ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟದ ಅರಣ್ಯ ಇಲಾಖೆ ನರ್ಸರಿ ತಿರುವಿನಲ್ಲಿ ಭೀಕರ ಅಪಘಾತದಲ್ಲಿ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯವಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ತಾಲೂಕಿನ ಸಿದ್ದರ ಬೆಟ್ಟದಲ್ಲಿರುವ ಹಳೆಯ ಸ್ನೇಹಿತನನ್ನ ಮಾತನಾಡಿಸಿಕೊಂಡು ಬರುವಾಗ ಹೋಗಿ ವಾಪಾಸ್ ಬರುವಾಗ ನರ್ಸರಿ ಬಳಿ ಇರುವ ತಿರುವಿನಲ್ಲಿ ವಿದ್ಯಾರ್ಥಿಗಳು ದ್ವಿಚಕ್ರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರದ ತುಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಅಪಘಾತದಲ್ಲಿ ಚೇತನ್ (೧೭) ಸ್ಥಳದಲ್ಲೇ ಮೃತಪಟ್ಟಿದ್ದು, ಅಮರೀಶ್ (೧೭) ಹಾಗೂ ಯಶ್ವಂತ್ (೧೭) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ತೋವಿನಕೆರೆ ೧೦೮ ಆಂಬುಲೆನ್ಸ್ ಸಿಬ್ಬಂದಿ ಉಮಾದೇವಿ ಹಾಗೂ ಶಿವಕುಮಾರ್ ಅಪಘಾತವನ್ನು ಕಂಡು ಗಾಯಾಳುಗಳನ್ನು ತಕ್ಷಣ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬAಧ ಕೊರಟಗೆರೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ…
Author: News Desk Benkiyabale
ಕೊರಟಗೆರೆ: ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ನಿರುದ್ಯೋಗಿಗಳಿಗೆ ವರ್ಷಕ್ಕೆ ೧೨೫ ದಿನಗಳ ಕಾಲ ಸ್ಥಳೀಯವಾಗಿ ಅಕುಶಲ ಕೆಲಸ ನೀಡಲಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರಾದ ಎಂ.ಬಿ.ಗುರುಮೂರ್ತಿ ತಿಳಿಸಿದರು. ತಾಲೂಕಿನ ಅಕ್ಕಿರಾಂಪುರ ಗ್ರಾ.ಪಂ ಆವರಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆಯಡಿ ಕೂಲಿ ಆಧಾರಿತ ಕಾಮಗಾರಿಗಳ ಅಭಿಯಾನದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಜನತೆ ವಲಸೆ ಹೋಗಬಾರದು ಎನ್ನವ ಉದ್ದೇಶದಿಂದ ಸ್ಥಳೀಯವಾಗಿ ಉದ್ಯೋಗ ನೀಡುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಬಿ-ಜಿ ರಾಮ್ ಜಿ ಯೋಜನೆಯಡಿ ದಿನಕ್ಕೆ ೩೮೨ ರೂ.ಗಳ ಕೂಲಿ ಹಣ ನೀಡಲಾಗುವುದು. ಪ್ರತಿ ಕುಟುಂಬ ವರ್ಷಕ್ಕೆ ೧೨೫ ದಿನ ಕೂಲಿ ಕೆಲಸ ಮಾಡುವುದರಿಂದ ವರ್ಷಕ್ಕೆ ೪೭೭೫೦ ರೂ.ಗಳ ಆದಾಯವನ್ನು ಸ್ಥಳೀಯವಾಗಿಯೇ ಗಳಿಸಬಹುದು. ಅಲ್ಲದೆ ಕೂಲಿ ಆಧಾರಿತ ಹಾಗೂ ಕೃಷಿ, ತೋಟಗಾರಿಕೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆಯ ಜೀವನ…
