ಪಾವಗಡ ಪಟ್ಟಣದ ನೋಂದಣಿ ಕಚೇರಿಯಲ್ಲಿ ಗುರುವಾರ ಕಾವೇರಿ 2.0 ತಂತ್ರಾಂಶ ಮೊದಲ ನೋಂದಣಿ ವೆಂಕಟಸುಬ್ಬಯ್ಯ ಎಂಬವರು ಕೇವಲ10 ನಿಮಿಷಗಳ ಕಾಲದಲ್ಲಿ ನೋಂದಣಿ ಮಾಡಿಸಿ ಸ್ಥಳದಲ್ಲೇ ಪತ್ರ ವಿತರಿಸಲಾಯಿತ್ತು. ನಂತರ ಮಾದ್ಯಮ ದವರಿಗೆ ಮಾತನಾಡಿದ ಜಿಲ್ಲಾ ನೋಂದಣಿ ಅಧಿಕಾರಿ ಶಶಿಕಲಾ ಜಿಲ್ಲಾ ಇದು ಕೊನೆಯ ಕಾವೇರಿ- 2.0 ತಂತ್ರಾಂಶ ಅಳವಡಿಕೆ ಕಾರ್ಯ ಪ್ರರಂಭೋತ್ಸ್ವ ಮಾಡಲಾಯಿತ್ತು ಇನ್ನೂ ಮತ್ತಷ್ಟು ವೇಗ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಕೈಗೊಳ್ಳಲಾಗುತ್ತಿದೆ. 10 ನಿಮಿಷಗಳಲ್ಲಿಯೇ ಆಸ್ತಿ ನೋಂದಣಿಯನ್ನು ಪೂರ್ಣಗೊಳಿಸುವ ಸೇವೆ ಒದಗಿಸಲಾಗಿದೆ. ಅಸ್ತಿ ನೋಂದಣಿ ಕಾರ್ಯಗಳಿಗೆ ತಿಂಗಳುಗಟ್ಟಲೆ ಸರ್ಕಾರಿ ಕಚೇರಿ ಅಲೆದಾಡುವ ಕೆಲಸ ಇನ್ನು ಮುಂದೆ ಇರುವುದಿಲ್ಲ. ಕೇವಲ 10 ನಿಮಿಷದಲ್ಲಿಯೇ ಆಸ್ತಿ ನೋಂದಣಿ ಕಾರ್ಯ ಪೂರ್ಣಗೊಳ್ಳಿಸಬಹುದಾಗಿದೆ. ಸ್ಥಿರಾಸ್ತಿ, ಚರಾಸ್ತಿ ದಸ್ತಾವೇಜು, ನೋಂದಣಿ ಪ್ರಕ್ರಿಯೆಯನ್ನು ಸುರಕ್ಷತಾ ಕ್ರಮಗಳ ಜತೆಗೆ 10 ನಿಮಿಷದಲ್ಲೇ ಪೂರ್ಣಗೊಳಿಸಿ ನೋಂದಣಿ ದಾಖಲೆ ಪಡೆಯಲು ಸಾಧ್ಯವಾಗುವಂತೆ ರೂಪಿಸಲಾಗಿರುವ ನೂತನ ‘ಕಾವೇರಿ- 2.0’ ತಂತ್ರಾಂಶವು ಜೂನ್ 25ರ ಹೊತ್ತಿಗೆ ರಾಜ್ಯದ ಎಲ್ಲ260 ಉಪನೋಂದಣಾಧಿಕಾರಿ ಕಚೇರಿಗಳಲ್ಲಿ…
Author: News Desk Benkiyabale
ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿವತಿಯಿಂದ ನಗರದ ಗಂಗಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೀರಶೈವ – ಲಿಂಗಾಯಿತ ರುದ್ರಭೂಮಿ ಲೋಕಾರ್ಪಣೆ ಹಾಗೂ ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ, ಅಟವಿ ಸುಕ್ಷೇತ್ರದ ಶ್ರೀ ಅಟವಿ ಶಿವಲಿಂಗಸ್ವಾಮೀಜಿ, ಹಿರೇಮಠದ ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಾಕನಹಳ್ಳಿ ಜಂಗಮ ಮಠದ ಶ್ರೀಗಂಗಾಧರಸ್ವಾಮೀಜಿ,ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಸಂಸದ ಜಿ.ಎಸ್.ಬಸವರಾಜು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಮಾಜ ಒಗ್ಗಟ್ಟಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ನಮ್ಮಲ್ಲಿ ನಾವೇ ಭಿನ್ನಮತ ಮೂಡಿಸಿಕೊಂಡರೆ ಏನನ್ನು ಸಾಧಿಸು ಸಾಧ್ಯವಿಲ್ಲ.ಸ್ವಲ್ಪ ಯಾಮಾರಿದರೂ ಇದದ್ದನ್ನು ಕಿತ್ತುಗೊಂಡು ಬಿಡುತ್ತಾರೆ.ಇದು ನಾನು ನಿಮಗೆ ನೀಡುತ್ತಿರುವ ಎಚ್ಚರಿಕೆ.ನನ್ನ ಕಾಲ ಮುಗಿಯಿತು.ಈಗಾಗಲೇ ಪಕ್ಷದ ಹೈಕಮಾಂಡ್ಗೆ ಮುಂದಿನ ಬಾರಿ ನಾನು ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ.ಮುಂದೆ ಯಾರೇ ಬರಲಿ ಅವರ ಸಹಾಯ ಪಡೆದು, ಸಮಾಜವನ್ನು ಅಭಿವೃದ್ದಿಯ ಕಡೆಗೆ ತೆಗೆದುಕೊಂಡು ಹೋಗಿ ಎಂದು ಕಿವಿ ಮಾತು ಹೇಳಿದರು. ಭಾರತೀಯ…
ತುಮಕೂರು ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೆÇಲೀಸ್, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಆರೋಗ್ಯ ರಕ್ಷಣೆ ಉದ್ದೇಶದಿಂದ ನಗರದ ಟೌನ್ಹಾಲ್ ವೃತ್ತದಿಂದ ಹಮ್ಮಿಕೊಂಡಿದ್ದ ಈ ಜಾಗೃತಿ ಜಾಥಾಗೆ ಕಾನೂನು ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿಗಳೂ ಆದ ನ್ಯಾ. ನೂರುನ್ನೀಸ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ನ್ಯಾಯಾಧೀಶರಾದ ನೂರುನ್ನೀಸ ಅವರು, ವಿಶ್ವ ತಂಬಾಕು ದಿನಾಚರಣೆಯಿಂದ ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ ತುತ್ತಾಗಿ ತಮ್ಮ ಜೀವನವನ್ನೆ…
ತುಮಕೂರು ಕಾಂಗ್ರೆಸ್ ನಾಯಕರು ಚುನಾವಣೆ ಸಂದರ್ಭದಲ್ಲಿ ರಾಜ್ಯದ ಮತದಾರರಿಗೆ ನೀಡಿರುವ 5 ಗ್ಯಾರಂಟಿ ಯೋಜನೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲೆಯಿಂದಲೇ ಬೀದಿಗಳಿದು ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭಿಸಲಾಗುವುದು ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ ಎಚ್ಚರಿಕೆ ನೀಡಿದರು. ಕಾಂಗ್ರೆಸ್ನವರು ರಾಜ್ಯದ ಮುಗ್ದ ಜನರಿಗೆ ಉಚಿತ ಯೋಜನೆಗಳ ಭರವಸೆ ನೀಡಿ ಗೆದ್ದಿದ್ದಾರೆ. ಈಗ ಅವರನ್ನು ಯಾಮಾರಿಸುವ ಕೆಲಸ ಮಾಡುವುದನ್ನು ಬಿಟ್ಟು ಚುನಾವಣೆಗೂ ಮೊದಲು ನೀಡಿರುವ 5 ಉಚಿತ ಯೋಜನೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ನಗರದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕರ ಕಚೇರಿಯನ್ನು ವಿಶೇಷ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿ ಯೋಜನೆಗಳಲ್ಲಿ ಷರತ್ತುಗಳನ್ನು ಹಾಕುವ ಧಮ್ ಇವರಿಗೆ ಇರಲಿಲ್ಲವೇ, ಗೆದ್ದ ಬಳಿಕ ಷರತ್ತು ಎಂದು ಹೇಳುವುದು ಎಷ್ಟು ಸರಿ. ಕೊಟ್ಟ ಮಾತು ತಪ್ಪಿದರೆ ಸರ್ಕಾರ ಎಚ್ಚೆತ್ತುಕೊಳ್ಳುವವರೆಗೂ ಹೋರಾಟ ಮಾಡುತ್ತೇವೆ ಎಂದರು. ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಚಿತ…
