Author: News Desk Benkiyabale

ತುಮಕೂರು: ನಗರದಲ್ಲಿ ಅನಧಿಕೃತವಾಗಿ ಚಲಿಸುತ್ತಿರುವ ಬೈಕ್ ಟ್ಯಾöಕ್ಸಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕು, ಹೊಸದಾಗಿ ಆಟೋ ಪರವಾನಗಿ ತಡೆಹಿಡಿಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಆಟೋ ಚಾಲಕರು, ಮಾಲೀಕರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಆವರಣದ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಆಟೋ ಚಾಲಕರು, ಮಾಲೀಕರು ಹೋರಾಟ ಆರಂಭಿಸಿದರು. ತಮ್ಮ ಆಟೋಗಳನ್ನು ನಗರಪಾಲಿಕೆ ಆವರಣದಲ್ಲಿ ನಿಲ್ಲಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ತೆರಳಿ, ಅಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ವಿ.ಪ್ರತಾಪ್ ಮದಕರಿ ಮಾತನಾಡಿ, ನೀಡಿ, ನಗರದಲ್ಲಿ ನಗರ ಸಾರಿಗೆ ಸೇವೆ ಆರಂಭವಾದಾಗಿನಿAದ ಆಟೋಗಳ ವ್ಯವಹಾರ ಕುಸಿತಗೊಂಡು ಆಟೋ ಚಾಲಕರು ತಮ್ಮ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರದಲ್ಲಿ ದಿನೇದಿನೆ ಆಟೋಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಮ್ಮಲ್ಲೇ ಬದುಕಿಗಾಗಿ…

Read More

ತುರುವೇಕೆರೆ: ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಸಮುದಾಯ ವಿದ್ಯಾರ್ಥಿ ಧರಿಸಿದ್ದ ಯಜ್ಞೋಪವಿತ (ಜನಿವಾರ) ತೆಗಿಸಿದ್ದ ಘಟನೆಯನ್ನು ಖಂಡಿಸಿ ತಾಲೂಕು ಬ್ರಾಹ್ಮಣ ಸಮಾಜದವತಿಯಿಂದ ಉಪ ತಹಸೀಲ್ದಾರ್ ಸುಮತಿರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಬ್ರಾಹ್ಮಣ ಸಭಾದ ಮಾಜಿ ಅಧ್ಯಕ್ಷ ಅಮಾನಿಕೆರೆ ಮಂಜುನಾಥ್ ಮಾತನಾಡಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಬೀದರ್ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಪರಿಶೀಲನೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಅಧಿಕಾರಿ ತೆಗಿಸಿ ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ, ಕೂಡಲೇ ಸರ್ಕಾರ ಇಂತಹ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕೆಲಸದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಆರ್. ಸತ್ಯನಾರಾಯಣ್ ಮಾತನಾಡಿ ಒಂದು ಸಮುದಾಯದಕ್ಕೆ ಅಗೌರವ ನೀಡಿರುವುದು ಸರಿಯಲ್ಲ ಇದರಿಂದ ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿದಂತೆ. ಮುಂದೆ ಇಂತಹ ಘಟನೆ ಮರುಕಳಿಸದಂತೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಬದಲ್ಲಿ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕರಾದ ಶ್ರೀನಿವಾಸ್,…

Read More

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ಯೋಗ ಡಿಪ್ಲೊಮಾ ಕೋರ್ಸ್ ಇದ್ದು, ಮುಂದೆ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸುವ ಚಿಂತನೆಯಿದೆ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು. ವಿಶ್ವವಿದ್ಯಾನಿಲಯ ಆಯೋಜಿಸಿದ್ದ ೨೧ ದಿನಗಳ ಯೋಗ ಸರ್ಟಿಫಿಕೇಟ್ ಕೋರ್ಸ್ನ ಸಮಾರೋಪ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ಈ ವಿಶೇಷ ಕೋರ್ಸ್ ಅನ್ನು ನಮ್ಮ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗಾಗಿಯೇ ಆರಂಭಿಸಿದ್ದೇವೆ. ಮುಂದೆ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ತೆರೆಯಲಾಗುವುದು ಎಂದರು. ಯೋಗವು ವಯಸ್ಸಿನ ಭೇದವಿಲ್ಲದೆ ಎಲ್ಲರಿಗೂ ಅವಶ್ಯಕವಾಗಿದ್ದು, ಇದರಿಂದ ಮನುಷ್ಯ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗಿ, ಉತ್ತಮ ಆರೋಗ್ಯವನ್ನು ಪಡೆಯುತ್ತಾನೆ ಎಂದರು. ಯೋಗದ ಮಹತ್ವವನ್ನು ಅರ್ಥಮಾಡಿಕೊಂಡು ಲಕ್ಷಾಂತರ ಮಂದಿ ದಿನವೂ ಯೋಗವನ್ನು ತಮ್ಮ ಜೀವನಶೈಲಿಯಾಗಿ ಮಾಡುತ್ತಿದ್ದಾರೆ. ಯೋಗ ಕೇವಲ ಆರೋಗ್ಯವರ್ಧಕವೇ ಅಲ್ಲ, ಅದು ವ್ಯಕ್ತಿತ್ವವರ್ಧಕವೂ ಹೌದು. ಈ ವರ್ಷದ ಯೋಗ ಸರ್ಟಿಫಿಕೇಟ್ ಕೋರ್ಸ್ನಲ್ಲಿ ೫೪ ಅಭ್ಯರ್ಥಿಗಳು ಭಾಗವಹಿಸಿದ್ದು ಸಂತಸದ ವಿಷಯ ಎಂದು ತಿಳಿಸಿದರು. ಕಾರ್ಯಕ್ರಮದ ಸಂಚಾಲಕ ಡಾ. ಎ. ಎಂ. ಮಂಜುನಾಥ…

