Author: News Desk Benkiyabale

ತುಮಕೂರು ಜಿಲ್ಲೆ ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯಿತಿ ಕೇಸಿನ ಆರೋಪಿ ತಡರಾತ್ರಿ ಪರಾರಿಯಾಗಿರುವ ಘಟನೆ ನೆಡೆದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಗದಗ ಮೂಲದ ಡಕಾಯತಿ ಕೇಸಿನ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಎನ್ನುವವರನ್ನು ತನಿಖೆಗಾಗಿ ಗುಬ್ಬಿ ಪೋಲಿಸ್ ಠಾಣೆಯ ಸಬ್ಬ್ ಇನ್ಸ್ಪೆಕ್ಟರ್ ದೇವಿಕಾ ದೇವಿ ರವರು ಇಲಾಖೆಯ ವಶಕ್ಕೆ ಪಡೆದಿದ್ದರು ಅಲ್ಲಿಂದ ಕರೆತಂದು ಗುಬ್ಬಿ ಪೋಲಿಸ್ ಠಾಣೆಯ ಲಾಕಪ್ ನಲ್ಲಿ ತನಿಖೆಗಾಗಿ ಇಟ್ಟುಕೊಂಡಿದ್ದರು ಆದರೆ ಫೆಬ್ರವರಿ ೧ ರ ತಡರಾತ್ರಿ ಲಾಕಪ್ ನಿಂದ ಆರೋಪಿಯು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ ಎನ್ನುವ ಮಾಹಿತಿ ಹೊರಬಿದ್ದಿದೆ ತಪ್ಪಿಸಿಕೊಂಡ ಆರೋಪಿ ಪತ್ತೆಗಾಗಿ ಪೋಲೀಸರು ಹರಸಾಹಸ ಪಡುತ್ತಿದ್ದಾರೆ , ತಪ್ಪಿಸಿಕೊಂಡು ಓಡಿ ಹೋದ ಆರೋಪಿಯು ವೃತ್ತಿನಿರತ ಆರೋಪಿಯಾಗಿದ್ದು ಕಳ್ಳತನವನ್ನೇ(ಕಸಬು) ಇತ ನಿರಂತರವಾಗಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೂಲತಃ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಹೋಬಳಿ ಹುಲ್ಲೂರು ಗ್ರಾಮದ ವಾಸಿಯಾದ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ @ ಹರ್ಷವರ್ಧನ ೨೫ ವರ್ಷ…

Read More

ತುಮಕೂರು ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶ್ರೀ..ಶಿವಕುಮಾರ ಮಹಾಸ್ವಾಮೀಜಿ ಅವರ ೫ನೇ ವರ್ಷದ ಪುಣ್ಯಸ್ಮರಣೆ ಸಂಸ್ಮರಣೋತ್ಸವವನ್ನು ನಾಳೆ ಅಂದರೆ ಜ.೨೧ರಂದು ಬೆಳಿಗ್ಗೆ ೧೧ಕ್ಕೆ ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗಿದ್ದು, ಸಿಎಂ, ಮಾಜಿ ಸಿಎಂ, ಸಚಿವರು ಸೇರಿ ಹಲವು ಗಣ್ಯರು, ಶ್ರೀಗಳು ಪಾಲ್ಗೊಂಡು ನುಡಿನಮನ ಸಲ್ಲಿಸುವರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುAಡಪ್ಪ ಅವರು, ಪೂಜ್ಯ ಡಾ.ಶ್ರೀ.ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜ.೨೧ರ ದಿನವನ್ನು ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ. ಮಠದಿಂದ ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆಯಿದೆ . ಮುಂಜಾನೆಯಿAದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯಗಳು ನೆರವೇರಲಿದ್ದು, ಶಿವಕುಮಾರ ಸ್ವಾಮೀಜಿ ಪುತ್ಥಳಿಯ ಮೆರವಣಿಗೆ ಮಾಡಲಾಗುತ್ತದೆ. ನಂತರ ವೇದಿಕೆ ಕಾರ್ಯಕ್ರಮ ಇರುತ್ತದೆ ಎಂದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಕಾರ್ಯಕ್ರಮದ ದಿವ್ಯ ನೇತೃತ್ವ ವಹಿಸಲಿದ್ದು, ಗದಗ ಡಂಬಳ ಮಠದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಅಧ್ಯಕ್ಷರಾದ ಡಾ.ಶ್ರೀ.ತೋಂಟದಸಿದ್ಧರಾಮಮಹಾಸ್ವಾಮೀಜಿ…