ತುಮಕೂರು: ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ೭೫ ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಆರ್.ರಾಮಕೃಷ್ಣ ಹಾಗೂ ಕಾಂಗ್ರೆಸ್ ಮುಖಂಡರು ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು, ಹಂಪಲು ಹಾಗೂ ಬ್ರೆಡ್ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ಸವ್ಯಸಾಚಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಆಲೋಚನೆ ನಮಗಿತ್ತು. ಆದರೆ ಸ್ವತಃ ಡಾ.ಜಿ.ಪರಮೇಶ್ವರ್ ಅವರೇ ಬರದ ಹಿನ್ನೆಲೆಯಲ್ಲಿ ಈ ಬಾರಿ ಹುಟ್ಟು ಹಬ್ಬ ಆಚರಣೆ ಇಲ್ಲ ಸೂಚನೆ ನೀಡಿದ್ದರಿಂದ ಸರಳವಾಗಿ ಆಚರಿಸಲಾಗುತ್ತಿದೆ. ಡಾ.ಜಿ.ಪರಮೇಶ್ವರ್ ರಾಜಕಾರಣದಲ್ಲಿ ಅಜಾತ ಶತ್ರು ಆರು ಬಾರಿ ಶಾಸಕರಾಗಿ,ಮೂರು ಬಾರಿ ಗೃಹ ಸಚಿವರಾಗಿ ಎರಡು ಬಾರಿ ಉಪಮುಖ್ಯಮಂತ್ರಿ ಯಾಗಿ ಒಂದು ಕಪುö್ಪ ಚುಕ್ಕೆ ಇಲ್ಲದೆ, ಸ್ವಚ್ಚ ಮತ್ತು ಪಕ್ಷ ನಿಷ್ಠ ರಾಜಕಾರಣಿ, ಅವರಿಗೆ ಇನ್ನೂ ಹೆಚ್ಚಿನ ಜವಾಬ್ದಾರಿ ದೊರೆಯಲಿ ಎಂಬುದು ನನ್ನಂತಹ ಲಕ್ಷಾಂತರ ಅಭಿಮಾನಿಗಳ ಆಶಯವಾಗಿದೆ ಎಂದರು. ಡಾ.ಜಿ.ಪರಮೇಶ್ವರ್…
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೆರೆ ಕಟ್ಟೆಗಳು ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದು ಬೋರ್ ವೆಲ್ಗಳಲ್ಲಿ ಕುಸಿದಿದೆ. ಕೂಡಲೇ ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಹಾಗೂ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ (ಎನ್ಡಿಎ) ವತಿಯಿಂದ ಆ ೧೦ ರ ಸೋಮವಾರದಂದು ಹೇಮಾವತಿ ಕಛೇರಿ ಮುಂಭಾಗ ಅಹೋ ರಾತ್ರಿ ಧರಣಿ ಮಾಡಲಾಗುವುದು ಎಂದು ಜೆಡಿಎಸ್ ನ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬರಗಾಲ ತಾಂಡವಾಡುತ್ತಿದೆ. ರೈತರ ಆರ್ಥಿಕ ಬೆಳೆಗಳಾದ ತೆಂಗು ಮತ್ತು ಅಡಿಕೆ ಮರಗಳು ನೀರಿಲ್ಲದೇ ಸೊರಗಿವೆ. ಈ ಮಧ್ಯೆ ಜಿಲ್ಲೆಯ ರೈತರಿಗೆ ಆಶಾಕಿರಣವಾಗಿರುವ ಹೇಮಾವತಿ ನೀರನ್ನು ಕೂಡಲೇ ಕಾಲುವೆಗಳ ಮೂಲಕ ಎಲ್ಲಾ ಕೆರೆ ಕಟ್ಟೆಗಳಿಗೆ ಹರಿಸಬೇಕು. ಹೇಮಾವತಿ ಡ್ಯಾಂ ನಲ್ಲಿ ಈಗಾಗಲೇ ಸುಮಾರು ೨೯ ಟಿಎಂಸಿ ನೀರಿದೆ. ಈ ಹಿಂದೆ ೧೯…
ಪಾವಗಡ: ಸ್ಥಳಿಯ ಸಂಸ್ಥೆ ಗ್ರಾಪಂ ಮೀಸಲಾತಿ ಪ್ರಕಟಣೆಯಲ್ಲಿ ಚಿಕ್ಕಹಳ್ಳಿ ಗ್ರಾಪಂನ ದೊಡ್ಡಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಸಿದ್ದಾರೆ. ಬುಧವಾರ ದೊಡ್ಡಹಳ್ಳಿ ಗ್ರಾಮದ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪರಿಶಿಷ್ಟ ಪಂಗಡದ ಮುಖಂಡರು ಸುದ್ದಿಗೋಷ್ಠಿ ನಡೆಸಿ ರಾಷ್ಟಿçÃಯ ಬುಡಕಟ್ಟು ಬೇಡರ ಪಡೆಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಅಂಜಿನಾಯಕ ಮಾತನಾಡಿದ ಕಳೆದಾ ಬಾರಿ ನಮ್ಮ ಗ್ರಾಮದಲ್ಲಿ ಗ್ರಾಪಂ ಮೀಸಲಾತಿ ಪ್ರಕಟಣೆಯಾದಾಗ ೪ ಸ್ಥಾನಗಳಲ್ಲಿ ಪರಿಶಿಷ್ಠ ಜಾತಿಯಲ್ಲಿ ಒಂದು ಸ್ಥಾನ, ಪರಿಶಿಷ್ಟ ಪಂಗಡದಲ್ಲಿ ಒಂದು ಸ್ಥಾನ ಹಾಗೂ ಸಾಮಾನ್ಯ ವರ್ಗದಲ್ಲಿ ಎರಡು ಸ್ಥಾನ ಸೇರಿ ನಾಲ್ಕು ಸ್ಥಾನ ನೀಡಲಾಗಿತ್ತು ಆದರೆ ಇಂದು ಪ್ರಕಟಿಸಿರುವ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ಎರಡು ಸ್ಥಾನ ಹಾಗೂ ಸಾಮಾನ್ಯ ಕ್ಷೇತ್ರದಲ್ಲಿ ಎರಡು ಸ್ಥಾನಗಳಿಗೆ ಮೀಸಲಾತಿ ನೀಡಿ ಸುಮಾರು ೩೫೦ ರಿಂದ ೪೦೦ ಮತದಾರರಿರುವ ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಸ್ಥಾನಕ್ಕೆ ಕೂಡ ಮೀಸಲಾತಿ ನೀಡದಿರುವುದು ದುರಾದೃಷ್ಠಕರ, ಘೋಷಣೆಯಾಗಿರುವ ಮೀಸಲಾತಿ ಪರಿಷ್ಕರಣೆ ಮಾಡದಿದ್ದಲ್ಲಿ ಮುಂಬರುವ ಎಲ್ಲಾ…
ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ(Sಖಿ)ದ ಪಟ್ಟಿಗೆ ಸೇರ್ಪಡೆಗೊಳಿಸಲು ಭಾರತದ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದಾರೆ. ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳುವ ಕುರಿತು ಸೋಮಣ್ಣ ಅವರು ಇದೇ ಮಾರ್ಚ್ ೨೫ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದರು. ಆ ಮನವಿಯನ್ನು ಕೇಂದ್ರ ಗೃಹ ಇಲಾಖೆಯು ಭಾರತದ ರಿಜಿಸ್ಟಾçರ್ ಜನರಲ್ ಕಚೇರಿಗೆ ವರ್ಗಾಯಿಸಿತ್ತು. ಇದೀಗ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತು ಪರಿಶೀಲಿಸಲು ಭಾರತದ ರಿಜಿಸ್ಟಾçರ್ ಜನರಲ್ ಕಚೇರಿಯು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ರವಾನಿಸಿದೆ. ಈ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಅವರು ಮತ್ತೊಮ್ಮೆ ಮನವಿ ಮಾಡುವುದರ ಮೂಲಕ ಕರ್ನಾಟಕದ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ…
ಹುಳಿಯಾರು: ಗೃಹಬಳಕೆಗೆ ಮೀಸಲಾದ ೧೪.೨ ಕೆ.ಜಿ. ತೂಕದ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಮಮತಾ ಎಂ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಆದೇಶದಂತೆ ೧೪.೨ ಕೆ.ಜಿ. ತೂಕದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಮನೆ ಬಳಕೆಗೆ ಮಾತ್ರ ಉಪಯೋಗಿಸಬೇಕು. ಆದರೆ ಕೆಲವು ಹೋಟೆಲ್ಗಳು, ಟೀ ಅಂಗಡಿಗಳು, ಬೇಕರಿಗಳು, ರಸ್ತೆ ಬದಿಯ ಎಗ್ ರೈಸ್ ಅಂಗಡಿಗಳು, ಕೋಳಿ ಮಾಂಸದ ಅಂಗಡಿಗಳು ಹಾಗೂ ಇತರೆ ತಿಂಡಿ ವ್ಯಾಪಾರ ಕೇಂದ್ರಗಳಲ್ಲಿ ಗೃಹಬಳಕೆಯ ಸಿಲಿಂಡರ್ಗಳನ್ನು ಅಕ್ರಮವಾಗಿ ಬಳಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಇಂತಹ ಅಕ್ರಮ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರವು ಪರಿಶೀಲನಾ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದು, ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ಗೃಹಬಳಕೆಯ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಸಂಬAಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸಬಾರದು. ಒಂದು ವೇಳೆ ವಾಣಿಜ್ಯ…
