ತುಮಕೂರು ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ ಹಾಗೂ ರಂಗಭೂಮಿಯ ಸಂಗಮ ಹಾಗೂ ಶೈಕ್ಷಣಿಕವಾಗಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯಿAದ ಕೂಡಿರುವ ತುಮಕೂರು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ ೨೯ ಮತ್ತು ೩೦ರಂದು “ಜಿಲ್ಲಾ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ತಿಳಿಸಿದರು. ಅವರಿಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನು ್ನದ್ದೇಶಿಸಿ ಮಾತನಾಡಿದರು. ನಾಡು ನುಡಿ ಜಲಗಳ ಕುರಿತಾದ ಅರ್ಥಪೂರ್ಣ ವಿಚಾರ ವಿನಿಮಯಗಳಿಗೆ ಸಮ್ಮೇಳನ ಒಂದು ವೇದಿಕೆಯಾಗಿದೆ. ನಮ್ಮ ಜಿಲ್ಲೆಯವರೇ ಆದ ಅಂತರ ರಾಷ್ಟಿçÃಯ ಖ್ಯಾತಿಯ ಸಾಹಿತಿಗಳಾದ ಡಾ. ಹೆಚ್.ಎಸ್.ಶಿವಪ್ರಕಾಶ್ರವರು ಸಮ್ಮೇಳನಾಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದರು. ಡಿಸೆಂಬರ್ ೨೯ರಂದು ಶುಕ್ರವಾರ ಬೆಳಿಗ್ಗೆ ೭.೩೦ ಗಂಟೆಗೆ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ.ಕರಾಳೆ ರಾಷ್ಟçಧ್ವಜಾರೋಹಣ ಮಾಡುವರು. ಮಹಾನಗರಪಾಲಿಕೆಯ ಉಪ ಮಹಾಪೌರರಾದ ಟಿ.ಕೆ.ನರಸಿಂಹಮೂರ್ತಿ ನಾಡ ಧ್ವಜಾರೋಹಣ ನೆರವೇರಿಸುವರು,…
Author: News Desk Benkiyabale
ತುಮಕೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ವಿಶೇಷವಾಗಿ ತುರುವೇಕೆರೆ ತಾಲ್ಲೂಕಿನಲ್ಲಿ ಚಿರತೆಗಳು ಓಡಾಡುತ್ತಿರುವುದನ್ನು ಗಮನಿಸಲಾಗಿದ್ದು, ಚಿರತೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯುವುದರೊಂದಿಗೆ ಚಿರತೆಗಳಿಂದ ಮಾನವ ಹಾನಿ ಅಥವಾ ಪ್ರಾಣಿಗಳ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಚಿರತೆಗಳ ಸುರಕ್ಷತಾ ಕ್ರಮಗಳ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ಈ ಕುರಿತು ಟಾಂಟಾA ಮೂಲಕ ವ್ಯಾಪಕ ಪ್ರಚಾರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಎಲ್ಲಿಯಾದರೂ ಚಿರತೆಗಳ ಕುರುಹುಗಳು ಕಂಡು ಬಂದಲ್ಲಿ ಸಂಬAಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ತಕ್ಷಣವೇ ಟೋಲ್ ಫ್ರೀ ನಂಬರ್ ೧೯೨೬ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರಲ್ಲದೆ, ವಲಯ ಅರಣ್ಯಾಧಿಕಾರಿಗಳು ಮತ್ತು ವನರಕ್ಷಕರು ಸುರಕ್ಷತೆಯಿಂದ ಚಿರತೆಗಳ ಚಲನವಲನಗಳ ಬಗ್ಗೆ ನಿಗಾ ಇರಿಸಬೇಕು. ಅರಣ್ಯ ಪ್ರದೇಶಗಳ ಅಂಚಿನಲ್ಲಿ ಸುರಕ್ಷತೆಯಿಂದ ಸಂಚರಿಸಬೇಕು ಎಂದು ತಿಳಿಸಿದರು. ವಲಯ ಅರಣ್ಯಾಧಿಕಾರಿಗಳು ಆಯಾ ತಾಲ್ಲೂಕು ಮಟ್ಟದ ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯ…
ತುಮಕೂರು ಜಿಲ್ಲೆಯಲ್ಲಿ ಇಂದಿನಿAದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊAಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಸೇರಿದಂತೆ ೪ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ೫ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿAದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು. ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ…