Read More

ಕೊರಟಗೆರೆ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ರಾಸುಗಳ ಜಾತ್ರೆಗೆ ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ ರೈತರು, ೮ ವರ್ಷಗಳ ನಂತರ ಮತ್ತೆ ರಾಸುಗಳ ಜಾತ್ರೆಗೆ ಅದ್ದೂರಿಯಾಗಿ ಪ್ರಾರಂಭವಾಗಿ ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ದಕ್ಷಿಣ ಭಾರತದ ಐತಿಹಾಸಿಕ ಕಮನೀಕ್ಷೇತ್ರ ಎಂದೇ ಪ್ರಸಿದ್ದಿ ಪಡೆದಿರುವ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಅವರಣದಲ್ಲಿ ಪ್ರತಿವರ್ಷದಂತೆ ಸಂಕ್ರಾAತಿ ಹಬ್ಬದ ಮಾರನೇ ದಿನದಿಂದ ರಾಸುಗಳ ಜಾತ್ರೆ ಪ್ರಾರಂಭವಾಗಿದ್ದು ರಾಸುಗಳನ್ನ ಕೊಳ್ಳಲು ಮಾರಲು ರಾಜ್ಯದ ಮೂಲೆ ಮೂಲೆಯಿಂದ ರೈತರು ಆಗಮಿಸಿ ಭರ್ಜರಿ ವಹಿವಾಟು ನಡೆಸುತ್ತಿದ್ದಾರೆ. ಕಳೆದ ಎರಡು ಮೂರು ವರ್ಷಗಳಿಂದ ಕರೋನಾ ಹಾಗೂ ಕಾಳು ಬಾಯಿ ರೋಗದಿಂದ ಜಾತ್ರೆ ರಾಸುಗಳು ಬಾರದೆ ನೀರಸ ಪ್ರತಿಕ್ರಯೆ ವ್ಯಕ್ತವಾಗುತ್ತಿತ್ತು. ಅದರೆ ಈ ಬಾರಿ ಯಾವುದೆ ಅಂತಹ ತೊಂದರೆ ಇಲ್ಲದೆ ಇರುವ ಕಾರಣ ಜಾತ್ರೆ ಸುಗಮವಾಗಿ ನಡೆಯುತ್ತಿದೆ. ರಾಸುಗಳ ಜಾತ್ರೆಗೆ ೫೦ ಸಾವಿರದಿಂದ ೫ ಲಕ್ಷದವರೆಗೂ ವಿವಿಧ ತಳಿಯ ರಾಸುಗಳು ಆಗಮಿಸಿದ್ದು ವಿಶೇಷವಾಗಿದೆ. ರಾಸುಗಳ ಜಾತ್ರೆಗೆ ವಿವಿಧ ತಳಿ ಆಗಮನ; ಸಂಕ್ರಾAತಿ ಹಬ್ಬದಿಂದ ೮ ದಿನಗಳ ಕಾಲ ನಡೆಯುವ…

