Author: News Desk Benkiyabale

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್ ಮ್ಯಾನೇಜರ್ ಹುದ್ದೆ ಪದೋನ್ನತಿ ಪರೀಕ್ಷೆಯನ್ನು ಕನ್ನಡಕ್ಕೆ ಅವಕಾಶ ನೀಡದೆ, ಹಿಂದಿ, ಇಂಗ್ಲೀಷ್ ಭಾಷೆಗೆ ಮಾನ್ಯತೆ ನೀಡಿದೆ. ರೈಲ್ವೆ ಇಲಾಖೆ ಈ ಮೂಲಕ ಕನ್ನಡಗರಿಗೆ ದ್ರೋಹ ಮಾಡಲು ಹೊರಟಿದೆ ಎಂದು ಟೀಕಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ, ಇಲಾಖೆ ಧೋರಣೆ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿರುವ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಈ ವಿಚಾರ ಗಮನಕ್ಕೆ ತಂದರೂ ಅವರು ಇಲಾಖೆ ಕ್ರಮವನ್ನು ಸಮರ್ಥಿಸಿಕೊಂಡಿರುವುದು ದುರಾದೃಷ್ಟಕರ.ಕೇಂದ್ರ ಸರ್ಕಾರದ ಇಲಾಖೆಗಳ ಕನ್ನಡ ನಿರ್ಲಕ್ಷದ ಬಗ್ಗೆ ಸಂಘಟನೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರು ರಾಜ್ಯದ ಎಲ್ಲಾ ಸಂಸದರು, ಸಂಬAಧಿಸಿದ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದರೂ ಕೇಂದ್ರ ಸರ್ಕಾರ ತನ್ನ ಕನ್ನಡ ವಿರೋಧಿ ಚಾಳಿ ಮುಂದುವರೆಸಿದೆ…

Read More

ತುಮಕೂರು: ರಾಜ್ಯಾದ್ಯಂತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಂಭವವಿರುವುದಾಗಿ ತಜ್ಞರು ಅಭಿಪ್ರಾಯಿಸಿರುತ್ತಾರೆ. ಫೆಸಿಫಿಕ್ ಮಹಾಸಾಗರದ ಮೇಲ್ಮೈ ತಾಪಮಾನವು ಸರಾಸರಿ ತಾಪಮಾನಕ್ಕಿಂತ ಹೆಚ್ಚಿರುವುದು ಎಂದರೆ ಎಲ್ ನಿನೋ ಇದಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ರೈತ ಬಾಂಧವರು ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮಳೆಯನ್ನು ಆಧರಿಸಿ ತಳಿಗಳನ್ನು ಆಯ್ಕೆ ಮಾಡಿ ಬಿತ್ತನೆ ಕೈಗೊಳ್ಳಬೇಕಾಗಿ ಜಂಟಿ ಕೃಷಿ ನಿರ್ದೇಶಕ ಲಕ್ಷö್ಮಣ ಎಸ್.ಕಳ್ಳೆನ್ನವರ ಮನವಿ ಮಾಡಿದ್ದಾರೆ. ಜಿಲ್ಲೆಯ ರೈತರು ವಿವಿಧ ಬೆಳೆಗಳಲ್ಲಿ ಈ ಕೆಳಕಂಡAತೆ ತಳಿಗಳನ್ನು ಆಯ್ಕೆ ಮಾಡಿ ತಾಂತ್ರಿಕತೆಗಳನ್ನು ಅನುಸರಿಸಬೇಕು. ಖುಷ್ಕಿ ಬೆಳೆಗಳನ್ನು ಬೆಳೆಯುವ ಸಂದರ್ಭದಲ್ಲಿ ೫೦ ರಿಂದ ೬೦ ಮಿಲಿ ಮೀಟರ್ ಮಳೆ ಬಂದ ನಂತರ ಬಿತ್ತನೆ ಮಾಡುವುದು ಸೂಕ್ತ. ಕಳೆ ನಿಯಂತ್ರಣ ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆಗಾಗಿ ಅಂತರ ಬೇಸಾಯ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆಗಳ ಸಾಲುಗಳ ನಡುವೆ ಕೃಷಿ ತ್ಯಾಜ್ಯಗಳನ್ನು ಹೊದಿಕೆಯಾಗಿ ಬಳಸಬೇಕು. ಮಧ್ಯಂತರ ಬರ ಪರಿಸ್ಥಿತಿಯಲ್ಲಿ ಹಾಗೂ ಮಳೆಯ ನಂತರ ಬೆಳೆ ಚೇತರಿಕೆಗೆ ೧% ರಿಂದ ೩% ಯೂರಿಯಾವನ್ನು ೦.೫%…

