ಕೊರಟಗೆರೆ: ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವರ್ಷದ ವಾಷಿಕೋತ್ಸವ ಅಂಗವಾಗಿ ಜೂ.೮ರಂದು ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹಗಳು. ಜನಜಾಗೃತಿ ಧರ್ಮ ಸಮಾರಂಭ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ಶ್ರೀಬಸವೇಶ್ವರ ದೇವಾಲಯದಲ್ಲಿ ಸಿದ್ದರಬೆಟ್ಟ ಶ್ರೀಮಠದಿಂದ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ವರ್ಷವು ಸಹ ಮಠದ ವಾರ್ಷಿಕೋತ್ಸವದ ಅಂಗವಾಗಿ ಜೂ.೬ರಿಂದ ೮ರವರೆಗೆ ಮೂರು ದಿನಗಳ ಕಾಲ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ನಡೆಯಲಿವೆ. ಮೊದಲ ದಿನ(ಜೂ.೬) ಗಂಗಾ ಪೂಜೆ, ಗಣಪತಿಪೂಜೆ, ಪುಣ್ಯಾಹ ನಾಂದಿ, ಪಂಚ ಕಳಸ ಸ್ಥಾಪನೆ, ನವಗ್ರಹ ಮತ್ತು ಶ್ರೀರುದ್ರ ಹೋಮ, ಎರಡನೇ ದಿನ (ಜೂನ್.೭) ರಾಜ್ಯದ ಹಲವು ಶ್ರೀಮಠದ ದಿವ್ಯಸಾನಿದ್ಯದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಮೂರನೇ ದಿನ(ಜೂ.೮) ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀಕ್ಷೇತ್ರನಾಥ ಸಿದ್ದೇಶ್ವರ ಸ್ವಾಮಿ, ಮಹಾಗಣಪತಿ, ಶ್ರೀಜಗದ್ಗುರು ರೇಣುಕಾಚಾರ್ಯರ…
Author: News Desk Benkiyabale
ತುರುವೇಕೆರೆ: ೨೦೨೫-೨೬ನೇ ಸಾಲಿನ ತಾಲ್ಲೂಕಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಪಟ್ಟಣದ ಎನ್.ಎಚ್.ಪಿ.ಎಸ್ ಶಾಲೆಯಲ್ಲಿನ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಹೂಗುಚ್ಚ ನೀಡುವ ಮೂಲಕ ಶುಕ್ರವಾರ ಚಾಲನೆ ನೀಡಿದರು. ಮಕ್ಕಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಇಲ್ಲಿನ ಮುಖ್ಯಶಿಕ್ಷಕರು ಎಲ್.ಕೆ.ಜಿ ಮತ್ತು ಯು.ಕೆ.ಜಿಯನ್ನು ಎಸ್.ಡಿ.ಎಂಸಿ ಸದಸ್ಯರು, ಇಲಾಖೆಯ ಸಹಮತದಲ್ಲಿ ಪ್ರಾರಂಭಿಸಿದ್ದಾರೆ. ಇದರ ಜೊತೆಗೆ ೬ ಮತ್ತು ೭ ತರಗತಿಗಳಿಗೂ ಆಂಗ್ಲಮಾಧ್ಯಮ ನೀಡ ಬೇಕೆಂಬ ಮನವಿಯೂ ಸಹ ಬಂದಿದೆ. ಅದನ್ನೂ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಪಟ್ಟಣ ಪಂಚಾಯಿತಿಯಿAದ ಶೌಚಾಲಯವನ್ನು ನಿರ್ಮಿಸಿದ್ದಾರೆ. ವಿವೇಕ ಯೋಜನೆಯಡಿ ನೂತನ ಕೊಠಡಿಯನ್ನು ಸಹ ನಿರ್ಮಾಣ ಮಾಡಿಕೊಡಲಾಗಿದೆ ಎಂದರು. ಶಿಕ್ಷಕರು, ಪೋಷಕರು ಮತ್ತು ಅಧಿಕಾರಿಗಳ ಪರಿಶ್ರಮದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲೇ ತುರುವೇಕೆರೆ ಸತತ ಎರಡನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಈಗಾಗಲೇ ತಾಲ್ಲೂಕಿನ ಪ್ರಾಥಮಿಕ, ಪ್ರೌಢ ಶಾಲೆ, ಅನುಧಾನಿತ ಮತ್ತು ಖಾಸಗಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲಾಗಿದ್ದು. ದಾಖಲಾತಿ ಹಾಜರಾತಿ ಹೆಚ್ಚಿಸುವಂತೆ ಕ್ರಮ ವಹಿಸಲಾಗಿದೆ. ಈ ಬಾರಿ ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ…
ತುಮಕೂರು: ಚಿನ್ನದ ಪದಕ ಪಡೆಯುವುದು ಮುಖ್ಯವಾದದ್ದಲ್ಲ, ಚಿನ್ನದಂತ ಗುಣ ಇರಬೇಕು. ಜೀವನದಲ್ಲಿ ಪದವಿ,ಅಂಕ ಪಡೆಯುವುದು ಶಿಕ್ಷಣವಲ್ಲಾ ನಿಜವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ಶಿಕ್ಷಣ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ನಿರ್ದೇಶಕರು, ಖ್ಯಾತ ವಾಗ್ಮಿಗಳು ಹಾಗೂ ಸಾಹಿತಿಗಳಾದ ಡಾ. ಕೆ.ಪಿ. ಪುತ್ತೂರಾಯ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ “ಶಿಕ್ಷಣ- ಯುವಜನತೆ ಮತ್ತು ರಾಷ್ಟ್ರ ನಿರ್ಮಾಣ”ವಿಷಯದ ಕುರಿತಾದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಶಿಕ್ಷಣ ವ್ಯವಸ್ಥೆಯಲ್ಲಿ ಪಾಠ ಮುಗಿದ ನಂತರ ಪರೀಕ್ಷೆ ನಡೆಸಲಾಗುತ್ತದೆ ಆದರೆ ನಿಜ ಜೀವನದಲ್ಲಿ ಪರೀಕ್ಷೆಯಾದ ಮೇಲೆ ಪಾಠ ಕಲಿಯುತ್ತಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಧಾರಿತ ಶಿಕ್ಷಣ ಮಾತ್ರ ದೊರೆಯುತ್ತಿದ್ದು ಮೌಲ್ಯಾಧಾರಿತ ಶಿಕ್ಷಣವಿಲ್ಲದಂತಾಗಿದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಯಾವುದೇ ತರಬೇತಿಯ ಅವಶ್ಯಕತೆ ಇಲ್ಲ, ಇಲ್ಲಿ ಯಾರು ನಿಷ್ಪ್ರಯೋಜಕರಲ್ಲ, ಯಾರು ಪರಿಪೂರ್ಣರಲ್ಲ ಎನ್ನುವ ಎರಡು ಸೂತ್ರಗಳು ತಿಳಿದಿದ್ದರೆ ಸಾಕು. ಕೊಠಡಿಯಲ್ಲಿ ಕುಳಿತು ಕಲಿಯುವ ಶಿಕ್ಷಣದ ಜೊತೆಗೆ ಆರೋಗ್ಯ ಶಿಕ್ಷಣ, ಆಧ್ಯಾತ್ಮ…