Read More

ತುಮಕೂರು ಭಾರತೀಯ ಪರಂಪರೆಯಲ್ಲಿ ಸಮಾಜಕ್ಕೆ ಸಕಾರಾತ್ಮಕ ತಿರುವು ಕೊಟ್ಟಂತಹ ವಿಭೂತಿ ಪುರುಷರಲ್ಲಿ ಮಹಾಯೋಗಿ ವೇಮನ ಕೂಡ ಒಬ್ಬರು. ಅವರು ತಮ್ಮ ವಚನಗಳಲ್ಲಿ ಹೇಳುವಂತೆ ವಿದ್ಯೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ನಗರದ ಶ್ರೀ ರಾಮಕೃಷ್ಣ ವಿವೇಕಾಂದ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿ ಅಭಿಪ್ರಾಯ ಪಟ್ಟರು. ನಗರದ ಕನ್ನಡ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ರೆಡ್ಡಿ ಜನಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು ವೇಮನರು ಸಾಮಾನ್ಯನಂತೆ ಸಂಚರಿಸಿ ಆಧ್ಯಾತ್ಮ ಅರಿವಿನಿಂದ ಮಹಾಯೋಗಿಯಾದರು. ಅವರು ಸಮಾಜವನ್ನು ಮಾನವೀಯ ದೃಷ್ಟಿಯಲ್ಲಿ ನೋಡುತ್ತಿದ್ದರು. ಅವರ ಜೀವನ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಬೇಕು ಎಂದು ತಿಳಿಸಿದರು. ನಂತರ ಮಾತನಾಡಿದ ತುಮಕೂರು ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ವೆಂಕಟರೆಡ್ಡಿ ರಾಮರೆಡ್ಡಿ ವೇಮನ ಅವರು ತಮ್ಮ ವಚನಗಳ ಮೂಲಕ ಬಾಹ್ಯ ಪೂಜೆ ಬದಲಾಗಿ ಆಂತರಿಕ ಭಕ್ತಿಭಾವ ಹೊಂದಿರಬೇಕು. ಅವರ…

Read More

ತುಮಕೂರು ನಗರದಾದ್ಯಂತ ಜನವರಿ ೧೨ರಂದು ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ “ಸ್ವಚ್ಚ ಭಾರತ ಅಭಿಯಾನ ೨.೦”ದ ಭಾಗವಾಗಿ ನಗರದ ೩೫ ವಾರ್ಡ್ಗಳಲ್ಲಿ ಸ್ವಚ್ಛತೆಗಾಗಿ ಪ್ಲಾಗಥಾನ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಅಶ್ವಿಜ ಬಿ.ವಿ ತಿಳಿಸಿದರು. ಪಾಲಿಕೆ ಕಚೇರಿಯಲ್ಲಿಂದು ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ಲಾಗಥಾನ್ ಎಂದರೆ ಜಾಗಿಂಗ್ ಮಾಡುತ್ತಲೇ ಕಸವನ್ನು ತೆಗೆಯುವುದು. ಮೊದಲು ಈ ಪ್ಲಾಗಥಾನ್ ಸ್ವೀಡನ್ ದೇಶದಲ್ಲಿ ಪ್ರಾರಂಭಗೊAಡು ಎಲ್ಲಾ ಕಡೆಯಲ್ಲೂ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛ ಪರಿಸರದ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ.೧೨ರಂದು ಬೆಳಿಗ್ಗೆ ೭:೩೦ ರಿಂದ ೯:೩೦ ಗಂಟೆವರೆಗೆ ನಡೆಯಲಿದ್ದು, ‘ಪ್ಲಾಗಥಾನ್’ ಮೂಲಕ ನಗರದ ೩೫ ವಾರ್ಡ್ಗಳಲ್ಲಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದರು. ಪ್ಲಾಗಥಾನ್‌ನಲ್ಲಿ ಭಾಗವಹಿಸಲು ನೋಂದಣಿ ಕೂಡ…

