ತುಮಕೂರು: ಜಿಲ್ಲೆಯಲ್ಲಿ CEPMIZ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ನಿಯಮಾನುಸಾರ ನಿಗಧಿತ ಅವಧಿಯೊಳಗೆ ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಗಣಿ ಬಾಧಿತ ಪ್ರದೇಶಗಳ ಮೂಲಭೂತ ಸೌಲಭ್ಯ ಒದಗಿಸುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಹಲವು ತಿಂಗಳಿAದ ಕೆಲ ಕಾಮಗಾರಿಗಳು ಟೆಂಡರ್ ಹಂತದಲ್ಲೇ ಉಳಿದು ಹೋಗಿವೆ. ಕೆಲವು ಕಾಮಗಾರಿಗಳು ಟೆಂಡರ್ ಕರೆಯಲು ಬಾಕಿಯಿದ್ದು, ಕೆಲವು ಕಾಮಗಾರಿಗಳಿಗೆ ಇನ್ನೂ ಟೆಂಡರ್ ಕರೆದಿಲ್ಲ. ಕೆಲವು ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಕಾಮಗಾರಿಗಳು ಪೂರ್ಣಗೊಳ್ಳದೇ ಹಾಗೆ ಉಳಿದಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನೂತನ ವಿದ್ಯಾರ್ಥಿನಿಲಯಗಳು, ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಹಾಗೂ ಸಾರ್ವಜನಿಕರ ಜೀವನ ಮಟ್ಟವನ್ನು ಸುಧಾರಿಸಲು ರೂಪಿಸಿರುವ ಇತರೆ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕು. ಕಾಮಗಾ ರಿಗಳ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಿ ಕೊಳ್ಳಬೇಕು…
Author: News Desk Benkiyabale
ಕೊರಟಗೆರೆ: ತಾಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾದ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳ ೪೪ ನೇ ಜನ್ಮವರ್ದಂತಿ ಅಂಗವಾಗಿ ಶ್ರೀ ಮಠದಲ್ಲಿ ವಿವಿಧ ಸಂಘ ಸಂಸ್ಥೆಗಳು, ಮಠದ ವಿಧ್ಯಾರ್ಥಿಗಳು, ಗುರುಕುಲ ಸಾಧಕರಿಂದ ಗುರವಂಧನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀಗಳ ೪೪ ನೇ ಜನ್ಮವರ್ದಂತಿ ಕಾರ್ಯಕ್ರಮದ ಅಂಗವಾಗಿ ಪ್ರಾತಕಾಲ ೬ ಗಂಟೆಯಿAದ ಶ್ರೀ ಕ್ಷೇತ್ರಧಿಪತಿ ಸಿದ್ದೇಶ್ವರಸ್ವಾಮಿ ಹಾಗೂ ಶ್ರೀಮಠದ ಕರ್ತೃ ಶ್ರೀ ಜಗದ್ಗುರು ರೇಣುಕಾಚಾರ್ಯರು, ಗಣಪತಿ ಮತ್ತು ವೀರಭದ್ರಸ್ವಾಮಿ ಅವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತು ಮಹಾ ಮಂಗಳಾರತಿ ನಡೆಯಿತು, ನಂತರ ೧೧ ಗಂಟಗೆ ಗುರುವಂದನಾ ಕಾರ್ಯಕ್ರಮದಲ್ಲಿ ಏಲೆರಾಂಪುರ ಕುಂಚಿಟಿಗೆ ಮಹಾಸಂಸ್ಥಾನ ಮಠದ ಡಾ,ಹನುಮಂತನಾಥಸ್ವಾಮೀಜಿ, ರಾಮಮೂರ್ತಿಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶ್ವರರು, ಹರ ಗುರು ಚರಮೂರ್ತಿಗಳ ಸಾನಿದ್ಯದಲ್ಲಿ ತುಮಕೂರು ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಸೇರಿದಂತೆ ವಿವಿಧ ಪಕ್ಷಗಳು ಮುಖಂಡರುಗಳು, ಸಂಘಸAಸ್ಥೆಗಳ ಪಧಾದಿಕಾರಿಗಳು, ಶ್ರೀಮಠದ ಭಕ್ತರು ಭಾಗವಹಿಸಿ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮೀಜಿಗಳ ಪಾದಪೂಜೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳಿಂದ ಜನ್ಮವರ್ಧಂತಿ ಆಚರಿಸಿದರು. ಶ್ರೀಗಳ ೪೪…