ತುಮಕೂರು ರಾಜ್ಯ ಸಚಿವ ಸಂಪುಟದ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಖಾತೆ ಹಂಚಿಕೆಯನ್ನು ಮಾಡಿದ್ದು, ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್ ಅವರು ಎರಡನೇ ಬಾರಿ ಗೃಹ ಸಚಿವರಾದರೆ, ಮೊದಲ ಬಾರಿಗೆ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಸಹಕಾರ ಖಾತೆಯನ್ನು ನಿರ್ವಹಿಸಲಿದ್ದಾರೆ. ಸಹಕಾರಿ ಧುರೀಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೇಲೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು, ಕರ್ನಾಟಕ ವಾಲ್ಮೀಕಿ ಸೇನೆಯ ರಾಜ್ಯಾಧ್ಯಕ್ಷ ಕುಪ್ಪೂರು ಶ್ರೀಧರನಾಯಕ ಅವರ ನೇತೃತ್ವದಲ್ಲಿ ಟೌನ್ಹಾಲ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು. ಈ ವೇಳೆ ಮಾತನಾಡಿದ ಅವರು,ನಮ್ಮ ನಾಯಕರಾದ ಕೆ.ಎನ್.ರಾಜಣ್ಣ ಅವರು ಬುದ್ದ,ಬಸವ,ಅಂಬೇಡ್ಕರ್ ಅವರ ಹೆಸರಿನ ಜೊತೆಗೆ,ಶ್ರೀವಾಲ್ಮೀಕಿ ಮಹರ್ಷಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ನಮಗೆ ಎಲ್ಲಿಲ್ಲದ ಸಂತೋಷವನ್ನು ಉಂಟು ಮಾಡಿದೆ.ಇಡೀ ದೇಶದಲ್ಲಿ ಆದಿ ಕವಿ ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಏಕೈಕ ಶಾಸಕರು ನಮ್ಮ ಕೆ.ಎನ್.ರಾಜಣ್ಣ.ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು…
ಹರೀಶಬಾಬು ಬಿ.ಹೆಚ್, ಕೊರಟಗೆರೆ ಡಾ.ಜಿ.ಪರಮೇಶ್ವರ ಅವರ ರಾಜಕೀಯ ಜೀವನದ ಸ್ಪೂರ್ತಿಯೇ ರಾಜೀವ್ಗಾಂಧಿ. ಕೆಪಿಸಿಸಿ ಅಧ್ಯಕ್ಷರಾಗಿ ಸತತ 8ವರ್ಷ ಕಾಂಗ್ರೆಸ್ ಪಕ್ಷದ ಸೇವೆ ಮಾಡಿದ ಅನುಭವ. ರಾಜ್ಯದ ಡಿಸಿಎಂ-ಗೃಹ ಸೇರಿದಂತೆ ಹತ್ತಾರು ಉನ್ನತ ಸಚಿವ ಖಾತೆ ನಿರ್ವಹಿಸಿದ ಹಿರಿಮೆ. ಮಧುಗಿರಿ ಮತ್ತು ಕೊರಟಗೆರೆ ಕ್ಷೇತ್ರದಿಂದ 6ನೇ ಸಲ ಆಯ್ಕೆಯಾದ ಕಪ್ಪುಚುಕ್ಕೆ ಇಲ್ಲದ ಶಾಸಕ. ಕಲ್ಪತರು ನಾಡಿನ ಶೈಕ್ಷಣ ಕ ಕ್ಷೇತ್ರದ ಶಿಕ್ಷಣ ಭೀಷ್ಮ ಡಾ.ಜಿ.ಪರಮೇಶ್ವರ ರಾಜಕೀಯ ಕ್ಷೇತ್ರದ ಅಜಾತಶತ್ರು. ಶಿಕ್ಷಣದಿಂದ ಮಾತ್ರ ಬಡತನ ನಿವಾರಣೆ ಸಾಧ್ಯ ಎಂಬ ಡಾ.ಬಿ.ಆರ್.ಅಂಬೇಡ್ಕರ್ ತತ್ವವನ್ನೇ ತನ್ನ ಸಿದ್ದಾಂತ ಮಾಡಿಕೊಂಡ ಡಾ.ಜಿ.ಪರಮೇಶ್ವರ ಕಲ್ಪತರು ನಾಡುಕಂಡ ನಿಜವಾದ ಶಿಕ್ಷಣಬೀಷ್ಮ ಎಂದರೇ ತಪ್ಪಾಗದು. ತುಮಕೂರು ವಿಶ್ವವಿದ್ಯಾಲಯ ಸ್ಥಾಪನೆಯ ರೂವಾರಿ ಮತ್ತು ಮಧುಗಿರಿ ಶೈಕ್ಷಣ ಕ ಜಿಲ್ಲೆಯ ಪ್ರಮುಖ ಆಧಾರಸ್ತಂಭ. 40ವರ್ಷಗಳ ರಾಜಕೀಯ ಅನುಭವ ಇರುವಂತಹ ಹಿರಿಯ ರಾಜಕಾರಣ ಡಾ.ಜಿ.ಪರಮೇಶ್ವರ ಸೌಮ್ಯ ಸ್ವಭಾವದ ಸರಳತೆಯ ಸವ್ಯಸಾಚಿಯು ಹೌದು. ಕಾಂಗ್ರೆಸ್ ಪಕ್ಷದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಒಟ್ಟು 37ಜನ ಶಾಸಕರು ವಿಧಾನಸಭೆಗೆ ಆಯ್ಕೆ.…
