Author: News Desk Benkiyabale

ಮಧುಗಿರಿ: ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿಯಾಗಲಿದೆ ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು. ಪಟ್ಟಣದ ಅದ್ವೈತ ಆಂಗ್ಲ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಾ ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಬೆಳೆಸಬೇಕಾಗಿದೆ ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಶಾಲೆಗಳಲ್ಲಿ ಇಂತಹ ವಸ್ತು ಪ್ರದರ್ಶನಗಳನ್ನು ಏರ್ಪಡಿಸಿ ಆ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.. ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎನ್ ಹನುಮಂತರಾಯಪ್ಪ ಮಾತನಾಡಿ ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಲು ಸಹಾಯಕಾರಿಯಾಗಲಿದೆ ಜೊತೆಗೆ ವಿಜ್ಞಾನ ವಸ್ತು ಪ್ರದರ್ಶನ ಅನುಭವದ ಕಲಿಕೆ ಆಗಲಿದೆ ಇದರಿಂದ ಮಕ್ಕಳಲ್ಲಿನಾ ಪ್ರತಿಭೆ ಗುರುತಿಸಲು ಸಹಾಯಕಾರಿಯಾಗಲಿದೆ ಇದೇ ಅಲ್ಲದೆ ಮುಂದಿನ ಪೀಳಿಗೆಗೆ ವಿಜ್ಞಾನದ ಬಗ್ಗೆ ಆಸಕ್ತಿ ವಹಿಸಲು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಮತ್ತು ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕಾರಿಯಾಗಲಿದೆ ಎಂದರು. ಸAಸ್ಥೆಯ ಕಾರ್ಯದರ್ಶಿ ಹಾಗೂ ಪುರಸಭಾ ಮಾಜಿ ಅಧ್ಯಕ್ಷ ಲಾಲಾ ಪೇಟೆ ಮಂಜುನಾಥ್ ಮಾತನಾಡಿ ವಿಜ್ಞಾನದ…

Read More

ಸಿರಾ: ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ್ಯುವೆಲರಿ ಅಂಗಡಿಗಳು, ಹೋಟೆಲ್ಗಳು ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗಾಗಿ ಜಾಗೃತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ದರೋಡೆ, ಸುಲಿಗೆ ಹಾಗೂ ಕಳವು ಪ್ರಕರಣಗಳ ಕುರಿತು ಮಾಹಿತಿ ನೀಡಿ, ಇಂತಹ ಅಪರಾಧಗಳನ್ನು ತಡೆಯಲು ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಸೈರನ್ ವ್ಯವಸ್ಥೆ ಅಳವಡಿಸಿ ಸದಾ ಕಣ್ಗಾವಲು ಇರಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು. ಇದಲ್ಲದೆ, ಇತ್ತೀಚಿನ ಆರ್ಬಿಐ  ಹಾಗೂ ಪೊಲೀಸ್ ಇಲಾಖೆ ಮಾರ್ಗಸೂಚಿಗಳ ಅನುಸಾರ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಂಗಡಿ ಮಾಲೀಕರಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬ0ದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಪೊಲೀಸ್ ಇಲಾಖೆ ಸದಾ ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