Read More

ತುಮಕೂರು: ಸ್ನಾತಕೋತ್ತರ ಹಂತದಲ್ಲಿ ತರಬೇತಿಯನ್ನು ಪರಿಣಾಮಕಾರಿಯಾಗಿ ಅಭ್ಯಾಸ ಮಾಡಲು, ವೈಜ್ಞಾನಿಕ ಜ್ಞಾನ ಮತ್ತು ಕೌಶಲ್ಯದ ಆಧಾರದ ಮೇಲೆ ರೋಗಿಗಳೊಂದಿಗೆ ಸಹಾನುಭೂತಿ ವರ್ತಿಸುವುದು ಮತ್ತು ಕಾಳಜಿಯ ಮನೋಭಾವವನ್ನು ಕಂಡು ಕೊಳ್ಳುವ ನಿಟ್ಟಿನಲ್ಲಿ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಚರ್ಮರೋಗ ಶಾಸ್ತ್ರದ ವಿಭಾಗದ ವತಿಯಿಂದ ಒಂದು ದಿನದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ನಗರದ ಅಗಳಕೋಟೆಯಲ್ಲಿರುವ ಆಸ್ಪತ್ರೆಯ ನಾಗಾರ್ಜುನ ಸಭಾಂಗಣದಲ್ಲಿ ಭಾರತೀಯ ಚರ್ಮರೋಗ ತಜ್ಞರ ಸಂಘ ಹಾಗೂ ಕರ್ನಾಟಕ ಕುಷ್ಠರೋಗ ತಜ್ಞರ ಸಂಘ ಮತ್ತು ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಚರ್ಮ ಶಾಸ್ತç ವಿಭಾಗದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಾರ್ಷಿಕ ಕಾರ್ಯಾಗಾರವನ್ನು ರಾಷ್ಟಿçÃಯ ಘಟಕದ ಅಧ್ಯಕ್ಷರಾದ ಡಾ ಮಂಜುನಾಥ್ ಶೆಣೈ ಉದ್ಘಾಟಿಸಿದರು. ಚರ್ಮರೋಗ ಶಾಸ್ತ್ರದ ಪ್ರಥಮ ವರ್ಷದ ಸ್ನಾತಕೋತ್ತರ ಪದವೀಧರರಿಗಾಗಿ ಹಮ್ಮಿಕೊಳ್ಳಲಾಗಿರುವ ವಾರ್ಷಿಕ ಕಾರ್ಯಾ ಗಾರವು ಉತ್ತಮ ಮತ್ತು ಯಶಸ್ವಿ ಚರ್ಮರೋಗ ವೈದ್ಯರನ್ನು ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಅನೇಕ ಹಿರಿಯ ಮತ್ತು ಅನುಭವಿ ಪ್ರಾಧ್ಯಾಪಕರು ನೀಡುವ ವಿವಿಧ ರೀತಿಯ ಮಾರ್ಗದರ್ಶನ ಭಾವಿ ವೈದ್ಯರ ಜ್ಞಾನವನ್ನು…