ತುಮಕೂರು : ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಿಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರರಿಗೆ ಇಂದು ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ಗ್ರಾಮ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಲಾಗಿತ್ತು. ತಾಲ್ಲೂಕು ಐಇಸಿ ಸಂಯೋಜಕರಾದ ರಮ್ಯ ಮಾತನಾಡಿ, ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡುವುದಲ್ಲದೇ, ಅವರ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಹಾಗಾಗಿ ತಾಲ್ಲೂಕಿನ ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ತಪಾಸಣೆಯನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬ ಕೂಲಿಕಾರರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು. ಜೊತೆಗೆ ನರೇಗಾ ಯೋಜನೆಯಡಿ ಈ ವರ್ಷ ಕೂಲಿ ಹಣವನ್ನು ಹೆಚ್ಚಿಸಲಾಗಿದೆ. ತಾಂತ್ರಿಕ ಸಹಾಯಕರು ನಿಮಗೆ ನೀಡಿದ ಆಳತೆಗನುಸಾರವಾಗಿ ನೀವು ಕೆಲಸ ಮಾಡಿದಾಗ ನಿಮಗೆ ಪೂರ್ತಿ ಕೂಲಿ ಹಣ ದೊರೆಯಲಿದೆ. ಕಡ್ಡಾಯವಾಗಿ ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಲು ತಿಳಿಸಿದರು. ನಂತರ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೂಲಿಕಾರರ ಆರೋಗ್ಯ…
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ಗೌಡ ಅವರು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಲಮಲಾನಂದನಾಥ ಮಹಾ ಸ್ವಾಮೀಜಿಯವರು ಶಾಸಕ ಸುರೇಶ್ಗೌಡ ಅವರಿಗೆ ಆಶೀರ್ವದಿಸಿ, ಕ್ಷೇತ್ರದಲ್ಲಿ ಶಿಕ್ಷಣ, ಮೂಲಭೂತ ಸೌಕರ್ಯ ಸೇರಿದಂತೆ ಕ್ಷೇತ್ರದ ಜನರ ಸಂಕಷ್ಟ, ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಶ್ರೀಗಳ ಸಲಹೆಯಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದ ಶಾಸಕ ಸುರೇಶ್ಗೌಡ ಅವರು, ಈಗಾಗಲೇ ಈ ಹಿಂದೆ ನಾನು ಶಾಸಕನಾಗಿದ್ದಾಗ ಕ್ಷೇತ್ರದಲ್ಲಿ ಮಾದರಿ ಶಾಲೆಗಳು, ರಸ್ತೆ, ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಕೆಲಸ ಮಾಡಿದ್ದೇನೆ. ಈ ಕಾರ್ಯಗಳನ್ನು ಮುಂದುವರೆಸುವ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದನಾಗಿ ಹಗಲಿರುಳು ಕೆಲಸ ಮಾಡುತ್ತೇನೆ ಎಂದು ಶ್ರೀಗಳಿಗೆ ತಿಳಿಸಿದರು.