Read More

ತುಮಕೂರು: ಸಿರಿಧಾನ್ಯಗಳು ಪೋಷಕಾಂ ಧಗಳ ಸಂಪತ್ತಾಗಿದ್ದು, ಮಧುಮೇಹದಂತಹ ರೋಗಗ ಳಿಗೆ ಮದ್ದಿನಂತೆ ಕೆಲಸ ಮಾಡುತ್ತವೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ್ ಕಲ್ಲಣ್ಣನವರ್ ಅಭಿಪ್ರಾಯಪಟ್ಟರು. ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕೃಷಿ ಇಲಾಖೆ, ವತಿಯಿಂದ ಸಿರಿಧಾನ್ಯ ಉತ್ಪನ್ನ ಗಳ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನವಣೆ, ಸಾಮೆ, ಕೊರಲೆ ಖಾದ್ಯಗಳು ಮಧುಮೇಹ ರೋಗಿಗಳಿಗೆ ಅಮೃತ ಸಮಾನ ವಾಗಿದ್ದು, ರಕ್ತದಲ್ಲಿನ ಗ್ಲುಕೋಸ್ ನಿಯಂತ್ರಣಕ್ಕೆ ಸಹಕಾರಿಯಾಗುತ್ತವೆ ಎಂದರಲ್ಲದೆ, ರಾಗಿ ಹೆಚ್ಚಿನ ಕ್ಯಾಲ್ಷಿಯಂ ಹಾಗೂ ರಂಜಕಾ0ಶ ಹೊಂದಿರುವುದರಿ0ದ ಎಲುಬು ಮತ್ತು ಹಲ್ಲುಗಳನ್ನು ಗಟ್ಟಿಗೊಳಿಸುವುದರೊಂದಿಗೆ ಮಕ್ಕಳ ಮತ್ತು ಮಹಿಳೆಯರ ಆರೋಗ್ಯಕ್ಕೆ ವಿಶೇಷವಾಗಿ ಪ್ರಯೋಜನಕರವಾಗುತ್ತದೆ ಎಂದು ಹೇಳಿದರು. ಸಜ್ಜೆ ಮತ್ತು ಸಾಮೆ ಹೆಚ್ಚಿನ ಕಬ್ಬಿಣದಂಶ ಹೊಂದಿರುವುದರಿ0ದ ರಕ್ತಹೀನತೆ ತಡೆಗಟ್ಟಲು ಸಹಕಾರಿಯಾಗಿ. ಮೆಗ್ನೀಶಿಯಂ, ಬಿ-ಸಂಪುಟದ ವಿಟಮಿನ್‌ಗಳು ಹಾಗೂ ಕೆಲವೆಡೆ ಪ್ರೋಟೀನ್ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ರೋಗನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯಮಾಡುತ್ತವೆ. ಸಿರಿಧಾನ್ಯಗಳ ಕೃಷಿಗೆ ಹೆಚ್ಚಿನ ನೀರಿನ ಅಗತ್ಯವಿಲ್ಲ. ಒಣಬೇಸಾಯದಲ್ಲಿ ಬೆಳೆಯಲು…

Read More

ತುಮಕೂರು: ಈಗಿನ ಮಕ್ಕಳಿಗೆ ಮೊಬೈಲ್ ಬಳಕೆಗೆ ದಾಸರಾಗದೆ ಓದುವ ಹವ್ಯಾಸ ಬೆಳೆಸುವುದು ಅಗತ್ಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮಂಗಳವಾರ ಗಾಜಿನ ಮನೆಯ ಸಭಾಂಗಣದಲ್ಲಿ 17 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸನ್ಮಾನ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಅತಿಯಾದ ಮೊಬೈಲ್ ಬಳಕೆಯಿಂದ ಕೇವಲ ತಾಂತ್ರಿಕ ಜ್ಞಾನ ಬೆಳಸಿಕೊಳ್ಳಬಹುದೇ ಹೊರತು ಮಾನವೀಯ ಸಂಬAಧ ಹಾಗೂ ನೈತಿಕ ಮೌಲ್ಯಗಳಿಂದ ದೂರವಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಹಿಂದಿನ ದಿನಗಳಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಅಕ್ಕಪಕ್ಕದವರನ್ನು ಪರಿಚಯ ಮಾಡಿಕೊಂಡು ಅನುಭವಗಳನ್ನು ಹಂಚಿಕೊಳ್ಳುವ ಸಂಸ್ಕೃತಿ ಇತ್ತು. ಆದರೆ ಇಂದು ಮೊಬೈಲ್ ಬಳಕೆಯಿಂದಾಗಿ ಮನುಷ್ಯ ಮನುಷ್ಯರ ನಡುವಿನ ಬಾಂಧವ್ಯ ಕ್ಷೀಣಿಸುತ್ತಿದೆ. ಅತಿಯಾದ ಮೊಬೈಲ್ ಬಳಕೆ ಯುವ ಪೀಳಿಗೆಯಲ್ಲಿ ಮಾನಸಿಕ ಮತ್ತು ಸಾಮಾಜಿಕ ಅನಾಹುತಗಳನ್ನು ಸೃಷ್ಟಿಸುತ್ತಿದೆ ಎಂದರು. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಓದು ಅನಿವಾರ್ಯ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸದಿದ್ದರೆ ಭಾಷೆಯ ಉಳಿವು ಕಷ್ಟ…