Read More

ತುಮಕೂರು: ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಮಾಜಿ ಅಧ್ಯಕ್ಷರೂ,ಹಿರಿಯ ವಕೀಲರೂ, ಅಖಿಲ ಭಾರತ ಬಾರ್ ಕೌನ್ಸಿಲ್ ಉಪಾಧ್ಯಕ್ಷರಾದ ಸದಾಶಿವರೆಡ್ಡಿ ಅವರ ಮೇಲೆ ನಡೆದಿರುವ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ನೀಡಿದ ಪ್ರತಿಭಟನೆ ಕರೆಗೆ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರ ನೇತೃತ್ವದಲ್ಲಿ ಎಡ ತೋಳಿಗೆ ಕೆಂಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ನಂತರ ಸಂಘದ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಿರಿಯ,ಕಿರಿಯ,ಮಹಿಳಾ ವಕೀಲರುಗಳು ಮೌನ ಪ್ರತಿಭಟನೆ ಮೂಲಕ ತೆರಳಿ ಸದರಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳ ಪರವಾಗಿ ತಹಸೀಲ್ದಾರ್ ಜಿ.ವಿ.ಮೋಹನ್ ಕುಮಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು, ನಂತರ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಮಾತನಾಡುತ್ತಾ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬಂದಿದ್ದರೂ ಕಕ್ಷಿದಾರರು ವಕೀಲರ ಮೇಲೆ ನಡೆಸಿದ ಹಲ್ಲೆಯನ್ನು ತುಮಕೂರು ಜಿಲ್ಲಾ ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ,ತಪ್ಪಿತಸ್ಥರ ಮೇಲೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,ಇನ್ನುಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೋಲೀಸ್ ಇಲಾಖೆ…

Read More

ಶಿರಾ: ರೈತರ ಅನುಕೂಲಕ್ಕಾಗಿ ಶಿರಾ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ೧೨.೫ ಕೋಟಿ ರೂಪಾಯಿ ವೆಚ್ಚದ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು, ರೈತರು ಬೆಳೆದಂತಹ ತರಕಾರಿ ಮತ್ತು ಇತರೆ ಬೆಳೆಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಶೇಖರಣೆ ಮಾಡಿ ಸೂಕ್ತ ಬೆಲೆ ಸಿಕ್ಕ ಸಂದರ್ಭದಲ್ಲಿ ಮಾರಾಟ ಮಾಡಲು ಅನುಕೂಲ ವಾಗಲಿದೆ. ಇದಲ್ಲದೆ ಹುಣಸೆ ಪಾರ್ಕ್ ಮಾಡುವ ಉದ್ದೇಶದಿಂದ ಎಪಿಎಂಸಿ ಆವರಣದ ಪಕ್ಕದಲ್ಲಿಯೇ ೨೦ ಎಕರೆ ಭೂಮಿಯನ್ನು ಮೀಸಲಿಡಲಾಗಿದ್ದು, ಹುಣಸೆ ಸಂಸ್ಕರಣ ಘಟಕ ಶೀಘ್ರದಲ್ಲಿಯೇ ನಿರ್ಮಾಣವಾಗಲಿದೆ. ಹೈನುಗಾರಿಕೆ ಬಡ ಕುಟುಂಬಗಳ ಪಾಲಿಗೆ ವರದಾನವಾಗಿದ್ದು ಹುಳಿ ಗೆರೆ ನೂತನ ಹಾಲು ಉತ್ಪಾದಕರ ಕಟ್ಟಡ ನಿರ್ಮಾಣ ಮಾಡಲು ೧೦. ಲಕ್ಷ ರೂಪಾಯಿ ಅನುದಾನ ನೀಡಲಿದ್ದೇನೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಶಿರಾ ತಾಲೂಕಿನ ಹುಳಿಗೆರೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರ ವೇರಿಸಿ ಮಾತನಾಡಿದರು. ಬಡ ಕುಟುಂಬಗಳಿಗೆ ಆರ್ಥಿಕ…