ತುಮಕೂರು: ಶ್ರೀ ಮ.ನಿ.ಪ್ರ. ಡಾ: ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಗಸ್ಟ್ ೧ರಂದು ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ ೧ರ ಬೆಳಿಗ್ಗೆ ೮.೩೦ ಗಂಟೆಗೆ ನಗರದ ಟೌನ್ಹಾಲ್ ವೃತ್ತದ ಬಳಿ “ಫ್ಲಾö್ಯಷ್ ಮೋಬ್” ಆಯೋಜನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಅವರಿಗೆ ಸೂಚನೆ ನೀಡಿದರು. “ಫ್ಲಾö್ಯಷ್ ಮೋಬ್”ನಲ್ಲಿ ನಗರದ ಎಲ್ಲಾ ವೈದ್ಯಕೀಯ ಕಾಲೇಜು, ಇಂಜಿನಿಯರಿAಗ್ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಜ್ಞ ವೈದ್ಯರಿಂದ ಉಪನ್ಯಾಸ ಏರ್ಪಡಿಸಬೇಕು ಎಂದು ನಿರ್ದೇಶಿಸಿದರು. ಅದೇ…
ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಸಂಬ0ಧಿಸಿದ0ತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಆಗಸ್ಟ್ ಮಾಹೆಯೊಳಗಾಗಿ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಯೋಜನೆಗಳಿಗೆ ಸಂಬ0ಧಿಸಿದ0ತೆ ಜಿಲ್ಲಾ ಭೂಸ್ವಾಧೀನ ಮತ್ತು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಭೂ ಮಾಲೀಕರಿಗೆ ಪರಿಹಾರ ನೀಡಿದ್ದರೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಈಗಾಗಲೇ ಭೂಸ್ವಾಧೀನಪಡಿಸಿಕೊಂಡ ಪ್ರದೇಶದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಮುಂದುವರೆಸಬೇಕು ಎಂದು ನಿರ್ದೇಶನ ನೀಡಿದರು. ಎತ್ತಿನಹೊಳೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರುಳಿ ಮಾತನಾಡಿ, ಎತ್ತಿನಹೊಳೆ ಯೋಜನೆಯು ಜಿಲ್ಲೆಯ ೧೪೪ ಗ್ರಾಮಗಳನ್ನೊಳಗೊಂಡಿದ್ದು, ಈವರೆಗೆ ೩೫೨೯ ಭೂ ಮಾಲೀಕರಿಗೆ ೭೪೬ಕೋಟಿ ರೂ.ಗಳ ಪರಿಹಾರವನ್ನು ಪಾವತಿಸಲಾಗಿದ್ದು, ೯೨೫ ಕೋಟಿ ರೂ.ಗಳ ಪರಿಹಾರ ಮೊತ್ತ ಪಾವತಿಗೆ ಅವಾರ್ಡ್ ಅನುಮೋದನೆಯಾಗಿದೆ. ಉಳಿದಂತೆ ೮೧೯ ಭೂ ಮಾಲೀಕರಿಗೆ ೧೬೩ಕೋಟಿ ರೂ.ಗಳ ಪರಿಹಾರ ಪಾವತಿಸಬೇಕಾಗಿದೆ ಎಂದು ಮಾಹಿತಿ ನೀಡಿದರು. ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಮಾತನಾಡಿ, ಕೆಲವು…