Read More

ತುಮಕೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ವರ್ಷ ಪೂರೈಸುತ್ತಾರಾ, ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ ೫ ವರ್ಷ ಪೂರೈಸಬಾರದು ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಗೆ ಶಾಸಕರ ಬೆಂಬಲ, ಪಕ್ಷದ ಹೈಕಮಾಂಡ್ ಆಶೀರ್ವಾದ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಗಳಾಗಿ ಇರುತ್ತಾರೆ ಎಂದರು. ಮೂರು ಡಿಸಿಎಂ ಈಗಾಗಲೇ ಮೂರು ಡಿಸಿಎಂ ನೇಮಕದ ವಿಚಾರವನ್ನು ಪಕ್ಷದ ಉಸ್ತುವಾರಿ ಸುರ್ಜೇವಾಲಾ ಅವರ ಮುಂದೆ ಪ್ರಸ್ತಾಪ ಮಾಡಿದ್ದೇವೆ. ಇನ್ನು ಮುಂದೆ ಈ ಸಂಬAಧ ಯಾರು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರ ಮುಂದೆ ಈ ವಿಚಾರ ಪ್ರಸ್ತಾಪ ಮಾಡಿದರೆ ಸೂಕ್ತ ಎನ್ನುವುದು ನನ್ನ ಭಾವನೆ ಎಂದರು. ಪಕ್ಷದ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮೂರು ಡಿಸಿಎಂ ಬೇಡಿಕೆ ವಿಚಾರ…

Read More

ಹುಳಿಯಾರು: ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ, ಕಾಲೇಜು, ಹುಳಿಯಾರು-ಕೆಂಕೆರೆ, ಇಲ್ಲಿನ ಸಾಂಸ್ಕöÈತಿಕ ಸಂಘದ ವತಿಯಿಂದ ಏರ್ಪಡಿಸಿದ್ದ “ಕಿರುನಾಟಕಗಳ ಸ್ಪರ್ಧೆ’’ಯಲ್ಲಿ ವಿಜೇತರಾದವರಿಗೆ ಮಂಗಳವಾರ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ವೀರಣ್ಣ ಎಸ್.ಸಿ. ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ರಂಗ ಅಭಿನಯ ಕೂಡ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಸಂಚಾಲಕರಾದ ಡಾ. ಮೋಹನ್ ಕುಮಾರ್ ಮಿರ್ಲೆ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ, ವಿದ್ಯಾರ್ಥಿಗಳಲ್ಲಿ ಅಡಗಿರುವ ಅಭಿನಯ ಕೌಶಲ್ಯವನ್ನು ಗುರುತಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಂಗಭೂಮಿಯು ಸಾಮಾಜಿಕ ಜಾಗೃತಿ ಮೂಡಿಸುವ ಪ್ರಭಾವಶಾಲಿ ಮಾಧ್ಯಮವಾಗಿದ್ದು, ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಕಲಾವಿದರ ಚಿಂತನಾ ಲಹರಿಗಳ ಮೇಲೂ ಇದು ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಸ್ಪರ್ಧೆಯಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದು, ಐತಿಹಾಸಿಕ ಮತ್ತು ಪೌರಾಣಿಕ ಸಂಗತಿಗಳು, ಸಾಮಾಜಿಕ ಜಾಗೃತಿ, ಆರ್ಥಿಕ ಜಾಗೃತಿ, ಕನ್ನಡಾಭಿಮಾನ, ಸಂವಿಧಾನದ ಮಹತ್ವ, ಮಹಿಳಾ ಸಬಲೀಕರಣ, ಹಾಸ್ಯ, ಹೀಗೆ ವೈವಿಧ್ಯಮಯ…

