುರುವೇಕೆರೆ : ತಾಲ್ಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರ ಸಮೀಪ ರೈಲ್ವೆ ಹಳಿ ದಾಟುವಾಗ ಚಿರತೆ ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಎರಡು ವರ್ಷದ ಹೆಣ್ಣು ಚಿರತೆ ಸುಮಾರು ೫ ಗಂಟೆಯ ಸಮಯದಲ್ಲಿ ಮೈಸೆಂಕೋ ಫ್ಯಾಕ್ಟರಿ ಎದುರಿನ ರೈಲ್ವೆ ಹಳಿ ದಾಟುವಾಗ ಆಕಸ್ಮಿಕವಾಗಿ ಚಿರತೆ ರೈಲುಗಾಲಿಗೆ ಸಿಲುಕಿದೆ ಪರಿಣಾಮ ಅದರ ತಲೆ ಮತ್ತು ಮುಂಗಾಲು ಕತ್ತರಿಸಿದ ರೀತಿ ಸಾವನ್ನಪ್ಪಿದೆ. ಬೆಳಗ್ಗೆ ಎಂದಿನAತೆ ಲೈನ್ ಮೆನ್ ಗಳು ರೈಲ್ವೆ ಹಳಿ ಪರೀಕ್ಷಿಸುವಾಗ ಚಿರತೆ ರೈಲಿಗೆ ಸಿಕ್ಕಿ ಅಸುನೀಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಆರ್.ಎಫ್.ಒ ಅರುಣ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ಅರಣ್ಯ ಗಸ್ತು ಅಧಿಕಾರಿ ರೂಪೇಷ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಆರ್.ಎಫ್.ಒರವರು ದಂಡಿನಶಿವರ ಪಶು ವೈದ್ಯಾಧಿಕಾರಿ ಡಾ.ಮಂಜುಶ್ರೀ ಮತ್ತು ಡಾ.ಪುಟ್ಟರಾಜುರವರನ್ನು ಕರೆಯಿಸಿ ಚಿರತೆ ಮೃತಪಟ್ಟ ಸ್ಥಳದಲ್ಲೇ ಮರಣೊತ್ತರ ಪರೀಕ್ಷೆ ನಂತರ ಸುಟ್ಟು ಹಾಕಲಾಗಿತೆಂದು ಅರಣ್ಯಾಧಿಕಾರಿಗಳು ತಿಳಿದರು.

Read More

ತುಮಕೂರು: ಒಳಮೀಸಲಾತಿಗೆ ಸಂಬAಧಿಸಿದAತೆ ಜಿಲ್ಲೆಯ ಪರಿಶಿಷ್ಟ ಜಾತಿಯ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೇ.೦೧ ರಿಂದ ೦೭ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಒಳಮೀಲಾತಿ ಹೋರಾಟ ಸಮಿತಿಯಿಂದ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕರಾದ ಡಾ.ವೈ.ಕೆ.ಬಾಲಕೃಷ್ಣ ತಿಳಿಸಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಒಳಮೀಸಲಾತಿ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷರುಗಳ ಸಭೆಯಲ್ಲಿ ಮಾತನಾಡಿದ ಅವರು,ಮೇ೦೧ ರಂದು ಕೊರಟಗೆರೆಯಿಂದ ಆರಂಭವಾಗುವ ೭ನೇ ತಾರೀಖು ಮುಕ್ತಾಯಗೊಳ್ಳಲಿದೆ.ಆಯಾಯ ತಾಲೂಕಿನಲ್ಲಿ ಮಾದಿಗ ಸಮುದಾಯದ ಮುಖಂಡರನ್ನು ಭೇಟಿಯಾಗಿ, ಅವರಿಗೆ ಸಮೀಕ್ಷೆಯ ರೂಪುರೇಷೆ,ಭರ್ತಿ ಮಾಡಬೇಕಾದ ವಿಷಯಗಳು ಎಲ್ಲವನ್ನು ತಿಳಿಸಿ, ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕಿದೆ ಎಂದರು. ಒಳಮೀಸಲಾತಿಗೆ ಸಂಬAಧಿಸಿದAತೆ ನ್ಯಾ.ನಾಗಮೋಹನ್ ದಾಸ್ ಸಮಿತಿವತಿಯಿಂದ ಸಮೀಕ್ಷೆಗೆ ಸಂಬAಧಿಸಿದAತೆ ಪ್ರತಿಯೊಬ್ಬ ಮಾದಿಗ ಸಮುದಾಯದ ಮುಖಂಡರು ಜಾಗೃತರಾಗಿ ಜಾತಿ ಕಲಂನಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಕಲಂನಲ್ಲಿ ಮಾದಿಗ ಎಂದು ನಮೂದಿಸಬೇಕು,ಗೊಂದಲಕ್ಕೆ ಒಳಗಾಗುವ ಯಾವ ಜಾತಿ ಸೂಚಕ ಪದಗಳನ್ನು ಬಳಸದೆ ಕೇವಲ ಮಾದಿಗ ಎಂದು ಬರಸಬೇಕು.ಜೊತೆಗೆ,ನಿಮ್ಮ ಅಕ್ಕಪಕ್ಕದ ಮನೆಯ, ಅಥವಾ…