ತುಮಕೂರು ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲೀ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತುಮಕೂರು ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಬೆತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಲ್ಲಿ ಮೃತಪಟ್ಟ ಯುವಕನನ್ನ ನಿರಂಜನ್ (೩೦) ಎಂದು ಗುರುತಿಸಲಾಗಿದೆ.ಇನ್ನು ಯುವಕರ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ನಿರಂಜನ್ಗೆ ಕೆಲವರು ಡ್ರ್ಯಾಗರ್ನಿಂದ ಚುಚ್ಚಿದ್ದಾರೆ ಎನ್ನಲಾಗಿದೆ ಅದರ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡ ನಿರಂಜನ್ ನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು ಎನ್ನಲಾಗಿದೆ ಆದರೆ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟ ನಿರಂಜನ್. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಇನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ರವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಕೊಲೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಗ್ರಾಮಾAತರ…
ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ವೈದ್ಯಕೀಯ ಕ್ಷೇತ್ರವು ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ವಹಿಸಿದೆ. ಸರ್ಕಾರ ವೈದ್ಯರನ್ನು ಸೇವೆಗೆ ಮಾತ್ರ ಸೀಮಿತಗೊಳಿಸಿದೆ. ಇದಕೊಂದು ಉದಾಹರಣೆ ಎಂದರೆ ಕೊರಟಗೆರೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಕೇಂದ್ರ ಸ್ಥಾನದಲ್ಲಿ ವೈದ್ಯರು ವಾಸವಿರಬೇಕಾದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತದಿAದ ಹಳ್ಳ ಹಿಡಿದು ಅನೈತಿಕ ಚಟುವಟಿಕೆಗೆ ತಾಣವಾಗಿ ಮಾರ್ಪಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.. ವೈದ್ಯರಿಗೆ ರಾತ್ರಿ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಉಳಿದುಕೊಳ್ಳಲು ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರು ಸಹ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಯಾವುದೇ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ವಾಸವಿಲ್ಲ. ಕಾರಣ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಈ ಹಿಂದೆ ನಿರ್ಮಾಣ ಮಾಡಲಾಗಿದ್ದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತಗೊAಡು ಸುಮಾರು ೧೫ ವರ್ಷಗಳಿಂದ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದೆ ಎಂದು ಮುಖ್ಯ ವೈದ್ಯರಿಂದ ಮಾಹಿತಿ ತಿಳಿದು ಬಂದಿದೆ.. ಮಾನ್ಯ ಗೃಹಸಚಿವರ ಕ್ಷೇತ್ರದಲ್ಲಿ ೧೫ ವರ್ಷಗಳಿಂದ ವೈದ್ಯರಿಗೆ ಸೂರಿಲ್ಲದೆ ಪರದಾಡುವ ಸ್ಥಿತಿ ಒದಗಿ ಬಂದಿದೆ, ಇದಕ್ಕೆ ಮುಖ್ಯ ಕಾರಣಕರ್ತರಾದ ತಾಲೂಕು ವೈದ್ಯಾಧಿಕಾರಿಯ ಡಾ.ವಿಜಯ್ಕುಮಾರ್ರವರ…