ತುಮಕೂರು: ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ/ಉಪ ಗ್ರಾಮ/ ಬಡಾವಣೆ ರಚನೆಗೆ ಸಂಬ0ಧಿಸಿದ0ತೆ ಒಂದು ವಾರದೊಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಸಹಯೋಗದಲ್ಲಿ ಕಂದಾಯ ಗ್ರಾಮ, ಉಪಗ್ರಾಮ ಹಾಗೂ ಬಡಾವಣೆ ರಚನೆ ಸಂಬ0ಧಿತ ವಿಷಯಗಳ ಬಗ್ಗೆ ಮಂಗಳವಾರ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ವಿಶೇಷ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ೫೦ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳು ಅ ಥವಾ ೨೫೦ಕ್ಕೂ ಹೆಚ್ಚು ಜನಸಂಖ್ಯೆ ಇರುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಗುರುತಿಸಬೇಕು. ಈ ಗ್ರಾಮವು ಮೂಲ ಗ್ರಾಮದಿಂದ ೧ ಕಿ.ಮೀ. ಅಂತರದಲ್ಲಿರಬೇಕು. ಅದೇ ರೀತಿ ೧೦ಕ್ಕೂ ಅಧಿಕ ೫೦ಕ್ಕಿಂತ ಕಡಿಮೆ ಮನೆಗಳನ್ನು ಹೊಂದಿರುವ ಹಾಗೂ ಕಂದಾಯ ಗ್ರಾಮವಾಗಲು ಅನರ್ಹವಿರುವ ಜನವಸತಿ ಪ್ರದೇಶಗಳನ್ನು ಉಪಗ್ರಾಮವನ್ನಾಗಿಸುವ ಪ್ರಸ್ತಾವನೆ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು. ಕಂದಾಯ ಗ್ರಾಮ ರಚನೆ ಸಂಬAಧ…
ತುಮಕೂರು: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಕೆಐಎಡಿಬಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಹಾಗೂ ಅವರ ಮನೆ ಮೇಲೆ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಬಿ.ಹೆಚ್. ರಸ್ತೆಯ ಎಸ್ಐಟಿ ಕಾಲೇಜು ಪಕ್ಕದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ತುಮಕೂರು ವಲಯದ ಕಚೇರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜೇಶ್ ರವರ ಕಚೇರಿ, ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿರುವ ಅವರ ತಂದೆಯ ಮನೆ ಹಾಗೂ ಬೆಂಗಳೂರಿನಲ್ಲಿರುವ ಮನೆ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಸಂಪಾದನೆ ಮಾಡಿರುವ ಆಸ್ತಿಗಳಿಗೆ ಸಂಬAಧಿಸಿದAತೆ ದಾಖಲಾತಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ತುಮಕೂರು ಕೆಐಎಡಿಬಿ ಕಚೇರಿ ಮೇಲೆ ಚಿತ್ರದುರ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಕಚೇರಿಯಲ್ಲಿ ಕಡತಗಳು ಹಾಗೂ ವಿವಿಧ ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರು, ಮಳವಳ್ಳಿ ಹಾಗೂ ಬೆಂಗಳೂರು ಮೂರು ಕಡೆಗಳಲ್ಲೂ ಲೋಕಾಯುಕ್ತ ಅಧಿಕಾರಿಗಳ ಮೂರು ತಂಡ ದಾಳಿ ಮಾಡಿದ್ದು, ಮನೆಗಳಲ್ಲಿ ಇರುವ ಚಿನ್ನ, ಬೆಳ್ಳಿ, ನಗದು…