Read More

ತುಮಕೂರು ಸೋಮನ ಕುಣಿತ, ಮ್ಯಾಸಿಫ್ ಡೋಲು, ಗಾರುಡಿಗೊಂಬೆ, ಚಕ್ಕೆ ಭಜನೆ, ಸುಗಮ ಸಂಗೀತ, ಜನಪದ ಗೀತೆ, ರಂಗಗೀತೆ, ಪೌರಾಣಿಕ ನಾಟಕಗಳಂತಹ ಗ್ರಾಮೀಣ ಕಲೆಗಳು ನಶಿಸಿ ಹೋಗದಂತೆ ಜೀವಂತವಾಗಿಡಲು ಗಿರಿಜನ ಉತ್ಸವದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷಾಧಿಕಾರಿ ಡಾ ನಾಗಣ್ಣ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊರಟಗೆರೆ ತಾಲ್ಲೂಕು ಹಂಚಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂಭಾಗದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ “ಗಿರಿಜನ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಿರಿಜನ ಉತ್ಸವವು ಸರ್ಕಾರದ ಅತ್ಯುತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಪ್ರತಿಭಾವಂತ ಪರಿಶಿಷ್ಟ ಪಂಗಡದ ಕಲಾವಿದರಿಗೆ ವೇದಿಕೆ ಒದಗಿಸುವ ಮೂಲಕ ಗ್ರಾಮೀಣ ಕಲೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು. ಹಂಚಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್. ಭೀಮರಾಜು ಅವರು ಮೆರವಣಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಗಡಿ ತಾಲ್ಲೂಕು ಮತ್ತು ಗ್ರಾಮದಲ್ಲಿ ನಡೆಸುತ್ತಿರುವುದು…

Read More

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಗಿಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡವನ್ನು ಬಳಸುವುದು ಕಡ್ಡಾಯವಾಗಿದೆ. ಕನ್ನಡ ಬಳಕೆಯ ಸಮಗ್ರ ಅನುಷ್ಟಾನಕ್ಕೆ ಸಂಬAಧಿಸಿದAತೆ ಅಂಗಡಿ, ಮತ್ತಿತರ ಉದ್ದಿಮೆಗಳ ಪರವಾನಗಿ ನೀಡುವಾಗ ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸದಿದ್ದರೆ ಉದ್ದಿಮೆ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು ನಿರ್ಬಂಧ ವಿಧಿಸಲು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಅಗ್ರ ಪಂಕ್ತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಅಶ್ಲೀಲ ಭಾಷೆ ಹಾಗೂ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ. ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕ ದೊಡ್ಡದಾಗಿರುವಂತೆ ಅಳವಡಿಸಬೇಕು. ಈ ಪ್ರಕಟಣೆ ಹೊರಡಿಸಿದ ೧೫ ದಿನಗಳೊಳಗಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಉದ್ದಿಮೆಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಉದ್ದಿಮೆಗಳ ಉದ್ದಿಮೆ…

Read More

ತುಮಕೂರು ನಗರದ ಬಾರ್‌ಲೈನ್‌ನಲ್ಲಿರುವ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿಯೊಂದು ಕಡತಗಳನ್ನು ಖುದ್ಧು ವೀಕ್ಷಿಸಿದ ಸಚಿವರು, ಕಳ್ಳತನ, ಅಪಘಾತ, ಜೂಜಾಟ ಸೇರಿದಂತೆ ಇನ್ನಿತರೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಪರಮೇಶ್ವರ್ ಅವರು, ಪೊಲೀಸ್ ಠಾಣೆಗಳ ವಸ್ತುಸ್ಥತಿ ತಿಳಿಯಲು ಇಂದು ಗ್ರಾಮಾಂತರ ಠಾಣೆಗೆ ದಿಢೀರ್ ಭೇಟಿ ನೀಡಿದ್ದೇನೆ. ಅಂಕಿ-ಅAಶಗಳನ್ನು ಪರಿಶೀಲಿಸಿದ್ದು, ಕಳ್ಳತನ, ಟ್ರಾಫಿಕ್, ಅಪರಾಧ, ಜೂಜು ಪ್ರಕರಣಗಳು ಈ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಗ್ರಾಮಾAತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ತಾಕೀತು ಮಾಡಿದ್ದೇನೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಬೀಟ್ ವ್ಯವಸ್ಥೆಯಡಿ ಸಮರ್ಪಕವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು. ಸಿಬ್ಬAದಿ…

Read More