Read More

ಚಿಕ್ಕನಾಯಕನಹಳ್ಳಿ: ತಾಲೂಕಿನಾದ್ಯಂತ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಸಾರ್ವಜನಿಕರು ಬೀದಿಯಲ್ಲಿ ಓಡಾಡಲು ಭಯಪಡುವಂತಹ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಾಯಿಗಳ ಹಿಂಡು ಸಾರ್ವಜನಿಕರು, ವೃದ್ಧರು ಹಾಗೂ ಮುಖ್ಯವಾಗಿ ಶಾಲಾ ಮಕ್ಕಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಾಗರಿಕರ ಜೀವಕ್ಕೆ ಕಂಟಕವಾಗಿ ಪರಿಣಮಿಸಿದೆ. ಪುರಸಭಾ ವ್ಯಾಪ್ತಿ ಸೇರಿದಂತೆ ತಾಲೂಕಿನ ಒಟ್ಟು ೨೭ ಗ್ರಾಮ ಪಂಚಾಯಿತಿಗಳು ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ವ್ಯಾಪಕವಾಗಿದೆ. ಪಶು ಸಂಗೋಪನಾ ಇಲಾಖೆಯ ಅಧಿಕೃತ ಅಂಕಿ-ಅAಶಗಳ ಪ್ರಕಾರ, ಪಟ್ಟಣ ಪ್ರದೇಶದಲ್ಲಿ ೨೧೧೬ ಹಾಗೂ ಗ್ರಾಮೀಣ ಭಾಗದಲ್ಲಿ ೪೧೨೯ ಸೇರಿದಂತೆ ತಾಲೂ ಕಿನಲ್ಲಿ ಒಟ್ಟು ೬೨೪೫ ನಾಯಿಗಳಿವೆ. ಕಳೆದ ೨೦೨೫ ರ ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲೇ ಬರೋಬ್ಬರಿ ೭೧೩ ನಾಯಿದಾಳಿ ಪ್ರಕರಣಗಳು ದಾಖಲಾಗಿದ್ದು, ೨೦೨೫-೨೦೨೬ ರ ಸಾಲಿನ ಡಿಸೆಂಬರ್ ಅಂತ್ಯದ ವೇಳೆಗೆ ತಾಲೂಕಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು ೨೦೦೦ ಕ್ಕೂ ಹೆಚ್ಚು ಪ್ರಕರಣಗಳು ನೋಂದಣಿಯಾಗಿರುವುದು ಪರಿಸ್ಥಿತಿಯ ಗಂಭೀರತೆಗೆ…