ತುರುವೇಕೆರೆ: ತಾಲೂಕಿನ ಅಮ್ಮಸಂದ್ರ ಗ್ರಾಮ ಪಂಚಾಯತಿವತಿಯಿ0ದ ಕಂದಾಯ ವಸೂಲಾತಿ ಆಂದೋಲನವನ್ನು ಈ ಭಾರಿ ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಅದ್ಯಕ್ಷರು, ಸದಸ್ಯರು ವಿನೂತನವಾಗಿ ಆಚರಿಸಿ ಜನರ ಗಮನ ಸೆಳೆದರು. ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷ ಹಾಲಿ ಸದಸ್ಯ ಸಿದ್ದಗಂಗಯ್ಯ ಮಾತನಾಡಿ ಗ್ರಾಮ ಪಂಚಾಯತಿ ಗ್ರಾಮಗಳ ಅಭಿವೃದ್ದಿಗೆ ಮೂಲ ಸೌಕರ್ಯ ಓದಗಿಸಲು ಅನುದಾನದ ಕೊರತೆ ಕಾಡುತ್ತಿದೆ. ತೆರಿಗೆ ಕಂದಾಯ ಗ್ರಾಮ ಪಂಚಾಯತಿಗೆ ಮೂಲ ಆದಾಯವಾಗಿದೆ. ಗ್ರಾಮ ಪಂಚಾಯತಿಯಲ್ಲಿ ಶೇ ೮೦ ರಷ್ಟು ಕಂದಾಯ ವಸೂಲಿ ಮಾಡಬೇಕು ಎಂಬ ಸರ್ಕಾರದ ಆದೇಶವಿದೆ. ಆದರೆ ನಮ್ಮ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ರೂ ತೆರಿಗೆ ಕಂದಾಯ ಬಾಕಿ ಉಳಿಸಿಕೊಂಡಿದ್ದು ಕಂದಾಯ ಸರಿಯಾಗಿ ವಸೂಲಾತಿಯಾಗದೇ ನೀರು ವಿತರಕರು, ನೌಕರರಿಗೆ ಸಂಬಳ ನೀಡಲಾಗುತ್ತಿಲ್ಲ. ಜನರಿಗೆ ವಿದ್ಯುತ್ ಬೀದಿ ದೀಪ, ಚರಂಢಿ ಸ್ವಚ್ಚತೆ ಮಾಡಲು ಹಣ ವಿಲ್ಲದೇ ಪರದಾಡುವಂತಾಗಿದೆ ಅದ್ದರಿಂದ ಕಂದಾಯ ವಸೂಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹೈಡನ್ ಬರ್ಗ್ ಸಿಮೆಂಟ್ ಕಾರ್ಖಾನೆ ಆಡಳಿತ…
ತುಮಕೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾಲೇಜಿಗೊಂದು ಕನ್ನಡ ಕಾರ್ಯಕ್ರಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತುಮಕೂರು ಹಾಗೂ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ, ತುಮಕೂರು ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ನಡೆ-ಯುವ ಜನತೆಯ ಕಡೆ ಎಂಬ ಕಾಲೇಜಿಗೊಂದು ಕನ್ನಡ ಕಾರ್ಯಕ್ರಮವು ತುಮಕೂರು ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಸಹ ಕಾರ್ಯದರ್ಶಿಯಾದ ಡಾ. ಅಜಯಕುಮಾರ್ ಎಂ.ವಿ. ಇದು ಕನ್ನಡವನ್ನು ಉಳಿಸಿ, ಬೆಳೆಸುವ ಹಾಗೂ ವಿದ್ಯಾರ್ಥಿಗಳಲ್ಲಿ ನಾಡು ನುಡಿಯ ಮಹತ್ವ ತಿಳಿಸುವ ವಿಶೇಷ ಕಾರ್ಯಕ್ರಮ ಎಂದರು. ಮುಖ್ಯ ಅತಿಥಿಗಳಾಗಿ ವಿಶೇಷ ಉಪನ್ಯಾಸ ನೀಡಿದ ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಎಲ್.ಪಿ.ರಾಜುರವರು “ಕರ್ನಾಟಕದಲ್ಲಿ ಕ್ವಿಟ್ಇಂಡಿಯಾ” ಎಂಬ ವಿಷಯವನ್ನು ಮನಮುಟ್ಟುವಂತೆ ತಿಳಿಸಿದರು. ಅಂದಿನ ಕ್ವಿಟ್ಇಂಡಿಯಾ ಚಳುವಳಿಯಲ್ಲಿ…