ತಿಪಟೂರು: ಹವಾಮಾನ ವೈಪರೀತ್ಯದಿಂದ ಆಗಿರುವ ತೆಂಗು ಬೆಳೆ ನಷ್ಟವನ್ನು ಸರ್ಕಾರಗಳು ತುಂಬಿಕೊಡಬೇಕೆAದು ಹಾಗೂ “ಹವಮಾನ ಆಧಾರಿತ ಬೆಳೆ ವಿಮೆಯನ್ನು ತೆಂಗು ಬೆಳೆಗೂ ವಿಸ್ತರಿಸಬೇಕೆಂದು ಹಾಗೂ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿಯನ್ನು ತಿಪಟೂರಿನಲ್ಲಿ ತೆರೆಯಬೇಕೆಂದು ಕೋರಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಿಗೆ ರೈತರು ಮನವಿ ಸಲ್ಲಿಸಿದರು. ಮನವಿಯಲ್ಲಿ ಪ್ರತಿ ವರ್ಷ ತಾಪಮಾನ ಜಾಗತಿಕವಾಗಿ ಸಾಕಷ್ಟು ಹೆಚ್ಚಳವಾಗಿದ್ದು, ೧೯೮೮ ರ ರಾಷ್ಟ್ರೀಯ ಅರಣ್ಯ ನೀತಿಯು ಬೌಗೋಳಿಕ ಪ್ರದೇಶದ ೩೩ % ರಷ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಕರ್ನಾಟಕ ಈಗ ಕೇವಲ ಶೇಕಡ ೨೦% ಅರಣ್ಯ ಪ್ರದೇಶವನ್ನು ಹೊಂದಿದೆ ನಾವು ಮುಂದಿನ ದಿನಗಳಲ್ಲಿ ೩೩ % ಗುರಿಯನ್ನು ಸಾಧಿಸುತ್ತೇವೆ ಎಂದು ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ೨೦೨೩ರ ಸೆಪ್ಟಂಬರ್೩೦ ರಲ್ಲಿ ಹೇಳಿಕೆ ನೀಡಿದ್ದರು. ಇವರ ಹೇಳಿಕೆಯ ಆಧಾರವನ್ನು ಇಟ್ಟುಕೊಂಡು ನೋಡಿದರೆ ಹವಮಾನ ವೈಪರೀತ್ಯದಿಂದ ಶೇಕಡ ೩೩ ರಷ್ಟು ಅರಣ್ಯ ಪ್ರದೇಶದ ಗುರಿಯನ್ನು ಸಾಧಿಸುವುದರ ಬದಲಾಗಿ ಅದು…
ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲ್ಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಾಲ್ಲೂಕಿನ ಸಂಕಾಪುರ, ಡಿ.ರಾಂಪುರ ಗ್ರಾಮದ ಬಳಿ ಕೆನಾಲ್ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಸ್ಥಳದ ಸುತ್ತಮುತ್ತಲಿನ ೧೦ ಕಿಲೊ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಆದೇಶ ಹೊರಡಿಸಿದ್ದಾರೆ. ಮೇ ೩೧ರ ಬೆಳಿಗ್ಗೆ ೬ ಗಂಟೆಯಿAದ ಜೂನ್ ೧ರ ಬೆಳಿಗ್ಗೆ ೬ ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಬೃಹತ್ ಹೋರಾಟಕ್ಕೆ ಕರೆ ನೀಡಿತ್ತು. ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ೧೦ ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಬ್ಬಿ ತಾಲೂಕಿನ ಚೇಳೂರಿನ ಫಾರ್ಮ್ ಹೌಸ ವೊಂದ ರಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.…