ತುಮಕೂರು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಆಗ್ರಹಪೂರ್ವಕ ಮನವಿಯನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಮಾಡುವುದಾಗಿ ದಸಂಸ ಮುಖಂಡ ಕುಂದೂರು ತಿಮ್ಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಪರಿಶಿಷ್ಟ ಪಂಗಡಕ್ಕೆ ಸೇರಿದ ಕೆ.ಎನ್.ರಾಜಣ್ಣ ಸಾಮಾನ್ಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದರೆ ಅವರು ಎಷ್ಟು ಜನಾನುರಾಗಿಗಳು ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಅಲ್ಲದೆ ಶೋಷಿತರು, ದಲಿತರ ಪರವಾಗಿ ಕೆಲಸ ಮಾಡುವ ಜಿಲ್ಲೆಯ ರಾಜಕಾರಣಿ ಎಂದರೆ ಕೆ.ಎನ್.ಆರ್,ಹಾಗಾಗಿ ಅವರನ್ನು ಸಚಿವರನ್ನಾಗಿ ಮಾಡಬೇಕೆಂಬುದು ನಮ್ಮೆಲ್ಲರ ಒತ್ತಾಯವಾಗಿದೆ ಎಂದರು. ಮಧುಗಿರಿ ಕ್ಷೇತ್ರದ ಶಾಸಕರಾಗಿರುವ ಕೆ.ಎನ್.ರಾಜಣ್ಣ,ನೇರ ಮತ್ತು ನಿಷ್ಠೂರ ರಾಜಕಾರಣಿ.ಎಲ್ವ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಗುಣ ಅವರಲ್ಲಿದೆ.ಅಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಆಪಾರ ಅನುಭವವನ್ನು ಹೊಂದಿರುವ ಇವರನ್ನು ಮಂತ್ರಿ ಮಾಡುವುದರಿಂದ ಸರಕಾರಕ್ಕೆ ಅನುಕೂಲವಾಗುವುದರ ಜೊತೆಗೆ,ಜಿಲ್ಲೆಯ ಅಭಿವೃದ್ದಿಗೂ ಪೂರಕವಾಗಲಿದೆ ಎಂದು ಕಂದೂರು ತಿಮ್ಮಯ್ಯ ತಿಳಿಸಿದರು. ದಲಿತರು, ಶೋಷಿತರ ಪರವಾಗಿ ನಿಲ್ಲುವ ರಾಜಕಾರಣಿ ಕೆ.ಎನ್.ರಾಜಣ್ಣ…
ತುಮಕೂರು 2023-24ನೇ ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿಯೇ ಪ್ರಪ್ರಥಮವಾಗಿ ಆರಂಭಿಸಲ್ಪಟ್ಟಿರುವ ಆಹಾರ ವಿತರಣಾ ಯೋಜನೆ ಮತ್ತೆ ಪುನರಾರಂಭವಾಗಿದೆ. ಇಂದು ತುಮಕೂರು ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಪ್ರಾಂಗಣದಲ್ಲಿ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳ ವಿದ್ಯಾರ್ಥಿ / ವಿದ್ಯಾರ್ಥಿನಿಯರು ಸಾಲು ಸಾಲಾಗಿ ನಿಂತು ಆಹಾರವನ್ನು ಪಡೆಯುತ್ತಿರುವ ದೃಶ್ಯ ಅದ್ಭುತವಾಗಿತ್ತು. ಆಹಾರ ವಿತರಣಾ ಸಮಿತಿಯ ಅಧ್ಯಕ್ಷರಾದ ಪರಮ ಪೂಜ್ಯ ಸ್ವಾಮಿ ಜಪಾನಂದಜೀ ರವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸರಿಸುಮಾರು 1500 ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಪ್ರತಿ ದಿನ ಮಧ್ಯಾನ್ಹದ ಭೋಜನ ವ್ಯವಸ್ಥೆಯನ್ನು 6 ಮಾರ್ಚ್ 2023ರಂದು ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ನ್ಯಾ. ಶ್ರೀ ಸಂತೋಷ್ ಹೆಗ್ಡೆ, ನ್ಯಾ.ಶ್ರೀಮತಿ ರತ್ನಕಲಾ ಹಾಗೂ ವಿಶ್ವವಿದ್ಯಾನಿಲಯದ ಕುಲಪತಿಗಳು ಮತ್ತು ಶ್ರೀ ಶ್ರೀ ಸಿದ್ಧಗಂಗಾ ಶ್ರೀಗಳ ಸಮ್ಮುಖದಲ್ಲಿ ಆರಂಭವಾದ ಯೋಜನೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಏತನ್ಮಧ್ಯೆ ಚುನಾವಣೆಯ ನಿಮಿತ್ತ 15 ದಿನಗಳ ಕಾಲ ಸ್ಥಗಿತವಾಗಿದ್ದ ಈ ಯೋಜನೆ ಪುನರಾರಂಭವಾಗಿದೆ. ಇಂದು ಪೂಜ್ಯ ಸ್ವಾಮಿ ಜಪಾನಂದಜೀ…