Read More

ತುಮಕೂರು: ವೀರಶೈವರು ಬೇರೆ ಅಲ್ಲ ಲಿಂಗಾಯಿತರು ಬೇರೆ ಅಲ್ಲ ಎಲ್ಲರೂ ಒಂದೇ, ಸಮಾಜದ ಎಲ್ಲರೂ ಸಂಘಟಿತರಾಗಿ ವೀರಶೈವಲಿಂಗಾಯಿತ ಧರ್ಮವನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ,ತಾಯಂದಿರು ಮಕ್ಕಳಿಗೆ ವೀರಶೈವ ಧರ್ಮದ ಬಗ್ಗೆ ನಮ್ಮ ಧರ್ಮದ ಪೂರ್ವಜರ ಬಗ್ಗೆ ಧರ್ಮ ಸಂಸ್ಥಾಪಕರ ಬಗ್ಗೆ,ವಚನಕಾರರ ಬಗ್ಗೆ,ಮಠದ ಸ್ವಾಮೀಜಿಗಳ ಬಗ್ಗೆ,ಆಚಾರ ವಿಚಾರಗಳು,ಶಿವಪೂಜಾ ವಿಧಿವಿಧಾನಗಳ ಬಗ್ಗೆ ತಿಳಿಹೇಳಬೇಕು ಆಗ ಮಕ್ಕಳಲ್ಲಿ ಧರ್ಮದ ಬಗ್ಗೆ ಜಾಗೃತಿ ಹೆಚ್ಚಿ ಉತ್ತಮ ಸಂಸ್ಕಾರವAತರಾಗುತ್ತಾರೆ,ಧರ್ಮಕ್ಕಾಗಿ ತನು,ಮನ,ಧನ ಅರ್ಪಿಸಿದಾಗ ಧರ್ಮ ಉಳಿಯುತ್ತದೆ,ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ರಂಭಾಪುರಿ ಜಗದ್ಗುರುಗಳು ಹೇಳಿದಂತೆ ನಡೆಯಬೇಕು,ಪೂಜ್ಯರು ಹಾಕಿಕೊಟ್ಟ ಮಾರ್ಗದರ್ಶನದಂತೆ ನಡೆದಾಗ ಸಮಾಜದಲ್ಲಿ ಶಾಂತಿ ಮೂಡಿ ಭಾವೈಕ್ಯತೆ ಮೂಡುತ್ತದೆ ಎಂದು ಎಸ್.ಆರ್.ಶಿವಶಂಕರ್ ಹೇಳಿದರು. ಅವರು ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆ ಜಯನಗರ ಪಶ್ಚಿಮ ಬಡಾವಣೆಯ ಕಿಡ್ಸ್ ಕಾಲೋನಿ ಸ್ಕೂಲ್ ಆವರಣದಲ್ಲಿ ನಡೆದ ತುಮಕೂರು ವೀರಶೈವ ಲಿಂಗಾಯಿತರ ಅಭಿವೃದ್ಧಿ ಸಮಿತಿ(ರಿ)ಯ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಆರ್.ಎಸ್.ವೀರಪ್ಪದೇವರು ಮಾತನಾಡುತ್ತಾ ನಗರದಲ್ಲಿ ವೀರಶೈವರು ಸಂಘಟಿತರಾಗಬೇಕು,…

Read More

ತುಮಕೂರು: ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಪ್ರಧಾನ ಮಂತ್ರಿಗಳ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ಸದೃಢ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆಯ ಕೊಡುಗೆ ಅಪಾರ ಎಂದು ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಯು. ಎಸ್. ಮೂರ್ತಿ ಅವರು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಸಂಶೋಧನಾ ವಿಭಾಗ ಮತ್ತು ಅರ್ಥಶಾಸ್ತç ಅಧ್ಯಯನ ಹಾಗೂ ಸಂಶೋಧನಾ ವಿಭಾಗಗಳ ಸಹಯೋಗದಲ್ಲಿ, ಕೇಂದ್ರ ಸರ್ಕಾರದ ಪಿಎಂ-ಉಷಾ ಸಾಫ್ಟ್ ಕಾಂಪೊನೆAಟ್ ಯೋಜನೆಯಡಿ ಜೂನ್ ೨೨ರ ಸೋಮವಾರದಂದು ಆಯೋಜಿಸಿದ್ದ “ಭಾರತದಲ್ಲಿ ಪರಂಪರೆ ಅರ್ಥವ್ಯವಸ್ಥೆ” ಎಂಬ ವಿಷಯದ ಕುರಿತ ಒಂದು ದಿನದ ರಾಷ್ಟಿçÃಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಅರ್ಥವ್ಯವಸ್ಥೆ ಸರಿ ಇದ್ದರೆ ಮಾತ್ರ ದೇಶ ಉಳಿಯಲು ಸಾಧ್ಯ. ಯಾವ ದೇಶದಲ್ಲಿ ಆರ್ಥಿಕ ವ್ಯವಸ್ಥೆ ಸರಿಯಿಲ್ಲವೋ, ಅವುಗಳ ಪತನವನ್ನು ನಾವು ಕಣ್ಣಾರೆ ನೋಡುತ್ತಿದ್ದೇವೆ ಎಂದರು. ಬೆAಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕರಾದ ಪ್ರೊ.…