ತುಮಕೂರು: ನಗರದ ಸಾಹೇ ವಿಶ್ವವಿದ್ಯಾಲಯದ ಶ್ರೀ ಸಿದ್ಧಾ ರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿನ ಮೆಕ್ಯಾನಿಕಲ್, ಕಂಪ್ಯೂಟರ್, ಮಾಹಿತಿ ವಿಜ್ಞಾನ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿAಗ್ನ ನಾಲ್ಕು ವಿಭಾಗಗಳಿಗೆ ಇತ್ತೀಚೆಗೆ ಎನ್ಬಿಎ (ರಾಷ್ಟಿçÃಯ ಮಾನ್ಯತಾ ಮಂಡಳಿ) ಭೇಟಿ ನೀಡಿ ೨೦೨೭-೨೦೨೮ನೇ ಸಾಲಿನವರೆಗೆ ಎನ್ಬಿಎ ಮಾನ್ಯತೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾಹೇ ವಿವಿ ಕುಲಾಧಿಪತಿ ಡಾ.ಜಿ.ಪರಮೇಶ್ವರ ಅವರು ನಾಲ್ಕು ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಭೋದಕ ಮತ್ತು ಭೋದಕೇತರರಿಗೆ ಅಭಿನಂದನೆ ಸಲ್ಲಿಸಿದರು. ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಎನ್ಬಿಎ ಇಂಜಿನಿಯರಿAಗ್ ಕಾಲೇಜಿನ ನಾಲ್ಕು ವಿಭಾಗಗಳಿಗೆ ಮಾನ್ಯತೆ ನೀಡಿದೆ, ಪ್ರಾಧ್ಯಾಪಕರು ಮತ್ತು ಉಪನ್ಯಾಸಕರು ಹೆಚ್ಚು ಸಂಶೋ ಧನೆಗೆ ಒತ್ತು ನೀಡಬೇಕು, ಮುಂದಿನ ಮೂರು ವರ್ಷಗಳಿಗೆ ಬೇಕಿರುವ ಮಾನ್ಯತೆಗೆ ಎಲ್ಲಾ ಅರ್ಹ ಮಾಹಿತಿಯನ್ನು ಈಗಿನಿಂ ದಲೇ ದಾಖಲೆ ಮಾಡಬೇಕು, ಹಾಗೂ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡಬೇಕೆಂದು ಸಲಹೆ ನೀಡಿದರು. ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಮಟ್ಟದಲ್ಲಿ ಸಂಶೋಧನಾ ಲೇಖನಗಳು, ಕಾರ್ಯಾಗಾರಗಳು, ಸಮ್ಮೇಳನಗಳಿಗೆ ಉಪನ್ಯಾ ಸಕರು ಭಾಗವಹಿಸಬೇಕು. ಇತ್ತೀಚಿನ ತಾಂತ್ರಿಕ ಕೌಶಲ್ಯ ಪ್ರವೃತ್ತಿ…
ಹುಳಿಯಾರು: ಹುಳಿಯಾರು ಕೆರೆಯ ಬಫರ್ ಝೋನ್ ಗುರುತಿಸುವ ಕಾರ್ಯ ನಡೆದಿದ್ದು ಕೆರೆ ಗಡಿಯಿಂದ ಒಟ್ಟು ೩೦ ಮೀಟರ್ ಬಫರ್ ಝೋನ್ ಎಂದು ಗುರುತಿಸಲಾಗಿದೆ. ಇದರಿಂದ ಕೆರೆ ದಡದಲ್ಲಿರುವ ನಿವಾಸಿಗಳಿಗೆ ಆತಂಕ ಶುರುವಾಗಿದ್ದು ಅಲೆಮಾರಿಗಳ ಕೋಟದಲ್ಲಿ ನಿವೇಶನ ಪಡೆದಿರುವವರು ಮನೆ ಕಟ್ಟಿಕೊಳ್ಳುವ ತವಕ ಹಾಗೂ ನಿವೇಶನವೇ ಸಿಗದವರು ನಿವೇಶನಕ್ಕಾಗಿ ಹೋರಾಡುವ ಅನಿವಾರ್ಯತೆ ಶುರುವಾಗಿದೆ. ಹುಳಿಯಾರು ಕೆರೆ ಅಂಗಳದಲ್ಲಿ ಮುಳುಗಡೆ ಪ್ರದೇಶದಲ್ಲಿನ ನಿವಾಸಿಗಳನ್ನು ತೆರವುಗೊಳಿಸಿ ಪುನರ್ವಸತಿ ಕಲ್ಪಿಸುವ ಕಾರ್ಯ ಕಳೆದ ಹಲವಾರು ವರ್ಷಗಳಿಂದಲೂ ನಡೆಯುತ್ತಲೇ ಬಂದಿದ್ದು ಈ ಮುಂಚೆ ಅಲೆಮಾರಿ ಜನಾಂಗದವರಿಗೆ ಗೌಡಗೆರೆ ಸರ್ವೇ ನಂಬರ್ನಲ್ಲಿ ೨.