ತುಮಕೂರು: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಕನಿಷ್ಠ ೧೦ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ತ್ರೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ದಂಡ ವಿಧಿಸಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ತಂಬಾಕು ಮುಕ್ತ ಪ್ರದೇಶಗಳನ್ನು ಘೋಷಿಸಿ, “ನಶೆ ಮುಕ್ತ ಗ್ರಾಮ” ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾರ್ವಜನಿಕ ಸ್ಥಳ ಹಾಗೂ ಸಿನಿಮಾ ಮಂದಿರಗಳಲ್ಲಿ ಧೂಮಪಾನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಮಾಲೀಕರಿಗೆ ನೋಟೀಸ್ ನೀಡುವಂತೆ ಸೂಚಿಸಿದರು. ತಂಬಾಕು ನಿಯಂತ್ರಣ ಕುರಿತು ಶಾಲಾ ಮಕ್ಕಳ ಮೂಲಕ ಜನ-ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್, ತಹಶೀಲ್ದಾರ್ ಹಾಗೂ ಸ್ಥಳೀಯ ಸಂಸ್ಥೆಗಳ…
ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ಜನರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ನಂದಿಹಳ್ಳಿಯಲ್ಲಿ ಸೇತುವೆ ನಿರ್ಮಾಣದಿಂದ ಈ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರಿಗೆ ಹಾಗೂ ರೈತರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಸೌಕರ್ಯ ಒದಗಿಸುವ ಸಂಕಲ್ಪ ನಮ್ಮದಾಗಿದೆ. ಜನರ ಬಹುದಿನಗಳ ಬೇಡಿಕೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಮ್ಮಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮೇಶ್, ಗುತ್ತಿಗೆದಾರ ರೇಣುಕಯ್ಯ, ಜಿಪಂ ಮಾಜಿ…
ತುಮಕೂರು: ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭ ಕಲ್ಯಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಎಸ್ಡಬ್ಲೂ÷್ಯಎಎನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಬರ ಪರಿವೀಕ್ಷಣೆ, ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಚಟುವಟಿಕೆಗಳು, ಮುಂಗಾರು ಹಂಗಾಮು, ಕೋವಿಡ್ ಮುನ್ನೆಚ್ಚರಿಕೆ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ಮಳೆಯ ಸ್ಥಿತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ವಿವಿಧ ಇಲಾಖೆಗಳ ಸಿದ್ಧತೆ ಕುರಿತು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ತುರ್ತು ಕುಡಿಯುವ ನೀರಿನ ಕ್ರಿಯಾ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಕೊಳವೆಬಾವಿ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಧಿಕಾರಿಗಳು ವಿವರವಾಗಿ ಪರಿಶೀಲಿಸಿದರು. ಜಿಲ್ಲೆಯಲ್ಲಿ ಒಟ್ಟು ೨೦೨ ಕೊಳವೆಬಾವಿಗಳಿಗೆ ಅನುಮೋದನೆ ದೊರೆತಿದ್ದು, ಇದುವರೆಗೆ ೧೮೯ ಕೊಳವೆಬಾವಿಗಳನ್ನು ಕೊರೆದಿದ್ದು, ಅವುಗಳಲ್ಲಿ ೧೩೦ ಯಶಸ್ವಿಯಾಗಿ ನೀರು ದೊರೆತಿವೆ ಹಾಗೂ ೫೯ ವಿಫಲವಾಗಿವೆ. ಇನ್ನೂ ೧೩ ಕೊಳವೆಬಾವಿಗಳ ಕೊರೆಯುವುದು ಬಾಕಿಯಿದ್ದು, ೧೧೮ ಕೊಳವೆಬಾವಿಗಳನ್ನು ಸಾರ್ವಜನಿಕ…