Read More

ತುರುವೇಕೆರೆ: ತಾಲೂಕಿನ ತಂಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಿಪುರ (ಕರೆಕಲ್ ಬಾರೆ) ಗ್ರಾಮದ ಜನರು ಕುಡಿಯುವ ನೀರಿಗಾಗಿ ಆಗ್ರಹಿಸಿ ಪಂಚಾಯಿತಿ ಮುಂಬಾಗ ಖಾಲಿ ಕೊಡ ಹಿಡಿದು ಪ್ರತಿಭಟನೆ ನೆಡೆಸಿದರು. ಗ್ರಾಮ ಮುಖಂಡ ಓಂಕಾರ ಚಾರ್ ಮಾತನಾಡಿ ನಮ್ಮ ಗ್ರಾಮದಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಮನೆಗಳಿದ್ದು ಸುಮಾರು ೧೫೦ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದೇವೆ. ನಮಗೆ ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಪ್ರತಿದಿನ ಜನರು ನೀರಿಗಾಗಿ ಪರಿಪಾಟಲು ಪಢುವಂತಾಗಿದೆ. ದೂರದ ರೈತರ ತೋಟಗಳ ಬೋರ್ ವೆಲ್ ಗಳಲ್ಲಿ ಬಿಟ್ಟ ಸಂದರ್ಭದಲ್ಲಿ ನೀರಿಗಾಗಿ ಕಾಯುವಂತಹ ಪರಿಸ್ಥಿತಿ ತಲೆದೋರಿದೆ. ನಮ್ಮ ಗ್ರಾಮದಲ್ಲಿನ ಬಹುತೇಖ ಜನರು ಕೂಲಿ ಕಾರ್ಮಿಕರಾಗಿದ್ದು ಪ್ರತಿದಿನ ಕೆಲಸಕ್ಕೆ ತೆರಳವುದರಿಂದ ನೀರು ಹಿಡಿಯಲು ರಾತ್ರಿ ಸಮಯದಲ್ಲಿ ತೋಟಕ್ಕೆ ತೆರಳಬೇಕಾಗಿದೆ. ಈ ಮೊದಲು ಬಹುಗ್ರಾಮ ಕುಡಿಯುವ ಯೋಜನೆಯ ಟ್ಯಾಂಕರ್ ನಿಂದ ನಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು ಆದರೆ ಅದು ಬಂದ್ ಹಾಗಿದೆ. ಗ್ರಾಮದ ಎರಡು ಸಿಸ್ಟನ್ ಗಳಿಗೆ ಪಂಚಾಯಿತಿ ಬೋರ್ ವೆಲ್ ಮೂಲಕ…

Read More

ತುಮಕೂರು: ನಗರದ ಬಿ.ಜಿ.ಎಸ್. ವೃತ್ತ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಭೀಮ್ ಆರ್ಮಿ ಸಂಘಟನೆಯ ವತಿಯಿಂದ ವಿವಿಧ ಬೇಡಿಕೆಗಳು ಹಾಗೂ ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಜಾಥಾ ನಡೆಸಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಯ್ಯನಪಾಳ್ಯ ಶ್ರೀನಿವಾಸ್ ರವರು ಮಾತನಾಡಿ ತುಮಕೂರು ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು ಹಾಗೂ ಆರೆ ಸರ್ಕಾರಿ, ಹೊರ ಗುತ್ತಿಗೆ ಮತ್ತು ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ಕಾರ್ಮಿಕ ಹಾಗೂ ಅಧಿಕಾರಿ ವರ್ಗದ ಹಾಗೂ ಸಿಬ್ಬಂದಿಗಳ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳ ನಡೆಯುತ್ತಿದ್ದು ಈ ಕುರಿತು ಅತೀ ಶೀಘ್ರವಾಗಿ ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಮುಂದುವರೆದು ಕರ್ನಾಟಕ ಪಬ್ಲಿಕ್ ಎಂಪ್ರೆಸ್ ಶಾಲೆ, ತುಮಕೂರು ಇಲ್ಲಿ ಉಪಪ್ರಾಂಶುಪಾಲರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಶ್ರೀಮತಿ ಮಂಜುಳ ಎನ್. ಇವರನ್ನು ಸೇವೆಯಿಂದ ಅಮಾನತು ಮಾಡಬೇಕಾಗಿದೆ ಏಕೆಂದರೆ ಈಕೆ ಇದೆ…