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೇಮಾವತಿ ಕುಡಿಯುವ ನೀರಿನ ಯೋಜನೆಯಡಿ ಗುರತ್ವಾಕರ್ಷಣೆಯ ಮೂಲಕ ಈಗಾಗಲೇ ಚಾನಲ್ ಕೆಲಸ ಆಗಿರುವಂತಹ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯಿಂದ ಹುಳಿಯಾರು ಕೆರೆಯವರೆಗೆ ಹೇಮಾವತಿ ನೀರನ್ನು ಹರಿಸಲಾಗುತ್ತದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೇಮಾವತಿ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಗಡಬನಹಳ್ಳಿ ಬಳಿಯ ಮುಖ್ಯ ನಾಲೆಯಿಂದ ಗುರುತ್ವಾಕರ್ಷಣೆಯ ಮೂಲಕ ನೀರು ಹರಿಸುವ ಗೇಟ್ನ್ನು ತೆರವು ಮಾಡುವ ಮೂಲಕ ಚಾಲನೆ ನೀಡಿ ಗಂಗಾಪೂಜೆ ನೆರೆವೆರಿಸಿ ಅವರು ಮಾತನಾಡಿದರು. ಮಂಗಳವಾರದಿ0ದ ಮೂರು ತಿಂಗಳಕಾಲ ೮.೩ ಕಿ.ಮೀ ಚಾನಲ್ ಮೂಲಕ ಹರಿಯುವಂತ ನೀರು ತಾಲ್ಲೂಕಿನ ಸಾಸಲು ಕೆರೆಯಿಂದ ಪ್ರಾರಂಭವಾಗಿ ಶೆಟ್ಟಿಕೆರೆ, ಅಜ್ಜನಕೆರ, ಗೌಡನಹಳ್ಳಿಕೆರೆ, ಹೆಸರಹಳ್ಳಿಕೆರೆ, ಅಂಕಸAದ್ರಹಣೆಯ ಮೂಲಕ ತಿಮ್ಲಾಪುರದ ಕೆರೆ ಮೂಲಕ ಹುಳಿಯಾರು ಕೆರೆಯನ್ನು ತಲುಪುವುದು. ಹಾಗೇ ಮುಂದುವರೆದು ಸಾದ್ಯವಾದರೆ ಬೋರನಕಣಿವೆಗೂ ಹರಿಸಲಾಗುವುದು ಎಂದರು. ಈ ಚಾನಲ್ ೧೦ ವೆಂಟಿಲೇಟರ್ಗಳಲ್ಲಿ ಮಳೆಯಿಂದಾಗಿ ಹೂಳೂ ತುಂಬಿತ್ತು. ಅದನ್ನು ೨೮ ಲಕ್ಷ ವೆಚ್ಚದಲ್ಲಿ ತೆಗೆಸಲಾಗಿದ್ದು ಈ ಬಾರಿ ಸಂಪೂರ್ಣ ನೀರು ಸರಾಗವಾಗಿ ಹರಿಯುವ ಸಾದ್ಯತೆ…
ಪಾವಗಡ: ಪಾವಗಡದ ಜನರ ದಹ ನೀಗಿಸಿದ ಭಗೀರಥ ಸಿಎಂ ಸಿದ್ದರಾಮಯ್ಯನವರು ಎಂದು ಪಾವಗಡ ಶಾಸಕ ಹೆಚ್. ವಿ. ವೆಂಕಟೇಶ್ ತಿಳಿಸಿದ್ದಾರೆ ಗುರುವಾರ ಪಾವಗಡ ಪಟ್ಟಣದ ಸಮುದಾಯ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಾ ಸಿದ್ದರಾಮಯ್ಯ ಅವರು ೨೦೧೮ರಲ್ಲಿ ಮುಖ್ಯಮಂತ್ರಿಗಳಾದAತಹ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ ಅವರು ಮುಖ್ಯಮಂತ್ರಿಗಳಿಗೆ ಗಡಿನಾಡು ಭಾಗದ ಬಡಜನರ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮನವಿ ಮಾಡಿದ್ದರು ಜೊತೆಗೆ ಅನೇಕ ಹೋರಾಟಗಾರರಿಗೆ ಬೆಂಬಲವಾಗಿ ನಿಂತಿದ್ದರು, ಈ ಎಲ್ಲರ ಫಲವಾಗಿ ಪಾವಗಡ ತಾಲೂಕಿಗೆ ತುಂಗಭದ್ರಾ ಕುಡಿಯುವ ನೀರು ಬಂದಿದೆ ಇದನ್ನ ಉದ್ಘಾಟಿಸಲು ಜುಲೈ ೨೧ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾವಗಡಕ್ಕೆ ಆಗಮಿಸುತ್ತಿದ್ದು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮದ ಬಗ್ಗೆ ಜನರಿಗೆ ಅರಿವು ನೀಡುವುದರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು ಪ್ರತಿ ಬೂತ್ ನಿಂದ ನೂರು ಜನರನ್ನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ವಹಿಸುವಂತೆ…