Read More

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ನಿರ್ಮಿಸುತ್ತಿರುವುದಕ್ಕೆ ಸ್ಥಳೀಯ ನಾಗರಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಇದು ಜಯನಗರ ಪೋಲೀಸ್ ಠಾಣೆಗೆ ಸಾರ್ವಜನಿಕರು ನೀಡಿದ್ದರು ಆದರೆ ಈಗ ಪಾಲಿಕೆ ನಮ್ಮ ಕ್ಲೀನಿಕ್ ಆರಂಭಿಸಲು ಹೊರಟಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ,ಈ ಸಂಬAಧ ಬಡಾವಣೆಯ ನಿವಾಸಿಗಳು ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅವರನ್ನು ಭೇಟಿಯಾಗಿ, ಆಸ್ಪತ್ರೆ ನಿರ್ಮಾಣಕ್ಕೆ ತಡೆ ಹಿಡಿಯುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಪಾರ್ಕ್ ನಿರ್ಮಾಣಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ಆಸ್ಪತ್ರೆ ಸ್ಥಾಪನೆಗೆ ಅನುವು ಮಾಡಿಕೊಟ್ಟಿರುವುದು ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ಅನಾನುಕೂಲವನ್ನು ಉಂಟುಮಾಡುತ್ತದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸಿರು ವಾತಾವರಣ ಮತ್ತು ಸಾರ್ವಜನಿಕರ ವಾಯುವಿಹಾರಕ್ಕೆ ಪಾರ್ಕ್ ಅತ್ಯಗತ್ಯವಾಗಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಆಸ್ಪತ್ರೆ ನಿರ್ಮಿಸಬಾರದು ಎಂದು ಅವರು ಒತ್ತಾಯಿಸಿದ್ದಾರೆ. ಆಸ್ಪತ್ರೆ ಅಥವಾ ಕ್ಲಿನಿಕ್‌ಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂತಾಗಲು ಅವುಗಳನ್ನು ಮುಖ್ಯ ರಸ್ತೆಯ ಬದಿಯಲ್ಲಿ ನಿರ್ಮಿಸಬೇಕು.…