ನವದೆಹಲಿ : ಕೊಬ್ಬರಿ ಬೆಳೆಗಾರರು ಹೆಚ್ಚು ಇರುವ ತುಮಕೂರು, ಹಾಸನ ಮುಂತಾದ ಕಡೆಗಳಲ್ಲಿ ನಫೆಡ್ ಖರೀದಿ ಕೇಂದ್ರಗಳನ್ನು ಹೊಸ ವರ್ಷದ ಜನವರಿ ತಿಂಗಳಲ್ಲಿಯೇ ತೆರೆದು ಕೊಬ್ಬರಿ ಖರೀದಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ ಮುಂಡಾ ಅವರು ಭರವಸೆ ನೀಡಿದ್ದಾರೆ. ನವದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜ್ಯದ ನಿಯೋಗಕ್ಕೆ ಮುಂಡಾ ಅವರು ಈ ಭರವಸೆ ನೀಡಿದ್ದಾರೆ ಎಂದು ನಿಯೋಗದಲ್ಲಿ ಇದ್ದ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾದ ಶೋಭಾ ಕರಂದ್ಲಾಜೆ ಅವರ ನೆರವಿನಿಂದ ಅರ್ಜುನ ಮುಂಡಾ ಅವರ ಜತೆಗಿನ ಈ ಭೇಟಿಯನ್ನು ನಿಗದಿ ಮಾಡಲಾಗಿತ್ತು ಎಂದು ಅವರು ಹೇಳಿದ್ದಾರೆ. ನಿಯೋಗದಲ್ಲಿ ಸುರೇಶ್ ಗೌಡರು ಮಾತ್ರವಲ್ಲದೇ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಶ್ರವಣ ಬೆಳಗೊಳದ ಶಾಸಕ ಎಚ್.ಸಿ. ಬಾಲಕೃಷ್ಣ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮುಂತಾದವರೂ…
ತುಮಕೂರು: ಜಿಲ್ಲೆಯಲ್ಲಿ ಒಂದೇ ದಿನ ಮೂವರು ಪಿಎಸ್ಐಗಳು ಸೇರಿದಂತೆ ಐವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ. ತುರುವೇಕೆರೆ ಪಿಎಸ್ ಐಗಳಾದ ಗಣೇಶ್, ರಾಮಚಂದ್ರಯ್ಯ, ಹೆಡ್ ಕಾನ್’ಸ್ಟೇಬಲ್ ರಘುನಂದನ್ ಅಮಾನತುಗೊಂಡಿದ್ದಾರೆ. ತುರುವೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದರು. ಈ ಬಗ್ಗೆ ದೂರು ನೀಡಿದ್ದರೂ ಎಫ್ಐಆರ್ ಮಾಡದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ. ಮಧುಗಿರಿ ತಾಲೂಕು ಬಡವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜು, ಎಎಸ್ಐ ಸುರೇಶ್ ಅಮಾನತುಗೊಂಡಿದ್ದಾರೆ. ತುಮಕೂರು: ಒಂದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐವರು ನಾಪತ್ತೆ ಬಡವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತರ ಮೇಲೆ ಸವರ್ಣೀಯರು ಹಲ್ಲೆ ಮಾಡಿದ್ದ ಆರೋಪವಿತ್ತು. ಈ ಬಗ್ಗೆ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಂತ್ರಸ್ತರು ದೂರು ನೀಡಿದ್ದರು. ಆದರೇ ಎಫ್ ಐಆರ್ ಮಾಡಿಕೊಳ್ಳದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮತ್ತು ಎಎಸ್ಐ ಅವರನ್ನು ಅಮಾನತುಗೊಳಿಸಲಾಗಿದೆ. ಎಎಸ್ಐ, ಒಬ್ಬರು ಹೆಡ್ ಕಾನ್ಸ್’ಸ್ಟೇಬಲ್ ಗಳನ್ನು ಅಮಾನತು ಮಾಡುವ ಮೂಲಕ…
ಪಾವಗಡ ಮುಂದಿನ ಆರು ವಾರಗಳಲ್ಲಿ ಪಾವಗಡ ತಾಲೂಕಿನ ಅತ್ಯಂತ ಹೆಚ್ಚು ಬರ ಉಂಟಾಗಲಿದ್ದು ಇದರಿಂದಾಗಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಲಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ ಪಾವಗಡ ತಾಲೂಕಿನ ನಲಿಗಾನಹಳ್ಳಿ ಮತ್ತು ಟಿ ಎನ್ ಬೆಟ್ಟ ಗ್ರಾಮಗಳಲ್ಲಿ ಬರ ಪರಿಶೀಲನೆ ನಡೆಸಿ ರೈತರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆ ನಾನು ತುಮಕೂರು ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೆ, ಆ ಸಮಯದಲ್ಲೂ ಸಹ ಬರೆದ ಪರಿಸ್ಥಿತಿ ಇತ್ತು, ಹಿಂದಿನ ವರ್ಷ ಮಳೆ ಚೆನ್ನಾಗಿ ಆಗಿರುವುದರಿಂದ ಸದ್ಯ ಸ್ವಲ್ಪ ಸಮಸ್ಯೆಗಳ ಪ್ರಮಾಣ ಕಡಿಮೆಯಾಗಿದೆ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆ ಇದೆ ಹಾಗೂ ಪಶು ಸಂಗೋಪನ ಇಲಾಖೆಯಿಂದ ಈಗಾಗಲೇ ಪಾವಗಡ ತಾಲೂಕಿನ ರೈತರಿಗೆ ಮೇವಿನ ಕಿಟ್ ವಿತರಿಸಲಾಗಿದೆ, ಪ್ರಮುಖವಾಗಿ ನಾವು ಈ ಅಧ್ಯಯನದಲ್ಲಿ ಮೇವಿನ ತೊಂದರೆಯ ಕುರಿತು ಪರಿಶೀಲನೆ ನಡೆಸಿದ್ದೇವೆ, ನಾವು ಸದ್ಯ ರೈತರ…
ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರು, ವಿಚಾರಣೆ, ಮತ್ತಿತರ ಮಾಹಿತಿಗಾಗಿ ಸಂಪರ್ಕಿಸಲು ಅನುವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ ಸಂಖ್ಯೆ ೦೮೧೬-೧೯೫೦ರ ಕಾರ್ಯಾವಧಿಯನ್ನು ವಿಸ್ತರಿಸಬೇಕೆಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ ೮ ರಿಂದ ರಾತ್ರಿ ೮ರವರೆಗೆ ಕಾರ್ಯ ನಿರ್ವಹಿಸುತ್ತಿರುವ ಸಹಾಯವಾಣಿ ಸಂಖ್ಯೆಯ ಕಾರ್ಯಾವಧಿಯನ್ನು ಗುರುವಾರದಿಂದ ಬೆಳಿಗ್ಗೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ವಿಸ್ತರಿಸಬೇಕೆಂದು ಸೂಚನೆ ನೀಡಿದರು. ಸಹಾಯವಾಣಿ ೧೯೫೦ ಸಂಖ್ಯೆಗೆ ಚುನಾವಣಾ ಮಾಹಿತಿ ಕೋರಿ ಯಾರೇ ಕರೆ ಮಾಡಿದರೂ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಅಗತ್ಯ ಮಾಹಿತಿ ನೀಡಬೇಕು. ದೂರು ಕರೆಗಳು ಸ್ವೀಕೃತವಾದಾಗ ಕೂಡಲೇ ಸ್ಪಂದಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ನಿರ್ದೇಶನ ನೀಡಿದರು. ನಂತರ ಮಾತನಾಡಿದ ಮಣಿವಣ್ಣನ್ ಅವರು ವಿದೇಶದಲ್ಲಿ ವಾಸವಿರುವವರು…
ತುಮಕೂರು ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಜೊತೆಗೆ ಸೋಲಾರ್, ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುತ್ತಿದ್ದು, ಮುಂದಿನ ದಿನದಲ್ಲಿ ಯುರೋಪಿಯನ್ ರಾಷ್ಟçದಲ್ಲಿ ಜಾರಿಯಲ್ಲಿರುವ ಬಿಸಿನೀರಿನಿಂದ ೧೦,೦೦೦ ಮೆಗಾವ್ಯಾಟ್ಸ್ ಉತ್ಪಾದಿಸುತ್ತಿರುವ ತಂತ್ರಜ್ಞಾನವನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತುಮಕೂರಿನ ಬೆಸ್ಕಾಂನ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎನರ್ಜಿ ಕ್ಲಬ್ ಹಾಗೂ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಿನಿಕ್ಸ್ ಇಂಜಿನಿಯನಿಯರ್ ವಿಭಾಗ ಸಮಯುಕ್ತವಾಗಿ ಹಮ್ಮಿಕೊಂಡಿದ್ದ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ’ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಅಂದು ವಿಶ್ವೇಶ್ವರಯ್ಯ ಅವರು ಆಲೋಚನೆ ಮಾಡಿ ಶರಾವತಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿದ್ದರಿಂದ ಇಂದು ಅನೇಕ ಹಳ್ಳಿಗೆ ನೀರಿನ ಜೊತೆಗೆ ವಿದ್ಯುತ್ ಕೂಡ ದೊರೆಯಿತು. ವಿಶೇಷ ಯೋಜನೆ ಅಡಿಯಲ್ಲಿ ೭೦೦೦ ಮೆಗಾವ್ಯಾಟ್ ವಿದ್ಯುತ್ ಉತ್ವಾದನೆ ಹೆಚ್ಚಿಸುವ ತಯಾರಿ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾವ್ಯಾಟ್,…