೨೮ ಎಕರೆ ಪ್ರದೇಶದಲ್ಲಿ ೩೬ ಮಂದಿಗೆ ನಿವೇಶನ ಕಲ್ಪಿಸಲಾಗಿದ್ದು ಇದೀಗ ಕಂಪನಹಳ್ಳಿ ಸರ್ವೇ ನಂಬರ್ನಲ್ಲಿ ೨ ಎಕರೆ ಜಾಗದಲ್ಲಿ ೧೬ ಮಂದಿಗೆ ನಿವೇಶನ ನೀಡುವ ಕಾರ್ಯಕ್ಕೆ ತಾಲೂಕು ಆಡಳಿತ ಮುಂದಾಗಿದೆ. ಆದರೂ ಕೆರೆ ಅಂಗಳದ ಎಲ್ಲಾ ನಿವಾಸಿಗಳ ತೆರುವುಗೊಳಿಸಿ ಪುನರ್ವಸತಿ ಕಲ್ಪಿಸುವ ಕಾರ್ಯ ಪೂರ್ಣಗೊಂಡಿಲ್ಲ. ಮಳೆಗಾಲ ಆರಂಭವಾದಾಗಲೆಲ್ಲ ಅಲ್ಲಿನ ನಿವಾಸಿಗಳಿಗೆ ಮನೆ ಜಲಾವೃತಗೊಳ್ಳುವ ಭಯದಿಂದ ಮುಕ್ತ ಮಾಡಲು…
ತುರುವೇಕೆರೆ: ವೀರಶೈವ ಲಿಂಗಾಯತ ಸಮಾಜ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಮನ ಮಾಡುತ್ತಿದ್ದಾರೆ ವೀರಶೈವ ಲಿಂಗಾಯಿತರು ನಿಮ್ಮ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ, ಮಹಿಳಾ ಯುವ ಘಟಕ ಹಾಗೂ ವೀರಶೈವ ಲಿಂಗಾಯಿತ ಸಂಘ ಸಂಸ್ಥೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಸವಜಯಂತಿ ಹಾಗೂ ಸಾಮೂಹಿಕ ಇಷ್ಟಲಿಂಗ ಪೂಜೆ (ವೀರಯೋದರಿಗೆ ಬಲ ನೀಡಲು) ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ೨೦೧೧ರ ಜನಗಣತಿ ಯ ಪ್ರಕಾರ ಸುಮಾರು ೯೩ ಲಕ್ಷ ಜನಸಂಖ್ಯೆ ಹೊಂದಿ ರಾಜ್ಯದ ದೊಡ್ಡ ಸಮಾಜ ವಾಗಿದ್ದ ವೀರಶೈವ ಲಿಂಗಾಯಿತರು ಸಿದ್ದರಾಮಯ್ಯರ ಜಾತಿಗಣತಿಯಲ್ಲಿ ೭೫ ಲಕ್ಷಕ್ಕೆ ಇಳಿಸಿದ್ದಾರೆ. ದೊಡ್ಡ ಸಮಾಜಗಳಲ್ಲಿ ಸಣ್ಣ ಉಪ ಪಂಗಡಗಳನ್ನು ಎತ್ತಿ ಕಟ್ಟಿ ಹೊಡೆದು ಹಾಕುವ ಹುನ್ನಾರ ಮಾಡುತ್ತಿದ್ದಾರೆ. ಜಾತಿ ಆದಾರದಲ್ಲಿ ಬಜೆಟ್ ಮಂಡಿಸಲು ಸಿದ್ದತೆ ದೊಡ್ಡ ಜಾತಿಗಳಿಗೆ ಬಹಳ ಪೆಟ್ಟು ಬೀಳುತ್ತದೆ ಎಂದು ಎಚ್ಚರಿಸಿದರು. ಬಸವಣ್ಣನವರು ಇನ್ನು ೧೦…
ಕೊರಟಗೆರೆ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಕರೆಗೆ ಇಲ್ಲಿನ ಪ.ಪಂ ಪೌರ ನೌಕರರು ಕರ್ತವ್ಯಕ್ಕೆ ಗೈರಾಗಿ ದಿನನಿತ್ಯ ಕೆಲಸ ವನ್ನು ಮೂರನೇ ದಿನದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಸದಸ್ಯರು, ಅಧಿಕಾರಿಗಳು ಮತ್ತು ತಾಲ್ಲೂಕು ಕಾರ್ಯ ನಿರತ ಪರ್ತಕರ್ತರ ಸಂಘ ಬೆಂಬಲ ಸೂಚಿಸಿ ಬೇಡಿಕೆ ಈಡೇರಿಕೆಗೆ ಸರ್ಕಾ ರವನ್ನು ಒತ್ತಾಯ ಮಾಡಿದರು. ಪ.