Read More

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಹೊರ ರಾಜ್ಯ ಅಧ್ಯಯನ ಪ್ರವಾಸಕ್ಕೆ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಿದರು. ನಗರದ ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ ತುಮಕೂರು ವಿಭಾಗದ ೫೦ ಜನ ವಿವಿಧ ವೃಂದದ ನೌಕರರು ಮಹಾರಾಷ್ಟç, ಪಂಜಾಬ್ ಸೇರಿದಂತೆ ೧೪ ರಾಜ್ಯಗಳ ೧೫ ದಿನಗಳ ಆಧ್ಯಯನ ಪ್ರವಾಸ ಕೈಗೊಂಡಿದ್ದು,ತುಮಕೂರು ನಗರ ಶಾಸಕ ಜೋತಿ ಗಣೇಶ್,ಜಿ.ಪಂ.ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ನಿಯಂತ್ರಣಾಧಿ ಕಾರಿ ಚಂದ್ರಶೇಖರ್.ಎಸ್.ಅವರುಗಳೊAದಿಗೆ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹಸಿರು ನಿಶಾನೆ ತೋರಿಸಿದರು. ಈ ವೇಳೆ ಮಾತನಾಡಿದ ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್,ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತುಮಕೂರು ವಿಭಾ ಗದ ನೌಕರರು ಇಂದು ಅಧ್ಯಯನ ಪ್ರವಾಸಕ್ಕಾಗಿ ಪಂಜಾಬ್, ದೆಹಲಿ ಸೇರಿದಂತೆ ೧೪ ರಾಜ್ಯಗಳಿಗೆ ಹೋಗುತ್ತಿದ್ದು,ಅಲ್ಲಿನ ಸಾರಿಗೆ ವ್ಯವಸ್ಥೆಯ ನಿರ್ವಹಣೆ,ಮೂಲಭೂತ ಸೌಕರ್ಯ,ರೂಟ್‌ಗಳ ನಿರ್ವಹಣೆ,ನೌಕರರಿಗೆ ದೊರೆಯುತ್ತಿರುವ ಸೌಲಭ್ಯ, ಪ್ರಯಾಣಿಕರ ರಕ್ಷಣೆ ಮತ್ತು ಕಾರ್ಯಾಚರಣೆಗೆ ವಿಧಿ,ವಿಧಾನಗಳನ್ನು ತಿಳಿಯಲು ಹಾಗು ಹತ್ತಿರದ ಪ್ರವಾಸಿ ತಾಣಗಳಿಗೆ ಭೇಟಿ…