Read More

ತುಮಕೂರು: ಸಿ.ಇ.ಟಿ. ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಯ ವಿರುದ್ಧ ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿತು. ನಗರದ ಬಿ.ಹೆಚ್. ರಸ್ತೆಯ ಶಂಕರಮಠದಲ್ಲಿ ಜಿಲ್ಲಾ ಬಾಹ್ಮಣ ಸಭಾದ ನೇತೃತ್ವದಲ್ಲಿ ಸಮಾವೇಶಗೊಂಡ ಆರ್ಯವೈಶ್ಯ, ವಿಶ್ವಕರ್ಮ ಹಾಗೂ ಜೈನ ಸಮುದಾಯದ ಮುಖಂಡರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಕುರಿತು ನಿರ್ಣಯ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆ ಮುಖಂಡ ಜಿ.ಎಸ್. ಬಸವ ರಾಜು ಸ್ವಾತಂತ್ರ‍್ಯ ಭಾರತದಲ್ಲಿ ಈ ರೀತಿಯ ಘಟನೆ ಎಂದೂ ಸಹ ನಡೆದಿರಲಿಲ್ಲ. ಈ ಘಟನೆ ಒಂದು ಸಮುದಾಯದ ಮೇಲೆ ನಡೆದ ದೌರ್ಜನ್ಯವಲ್ಲ, ಬದಲಾಗಿ ಸಂವಿಧಾನದ ಮೇಲೆ ನಡೆದ ದೌರ್ಜನ್ಯ. ಸಮಸ್ತ ಹಿಂದೂ ಸಮಾಜ ಇದನ್ನು ಖಂಡಿಸಬೇಕು ಎಂದರು. ಆರ್ಯವೈಶ್ಯ ಸಮಾಜದ ಮುಖಂಡರಾದ ಡಾ. ರಮೇಶ್ ಬಾಬು ಮಾತನಾಡಿ, ನಿರಂತರವಾಗಿ ಬಹುಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಂಘಟನೆಯ ಕೊರತೆ ಕಾರಣವಾಗಿದೆ. ಬೇರೆ ದೇಶದ ಜನರು ಇಂದು ಸನಾತನ ಧರ್ಮದ ಕಡೆಗೆ ಆಕರ್ಷಿತವಾಗುತ್ತಿರುವ…

Read More

ಕೊರಟಗೆರೆ:-ಸೂರ್ಯಚಂದ್ರ ಇರುವ ತನಕ ಎತ್ತಿನಹೊಳೆ ಯೋಜನೆಯ ನೀರು ಕೊರಟಗೆರೆ ಕ್ಷೇತ್ರದ ೧೦೪ಕೆರೆಗಳಿಗೆ ಹರಿಯುತ್ತೇ. ನಾನು ಕೊರಟಗೆರೆ ವಿಧಾನಸಭಾ ಕ್ಷೇತ್ರದ ರೈತರ ಮನೆಮಗ. ೨ವರ್ಷದ ಅವಧಿಯಲ್ಲಿ ನನ್ನ ಕ್ಷೇತ್ರಕ್ಕೆ ೭೫೦ಕೋಟಿಗೂ ಅಧಿಕ ಅನುಧಾನ ಬಂದಿದೆ. ಮುಂದಿನ ೩ವರ್ಷದ ಅವಧಿಯಲ್ಲಿ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಚಿತ್ರಣ ಬದಲಾಗುವ ರೀತಿ ಕೆಲಸ ಮಾಡ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಗೊರವನಹಳ್ಳಿ ಶ್ರೀಕ್ಷೇತ್ರದಲ್ಲಿ ಜಿಲ್ಲಾಢಳಿತ ಮತ್ತು ಜಿಪಂಯಿAದ ಶನಿವಾರ ಏರ್ಪಡಿಸಲಾಗಿದ್ದ ೪೫೪ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರದ ಅತಿಸೂಕ್ಷö್ಮ ಗೃಹಇಲಾಖೆಗೆ ನನ್ನನ್ನು ನೇಮಿಸಿದ್ದಾರೆ. ಹಳ್ಳಿಗಳಿಗೆ ನಾನು ಬರುವುದಕ್ಕೆ ಆಗುತ್ತೀಲ್ಲ ಅದಕ್ಕಾಗಿ ನಾನು ಜನರಲ್ಲಿ ಕ್ಷಮೆ ಕೇಳ್ತಿನಿ. ನಾನು ನಿಮ್ಮ ಮನೆಯ ಮಗನಾಗಿ ಪ್ರತಿಯೊಂದು ಹಳ್ಳಿಯಲ್ಲಿಯು ಅಭಿವೃದ್ದಿಗೆ ಅನುಧಾನ ತರ್ತಿನಿ. ಗ್ಯಾರಂಟಿ ಯೋಜನೆಯ ಜೊತೆಯಲ್ಲೇ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯು ಆಗಲಿದೆ ಎಂದರು. ನನ್ನ ರಾಜಕೀಯ ಜೀವನದಲ್ಲಿ ಯಾವತ್ತು ಸಹ ಭೂಟಾಟಿಕೆ ಮಾಡಿದ ವ್ಯಕ್ತಿ…