Read More

ತುಮಕೂರು: ಹಾಸ್ಟಲ್, ವಸತಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆಗುತ್ತಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆತಪ್ಪಿಸುವ ನಿಟ್ಟಿನಲ್ಲಿ ಬೀದರ್ ಮಾದರಿಯಲ್ಲಿ ಸೋಸೈಟಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅಗತ್ಯಕ್ರಮ ಕೈಗೊಳ್ಳಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದವತಿಯಿAದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ,ತುಮಕೂರುಜಿಲ್ಲಾಧ್ಯಕ್ಷರವಿಕುಮಾರ್‌ಅವರ ನೇತೃತ್ವದಲ್ಲಿ ನೂರಾರು ನೌಕರರು ಜಿಲ್ಲಾಧಿಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಿ,ಈ ಸಂಬAಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದಕರ್ನಾಟಕರಾಜ್ಯ ಸರಕಾರಿ ಹಾಸ್ಟಲ್, ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮಂತೇಗೌಡ,ಮೊದಲಿಗೆ ನಾವು ಸರಕಾರಕ್ಕೆಅಭಿನಂದನೆ ಸಲ್ಲಿಸುತ್ತೇವೆ.ಹೊರಗುತ್ತಿಗೆ ನೌಕರರಿಗೆ ಕನಿಷ್ಠ ೩೧ ಸಾವಿರರೂ ವೇತನ ನೀಡಬೇಕೆಂದು ಸರಕಾರದ ಮೇಲೆ ಒತ್ತಡತಂದಿದ್ದು, ಸರಕಾರ ಏ.೧೧ ರಂದು ಮಾಸಿಕ ೨೫.೭೧೪ ರೂಗಳಿಗೆ ಕನಿಷ್ಠ ವೇತನ ನಿಗದಿ ಪಡಿಸಿದೆ.ಇದಕ್ಕಾಗಿ ಸರಕಾರದ ಮುಖ್ಯಮಂತ್ರಿಗಳು,ಉಪಮುಖ್ಯ ಮಂತ್ರಿಗಳು…

Read More

ಚಿಕ್ಕನಾಯಕನಹಳ್ಳಿ: ಕಂದಾಯ ಇಲಾಖೆಯ ಅಧಿಕಾರಿಗಳೇ ನಕಲಿ ದಾಖಲೆಸೃಷ್ಠಿಸಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ದಾಖಲೆ ಮಾಡಿದ ಅಪರೂಪದ ಪ್ರಕರಣವನ್ನು ಕೆಆರ್‌ಎಸ್ ಪಕ್ಷದ ಮುಖಂಡರು ದಾಖಲೆ ಸಮೇತ ಬಯಲಿಗೆಳೆದಿದ್ದಾರೆ. ಪಟ್ಟಣದ ತಾಲ್ಲೂಕು ಕಚೇರಿಗೆ ಕೆಆರ್‌ಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೆರಳಿ ಕಂದಾಯ ಇಲಾಖೆಯಲ್ಲಾಗುತ್ತಿರುವ ಭ್ರಷ್ಟಾಚಾರದ ಪ್ರಕರಣಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಖಂಡ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ ತಾಲ್ಲೂಕಿನಲ್ಲಿ ಈಗಾಗಲೇ ಅಧಿಕಾರಿಶಾಹಿ ಆಡಳಿತದಿಂದಾಗಿ ಮುಗ್ದ ಜನರ ಭೂಧಾಖಲೆಗಳು ನಕಲಿ ದಾಖಲೆಗಳ ಮೂಲಕ ಪರಭಾರೆಯಾಗಿ ಸುದ್ದಿಯಾದ ನಂತರ ಕೆಲ ಅಧಿಕಾರಿಗಳ ತಲೆದಂಡವಾದರೂ ಇನ್ನೂ ಕಂದಾಯ ಇಲಾಖೆಯ ಅಧಿಕಾರಿವರ್ಗ ಬುದ್ದಿಕಲಿತಿಲ್ಲ, ತಾಲ್ಲೂಕಿನ ಹಂದನಕೆರೆ ಹೋಬಳಿ ಸಬ್ಬೇನಹಳ್ಳಿ ಗ್ರಾಮದ ಸ.ನಂ.೩೪ರಲ್ಲಿ ರಾಜಪ್ರಮುಖ ಮೈಸೂರು ಹೆಸರಿಗೆ ೩೬ ಗುಂಟೆ ಜಮೀನನ್ನು ವ್ಯಕ್ತಿಯೊಬ್ಬರು ದಾನವಾಗಿ ನೀಡಿದ್ದರು. ಸದರಿ ಜಮೀನಿನ ದಾಖಲೆಯನ್ನು ಇಲ್ಲಿನ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಖ್ಖಿಗರು ಸೇರಿ ನಕಲಿ ಭೂ ದಾಖಲೆ ಸೃಷ್ಠಿಸಿ ಬೇರೊಬ್ಬರ ಹೆಸರಿಗೆ ಖಾತೆ ಮಾಡಿದ್ದಾರೆ ಎಂದು ಎಲ್ಲಾ ಧಾಖಲೆಗಳನ್ನು ಪ್ರದರ್ಶಿಸಿದರು.…

Read More