ಪಂ ಅಧ್ಯಕ್ಷೆ ಅನಿತಾ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಾತನಾಡಿ, ಪೌರ ಕಾರ್ಮಿಕರು ಮತ್ತು ನೀರು ಸರಬರಾಜು ನೌಕರರ ಕಠಿಣ ಪರಶ್ರಮವನ್ನು ಸರ್ಕಾರ ಗಮನಹರಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಇವರುಗಳ ಪಾತ್ರ ಅತಿಮುಖ್ಯವಾಗಿದೆ. ಆದ್ದರಿಂದ ಸರ್ಕಾರ ಮಲತಾಯಿ ದೋರಣೆ ಮಾಡದೆ ಸರ್ಕಾರಿ ನೌಕರರ ಸೌಲಭ್ಯಗಳನ್ನು ಪೌರ ನೌಕರರಿಗೂ ಸಹ ನೀಡಿ ಸೇವಾ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದರು. ಪ.ಪಂ ಮುಖ್ಯಾಧಿಕಾರಿ ಉಮೇಶ್ ಕೆ.ಎಸ್ ಮಾತನಾಡಿ, ಪೌರ ನೌಕರರ ಬೇಡಿಕೆಗಳು ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯ ಸಮ್ಮತವಾಗಿದೆ. ಸರ್ಕಾರಿ ನೌಕರರಂತೆ ಮುನ್ಸಿಪಾಲ್ ಪೌರ ನೌಕರರನ್ನು…
ಕೊರಟಗೆರೆ: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ಗೃಹ ಮತ್ತು ಸಹಕಾರ ಸಚಿವರ ವಿರೋಧ ಕೂಡ ಇದೆ. ಆದರೆ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತದೆ ಮೌನ ವಹಿಸಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯ ೭ ತಾಲ್ಲೂಕಿನ ಜನತೆಯ ಕುಡಿಯುವ ನೀರಿಗೆ ಮರಣ ಶಾಸನವಾಗಲಿದೆ ಎಂದು ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಕ್ರೋಶ ಹೊರಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾ ಟಕ ರಾಜ್ಯ ರೈತ ಸಂಘದಿAದ ಮತ್ತು ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿ, ಗುಬ್ಬಿ ತಾಲ್ಲೂಕಿನ ಸುಂಕಪುರದ ಸಮೀಪ ಅರ್ಚ ಕರ ಜಮೀನಿನ ಮೂಲಕ ಮಾಗಡಿ ತಾಲ್ಲೂಕಿಗೆ ಹೇಮಾವತಿ ನೀರು ಹರಿಸಲು ರೈತರ ವಿರೋಧದ ನಡುವೆ ಕಾಮಗಾರಿಯನ್ನು ರಾಜ್ಯ ಸರ್ಕಾರ ಶಿಪಾರಸ್ಸಿನಂತೆ ಜಿಲ್ಲಾಡಳಿತ ಮುಂದುವರೆಸಿದೆ. ಕಾಮಗಾರಿಗೂ ಮುನ್ನ ಭೂಸ್ವಾಧೀನ ಪ್ರಕ್ರಿಯೆ ಆಗದೆ, ನೋಟಿಸ್ ನೀಡದೇ, ಜಮೀನಿನ ರೈತನಿಗೆ ಪರಿಹಾರ ನೀಡದೇ ನಿಯಮವನ್ನು ಉಲ್ಲಂಘಿಸಿ ಕಾಮಗಾರಿ ಪ್ರಾರಂಭಿಸಿದ್ದಾರೆ ಎಂದು ಆರೋಪ ಮಾಡಿದರು.…