Read More

ತುಮಕೂರು: ಹರಿಕಥೆ ಎನ್ನುವುದು ಒಂದು ಜಾತ್ಯಾತೀತ ಕಲೆ. ಈ ಕಲೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ.ಹಾಗಾಗಿ ಈ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಕ ಕಲಾವಿದರನ್ನು ಇತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದು ಹಿರಿಯ ಸುಗಮ ಸಂಗೀತ ಕಲಾವಿದರಾದ ಡಾ.ಆರ್.ಕೆ.ಪದ್ಮನಾಭನ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಿ.ಸೋಮಶೇಖರದಾಸ್ ಪ್ರತಿಷ್ಠಾನ ಬೆಂಗಳೂರು ಇವರು, ಚಿರಂತ ಸಾಂಸ್ಕೃತಿಕ ಟ್ರಸ್ಟ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಹರಿದಾಸರ ಸಮಾವೇಶ-೨೦೨೫ ವನ್ನು ಉದ್ಭಾಟಿಸಿ ಮಾತನಾಡುತಿದ್ದ ಅವರು, ಸುಗಮ ಸಂಗೀತ, ನೃತ್ಯ,ಗಮಕ ಇಂತಹ ಕಲೆಗಳಿಗೆ ಅದರದ್ದೇ ಪ್ರೇಕ್ಷಕರ ವರ್ಗವಿದೆ.ಆದರೆ ಹರಿಕಥೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಸಹ ಆಗಮಿಸಿ, ಕೇಳಿ ಆಸ್ವಾಧಿಸುತ್ತಾರೆ. ಹಾಗಾಗಿ ಇದೊಂದು ಜಾತ್ಯಾತೀತ ಕಲೆ. ಇದು ಉಳಿದು ಬೆಳೆಯಬೇಕಿದೆ ಎಂದರು. ನಾನು ಸಹ ಬಾಲ್ಯದಿಂದಲೂ ಹರಿಕಥೆಯನ್ನು ಕೇಳಿ ಬೆಳದವ. ಕಾಲೇಜು ದಿನಗಳಲ್ಲಿ ಗುರುರಾಜುಲುನಾಯ್ಡು ಅವರ ಹರಿಕಥಾ ಕಾರ್ಯಕ್ರಮಕ್ಕೆ ತಪ್ಪದೇ ಹೋಗುತ್ತಿದ್ದೇ, ನನ್ನ ಗಾಯನದ ಮೇಲೆ…

Read More

ಪಾವಗಡ: ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಜಾರಿಯಾಗಲು ಶ್ರಮಿಸಿದ ಹೋರಾಟಗಾರರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದುಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆಯ ಅಧ್ಯಕ್ಷರಾದ ಶಿವಪ್ರಸಾದ್ ರವರು ತಿಳಿಸಿದರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಾ.ನಂಜುAಡಪ್ಪ ವರದಿಯ ಪ್ರಕಾರ ಅತೀ ಹಿಂದುಳಿದ ಪ್ರದೇಶವಾಗಿದ್ದು, ಸದಾ ಬರಗಾಲಕ್ಕೆ ತುತ್ತಾಗುತಿತ್ತು ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಕೆರೆಗಳನ್ನು ತುಂಬಿಸುವ ಯೋಜನೆಗಳ ಜಾರಿಗೆ ಸಂಬAಧಿಸಿದAತೆ ಹಲವಾರು ಹೋರಾಟಗಳು ನಡೆದಿವೆ, ಆದ್ದರಿಂದ ಹೋರಾಟಗಾರರನ್ನು ಗೌರವಿಸಿ ಸನ್ಮಾನಿಸಲಾಗುವುದು. ಹೊಸಪೇಟೆ ಜಲಾಶಯದಿಂದ ತಾಲೂಕಿಗೆ ಕುಡಿಯುವ ನೀರು ಹರಿದು ಬಂದಿದೆ ದಶಕಗಳ ಹೋರಾಟ ಯಶಸ್ವಿಯಾಗಿದೆ ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನವಾಗಿದ್ದು ಪ್ರಗತಿಪ ಪದದತ್ತ ಸಾಗಿದೆ ಎತ್ತಿನಹೊಳೆ ಯೋಜನೆ ಮಂಜೂರಾಗಿದೆ ಸರ್ಕಾರವು ಕಾಮಗಾರಿಗಳನ್ನು ಕೈಗೊತ್ತಿಕೊಂಡಿದ್ದು ಈ ಮೂರು ಯೋಜನೆಗಳು ತಾಲೂಕಿಗೆ ಮಂಜೂರಾಗಲು ಅನುಷ್ಠಾನಗೊಳ್ಳಲು ಹಲವಾರು ದಶಕಗಳಿಂದ ಅನೇಕ ಹೋರಾಟಗಳು ನಡೆದಿವೆ, ವಿವಿಧ ರೀತಿಯ ಪ್ರತಿಭಟನೆಗಳು ನಡೆದು ಅವು ವಿವಿಧ ರೂಪ ಪಡೆದುಕೊಂಡು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು ಯಶಸ್ವಿಯಾಗಿವೆ.…

Read More