Read More

ಚಿಕ್ಕನಾಯಕನಹಳ್ಳಿ: ಬದುಕು ಎಂದರೆ ಸವಾಲುಗಳ ಮೂಟೆ. ಆದರೆ ಆ ಸವಾಲುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು, ಬಡತನದ ಬೇಗೆಯಲ್ಲೂ ಛಲ ಬಿಡದೆ ಓದಿ, ತುಮಕೂರು ವಿಶ್ವವಿದ್ಯಾನಿಲಯದ ಬಿ.ಎ. ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ವಿದ್ಯಾರ್ಥಿ ರಂಗನಾಥ್. ಜೆ. ಬಿ. ಜಿಲ್ಲೆಗೆ ಮಾದರಿಯಾಗಿದ್ದಾನೆ. ಪ್ರೌಢಶಾಲಾ ದಿನಗಳಿಂದಲೇ ಬೀದಿ ಬೀದಿಯಲ್ಲಿ ತರಕಾರಿ, ಸೊಪುö್ಪ ಮಾರಿ ಕುಟುಂಬಕ್ಕೆ ಆಸರೆಯಾಗುತ್ತಲೇ ಈ ಸಾಧನೆ ಮಾಡಿರುವ ರಂಗನಾಥ್, ನವೋದಯ ಪದವಿ ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿಯಾಗಿದ್ದಾನೆ. ಈತನ ಅಪೂರ್ವ ಸಾಧನೆ ತಾಲ್ಲೂಕಿಗೆ, ಕಾಲೇಜಿಗೆ ಹಾಗೂ ಹೆತ್ತ ಪೋಷಕರಿಗೆ ಅಪಾರ ಕೀರ್ತಿ ತಂದಿದೆ. ತರಕಾರಿ ಮಾರುತ್ತಲೇ ಸಾಗಿದ ಶಿಕ್ಷಣ: ರಂಗನಾಥ್ ಅವರ ಬಾಲ್ಯ ಅತ್ಯಂತ ಕಡು ಬಡತನದಲ್ಲಿ ಕಳೆಯಿತು. ಓದಬೇಕೆಂಬ ಹಂಬಲವಿದ್ದರೂ ಆರ್ಥಿಕ ಪರಿಸ್ಥಿತಿ ಪೂರಕವಾಗಿರಲಿಲ್ಲ. ಪ್ರೌಢಶಾಲೆಯ ದಿನಗಳಿಂದಲೇ ಹೊಟ್ಟೆಪಾಡಿಗಾಗಿ ಮತ್ತು ಓದಿನ ವೆಚ್ಚಕ್ಕಾಗಿ ರಸ್ತೆಯ ಬದಿಯಲ್ಲಿ ತರಕಾರಿ ಮತ್ತು ಸೊಪುö್ಪ ಮಾರಲಾರಂಭಿಸಿದ. ಹಗಲಿನಲ್ಲಿ ವ್ಯಾಪಾರ, ರಾತ್ರಿಯಲ್ಲಿ ಓದು – ಇದೇ ಆತನ ದಿನಚರಿಯಾಗಿತ್ತು. ಅಣ್ಣನ ತ್ಯಾಗ, ಗುರುವಿನ ಮಾರ್ಗದರ್ಶನ: ರಂಗನಾಥ್ ನವೋದಯ…

Read More

ಪಾವಗಡ: ಅಪಘಾತದಲ್ಲಿ ಮೃತಪಟ್ಟ ಚಾಲಕನ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿAದ ೫ ಲಕ್ಷ ಪರಿಹಾರ ಮಂಜೂರಾಗಿದೆ. ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸಿದ ೫ ತಿಂಗಳಲ್ಲೇ ಪರಿಹಾರ ಹಣ ಮೃತರ ಪತ್ನಿಯ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಿದೆ. ಪಾವಗಡ ತಾಲ್ಲೂಕು ಕಸಬಾ ಹೋಬಳಿ ಮೇಡಿಹಳ್ಳಿ ಗ್ರಾಮದ ರಾಜಶೇಖರ್ ಎಂಬ ಚಾಲಕ ೫ ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಮೃತರು ಕಾರ್ಮಿಕ ಕಾರ್ಡ್ ಹೊಂದಿದ್ದ ಹಿನ್ನೆಲೆಯಲ್ಲಿ ಅಪಘಾತ ಪರಿಹಾರಕ್ಕೆ ಅರ್ಹರಾಗಿದ್ದರು. ಗಡಿನಾಡು ಪಾವಗಡ ವಾಣಿಜ್ಯ ವಾಹನಗಳ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ ಬಿ ಹಾಗೂ ಪದಾಧಿಕಾರಿಗಳು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ, ಕಾರ್ಮಿಕ ಇಲಾಖೆಯ ಅಪಘಾತ ಪರಿಹಾರ ವಿಮೆ ಯೋಜನೆ ಕುರಿತು ಮಾಹಿತಿ ನೀಡಿದರು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ನೆರವಾದ ಪರಿಣಾಮ ತ್ವರಿತವಾಗಿ ಪರಿಹಾರ ಮಂಜೂರಾಗಿದೆ. ಸAಘಟನೆಯ ನೆರವು ಮತ್ತು ಸರ್ಕಾರದ ಸ್ಪಂದನೆಗೆ ಕೃತಜ್ಞರಾಗಿದ್ದೇವೆ ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ…