Read More

ತುಮಕೂರು: ಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗಿದ್ದು, ವೆಂಕ ಟೇಶ್ವರ ದೇವಾಲಯಗಳಲ್ಲಿ ಗೋವಿಂದ ನಾಮಸ್ಮರಣೆ ಮೊಳಗಿದವು. ನಗರದ ವಿವಿಧ ಬಡಾವಣೆಗಳಲ್ಲಿರುವ ಹಾಗೂ ಜಿಲ್ಲೆಯ ವಿವಿಧೆಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾ ಲಯ, ಸಿರಾಗೇಟ್ ಸಮೀಪವಿರುವ ಶ್ರೀ ವೆಂಕಟೇಶ್ವಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರ ದಕ್ಷಿಣದ ಕೆ.ಹೆಚ್.ಬಿ. ಕಾಲೋನಿಯಲ್ಲಿರುವ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾ ಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರ ಪಶ್ಚಿಮದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷಿ÷್ಮ ದೇವಾಲಯ, ಸೋಮೇಶ್ವರ ಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷಿ÷್ಮÃವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲ್ಲೂಕಿನ ಮುದುಗೆರೆ ಸಮೀಪದ ಶ್ರೀ ಕೋಡಿ ರಂಗನಾಥಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯಸ್ವಾಮಿ ದೇವಾಲಯ, ತಿರುಮಲ…

Read More

ತುಮಕೂರು: ಜಿಲ್ಲಾಡಳಿತ ಮತ್ತು ಕುಣಿಗಲ್ ತಾಲ್ಲೂಕು ಆಡಳಿತದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವತಿಯಿಂದ ಸೋಮವಾರ ಕುಣಿಗಲ್ ತಾಲ್ಲೂಕು, ಕೊತ್ತಗೆರೆ ಹೋಬಳಿ, ಭಕ್ತರಹಳ್ಳಿ ಗ್ರಾಮದಲ್ಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಲ್. ರಾಮಣ್ಣ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲೀಲಾವತಿ ಹೊನ್ನೇಗೌಡ ರವರ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ನಡೆಸಲಾಯಿತು. ಜಂಟಿನಿರ್ದೇಶಕರು, ಆಹಾರ ಇಲಾಖೆ ಮತ್ತು ಮಾನ್ಯ ತಹಶೀಲ್ದಾರ್ ಕುಣಿಗಲ್ ತಾಲ್ಲೂಕುರವರುಗಳ ಅನುಪಸ್ಥಿತಿಯಲ್ಲಿ ಸದರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಹಾರ ಶಿರಸ್ತೇದಾರರಾದ ಶ್ರೀಹರ್ಷ ಬಿ.ಎಸ್. ರವರು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಜಿಲ್ಲೆಯ ಪ್ರತಿ ತಾಲ್ಲೂಕಿನ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಡಿತರ ಚೀಟಿದಾರರು ಜಿಲ್ಲಾ/ ತಾಲ್ಲೂಕು ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಅನರ್ಹರು ಪಿಹೆಚ್‌ಹೆಚ್(ಬಿಪಿಎಲ್) ಪಡಿತರ ಚೀಟಿ ಹೊಂದಿದ್ದಲ್ಲಿ ತಾವಾಗಿಯೇ ಎನ್‌ಪಿಹೆಚ್‌ಹೆಚ್ (ಎಪಿಎಲ್) ಪಡಿತರ…

Read More

ತುರುವೇಕೆರೆ: ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎರಡನೇ ಚಿರತೆಯನ್ನು ಸೆರೆಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸೆರೆಸಿಕ್ಕ ಚಿರತೆ ಸುಮಾರು ಐದು ವರ್ಷದ ಹೆಣ್ಣು ಚಿರತೆ ಆಗಿದ್ದು, ಇದರಿಂದಾಗಿ ಕೇವಲ ಎರಡು ದಿನಗಳಲ್ಲಿ ಎರಡು ಚಿರತೆಗಳು ಸೆರೆಸಿಕ್ಕಂ ತಾಗಿದೆ. ಈಗಾಗಲೇ ಸೆರೆಹಿಡಿದಿರುವ ಎರಡೂ ಚಿರತೆ ಗಳನ್ನು ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಸುರಕ್ಷಿತವಾಗಿ ಕಾಡು ಪ್ರದೇಶಕ್ಕೆ ಬಿಡ ಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ದನ ಮೇಯಿಸಲು ತೆರಳಿದ್ದ ಸುಜಾತ ಎಂಬ ಮಹಿಳೆಯ ಮೇಲೆ ಎರಗಿದ ಚಿರತೆ ಕೊಂದು ಹಾಕಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿದೆ.

Read More