Read More

ತುಮಕೂರು: ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ನ್ಯೂನತೆ ಕಂಡು ಬಂದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಈ ವೇಳೆ ವಿದ್ಯಾರ್ಥಿ ನಿಲಯಗಳಲ್ಲಿ ಸಮಸ್ಯೆಗಳು ಕಂಡು ಬಂದರೆ ಸಂಬAಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರತಿನಿತ್ಯ ವಿದ್ಯಾರ್ಥಿ ನಿಲಯದ ನಿಲಯ ಪಾಲಕರು ಕರ್ತವ್ಯ ಆಪ್ ಬಳಸಿ ತಮ್ಮ ಹಾಜರಾತಿಯನ್ನು ಹಾಕಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸವಿದ್ದು ಅದರ ದೃಢೀಕರಣವನ್ನು ಇಲಾಖೆಗೆ ಸಲ್ಲಿಸಬೇಕು. ನಿಲಯ ಪಾಲಕರು ಶನಿವಾರ ಮತ್ತು ಭಾನುವಾರ ಹಾಸ್ಟೆಲ್‌ಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಸದರಿ ದೂರುಗಳನ್ನು ಪರಿಶೀಲಿಸಿ…

Read More

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ತುಮಕೂರು ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಭಾರತ ಸ್ವಾತಂತ್ರ÷್ಯ ಸಂಗ್ರಾಮದಲ್ಲಿ ಅಪ್ರತಿಮ ಧೈರ್ಯ ಮತ್ತು ಶೌರ್ಯದ ವನಿತೆಯೆಂದೇ ಬಿಂಬಿತವಾದ ರಾಣಿ ಲಕ್ಷಿ÷್ಮÃಭಾಯಿರವರ ಪುಣ್ಯಸ್ಮರಣೆಯನ್ನು ಇಂದು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ರಾಣಿ ಲಕ್ಷಿ÷್ಮÃಭಾಯಿರವರ ವಿಚಾರಧಾರೆಯ ಬಗ್ಗೆ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಮಾತನಾಡುತ್ತಾ ವೀರ ಮಾತೆಯವರು ದೇಶದ ಸ್ವಾಭಿಮಾನ ಮತ್ತು ಸ್ವಾತಂತ್ರ÷್ಯಕ್ಕಾಗಿ ಬ್ರಿಟಿಷರ ವಿರುದ್ಧ ಅಚಲ ಸಂಕಲ್ಪದಿAದ ಹೋರಾಡಿದ ಅವರು ಮಹಿಳಾ ಶಕ್ತಿಯ ಪ್ರತೀಕವಾಗಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಧೈರ್ಯ, ದೇಶಪ್ರೇಮ ಮತ್ತು ತ್ಯಾಗದ ಅವರ ಆದರ್ಶಗಳು ಇಂದಿಗೂ ಪ್ರೇರಣೆಯಾಗಿ ಉಳಿದಿವೆ ಎಂದರೆ ತಪ್ಪಾಗಲಾರದು ಅವರ ಶೌರ್ಯಗಾಥೆ ಸದಾ ನಮ್ಮ ಹೃದಯಗಳಲ್ಲಿ ಜೀವಂತವಾಗಿರಲಿ ಎಂದು ನುಡಿಯುತ್ತಾ ದತ್ತು ಮಕ್ಕಳಿಗೆ ಸಿಂಹಾಸನದ ಹಕ್ಕಿಲ್ಲ ಎಂಬ ನೀತಿಯನ್ನು ವಿರೋಧಿಸಿ ಬ್ರಿಟಿಷರ ವಿರುದ್ಧ ಸಿಡಿದೆದ್ದು ವೀರಾವೇಶದಿಂದ ಹೋರಾಡಿದ ಧೀರ ಮಹಿಳೆ ಆಗಿದ್ದರು ಎಂದು…

Read More